The most-visited ಕನ್ನಡ Wikipedia articles, updated daily. Learn more...
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಗೊರೂರು ರಾಮಸ್ವಾಮಿ ಅಯ್ಯಂಗಾರ್(ಜುಲೈ ೪, ೧೯೦೪ - ಸೆಪ್ಟೆಂಬರ್ ೮, ೧೯೯೧) ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ಅವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಸ್ವಾತಂತ್ರ್ಯ ಚಳುವಳಿ, ಮೈಸೂರಿನಲ್ಲಿ ಪ್ರಜಾ ಸರ್ಕಾರಕ್ಕಾಗಿ ಚಳುವಳಿ, ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಹೋರಾಡಿ ಹರಿಜನೋದ್ಧಾರ ಮತ್ತು ಗ್ರಾಮೊದ್ಧಾರಕ್ಕಾಗಿ ಶ್ರಮಿಸಿದ ಅವರೊಬ್ಬ ಅಪ್ರತಿಮ ಗಾಂಧಿವಾದಿ.
ಭಗತ್ ಸಿಂಗ್(೧೯೦೭–೧೯೩೧) ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಭಾರತದ ಮೊದಲ ಮಾರ್ಕ್ಸಿಸ್ಟ್ ಗಳಲ್ಲೊಬ್ಬರು. ಭಗತ್ ಸಿಂಗ್ ಅವರು ಸೆಪ್ಟೆಂಬರ್ ೨೭, ೧೯೦೭ರಲ್ಲಿ ಪಂಜಾಬ್ ಲಾಯಲ್ ಪುರ ಜಿಲ್ಲೆಯ 'ಬಾಂಗಾ' ಎಂಬ ಹಳ್ಳಿಯ ಸಿಖ್ ಸಮುದಾಯದ ಸರ್ದಾರ್ ಕಿಶನ್ ಸಿಂಗ್ ಮತ್ತು ವಿದ್ಯಾವತಿಯವರಿಗೆ ಜನಿಸಿದರು. ಜಲಿಯನ್ ವಾಲಾ ಬಾಗ್ ದುರಂತದಿಂದ ಪ್ರಭಾವಿತರಾದ ಇವರು ಸ್ವಾತಂತ್ರ ಸಂಗ್ರಾಮಕ್ಕೆ ಧುಮುಕಿದರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ವಿಕಿಪೀಡಿಯ [ಇಂಗ್ಲಿಷ್: Wikipedia ವಿಕಿಪೀಡಿಯ] ಒಂದು ಅಂತರ್ಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಅ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಬೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.
ಗಂಡು ಪ್ರಾಣಿಗಳಲ್ಲಿ ದೇಹದಿಂದ ಹೊರಚಾಚಿರುವ ಜನನೇಂದ್ರಿಯವನ್ನು ತುಣ್ಣಿ ಅಥವಾ ತುಣ್ಣೆ ಅಥವಾ ಶಿಶ್ನ ಎನ್ನುತ್ತಾರೆ. ಇದು ಮುಖ್ಯವಾಗಿ ಸಂಭೋಗ ಹಾಗೂ ಜೀವ ಪುನರುತ್ಪಾದನೆಯ ಅಂಗವಾಗಿ ಹೆಣ್ಣು ಪ್ರಾಣಿಯೊಳಗೆ ವೀರ್ಯವನ್ನು ಹಾಕಲು ಸಹಾಯಕಾರಿ, ಇದು ಮುಂದುವರೆದ ಪ್ರಾಣಿಗಳಲ್ಲಿ ಮೂತ್ರ ವಿಸರ್ಜನೆಗೂ ಉಪಯೋಗವಾಗುತ್ತದೆ. ಮಾನವನ ತುಣ್ಣಿಯು ಉದ್ರೇಕಗೊಂಡಾಗ ದೊಡ್ಡದಾಗಿಯೂ ಗಟ್ಟಿಯಗಿಯೂ ಮಾರ್ಪಡುತ್ತದೆ, ಆಗ ಸಾಮಾನ್ಯವಾಗಿ 4.2 - 7.5 ಇಂಚು ಉದ್ದವೂ ಹಾಗೂ 4.8 ಇಂಚು ಸುತ್ತಳತೆಯದಾಗಿರುತ್ತದೆ.
ಹಿಂದೂಧರ್ಮವನ್ನು ಬೋಧಿಸುವ ಮತ್ತು ಅರ್ಚಕರ ವರ್ಗಕ್ಕೆ ಸೇರಿದವರನ್ನು ಬ್ರಾಹ್ಮಿನ್ Brāhmaṇa (ಬ್ರಾಹ್ಮಣರು) ಎನ್ನುತ್ತಾರೆ.ब्राह्मण. ಬ್ರಾಹ್ಮಿನ್ ಎಂಬ ಇಂಗ್ಲಿಷ್ ಪದವು ಸಂಸ್ಕೃತ ಪದವಾದ ರ ಆಂಗ್ಲ ರೂಪವಾಗಿದೆBrāhman; (ಬ್ರಹ್ಮನ್ ಎಂದರೆ ಶ್ರೇಷ್ಠ ಆತ್ಮ ಎಂಬ ಅರ್ಥವೂ ಹಿಂದೂ ಧರ್ಮದಲ್ಲಿದೆ). ಬ್ರಾಹ್ಮಣರನ್ನು ವಿಪ್ರ "ಪ್ರೇರಣೆಗೊಂಡ" ಅಥವಾ ದ್ವಿಜ "ಎರಡು ಬಾರಿ ಹುಟ್ಟಿದವರು" ಎಂದೂ ಕರೆಯುತ್ತಾರೆ.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಫ್ಲೆಕ್ಸಿಬಲ್ (ಬಾಗಿಸಬಲ್ಲ) ಕೀಬೋರ್ಡ್
ಕೀಬೋರ್ಡ್ ಎಂದರೆ ಗಣಕೀಕರಣದಲ್ಲಿ ಯಾಂತ್ರಿಕಪಟ್ಟಿಯಂತೆ ಅಥವಾ ವಿದ್ಯುಚ್ಚಾಲಿತ ಸ್ವಿಚ್ಚಿನಂತೆ ವರ್ತಿಸುವ ಗುಂಡಿಗಳ ಅಥವಾ ಕೀಲಿಗಳ ಜೋಡಣೆಯನ್ನು ಹೊಂದಿರುವ ಬೆರಳಚ್ಚು ಯಂತ್ರದ ಕೀಬೋರ್ಡ್ ಆಗಿದೆ. ಪೇಪರ್ ಟೇಪ್ ಮತ್ತು ಪಂಚ್ ಕಾರ್ಡ್ಗಳ ಬಳಕೆಯು ಇಳಿಮುಖವಾಗುವುದರೊಂದಿಗೆ, ಟೆಲಿಟೈಪ್ ಮಾದರಿಯ ಕೀಬೋರ್ಡ್ಗಳ ಮೂಲಕ ಗಣಕಯಂತ್ರವನ್ನು ಸಂಪರ್ಕಿಸುವ ವಿಧಾನ ಮುಂದುವರೆದು ಗಣಕಯಂತ್ರಗಳಲ್ಲಿ ಇದೊಂದು ಮುಖ್ಯ ಇನ್ಪುಟ್ ಸಾಧನವಾಗಿ ಬೆಳೆದುಬಂದಿದೆ.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಭಾರತ ಸರ್ಕಾರವು ಇಂದು ಭಾರತೀಯ ಕಾನೂನು ಆಧಾರಿತ ಮೀಸಲಾತಿಯ ಸೌಲಭ್ಯವನ್ನು ಶೇಕಡಾವಾರು ಪ್ರಮಾಣದ ಮೇಲೆ ಸರ್ಕಾರಿ ಮತ್ತು ಸಾರ್ವಜನಿಕ ಕಂಪನಿಗಳ ನೇಮಕಾತಿಯಲ್ಲಿ ಸೇವಾವಕಾಶವನ್ನು ಒದಗಿಸುತ್ತಿದೆ. ಅಷ್ಟೇ ಅಲ್ಲದೇ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿಯೂ ಮೀಸಲಾತಿ ನೀಡುತ್ತದೆ.ಆದರೆ ಧಾರ್ಮಿಕ/ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳನ್ನು ಈ ನಿಯಮಗಳಿಂದ ಹೊರತುಪಡಿಸಲಾಗಿದೆ. ಪ್ರಮುಖವಾದುದ್ದೆಂದರೆ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳಿಗೆ ಅಂದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಸಾಮಾಜಿಕ ಹಿಂದುಳಿದಿರುವಿಕೆಯನ್ನು ಹೋಗಲಾಡಿಸಲು ಸರ್ಕಾರ ಇದನ್ನು ಜಾರಿಗೊಳಿಸಿದೆ.ಇದನ್ನು ನೀಡುವ ಕಾರಣವೆಂದರೆ ಅವರು ಇಂತಹ ಸೇವಾವಲಯಗಳಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಸೂಕ್ತ ಪ್ರಮಾಣದ ಪ್ರಾತಿನಿಧಿತ್ವ ಹೊಂದಿರುವುದಿಲ್ಲ.ಈ ಕೊರತೆ ನೀಗಿಸಲು ಭಾರತ ಸರ್ಕಾರವು ಈ ಕೋಟಾ ಪದ್ದತಿಯನ್ನು ಜಾರಿಗೊಳಿಸಿದೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆಸಲ್ಪಡುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ. ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ.
ಮಲ್ಟಿಮೀಡಿಯಾ ಎಂಬುದು ವೈವಿಧ್ಯಮಯ ಹುರುಳಿನ ನಮೂನೆಗಳ ಒಂದು ಸಂಯೋಜನೆಯನ್ನು ಬಳಸುವ ಮಾಧ್ಯಮ ಮತ್ತು ಹುರುಳು ಆಗಿದೆ. ಈ ಪದವನ್ನು ಒಂದು ನಾಮವಾಚಕವಾಗಿ (ಬಹು ಹುರುಳಿನ ನಮೂನೆಗಳೊಂದಿಗಿನ ಒಂದು ಮಾಧ್ಯಮ) ಅಥವಾ ಬಹು ಹುರುಳಿನ ನಮೂನೆಗಳನ್ನು ಹೊಂದಿರುವ ಮಾಧ್ಯಮವೊಂದನ್ನು ವಿವರಿಸುವ ಒಂದು ಗುಣವಾಚಕವಾಗಿ ಬಳಸಬಹುದು. ಮುದ್ರಿತ ಅಥವಾ ಕರ-ನಿರ್ಮಿತ ಸಾಮಗ್ರಿಯ ಸಾಂಪ್ರದಾಯಿಕ ನಮೂನೆಗಳನ್ನು ಮಾತ್ರವೇ ಬಳಸುವ ಮಾಧ್ಯಮ ಎಂಬ ಪದಕ್ಕೆ ಪ್ರತಿಯಾಗಿ ಈ ಪದವನ್ನು ಬಳಸಲಾಗುತ್ತದೆ.
ಆನಂದರಂಗಂ ಪಿಳ್ಳೆ(30 ಮಾರ್ಚ್ 1709 – 16 ಜನವರಿ 1761) ಹದಿನೆಂಟನೆಯ ಶತಮಾನದ ಅಂತ್ಯದಲ್ಲಿ ಫ್ರೆಂಚ್ ಈಸ್ಟ್ ಇಂಡಿಯಾ ಕಂಪನಿಯಲ್ಲಿ ಉನ್ನತಾಧಿಕಾರದಲ್ಲಿದ್ದು ಉಲ್ಲೇಖಾರ್ಹವಾದ ಒಂದು ದಿನಚರಿಯನ್ನು ಬಿಟ್ಟುಹೋಗಿದ್ದಾನೆ. ಇಂಗ್ಲಿಷರಿಗೂ ಫ್ರೆಂಚರಿಗೂ ನಡೆದ ಯುದ್ಧದ ಖಚಿತವಾದ ವಿವರಗಳು ಸಮಕಾಲೀನವಾದ ಅವನ ದಿನಚರಿಯಲ್ಲಿವೆ. ಅಲ್ಲದೆ ದಕ್ಷಿಣ ಭಾರತದಲ್ಲಿ ರಾಜರುಗಳಿಗೆ ಪರಸ್ಪರ ವೈಷಮ್ಯವಿದ್ದು ಡೂಪ್ಲೆ ಫ್ರೆಂಚರ ಸಾಮ್ರಾಜ್ಯವನ್ನು ಸ್ಥಾಪಿಸಲು ಪ್ರಯತ್ನಪಟ್ಟಿದ್ದು ಹೇಗೆ ಎಂಬುದನ್ನೂ ಇದರಿಂದ ತಿಳಿಯಬಹುದು.
ಮೈಕೆಲ್ಯಾಂಜೆಲೊ ವಿ ಲೊಡೊವಿಕೊ ಬುವೊನರೊಟಿ ಸಿಮೊನಿ (೬ ಮಾರ್ಚ್ ೧೪೭೫ – ೧೮ ಫೆಬ್ರವರಿ ೧೫೬೪), ಮೈಕೆಲ್ಯಾಂಜೆಲೊ ಎಂದೇ ಪ್ರಸಿದ್ಧನಾಗಿದ್ದ ಇಟಲಿಯ ನವೋದಯದ ಅವಧಿಯ ಓರ್ವ ವರ್ಣಚಿತ್ರ ಕಲಾವಿದ, ಶಿಲ್ಪಿ, ವಾಸ್ತುಶಿಲ್ಪಿ, ಕವಿ, ಮತ್ತು ಎಂಜಿನಿಯರ್. ಕಲೆಗಳಿಂದ ಆಚೆಗೆ ಆತ ಮಾಡಿದ ಕೆಲವೊಂದು ಪ್ರವೇಶಗಳ ಹೊರತಾಗಿಯೂ, ಆತ ಆಯ್ದುಕೊಂಡ ಕ್ಷೇತ್ರಗಳಲ್ಲಿ ಕಂಡುಬಂದ ಅವನ ಬಹುಮುಖ ಪ್ರತಿಭೆಯು ಅತ್ಯಂತ ಉತ್ಕೃಷ್ಟ ಮಟ್ಟದಲ್ಲಿತ್ತು. ಇದರಿಂದಾಗಿ ಮೂಲಕಲ್ಪನೆಯ ನವೋದಯದ ಮನುಷ್ಯನೆಂಬ ಶೀರ್ಷಿಕೆಯ ನೀಡುವಿಕೆಗೆ ಸಂಬಂಧಿಸಿದಂತೆ ಅವನ ಪ್ರತಿಸ್ಪರ್ಧಿ ಹಾಗೂ ಇಟಲಿಯ ಸಹವರ್ತಿಯಾದ ಲಿಯೋನಾರ್ಡೊ ಡ ವಿನ್ಸಿಯೊಂದಿಗೆ ಅವನನ್ನು ಅನೇಕಬಾರಿ ಓರ್ವ ಸ್ಪರ್ಧಿಯಂತೆ ಅಥವಾ ಪೈಪೋಟಿಗಾರನಂತೆ ಪರಿಗಣಿಸಲಾಗುತ್ತದೆ.
ಪ್ರಗತಿಶೀಲತೆ ಯು ಸರ್ಕಾರೀ ಕಾರ್ಯದ ಮೂಲಕ ಬದಲಾವಣೆಗಳು ಅಥವಾ ಸುಧಾರಣೆಗಳನ್ನು ಸಮರ್ಥಿಸುವ ಅಥವಾ ಶಿಫಾರಸು ಮಾಡುವ ಒಂದು ರಾಜಕೀಯ ವರ್ತನೆಯಾಗಿದೆ. ಪ್ರಗತಿಶೀಲತೆಯನ್ನು ಹೆಚ್ಚಾಗಿ ಸಂಪ್ರದಾಯವಾದಿ ಅಥವಾ ಪ್ರತಿಗಾಮಿ ತತ್ತ್ವಗಳ ವಿರೋಧಿಯಾಗಿ ಪರಿಗಣಿಸಲಾಗುತ್ತದೆ. ಪ್ರಗತಿಶೀಲ ಚಳವಳಿ ಯು ಮನೆಯಲ್ಲಿ ಮತ್ತು ಕೆಲಸದಲ್ಲಿ ಅಸಹನೀಯ ಸ್ಥಿತಿಗಳನ್ನು ಎದುರಿಸುತ್ತಿದ್ದವರಿಗೆ ಸಹಾಯ ಮಾಡಲು ಆಸಕ್ತಿಹೊಂದಿದ್ದ ವಸಾಹತು ಕಾರ್ಮಿಕರು ಮತ್ತು ಸುಧಾರಕರಿಂದ ನಗರಗಳಲ್ಲಿ ಆರಂಭವಾಯಿತು.
ಭಾರತ ದೇಶದ ಪಂಚ ವಾರ್ಷಿಕ ಯೋಜನೆಗಳು
ಭಾರತ ಸರ್ಕಾರ ಇಲ್ಲಿಯವರೆಗೆ ೧೧ ಪಂಚ ವಾರ್ಷಿಕ ಯೋಜನೆಗಳನ್ನು ದೇಶಕ್ಕೆ ಅರ್ಪಿಸಿರುತ್ತದೆ.
ಪೆಸಿಫಿಕ್ ಮಹಾಸಾಗರ ಭೂಮಿಯ ಅತ್ಯಂತ ದೊಡ್ಡ ಮಹಾಸಾಗರ. ಲ್ಯಾಟಿನ್ ಭಾಷೆಯಲ್ಲಿ "ಶಾಂತ ಸಾಗರ" ಎಂಬ ಅರ್ಥದ ಈ ಹೆಸರಿನ್ನಿಟ್ಟವನು ಪೋರ್ಚುಗೀಯ ನಾವಿಕ ಫರ್ಡಿನ್ಯಾಂಡ್ ಮೆಗೆಲನ್. ಅಮೆರಿಕಾ ಭೂಖಂಡಗಳ ಪಶ್ಚಿಮಕ್ಕೆ ಹಾಗೂ ಏಷ್ಯಾ ಮತ್ತು ಆಸ್ಟ್ರೇಲಿಯಾ ಭೂಖಂಡಗಳ ಪೂರ್ವದ ಪ್ರದೇಶವನ್ನು ವ್ಯಾಪಿಸಿಕೊಂಡಿರುವ ಈ ಅಗಾಧ ಜಲರಾಶಿಯು ಭೂಮಿಯ ಒಟ್ಟು ವಿಸ್ತೀರ್ಣದ ೩೫.೨೫% ಪ್ರದೇಶವನ್ನು ಆವರಿಸಿಕೊಂಡಿದೆ.
ವಿಷಮಶೀತ ಜ್ವರ, ಅಥವಾ ಸಾಮಾನ್ಯವಾಗಿ ಟೈಫಾಯ್ಡ್ ಎಂದು ಪರಿಚಿತವಾಗಿರುವ, ಸ್ಯಾಲ್ಮನೆಲಾ ಎಂಟರಿಕಾ ಸಿಯರೋವೇರ್ ಟೈಫೈ ಬ್ಯಾಕ್ಟೀರಿಯದಿಂದ ಉಂಟಾಗುವ ಒಂದು ಕಾಯಿಲೆ. ವಿಶ್ವಾದ್ಯಂತ ಸಾಮಾನ್ಯವಾಗಿ ಕಂಡುಬರುವ ಇದು, ಸೋಂಕಿರುವ ವ್ಯಕ್ತಿಯ ಮಲದಿಂದ ಕಲುಷಿತಗೊಂಡ ಆಹಾರ ಅಥವಾ ನೀರಿನ ಸೇವನೆಯಿಂದ ಹರಡುತ್ತದೆ. ಆಮೇಲೆ ಬ್ಯಾಕ್ಟೀರಿಯ ಕರುಳಿನ ಗೋಡೆಯ ಮೂಲಕ ಪ್ರವೇಶಿಸುತ್ತವೆ ಮತ್ತು ಮ್ಯಾಕ್ರಫೇಜ್ಗಳಿಂದ ಕಬಳಿಸಲ್ಪಡುತ್ತವೆ.
ಸೇಂಟ್ ಆಗಸ್ಟೀನ್ (13 ನವಂಬರ್ 354 – 28 ಆಗಸ್ಟ್ 430), ಆಗಸ್ಟೀನ್ ಆಫ್ ಹಿಪ್ಪೋ ಎಂದೂ ಸೇಂಟ್ ಆಸ್ಟೀನ್ ಎಂದೂ , ಬ್ಲೆಸ್ಸ್ಡ್ ಆಗಸ್ಟೀನ್ ಎಂದೂ ಕರೆಯಲ್ಪಡುವ ಈತ ಕ್ರೈಸ್ತ ಧರ್ಮದ ಆರಂಭಿಕ ದೇವತಾಶಾಸ್ತ್ರಜ್ಞ ಮತ್ತು ತತ್ವಶಾಸ್ತ್ರರಜ್ಞರಲ್ಲಿ ಒಬ್ಬನು.ಈತನು ಅಲ್ಜೀರಿಯದಲ್ಲಿ ಬಿಷಪ್ ಆಗಿದ್ದನು.ಉತ್ತರ ಆಫ್ರಿಕದಲ್ಲಿ ಹುಟ್ಟಿ, ಬೆಳೆದು, ಮಿಲಾನ್ ಪಟ್ಟಣದಲ್ಲಿ ಅಧ್ಯಾಪಕ ವೃತ್ತಿಯಲ್ಲಿದ್ದು, ಕ್ರೈಸ್ತ ಸಂತರ ವ್ಯಾಸಂಗದಿಂದ ಸ್ಫೂರ್ತಿಗೊಂಡು ಕ್ರೈಸ್ತಮತಾವಲಂಬಿಯಾಗಿ ಆಫ್ರಿಕಕ್ಕೆ ಹಿಂತಿರುಗಿ ಮತಧರ್ಮ ಪ್ರಚಾರದಲ್ಲಿ ನಿರತನಾದ ಒಬ್ಬ ಸಂತ. ತನ್ನ ಸಿಟಿ ಆಫ್ ಗಾಡ್ ಎಂಬ ಗ್ರಂಥದಿಂದ ಜಗತ್ಪ್ರಸಿದ್ಧನಾಗಿದ್ದಾನೆ.
ಕಾಮಸೂತ್ರ ವಾತ್ಸಾಯನನಿಂದ ಬರೆಯಲ್ಪಟ್ಟ ಸಂಸ್ಕೃತ ಸಾಹಿತ್ಯದಲ್ಲಿ ಮಾನವನ ಲೈಂಗಿಕ ವರ್ತನೆಯ ಮೇಲಿನ ಪ್ರಮಾಣಿತ ಕೃತಿ ಎಂದು ವ್ಯಾಪಕವಾಗಿ ಪರಿಗಣಿಸಲಾಗಿರುವ ಒಂದು ಪ್ರಾಚೀನ ಭಾರತೀಯ ಹಿಂದೂ ಪಠ್ಯ. ಕೃತಿಯ ಒಂದು ಭಾಗ ಸಂಭೋಗದ ಮೇಲೆ ಪ್ರಾಯೋಗಿಕ ಸಲಹೆಯನ್ನು ಹೊಂದಿದೆ. ಅದು ಹೆಚ್ಚಾಗಿ ಗದ್ಯ ರೂಪದಲ್ಲಿದೆ, ಜೊತೆಗೆ ಅನೇಕ ಸೇರಿಸಲಾದ ಅನುಷ್ಟುಭ ಕಾವ್ಯ ಶ್ಲೋಕಗಳನ್ನು ಹೊಂದಿದೆ.