The most-visited ಕನ್ನಡ Wikipedia articles, updated daily. Learn more...
ಜಂಗಲ್ ಬುಕ್, ಒಂಬ ಕತೆ, ಮೋಗ್ಲಿ, ಎಂಬ ಕಾಡಿನ ಹುಡುಗನ ಜೀವನದ ಸುತ್ತ ಹೆಣೆದ ಆತ್ಯಂತ ಹೆಸರುವಾಸಿಯಾದ ವಿಶ್ವದಾದ್ಯಂತ ಅತಿ ಚರ್ಚಿತ "ನೈಜ ಚಲನ ಚಿತ್ರ ಕತೆಯಾಗಿದೆ". ಈ ಚಿತ್ರಕಥೆ, ವಿಶ್ವದಾದ್ಯಂತ ಸಿನೆಮಾ ಥಿಯೇಟರ್ ಗಳಲ್ಲಿ ಪ್ರದರ್ಶಿತವಾಗುತ್ತಿದೆ. 'ಜಂಗಲ್ ಬುಕ್' ಚಿತ್ರದ ನಾಯಕ 'ಮೋಗ್ಲಿ'ಯ ಪಾತ್ರವಹಿಸಿರುವ ನೀಲ್ ಸೇಥಿಯ ವಿನಃ, ಬೇರೆ ಎಲ್ಲಾ ಪಾತ್ರಗಳೂ 'ಅತಿ ಪ್ರಭಾವೀ ಕಂಪ್ಯೂಟರ್ ಗ್ರಾಫಿಕ್ಸ್'(CGI) ಮುಖಾಂತರ ಚಿತ್ರಕ್ಕೆ ಅಳವಡಿಸಲಾಗಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಅಂಗೈ ರೇಖೆ ನೋಡಿ ಹೇಳುವ ಭವಿಷ್ಯ or ಹಸ್ತ ಸಾಮುದ್ರಿಕ ಶಾಸ್ತ್ರ (ಇದನ್ನು cheiromancy ಎಂತಲೂ ಬರೆಯಲಾಗುತ್ತದೆ, ಗ್ರೀಕ್ನಲ್ಲಿ cheir (χειρ), “hand”; manteia (μαντεία), “divination”), ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ. ಹಸ್ತ ಸಾಮುದ್ರಿಕ ಶಾಸ್ತ್ರವನ್ನು ರೂಢಿಮಾಡಿಕೊಂಡಿರುವವರನ್ನು ಸಾಮಾನ್ಯವಾಗಿ ಹಸ್ತ ಸಾಮುದ್ರಿಕರು , ಹಸ್ತ ಓದುಗರು , ಕೈ ಓದುಗರು , ಹಸ್ತ ವಿಶ್ಲೇಷಕರು ,ಅಥವಾ ಕೈರೊಲೊಜಿಸ್ಟ್ಗಳು ಎಂದು ಕರೆಯಲಾಗುತ್ತದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆಸಲ್ಪಡುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ. ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಸಂಸ್ಕೃತದಲ್ಲಿ, "ಅಮ" "ಒಟ್ಟಿಗೆ" ಅರ್ಥ ಮತ್ತು "ವಾಸ್ಯ" "ಸಹಜೀವನ ನಡೆಸು" "ನೆಲೆಸುತ್ತಾರೆ" ಅಥವಾ ಅರ್ಥ. ಅಮಾವಾಸ್ಯೆ ದಿನ (ಎಲ್ಲಾ 24 ಗಂಟೆಗಳ ಮತ್ತು ಕೇವಲ ರಾತ್ರಿ) ಅಮಾವಾಸ್ಯೆಯಂದು ಭಾಗವಾಗಿ ಪರಿಗಣಿಸಲಾಗಿದೆ. ಭಾರತೀಯ ಉಪಖಂಡದ ಬಹುತೇಕ ಭಾಗಗಳಲ್ಲಿ ಹಿಂದೂ ಚಂದ್ರನ ಕ್ಯಾಲೆಂಡರ್ ಬಳಸಲಾಗುತ್ತದೆ , ಚಂದ್ರಮಾನ ತಿಂಗಳು ಹುಣ್ಣಿಮೆಯ ಅಥವಾ ಪೂರ್ಣಿಮಾ ಮತ್ತು ಆದ್ದರಿಂದ ಅಮಾವಾಸ್ಯೆ ಯಾವಾಗಲೂ ತಿಂಗಳ ಮಧ್ಯದಲ್ಲಿ ಬೀಳುತ್ತದೆ .
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಥವಾ ಕಾಂಗ್ರೆಸ್(ಐ) ಪಕ್ಷ ಅಥವಾ ಕಾಂಗ್ರೆಸ್ ಪಕ್ಷ ಭಾರತದಲ್ಲಿ ಇಂದು ಇರುವ ರಾಜಕೀಯ ಪಕ್ಷಗಳಲ್ಲಿ ಅತ್ಯಂತ ಹಳೆಯದು, ಮತ್ತು ಅತ್ಯಂತ ದೊಡ್ಡ ರಾಜಕೀಯ ಪಕ್ಷಗಳಲ್ಲಿ ಒಂದು. ೧೮೮೫ರಲ್ಲಿ ಸ್ಥಾಪಿಸಲ್ಪಟ್ಟ ಈ ಪಕ್ಷ, ಬ್ರಿಟೀಷ್ ಆಳ್ವಿಕೆಯ ವಿರುದ್ಧ ಹೊರಾಟದಲ್ಲಿ ಮುಂಚೂಣಿಯಲ್ಲಿದ್ದು ಹಾಗು ಸ್ವಾತಂತ್ರ್ಯದ ನಂತರ ಭಾರತದ ಆಡಳಿತವನ್ನು ಅತಿ ಹೆಚ್ಚು ಕಾಲ ವಹಿಸಿದೆ. ೧೪ ನೆಯ ಲೋಕ ಸಭೆಯಲ್ಲಿ (೨೦೦೪-೨೦೦೯) ೧೪೫ ಸ್ಥಾನಗಳನ್ನು ಹೊಂದಿದ್ದು ಸದ್ಯಕ್ಕೆ ಅತಿ ಹೆಚ್ಚು ಸ್ಥಾನಗಳನ್ನು ಹೊಂದಿರುವ ಪಕ್ಷ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಪ್ರತಾಪ್ ಸಿಂಹ ಕನ್ನಡದ ಜನಪ್ರಿಯ ಅಂಕಣಕಾರರು ಹಾಗೂ ಪತ್ರಿಕೋದ್ಯಮಿ. ಸಕಲೇಶಪುರದಲ್ಲಿ ಜನಿಸಿರುವ ಇವರು ತಮ್ಮ ಪದವಿ ಪುರ್ವ ಶಿಕ್ಷಣವನ್ನು ಚಿಕ್ಕಮಗಳೂರುನಲ್ಲಿ ಮುಗಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿರುವ ಎಸ್ ಡಿ ಎಮ್ ಕಾಲೇಜಿನಿಂದ ಮನಃಶಾಸ್ತ್ರ ಹಾಗೂ ಪತ್ರಿಕೋದ್ಯಮದಲ್ಲಿ ಪದವಿಯನ್ನು ಪಡೆದಿದ್ದಾರೆ. ಎಂಸಿಜೆ ಮಂಗಳೂರಿನಿಂದ ಪತ್ರಿಕೋದ್ಯಮದಲ್ಲಿ ಸ್ನಾತ್ತಕೋತ್ತರ ಪದವಿ ಹಾಗೂ ಎಮ್ ಐ ಸಿ ಇ ಮಂಗಳೂರಿಂದ ಕಂಪ್ಯೂಟರ್ ಅಪ್ಲಿಕೇಷನ್ ಡಿಪ್ಲೋಮಾ ಮಾಡಿದ್ದರೆ.
ಕಬೀರ್ (ಸುಮಾರು ೧೪೪೦-೧೫೧೮) ಭಾರತದ ಒಬ್ಬ ಅನುಭಾವಿ ಕವಿ ಮತ್ತು ಸಂತನಾಗಿದ್ದನು, ಮತ್ತು ಇವನ ಬರಹಗಳು ಭಕ್ತಿ ಚಳುವಳಿಯ ಮೇಲೆ ಮಹತ್ತರ ಪ್ರಭಾವಬೀರಿವೆ. ಕಬೀರ್ ಹೆಸರು ಅರಬ್ಬೀ ಭಾಷೆಯ ಅಲ್-ಕಬೀರ್ ಅಂದರೆ ಮಹಾನ್ನಿಂದ ಬರುತ್ತದೆ. ಕಬೀರ್ನ ಕೊಡುಗೆಯನ್ನು ಇಂದು, ಅವನನ್ನು ಅದರ ಸ್ಥಾಪಕನೆಂದು ಗುರುತಿಸುವ ಮತ್ತು ಸಂತ ಮತ ಪಂಥಗಳಲ್ಲಿ ಒಂದಾದ ಒಂದು ಧಾರ್ಮಿಕ ಸಮುದಾಯವಾದ, ಕಬೀರ್ ಪಂಥ ಮುಂದಕ್ಕೆ ಸಾಗಿಸುತ್ತಿದೆ.
ಯಾವ ಭವ್ಯ ಭಾರತ ಇಸ್ಲಾಮೀ ಭಯೋತ್ಪಾದಕರ ದಾಳಿ, ದೌರ್ಜನ್ಯದ ಆಡಳಿತದವಯಲ್ಲಿ ನಲುಗುತ್ತಿತ್ತೋ, ಯಾವ ಹಿಂದೂಸ್ತಾನದ ಹಿಂದೂಗಳನ್ನು ಪಶುಗಳಿಗಿಂತ ಕಡೆಯಾಗಿ ನಡೆಸಿಕೊಳ್ಳಲಾಗುತ್ತಿತ್ತೋ... ಅಂಥಾ ದೇಶದ ದಾಸ್ಯಮುಕ್ತಿಗಾಗಿ, ಸ್ವಾಭಿಮಾನಿ ಸ್ವತಂತ್ರ ಜೀವನಕ್ಕಾಗಿ, ಹಿಂದವೀ ಸ್ವರಾಜ್ಯದ ಸ್ಥಾಪನೆಗಾಗಿ ಹೋರಾಡಿದ ಮರ್ದ್ ಮರಾಠಾ ನಮ್ಮೆಲ್ಲರ ಹೆಮ್ಮೆಯ ವೀರ ಶಿವಾಜಿ. ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿ ಭೋಂಸ್ಲೆ (ಫೆಬ್ರುವರಿ ೧೯, ೧೬೩೦ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.
ಗೌತಮಿಪುತ್ರ ಶಾತಕರ್ಣಿಈತ ಶಾತವಾಹನರ ವಂಶದಲ್ಲೆ ಅತ್ಯಂತ ಪ್ರಸಿದ್ದಿ ರಾಜ.ಇವನು ಆಡಳಿತಕ್ಕೆ ಬರುವ ಮುನ್ನ ತುಂಬ ಬಲಶಾಲಿಗಳಾಗಿದ್ದ ಪಹಲ್ವರು ಶಾತವಾಹನರ ಉತ್ತರ ಪ್ರದೇಶದ ಕೆಲವು ಭಾಗಗಳನ್ನು ಆಕ್ರಮಿಸಿ ಕೊಂಡಿದ್ದರು,ನಂತರ ಗೌತಮಿಪುತ್ರ ಶಾತಕರ್ಣಿ ನಹಪಾನನನ್ನ್ನು ಸೋಲಿಸಿ ಆ ಪ್ರದೇಶಗಳನ್ನು ಮತ್ತೆ ಹಿಂದಕ್ಕೆ ಪಡೆದರು,ಇದರಿಂದಾಗಿ ಶಾತವಾಹನರು ತಮ್ಮ ವೈಭವದ ಆಡಳಿತವನ್ನು ಮುಂದುವರಿಸಲು ಸಾಧ್ಯವಾಯಿತು. ಈತನ ವಿಜಯಗಳ ನೆನಪಿಗಾಗಿ ಇವನ ತಾಯಿ ಗೌತಮಿ ಬಾಲಾಶ್ರಿ ನಾಸಿಕ್ ನಲ್ಲಿ ಒಂದು ಶಾಸನವನ್ನು ಬರೆಸಿದರು.ಶಕ ವಂಶದ ಮೇಲಿನ ವಿಜಯದ ಸ್ಂಕೇತವಾಗಿ ಶಾಲಿವಾಹನ ಶಕೆಯನ್ನು ಪ್ರಾರಂಭಿಸಿದರು.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರೂ ಕನ್ನಡವೇ ಸತ್ಯ ಕನ್ನಡವೇ ನಿತ್ಯ ಕನ್ನಡವೇ ಕನ್ನಡಿಗರ ಶಕ್ತಿ ಗರ್ವದಿಂದ ಘರ್ಜಿಸು ನಾ ಕನ್ನಡಿಗನೆಂದು. ಕನ್ನಡಿಗ ಸಾಮಾನ್ಯ ಬಳಕೆಯಲ್ಲಿ ಕನ್ನಡ ಭಾಷೆಯನ್ನು ಮಾತೃಭಾಷೆಯಾಗಿ ಹೊಂದಿರುವ ವ್ಯಕ್ತಿ. ಕನ್ನಡ ಭಾಷೆಯನ್ನು ಮಾತೃಭಾಷೆಯಾಗಿ ಹೊಂದದಿದ್ದರೂ ಕರ್ನಾಟಕದಲ್ಲಿಯೆ ಹುಟ್ಟಿ ಬೆಳೆದವರು ಅಥವ ಕರ್ನಾಟಕಕ್ಕೆ ಬೇರೆ ಕಡೆಯಿಂದ ವಲಸೆ ಬಂದು ಇಲ್ಲೆಯೆ ಬೇರೂರಿ ಸ್ವಾಭಾವಿಕ ನಿವಾಸಿಗಳಾಗಿರುವರನ್ನೂ ಕೂಡ ಕನ್ನಡಿಗರೆಂದು ಕರೆಯಲಾಗುತ್ತದೆ.
ಶ್ರೀಲಂಕಾ ಪ್ರಜಾತಾಂತ್ರಿಕ ಸಮಾಜವಾದಿ ಗಣರಾಜ್ಯ (೧೯೭೨ ರ ಮೊದಲು ಸಿಲೋನ್) ಭಾರತೀಯ ಉಪಖಂಡದ ಆಗ್ನೇಯದಲ್ಲಿರುವ ದ್ವೀಪ ರಾಷ್ಟ್ರ. ಪುರಾತನ ಕಾಲದಿಂದ ಲಂಕಾ, ಲಂಕಾದ್ವೀಪ, ಸಿಂಹಳದ್ವೀಪ, ಸೆರೆಂದಿಬ್ ಮೊದಲಾದ ಹೆಸರುಗಳಿಂದ ಗುರುತಿಸಲ್ಪಟ್ಟಿರುವ ಶ್ರೀಲಂಕಾ ಬ್ರಿಟಿಷ್ ಆಡಳಿತದ ಕಾಲದಲ್ಲಿ ಸಿಲೋನ್ ಎಂದು ಹೆಸರು ಪಡೆದಿತ್ತು. ೧೯೭೨ ರಲ್ಲಿ ಅದರ ಹೆಸರನ್ನು ಶ್ರೀಲಂಕಾ ಎಂದು ಬದಲಾಯಿಸಲಾಯಿತು.
ಗೊರೂರು ರಾಮಸ್ವಾಮಿ ಅಯ್ಯಂಗಾರ್(ಜುಲೈ ೪, ೧೯೦೪ - ಸೆಪ್ಟೆಂಬರ್ ೮, ೧೯೯೧) ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ಅವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಸ್ವಾತಂತ್ರ್ಯ ಚಳುವಳಿ, ಮೈಸೂರಿನಲ್ಲಿ ಪ್ರಜಾ ಸರ್ಕಾರಕ್ಕಾಗಿ ಚಳುವಳಿ, ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಹೋರಾಡಿ ಹರಿಜನೋದ್ಧಾರ ಮತ್ತು ಗ್ರಾಮೊದ್ಧಾರಕ್ಕಾಗಿ ಶ್ರಮಿಸಿದ ಅವರೊಬ್ಬ ಅಪ್ರತಿಮ ಗಾಂಧಿವಾದಿ.
ದಿ ರೆಸ್ಕ್ಯೂವರ್ಸ್ ೧೯೭೭ರ ಅಮೇರಿಕಾದ ಒಂದು ಆನಿಮೇಟಡ್ ಚಲನಚಿತ್ರ ವಾಲ್ಟ್ ಡಿಸ್ನಿ ಪ್ರೊಡಕ್ಷನ್ಸ್ ನಿರ್ಮಾಣದ ಮೊದಲ ಜೂನ್ ೨೨, ೧೯೭೭ ರಂದು ಬಿಡುಗಡೆ. ವಾಲ್ಟ್ ಡಿಸ್ನಿ ಅನಿಮೇಟೆಡ್ ಶಾಸ್ತ್ರೀಯ ಸರಣಿಯಲ್ಲಿ ೨೩ ಚಿತ್ರ ಚಿತ್ರ ದೊಡ್ಡ ಜಗತ್ತಿನ ಸುತ್ತ ಅಪಹರಣ ಬಲಿಪಶುಗಳು ಸಹಾಯ ಮೀಸಲಿಟ್ಟ ಪಾರುಗಾಣಿಕಾ ಚಿಕಿತ್ಸೆ ಸೊಸೈಟಿ, ನ್ಯೂ ಯಾರ್ಕ್ ಪ್ರಧಾನ ಕಚೇರಿಯನ್ನು ಮತ್ತು ಯುನೈಟೆಡ್ ನೇಷನ್ಸ್ ನೆರಳು ಅಂತಾರಾಷ್ಟ್ರೀಯ ಮೌಸ್ ಸಂಘಟನೆ, ಸುಮಾರು. ಈ ಇಲಿಗಳ ಎರಡು, ಭಯಗ್ರಸ್ತ ದ್ವಾರಪಾಲಕ ಬರ್ನಾರ್ಡ್ (ಬಾಬ್ ನ್ಯೂಹಾರ್ಟ್) ಮತ್ತು ಅವರ ಸಹ-ದಳ್ಳಾಲಿ, ಸೊಗಸಾದ ಮಿಸ್ ಬಿಯಾಂಕಾ (ಇವಾ ಗ್ಯಾಬೊರ್), ಪೆನ್ನಿ (ಮಿಷೆಲ್ ಸ್ಟೇಸಿ), ನಿಧಿ ಹಂಟ್ರೆಸ್ ಮೂಲಕ ಡೆವಿಲ್ಸ್ ಬೇಊ ರಲ್ಲಿ ಖೈದಿ ಬಂಧಿಗಳಾಗಿದ್ದ ಒಂದು ಅನಾಥ ಹುಡುಗಿಯ ರಕ್ಷಿಸಲು ಔಟ್ ಸೆಟ್ ಮೇಡಮ್ ಮೆಡ್ಯುಸಾ (ಜೆರಾಲ್ಡೀನ್ ಪುಟ).
ಸಿಂಧೂ ನದಿ (ಆಂಗ್ಲ ಭಾಷೆ: ಇಂಡಸ್ ; ಟಿಬೆಟ್ ಭಾಷೆ: ಸೆಂಗೆ ಚೂ;) ಪಾಕಿಸ್ತಾನ ಮತ್ತು ಉತ್ತರ ಭಾರತದಲ್ಲಿ ಹರಿಯುವ ಒಂದು ಪ್ರಮುಖ ನದಿ. ಟಿಬೆಟ್ಟಿನ ಪ್ರಸ್ಥಭೂಮಿಯಲ್ಲಿರುವ ಮಾನಸಸರೋವರದ ಹತ್ತಿರ ಉಗಮಿಸುವ ಈ ನದಿ ಕಶ್ಮೀರದ ಮೂಲಕ ಉತ್ತರ ಪಾಕಿಸ್ತಾನಕ್ಕೆ ಹರಿದು, ನಂತರ ದಕ್ಷಿಣ ಮುಖಕ್ಕೆ ತಿರುಗಿ ಇಡಿ ಪಾಕಿಸ್ತಾನದ ಉದ್ದಕ್ಕೆ ಹರಿದು, ಕರಾಚಿ ನಗರದ ಬಳಿ ಅರಬ್ಬಿ ಸಮುದ್ರವನ್ನು ಸೇರುತ್ತದೆ.
ಬ್ಲಾಗ್ (ವೆಬ್ಲಾಗ್ ಎಂಬುದರ ಹ್ರಸ್ವ ರೂಪ)ಅಂತರ್ಜಾಲದ ಒಂದು ವಿಧವಾಗಿದ್ದು, ಸಾಮಾನ್ಯವಾಗಿ ಪ್ರತ್ಯೇಕ ಖಾಸಗಿ ವ್ಯಕ್ತಿಗಳಿಂದ ನಿರ್ವಹಿಸಲ್ಪಡುವ ತಾಣವಾಗಿರುತ್ತದೆ. ಇದರಲ್ಲಿ ಪ್ರತಿಕ್ರಿಯಾತ್ಮಕ ಲೇಖನಗಳು, ಕಾರ್ಯಕ್ರಮಗಳ ವಿವರಣೆ, ಗ್ರಾಫಿಕ್ಸ್, ವಿಡಿಯೋ ಮೊದಲಾದವುಗಳನ್ನು ನಿರಂತರವಾಗಿ ದಾಖಲಿಸಲಾಗುತ್ತದೆ. ಹೀಗೆ ದಾಖಲಿಸಲಾಗುವ ಲೇಖನಗಳು ಸಾಮಾನ್ಯವಾಗಿ ಹಿಮ್ಮುಖ ಕ್ರಮಾಂಕದಲ್ಲಿ ಪ್ರದರ್ಶನಗೊಳ್ಳುತ್ತವೆ.
ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು.ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಮುಂದೆ ೧೯೩೮ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾಯಿಸಿದರು.ಇದು ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಈ ಸಂಸ್ಥೆ ಕರ್ನಾಟಕದಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ.
ಭಗತ್ ಸಿಂಗ್(೧೯೦೭–೧೯೩೧) ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಭಾರತದ ಮೊದಲ ಮಾರ್ಕ್ಸಿಸ್ಟ್ ಗಳಲ್ಲೊಬ್ಬರು. ಭಗತ್ ಸಿಂಗ್ ಅವರು ಸೆಪ್ಟೆಂಬರ್ ೨೭, ೧೯೦೭ರಲ್ಲಿ ಪಂಜಾಬ್ ಲಾಯಲ್ ಪುರ ಜಿಲ್ಲೆಯ 'ಬಾಂಗಾ' ಎಂಬ ಹಳ್ಳಿಯ ಸಿಖ್ ಸಮುದಾಯದ ಸರ್ದಾರ್ ಕಿಶನ್ ಸಿಂಗ್ ಮತ್ತು ವಿದ್ಯಾವತಿಯವರಿಗೆ ಜನಿಸಿದರು. ಜಲಿಯನ್ ವಾಲಾ ಬಾಗ್ ದುರಂತದಿಂದ ಪ್ರಭಾವಿತರಾದ ಇವರು ಸ್ವಾತಂತ್ರ ಸಂಗ್ರಾಮಕ್ಕೆ ಧುಮುಕಿದರು.