The most-visited ಕನ್ನಡ Wikipedia articles, updated daily. Learn more...
ಹ್ಯಾರಿ ಪಾಟರ್ ಬ್ರಿಟಿಷ್ ಲೇಖಕಿ ಜೆ.ಕೆ.ರೌಲಿಂಗ್ ರ ಅವಾಸ್ತವ ಕಲ್ಪನೆಯುಳ್ಳ ಕಾದಂಬರಿಯ ಏಳು ಪುಸ್ತಕಗಳ ಸರಣಿ. ಈ ಪುಸ್ತಕಗಳು ಹಾಗ್ವರ್ಟ್ಸ್ ಮಾಟ ಮತ್ತು ಮಾಂತ್ರಿಕ ವಿದ್ಯೆಯ ಶಾಲೆಯಲ್ಲಿ ಕಲಿಯುತ್ತಿರುವ ಹ್ಯಾರಿ ಪಾಟರ್ ಎಂಬ ಹದಿ ವಯಸ್ಸಿನ ಮಾಂತ್ರಿಕ ಮತ್ತು ಅವನ ಸ್ನೇಹಿತರಾದ ರಾನ್ ವೆಸ್ಲೆ ಮತ್ತು ಹರ್ಮಿಯನ್ ಗ್ರಾಂಗರ್ ರ ಜೊತೆಗಿನ ಸಾಹಸಗಳ ಘಟನೆಗಳನ್ನು ವಿವರಿಸುತ್ತದೆ. ಈ ಕಥೆಯ ಕೇಂದ್ರ ವಿಷಯವು ಮಾಂತ್ರಿಕ ಜಗತ್ತನ್ನು ಗೆಲ್ಲುವ ಹುಡುಕಾಟದಲ್ಲಿರುವ ಮತ್ತು ಮಾಂತ್ರಿಕರಲ್ಲದ ಸಾಮಾನ್ಯ ಜನರನ್ನು (ಮಗ್ಗಲ್ಸ್) ತನ್ನ ಆಳ್ವಿಕೆಗೆ ಸ್ವಾಧಿನ ಪಡಿಸಿಕೊಳ್ಳುವ ಗುರಿಯನ್ನು ಹೊಂದಿರುವ, ಹ್ಯಾರಿಯ ಹೆತ್ತವರನ್ನು ಕೊಂದ ದುಷ್ಟ ಮಾಂತ್ರಿಕ ಲಾರ್ಡ್ ವೊಲ್ಡೆಮೊರ್ಟ್ನ ವಿರುದ್ಧ ಹ್ಯಾರಿಯ ಹೋರಾಟದ ಕುರಿತಾಗಿದೆ.
ಕ್ರಿಕೆಟ್ ಎಂಬುದು ಬ್ಯಾಟ್ ಮತ್ತು ಚೆಂಡುಗಳಿಗೆ ಸಂಬಂಧಪಟ್ಟ ಪಂಗಡದ ಆಟವೆಂದೂ ಹಾಗೂ ೧೬ನೇ ಶತಮಾನದಲ್ಲಿ ದಕ್ಷಿಣ ಇಂಗ್ಲೆಂಡಿನಲ್ಲಿ ಆಡಲ್ಪಟ್ಟಿದ್ದು ಎಂಬ ಬಗ್ಗೆ ಆಧಾರವಿದೆ.೧೮ನೇಯ ಶತಮಾನದ ಅಂತ್ಯದ ಸಮಯದಲ್ಲಿ ಕ್ರಿಕೆಟ್ ಇಂಗ್ಲೆಂಡಿನ ರಾಷ್ಟ್ರೀಯ ಕ್ರೀಡೆಯಾಗಿ ಅಭಿವೃದ್ಧಿ ಹೊಂದಿತ್ತು. ಬ್ರಿಟೀಷ್ ಸಾಮ್ರಾಜ್ಯದ ವಿಸ್ತರಣೆಯು ಸಮುದ್ರದಾಚೆಗಿನ ದೇಶಗಳೊಡನೆ ಕ್ರಿಕೆಟ್ ಅಡಲು ಅನುವು ಮಾಡಿಕೊಟ್ಟಿತು ಮತ್ತು ಹತ್ತೊಂಬತ್ತನೆಯ ಶತಮಾನದ ಮಧ್ಯಭಾಗದಲ್ಲಿ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನು ನಡೆಸಲಾಗಿತ್ತು.ಇಂದು ಆಟಗಳ ಆಡಳಿತಾತ್ಮಕ ಅಂಗವಾದ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ೧೦೪ ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿದೆ. ಆಟದ ನಿಯಮಾವಳಿಗಳು ಕ್ರಿಕೆಟ್ನ ಕಾನೂನುಗಳು ಎಂದು ಪರಿಚಿತವಾಗಿವೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ವಿಕಿಪೀಡಿಯ [ಇಂಗ್ಲಿಷ್: Wikipedia ವಿಕಿಪೀಡಿಯ] ಒಂದು ಅಂತರ್ಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಅ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಬೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಏಡ್ಸ್ (ಅಕ್ವೈರ್ಡ್ ಇಮ್ಯೂನ್ ಡಿಫಿಷಿಯನ್ಸಿ ಸಿಂಡ್ರೊಮ್ ಅಥವಾ ಅಕ್ವೈರ್ಡ್ ಇಮ್ಯುನೊ ಡಿಫಿಷಿಯನ್ಸಿ ಸಿಂಡ್ರೋಮ್) ಎಚ್ಐವಿ (ಹ್ಯೂಮನ್ ಇಮ್ಯುನೊ ಡಿಫಿಷಿಯನ್ಸಿ ವೈರಸ್) ಎಂಬ ವೈರಸ್ ಉಂಟಾಗುವ ಲಕ್ಷಣವಾಗಿದ್ದು ಇದು. ಅನಾರೋಗ್ಯ, ನಿರೋಧಕ ವ್ಯವಸ್ಥೆಯ ಬದಲಾಯಿಸುತ್ತದೆ ಹೆಚ್ಚು ದುರ್ಬಲ ಸೋಂಕುಗಳು ಮತ್ತು ರೋಗಗಳಿಗೆ ಜನರು ಮಾಡುವ. ಸಿಂಡ್ರೋಮ್ ಮುಂದುವರೆದಂತೆ ಈ ಪ್ರಭಾವಕ್ಕೆ ಹಾಳಾಗುತ್ತದೆ.ಎಚ್ಐವಿ ಸೋಂಕಿತ ವ್ಯಕ್ತಿಯನ್ನು (ವೀರ್ಯ ಮತ್ತು ಯೋನಿ ದ್ರವಗಳು, ರಕ್ತ ಮತ್ತು ಎದೆ ಹಾಲು) ದೇಹದ ದ್ರವಗಳು ಕಂಡುಬರುತ್ತದೆ.
ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು.ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಮುಂದೆ ೧೯೩೮ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾಯಿಸಿದರು.ಇದು ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಈ ಸಂಸ್ಥೆ ಕರ್ನಾಟಕದಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ.
ಹುಟ್ಟಿದಾಗ ನಮ್ ಗ್ಯಾಲ್ ವಂಗಡಿ ಎಂದೂ ಆಗಾಗ್ಗೆ ತೇನ್ಸಿಂಗ್ ನೋರ್ಗೆ ಎಂದು ಕರೆಯಲ್ಪಡುವ ಸುಪ್ರದಿಪ್ತ - ಮಾನ್ಯಭಾರ - ನೇಪಾಳಿ - ತಾರ ತೇನ್ಸಿಂಗ್ ನೋರ್ಗೆ, ಜಿ ಎಮ್ (೧೯೧೪ ರ ಮೇತಿಂಗಳ ಕೊನೆ - ೯ ನೇ ಮೇ ೧೯೮೬ )ನೇಪಾಳಿ - ಭಾರತೀಯ ಶೇರ್ಪ ಪರ್ವತಾರೋಹಿಯಾಗಿದ್ದರು. ಇತಿಹಾಸದಲ್ಲಿ ಪರ್ವತವನ್ನು ಏರಿದ ಅತ್ಯಂತ ಹೆಸರುವಾಸಿಯಾದವರ ಪೈಕಿ, ೨೯ ನೇ ಮೇ ೧೯೫೩ ರಂದು, ಎಡ್ಮಂಡ್ ಹಿಲರಿಯ /೧} ಜೊತೆ ಯಶಸ್ವಿಯಾಗಿ ಗೌರಿಶಂಖರ ಶಿಖರವನ್ನು ತಲುಪಿದ ಮೊದಲನೆ ಇಬ್ಬರು ವ್ಯಕ್ತಿಗಳಲ್ಲಿ ಇವರೂ ಒಬ್ಬರೆಂದು ತಿಳಿಯಲಾಗಿದೆ. ೨೦ ನೇ ಶತಮಾನದ ಅತ್ಯಂತ ಪ್ರಭಾವಶಾಲಿ ನೂರು ವ್ಯಕ್ತಿಗಳಲ್ಲಿ ಒಬ್ಬರೆಂದು ಟೈಮ್ಸ್ ನಿಯತಕಾಲಿಕ ಸಂಚಕೆಯು ಹೆಸರಿಸಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮೂಲಸೌಕರ್ಯ ವು ಸಮಾಜ ಅಥವಾ ಉದ್ಯಮದ ಕಾರ್ಯಾಚರಣೆಗೆ ಅಗತ್ಯವಾದ ಮೂಲಭೂತ ಭೌತಿಕ ಮತ್ತು ಸಾಂಸ್ಥಿಕ ರಚನೆಗಳಾಗಿವೆ.ಅಥವಾ ಆರ್ಥಿಕತೆಯ ನಿರ್ವಹಣೆಗೆ ಅಗತ್ಯವಾದ ಸೇವೆಗಳನ್ನು ಮತ್ತು ಸೌಲಭ್ಯಗಳನ್ನು ಒಳಗೊಂಡಿರುತ್ತದೆ. ಈ ಪದವು ಸಾಮಾನ್ಯವಾಗಿ ಸಮಾಜಕ್ಕೆ ಪೂರಕವಾದ ತಾಂತ್ರಿಕ ರಚನೆಗಳನ್ನು ಉಲ್ಲೇಖಿಸುತ್ತದೆ. ಉದಾಹರಣೆಗೆ ರಸ್ತೆಗಳು, ಜಲಪೂರೈಕೆ, ಒಳಚರಂಡಿಗಳು, ವಿದ್ಯುತ್ ಜಾಲಗಳು, ದೂರಸಂಪರ್ಕಗಳು ಇತರೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಗೊರೂರು ರಾಮಸ್ವಾಮಿ ಅಯ್ಯಂಗಾರ್(ಜುಲೈ ೪, ೧೯೦೪ - ಸೆಪ್ಟೆಂಬರ್ ೮, ೧೯೯೧) ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ಅವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಸ್ವಾತಂತ್ರ್ಯ ಚಳುವಳಿ, ಮೈಸೂರಿನಲ್ಲಿ ಪ್ರಜಾ ಸರ್ಕಾರಕ್ಕಾಗಿ ಚಳುವಳಿ, ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಹೋರಾಡಿ ಹರಿಜನೋದ್ಧಾರ ಮತ್ತು ಗ್ರಾಮೊದ್ಧಾರಕ್ಕಾಗಿ ಶ್ರಮಿಸಿದ ಅವರೊಬ್ಬ ಅಪ್ರತಿಮ ಗಾಂಧಿವಾದಿ.
ಫ್ರಾನ್ಸ್ ಪಶ್ಚಿಮ ಯೂರೋಪಿನಲ್ಲಿರುವ ದೇಶ.ಇದು ಯುರೋಪ್ ಖಂಡದ ಮೂರನೆಯ ಅತ್ಯಂತ ದೊಡ್ಡ ದೇಶ.ಇದು ಯುರೋಪಿನ ಒಂದು ಬಲಾಡ್ಯ ದೇಶವಾಗಿದೆ.ಇದು ಪ್ರಪಂಚದ ಹಲವೆಡೆ ತನ್ನ ವಸಾಹತುಗಳನ್ನು ಸ್ಥಾಪಿಸಿ ಹತ್ತಂಭತ್ತನೆಯ ಶತಮಾನ ಮತ್ತು ೨೦ನೆಯ ಶತಮಾನದ ಮೊದಲ ಭಾಗದಲ್ಲಿ ಅತ್ಯಂತ ಪ್ರಭಾವಶಾಲಿಯಾಗಿತ್ತು.ಸಾಂಸ್ಕೃತಿಕವಾಗಿ ಹಲವಾರು ಚಿಂತಕರು, ಕಲಾವಿದರು,ವಿಜ್ಞಾನಿಗಳನ್ನು ಹೊಂದಿ ಈಗಲೂ ಪ್ರಪಂಚದ ಗಮನಸೆಳೆಯುತ್ತಿದೆ. ಪ್ರಪಂಚದಲ್ಲಿ ನಾಲ್ಕನೆಯದಾಗಿ ಅತೀ ಹೆಚ್ಚು ಪಾರಂಪರಿಕ ತಾಣಗಳಿದ್ದು, ವರ್ಷಕ್ಕೆ ೮ ಕೊಟಿಗಿಂತಲೂ ಹೆಚ್ಚು ಪ್ರವಾಸಿಗಳನ್ನು ಸೆಳೆಯುತ್ತಿದೆ.
ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ಡಾII ಸುಬ್ರಮಣಿಯನ್ ಸ್ವಾಮಿ (ತಮಿಳು : சுப்பிரமணியன் சுவாமி) ಭಾರತದ ಜನಪ್ರಿಯ ರಾಜಕಾರಣಿಗಳಲ್ಲೊಬ್ಬರು ಹಾಗೂ ಖ್ಯಾತ ಅರ್ಥಶಾಸ್ತ್ರಜ್ನರು. ಇವರು ತಮಿಳುನಾಡಿನ ಮದ್ರಾಸ್ ನ(ಈಗಿನ ಚೆನ್ನೈ) ಸಮೀಪದ ಮೈಲಾಪುರ್ ಎಂಬಲ್ಲಿ ಸೆಪ್ಟಂಬರ್ ೧೫, ೧೯೩೯ರಂದು ಜನಿಸಿದರು. ಪ್ರತಿಷ್ಠಿತ ಹಾರ್ವರ್ಡ್ ವಿವಿಯಿಂದ ನೋಬೆಲ್ ಪುರಸ್ಕೃತರಿಬ್ಬರ ಜೊತೆ ಮಾಡಿದ ವಿಷಯ ಮಂಡನೆಗಾಗಿ ೧೯೬೪ರಲ್ಲಿ ಡಾಕ್ಟರೇಟ್ ಪದವಿ ಪಡೆದ ಇವರು, ಹಲವು ವರ್ಷಗಳ ಕಾಲ ಹಾರ್ವರ್ಡ್ ವಿವಿಯಲ್ಲಿ ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ೧೯೯೧ರಲ್ಲಿ ನಿವೃತ್ತರಾಗುವವರೆಗೆ ದೆಹಲಿಯ ಐಐಟಿಯಲ್ಲಿ ಪ್ರೊಫೆಸರ್ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ವಿಜ್ಞಾನವು ಬ್ರಹ್ಮಾಂಡದ ಬಗ್ಗೆ ಪರೀಕ್ಷಣೀಯ ವಿವರಣೆಗಳು ಮತ್ತು ಭವಿಷ್ಯವಾಣಿಗಳ ರೂಪದಲ್ಲಿ ಜ್ಞಾನವನ್ನು ನಿರ್ಮಿಸುವ ಮತ್ತು ಸಂಘಟಿಸುವ ಒಂದು ವ್ಯವಸ್ಥಿತ ಯೋಜನೆ.. ಮಾನವನಿಂದ ತಿಳಿಯಬಲ್ಲ ವಿಶ್ವದ ಬಗೆಗಿನ ಜ್ಞಾನದ ಸಮೂಹವೆ ವಿಜ್ಞಾನ. ಒಂದು ಹಳೆಯ ಮತ್ತು ನಿಕಟವಾಗಿ ಸಂಬಂಧಿತ ಅರ್ಥದಲ್ಲಿ, "ವಿಜ್ಞಾನ"ವು, ತಾರ್ಕಿಕವಾಗಿ ವಿವರಿಸಬಲ್ಲ ಮತ್ತು ವಿಶ್ವಾಸಾರ್ಹವಾಗಿ ಅನ್ವಯಿಸಬಲ್ಲ ಪ್ರಕಾರದ, ಜ್ಞಾನದ ಮಂಡಲವನ್ನೇ ನಿರ್ದೇಶಿಸುತ್ತದೆ.
ಮಯನ್ಮಾರ್ ( ಅಧಿಕೃತವಾಗಿ ಮಯನ್ಮಾರ್ ಒಕ್ಕೂಟ -- ಉಚ್ಛಾರ:-Myanmar:(myan-mar/ Listeni/miɑːnˈmɑr/ mee-ahn-mar, /miˈɛnmɑr/ mee-en-mar or /maɪˈænmɑr/ my-an-mar (also with the stress on first syllable); Burmese pronunciation:ಮೀಯಾನ್ಮಾರ್ [mjəmà])೧,officially the Republic of the Union of Myanmar and also known as Burma) ಆಗ್ನೇಯ ಏಷ್ಯಾದ ಮುಖ್ಯಭೂಭಾಗದಲ್ಲಿನ ಅತ್ಯಂತ ದೊಡ್ಡ ರಾಷ್ಟ್ರವಾಗಿದೆ. ೧೯೪೮ರ ಜನವರಿ ೪ ರಂದು ಯುನೈಟೆಡ್ ಕಿಂಗ್ಡಂ ఇంದ ಸ್ವಾತಂತ್ರ್ಯ ಪಡೆದ ಈ ನಾಡು ಅಂದು ಬರ್ಮಾ ಒಕ್ಕೂಟವೆಂದು ಕರೆಯಲ್ಪಟ್ಟಿತು.
ಸಂವಹನ ವೆಂದರೆ ಅಸ್ತಿತ್ವದಲ್ಲಿರುವ ಒಂದು ವಸ್ತು ವಿನಿಂದ ಇನ್ನೊಂದಕ್ಕೆ ಮಾಹಿತಿ ವರ್ಗಾಯಿಸುವ ಪ್ರಕ್ರಿಯೆಯಾಗಿದೆ. ಸಂಪರ್ಕವೆಂದೂ ಸಹ ಹೇಳುವ ಇದು ತಿಳಿವಳಿಕೆಯನ್ನು ಮನದಟ್ಟು ಮಾಡುವ ಕಾರ್ಯವೂ ಆಗಿದೆ. ಸಂವಹನ ಪ್ರಕ್ರಿಯೆಗಳೆಂದರೆ ಸಂಕೇತಗಳ ಸಂಚಯ ಮತ್ತು ಸಂಕೇತ ಶಾಸ್ತ್ರದ ನಿಯಮಗಳೊಂದಿಗೆ, ಕನಿಷ್ಠ ಎರಡು ಪ್ರತಿನಿಧಿತ್ವಗಳ ನಡುವಿನ ಸಂಕೇತ-ಆಧರಿಸಿದ ಸಂಪರ್ಕದ ಕೊಂಡಿಯಾಗಿದೆ.
ಎರಡನೆಯ ಮಹಾಯುದ್ಧ ೧೯೩೯ರಿಂದ ೧೯೪೫ರವರೆಗೆ ನಡೆದ, ಜಗತ್ತಿನ ಅನೇಕ ದೇಶಗಳನ್ನೊಳಗೊಂಡ ಯುದ್ಧ. ಪ್ರಧಾನವಾಗಿ ಯೂರೋಪ್ ಮತ್ತು ಏಷಿಯಾ ಖಂಡದಲ್ಲಿ ನಡೆಯಲ್ಪಟ್ಟ ಈ ಯುದ್ಧದಲ್ಲಿ ಮಿತ್ರ ರಾಷ್ಟ್ರ ( ಫ್ರಾನ್ಸ್, ರಶಿಯಾ, ಇಂಗ್ಲೆಂಡ್ ಮತ್ತು ಅಮೆರಿಕಾ) ಮತ್ತು ಅಕ್ಷ ರಾಷ್ಟ್ರ (ಜರ್ಮನಿ, ಇಟಲಿ ಮತ್ತು ಜಪಾನ್) ಎಂಬ ಎರಡು ಬಣಗಳಿದ್ದವು. ಒಟ್ಟಿನಲ್ಲಿ ೭೦ ರಾಷ್ಟ್ರಗಳ ಸೈನ್ಯಗಳು ಭಾಗವಹಿಸಿದ ಈ ಯುದ್ಧದಲ್ಲಿ ಆರು ಕೋಟಿಗೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿರಬಹುದು ಎಂದು ಅಂದಾಜಿದೆ.