The most-visited ಕನ್ನಡ Wikipedia articles, updated daily. Learn more...
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ರಾಷ್ಟ್ರೀಯ ಉತ್ಪನ್ನ (GDP) ಒಂದು ದೇಶದ ಅರ್ಥವ್ಯವಸ್ಥೆಯನ್ನು ಅಳೆಯುವ ಒಂದು ಮಾಪನ. ಆ ದೇಶದಲ್ಲಿ ಒಂದು ವರ್ಷದಲ್ಲಿ ಉತ್ಪನ್ನವಾಗುವ ಎಲ್ಲಾ ಸರಕುಗಳ ಮತ್ತು ಆರ್ಥಿಕ ಅನುಕೂಲಗಳ ಒಟ್ಟು ಮಾರುಕಟ್ಟೆಯ ಬೆಲೆಯು ಅದರ ರಾಷ್ಟ್ರೀಯ ಉತ್ಪನ್ನವಾಗುತ್ತದೆ. ಈ ಉತ್ಪನ್ನವನ್ನು ಆ ರಾಷ್ಟ್ರದ ಜನಸಂಖ್ಯೆಯಿಂದ ಭಾಗಿಸಿದರೆ, ಆ ಮಾಪನವನ್ನು ತಲಾ ರಾಷ್ಟ್ರೀಯ ಉತ್ಪನ್ನ ಎಂದು ಕರೆಯಲಾಗುತ್ತದೆ.
ಅಂಗೈ ರೇಖೆ ನೋಡಿ ಹೇಳುವ ಭವಿಷ್ಯ or ಹಸ್ತ ಸಾಮುದ್ರಿಕ ಶಾಸ್ತ್ರ (ಇದನ್ನು cheiromancy ಎಂತಲೂ ಬರೆಯಲಾಗುತ್ತದೆ, ಗ್ರೀಕ್ನಲ್ಲಿ cheir (χειρ), “hand”; manteia (μαντεία), “divination”), ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ. ಹಸ್ತ ಸಾಮುದ್ರಿಕ ಶಾಸ್ತ್ರವನ್ನು ರೂಢಿಮಾಡಿಕೊಂಡಿರುವವರನ್ನು ಸಾಮಾನ್ಯವಾಗಿ ಹಸ್ತ ಸಾಮುದ್ರಿಕರು , ಹಸ್ತ ಓದುಗರು , ಕೈ ಓದುಗರು , ಹಸ್ತ ವಿಶ್ಲೇಷಕರು ,ಅಥವಾ ಕೈರೊಲೊಜಿಸ್ಟ್ಗಳು ಎಂದು ಕರೆಯಲಾಗುತ್ತದೆ.
ಗೊರೂರು ರಾಮಸ್ವಾಮಿ ಅಯ್ಯಂಗಾರ್(ಜುಲೈ ೪, ೧೯೦೪ - ಸೆಪ್ಟೆಂಬರ್ ೮, ೧೯೯೧) ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ಅವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಸ್ವಾತಂತ್ರ್ಯ ಚಳುವಳಿ, ಮೈಸೂರಿನಲ್ಲಿ ಪ್ರಜಾ ಸರ್ಕಾರಕ್ಕಾಗಿ ಚಳುವಳಿ, ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಹೋರಾಡಿ ಹರಿಜನೋದ್ಧಾರ ಮತ್ತು ಗ್ರಾಮೊದ್ಧಾರಕ್ಕಾಗಿ ಶ್ರಮಿಸಿದ ಅವರೊಬ್ಬ ಅಪ್ರತಿಮ ಗಾಂಧಿವಾದಿ.
ಕರ್ನಾಟಕದ ಏಕೀಕರಣವು ೧೯೫೬ರಲ್ಲಿ ಭಾಷೆ ಆಧಾರಿತ ಭಾರತದ ರಾಜ್ಯಗಳ ಸ್ಥಾಪನೆಯ ಕಾಲದಲ್ಲಿ ಕನ್ನಡ ಭಾಷೆ ಮಾತನಾಡುವವರು ಹೆಚ್ಚಾಗಿದ್ದ ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ. ಕರ್ನಾಟಕ ಏಕೀಕರಣ : ೨೦೦೬ ನವೆಂಬರ್ ೧ನೆಯ ತಾರೀಖಿಗೆ ಕರ್ನಾಟಕ ಏಕೀಕರಣವಾಗಿ ಐವತ್ತು ವರ್ಷಗಳು ತುಂಬಿವೆ. ಕರ್ನಾಟಕ ಏಕೀಕರಣದ ಇತಿಹಾಸ ಬಲ್ಲವರಿಗೆ ಏಕೀಕರಣಕ್ಕೆ ನಡೆದ ಹೋರಾಟವು ಕಹಿ-ಸಿಹಿ ಘಟನೆಗಳ ಸ್ಮೃತಿ.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಮಹೇಂದ್ರ ಸಿಂಗ್ ಧೋನಿ, MS ಧೋನಿ ಎಂದೂ ಸಂಕ್ಷ್ತಿಪ್ತ ರೂಪದಲ್ಲಿ ಕರೆಯಲಾಗುತ್ತದೆ. pronunciation (ಹಿಂದಿ:महेन्द्र सिंह धोनी) (ಜನನ ಬಿಹಾರದ ರಾಂಚಿಯಲ್ಲಿ 7 ಜುಲೈ 1981ರಂದು) (ಈಗಿನ ಜಾರ್ಖಂಡ್) ಇವರು ಭಾರತದ ಕ್ರಿಕೆಟಿಗ ಮತ್ತು ಭಾರತ ಕ್ರಿಕೆಟ್ ತಂಡದ ಪ್ರಸ್ತುತ ನಾಯಕರಾಗಿದ್ದಾರೆ. ಆರಂಭದಲ್ಲಿ ಅತಿ ಅಬ್ಬರದ ಮತ್ತು ಆಕ್ರಮಣಕಾರಿ ಬ್ಯಾಟ್ಸ್ಮ್ಯಾನ್ ಎಂದು ಗುರುತಿಸಿಕೊಂಡರೂ ಸಹ, ನಂತರ ಧೋನಿಯು ಭಾರತದ ಏಕದಿನ (ODI) ತಂಡದ ಶಾಂತ ಸ್ವಭಾವದ ನಾಯಕರಲ್ಲಿ ಒಬ್ಬರಂತೆ ಗುರ್ತಿಸಲ್ಪಡುತ್ತಾರೆ.
ಭಗತ್ ಸಿಂಗ್(೧೯೦೭–೧೯೩೧) ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಭಾರತದ ಮೊದಲ ಮಾರ್ಕ್ಸಿಸ್ಟ್ ಗಳಲ್ಲೊಬ್ಬರು. ಭಗತ್ ಸಿಂಗ್ ಅವರು ಸೆಪ್ಟೆಂಬರ್ ೨೭, ೧೯೦೭ರಲ್ಲಿ ಪಂಜಾಬ್ ಲಾಯಲ್ ಪುರ ಜಿಲ್ಲೆಯ 'ಬಾಂಗಾ' ಎಂಬ ಹಳ್ಳಿಯ ಸಿಖ್ ಸಮುದಾಯದ ಸರ್ದಾರ್ ಕಿಶನ್ ಸಿಂಗ್ ಮತ್ತು ವಿದ್ಯಾವತಿಯವರಿಗೆ ಜನಿಸಿದರು. ಜಲಿಯನ್ ವಾಲಾ ಬಾಗ್ ದುರಂತದಿಂದ ಪ್ರಭಾವಿತರಾದ ಇವರು ಸ್ವಾತಂತ್ರ ಸಂಗ್ರಾಮಕ್ಕೆ ಧುಮುಕಿದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆಸಲ್ಪಡುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ. ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ.
ವಿಕಿಪೀಡಿಯ [ಇಂಗ್ಲಿಷ್: Wikipedia ವಿಕಿಪೀಡಿಯ] ಒಂದು ಅಂತರ್ಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಅ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಬೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.
ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು.ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಮುಂದೆ ೧೯೩೮ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾಯಿಸಿದರು.ಇದು ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಈ ಸಂಸ್ಥೆ ಕರ್ನಾಟಕದಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ.
ಕೋಪನ್ ಹ್ಯಾಗನ್ English pronunciation: /ˈkoʊpənheɪɡən/; ಡೇನಿಷ್:Københavnpronounced [kʰøb̥ənˈhaʊ̯ˀn] ( ) ಡೆನ್ಮಾರ್ಕ್ ನ ಅತಿ ದೊಡ್ಡ ನಗರ ಹಾಗೂ ರಾಜಧಾನಿಯಾಗಿದ್ದು ನಗರದಲ್ಲಿ 1,181,239 (2010)ಜನಸಂಖ್ಯೆ ಮತ್ತು ಮೆಟ್ರೋಪಾಲಿಟನ್ ನಲ್ಲಿ 1,894,521 (2010)ಜನಸಂಖ್ಯೆಯನ್ನು ಹೊಂದಿದೆ. ಕೋಪನ್ ಹ್ಯಾಗನ್ ಝಿಯಾಲ್ಯಾಂಡ್ ಮತ್ತು ಅಮಾಜೆರ್ ದ್ವೀಪಗಳಲ್ಲಿರುವ ಸ್ಥಳವಾಗಿದೆ. 11ನೆಯ ಶತಮಾನದಲ್ಲಿ ಮೊದಲಬಾರಿಗೆ ದಾಖಲಾದ ಕೋಪನ್ ಹ್ಯಾಗನ್ 15ನೆಯ ಶತಮಾನದಲ್ಲಿ ಡೆನ್ಮಾರ್ಕ್ ನ ರಾಜಧಾನಿಯಾಯಿತು ಮತ್ತು 17ನೆಯ ಶತಮಾನದಲ್ಲಿ ಕ್ರಿಶ್ಚಿಯನ್ IV ರ ಆಳ್ವಿಕೆಯಲ್ಲಿ ಅದು ಪ್ರಾಂತ್ಯದ ಪ್ರಮುಖ ಕೇಂದ್ರವಾಯಿತು.
ಪ್ರಗತಿಶೀಲತೆ ಯು ಸರ್ಕಾರೀ ಕಾರ್ಯದ ಮೂಲಕ ಬದಲಾವಣೆಗಳು ಅಥವಾ ಸುಧಾರಣೆಗಳನ್ನು ಸಮರ್ಥಿಸುವ ಅಥವಾ ಶಿಫಾರಸು ಮಾಡುವ ಒಂದು ರಾಜಕೀಯ ವರ್ತನೆಯಾಗಿದೆ. ಪ್ರಗತಿಶೀಲತೆಯನ್ನು ಹೆಚ್ಚಾಗಿ ಸಂಪ್ರದಾಯವಾದಿ ಅಥವಾ ಪ್ರತಿಗಾಮಿ ತತ್ತ್ವಗಳ ವಿರೋಧಿಯಾಗಿ ಪರಿಗಣಿಸಲಾಗುತ್ತದೆ. ಪ್ರಗತಿಶೀಲ ಚಳವಳಿ ಯು ಮನೆಯಲ್ಲಿ ಮತ್ತು ಕೆಲಸದಲ್ಲಿ ಅಸಹನೀಯ ಸ್ಥಿತಿಗಳನ್ನು ಎದುರಿಸುತ್ತಿದ್ದವರಿಗೆ ಸಹಾಯ ಮಾಡಲು ಆಸಕ್ತಿಹೊಂದಿದ್ದ ವಸಾಹತು ಕಾರ್ಮಿಕರು ಮತ್ತು ಸುಧಾರಕರಿಂದ ನಗರಗಳಲ್ಲಿ ಆರಂಭವಾಯಿತು.
ಕರ್ನಾಟಕ ಜನಪದ ನೃತ್ಯ : ಹಾಡು, ಕಥೆಗಳಂತೆ ನೃತ್ಯವೂ ಜಾನಪದ ಸಂಪತ್ತಿನ ಒಂದು ಮುಖ್ಯ ಅಂಗ. ಕರ್ನಾಟಕದ ವಿವಿಧ ಭಾಗಗಳಲ್ಲಿ ಅನೇಕ ರೀತಿಯ ನೃತ್ಯವಿಧಾನಗಳು ಬಳಕೆಯಲ್ಲಿವೆ. ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ- ಈ ಪ್ರದೇಶಗಳಲ್ಲಿ ವೈಶಿಷ್ಟ್ಯ ಪಡೆದಿರುವ ನೃತ್ಯಗಳಲ್ಲಿ ಮುಖ್ಯವಾದವನ್ನು ಮಾತ್ರ ಇಲ್ಲಿ ಪರಿಗಣಿಸಲಾಗಿದೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.