The most-visited ಕನ್ನಡ Wikipedia articles, updated daily. Learn more...
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ನವೆಂಬರ್ ೧ - ನವೆಂಬರ್ ತಿಂಗಳ ಮೊದಲ ದಿನ, ಮತ್ತು ವರ್ಷದ ೩೦೫ನೇ ದಿನ(ಅಧಿಕ ವರ್ಷದಲ್ಲಿ ೩೦೬ನೇ ದಿನ). ೧೯೫೬ ರಂದು ಕರ್ನಾಟಕ ಏಕೀಕರಣವಾಯಿತು. ಮೈಸೂರು ಸಂಸ್ಥಾನ, ಮುಂಬಯಿ ಕರ್ನಾಟಕ, ಹೈದರಾಬಾದ್ ಕರ್ನಾಟಕ ಹಾಗು ಮದ್ರಾಸ್ ಕರ್ನಾಟಕ ಎಂದು ನಾಲ್ಕು ಭಾಗಗಳಾಗಿದ್ದ ಕನ್ನಡ ನಾಡು ಈ ದಿನ ರಾಜಕೀಯವಾಗಿ ಒಂದಾಯಿತು.ಈ ದಿನವನ್ನು ಕರ್ನಾಟಕ ರಾಜ್ಯೋತ್ಸವ ದಿನವನ್ನಾಗಿ ಅಚರಿಸಲಾಗುತ್ತಿದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಮೈಸೂರು ರಾಜ್ಯವು 1948 ರಿಂದ 1956 ರವರೆಗೂ ಭಾರತದ ಒಕ್ಕೂಟದಲ್ಲಿ ಒಂದು ಪ್ರತ್ಯೇಕ ರಾಜ್ಯವಾಗಿತ್ತು.ಮೈಸೂರು ಇದರ ರಾಜಧಾನಿಯಾಗಿತ್ತು.1956 ರಲ್ಲಿ ಈ ರಾಜ್ಯ ಗಣನೀಯವಾಗಿ ವಿಸ್ತರಿಸಲ್ಪಟ್ಟಿತು. ಇದು 1956ರಲ್ಲಿ ಭಾಷಾವಾರು ರಾಜ್ಯ ವಿಂಗಡಣೆ ಪರಿಣಾಮ ಕೂರ್ಗ್ ರಾಜ್ಯ, ಪಶ್ಚಿಮ ಮದ್ರಾಸ್ ಪ್ರೆಸಿಡೆನ್ಸಿಯಿಂದ ಕನ್ನಡ ಮಾತನಾಡುವ ಜಿಲ್ಲೆಗಳು,ದಕ್ಷಿಣ ಮುಂಬಯಿ ಪ್ರೆಸಿಡೆನ್ಸಿ,ಮತ್ತು ಪಶ್ಚಿಮ ಹೈದರಾಬಾದ್ ರಾಜ್ಯದ ಕನ್ನಡ ಮಾತನಾಡುವ ಪ್ರದೇಶಗಳನ್ನು ಸೇರಿಸಲಾಯಿತು ರಾಜ್ಯ ಏಕರೂಪದ ಕನ್ನಡ-ಮಾತನಾಡುವ ರಾಜ್ಯವಾಯಿತು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ರಾಜ್ಯೋತ್ಸವ ಪ್ರಶಸ್ತಿಗಳನ್ನು ಕರ್ನಾಟಕದ ಹುಟ್ಟಿನ ಪ್ರತೀಕವಾಗಿ ಕರ್ನಾಟಕ ಸರಕಾರದ ವತಿಯಿಂದ ಪ್ರತಿ ವರ್ಷ ಕರ್ನಾಟಕ ರಾಜ್ಯೋತ್ಸವದ ದಿನವಾದ ನವೆಂಬರ್ ಒಂದರಂದು ನೀಡಲಾಗುತ್ತದೆ. ವಿವಿಧ ಕ್ಷೇತ್ರಗಳ ಗಣ್ಯರನ್ನು ಆಯ್ದು ಅವರಿಗೆ ಪ್ರಶಸ್ತಿ ನೀಡಲಾಗುತ್ತದೆ. ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರತಿ ವರ್ಷದ ನವೆಂಬರ್ ಒಂದರಂದು ಬೆಂಗಳೂರಿನಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳು ಪ್ರದಾನಮಾಡುತ್ತಾರೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಭ್ರಷ್ಟಾಚಾರವು ಯಾವುದೇ ವ್ಯಕ್ತಿ ನಿಯಮಬಾಹಿರವಾದ ಮತ್ತು ತನಗೆ ತಮ್ಮವರಿಗೆ ನ್ಯಾಯಬದ್ಧವಾಗಿ ಸಲ್ಲಬೇಕಾದುದಕ್ಕಿಂತ ಹೆಚ್ಚಿನ ಸೌಲಭ್ಯ ಅಥವಾ ವಸ್ತು ಯಾ ಹಣ ಪಡೆಯುವುದು ಅಥವಾ ಲಾಭಮಾಡಿಕೊಳ್ಳುವುದು ಎನ್ನಬಹುದು. ಸಾರ್ವಜನಿಕ ಸೇವಾ ಸ್ಥಾನದಲ್ಲಿರುವವರು, ಜನ ಪ್ರತಿನಿಧಿಗಳು ಅಥವಾ ಸರಕಾರದ ಅಧಿಕಾರಿಗಳು ಯಾ ಸೇವಕರು ನಿಯಮ ಬಾಹಿರವಾಗಿ ಅಥವಾ ತಮ್ಮ ಆ ಸ್ಥಾನವನ್ನು ಉಪಯೋಗಿಸಿಕೊಂಡು ನಿಯಮಕ್ಕಿಂತ ಹೆಚ್ಚಿನ ಅಥವಾ ತಮಗೆ ಸಲ್ಲಬೇಕಾದುದಕ್ಕಿಂತ ಹೆಚ್ಚಿನ ಸೌಲಭ್ಯ ಅಥವಾ ಲಾಭ ಪಡೆಯುವುದು. ತಮ್ಮ ಅಧಿಕಾರವನ್ನು ನಿಯಮಕ್ಕೆ ವಿರುದ್ಧವಾಗಿ ಸ್ವಂತ ಉಪಯೋಗಕ್ಕೆ ಬಳಸಿಕೊಳ್ಳುವುದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (2018 ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಇಂದಿರಾ ಪ್ರಿಯದರ್ಶಿನಿ ಗಾಂಧಿ (ಹಿಂದಿ:इंदिरा प्रियदर्शिनी गांधीಇಂದಿರಾ ಪ್ರಿಯದರ್ಶಿನಿ ಗಾಂಧಿ; ನಿ: ನೆಹರು; (೧೯ ನವೆಂಬರ್ ೧೯೧೭ – ೩೧ ಅಕ್ಟೋಬರ್ ೧೯೮೪) ೧೯೬೬ರಿಂದ ೧೯೭೭ರವೆಗೆ ಸತತ ಮೂರು ಬಾರಿ ಭಾರತ ಗಣತಂತ್ರ ದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ನಾಲ್ಕನೇ ಬಾರಿ ೧೯೮೦ರಿಂದ ೧೯೮೪ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಅವರು ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಇಂದಿನವರೆಗೆ ಆ ಸ್ಥಾನ ಅವರ ಪಾಲಿನದ್ದೇ ಆಗಿದೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ಆರಂಭಗೊಂಡಿದ್ದರೂ, ಅದು ಹೆಚ್ಚು ಪ್ರಚಲಿತಕ್ಕೆ ಬಂದುದು ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
ಕರ್ನಾಟಕ ಏಕೀಕರಣ ಇತಿಹಾಸ (ಪುಸ್ತಕ)
ಡಾ|| ಎಚ್. ಎಸ್. ಗೋಪಾಲ ರಾವ್ ಅವರು ಬರೆದ "ಕರ್ನಾಟಕ ಏಕೀಕರಣ ಇತಿಹಾಸ" ಕರ್ನಾಟಕ ಏಕೀಕರಣ ಚಳುವಳಿಯ ಕುರಿತು ಮಾಹಿತಿ ನೀಡುವ ಪುಸ್ತಕ.
ಭಾಷಾ ನೀತಿಯಲ್ಲಿ ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆಯ ಹಕ್ಕಿಗಾಗಿ ೧೯೮೦ರ ದಶಕದಲ್ಲಿ ನಡೆದ ಒಂದು ಚಳುವಳಿ/ಆಂದೋಲನವೇ ಗೋಕಾಕ್ ಚಳುವಳಿ(English : Gokak Agitation). ತ್ರಿಭಾಷಾ ಸೂತ್ರದಡಿಯಲ್ಲಿ ಕರ್ನಾಟಕದ ಶಾಲೆಗಳಲ್ಲಿ ಕನ್ನಡವನ್ನು ಮುಖ್ಯ ಭಾಷೆಯನ್ನಾಗಿ ಪರಿಗಣಿಸಬೇಕು ಎನ್ನವಂತಹ ಹಲವಾರು ಬೇಡಿಕೆಗಳನ್ನೊಳಗೊಂಡ ವರದಿಯೊಂದನ್ನು ಕನ್ನಡದ ಕವಿ ವಿ.ಕೃ ಗೋಕಾಕ್ ರು ಸಿದ್ಧಪಡಿಸಿ ಸಲ್ಲಿಸಿದ್ದರು, ಆದ ಕಾರಣ ಚಳುವಳಿಗೆ ಅವರದೇ ಹೆಸರು ಬಂದಿದೆ.
ಅಭಿಜ್ಞಾನ ಶಾಕುಂತಲಮ್ (ಕನ್ನಡದಲ್ಲಿ "ಅಭಿಜ್ಞಾನ ಶಾಕುಂತಳ" ಎಂಬ ಪ್ರಯೋಗವು ಹೆಚ್ಚಾಗಿದೆ) ‘ಕವಿಕುಲಗುರು’ ಎಂದು ಪ್ರಖ್ಯಾತನಾದ ಕಾಳಿದಾಸನು ಸಂಸ್ಕೃತದಲ್ಲಿ ಬರೆದ ಏಳು ಅಂಕಗಳ ನಾಟಕ. ಜಗತ್ತಿನ ಶ್ರೇಷ್ಠ ಕವಿಗಳಲ್ಲಿ ಕಾಳಿದಾಸನೂ ಒಬ್ಬನೆನ್ನುವ ಸ್ಥಾನವನ್ನು ಗಳಿಸಿಕೊಟ್ಟ ನಾಟಕ. "ಕಾವ್ಯೇಷು ನಾಟಕಂ ರಮ್ಯಂ; ತತ್ರ ರಮ್ಯಾ ಶಾಕುಂತಲಾ" ಎಂದು ಹೊಗಳಿಸಿಕೊಂಡ ಶೃಂಗಾರರಸ ಪ್ರಧಾನವಾಗಿರುವ ಕೃತಿ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
ಟಿಪ್ಪು ಸಾಹಿಬ್ ಎಂದೂ ಕರೆಯಲ್ಪಡುತ್ತಿದ್ದ ಟಿಪ್ಪು ಸುಲ್ತಾನ್ (೧೭೫೩ - ಮೇ ೪, ೧೭೯೯), ೧೭೮೨ ರಿಂದ ಮೈಸೂರು ಸಂಸ್ಥಾನದ ರಾಜ ಹಾಗೂ ಭಾರತದಲ್ಲಿ ಬ್ರಿಟೀಷ್ ಸಾಮ್ರಾಜ್ಯಶಾಹಿಯ ವಿರುದ್ಧ ಆಗಿನ ಕಾಲದ ಪ್ರಮುಖ ಹೋರಾಟಗಾರರಲ್ಲಿ ಒಬ್ಬ. ಈ ಹೋರಾಟದ ಪರಿಣಾಮವಾಗಿ ಟಿಪ್ಪುವಿಗೆ ಶೇರ್-ಎ-ಮೈಸೂರ್ (ಮೈಸೂರ ಹುಲಿ) ಎಂಬ ಬಿರುದು ಉಂಟು. ಮೈಸೂರಿನ ಇತಿಹಾಸದಲ್ಲಿ ಮರೆಯಲಾಗದ ಹೆಸರು ಈತನದು.
ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.
ಪ್ರಜಾಪ್ರಭುತ್ವದಲ್ಲಿ ರಾಜರ ರಾಜ್ಯಗಳ ವಿಲೀನ
ಭಾರತ ಸ್ವಾತಂತ್ರ್ಯ ಪಡೆದಾಗ ಸುಮರು ೫೬೨ ದೇಶೀಯ ಸಂಸ್ಥಾನಗಳಿದ್ದವು.ಅವೆಲವನ್ನು ರಾಜರು ಆಳುತ್ತಿದ್ದರು.೧೯೪೭ರ ಸ್ವಾತಂತ್ರ್ಯ ಕಾಯಿದೆಯಂತೆ ಅವು ಭಾರತ ಅಥವ ಪಾಕಿಸ್ತಾನಕೆ ಯವುದಾದರು ಒಂದಕ್ಕೆ ಸೇರಿಕೊಳ್ಳುವ ಇಲ್ಲವೆ ಸ್ವತಂತ್ರ್ಯವಾಗಿ ಉಳಿಯುವ ಸ್ವಾತಂತ್ರ್ಯ ಉಹೊಂದಿದ್ದವು.ಹೀಗಾಗಿ ಅವು ಪ್ರತ್ಯೇಕತೆ ಪ್ರವೃತ್ತಿ ಬೆಳೆಸಿಕೊಂಡವು ಮತ್ತು ಅವು ಬದಲಾದ ಪರಿಸ್ಥಿತಿಯಲ್ಲಿ ಸ್ವಾತಂತ್ರ್ಯ ಸಾರಿಕೊಂಡವು.ಮುಸ್ಲಿಂ ಲೀಗ್ ನವರು ಈ ರೀತಿಯ ಬೆಳವಣಿಗೆಗೆ ಪ್ರಚೋದನೆ ಇಟ್ಟಿದರು.ದೇಶೀಯ ರಾಜ್ಯಗಳು ಪ್ರತ್ಯೇಕವಾಗಿ ಉಳಿದರಿಂದ ದೇಶದ ಐಕ್ಯತೆ ಮತ್ತು ಸಮಗ್ರತೆಗೆ ಧಕ್ಕೆ ಒದಗುತ್ತಿತ್ತು.ಆದರೆ ರಾಷ್ಟ್ರ ನಾಯಕರು ಅದಕ್ಕೆ ಅವಕಾಶವನ್ನು ಕೊಡಲಿಲ್ಲ.ದೇಶೀಯ ರಾಜ್ಯಗಳು ಸ್ವತಂತ್ರವಾಗಿ ಉಳಿಯುವುದು ಲಕ್ಷಾಂತರ ಭಾರತೀಯರ ಮೇಲೆ ಯುದ್ಧ ಸಾರಿದಂತೆ ಎಂದು ಗಾಂಧೀಜಿ ಯವರು ಹೇಳಿದ್ದರು.ಅಂತಹ ರಾಜ್ಯಗಳಿಗೆ ಬೆಂಬಲಕೊಡುವ ಯಾವುದೇ ರಾಷ್ಟ್ರವನ್ನು ನಾವು ಮಿತ್ರದ್ರೋಹಿ ಎಂದು ಪರಿಗಣಿಸುವುದಾಗಿ ನೆಹರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.ಭಾರತದಲ್ಲಿ ಯಾವುದೇ ರಾಜ್ಯ ಸ್ವಾತಂತ್ರ್ಯ ಘೋಷಿಸಿಕೊಂಡು ಭಾರತದ ಚೌಕಟ್ಟಿನೊಳೊಗೆ ಹಾಗೂ ಹೊರಗೆ ಉಳಿಯಲು ಬಿಡುವುದಿಲ್ಲ ಎಂದು ಜೊನ್ ೧೫, ೧೯೪೭ ರಂದು ಸಬೆ ಸೇರಿದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಒಂದು ತೀರ್ಮಾನ ತೆಗೆದುಕೊಂಡಿತು.ದೇಶೀಯ ಸಂಸ್ಥಾನಗಳ ವಿಲೀನ ವಲ್ಲಭಭಾಯಿ ಪಟೇಲರು ೧೯೪೭ರ ಸೆಪ್ಟೆಂಬರ್ ೧೩ರಂದು ಎಲ್ಲಾ ದೇಶೀಯ ಸಂಸ್ಥಾನಗಳಿಗೆ ಸುತ್ತೋಲೆ ಕಳುಹಿಸಿ ಅವು ಭರತದ ಒಕ್ಕೂಟಕ್ಕೆ (Instrument of accession)ಕ್ಕೆ ಸಹಿ ಹಾಕಿ ರಕ್ಷಣೆ, ವಿದೇಶಾಂಗ ವ್ಯವಹಾರ ಮತ್ತು ಸಂಪರ್ಕ ವಿಷಯಗಳಲ್ಲಿ ಭಾರತ ಒಕ್ಕೊಟಕ್ಕೆ (Indian union) ಅಧೀನವಾಗುವಂತೆ ಒಪ್ಪಿದ್ದರು.ಜೊತೆಗೆ ಒಕ್ಕೊಟದಿಂದ ಹೊರಗುಳಿಯುವ ರಾಜ್ಯಗಳಿಗೆ ಅಪಾಯವನ್ನು ಎಚ್ಚರಿಸಿದರು.ಭಾರತದ ಒಕ್ಕೊಟಕ್ಕೆ ಸೇರುವ ರಾಜರಿಗೆ ರಾಜಧನ ಕೊಡಲಾಗುವುದೆಂದು ಘೊಷಣೆಮಾಡಿದ್ದರು.ಪಟೇಲರೌ ಕರೆದಂತೆ ಎಲ್ಲಾ ದೇಶೀಯ ಸಂಸ್ಥಾನಗಳು ಭಾರತದ ಒಕ್ಕೊಟ ವಿಲೀನ ಪತ್ರಕ್ಕೆ ಸಹಿ ಹಾಕಿ ಭಾರತ ಒಕ್ಕೊಟ ಸೇರಿಕೊಂಡವು.ಆದರೆ ಜುನಾಗಡ್, ಹೈದರಾಬಾದ್, ಕಾಶೀರ್ ಮತ್ತು ಬೇರೆ ಬೇರೆ ರಾಜ್ಯಗಳು ಭಾರತದ ಒಕ್ಕೊಟದಿಂದ ಹೊರಗುಳಿಯಲು ಬಯಸಿದವು.ಪಟೇಲರು ಅವನ್ನು ಒಕ್ಕೊಟಕ್ಕೆ ವಿಲೀನಗೊಳಿಸಲು ರಕ್ತ ಮತ್ತು ಉಕ್ಕು ನೀತಿಯನ್ನು ಅನುಸರಿಸಬೇಕಾಯಿತು.ಅವನ್ನು ವಿಲೀನಗೊಳಿಸಲು ಪಟೇಲರು ಮಾಡಿದ ಕಾರ್ಯವೈಖರಿ ಇಲ್ಲಿವೆ...
ರಾಜ್ಯೋತ್ಸವ ಪ್ರಶಸ್ತಿ ೨೦೧೦ ಸಂಪೂರ್ಣ ಪಟ್ಟಿ
೨೭ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ೧೮೦ ಮಂದಿಗೆ ರಾಜ್ಯ ಸರಕಾರ೨೦೦೯ ಮತ್ತು ೨೦೧೦ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಿದ್ದು, ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.ಕನ್ನಡ ಮತ್ತು ಸಂಸ್ಕೃತಿ ಇಲ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಬಿಡುಗಡೆಗೊಳಿಸಿತು. ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಒಂದು ಲಕ್ಷ ರೂಪಾಯಿ ನಗದು ಬಹುಮಾನ ಹಾಗೂ 20 ಗ್ರಾಂ ಚಿನ್ನದ ಪದಕ ನೀಡಲಾಗುವುದು. ಪ್ರಶಸ್ತಿಯನ್ನು ನವೆಂಬರ್ ೧ರಂದು ವಿತರಿಸಲಾಯಿತು.
ಉತ್ತರ ಕರ್ನಾಟಕವು ದಕ್ಷಿಣ ಭಾರತದಲ್ಲಿ ಕರ್ನಾಟಕ ಪ್ರಾಂತದಲ್ಲಿರುವ ೩೦೦ರಿಂದ ೭೦೦ ಮೀಟರ್ ಎತ್ತರದಲ್ಲಿನ, ತುಲನಾತ್ಮಕವಾಗಿ ಪ್ರಸ್ಥಭೂಮಿಯ ಒಂದು ಶುಷ್ಕವಾದ ವಿಸ್ತಾರ. ಇದು ಬೆಳಗಾವಿ, ಬಿಜಾಪುರ, ಬಾಗಲಕೋಟೆ, ಬೀದರ್, ಬಳ್ಳಾರಿ, ಗುಲ್ಬರ್ಗಾ, ಯಾದಗಿರಿ, ರಾಯಚೂರು, ಗದಗ್, ಧಾರವಾಡ, ಹಾವೇರಿ, ಕೊಪ್ಪಳ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡಿದೆ. ಕೃಷ್ಣಾ ನದಿ ಮತ್ತು ಅದರ ಉಪನದಿಗಳಾದ ಭೀಮಾ, ಘಟಪ್ರಭಾ, ಮಲಪ್ರಭಾ ಮತ್ತು ತುಂಗಭದ್ರಾ ನದಿಗಳು ಈ ಪ್ರದೇಶದಲ್ಲಿ ಹರಿಯುತ್ತವೆ.ಉತ್ತರ ಕರ್ನಾಟಕದ ಜನರ ಮುಖ್ಯ ಆಹಾರವು ಬಿಳಿಜೊಳದ ರೊಟ್ಟಿ ,ವಿವಿಧ ತರಕಾರಿ ಅಥವಾ ಕಾಳುಗಳಿಂದ ತಯಾರಿಸಿದ ಪಲ್ಯಾ,ವಿವಿಧ ಚಟ್ನಿ ಮತ್ತು ಗಟ್ಟಿ ಮೊಸರು.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ದಕ್ಷಿಣಭಾರತದ ಅತ್ಯಂತ ಪ್ರಸಿದ್ಧವಾದ ಪ್ರವಾಸಿ ತಾಣವೆಂದು ಖ್ಯಾತಿ ಪಡೆದಿರುವ ನಗರವೆಂದರೆ ಅದು ಆಂಧ್ರ ಪ್ರದೇಶದ ರಾಜಧಾನಿ ಹೈದರಾಬಾದ್.ಈ ನಗರವನ್ನು ೧೫೯೧ ರಲ್ಲಿ ಆಳ್ವಿಕೆ ಮಾಡಿದ ಖುತುಬ್ ಷಾಹಿ ಸಾಮ್ರಾಜ್ಯದ ಪ್ರಸಿದ್ಧ ದೊರೆ ಮಹಮ್ಮದ್ ಖುಲಿ ಖುತುಬು ಷಾ ನಿರ್ಮಿಸಿದನು.ಈ ನಗರವು ಮೂಸಿ ನದಿಯ ದಂಡೆಯಲ್ಲಿ ಸೌಂದರ್ಯದ ಖನಿಯಂತೆ ಕಂಗೊಳಿಸುತ್ತ ನಿಂತಿದೆ.ಸ್ಥಳೀಯ ದಂತಕತೆಯ ಪ್ರಕಾರ ಈ ನಗರದ ಹೆಸರು ಭಾಗ್ಮತಿ ಮತ್ತು ಮಹಮ್ಮದ್ ಖುಲಿ ಖುತುಬು ಷಾರವರ ನಡುವೆ ನಡೆದ ಕುತೂಹಲಕಾರಿ ಪ್ರೇಮಕಥೆಯಿಂದ ಬಂದಿತೆಂದು ಹೇಳುತ್ತಾರೆ.ಭಾಗ್ಮತಿ ಒಬ್ಬಳು ನರ್ತಕಿ.ಈಕೆಗೆ ಸುಲ್ತಾನನು ಮನಸೋತು ಪ್ರೇಮಿಸುತ್ತಿದ್ದನು.ಆಕೆಯೊಂದಿಗಿನ ಪ್ರೀತಿಯ ಧ್ಯೋತಕವಾಗಿ ಈ ನಗರಕ್ಕೆ ಭಾಗನಗರ್ ಎಂದು ಹೆಸರಿಟ್ಟನು.ಖುಲಿ ಖುತುಬು ಷಾ ಈಕೆಯನ್ನು ಇಸ್ಲಾಂಗೆ ಮತಾಂತರ ಮಾಡಿ ಹೈದರ್ ಮಹಲ್ ಎಂದು ಹೆಸರಿಟ್ಟು,ಗುಟ್ಟಾಗಿ ಮದುವೆಯಾದನು.ಹಾಗಾಗಿ ಈ ನಗರದ ಹೆಸರು ಹೈದರಾಬಾದ್ ಎಂದು ಬದಲಾಯಿತು.ಹೈದರಾಬಾದನ್ನು ಖುತುಬ್ ಷಾ ಸಾಮ್ರಾಜ್ಯದವರು ಸರಿ ಸುಮಾರು ಒಂದು ಶತಮಾನಗಳ ಕಾಲ ಆಳಿದರು.ಆನಂತರ ಮೊಘಲ್ ಸಾಮ್ರಾಟ ಔರಂಗಜೇಬನು ದಕ್ಷಿಣದ ಮೇಲೆ ದಂಡೆತ್ತಿ ಬಂದಾಗ ಈ ನಗರವನ್ನು ತನ್ನ ವಶಕ್ಕೆ ಪಡೆದನು.೧೭೨೪ ರಲ್ಲಿ ಈ ನಗರದಲ್ಲಿ ಆಸಿಫ್ ಜಹಾನು ಇಲ್ಲಿ ಆಸಿಫ್ ಜಾಹಿ ಸಾಮ್ರಾಹವನ್ನು ಸ್ಥಾಪಿಸಿ ಹೈದರಾಬಾದ್ ಮತ್ತು ಸುತ್ತಮುತ್ತಲ ಪ್ರಾಂತ್ಯವನ್ನು ತನ್ನ ನಿಯಂತ್ರಣಕ್ಕೆ ಪಡೆದನು.ಆಸಿಫ್ ಜಾಹಿ ಸಾಮ್ರಾಜ್ಯವು ತಮ್ಮನ್ನು ತಾವು ಹೈದರಾಬಾದಿನ ನಿಜಾಮರೆಂದು ಸ್ವಯಂ ಘೋಷಿಸಿಕೊಂಡರು. ಈ ಒಂದು ಹೆಸರು ಇವರಿಗೆ ಶಾಶ್ವತವಾಗಿ ಅಂಟಿಕೊಂಡಿತು. ಈ ನಗರದ ಭವ್ಯ ಇತಿಹಾಸವು ನಮ್ಮನ್ನು ನಿಜಾಮರ ಮತ್ತು ವಸಾಹತು ಷಾಹಿ ಆಡಳಿತಕಾಲದಷ್ಟು ಹಿಂದಕ್ಕೆ ಕೊಂಡೊಯ್ಯುತ್ತದೆ.ಹೈದರಾಬಾದನ್ನು ಇನ್ನೂರು ವರ್ಷಗಳಿಗು ಅಧಿಕ ಕಾಲ ಆಳಿದ ನಿಜಾಮರು ಬ್ರಿಟೀಷರೊಂದಿಗೆ ಪರಸ್ಪರ ಕೊಡು ಕೊಳ್ಳುವಿಕೆಯ ಸಂಬಂಧವನ್ನು ಉಳಿಸಿಕೊಂಡು ಏಳಿಗೆ ಹೊಂದಿದರು.ಈ ನಗರವು ೧೭೬೯ರಿಂದ ೧೯೪೮ರವರೆಗೆ ನಿಜಾಮರ ರಾಜಧಾನಿಯಾಗಿತ್ತು.ಸ್ವಾತಂತ್ರ್ಯ ಬಂದ ನಂತರ ನಡೆದ ಆಪರೇಷನ್ ಪೋಲೊ ಕಾರ್ಯಾಚರಣೆಯಲ್ಲಿ ಹೈದರಾಬಾದಿನ ಕಡೆಯ ನಿಜಾಮನು ಭಾರತದ ಸಾರ್ವಭೌಮತೆಯನ್ನು ಒಪ್ಪಿ ಸಹಿ ಮಾಡುವ ಮೂಲಕ ಹೈದರಾಬಾದ್ ಭಾರತದ ಗಣರಾಜ್ಯದೊಂದಿಗೆ ವಿಲೀನವಾಯಿತು.ಆನಂತರ ಇದನ್ನು ಆಂಧ್ರ ಪ್ರದೇಶದ ರಾಜಧಾನಿಯನ್ನಾಗಿ ಮಾಡಲಾಯಿತು.ಹೈದರಾಬಾದ್ ತನ್ನದೇ ಆದ ಪ್ರತ್ಯೇಕ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ.ಭೌಗೋಳಿಕವಾಗಿ ಹೈದರಾಬಾದ್ ಅತ್ಯಂತ ಕೌತುಕದ ಸ್ಥಳದಲ್ಲಿ ನೆಲೆಗೊಂಡಿದೆ.