The most-visited ಕನ್ನಡ Wikipedia articles, updated daily. Learn more...
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆಸಲ್ಪಡುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ. ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ.
ವಚನ ಸಾಹಿತ್ಯದಲ್ಲಿ ಬಸವಯುಗದ ವಚನಕಾರ್ತಿಯರಂತೆ ಕೊಡುಗೆಯಿತ್ತವರನ್ನು ಬಹುಶ: ಯಾವ ಶತಮಾನವೂ ಕಂಡಿರಲಿಲ್ಲ. ಈ ಕಾಲಘಟ್ಟದಲ್ಲಿ ಹಲವಾರು ಶರಣೆಯರು ಮುಕ್ತ ಮನಸ್ಸಿನಿಂದ ವಚನಗಳನ್ನು ರಚಿಸಿರುವುದನ್ನು ಯಾರು ಹೆಚ್ಚಾಗಿ ಪ್ರಚುರ ಪಡಿಸದೆ ಇರುವುದು ಅಚ್ಚರಿ ಯನ್ನುಂಟು ಮಾಡುತ್ತದೆ. ಇಂತಹವರನ್ನು 'ಅಪ್ರಸಿದ್ದ ಶರಣೆಯರು/ವಚನಕಾರ್ತಿಯರು' ಅಥವಾ 'ಗೌಪ್ಯವಚನಕಾರ್ತಿಯರೆಂದು 'ಕರೆಯ ಬಹುದಾಗಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ದೇವಿಕಾ ರಾಣಿ (ಮಾರ್ಚ್ ೩೦, ೧೯೦೮ – ಮಾರ್ಚ್ ೯, ೧೯೯೪¬) ಭಾರತೀಯ ಚಿತ್ರರಂಗದ ಪ್ರತಿಷ್ಟಿತ ಗೌರವವಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಮೊಟ್ಟಮೊದಲು ಸ್ವೀಕರಿಸಿದ ಕೀರ್ತಿವಂತರು. ಅವರು ಮಹಾನ್ ಕಲಾವಿದೆಯಾಗಿ ಹಾಗೂ ತಮ್ಮ 'ಬಾಂಬೆ ಟಾಕೀಸ್' ಚಿತ್ರ ನಿರ್ಮಾಣ ಸಂಸ್ಥೆಯ ಮೂಲಕ ನಿರ್ಮಿಸಿದ ಶ್ರೇಷ್ಠ ಚಿತ್ರಗಳಿಂದ ಭಾರತದಲ್ಲಷ್ಟೇ ಅಲ್ಲದೆ ಹೊರ ದೇಶಗಳಲ್ಲೂ ಪ್ರಸಿದ್ಧಿ ಪಡೆದವರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ನೆನಪು ಎಂದರೆ ಒಬ್ಬ ವ್ಯಕ್ಥಿ ತನ್ನ ಜ್ಞಾನೇಂದ್ರಿಯಗಳ ಮೂಲಕ ಕಲಿತ ಅಥವಾ ಅನುಭವಿಸಿದ ವಿಷಯವನ್ನು ಪುನಃ ಅರಿವಿಗೆ ತರುವ ಸಾಮರ್ಥ್ಯ. ಕಲಿಯುವ ಪ್ರಕ್ರಿಯೆಯಲ್ಲಿ ನೆನೆಪು ಒಂದು ಪ್ರಮುಖ ಭಾಗವಾಗಿದೆ.ನಾವು ಹಳೆಯದನ್ನು ನೆನೆಪಿಸಿಕೊಳ್ಳಲು ಅಸಾದ್ಯವಾದರೆ ಹೊಸದನ್ನು ಕಲಿಯಲು ಸಾದ್ಯವಾಗುವುದಿಲ್ಲ. ನೆನಪು ಇಲ್ಲವಾದಲ್ಲಿ ಪ್ರತಿ ವಿಷಯವೂ ಪ್ರತಿ ಬಾರಿಯೂ ನಮಗೆ ಹೊಸ ಅನುಭವವನ್ನು ಕೊಡುತ್ತದೆ.ನೆನಪು ಇಲ್ಲವಾದಲ್ಲಿ ಮಧುರ ಅಥವಾ ಕಹಿ ಅನುಭವಗಳಿಲ್ಲವಾಗಿ ಜೀವನ ಬರಡಾಗುತ್ತದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು.ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಮುಂದೆ ೧೯೩೮ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾಯಿಸಿದರು.ಇದು ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಈ ಸಂಸ್ಥೆ ಕರ್ನಾಟಕದಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ.
ಭಗತ್ ಸಿಂಗ್(೧೯೦೭–೧೯೩೧) ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಭಾರತದ ಮೊದಲ ಮಾರ್ಕ್ಸಿಸ್ಟ್ ಗಳಲ್ಲೊಬ್ಬರು. ಭಗತ್ ಸಿಂಗ್ ಅವರು ಸೆಪ್ಟೆಂಬರ್ ೨೭, ೧೯೦೭ರಲ್ಲಿ ಪಂಜಾಬ್ ಲಾಯಲ್ ಪುರ ಜಿಲ್ಲೆಯ 'ಬಾಂಗಾ' ಎಂಬ ಹಳ್ಳಿಯ ಸಿಖ್ ಸಮುದಾಯದ ಸರ್ದಾರ್ ಕಿಶನ್ ಸಿಂಗ್ ಮತ್ತು ವಿದ್ಯಾವತಿಯವರಿಗೆ ಜನಿಸಿದರು. ಜಲಿಯನ್ ವಾಲಾ ಬಾಗ್ ದುರಂತದಿಂದ ಪ್ರಭಾವಿತರಾದ ಇವರು ಸ್ವಾತಂತ್ರ ಸಂಗ್ರಾಮಕ್ಕೆ ಧುಮುಕಿದರು.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ವಿಕಿಪೀಡಿಯ [ಇಂಗ್ಲಿಷ್: Wikipedia ವಿಕಿಪೀಡಿಯ] ಒಂದು ಅಂತರ್ಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಅ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಬೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.
ಗೊರೂರು ರಾಮಸ್ವಾಮಿ ಅಯ್ಯಂಗಾರ್(ಜುಲೈ ೪, ೧೯೦೪ - ಸೆಪ್ಟೆಂಬರ್ ೮, ೧೯೯೧) ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ಅವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಸ್ವಾತಂತ್ರ್ಯ ಚಳುವಳಿ, ಮೈಸೂರಿನಲ್ಲಿ ಪ್ರಜಾ ಸರ್ಕಾರಕ್ಕಾಗಿ ಚಳುವಳಿ, ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಹೋರಾಡಿ ಹರಿಜನೋದ್ಧಾರ ಮತ್ತು ಗ್ರಾಮೊದ್ಧಾರಕ್ಕಾಗಿ ಶ್ರಮಿಸಿದ ಅವರೊಬ್ಬ ಅಪ್ರತಿಮ ಗಾಂಧಿವಾದಿ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಎಲ್ಲಾದರೂ ಇರು ಏಂತಾದರೂ ಇರು ಏಂದೆಂದಿಗೂ ನೀ ಕನ್ನಡವಾಗಿರೂ ಕನ್ನಡವೇ ಸತ್ಯ ಕನ್ನಡವೇ ನಿತ್ಯ ಕನ್ನಡವೇ ಕನ್ನಡಿಗರ ಶಕ್ತಿ ಗರ್ವದಿಂದ ಘರ್ಜಿಸು ನಾ ಕನ್ನಡಿಗನೆಂದು. ಕನ್ನಡ ಚಿತ್ರರಂಗವು ಕರ್ನಾಟಕದಲ್ಲಿ ರಚಿಸಲಾಗುವ ಚಲನಚಿತ್ರಗಳನ್ನು ಒಳಗೊಂಡಿದೆ.ಕನ್ನಡ ಚಿತ್ರರಂಗವು ಮೂಲತಹ ರಂಗಭೂಮಿ ಯನ್ನು ಅವಲಂಬಿಸಿ ಆರಂಭವಾಯಿತು ಪ್ರಮುಖವಾಗಿ ಕನ್ನಡ ಚಿತ್ರಗಳು ಮತ್ತು ಕೆಲವು ತುಳು ಹಾಗು ಕೊಂಕಣಿ ಭಾಷೆಗಳ ಚಿತ್ರಗಳು ಈ ಚಿತ್ರರಂಗಕ್ಕೆ ಸೇರುತ್ತವೆ. ೧೯೩೪ರಲ್ಲಿ ತೆರೆ ಕಂಡ "ಸತಿ ಸುಲೋಚನ" ಮೊದಲ ಕನ್ನಡ ಚಿತ್ರ.ಕನ್ನಡ ಮೊದಲ ವರ್ಣಮಯ ಚಿತ್ರ [(‘ಅಮರಶಿಲ್ಪಿ ಜಕ್ಕಣಾಚಾರಿ’]).[( "ಮೂರು ದಾರಿಗಳು"]) ಇದು ಕನ್ನಡ ಚಿತ್ರರಂಗದ ಕೊನೆಯ ಕಪ್ಪುಬಿಳುಪು ಚಲನಚಿತ್ರ.೧೯೫೪ರಲ್ಲಿ ಬಿಡುಗಡೆ ಹೊಂದಿದ "ಬೇಡರ ಕಣ್ಣಪ್ಪ" ಈ ಚಿತ್ರರಂಗದ ಪ್ರಮುಖ ನಟರಾದ ರಾಜಕುಮಾರ್ ಅವರ ಮೊದಲ ಚಿತ್ರ.
ಭಾರತದ ನ್ಯಾಯವ್ಯವಸ್ಥೆಯು ಭಾರತದಲ್ಲಿ ಈಗ ಕಾರ್ಯನಡೆಸುತ್ತಿರುವ ಕಾನೂನು ವ್ಯವಸ್ಥೆ. ಬ್ರಿಟಿಷ್ ಆಳ್ವಿಕೆಯ ಕಾಲದಲ್ಲಿ ಬ್ರಿಟಿಷ್ ವಸಾಹತುಶಾಹಿ ಪ್ರಭಾವದ ದೀರ್ಘ ಅವಧಿಯ ಕಾರಣದಿಂದಾಗಿ ಇದು ಬಹುಮಟ್ಟಿಗೆ ಇಂಗ್ಲೆಂಡ್ನ ಸಾಮಾನ್ಯ ಕಾನೂನಿನ ಮೇಲೆ ಆಧಾರಿತವಾಗಿದೆ. ಸಮಕಾಲೀನ ಭಾರತೀಯ ಕಾನೂನಿನ ಬಹುತೇಕ ಭಾಗವು ಗಮನಾರ್ಹವಾಗಿ ಐರೋಪ್ಯ ಮತ್ತು ಅಮೇರಿಕದ ಪ್ರಭಾವವನ್ನು ತೋರಿಸುತ್ತದೆ.
ಕ್ರಿಕೆಟ್ ಎಂಬುದು ಬ್ಯಾಟ್ ಮತ್ತು ಚೆಂಡುಗಳಿಗೆ ಸಂಬಂಧಪಟ್ಟ ಪಂಗಡದ ಆಟವೆಂದೂ ಹಾಗೂ ೧೬ನೇ ಶತಮಾನದಲ್ಲಿ ದಕ್ಷಿಣ ಇಂಗ್ಲೆಂಡಿನಲ್ಲಿ ಆಡಲ್ಪಟ್ಟಿದ್ದು ಎಂಬ ಬಗ್ಗೆ ಆಧಾರವಿದೆ.೧೮ನೇಯ ಶತಮಾನದ ಅಂತ್ಯದ ಸಮಯದಲ್ಲಿ ಕ್ರಿಕೆಟ್ ಇಂಗ್ಲೆಂಡಿನ ರಾಷ್ಟ್ರೀಯ ಕ್ರೀಡೆಯಾಗಿ ಅಭಿವೃದ್ಧಿ ಹೊಂದಿತ್ತು. ಬ್ರಿಟೀಷ್ ಸಾಮ್ರಾಜ್ಯದ ವಿಸ್ತರಣೆಯು ಸಮುದ್ರದಾಚೆಗಿನ ದೇಶಗಳೊಡನೆ ಕ್ರಿಕೆಟ್ ಅಡಲು ಅನುವು ಮಾಡಿಕೊಟ್ಟಿತು ಮತ್ತು ಹತ್ತೊಂಬತ್ತನೆಯ ಶತಮಾನದ ಮಧ್ಯಭಾಗದಲ್ಲಿ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನು ನಡೆಸಲಾಗಿತ್ತು.ಇಂದು ಆಟಗಳ ಆಡಳಿತಾತ್ಮಕ ಅಂಗವಾದ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ೧೦೪ ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿದೆ. ಆಟದ ನಿಯಮಾವಳಿಗಳು ಕ್ರಿಕೆಟ್ನ ಕಾನೂನುಗಳು ಎಂದು ಪರಿಚಿತವಾಗಿವೆ.
Dharma (ಸಂಸ್ಕೃತ: धर्म ಧರ್ಮ, ಪಾಳಿ ಧಮ್ಮಾ ) ಇದು ವಿಭಿನ್ನ ಪದಗಳನ್ನು ಭಾರತೀಯ ತತ್ವಶಾಸ್ತ್ರ ಮತ್ತು ಧರ್ಮಗಳಲ್ಲಿ ಬಳಸಿಕೊಂಡು ತನ್ನ ವ್ಯಾಪ್ತಿಯ ಮಹತ್ವದ ವಿಶಾಲತೆಗೆ ಹೆಸರಾಗಿದೆ. ಇದನ್ನು ಹಿಂದುತ್ವ,ದ ದೃಷ್ಟಿಯಲ್ಲಿ ಇದರ ಆಚರಣೆಯು ಪ್ರತಿಯೊಬ್ಬರ ನ್ಯಾಯಯುತ ಕರ್ತವ್ಯವಾಗಿದೆ. ಅದಲ್ಲದೇ ಹಿಂದುಯೊಬ್ಬನ ಧರ್ಮವು ವ್ಯಕ್ತಿಯ ವಯಸ್ಸು,ವರ್ಗ,ಶ್ರೇಣಿ,ವೃತ್ತಿ ಮತ್ತು ಲಿಂಗ ಇತ್ಯಾದಿ ಅಂಶಗಳ ಮೇಲೆ ಧಾರ್ಮಿಕ ಆಚರಣೆಗಳು ನಿಂತಿವೆ.
ತಾಜ್ ಮಹಲ್ (pronounced /tɑdʒ məˈhɑl/; ಹಿಂದಿ: ताज महल ; ಪರ್ಷಿಯನ್/ಉರ್ದು: تاج محل ) ಭಾರತದ ಆಗ್ರಾದಲ್ಲಿರುವ ಭವ್ಯ ಸಮಾಧಿಯಾಗಿದೆ. ಇದನ್ನು ಮೊಘಲ್ ಚಕ್ರವರ್ತಿ ಷಹ ಜಹಾನ್ ತನ್ನ ಮೆಚ್ಚಿನ ಪತ್ನಿ ಮಮ್ತಾಜ್ ಮಹಲ್ಳ ನೆನಪಿಗಾಗಿ ಕಟ್ಟಿಸಿದನು. ಪರ್ಷಿಯನ್, ಭಾರತೀಯ ಮತ್ತು ಮುಸ್ಲಿಂ ವಾಸ್ತುಶೈಲಿಗಳ ಸಮ್ಮಿಶ್ರಣವಾದ ಮೊಘಲ್ ವಾಸ್ತುಶೈಲಿಗೆ ತಾಜ್ ಮಹಲ್ ("ತಾಜ್" ಎಂದೂ ಕರೆಯಲ್ಪಡುತ್ತದೆ) ಅತ್ಯುತ್ತಮ ಉದಾಹರಣೆಯೆಂದು ಪರಿಗಣಿಸಲಾಗಿದೆ.
ಮಂಗಳೂರು (ತುಳು: ಕುಡ್ಲ; ಕೊಂಕಣಿ: ಕೊಡಿಯಾಲ್; ಬ್ಯಾರಿ: ಮೈಕಾಲ; ಆಂಗ್ಲ: ಮ್ಯಾಂಗಲೋರ್; ಮಲಯಾಳಂ: ಮಂಗಲಾಪುರಂ) ಕರ್ನಾಟಕದ ನೈಋತ್ಯದಲ್ಲಿರುವ ಪ್ರಮುಖ ರೇವು ಪಟ್ಟಣ ಹಾಗೂ ಕರ್ನಾಟಕದ ಪ್ರಮುಖ ನಗರಗಳಲ್ಲೊಂದು. ಭಾರತದ ಪಶ್ಚಿಮ ಕರಾವಳಿಯಲ್ಲಿ ಅರಬ್ಬೀ ಸಮುದ್ರದ ತೀರದಲ್ಲಿರುವ ಇದು ತನ್ನ ಪೂರ್ವದಲ್ಲಿ ಪಶ್ಚಿಮ ಘಟ್ಟಗಳನ್ನು ಹೊಂದಿದೆ. ಮಂಗಳೂರು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಆಡಳಿತ ಕೇಂದ್ರ.
ಅನೇಕವೇಳೆ H-D ಅಥವಾ ಹಾರ್ಲೆ ಎಂದು ಸಂಕ್ಷೇಪಿಸಲಾಗುವ ಹಾರ್ಲೆ-ಡೇವಿಡ್ಸನ್ (NYSE: HOG, ಹಿಂದಿನ HDI) ಸಂಸ್ಥೆಯು ಒಂದು ಅಮೇರಿಕನ್ ಮೋಟಾರು ಸೈಕಲ್/ವಾಹನ ತಯಾರಕ ಸಂಸ್ಥೆ. 20ನೇ ಶತಮಾನದ ಮೊದಲ ದಶಕದ ಅವಧಿಯಲ್ಲಿ ವಿಸ್ಕಾನ್ಸಿನ್ನ ಮಿಲ್ವಾಕೀ ನಗರದಲ್ಲಿ ಸ್ಥಾಪಿಸಲಾದ ಈ ಕಂಪೆನಿಯು, ಬೃಹತ್ ಆರ್ಥಿಕ ಕುಸಿತದ ಸಮಯದಲ್ಲೂ ಉಳಿದುಕೊಂಡಿದ್ದ ಎರಡು ಪ್ರಮುಖ ಅಮೇರಿಕನ್ ಮೋಟಾರು ಸೈಕಲ್/ವಾಹನ ತಯಾರಕ ಸಂಸ್ಥೆಗಳಲ್ಲಿ ಒಂದಾಗಿತ್ತು. ಜಪಾನೀ ತಯಾರಕರ ಪೈಪೋಟಿ ಹಾಗೂ ಕಳಪೆ ಗುಣಮಟ್ಟ ನಿಯಂತ್ರಣದ ಸಮಸ್ಯೆಯ ಅವಧಿಗಳಲ್ಲಿ ಕೂಡಾ ಹಾರ್ಲೆ-ಡೇವಿಡ್ಸನ್ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿತ್ತು .
ಜಲಿಯನ್ವಾಲಾ ಬಾಗ್ ಹತ್ಯಾಹಾಂಡ (ಅಥವಾ ಅಮೃತಸರ ಹತ್ಯಾಹಾಂಡ) - ಅಮೃತಸರದಲ್ಲಿರುವ ಜಲಿಯನ್ವಾಲಾ ಬಾಗ್ ಉದ್ಯಾನದಲ್ಲಿ ಏಪ್ರಿಲ್ ೧೩, ೧೯೧೯ರಂದು ಬ್ರಿಟೀಷ್ ಭಾರತ ಸೇನೆಯಿಂದ ಅಲ್ಲಿ ನೆರೆದಿದ್ದ ಗಂಡಸರು, ಹೆಂಗಸರು, ಮಕ್ಕಳೆಲ್ಲರ ಮೇಲೆ ನಡೆಸಿದ ಗುಂಡಿನ ದಾಳಿಯ ಪರಿಣಾಮವಾಗಿ ನಡೆದ ಮಾರಣಹೋಮ. ಅಧಿಕೃತ ಮೂಲಗಳ ಪ್ರಕಾರ ಸಾವಿಗೀಡಾದವರ ಸಂಖ್ಯೆ ೩೭೯. ಖಾಸಗಿ ಮೂಲಗಳ ಪ್ರಕಾರ ಸಾವಿಗೀಡಾದವರ ಸಂಖ್ಯೆ ಸಾವಿರಕ್ಕೂ ಹೆಚ್ಚು ಹಾಗು ಗಾಯಗೊಂಡವರ ಸಂಖ್ಯೆ ೧೨೦೦ಕ್ಕೂ ಹೆಚ್ಚು., ಮತ್ತು ಸಿವಿಲ್ ಶಸ್ತ್ರಚಿಕಿತ್ಸಾ ತಜ್ಞ ಡಾ.ಸ್ಮಿತ್ ನೀಡಿದ ಮಾಹಿತಿಯ ಪ್ರಕಾರ, ಸಾವಿಗೀಡಾದವರು ೧೮೦೦ಕ್ಕೂ ಹೆಚ್ಚು.
ಚದುರಂಗ (ಚೆಸ್) ಇಬ್ಬರು ಆಟಗಾರರಿ೦ದ ಆಡಲ್ಪಡುವ ಒಂದು ಆಟ - ಇದನ್ನು ೬೪ ಚೌಕಗಳಿರುವ ಮಣೆಯ ಮೇಲೆ ಆಡಲಾಗುತ್ತದೆ. ಮಣೆಯ ಮೇಲಿನ ಚೌಕಗಳು ಕಪ್ಪು ಮತ್ತು ಬಿಳುಪು ಬಣ್ಣಗಳಿಂದ ಕೂಡಿದ್ದ ಒಂದು ಕಪ್ಪು ಮತ್ತು ಒಂದು ಬಿಳಿ - ಹೀಗೆ ಜೋಡಿಸಲ್ಪಟ್ಟಿರುತ್ತವೆ. ಆಟದ ಪ್ರಾರಂಭದಲ್ಲಿ ಪ್ರತಿ ಆಟಗಾರನ ಬಳಿ ೧೬ ಕಾಯಿಗಳಿರುತ್ತವೆ - ಒಂದು ರಾಜ, ಒಂದು ರಾಣಿ, ಎರಡು ಆನೆ, ಎರಡು ಕುದುರೆ, ಎರಡು ಒಂಟೆ ಮತ್ತು ಎಂಟು ಪದಾತಿಗಳು.
ಅಮೆರಿಕ ಸಂಯುಕ್ತ ಸಂಸ್ಥಾನ ವು (ಸಾಮಾನ್ಯವಾಗಿ ಸಂಯುಕ್ತ ಸಂಸ್ಥಾನ , ಯುಎಸ್ , ಯುಎಸ್ಎ ಅಥವಾ ಅಮೆರಿಕಾ ಎಂದು ಕರೆಯಲ್ಪಡುವ) ಐವತ್ತು ರಾಜ್ಯಗಳು ಮತ್ತು ಒಳ ಆಡಳಿತದಲ್ಲಿ ಸ್ವತಂತ್ರವಾಗಿರುವ ಡಿಸ್ಟ್ರಿಕ್ಟ್ಯನ್ನೊಳಗೊಂಡ ಒಂದು ಸ್ವಾಯತ್ತ ಸಾಂವಿಧಾನಿಕ ಗಣರಾಜ್ಯ. ಬಹುತೇಕ ಕೇಂದ್ರ ಭಾಗದ ಉತ್ತರ ಅಮೆರಿಕಾದಲ್ಲಿ ಸ್ಥಿತವಾಗಿರುವ ಈ ದೇಶದ ಒತ್ತೊತ್ತಾಗಿರುವ 48 ರಾಜ್ಯಗಳು ಹಾಗೂ ಪ್ರಧಾನ ಡಿಸ್ಟ್ರಿಕ್ಟ್ ವಾಷಿಂಗ್ಟನ್ ಡಿಸಿ, ಪೆಸಿಫಿಕ್ ಹಾಗೂ ಅಟ್ಲಾಂಟಿಕ್ ಸಮುದ್ರಗಳ ನಡುವೆ ನೆಲೆಗೊಂಡಿದ್ದು, ಉತ್ತರದಲ್ಲಿ ಕೆನಡಾ ಹಾಗೂ ದಕ್ಷಿಣದಲ್ಲಿ ಮೆಕ್ಸಿಕೋಗಳನ್ನು ಗಡಿಗಳಾಗಿ ಹೊಂದಿದೆ. ಅಲಾಸ್ಕಾ ರಾಜ್ಯವು ವಾಯುವ್ಯ ಭಾಗದಲ್ಲಿದ್ದು, ಕೆನಡಾವನ್ನು ಉತ್ತರ ದಿಕ್ಕಿನಲ್ಲೂ ಬೇರಿಂಗ್ ಜಲಸಂಧಿಯನ್ನು ಹಾದು ರಷ್ಯಾವನ್ನು ಪಶ್ಚಿಮ ದಿಕ್ಕಿನಲ್ಲೂ ಹೊಂದಿದೆ.
ಪ್ರಗತಿಶೀಲತೆ ಯು ಸರ್ಕಾರೀ ಕಾರ್ಯದ ಮೂಲಕ ಬದಲಾವಣೆಗಳು ಅಥವಾ ಸುಧಾರಣೆಗಳನ್ನು ಸಮರ್ಥಿಸುವ ಅಥವಾ ಶಿಫಾರಸು ಮಾಡುವ ಒಂದು ರಾಜಕೀಯ ವರ್ತನೆಯಾಗಿದೆ. ಪ್ರಗತಿಶೀಲತೆಯನ್ನು ಹೆಚ್ಚಾಗಿ ಸಂಪ್ರದಾಯವಾದಿ ಅಥವಾ ಪ್ರತಿಗಾಮಿ ತತ್ತ್ವಗಳ ವಿರೋಧಿಯಾಗಿ ಪರಿಗಣಿಸಲಾಗುತ್ತದೆ. ಪ್ರಗತಿಶೀಲ ಚಳವಳಿ ಯು ಮನೆಯಲ್ಲಿ ಮತ್ತು ಕೆಲಸದಲ್ಲಿ ಅಸಹನೀಯ ಸ್ಥಿತಿಗಳನ್ನು ಎದುರಿಸುತ್ತಿದ್ದವರಿಗೆ ಸಹಾಯ ಮಾಡಲು ಆಸಕ್ತಿಹೊಂದಿದ್ದ ವಸಾಹತು ಕಾರ್ಮಿಕರು ಮತ್ತು ಸುಧಾರಕರಿಂದ ನಗರಗಳಲ್ಲಿ ಆರಂಭವಾಯಿತು.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.