The most-visited ಕನ್ನಡ Wikipedia articles, updated daily. Learn more...
ರಷ್ಯಾ (ರಷ್ಯನ್: Россия), ಅಧಿಕೃತವಾಗಿ ರಸಿಸ್ಕಾಯಾ ಫೇಡರಾಟ್ಸಿಯ (ರಷ್ಯನ್: Российская Федерация - ರಷ್ಯಾದ ಒಕ್ಕೂಟ), ಉತ್ತರ ಯುರೇಷಿಯಾ (ಯುರೋಪ್ ಹಾಗೂ ಏಷ್ಯಾ ಒಟ್ಟಿಗೆ)ದಲ್ಲಿರುವ ಒಂದು ದೇಶ. ಇದೊಂದು 83 ಬಿಡಿ ಸಂಸ್ಥಾನಗಳನ್ನು ಹೊಂದಿರುವ ಅರೆ-ಅಧ್ಯಕ್ಷೀಯ ಒಕ್ಕೂಟವಾಗಿದೆ. ರಷ್ಯಾ ತನ್ನ ಭೂಗಡಿಗಳನ್ನು ಈ ದೇಶಗಳೊಂದಿಗೆ ಹಂಚಿಕೊಂಡಿದೆ (ವಾಯುವ್ಯದಿಂದ ಆಗ್ನೇಯದವರೆಗೆ) : ನಾರ್ವೆ, ಫಿನ್ಲ್ಯಾಂಡ್, ಎಸ್ಟೊನಿಯಾ, ಲಾಟ್ವಿಯಾ, ಲಿಥುವೇನಿಯಾ (ಕಲಿನಿನ್ಗ್ರಾಡ್ ಓಬ್ಲಸ್ಟ್ ಮೂಲಕ), ಪೋಲೆಂಡ್ (ಕಲಿನಿನ್ಗ್ರಾಡ್ ಓಬ್ಲಸ್ಟ್ ಮೂಲಕ), ಬೆಲಾರೂಸ್, ಉಕ್ರೇನ್, ಜಾರ್ಜಿಯಾ, ಅಜರ್ಬೈಜಾನ್, ಕಜಕ್ಸ್ತಾನ್, ಚೀನಾ, ಮಂಗೋಲಿಯಾ ಮತ್ತು ಉತ್ತರ ಕೊರಿಯಾ.
ವಿಶಿಷ್ಟ ಗುರುತಿನ ಸಂಖ್ಯೆ (ಆಧಾರ್) ಎಂಬುದು ಭಾರತ ಸರ್ಕಾರದ ವತಿಯಿಂದ ಇತ್ತೀಚೆಗಷ್ಟೇ ಅಂತಿಮಗೊಳಿಸಲ್ಪಟ್ಟ ಒಂದು ಉಪಕ್ರಮವಾಗಿದ್ದು, ಭಾರತದ ಎಲ್ಲಾ ವಯಸ್ಕ ನಾಗರಿಕರು ಮತ್ತು ನಿವಾಸಿಗಳಿಗೆ ಸಂಬಂಧಿಸಿದಂತಿರುವ ಒಂದು ಕೇಂದ್ರೀಕೃತ ಗುರುತಿಸುವಿಕೆಯ ವ್ಯವಸ್ಥೆಯನ್ನು ಸೃಷ್ಟಿಸುವ ಮತ್ತು ನಿರ್ವಹಿಸುವ ಉದ್ದೇಶ ಇದರ ಹಿಂದಿದೆ; ಇದನ್ನು ಒಂದು ವೈವಿಧ್ಯಮಯವಾದ ಗುರುತಿಸುವಿಕೆಯ ಉದ್ದೇಶಗಳಿಗಾಗಿ ಬಳಸಿಕೊಳ್ಳಬಹುದಾಗಿದೆ. ಇನ್ಫೋಸಿಸ್ನ ಹಿಂದಿನ ಸಹ-ಸಭಾಪತಿಯಾದ ನಂದನ್ ನಿಲೇಕಣಿಯವರನ್ನು ಭಾರತದ ವಿಶಿಷ್ಟ ಗುರುತಿಸುವಿಕೆಯ ಪ್ರಾಧಿಕಾರದ (ಯುನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ) ಮುಖ್ಯಸ್ಥರನ್ನಾಗಿ ನೇಮಿಸಲಾಗಿದ್ದು, ಅವರು ಓರ್ವ ಮಂತ್ರಿಯ ದರ್ಜೆಯನ್ನು ಹೊಂದಲಿದ್ದಾರೆ. ಇನ್ಫೋಸಿಸ್ ಟೆಕ್ನಾಲಜೀಸ್ನ ನಿರ್ದೇಶಕ ಮಂಡಳಿಯಿಂದ ಕೆಳಗಿಳಿಯಲು ಅವರು ನಿರ್ಧರಿಸಿದ್ದಾರೆ.
ಮೇಧಾ ಪಾಟ್ಕರ್ ಪ್ರಖ್ಯಾತ ಪರಿಸರವಾದಿ.ಡಿಸೆಂಬರ್ ೧,೧೯೫೪ ರಲ್ಲಿ ಜನಿಸಿದ ಇವರು ನರ್ಮದಾ ಬಚಾವ್ ಅಂದೋಳನದ ಮೂಲಕ ಪ್ರಪಂಚದಾದ್ಯಂತ ಪ್ರಸಿದ್ಧರಾದರು.ಸ್ವಾತಂತ್ರ್ಯಯೋಧ ತಂದೆ,ಸಾಮಾಜಿಕ ಕಾರ್ಯಕರ್ತೆ ತಾಯಿಯ ಮಗಳಾದ ಪಾಟ್ಕರ್, ಪರಿಸರ ಹೋರಾಟ,ರೈತ ಚಳುವಳಿಗಳಲ್ಲಿ ಸಕ್ರಿಯವಾಗಿದ್ದಾರೆ.ಇವರ ಈ ಸಾಮಾಜಿಕ ಕಾರ್ಯವನ್ನು ಗುರುತಿಸಿ ಪ್ರಪಂಚದ ಹಲವಾರು ಸಂಘಸಂಸ್ಥೆಗಳು ಪ್ರಶಸ್ತಿಗಳನ್ನಿತ್ತು ಗೌರವಿಸಿವೆ.ಅವುಗಳಲ್ಲಿ ರೈಟ್ ಲೈವ್ಲಿಹುಡ್ ಪ್ರಶಸ್ತಿ,ಗ್ರೀನ್ ರಿಬ್ಬನ್ ಪ್ರಶಸ್ತಿ ಮುಂತಾದವುಗಳು ಪ್ರಮುಖವಾದವುಗಳು. ಮೇಧಾ ಪಾಟ್ಕರ್ ಭಾರತೀಯ ಸಾಮಾಜಿಕ ಕಾರ್ಯಕರ್ತೆ ಹೊಂದಿದೆ (1954 ಡಿಸೆಂಬರ್ 1 ರಂದು ಜನನ) ಮತ್ತು ಸಾಮಾಜಿಕ ಸುಧಾರಕ ರಾಜಕಾರಣಿ ತಿರುಗಿ . ಅವರು ನರ್ಮದಾ ಬಚಾವೊ ಆಂದೋಲನ ಸಂಸ್ಥೆಯ ಸ್ಥಾಪಕ ಸದಸ್ಯರಾಗಿದ್ದು ಮತ್ತು ಪೀಪಲ್ಸ್ ಮೂವ್ಮೆಂಟ್ ನ್ಯಾಷನಲ್ ಅಲಯನ್ಸ್ ( NAPM ) , ಪ್ರಗತಿಪರ ಜನರ ಸಂಘಟನೆಗಳು ಮೈತ್ರಿ ರಾಷ್ಟ್ರೀಯ ಸಂಚಾಲಕ ಆಗಿತ್ತು.
ಹಿಂದೂ ಧರ್ಮದಲ್ಲಿ, ಸಮುದ್ರಮಂಥನ ಅಥವಾ ಕ್ಷೀರಸಮುದ್ರವನ್ನು ಕಡೆದ ಘಟನೆ ಪುರಾಣಗಳಲ್ಲಿ ಒಂದು ಅತ್ಯಂತ ಪ್ರಸಿದ್ದ ಪ್ರಸಂಗ ಹಾಗೂ ಇದನ್ನು ಅತ್ಯಂತ ವೈಭವದಿಂದ ೧೨ ವರ್ಷಗಳಿಗೊಮ್ಮೆ ಕುಂಭಮೇಳ ಎಂಬ ಹಬ್ಬವಾಗಿ ಆಚರಿಸಲಾಗುತ್ತದೆ. ಈ ಕಥೆಯು ಭಾಗವತಪುರಾಣ, ಮಹಾಭಾರತ ಹಾಗೂ ವಿಷ್ಣು ಪುರಾಣದಲ್ಲಿ ಕಂಡುಬರುತ್ತದೆ. ಸಮುದ್ರಮಂಥನದ ಇತರ ಹೆಸರುಗಳು — ಸಮುದ್ರಮಂಥನಂ — ಮಂಥನಂ ಎಂದರೆ ಸಂಸ್ಕೃತದಲ್ಲಿ ಮಂಥನ ಅಥವಾ 'ಕಡೆಯುವುದು' ಎಂದರ್ಥ.
ನೈಸರ್ಗಿಕ ಸಂಪನ್ಮೂಲಗಳು ಭೂಮಿ ಅಥವಾ ಕಚ್ಛಾ ವಸ್ತುಗಳನ್ನು ) ಆರ್ಥಿಕಮಾನದಂಡ ಎಂದು ಉಲ್ಲೇಖಿಸಲಾಗಿದೆ) ಪರಿಸರದಲ್ಲಿ ಮಾನವರಿಂದ ಸ್ಥಾನಪಲ್ಲಟಕ್ಕೆ ಈಡಾಗದೇ ಇರುವಾಗ ಅವುಪ್ರಾಕೃತಿಕ ರೂಪದಲ್ಲಿ ಇರುತ್ತವೆ. ನೈಸರ್ಗಿಕ ಸಂಪನ್ಮೂಲವನ್ನು ವಿವಿಧ ಪರಿಸರ ವ್ಯವಸ್ಥೆಯಲ್ಲಿ ಅಸ್ತಿತ್ವದಲ್ಲಿರುವ ಜೀವವೈವಿಧ್ಯತೆಯ ಆಧಾರದ ಮೇಲೆ ವಿಂಗಡಿಸಲಾಗಿದೆ. ನೈಸರ್ಗಿಕ ಸಂಪನ್ಮೂಲಗಳೆಲ್ಲವೂಪರಿಸರ ಜನ್ಯ.
ಗಣಿತಶಾಸ್ತ್ರದಲ್ಲಿ, ಅವಿಭಾಜ್ಯ ಸಂಖ್ಯೆ ಯು ಒಂದು ಸ್ವಾಭಾವಿಕ ಸಂಖ್ಯೆಯಾಗಿದ್ದು, ಅದು ನಿರ್ದಿಷ್ಟವಾಗಿ ಎರಡು ಭಿನ್ನವಾದ ಸ್ವಾಭಾವಿಕ ಸಂಖ್ಯೆಯ ಭಾಜಕಗಳನ್ನು ಹೊಂದಿರುತ್ತದೆ: ೧ ಮತ್ತು ಅದೇ ಸಂಖ್ಯೆ . ಮೊದಲ ಇಪ್ಪತ್ತೈದು ಅವಿಭಾಜ್ಯ ಸಂಖ್ಯೆಗಳು: ೨, ೩, ೫, ೭, ೧೧, ೧೩, ೧೭, ೧೯, ೨೩, ೨೯, ೩೧, ೩೭, ೪೧, ೪೩, ೪೭, ೫೩, ೫೯, ೬೧, ೬೭, ೭೧, ೭೩, ೭೯, ೮೩, ೮೯, ೯೭.ಕ್ರಿಸ್ತ ಪೂರ್ವ ೩೦೦ರ ಆಸುಪಾಸಿನಲ್ಲಿ ಯೂಕ್ಲಿಡ್ನಿಂದ ಪ್ರಮಾಣೀಕರಿಸಿದ ಹಾಗೆ ಅವಿಭಾಜ್ಯ ಸಂಖ್ಯೆಗಳ ಒಂದು ಅಪರಿಮಿತತೆ ಅಸ್ತಿತ್ವದಲ್ಲಿದೆ. ಸಂಖ್ಯೆ ೧ ವ್ಯಾಖ್ಯಾನದ ಪ್ರಕಾರ ಒಂದು ಅವಿಭಾಜ್ಯ ಸಂಖ್ಯೆಯಲ್ಲ.
ಆಧುನಿಕ ಮಾರುಕಟ್ಟೆ ಸಿದ್ಧಾಂತವು ಗ್ರಾಹಕನನ್ನು ಮಾರುಕಟ್ಟೆಯ 'ರಾಜ'ನೆಂದು ಪರಿಗಣಿಸಿದೆ. ಮಾರುಕಟ್ಟೆಯ ಎಲ್ಲಾ ಕಾರ್ಯಚಟುವಟಿಕೆಗಳು ಗ್ರಾಹಕನ ಅವಶ್ಯಕತೆಗಳು ಮತ್ತು ಅಭಿಲಾಷೆಗಳನ್ನು ತೃಪ್ತಿಪಡಿಸುವ ಉದ್ದೇಶವನ್ನು ಹೊಂದಿದೆ. ಆದರೆ, ವ್ಯವಹಾರ ಸಂಘಟನೆಗಳು ಹೆಚ್ಚುತ್ತಿರುವ ಪೈಪೋಟಿ, ಮಾರಾಟದ ಪ್ರಮಾಣವನ್ನು ಹೆಚ್ಚಿಸಿಕೊಳ್ಳುವ ಹಾಗೂ ಮಾರುಕಟ್ಟೆಯಲ್ಲಿ ತಮ್ಮ ಪಾಲನ್ನು ವೃದ್ಧಿಸಿಕೊಳ್ಳುವ ಉದ್ದೇಶದಿಂದ ಅನುಚಿತ ವ್ಯಾಪಾರ ಪದ್ಧತಿಗಳಾದ ಕಲಬೆರಕೆ, ಕಾಳಸಂತೆ ವ್ಯಾಪಾರ, ತಪ್ಪು ಮಾಹಿತಿ ನೀಡುವ ಜಾಹಿರಾತು, ಮುಂತಾದವುಗಳಿಂದ ಗ್ರಾಹಕರನ್ನು ವಂಚಿಸುತ್ತಿದ್ದು, ಅವನ ರಕ್ಷಣೆ ಅತ್ಯಗತ್ಯವಾಗಿದೆ.
ಜೈನ ಧರ್ಮವನ್ನು ಉಪದೇಶಿಸಿದ ಮೊದಲನೆಯ ತೀರ್ಧ೦ಕರರು ವೃಷಭನಾಥರು. ಇವರಗೆ ಸುನಂದ ಮತ್ತು ನಂದಾ ಯೆಂಬ ಇಬ್ಬರು ಪತ್ನಿಯರು.ಇವರಿಂದ ನೂರುಜನ ಗಂಡು ಮಕ್ಕಳೂ ಮತ್ತು ಇಬ್ಬರು ಹೆಣ್ಣು ಮಕ್ಕಳೂ ಜನಿಸಿದರು.ಬಾಹುಬಲಿಯು ಸುನಂದೆಯ ಮಗ.ವೃಷಭನಾಥರಿಗೆ ವೈರಾಗ್ಯ ಉ೦ಟಾದಾಗ ಮಕ್ಕಳಿಗೆ ರಾಜ್ಯವನ್ನು ಹಂಚಿ ತಪಸ್ಸಿಗೆ ತೆರಳಿದರು. ಸಕಲ ಕರ್ಮಗಳನ್ನು ಜಯಿಸಿ ಕೇವಲಜ್ಞಾನವನ್ನು ಪಡೆದು ಜನರಿಗೆ ಮುಕ್ತಿ ಮಾರ್ಗವನ್ನು ಉಪದೇಶಿಸುತ್ತಿದ್ದರು.
ವಿಲಿಯಂ ಷೇಕ್ಸ್ಪಿಯರ್ ಜನನ ವಿವಿಧ ದಾಖಲೆ ಮತ್ತು ಸಾಂದರ್ಭಿಕ ಪುರಾವೆಗಳ ಆಧಾರದ ಊಹೆಯಂತೆ ೨೩ ಏಪ್ರಿಲ್ ೧೫೬೪ (ಕ್ರೈಸ್ತಮತದ ಸಂಪ್ರದಾಯದಂತೆ ಹೋಲಿ ಟ್ರಿನಿಟಿ ಚರ್ಚ್ ನಲ್ಲಿ ನಾಮಕರಣ ೨೬ ಏಪ್ರಿಲ್ ೧೫೬೪ - ಮರಣ - ೨೩ ಏಪ್ರಿಲ್ ೧೬೧೬ ) [೧] ಇಂಗ್ಲಿಷ್ ಕವಿ ಮತ್ತು ನಾಟಕಕಾರ ; ಇಂಗ್ಲಿಷ್ ಭಾಷೆಯ ಅತಿ ಶ್ರೇಷ್ಠ ಕವಿ-ಬರಹಗಾರ ಎಂದೂ ಜಗತ್ತಿನ ಸರ್ವಶ್ರೇಷ್ಠ ನಾಟಕಕಾರರಲ್ಲಿ ಒಬ್ಬನು ಎಂದೂ ಸಾಮಾನ್ಯವಾಗಿ ಗೌರವಿಸಲಾಗುತ್ತದೆ. ಅವನನ್ನು ಇಂಗ್ಲೆಂಡಿನ ರಾಷ್ಟ್ರೀಯ ಕವಿ ಎಂದು ಕರೆಯುತ್ತಾರೆ.
ಮಂಗಳೂರು (ತುಳು: ಕುಡ್ಲ; ಕೊಂಕಣಿ: ಕೊಡಿಯಾಲ್; ಬ್ಯಾರಿ: ಮೈಕಾಲ; ಆಂಗ್ಲ: ಮ್ಯಾಂಗಲೋರ್; ಮಲಯಾಳಂ: ಮಂಗಲಾಪುರಂ) ಕರ್ನಾಟಕದ ನೈಋತ್ಯದಲ್ಲಿರುವ ಪ್ರಮುಖ ರೇವು ಪಟ್ಟಣ ಹಾಗೂ ಕರ್ನಾಟಕದ ಪ್ರಮುಖ ನಗರಗಳಲ್ಲೊಂದು. ಭಾರತದ ಪಶ್ಚಿಮ ಕರಾವಳಿಯಲ್ಲಿ ಅರಬ್ಬೀ ಸಮುದ್ರದ ತೀರದಲ್ಲಿರುವ ಇದು ತನ್ನ ಪೂರ್ವದಲ್ಲಿ ಪಶ್ಚಿಮ ಘಟ್ಟಗಳನ್ನು ಹೊಂದಿದೆ. ಮಂಗಳೂರು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಆಡಳಿತ ಕೇಂದ್ರ.
ನಮ್ಮ ರಾಜ್ಯದಲ್ಲಿ ಭೋವಿ ಸಮಾಜ ಭಾಂದವರು ಅನಾದಿಕಾಲದಿಂದಲೂ ವಾಸವಾಗಿದ್ದು "ಪಲ್ಲಕ್ಕಿ ಹೊರುವ" , "ಮೇಣೆ ಹೊರುವ" ಕಾಯಕವನ್ನು ಮಾಡುತ್ತಿದ್ದರು. ಭೋವಿಗಳು ದೈಹಿಕವಾಗಿ ಸಶಕ್ತರೂ, ಕಸುವುಳ್ಳವರೂ ಆಗಿದ್ದರಿಂದ ರಾಜರು, ಮಂತ್ರಿಗಳು, ಸಾಮಂತ ಅರಸರು, ದೊಡ್ಡ ದೊಡ್ಡ ಜಮೀನುದಾರರು ಇವರನ್ನು ಪಲ್ಲಕ್ಕಿ ಹೊರುವ ಕಾಯಕಕ್ಕೆ ಸೇವಕರನ್ನಾಗಿ ನೇಮಿಸಿಕೊಳ್ಳುತ್ತಿದ್ದರು . ಈ ಕಾಯಕವು ಭೋವಿ ಜನಾಂಗದವರು ಕುಲ ಕಸುಬಾಗಿತ್ತು.
ಗಿಡಮರಗಳಿಂದ ಕೂಡಿ ಒಂದು ಯಾಜಮಾನ್ಯಕ್ಕೆ ಅಥವಾ ಆಡಳಿತಕ್ಕೆ ಸೇರಿರುವ ಅಥವಾ ವನಖಂಡಗಳಿಂದ ಕೂಡಿರುವ ಪ್ರದೇಶ ಅರಣ್ಯ (ಫಾರೆಸ್ಟ್). ಅರಣ್ಯಗಳನ್ನು ವ್ಯವಸ್ಥಿತವಾಗಿ ಸಂರಕ್ಷಿಸಿ, ಬೆಳೆಸಿ ಅವುಗಳಿಂದ ಪರಮಾವಧಿ ಉಪಯೋಗ ಹೊಂದುವ ವಿಧಾನ ಅರಣ್ಯಶಾಸ್ತ್ರ (ಫಾರೆಸ್ಟ್ರಿ). ಸಂಯುಕ್ತರಾಷ್ಟ್ರಗಳ (ಯು.ಎನ್.) ಆಹಾರ ಮತ್ತು ಕೃಷಿ ವಿಭಾಗ (ಫುಡ್ ಅಂಡ್ ಅಗ್ರಿಕಲ್ಚರಲ್ ಆರ್ಗನೈ¸óÉೀಷನ್, ಎಫ್.ಎ.ಓ.) ನೀಡಿರುವ ವ್ಯಾಖ್ಯೆಯ ಪ್ರಕಾರ ಸಸ್ಯಸಮುದಾಯದಿಂದ ವ್ಯಾಪ್ತವಾಗಿರುವ, ಎಲ್ಲ ಗಾತ್ರದ ಗಿಡಮರಗಳು ಪ್ರಧಾನವಾಗಿರುವ, ಕಡಿಯಲಿ ಬಿಡಲಿ ಮರಮುಟ್ಟು, ಸೌದೆ ಒದಗಿಸಲು ಸಮರ್ಥವಾಗಿರುವ ಅಥವಾ ಸ್ಥಳೀಯ ಹವೆಯ ಮೇಲೆ ಅಥವಾ ಜಲಸಂಪತ್ತಿನ ಮೇಲೆ ಪ್ರಭಾವ ಬೀರಲು ಶಕ್ತವಾಗಿರುವ, ಎಲ್ಲ ನೆಲೆಗಳಿಗೂ ಅರಣ್ಯ ಎಂಬ ಹೆಸರಿದೆ.
ಮಕ್ಕಳ ಉಚಿತ ಹಾಗು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ
ಮಕ್ಕಳ ಉಚಿತ ಹಾಗು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಭಾರತದ ಸಂಸತ್ತಿನಿಂದ ಮಾಡಲ್ಪಟ್ಟಿರುವ ಕಾನೂನು. ಈ ಕಾಯ್ದೆಯಡಿ ಭಾರತದಲ್ಲಿ ೬ರಿಂದ ೧೪ ವರ್ಷದವರೆಗಿನ ಮಕ್ಕಳಿಗೆ ಉಚಿತ ಹಾಗು ಕಡ್ಡಾಯ ಶಿಕ್ಷಣ ದೊರಕುವಂತೆ ಹಕ್ಕನ್ನು ನೀಡಲಾಗಿದೆ. ಈ ಕಾಯ್ದೆಯನ್ನು ಭಾರತ ಸಂವಿಧಾನದ ೨೧A ಕಲಮಿನಡಿ ಜಾರಿಗೊಳಿಸಲಾಗಿದೆ.
ಭಾರತದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜಧಾನಿಗಳು
ಈ ಲೇಖನದಲ್ಲಿ ಭಾರತದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜಧಾನಿಗಳ ಪಟ್ಟಿ ಮಾಡಲಾಗಿದೆ. ಭಾರತವು ೨೮ ರಾಜ್ಯ ಮತ್ತು ೭ ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಿದೆ. ರಾಜ್ಯಗಳು ತಮ್ಮ ಸ್ವಂತ ಸರ್ಕಾರಗಳನ್ನು ರಚಿಸಿಕೊಳ್ಳುತ್ತವೆ.
೧೯೧೨ರ ಸಹಕಾರಿ ಸಂಘಗಳ ಕಾಯ್ದೆಯ ಪ್ರಕಾರ ಭಾರತದಲ್ಲಿ ಸಹಕಾರ ಸಂಘವನ್ನು ಸ್ಥಾಪಿಸಲು ಕನಿಷ್ಟ ಸದಸ್ಯರ ಸಂಖ್ಯೆ ಹತ್ತು ಇರತಕ್ಕದ್ದು.ಇದನ್ನು ಸಹಕಾರಿ ಸಂಘಗಳ ಕಾಯ್ದೆಯ ಪ್ರಕಾರ ನೋಂದಾಯಿಸಲೇಬೇಕು.ಷೇರುಗಳನ್ನು ಸದಸ್ಯರಿಗೆ ನೀಡುವುದರ ಮುಖಾಂತರ ಬಂಡವಾಳವನ್ನು ಸಂಗ್ರಹಿಸುತ್ತದೆ. ವ್ಯಾಖ್ಯಾನಗಳು ಈ.ಹೆಚ್.ಕಲ್ವರ್ಟ್ ಅವರ ಪ್ರಕಾರ "ಸಹಕಾರವು ಒಂದು ಪ್ರಕಾರದ ವ್ಯವಹಾರಿ ಸಂಘಟನೆಯಾಗಿದ್ದು,ಅದರಲ್ಲಿರುವ ವ್ಯಕ್ತಿಗಳು ತಮ್ಮ ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸಿಕೊಳ್ಳಲು ಸಮಾನತೆಯ ದೃಷ್ಠಿಯಿಂದ ಮಾನವರಾಗಿ ಸ್ವಯಂ ಪ್ರೇರಣೆಯಿಂದ ಒಂದುಗೂಡಿದ ಸಂಸ್ಥೆಯಾಗಿದೆ". ಸಹಕಾರಿ ಸಂಘಗಳ ಲಕ್ಷಣಗಳೆಂದರೆ:- ೧.ಸ್ವಯಂ ಪ್ರೇರಣೆಯ ಸಂಘಟನೆ:- ಸಹಕಾರಿ ಸಂಘದ ಸದಸ್ಯತ್ವ ಐಚ್ಛಿಕವಾಗಿದೆ.ಸದಸ್ಯತ್ವವು ಮುಕ್ತವಾಗಿದ್ದು,ಯಾವುದೇ ಬೇದವಿಲ್ಲದೆ ಎಲ್ಲಾ ವಯಸ್ಕರಿಗೂ ಸದಸ್ಯರಾಗಲು ಅವಕಾಶವಿದೆ.ಸದಸ್ಯರು ತಮಗೆ ಬೇಡವೆನಿಸಿದಾಗ ಸಂಘವನ್ನು ಬಿಟ್ಟುಹೋಗಬಹುದು.
ಗೃಹ ಮತ್ತು ಸಣ್ಣ ಪ್ರಮಾಣದ ಕೈಗಾರಿಕೆಗಳು
ಯಾವುದೇ ಒಂದು ದೇಶದ ಆರ್ಥಿಕ ಅಭಿವೃದ್ದಿಯಲ್ಲಿ ಕೃಷಿ ಮತ್ತು ಕೈಗಾರಿಕೆಗಳು ಪ್ರಧಾನಪಾತ್ರವನ್ನು ವಹಿಸುತ್ತವೆ. ಹಲವಾರು ಕೈಗಾರಿಕೆಗಳು ಕೃಷಿಯನ್ನಾಧರಿಸಿವೆ. ಉದಾ.ಹತ್ತಿಬಟ್ಟೆ , ಕಾಗದ, ಸಕ್ಕರೆ, ಸಣಬು, ತಂಬಾಕು ಮುಂತಾದವು.
ಸಭಾಪತಿ (ಸ್ಪೀಕರ್ ) ಎಂಬ ಹೆಸರನ್ನು ಒಂದು ಪರ್ಯಾಲೋಚಕ ಸಭೆಯ ಅಧ್ಯಕ್ಷ ಸ್ಥಾನದಲ್ಲಿ ಕೂರುವವರಿಗೆ (ಆ ಸ್ಥಾನಕ್ಕೆ) ಇಡಲಾಗಿದ್ದು, ವಿಶೇಷವಾಗಿ ಶಾಸಕಾಂಗದ ಮುಖ್ಯಸ್ಥನನ್ನು ಈ ಹೆಸರಿನಿಂದ ಕರೆಯಲಾಗುತ್ತದೆ. ಸಭಾಪತಿಯ ಆಡಳಿತಾತ್ಮಕ ಪಾತ್ರವು ಚರ್ಚೆಗಳಿಗೆ ಮಧ್ಯಸ್ಥಿಕೆ ವಹಿಸುವುದಾಗಿದೆ. ನಿಯಮಗಳಿಗನುಸಾರವಾಗಿ ಕಾರ್ಯನಿರ್ವಹಿಸುವುದು, ಜತೆಗೆ ಮತಗಳ ಫಲಿತಾಂಶವನ್ನು ಪ್ರಕಟಿಸುವುದು (ಘೋಷಿಸುವುದು) ಮತ್ತು ಇತರೇ ಇದಕ್ಕೆ ಸಂಬಂಧಪಟ್ಟ ಕಾರ್ಯಗಳನ್ನು ನಿರ್ವಹಿಸುವುದಾಗಿದೆ.
ಸಾಕ್ರೆಟಿಸ್ ಕ್ರಿ.ಪೂ.೪೬೯-೩೯೯ ರಲ್ಲಿ ಗ್ರೀಸ್ ದೇಶದಲ್ಲಿ ಜೀವಿಸಿದ್ದ ಒಬ್ಬ ಶ್ರೇಷ್ಠ ತತ್ವಜ್ಞಾನಿ.ಅವನು ಸತ್ಯವಾದಿಯೂ,ನಿಷ್ಟೂರವಾದಿಯೂ ಆಗಿದ್ದನು. ಗ್ರೀಕ್ ಸಮಾಜ ವಿಷಮ ಘಟ್ಟದಲ್ಲಿದ್ದಾಗ, ಅನೈತಿಕತೆ, ಡಂಬಾಚಾರ, ಸ್ವೇಚ್ಛಾಚಾರ ಖಂಡಿಸಿ, ಸಮಾಜದ ಧ್ಯೇಯ ಆದರ್ಶಗಳನ್ನು ಎತ್ತಿ ಹಿಡಿದವನು ಸಾಕ್ರಟೀಸ್.“ಆತ್ಮವಿಮರ್ಶೆಯಿಲ್ಲದ ಅವೈಚಾರಿಕ ಜೀವನ ಬಾಳಲು ಯೋಗ್ಯವಾದುದಲ್ಲ” ಎಂಬ ತತ್ವ ಇವನದು. ಸಾಕ್ರಟೀಸಿನ ವಿಮರ್ಶ ಅಥವಾ ತರ್ಕಬುದ್ಢಿ ಸಮಾಜದಲ್ಲಿ ಯಾರನ್ನು ಬಿಡಲಿಲ್ಲ.
ಹಿರೋಷಿಮಾ ಮತ್ತು ನಾಗಸಾಕಿಗಳ ಪರಮಾಣು ಬಾಂಬ್ ದಾಳಿಗಳು
1945ರಲ್ಲಿ ನಡೆದ IIನೇ ಜಾಗತಿಕ ಸಮರದ ಅಂತಿಮ ಹಂತಗಳ ಅವಧಿಯಲ್ಲಿ, ಅಮೆರಿಕಾ ಸಂಯುಕ್ತ ಸಂಸ್ಥಾನವು ಜಪಾನ್ನಲ್ಲಿರುವ ಹಿರೋಷಿಮಾ ಮತ್ತು ನಾಗಸಾಕಿ ನಗರಗಳ ವಿರುದ್ಧ ಪರಮಾಣು ಬಾಂಬ್ ದಾಳಿಗಳನ್ನು ನಡೆಸಿತು. ತೀವ್ರ ಯುದ್ಧತಂತ್ರವನ್ನೊಳಗೊಂಡಿದ್ದ ಜಪಾನಿಯರ 67 ನಗರಗಳ ಮೇಲಿನ ಬೆಂಕಿ-ಬಾಂಬ್ ದಾಳಿಯ ಆರು ತಿಂಗಳುಗಳ ನಂತರ, ಪಾಟ್ಸ್ಡ್ಯಾಂ ಘೋಷಣೆಯಿಂದ ನೀಡಲ್ಪಟ್ಟ ಒಂದು ಅಂತಿಮ ಷರತ್ತನ್ನು ಜಪಾನಿಯರ ಸರ್ಕಾರ ಉಪೇಕ್ಷಿಸಿತು. ಅಧ್ಯಕ್ಷ ಹ್ಯಾರಿ S. ಟ್ರೂಮನ್ನಿಂದ ಬಂದ ಕಾರ್ಯಕಾರಿ ಆದೇಶದ ಅನುಸಾರ, 1945ರ ಆಗಸ್ಟ್ 6ರ ಸೋಮವಾರದಂದು "ಲಿಟ್ಲ್ ಬಾಯ್" ಎಂಬ ಹೆಸರಿನ ಪರಮಾಣು ಶಸ್ತ್ರಾಸ್ತ್ರವನ್ನು ಹಿರೋಷಿಮಾ ನಗರದ ಮೇಲೆ U.S. ಬೀಳಿಸಿತು; ಇದಾದ ನಂತರ ಆಗಸ್ಟ್ 9ರಂದು ನಾಗಸಾಕಿಯ ಮೇಲೆ "ಫ್ಯಾಟ್ ಮ್ಯಾನ್"ನ ಆಸ್ಫೋಟನವನ್ನು ಅದು ನಡೆಸಿತು.
ಮಾಪಣ್ಣ ಮಲ್ಲಿಕಾರ್ಜುನ್ ಖರ್ಗೆ (ಜನನ 21 ಜುಲೈ 1942) ಒಬ್ಬ ಭಾರತೀಯ ರಾಜಕಾರಣಿಯಾಗಿದ್ದು, 16 ನೇ ಲೋಕಸಭೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದಾರೆ. ಇವರು ಭಾರತ ಸರ್ಕಾರದಲ್ಲಿ ಮಾಜಿ ರೈಲ್ವೆ ಸಚಿವರಾಗಿದ್ದರು ಮತ್ತು ಕಾರ್ಮಿಕ ಮತ್ತು ಉದ್ಯೋಗ ಸಚಿವರಾಗಿದ್ದರು. ಖರ್ಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯ ಮತ್ತು 2009 ರಿಂದ ಸಂಸತ್ತಿನ ಗುಲ್ಬರ್ಗಾ ಲೋಕಸಭಾ ಕ್ಷೇತ್ರದಿಂದ ಸದಸ್ಯ.
ಅಬ್ದುಲ್ ರಷೀದ್ ಸಲೀಮ್ ಸಲ್ಮಾನ್ ಖಾನ್ (ಹಿಂದಿ:सलमान ख़ान, ಉರ್ದು: سلمان خان, ಎಂದು ಉಚ್ಚರಿಸಲಾಗುವ ಬಾಲಿವುಡ್ ಚಲನಚಿತ್ರಗಳಲ್ಲಿ ಅಭಿನಯಿಸಿದ ಭಾರತೀಯ ಚಿತ್ರ ನಟನಜನ್ಮ ದಿನ ಡಿಸೆಂಬರ್ 27ಡಿಸೆಂಬರ್ 27 1965. ಸಲ್ಮಾನ್ ಖಾನ್ ಅಭಿನಯಿಸಿದ ಮೊದಲ ಚಿತ್ರ 'ಬಿವಿ ಹೊ ತೊ ಐಸಿ' (1988).ಖಾನ್ನ ಮೊದಲ ಯಶಸ್ವೀ ಚಿತ್ರ ಮೈನೆ ಪ್ಯಾರ್ ಕಿಯಾ (1989) ಗಳಿಕೆಯಲ್ಲಿ ಭರ್ಜರಿ ಯಶಸ್ವಿಯಾಗಿ, ಚಿತ್ರದಲ್ಲಿನ ಅವರ ಅಭಿನಯಕ್ಕೆ ಫಿಲ್ಮ್ಫೇರ್ ಮೊದಲ ಅತ್ಯುತ್ತಮ ನಟ ಪ್ರಶಸ್ತಿ ದೊರೆಯಿತು. ಸಾಜನ್ (1991), ಹಮ್ ಅಪ್ಕೆ ಹೈ ಕೌನ್ (1994), ಬೀವಿ ನಂ.1 (1999) ಅಂತಹ ಕೆಲವು ಬಾಲಿವುಡ್ನ ಅತ್ಯಂತ ಯಶಸ್ವೀ ಚಿತ್ರಗಳಲ್ಲಿ ಅಭಿನಯಿಸಿದರು.
ಇಂಟರ್ನೆಟ್ವರ್ಕಿಂಗ್ ವ್ಯವಸ್ಥೆಯ ಬಳಕೆಯು ವ್ಯಾಪಕವಾಗಿ ಹರಡುವುದಕ್ಕೂ ಮುಂಚೆ ಇದ್ದ ನೆಟ್ವರ್ಕಿಂಗ್ ವ್ಯವಸ್ಥೆಯು ಇಂಟರ್ನೆಟ್ (=ಅಂತರ್ಜಾಲ) ಉಗಮಕ್ಕೆ ಕಾರಣವಾಯಿತು. ಮೊದಲು ಹೆಚ್ಚಿನ ಸಂವಹನ ನೆಟ್ವರ್ಕ್ಗಳು ತಮ್ಮದೇ ಆದ ಮಿತಿಗಳನ್ನು ಹೊಂದಿದ್ದು, ಸ್ಥಳೀಯ ನೆಟ್ವರ್ಕ್ಗಳಲ್ಲಿ ಎರಡು ಸ್ಥಳಗಳ (ಕೇಂದ್ರ) ನಡುವೆ ಸಂವಹನ ನಡೆಸಲು ಮಾತ್ರ ಅವುಗಳು ಅನುವು ಮಾಡಿಕೊಡುತ್ತಿತ್ತು. ಪ್ರಮುಖ ಕಂಪ್ಯೂಟರ್ ನೆಟ್ವರ್ಕಿಂಗ್ ವಿಧಾನಗಳು ಕೇಂದ್ರೀಯ ಮೇನ್ಫ್ರೇಮ್ ಕಂಪ್ಯೂಟರ್ ಮಾದರಿಯನ್ನು ಆಧರಿಸಿದೆ.
ತ್ರಿಪದಿ ಲಕ್ಷಣ :-- ತ್ರಿಪದಿ ಅಂದರೆ ಮೂರು ಸಾಲಿನ ಪದ್ಯ , ಇದು ಅಚ್ಚಕನ್ನಡದೇಸೀಮಟ್ಟಿನ ಛಂದಸ್ಸಾಗಿದೆ. ಇದರಲ್ಲಿ ಕೂಡ ಹಲವಾರು ಪ್ರಬೇಧಗಳಿದ್ದರೂ ಅಂಶಗಣ ಆಧಾರಿತ ತ್ರಿಪದಿಗಳೇ ಹೆಚ್ಚು ಪ್ರಾಮುಖ್ಯತೆ ಪಡೆದಿವೆಸರ್ವಜ್ಞನ ವಚನಗಳಲ್ಲಿ ಮಾತ್ರಾಗಣಗಳ ಆಧಾರದ ಮೇಲೆ ಕೂಡ ತ್ರಿಪದಿಗಳನ್ನು ರಚಿಸಿರುವುದು ಕಂಡುಬರುತ್ತದೆ. ಅಲ್ಲಿ ಐದು ಮಾತ್ರೆಗಳ ಗಣಗಳನ್ನು ನಾವು ಕಾಣಬಹುದು ಅಂಶಗಣ ಆಧಾರಿತ ತ್ರಿಪದಿಗಳಲ್ಲಿ ಹಲವು ವೈವಿಧ್ಯಗಳಿದ್ದರೂ ಜಾನಪದ ಒನಕೆವಾಡು,ಬೀಸುವಕಲ್ಲಿನ ಹಾಡುಗಳಲ್ಲೆಲ್ಲ ಕಂಡುಬರುವ ಸಾಮಾನ್ಯ ತ್ರಿಪದಿಯ ಲಕ್ಷಣ ಹೀಗಿದೆ ಮೊದಲ ಸಾಲಿನಲ್ಲಿ ನಾಲ್ಕು ವಿಷ್ಣುಗಣಗಳು ಹಾಗೇ ಎರಡನೇ ಸಾಲಿನಲ್ಲಿ ನಾಲ್ಕುಗಣಗಳಲ್ಲಿ ಎರಡನೇ ಗಣ ಬ್ರಹ್ಮಗಣ ಹಾಗೂ ಉಳಿದವು ವಿಷ್ಣುಗಣಗಳು, ಮೂರನೇ ಸಾಲಿನಲ್ಲಿ ಮೂರುಗಣಗಳೂ, ಅದರಲ್ಲಿಯೂ ಎರಡನೇ ಗಣ ಬ್ರಹ್ಮಗಣವಾಗಿರುತ್ತದೆ.
ತಂಬಾಕು ಉರಿಸಿ ಅದರ ಹೊಗೆಯ ರುಚಿ ತೆಗೆದುಕೊಳ್ಳುವ ಅಥವಾ ಉಸಿರಿನ ಮೂಲಕ ಒಳತೆಗೆದುಕೊಳ್ಳುವುದನ್ನು ತಂಬಾಕು ಸೇವನೆ ಯೆಂದು ಕರೆಯಲಾಗುತ್ತದೆ. ಈ ಅಭ್ಯಾಸವು ಕ್ರಿ.ಪೂ 5000–3000ದಷ್ಟು ಹಿಂದೆಯೇ ರೂಢಿಯಲ್ಲಿತ್ತು BC. ಹಲವಾರು ನಾಗರೀಕತೆಗಳ ಧಾರ್ಮಿಕ ಆಚರಣೆಗಳ ಸಂದರ್ಭದಲ್ಲಿ ಧೂಪವುರಿಸುತ್ತಿದ್ದು, ಇದು ಮುಂದೆ ಉಪಭೋಗದ ಅಥವಾ ಸಾಮಾಜಿಕ ಸಾಧನವಾಗಿ ಬಳಕೆಯಾಗತೊಡಗಿತು. ಪ್ರಾಚೀನ ವಿಶ್ವದಲ್ಲಿ ತಂಬಾಕನ್ನು 1500ರ ಅಂತ್ಯಭಾಗದ ವೇಳೆಗೆ ಪರಿಚಯಿಸಲಾಯಿತು ಮತ್ತು ಇದು ವ್ಯಾಪಾರ ಮಾರ್ಗಗಳ ಮುಖಾಂತರ ಬೇರೆ ಸ್ಥಳಗಳನ್ನು ತಲುಪತೊಡಗಿತು.
ಕರ್ನಾಟಕ ವಿಧಾನಸಭೆ ಚುನಾವಣೆ, ೨೦೧೮
ಕರ್ನಾಟಕ ವಿಧಾನಸಭೆಯು ೨೨೪ ಸದಸ್ಯರ ಸದಸ್ಯ ಬಲವನ್ನು ಹೊಂದಿದೆ. ೨೨೪ ಸದಸ್ಯ ಬಲವುಳ್ಳ ೧೫ ನೇ ಕರ್ನಾಟಕ ವಿಧಾನಸಭೆಯ 222ವಿಧಾನಸಭಾ ಕ್ಷೇತ್ರಗಳಿಗೆ 12 ಮೇ 2018 ಶನಿವಾರ ಚುನಾವಣೆ ನೆಡೆಯಿತು. ಜಯನಗರ ಬಿಜೆಪಿ ಶಾಸಕ ವಿಜಯ್ ಕುಮಾರ್ ೨-೫-೨೦೧೮ ರಂದು ನಿಧನರಾದ್ದರಿಂದ ಮತ್ತು ರಾಜರಾಜೇಶ್ವರಿ ನಗರದಲ್ಲಿ ಮತದಾರರ ವಂಚನೆ ಹಗರಣದ ನಂತರ, ಈ ಎರಡು ಕ್ಷೇತ್ರಗಳ ಚುನಾವಣೆ ಮುಂದೂಡಲ್ಪಟ್ಟಿತು.
ಲಾಲ್ಬಾಗ್, ಕೆಂಪು ತೋಟ, ಬೆಂಗಳೂರು
ಲಾಲ್ಬಾಗ್,ಕೆಂಪು ತೋಟ, ಅಥವಾ ಲಾಲ್ಬಾಗ್ ಸಸ್ಯೋದ್ಯಾನ, ವರ್ಣರಂಜಿತ ಫಲ-ಪುಷ್ಪ-ಹಣ್ಣು-ಕಾಯಿಗಳಿಗೆ ಪ್ರಸಿದ್ಧವಾದ ಸಸ್ಯೋದ್ಯಾನ, ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿದೆ. ಈ ಉದ್ಯಾನವನವನ್ನು ನಿರ್ಮಿಸಲು ಮೈಸೂರಿನ ಆಡಳಿತ ನಡೆಸುತ್ತಿದ್ದ ಹೈದರಾಲಿ ಸೂಚಿಸಿದ್ದನು. ಇದು ಪ್ರಸಿದ್ಧ ಗಾಜಿನ ಮನೆಯನ್ನು ಹೊಂದಿದ್ದು ಪ್ರತಿ ವರ್ಷ ಸ್ವಾತಂತ್ರ್ಯೋತ್ಸವ ಮತ್ತು ಗಣರಾಜ್ಯೋತ್ಸವ ಸಮಯದಲ್ಲಿ ಫಲ ಪುಷ್ಪ ಪ್ರದರ್ಶನ ಏರ್ಪಡಿಸಲಾಗುತ್ತದೆ.
ಮಯೂರಶರ್ಮ (ಕಿ.ಪೂ. ೩೪೫-೩೬೫) ತಾಳಗುಂದ (ಆಧುನಿಕ ಕರ್ನಾಟಕದ ರಾಜ್ಯದ ಶಿವಮೊಗ್ಗ ಜಿಲ್ಲೆ) ಸ್ಥಳದ ಒಬ್ಬ ಬ್ರಾಹ್ಮಣ ಪಂಡಿತನಾಗಿದು ಬನವಾಸಿ ಕದಂಬ ವಂಶದ ಮೂಲ ವ್ಯಕ್ತಿಯಾಗಿರುತ್ತಾನೆ. ಬನವಾಸಿ ಕದಂಬರು ಹಳೆ ಕರ್ನಾಟಕದ ಮೊದಲ ರಾಜ ಮನೆತನವಾಗಿರುತ್ತದೆ.ಈ ವಂಶಸ್ಥರು ಬ್ರಾಹ್ಮಣ ಧರ್ಮದಿಂದ ಕ್ಷತ್ರಿಯ ಧರ್ಮಕ್ಕೆ ಬದಲಾವಣೆಗೊಂಡ ಕಾರಣಕ್ಕೆ ಮಯೂರಶರ್ಮನನ್ನು ಮಯೂರವರ್ಮನೆಂದು ಕರೆಯುತ್ತಾರೆ.
ಆಲ್ ಇಂಡಿಯಾ ರೇಡಿಯೋ (ಆಲ್ ಇಂಡಿಯಾ ರೇಡಿಯೋ (AIR ಎಂದು ಸಂಕ್ಷಿಪ್ತ ಗೊಳಿಸಲಾಗಿದೆ)),ವನ್ನು ಅಧಿಕೃತವಾಗಿ ಆಕಾಶವಾಣಿ ಎಂದು ಕರೆಯಲಾಗುತ್ತದೆ (ದೇವನಾಗರಿಯಲ್ಲಿ: आकाशवाणी, ākāshavānī), ಇದು ಭಾರತದ ರೇಡಿಯೋ ಪ್ರಸಾರ ಮಾಧ್ಯಮವಾಗಿದೆ ಹಾಗು ಪ್ರಸಾರ ಭಾರತಿಯ ವಿಭಾಗವಾಗಿದೆ. ಇದು 1936 ರಲ್ಲಿ ಸಂಸ್ಥಾಪಿಸಲಾಯಿತು. ಇಂದು ಇದು ರಾಷ್ಟ್ರೀಯ ದೂರದರ್ಶನ ಪ್ರಸಾರವಾಗಿರುವ , ಪ್ರಸಾರ ಭಾರತಿಯ ದೂರದರ್ಶನದ ಸಹಯೋಗಿಯಂತೆ ಸೇವೆಸಲ್ಲಿಸುತ್ತಿದೆ.
ಕೆಲ ಪರಿಸ್ಥಿತಿಗಳಲ್ಲಿ ಒಂದು ದೇಶದ ಸರ್ಕಾರವು ತನ್ನ ಕೆಲವು ನಿಯಮಿತ ಕಾರ್ಯಗಳನ್ನು ಸ್ಥಗಿತಗೊಳಿಸಿ ಪ್ರಜೆಗಳ ವ್ಯವಹಾರಗಳ ಮೇಲೆ ಕೆಲವು ನಿಯಮಗಳನ್ನು ಅಥವ ನಿಯಂತ್ರಣಗಳನ್ನು ತರಬಹುದು. ಇಂತಃ ಪರಿಸ್ಥಿತಿಗಳಿಗೆ ತುರ್ತು ಪರಿಸ್ಥಿತಿ ಎಂದು ಹೆಸರು. ಈ ಘೋಷಣೆಯು ನೈಸರ್ಗಿಕ ವಿಕೋಪಗಳಿಗಿರಬಹುದು, ಯುದ್ಧಕಾಲ ಅಥವ ಪರದೇಶದ ಆಕ್ರಮಣದಿಂದಿರಬಹುದು ಅಥವ ಸಾರ್ವಜನಿಕ ಅಶಾಂತಿಯ ಪರಿಸ್ಥಿತಿಗಾಗಿರಬಹುದು.
ಬಾಯಿಯ ಕ್ಯಾನ್ಸರ್ ಅಥವಾ ಬಾಯಿ ಕುಳಿಯ ಕ್ಯಾನ್ಸರ್ ಎನ್ನುವುದು ತಲೆ ಮತ್ತು ಕತ್ತಿನ ಕ್ಯಾನ್ಸರ್ನ ಉಪಪ್ರಕಾರವಾಗಿದ್ದು, ಬಾಯಿಯ ಕುಳಿಯಲ್ಲಿ ನೆಲಸಿರುವ ಯಾವುದೇ ಕ್ಯಾನ್ಸರ್ನ ಅಂಗಾಂಶದ ಬೆಳವಣಿಗೆಯಾಗಿದೆ. ಮೂಲದಿಂದ ದೂರದ ಸ್ಥಳದಿಂದ ವರ್ಗಾವಣೆಯ ಕಾರಣದಿಂದ ಯಾವುದೇ ಬಾಯಿಯ ಅಂಗಾಶಗಳಿಂದ ಉತ್ಪನ್ನವಾಗುವ ಮೂಲಭೂತ ಗಾಯವಾಗಿ ಅಥವಾ ಮೂಗಿನ ಕುಳಿ ಅಥವಾ ದವಡೆ ಎಲುಬಿನ ಸೈನಸ್ನಂತಹ ನೆರೆಹೊರೆಯ ಅಂಗರಚನೆಗಳ ವಿಸ್ತರಣೆಯಾಗಿ ಉದ್ಭವಿಸಬಹುದು. ಬಾಯಿಯ ಯಾವುದೇ ಅಂಗಾಶಗಳಿಂದ ಬಾಯಿಯ ಕ್ಯಾನ್ಸರ್ ಉದ್ಭವಿಸಬಹುದು ಮತ್ತು ವಿವಿಧ ಹಿಸ್ಟೋಲೋಜಿಕ್ ಪ್ರಕಾರದಲ್ಲಿರಬಹುದು: ಟೆರಾಟೋಮಾ, ಅಡೆನೋಕಾರ್ಸಿನೋಮಾ ಬೃಹತ್ ಅಥವಾ ಸಣ್ಣ ಗಾತ್ರದ ಲಾಲಾ ಗ್ರಂಥಿಯ ಮೂಲಕ ಉದ್ಭವಿಸಿರುವುದು, ಗಲಗ್ರಂಥಿಗಳು ಅಥವಾ ಇತರ ದುಗ್ಧ ಗ್ರಂಥಿಗಳಿಂದ ಉದ್ಭವಿಸಿದ ದುಗ್ಧ ಗ್ರಂಥಿಯ ಗಂಟು ಅಥವಾ ಬಾಯಿಯ ಲೋಳೆಪೊರೆಯ ವರ್ಣದ್ರವ್ಯಗಳನ್ನು ಉತ್ಪಾದಿಸುವ ಕೋಶಗಳಿಂದ ಮೆಲನೋಮಾ.
ಮುಹಮ್ಮದ್ ಇಬ್ನ್ ಆಬ್ದುಲ್ಲಾಹ್ (محمد (ಸು. ೫೭೦ ಮೆಕ್ಕಾ - ಜೂನ್ ೮, ೬೩೨ ಮದೀನ), ಇಸ್ಲಾಂ ಧರ್ಮದ ಪ್ರಕಾರ ಅಲ್ಲಾಹನ ಕೊನೆಯ ಪ್ರವಾದಿ ಮತ್ತು ಇವರು ಹೊಸ ಧರ್ಮವನ್ನು ಸೃಷ್ಟಿಸಿದವರಲ್ಲ; ಆದರೆ ಆಡಮ್, ಅಬ್ರಾಹಮ್ ಇತ್ಯಾದಿ ಪ್ರವಾದಿಗಳಿಂದ ಸೃಷ್ಟಿಸಲಾದ ಮೂಲ ಧರ್ಮವನ್ನು ಪುನರ್ಸ್ಥಾಪನೆ ಮಾಡಿದವರು.ಮುಹಮ್ಮದ್(ಸ) ರ ಜನನ ರಬೀಉಲ್ ಅವ್ವಲ್ ೯ನೇ ದಿನಾಂಕ ಕ್ರಿ.ಶ. ೫೭೧ರ ಎಪ್ರೀಲ್ ೨೦ ರಂದು ಮಕ್ಕಾ ಪಟ್ಟಣದಲ್ಲಿ ಆಗುತ್ತದೆ.ಇವರು ಇಡೀ ವಿಶ್ವದ ಪ್ರಭುವಾದ ಅಲ್ಲಾಹನ ವತಿಯಿಂದ ಬಂದಂತಹ ಪ್ರವಾದಿಯೂ ಲೋಕನಾಯಕರೂ ಆಗಿದ್ದಾರೆ.
ಕನ್ನಡ ಚಿತ್ರರಂಗವು ಕರ್ನಾಟಕದಲ್ಲಿ ರಚಿಸಲಾಗುವ ಚಲನಚಿತ್ರಗಳನ್ನು ಒಳಗೊಂಡಿದೆ.ಕನ್ನಡ ಚಿತ್ರರಂಗವು ಮೂಲತಹ ರಂಗಭೂಮಿ ಯನ್ನು ಅವಲಂಬಿಸಿ ಆರಂಭವಾಯಿತು ಪ್ರಮುಖವಾಗಿ ಕನ್ನಡ ಚಿತ್ರಗಳು ಮತ್ತು ಕೆಲವು ತುಳು ಹಾಗು ಕೊಂಕಣಿ ಭಾಷೆಗಳ ಚಿತ್ರಗಳು ಈ ಚಿತ್ರರಂಗಕ್ಕೆ ಸೇರುತ್ತವೆ. ೧೯೩೪ರಲ್ಲಿ ತೆರೆ ಕಂಡ "ಸತಿ ಸುಲೋಚನ" ಮೊದಲ ಕನ್ನಡ ಚಿತ್ರ.ಕನ್ನಡ ಮೊದಲ ವರ್ಣಮಯ ಚಿತ್ರ [(‘ಅಮರಶಿಲ್ಪಿ ಜಕ್ಕಣಾಚಾರಿ’]).[( "ಮೂರು ದಾರಿಗಳು"]) ಇದು ಕನ್ನಡ ಚಿತ್ರರಂಗದ ಕೊನೆಯ ಕಪ್ಪುಬಿಳುಪು ಚಲನಚಿತ್ರ.೧೯೫೪ರಲ್ಲಿ ಬಿಡುಗಡೆ ಹೊಂದಿದ "ಬೇಡರ ಕಣ್ಣಪ್ಪ" ಈ ಚಿತ್ರರಂಗದ ಪ್ರಮುಖ ನಟರಾದ ರಾಜಕುಮಾರ್ ಅವರ ಮೊದಲ ಚಿತ್ರ. ಕರ್ನಾಟಕದಲ್ಲಿ ‘ವಸಂತಸೇನಾ ಚಿತ್ರಕ್ಕೆ ಮೊದಲು ಮೂಕಿ ಚಿತ್ರಗಳು ತಯಾರಾಗಿದ್ದವು.
ಸ್ಟಾಕ್ ಮಾರುಕಟ್ಟೆ ಅಥವಾ ಷೇರು ಮಾರುಕಟ್ಟೆ ಷೇರುಗಳು (ಷೇರುಗಳನ್ನು) ಕೊಳ್ಳುವವರು ಮತ್ತು ಮಾರುವವರು ಸಮೂಹದ (ಆರ್ಥಿಕ ವ್ಯವಹಾರಗಳ ಸಡಿಲ ನೆಟ್ವರ್ಕ್, ಒಂದು ಭೌತಿಕ ಸೌಲಭ್ಯ ಅಥವಾ ಪ್ರತ್ಯೇಕವಾದ ಘಟಕದ) ಆಗಿದೆ;ಈ ಒಂದು ಶೇರು ವಿನಿಮಯ ಕೇಂದ್ರದಲ್ಲಿ ಪಟ್ಟಿ ಭದ್ರತಾ ಪತ್ರಗಳ ಹಾಗೂ ಮಾತ್ರ ಖಾಸಗಿಯಾಗಿ ವ್ಯಾಪಾರ ಹೊಂದಿರುತ್ತವೆ. ವಿಶ್ವದ ಸ್ಟಾಕ್ ಮಾರುಕಟ್ಟೆ ಗಾತ್ರ ಅಕ್ಟೋಬರ್ 2008 ಆರಂಭದಲ್ಲಿ ಸುಮಾರು $ 36.6 ಟ್ರಿಲಿಯನ್ ಎಂದು ಅಂದಾಜಿಸಲಾಗಿದೆ.ಒಟ್ಟು ವಿಶ್ವದ ಉತ್ಪನ್ನ ಮಾರುಕಟ್ಟೆಯಲ್ಲಿ ಸುಮಾರು $ 791 ಟ್ರಿಲಿಯನ್ ಮುಖ ಅಥವಾ ಮುಖಬೆಲೆ ಎಂದು ಅಂದಾಜಿಸಲಾಗಿದೆ.ಇದು ಇಡೀ ವಿಶ್ವದ ಆರ್ಥಿಕತೆಯ 11 ಬಾರಿ ಗಾತ್ರ ಪ್ರಮುಖ ವಿನಿಮಯ ಕೇಂದ್ರಗಳು, ಆಂಸ್ಟರ್ಡ್ಯಾಮ್ ಸ್ಟಾಕ್ ಎಕ್ಸ್ಚೇಂಜ್, ಲಂಡನ್ ಸ್ಟಾಕ್ ಎಕ್ಸ್ಚೇಂಜ್, ನ್ಯೂಯಾರ್ಕ್ ಸ್ಟಾಕ್ ಎಕ್ಸ್ಚೇಂಜ್, ಪ್ಯಾರಿಸ್ ಬರ್ಸ್, ಡಾಯ್ಚಿ ಬೋರ್ಸ್ಗೆ (ಫ್ರಾಂಕ್ಫರ್ಟ್ ವಿನಿಮಯ), ಟೊರೊಂಟೊ ಸ್ಟಾಕ್ ಎಕ್ಸ್ಚೇಂಜ್, ಫಿಲಿಫೈನ್ ಸ್ಟಾಕ್ ಎಕ್ಸ್ಚೇಂಜ್, ಸಿಂಗಾಪುರ್ ಎಕ್ಸ್ಚೇಂಜ್, ಟೋಕಿಯೋ ಸ್ಟಾಕ್ ಎಕ್ಸ್ಚೇಂಜ್ ಹಾಂಗ್ ಕಾಂಗ್ ಸ್ಟಾಕ್ ಎಕ್ಸ್ಚೇಂಜ್, ಶಾಂಘಾಯ್ ಸ್ಟಾಕ್ ಎಕ್ಸ್ಚೇಂಜ್, ಬಾಂಬೆ ಸ್ಟಾಕ್ ಎಕ್ಸ್ಚೇಂಜ್ ನೈಜೀರಿಯನ್ ಸ್ಟಾಕ್ ಎಕ್ಸ್ಚೇಂಜ್, JSE ಲಿಮಿಟೆಡ್. ಲ್ಯಾಟಿನ್ ಅಮೆರಿಕದಲ್ಲಿ, BM & F ಬೊವೆಸ್ಪಾ ಮತ್ತು ವೇ ಮುಂತಾದ ವಿನಿಮಯ ಇವೆ.
ಮಂಗಳೂರು ಸಮಾಚಾರ ಕನ್ನಡದ ಮೊದಲ ಪತ್ರಿಕೆ.ಮಂಗಳೂರಿನಲ್ಲಿ ಕನ್ನಡ ಪತ್ರಿಕೋದ್ಯಮದ ಪ್ರಾರಂಭ ಬಾಸೆಲ್ ಮಿಶನ್ ಸಂಸ್ಥೆಯಿಂದ ನಡೆಯಿತು.ಮಂಗಳೂರು ಸಮಾಚಾರ ವಾರಪತ್ರಿಕೆಯ ಜುಲೈ ೧ ೧೮೪೧ರಲ್ಲಿ ಮೊದಲಿಗೆ ಪ್ರಕಟ. ಇದರ ಸಂಪಾದಕ ಹೆರ್ಮನ್ ಮ್ಯೋಗ್ಲಿಂಗ್ 17೩ ವರ್ಷಗಳ ದೀರ್ಘ ಇತಿಹಾಸ ಹೊಂದಿರುವÀ ಕನ್ನಡ ಪತ್ರಿಕೋದ್ಯಮ ಪ್ರಾರಂಭವಾದದ್ದು ತುಳುನಾಡಿನ ಮಂಗಳೂರಿನಲ್ಲಿ ಎನ್ನುವುದು ನಮ್ಮೆಲ್ಲರಿಗೆ ಹೆಮ್ಮೆಯ ವಿಚಾರ 1843ರಲ್ಲಿ 'ಮಂಗಳೂರು ಸಮಾಚಾರ' ವೆಂಬ ಹೆಸರಿನಲ್ಲಿ ಪ್ರಾರಂಭಗೊಂಡ ಕನ್ನಡ ವಾರ ಪತ್ರಿಕೆಯಿಂದ ಕನ್ನಡ ಪತ್ರಿಕೋದ್ಯಮ ಚರಿತ್ರೆ ಕರ್ನಾಟಕದಲ್ಲಿ ಆರಂಭವಾಗುತ್ತದೆ. ಪಾಶ್ಚಾತ್ಯ ಪ್ರಪಂಚದಲ್ಲಿ ಜನಜೀವನದ ಮೇಲೆ ಮುದ್ರಣದ ಪ್ರಬಾವವು ಮೂರು ನಾಲ್ಕು ಶತಮಾನಗಳಿಂದ ಉಂಟಾಗಿದ್ದರೂ ನಮ್ಮಲ್ಲಿ ಈ ವ್ಯವಸ್ಥೆ ಒಂದೂವರೆ ಶತಮಾನದ ಈಚಿನದು.
ಏಕತೆ ಪ್ರತಿಮೆ ಎಂಬುದು ಭಾರತದ ಸ್ವಾತಂತ್ರ್ಯ ಹೋರಾಟಗಾರ ಮತ್ತು ರಾಜಕಾರಣಿ ಸರ್ದಾರ್ ವಲ್ಲಭಭಾಯ್ ಪಟೇಲ್ (೧೮೭೫-೧೯೫೦) ಅವರ ಪ್ರತಿಮೆಯಾಗಿದೆ. ಪ್ರಸ್ತುತ ಇದು ೧೮೨ ಮೀಟರ್ (೫೯೭ ಫ಼ೀಟ್) ನಷ್ಟು ಎತ್ತರವಿದ್ದು ವಿಶ್ವದ ಅತಿ ಎತ್ತರದ ಪ್ರತಿಮೆಯ ದಾಖಲೆಯನ್ನು ಹೊಂದಿದೆ. ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ವಲ್ಲಭಭಾಯಿ ಪಟೇಲ್ ಪ್ರಮುಖ ನಾಯಕರಾಗಿದ್ದರು ಮತ್ತು ಭಾರತದ ಮೊದಲ ಉಪ ಪ್ರಧಾನ ಮಂತ್ರಿಯಾಗಿದ್ದರು.
ಕರ್ತವ್ಯ ಎಂದರೆ ಸಾಮಾನ್ಯವಾಗಿ ಅಥವಾ ನಿರ್ದಿಷ್ಟ ಸಂದರ್ಭಗಳು ಉದ್ಭವಿಸಿದರೆ ಯಾವುದೋ ಕ್ರಿಯೆಯನ್ನು ನೆರವೇರಿಸಲು ಬದ್ಧತೆ ಅಥವಾ ನಿರೀಕ್ಷೆ. ಕರ್ತವ್ಯವು ನೈತಿಕತೆ ಅಥವಾ ನೀತಿಶಾಸ್ತ್ರದ ವ್ಯವಸ್ಥೆಯಿಂದ ಉದ್ಭವಿಸಬಹುದು, ವಿಶೇಷವಾಗಿ ಗೌರವ ಸಂಸ್ಕೃತಿಯಲ್ಲಿ. ಅನೇಕ ಕರ್ತವ್ಯಗಳು ಕಾನೂನಿನಿಂದ ಸೃಷ್ಟಿಯಾಗಿ ಅದರ ಮೇಲೆ ಆಧಾರಿತವಾಗಿರುತ್ತವೆ ಮತ್ತು ಅವನ್ನು ನೆರವೇರಿಸದಿರುವುದಕ್ಕೆ ಕ್ರೋಢೀಕೃತ ಶಿಕ್ಷೆ ಅಥವಾ ಬಾಧ್ಯತೆಯನ್ನು ಒಳಗೊಳ್ಳುತ್ತವೆ.
ಯುನೆಸ್ಕೋ ( ವಿಶ್ವಸಂಸ್ಥೆಯ ಸಾಂಸ್ಕೃತಿಕ ಅಂಗ) ವಿಶ್ವದ ಕೆಲವು ವಿಶಿಷ್ಟ ತಾಣಗಳನ್ನು ವಿಶ್ವ ಪರಂಪರೆಯ ತಾಣವಾಗಿ ಘೋಷಿಸುತ್ತದೆ. ಇಂತಹ ತಾಣಗಳು ಅರಣ್ಯ, ಪರ್ವತ, ಸರೋವರ, ಮರುಭೂಮಿ, ಸ್ಮಾರಕ, ಕಟ್ಟಡ, ಸಂಕೀರ್ಣ ಅಥವಾ ಒಂದು ನಗರವಾಗಿರಬಹುದು. ೨೧ ಸದಸ್ಯರಾಷ್ಟ್ರಗಳನ್ನೊಳಗೊಂಡ ಯುನೆಸ್ಕೋ ವಿಶ್ವ ಪರಂಪರೆಯ ತಾಣ ಸಮಿತಿಯು ಇಂತಹ ತಾಣಗಳ ಅರ್ಹತೆಯನ್ನು ಅಳೆದು ಸೂಕ್ತವಾದಲ್ಲಿ ವಿಶ್ವ ಪರಂಪರೆಯ ತಾಣಗಳ ಪಟ್ಟಿಗೆ ಸೇರಿಸುತ್ತದೆ.
ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗಗಳು
ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗಗಳು ಹಿಂದುಳಿದ ವರ್ಗಗಳೆಂದು ಪರಿಗಣಿತವಾದ ಜಾತಿಗಳು ಮತ್ತು ಸಮುದಾಯಗಳ ಉನ್ನತಿಗಾಗಿ ಕರ್ನಾಟಕ ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಆಯೋಗಗಳನ್ನು ರಚಿಸಿದೆ. ಹತ್ತೊಂಬತ್ತನೆಯ ಶತಮಾನದ ಉತ್ತರಾರ್ಧದಲ್ಲಿ ಹಿಂದುಳಿದ ವರ್ಗಗಳೆಂಬ ಪರಿಕಲ್ಪನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬಂತು. ಅದುವರೆಗೂ ಬ್ರಿಟಿಷರ ನೇರ ಅಧೀನದ ಪ್ರಾಂತಗಳಲ್ಲಿ ಮತ್ತು ಸಂಸ್ಥಾನಗಳಲ್ಲಿ ಸರ್ಕಾರಿ ನೌಕರಿಗಳನ್ನು ವಿವೇಚನೆಯ ಮತ್ತು ಅರ್ಹತೆಯ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿತ್ತು.
ಸಂಶೋಧನೆ ಎಂಬುದನ್ನು ಜ್ಞಾನದ ಸಲುವಾಗಿ ನಡೆಸುವ ಹುಡುಕಾಟ ಎಂದು ವ್ಯಾಖ್ಯಾನಿಸಬಹುದು,ಅಥವಾ ಮುಕ್ತ ಮನಸ್ಸಿನಿಂದ ಯಾವುದೇ ಶಿಸ್ತುಬದ್ದ ಶೋಧನೆ,ತನಿಖೆ ಮೂಲಕ ನವೀನ ಸಂಗತಿಗಳ ಹುಟ್ಟುಹಾಕಿ ಹೊಸ ಅಥವಾ ಅಸ್ತಿತ್ವದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು.ಒಂದು ವೈಜ್ಞಾನಿಕ ಪದ್ದತಿಯಂತೆ ಹೊಸ ಸಿದ್ದಾಂತಗಳ ಅಭಿವೃದ್ಧಿಪಡಿಸುವಿಕೆಯೇ ಸಂಶೋಧನೆಯಾಗಿದೆ. ಮೂಲಭೂತ ಸಂಶೋಧನೆಯ ಪ್ರಾಥಮಿಕ ಉದ್ದೇಶವೆಂದರೆ, (ಅದನ್ನು ಅನ್ವಯಿಕ ಸಂಶೋಧನೆಗೆ ವಿರೋಧವೆನ್ನಲಾಗುತ್ತದೆ.)ಆವಿಷ್ಕಾರಗೊಳಿಸುವಿಕೆ,ವಿವರವಾಗಿ ಅರ್ಥೈಸುವಿಕೆ ಮತ್ತು ಅಭಿವೃದ್ಧಿ ಮೂಲಕ ಮನುಷ್ಯನ ಜ್ಞಾನವನ್ನು ನಿರ್ಧಿಷ್ಟ ಪದ್ದತಿ ಮತ್ತು ಶಿಸ್ತುಗಳಿಗೆ ಅಳವಡಿಸುವುದೇ ಆಗಿದೆ.ನಮ್ಮ ಜಗತ್ತು ಮತ್ತು ಬ್ರಹ್ಮಾಂಡದಲ್ಲಿನ ವೈಜ್ಞಾನಿಕ ಭೌತಿಕ ವಸ್ತುಗಳ ಮೇಲೆ ವಿಸ್ತಾರವಾದ ತಿಳಿವಳಿಕೆ ಪಡೆಯುವುದು. ವೈಜ್ಞಾನಿಕ ಸಂಶೋಧನೆ ಯು ವೈಜ್ಞಾನಿಕ ಪದ್ದತಿಯ ಅಳವಡಿಕೆಯನ್ನು ಅವಲಂಬಿಸಿದೆ.ಈ ಮೂಲಕ ಅದು ಕುತೂಹಲವನ್ನು ಬಡಿದೆಬ್ಬಿಸಿ ಫಲಿತಾಂಶಕ್ಕಾಗಿ ಸಜ್ಜುಗೊಳಿಸುತ್ತದೆ.
ಅಭಿಮನ್ಯು ಮಹಾಭಾರತದಲ್ಲಿ ಅರ್ಜುನ ಮತ್ತು ಸುಭದ್ರೆಯರ ಮಗ. ಮಹಾಭಾರತ ಯುದ್ಧದಲ್ಲಿ ದ್ರೋಣಾಚಾರ್ಯರು ರಚಿಸಿದ ಚಕ್ರವ್ಯೂಹವನ್ನು ಭೇದಿಸಿ (ಅದರಿಂದ ಹೊರಗೆ ಬರುವುದು ಗೊತ್ತಿರದಿದ್ದರೂ), ಒಳಗೆ ನುಗ್ಗಿ ಅನೇಕ ವೀರಾಧಿ-ವೀರರನ್ನು ಕೊಂದು, ದ್ರೋಣ, ಕರ್ಣ, ದುರ್ಯೋಧನ, ದುಃಶಾಸನ ಮುಂತಾದ ಅತಿರಥ-ಮಹಾರಥರಿಗೆ ಸಮನಾಗಿ ಹೋರಾಡಿ ನಂತರ, ವಂಚನೆಗೊಳಗಾಗಿ ಚಕ್ರವ್ಯೂಹವನ್ನು ಭೇದಿಸಲಾಗದೆ ವೀರಮರಣವನ್ನು ಹೊಂದಿದನು.
ದೆಹಲಿ , ಸ್ಥಳೀಯವಾಗಿ ದಿಲ್ಲಿ ಎಂದೇ ಹೆಸರಾಗಿರುವ ಹಿಂದಿ:दिल्ली ಪಂಜಾಬಿ:ਦਿੱਲੀ ಉರ್ದು: دلّی dillī ಮತ್ತು ಅಧಿಕೃತವಾಗಿ ನ್ಯಾಷನಲ್ಉರ್ದು: دلّی ಕ್ಯಾಪಿಟಲ್ ಟೆರಿಟರಿ ಆಫ್ ಡೆಲ್ಲಿ (ಎನ್.ಸಿ.ಟಿ) ಎಂದು ಕರೆಯಲ್ಪಡುವ ರಾಷ್ಟ್ರೀಯ ರಾಜಧಾನಿ ನಗರವು ಪ್ರಾದೇಶಿಕವಾಗಿ ಭಾರತದಲ್ಲೇ ಅತಿ ದೊಡ್ಡ ಮಹಾನಗರ ಮತ್ತು ಜನಸಂಖ್ಯೆಯಲ್ಲಿ ಎರಡನೇ ಅತಿ ದೊಡ್ಡ ಮಹಾನಗರವಾಗಿದೆ. ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ೧೨.೨೫ ದಶಲಕ್ಷಕ್ಕೂ ಮಿಕ್ಕಿ ನಿವಾಸಿಗಳು ಮತ್ತು ೧೫.೯ ದಶಲಕ್ಷ ನಗರವಾಸಿಗಳನ್ನು ಹೊಂದಿರುವ ದೆಹಲಿ ಜನಸಂಖ್ಯೆಯಲ್ಲಿ ಜಗತ್ತಿನಲ್ಲೇ ಎಂಟನೇ ದೊಡ್ಡ ನಗರವಾಗಿದೆ. (ಇದರಲ್ಲಿ ನೋಯ್ಡಾ, ಗುರ್ಗಾಂವ್, ಫರಿದಾಬಾದ್ ಮತ್ತು ಘಜೀಯಾಬಾದ್ ಸೇರಿವೆ).
ಕೆಳದಿ ನಾಯಕರು, ಬೇಡನೊರೆ ನಾಯಕರು , ಇಕ್ಕೇರಿ ರಾಜರು (1499-1763) ಕರ್ನಾಟಕ ರಾಜ್ಯವನ್ನಾಳಿದ ಭಾರತೀಯ ರಾಜವಂಶ. ಇದು ಕರ್ನಾಟಕ ರಾಜ್ಯದ ಶಿವಮೊಗ್ಗ ಜಿಲ್ಲೆಯ ಕೆಳದಿಯಲ್ಲಿ ರಾಜಧಾನಿಯಾಗಿತ್ತು.ಮಧ್ಯಕಾಲೀನ ನಂತರದ ಕರ್ನಾಟಕದಲ್ಲಿ ಇದು ಪ್ರಮುಖ ಪ್ರಮುಖ ರಾಜವಂಶವಾಗಿತ್ತು.ಅವರು ಆರಂಭದಲ್ಲಿ ಪ್ರಸಿದ್ಧ ವಿಜಯನಗರ ಸಾಮ್ರಾಜ್ಯದ ಸಾಮಂತರಾಗಿ ಆಳಿದರು.೧೫೬೫ ರಲ್ಲಿ ವಿಜಯನಗರ ಸಾಮ್ರಾಜ್ಯದ ಪತನದ ನಂತರ ದಕ್ಷಿಣ ಭಾರತದಲ್ಲಿ ಉದ್ಭವಿಸಿದ ಗೊಂದಲದ ಸಮಯದಲ್ಲಿ ಇವರು ಕರ್ನಾಟಕದ ಇತಿಹಾಸದಲ್ಲೇ ಪ್ರಮುಖ ಪಾತ್ರವಹಿಸಿ, ಶಿವಮೊಗ್ಗ ಸೇರಿದಂತೆ ಕರ್ನಾಟಕದ ಪ್ರಮುಖ ಭಾಗಗಳಲ್ಲಿ ಆಳ್ವಿಕೆ ನಡೆಸಿದರು (ಶಿವಮೊಗ್ಗ, ಕರಾವಳಿಯ ಎಲ್ಲಾ ಜಿಲ್ಲೆಗಳು, ಮಧ್ಯ ಭಾಗದ ಕೆಲವು ಜಿಲ್ಲೆಗಳು).ಸಾಮ್ರಾಜ್ಯ 1565 ರಲ್ಲಿ ನಂತರ, ಅವರು ಸ್ವಾತಂತ್ರ್ಯ ಪಡೆಯಿತು ಮತ್ತು ಉದ್ದಕ್ಕೂ ಗಮನಾರ್ಹ ಪಶ್ಚಿಮ ಘಟ್ಟಗಳ ಮಲೆನಾಡು ಪ್ರದೇಶದ ಈಗಿನ ಕರ್ನಾಟಕ, ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಮತ್ತು ಮತ್ತು ಭಾಗಗಳು ಹಲವು ಪ್ರದೇಶಗಳಲ್ಲಿ, ಉತ್ತರ ಕೇರಳ, ಮಲಬಾರಿನ ಭಾಗಗಳು ಬಯಲುಪ್ರದೇಶಗಳಲ್ಲಿ ಆಳ್ವಿಕೆ ತುಂಗಭದ್ರ ನದಿ. ಕ್ರಿ.ಶ.