The most-visited ಕನ್ನಡ Wikipedia articles, updated daily. Learn more...
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ವಿಮೆ: ಅನಿಶ್ಚಿತ ನಷ್ಟ ಎಂಬ ಗಂಡಾಂತರದ ವಿರುದ್ಧ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ರೂಪಿಸುವ ಒಂದು ರೀತಿಯ ಅಪಾಯ ನಿರ್ವಹಣೆಯ ಉಪಾಯವೇ ವಿಮೆ ಎಂದು ಕಾನೂನು ಮತ್ತು ಅರ್ಥಶಾಸ್ತ್ರ ಪರಿಗಣಿಸುತ್ತವೆ.ಗಡಾಂತರದಿಂದ ಸಂಭವಿಸುವ ನಷ್ಟವನ್ನು ಭರ್ತಿ ಮಾಡುವುದಕ್ಕಾಗಿ, ಪಾವತಿ ಮಾಡಿರುವ 'ಕಂತಿ'ನ ಮೊತ್ತದ ನ್ಯಾಯೋಚಿತ ವಿನಿಮಯವೇ ವಿಮೆ ಎಂದು ವಿಮೆಯನ್ನು ವಿವರಿಸಲಾಗಿದೆ.ಭಾರೀ ಪ್ರಮಾಣದ ಸಂಭವನೀಯ ವಿನಾಶಕಾರಿ ನಷ್ಟವನ್ನು ತಡೆಗಟ್ಟುವ ಉದ್ದೇಶದಿಂದ ಅನುಭವಿಸುವ ನಿಶ್ಚಿತವೂ, ಗೊತ್ತಿರುವಂಥದ್ದೂ ಆದ ಅಲ್ಪ ಪ್ರಮಾಣದ ನಷ್ಟವೆಂದೂ ಇದನ್ನು ಭಾವಿಸಬಹುದು. ವಿಮೆಗಾರ ಎಂದರೆ ವಿಮೆ ಸೇವೆಯನ್ನು ಒದಗಿಸುವ ಸಂಸ್ಥೆ. ವಿಮೆದಾರ ಅಥವಾ ಪಾಲಿಸಿದಾರ ಎಂದರೆ ವಿಮೆಯ ಸೌಲಭ್ಯವನ್ನು ಪಡೆದಿರುವ ವ್ಯಕ್ತಿ ಅಥವಾ ಘಟಕ.
ಕ್ರಿಕೆಟ್ ಎಂಬುದು ಬ್ಯಾಟ್ ಮತ್ತು ಚೆಂಡುಗಳಿಗೆ ಸಂಬಂಧಪಟ್ಟ ಪಂಗಡದ ಆಟವೆಂದೂ ಹಾಗೂ ೧೬ನೇ ಶತಮಾನದಲ್ಲಿ ದಕ್ಷಿಣ ಇಂಗ್ಲೆಂಡಿನಲ್ಲಿ ಆಡಲ್ಪಟ್ಟಿದ್ದು ಎಂಬ ಬಗ್ಗೆ ಆಧಾರವಿದೆ.೧೮ನೇಯ ಶತಮಾನದ ಅಂತ್ಯದ ಸಮಯದಲ್ಲಿ ಕ್ರಿಕೆಟ್ ಇಂಗ್ಲೆಂಡಿನ ರಾಷ್ಟ್ರೀಯ ಕ್ರೀಡೆಯಾಗಿ ಅಭಿವೃದ್ಧಿ ಹೊಂದಿತ್ತು. ಬ್ರಿಟೀಷ್ ಸಾಮ್ರಾಜ್ಯದ ವಿಸ್ತರಣೆಯು ಸಮುದ್ರದಾಚೆಗಿನ ದೇಶಗಳೊಡನೆ ಕ್ರಿಕೆಟ್ ಅಡಲು ಅನುವು ಮಾಡಿಕೊಟ್ಟಿತು ಮತ್ತು ಹತ್ತೊಂಬತ್ತನೆಯ ಶತಮಾನದ ಮಧ್ಯಭಾಗದಲ್ಲಿ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನು ನಡೆಸಲಾಗಿತ್ತು.ಇಂದು ಆಟಗಳ ಆಡಳಿತಾತ್ಮಕ ಅಂಗವಾದ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ೧೦೪ ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿದೆ. ಆಟದ ನಿಯಮಾವಳಿಗಳು ಕ್ರಿಕೆಟ್ನ ಕಾನೂನುಗಳು ಎಂದು ಪರಿಚಿತವಾಗಿವೆ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಕಂಪ್ಯೂಟರಿಗೆ ಊಡಿಸಲಾದ ದತ್ತಾಂಶವನ್ನು ನಿರ್ದಿಷ್ಟ ಹೆಜ್ಜೆಗಳಲ್ಲಿ ಸಂಸ್ಕರಿಸಲಾಗುತ್ತದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು.ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಮುಂದೆ ೧೯೩೮ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾಯಿಸಿದರು.ಇದು ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಈ ಸಂಸ್ಥೆ ಕರ್ನಾಟಕದಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ.
ಜಂಗಲ್ ಬುಕ್, ಒಂಬ ಕತೆ, ಮೌಗ್ಲಿ, ಎಂಬ ಕಾಡಿನ ಹುಡುಗನ ಜೀವನದ ಸುತ್ತ ಹೆಣೆದ ಆತ್ಯಂತ ಹೆಸರುವಾಸಿಯಾದ ವಿಶ್ವದಾದ್ಯಂತ ಅತಿ ಚರ್ಚಿತ "ನೈಜ ಚಲನ ಚಿತ್ರ ಕತೆಯಾಗಿದೆ". ಈ ಚಿತ್ರಕಥೆ, ವಿಶ್ವದಾದ್ಯಂತ ಸಿನೆಮಾ ಥಿಯೇಟರ್ ಗಳಲ್ಲಿ ಪ್ರದರ್ಶಿತವಾಗುತ್ತಿದೆ. 'ಜಂಗಲ್ ಬುಕ್' ಚಿತ್ರದ ನಾಯಕ 'ಮೋಗ್ಲಿ'ಯ ಪಾತ್ರವಹಿಸಿರುವ ನೀಲ್ ಸೇಥಿಯ ವಿನಃ, ಬೇರೆ ಎಲ್ಲಾ ಪಾತ್ರಗಳೂ 'ಅತಿ ಪ್ರಭಾವೀ ಕಂಪ್ಯೂಟರ್ ಗ್ರಾಫಿಕ್ಸ್' ಮುಖಾಂತರ ಚಿತ್ರಕ್ಕೆ ಅಳವಡಿಸಲಾಗಿದೆ.
ವಿಕಿಪೀಡಿಯ [ಇಂಗ್ಲಿಷ್: Wikipedia ವಿಕಿಪೀಡಿಯ] ಒಂದು ಅಂತರ್ಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಅ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಬೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಗೊರೂರು ರಾಮಸ್ವಾಮಿ ಅಯ್ಯಂಗಾರ್(ಜುಲೈ ೪, ೧೯೦೪ - ಸೆಪ್ಟೆಂಬರ್ ೮, ೧೯೯೧) ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ಅವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಸ್ವಾತಂತ್ರ್ಯ ಚಳುವಳಿ, ಮೈಸೂರಿನಲ್ಲಿ ಪ್ರಜಾ ಸರ್ಕಾರಕ್ಕಾಗಿ ಚಳುವಳಿ, ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಹೋರಾಡಿ ಹರಿಜನೋದ್ಧಾರ ಮತ್ತು ಗ್ರಾಮೊದ್ಧಾರಕ್ಕಾಗಿ ಶ್ರಮಿಸಿದ ಅವರೊಬ್ಬ ಅಪ್ರತಿಮ ಗಾಂಧಿವಾದಿ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ರವಿ ಬೆಳಗೆರೆ ಹಾಯ್ ಬೆಂಗಳೂರ್ ಕನ್ನಡ ಹಾಗೂ 'ಓ ಮನಸೇ' ಪಾಕ್ಷಿಕ ಪತ್ರಿಕೆಯ ಸಂಪಾದಕ ಕನ್ನಡ ಸಾಹಿತಿ, ಚಿತ್ರಕಥೆ ಬರಹಗಾರ ಮತ್ತು ಈ-ಟಿವಿ ಕನ್ನಡ ವಾಹಿನಿಯ ಜನಪ್ರಿಯ ಕ್ರೈಂ ಡೈರಿ ಕಾರ್ಯಕ್ರಮದ ನಿರೂಪಕ. ೭೫ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿರುವ ಮತ್ತು ಕನ್ನಡಕ್ಕೆ ಭಾಷಾಂತರಿಸಿರುವ ರವಿ ಬೆಳಗೆರೆ, ಭಾವನಾ ಪ್ರಕಾಶನ, ಭಾವನಾ ಆಡಿಯೋ ರೀಚ್ ಮತ್ತು ಪ್ರಾರ್ಥನಾ ಶಾಲೆಯ ಸಂಸ್ಥಾಪಕ. ರವಿ ಹಾಯ್ ಬೆಂಗಳೂರು ಪತ್ರಿಕೆ ಪ್ರಾರಂಭಿಸುವ ಮುನ್ನ ಕರ್ಮವೀರ, ಸಂಯುಕ್ತ ಕರ್ನಾಟಕ ಮತ್ತು ಕಸ್ತೂರಿ ಪತ್ರಿಕೆಯಲ್ಲಿ ಕೆಲಸ ಮಾಡಿದ್ದರು.
ದಿ ರೆಸ್ಕ್ಯೂವರ್ಸ್ ೧೯೭೭ರ ಅಮೇರಿಕಾದ ಒಂದು ಆನಿಮೇಟಡ್ ಚಲನಚಿತ್ರ ವಾಲ್ಟ್ ಡಿಸ್ನಿ ಪ್ರೊಡಕ್ಷನ್ಸ್ ನಿರ್ಮಾಣದ ಮೊದಲ ಜೂನ್ ೨೨, ೧೯೭೭ ರಂದು ಬಿಡುಗಡೆ. ವಾಲ್ಟ್ ಡಿಸ್ನಿ ಅನಿಮೇಟೆಡ್ ಶಾಸ್ತ್ರೀಯ ಸರಣಿಯಲ್ಲಿ ೨೩ ಚಿತ್ರ ಚಿತ್ರ ದೊಡ್ಡ ಜಗತ್ತಿನ ಸುತ್ತ ಅಪಹರಣ ಬಲಿಪಶುಗಳು ಸಹಾಯ ಮೀಸಲಿಟ್ಟ ಪಾರುಗಾಣಿಕಾ ಚಿಕಿತ್ಸೆ ಸೊಸೈಟಿ, ನ್ಯೂ ಯಾರ್ಕ್ ಪ್ರಧಾನ ಕಚೇರಿಯನ್ನು ಮತ್ತು ಯುನೈಟೆಡ್ ನೇಷನ್ಸ್ ನೆರಳು ಅಂತಾರಾಷ್ಟ್ರೀಯ ಮೌಸ್ ಸಂಘಟನೆ, ಸುಮಾರು. ಈ ಇಲಿಗಳ ಎರಡು, ಭಯಗ್ರಸ್ತ ದ್ವಾರಪಾಲಕ ಬರ್ನಾರ್ಡ್ (ಬಾಬ್ ನ್ಯೂಹಾರ್ಟ್) ಮತ್ತು ಅವರ ಸಹ-ದಳ್ಳಾಲಿ, ಸೊಗಸಾದ ಮಿಸ್ ಬಿಯಾಂಕಾ (ಇವಾ ಗ್ಯಾಬೊರ್), ಪೆನ್ನಿ (ಮಿಷೆಲ್ ಸ್ಟೇಸಿ), ನಿಧಿ ಹಂಟ್ರೆಸ್ ಮೂಲಕ ಡೆವಿಲ್ಸ್ ಬೇಊ ರಲ್ಲಿ ಖೈದಿ ಬಂಧಿಗಳಾಗಿದ್ದ ಒಂದು ಅನಾಥ ಹುಡುಗಿಯ ರಕ್ಷಿಸಲು ಔಟ್ ಸೆಟ್ ಮೇಡಮ್ ಮೆಡ್ಯುಸಾ (ಜೆರಾಲ್ಡೀನ್ ಪುಟ).
ಹ್ಯಾರಿ ಪಾಟರ್ ಬ್ರಿಟಿಷ್ ಲೇಖಕಿ ಜೆ.ಕೆ.ರೌಲಿಂಗ್ ರ ಅವಾಸ್ತವ ಕಲ್ಪನೆಯುಳ್ಳ ಕಾದಂಬರಿಯ ಏಳು ಪುಸ್ತಕಗಳ ಸರಣಿ. ಈ ಪುಸ್ತಕಗಳು ಹಾಗ್ವರ್ಟ್ಸ್ ಮಾಟ ಮತ್ತು ಮಾಂತ್ರಿಕ ವಿದ್ಯೆಯ ಶಾಲೆಯಲ್ಲಿ ಕಲಿಯುತ್ತಿರುವ ಹ್ಯಾರಿ ಪಾಟರ್ ಎಂಬ ಹದಿ ವಯಸ್ಸಿನ ಮಾಂತ್ರಿಕ ಮತ್ತು ಅವನ ಸ್ನೇಹಿತರಾದ ರಾನ್ ವೆಸ್ಲೆ ಮತ್ತು ಹರ್ಮಿಯನ್ ಗ್ರಾಂಗರ್ ರ ಜೊತೆಗಿನ ಸಾಹಸಗಳ ಘಟನೆಗಳನ್ನು ವಿವರಿಸುತ್ತದೆ. ಈ ಕಥೆಯ ಕೇಂದ್ರ ವಿಷಯವು ಮಾಂತ್ರಿಕ ಜಗತ್ತನ್ನು ಗೆಲ್ಲುವ ಹುಡುಕಾಟದಲ್ಲಿರುವ ಮತ್ತು ಮಾಂತ್ರಿಕರಲ್ಲದ ಸಾಮಾನ್ಯ ಜನರನ್ನು (ಮಗ್ಗಲ್ಸ್) ತನ್ನ ಆಳ್ವಿಕೆಗೆ ಸ್ವಾಧಿನ ಪಡಿಸಿಕೊಳ್ಳುವ ಗುರಿಯನ್ನು ಹೊಂದಿರುವ, ಹ್ಯಾರಿಯ ಹೆತ್ತವರನ್ನು ಕೊಂದ ದುಷ್ಟ ಮಾಂತ್ರಿಕ ಲಾರ್ಡ್ ವೊಲ್ಡೆಮೊರ್ಟ್ನ ವಿರುದ್ಧ ಹ್ಯಾರಿಯ ಹೋರಾಟದ ಕುರಿತಾಗಿದೆ.
ಜಲಿಯನ್ವಾಲಾ ಬಾಗ್ ಹತ್ಯಾಹಾಂಡ (ಅಥವಾ ಅಮೃತಸರ ಹತ್ಯಾಹಾಂಡ) - ಅಮೃತಸರದಲ್ಲಿರುವ ಜಲಿಯನ್ವಾಲಾ ಬಾಗ್ ಉದ್ಯಾನದಲ್ಲಿ ಏಪ್ರಿಲ್ ೧೩, ೧೯೧೯ರಂದು ಬ್ರಿಟೀಷ್ ಭಾರತ ಸೇನೆಯಿಂದ ಅಲ್ಲಿ ನೆರೆದಿದ್ದ ಗಂಡಸರು, ಹೆಂಗಸರು, ಮಕ್ಕಳೆಲ್ಲರ ಮೇಲೆ ನಡೆಸಿದ ಗುಂಡಿನ ದಾಳಿಯ ಪರಿಣಾಮವಾಗಿ ನಡೆದ ಮಾರಣಹೋಮ. ಅಧಿಕೃತ ಮೂಲಗಳ ಪ್ರಕಾರ ಸಾವಿಗೀಡಾದವರ ಸಂಖ್ಯೆ ೩೭೯. ಖಾಸಗಿ ಮೂಲಗಳ ಪ್ರಕಾರ ಸಾವಿಗೀಡಾದವರ ಸಂಖ್ಯೆ ಸಾವಿರಕ್ಕೂ ಹೆಚ್ಚು ಹಾಗು ಗಾಯಗೊಂಡವರ ಸಂಖ್ಯೆ ೧೨೦೦ಕ್ಕೂ ಹೆಚ್ಚು., ಮತ್ತು ಸಿವಿಲ್ ಶಸ್ತ್ರಚಿಕಿತ್ಸಾ ತಜ್ಞ ಡಾ.ಸ್ಮಿತ್ ನೀಡಿದ ಮಾಹಿತಿಯ ಪ್ರಕಾರ, ಸಾವಿಗೀಡಾದವರು ೧೮೦೦ಕ್ಕೂ ಹೆಚ್ಚು.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಅಂಗೈ ರೇಖೆ ನೋಡಿ ಹೇಳುವ ಭವಿಷ್ಯ or ಹಸ್ತ ಸಾಮುದ್ರಿಕ ಶಾಸ್ತ್ರ (ಇದನ್ನು cheiromancy ಎಂತಲೂ ಬರೆಯಲಾಗುತ್ತದೆ, ಗ್ರೀಕ್ನಲ್ಲಿ cheir (χειρ), “hand”; manteia (μαντεία), “divination”), ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ. ಹಸ್ತ ಸಾಮುದ್ರಿಕ ಶಾಸ್ತ್ರವನ್ನು ರೂಢಿಮಾಡಿಕೊಂಡಿರುವವರನ್ನು ಸಾಮಾನ್ಯವಾಗಿ ಹಸ್ತ ಸಾಮುದ್ರಿಕರು , ಹಸ್ತ ಓದುಗರು , ಕೈ ಓದುಗರು , ಹಸ್ತ ವಿಶ್ಲೇಷಕರು ,ಅಥವಾ ಕೈರೊಲೊಜಿಸ್ಟ್ಗಳು ಎಂದು ಕರೆಯಲಾಗುತ್ತದೆ.
ಸಾಮ್ರಾಟ್ ಅಶೋಕ ಮೌರ್ಯ ಸಾಮ್ರಾಜ್ಯದ ಚಕ್ರವರ್ತಿ(ಕ್ರಿ.ಪೂ ೩೦೪ - ಕ್ರಿ.ಪೂ ೨೩೨) . ಪ್ರಾಚೀನ ಭಾರತದಲ್ಲಿ ಅತಿ ದೊಡ್ಡ ರಾಜ್ಯವನ್ನಾಳಿದ ಕೆಲವೇ ಕೆಲವು ರಾಜರಲ್ಲಿ ಸಾಮ್ರಾಟ್ ಅಶೋಕನ ಹೆಸರು ಮೂಡಿ ಬರುತ್ತದೆ. ಕಳಿಂಗ ಯುದ್ಧದ ಬಳಿಕ ಬೌದ್ಧ ಮತವನ್ನು ಪ್ರಚಾರಗೊಳಿಸುವುದರಲ್ಲಿ ತೊಡಗಿಕೊಂಡ ಸಾಮ್ರಾಟ್ ಅಶೋಕ, ವಿಶ್ವದೆಲ್ಲೆಡೆ ಬೌದ್ಧ ಮತ ಹರಡುವಲ್ಲಿ ಪ್ರಮುಖ ಪಾತ್ರವಹಿಸಿದವನು.'ಅಶೋಕ' ಶಬ್ಧಕ್ಕೆ - ಸಂಸ್ಕೃತದಲ್ಲಿ ಶೋಕವಿಲ್ಲದ ಎಂಬರ್ಥವಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆಸಲ್ಪಡುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ. ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ.
ತಾಜ್ ಮಹಲ್ (pronounced /tɑdʒ məˈhɑl/; ಹಿಂದಿ: ताज महल ; ಪರ್ಷಿಯನ್/ಉರ್ದು: تاج محل ) ಭಾರತದ ಆಗ್ರಾದಲ್ಲಿರುವ ಭವ್ಯ ಸಮಾಧಿಯಾಗಿದೆ. ಇದನ್ನು ಮೊಘಲ್ ಚಕ್ರವರ್ತಿ ಷಹ ಜಹಾನ್ ತನ್ನ ಮೆಚ್ಚಿನ ಪತ್ನಿ ಮಮ್ತಾಜ್ ಮಹಲ್ಳ ನೆನಪಿಗಾಗಿ ಕಟ್ಟಿಸಿದನು. ಪರ್ಷಿಯನ್, ಭಾರತೀಯ ಮತ್ತು ಮುಸ್ಲಿಂ ವಾಸ್ತುಶೈಲಿಗಳ ಸಮ್ಮಿಶ್ರಣವಾದ ಮೊಘಲ್ ವಾಸ್ತುಶೈಲಿಗೆ ತಾಜ್ ಮಹಲ್ ("ತಾಜ್" ಎಂದೂ ಕರೆಯಲ್ಪಡುತ್ತದೆ) ಅತ್ಯುತ್ತಮ ಉದಾಹರಣೆಯೆಂದು ಪರಿಗಣಿಸಲಾಗಿದೆ.
ಭಾಷಾಶಾಸ್ತ್ರದಲ್ಲಿ, ಒಂದು ನಾಮಪದ ವು ಒಂದು ದೊಡ್ಡ, ಮುಕ್ತ ನಿಘಂಟಿನ ವರ್ಗದ ಒಂದು ಸದಸ್ಯನಾಗಿದ್ದು, ಸದರಿ ನಿಘಂಟಿನ ವರ್ಗದ ಸದಸ್ಯರು ವಾಕ್ಯಾಂಶವೊಂದರ ಕರ್ತೃಪದ, ಕ್ರಿಯಾಪದವೊಂದರ ಕರ್ಮ, ಅಥವಾ ಉಪಸರ್ಗವೊಂದರ ಕರ್ಮದಲ್ಲಿನ ಮುಖ್ಯ ಪದವಾಗಿ ಸಂಭವಿಸಲು ಸಾಧ್ಯವಿದೆ. ನಿಘಂಟಿನ ವರ್ಗಗಳ ಸದಸ್ಯರು, ಅಭಿವ್ಯಕ್ತಿಗಳ ಇತರ ಬಗೆಗಳೊಂದಿಗೆ ಹೇಗೆ ಬೆರೆಯುತ್ತವೆ ಎಂಬುದರ ಪರಿಭಾಷೆಯಲ್ಲಿ ನಿಘಂಟಿನ ವರ್ಗಗಳು ವ್ಯಾಖ್ಯಾನಿಸಲ್ಪಡುತ್ತವೆ. ನಾಮಪದಗಳಿಗೆ ಸಂಬಂಧಿಸಿದ ವಾಕ್ಯರಚನೆಯ ನಿಯಮಗಳು ಭಾಷೆಯಿಂದ ಭಾಷೆಗೆ ಬದಲಾಗುತ್ತವೆ.
ಮೈಕೆಲ್ಯಾಂಜೆಲೊ ವಿ ಲೊಡೊವಿಕೊ ಬುವೊನರೊಟಿ ಸಿಮೊನಿ (೬ ಮಾರ್ಚ್ ೧೪೭೫ – ೧೮ ಫೆಬ್ರವರಿ ೧೫೬೪), ಮೈಕೆಲ್ಯಾಂಜೆಲೊ ಎಂದೇ ಪ್ರಸಿದ್ಧನಾಗಿದ್ದ ಇಟಲಿಯ ನವೋದಯದ ಅವಧಿಯ ಓರ್ವ ವರ್ಣಚಿತ್ರ ಕಲಾವಿದ, ಶಿಲ್ಪಿ, ವಾಸ್ತುಶಿಲ್ಪಿ, ಕವಿ, ಮತ್ತು ಎಂಜಿನಿಯರ್. ಕಲೆಗಳಿಂದ ಆಚೆಗೆ ಆತ ಮಾಡಿದ ಕೆಲವೊಂದು ಪ್ರವೇಶಗಳ ಹೊರತಾಗಿಯೂ, ಆತ ಆಯ್ದುಕೊಂಡ ಕ್ಷೇತ್ರಗಳಲ್ಲಿ ಕಂಡುಬಂದ ಅವನ ಬಹುಮುಖ ಪ್ರತಿಭೆಯು ಅತ್ಯಂತ ಉತ್ಕೃಷ್ಟ ಮಟ್ಟದಲ್ಲಿತ್ತು. ಇದರಿಂದಾಗಿ ಮೂಲಕಲ್ಪನೆಯ ನವೋದಯದ ಮನುಷ್ಯನೆಂಬ ಶೀರ್ಷಿಕೆಯ ನೀಡುವಿಕೆಗೆ ಸಂಬಂಧಿಸಿದಂತೆ ಅವನ ಪ್ರತಿಸ್ಪರ್ಧಿ ಹಾಗೂ ಇಟಲಿಯ ಸಹವರ್ತಿಯಾದ ಲಿಯೋನಾರ್ಡೊ ಡ ವಿನ್ಸಿಯೊಂದಿಗೆ ಅವನನ್ನು ಅನೇಕಬಾರಿ ಓರ್ವ ಸ್ಪರ್ಧಿಯಂತೆ ಅಥವಾ ಪೈಪೋಟಿಗಾರನಂತೆ ಪರಿಗಣಿಸಲಾಗುತ್ತದೆ.
ವಿಜ್ಞಾನವು ಬ್ರಹ್ಮಾಂಡದ ಬಗ್ಗೆ ಪರೀಕ್ಷಣೀಯ ವಿವರಣೆಗಳು ಮತ್ತು ಭವಿಷ್ಯವಾಣಿಗಳ ರೂಪದಲ್ಲಿ ಜ್ಞಾನವನ್ನು ನಿರ್ಮಿಸುವ ಮತ್ತು ಸಂಘಟಿಸುವ ಒಂದು ವ್ಯವಸ್ಥಿತ ಯೋಜನೆ.. ಮಾನವನಿಂದ ತಿಳಿಯಬಲ್ಲ ವಿಶ್ವದ ಬಗೆಗಿನ ಜ್ಞಾನದ ಸಮೂಹವೆ ವಿಜ್ಞಾನ. ಒಂದು ಹಳೆಯ ಮತ್ತು ನಿಕಟವಾಗಿ ಸಂಬಂಧಿತ ಅರ್ಥದಲ್ಲಿ, "ವಿಜ್ಞಾನ"ವು, ತಾರ್ಕಿಕವಾಗಿ ವಿವರಿಸಬಲ್ಲ ಮತ್ತು ವಿಶ್ವಾಸಾರ್ಹವಾಗಿ ಅನ್ವಯಿಸಬಲ್ಲ ಪ್ರಕಾರದ, ಜ್ಞಾನದ ಮಂಡಲವನ್ನೇ ನಿರ್ದೇಶಿಸುತ್ತದೆ.
ಅಮೆರಿಕ ಸಂಯುಕ್ತ ಸಂಸ್ಥಾನ ವು (ಸಾಮಾನ್ಯವಾಗಿ ಸಂಯುಕ್ತ ಸಂಸ್ಥಾನ , ಯುಎಸ್ , ಯುಎಸ್ಎ ಅಥವಾ ಅಮೆರಿಕಾ ಎಂದು ಕರೆಯಲ್ಪಡುವ) ಐವತ್ತು ರಾಜ್ಯಗಳು ಮತ್ತು ಒಳ ಆಡಳಿತದಲ್ಲಿ ಸ್ವತಂತ್ರವಾಗಿರುವ ಡಿಸ್ಟ್ರಿಕ್ಟ್ಯನ್ನೊಳಗೊಂಡ ಒಂದು ಸ್ವಾಯತ್ತ ಸಾಂವಿಧಾನಿಕ ಗಣರಾಜ್ಯ. ಬಹುತೇಕ ಕೇಂದ್ರ ಭಾಗದ ಉತ್ತರ ಅಮೆರಿಕಾದಲ್ಲಿ ಸ್ಥಿತವಾಗಿರುವ ಈ ದೇಶದ ಒತ್ತೊತ್ತಾಗಿರುವ 48 ರಾಜ್ಯಗಳು ಹಾಗೂ ಪ್ರಧಾನ ಡಿಸ್ಟ್ರಿಕ್ಟ್ ವಾಷಿಂಗ್ಟನ್ ಡಿಸಿ, ಪೆಸಿಫಿಕ್ ಹಾಗೂ ಅಟ್ಲಾಂಟಿಕ್ ಸಮುದ್ರಗಳ ನಡುವೆ ನೆಲೆಗೊಂಡಿದ್ದು, ಉತ್ತರದಲ್ಲಿ ಕೆನಡಾ ಹಾಗೂ ದಕ್ಷಿಣದಲ್ಲಿ ಮೆಕ್ಸಿಕೋಗಳನ್ನು ಗಡಿಗಳಾಗಿ ಹೊಂದಿದೆ. ಅಲಾಸ್ಕಾ ರಾಜ್ಯವು ವಾಯುವ್ಯ ಭಾಗದಲ್ಲಿದ್ದು, ಕೆನಡಾವನ್ನು ಉತ್ತರ ದಿಕ್ಕಿನಲ್ಲೂ ಬೇರಿಂಗ್ ಜಲಸಂಧಿಯನ್ನು ಹಾದು ರಷ್ಯಾವನ್ನು ಪಶ್ಚಿಮ ದಿಕ್ಕಿನಲ್ಲೂ ಹೊಂದಿದೆ.
ಪರಮಹಂಸ ಯೋಗಾನಂದ (ಜನವರಿ ೫, ೧೮೯೩ - ಮಾರ್ಚ್ ೭, ೧೯೫೨), ಮೂಲನಾಮ ಮುಕುಂದ ಲಾಲ್ ಘೋಷ್, ತಮ್ಮ ಪುಸ್ತಕ ಯೋಗಿಯ ಆತ್ಮಕಥೆಯ ಮೂಲಕ ಧ್ಯಾನ ಹಾಗು ಕ್ರಿಯಾಯೋಗದ ಬೋಧನೆಗಳಿಗೆ ಲಕ್ಷಾಂತರ ಪಾಶ್ಚಿಮಾತ್ಯರನ್ನು ಪರಿಚಯಿಸಿದ ಒಬ್ಬ ಭಾರತೀಯ ಯೋಗಿ ಹಾಗು ಗುರುಗಳಾಗಿದ್ದರು. ಯೋಗಾನಂದರು ಉತ್ತರ ಪ್ರದೇಶದ ಗೋರಖ್ಪುರ್ದಲ್ಲಿ ಒಂದು ಧರ್ಮನಿಷ್ಠ ಕುಟುಂಬಕ್ಕೆ ಜನಿಸಿದರು. ಅವರ ಕಿರಿಯ ಸಹೋದರ ಸಾನಂದನ ಪ್ರಕಾರ, ತಮ್ಮ ಅತ್ಯಂತ ಮುಂಚಿನ ವರ್ಷಗಳಿಂದಲೂ ಮುಕುಂದರ ಅಧ್ಯಾತ್ಮದ ಅರಿವು ಮತ್ತು ಅನುಭವ ಸಾಮಾನ್ಯವನ್ನು ಬಹಳ ಮೀರಿತ್ತು.
ಭಗತ್ ಸಿಂಗ್(೧೯೦೭–೧೯೩೧) ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಭಾರತದ ಮೊದಲ ಮಾರ್ಕ್ಸಿಸ್ಟ್ ಗಳಲ್ಲೊಬ್ಬರು. ಭಗತ್ ಸಿಂಗ್ ಅವರು ಸೆಪ್ಟೆಂಬರ್ ೨೭, ೧೯೦೭ರಲ್ಲಿ ಪಂಜಾಬ್ ಲಾಯಲ್ ಪುರ ಜಿಲ್ಲೆಯ 'ಬಾಂಗಾ' ಎಂಬ ಹಳ್ಳಿಯ ಸಿಖ್ ಸಮುದಾಯದ ಸರ್ದಾರ್ ಕಿಶನ್ ಸಿಂಗ್ ಮತ್ತು ವಿದ್ಯಾವತಿಯವರಿಗೆ ಜನಿಸಿದರು. ಜಲಿಯನ್ ವಾಲಾ ಬಾಗ್ ದುರಂತದಿಂದ ಪ್ರಭಾವಿತರಾದ ಇವರು ಸ್ವಾತಂತ್ರ ಸಂಗ್ರಾಮಕ್ಕೆ ಧುಮುಕಿದರು.