The most-visited ಕನ್ನಡ Wikipedia articles, updated daily. Learn more...
ಅಟಲ್ ಬಿಹಾರಿ ವಾಜಪೇಯಿ( 25 ಡಿಸೆಂಬರ್ 1924 - 16 ಆಗಸ್ಟ್ 2018)ಯವರು ಭಾರತದ ಮಾಜಿ ಪ್ರಧಾನಮಂತ್ರಿ, ರಾಜಕಾರಣಿ, ಶ್ರೇಷ್ಠ ಸಂಸದೀಯ ಪಟು, ವಾಗ್ಮಿ, ಕವಿ, ನೇತಾರ ಹಾಗೂ ಜನನಾಯಕ. ಮೂರು ಬಾರಿ ಭಾರತದ ಪ್ರಧಾನಮಂತ್ರಿಯಾಗಿ ಇದಕ್ಕೂ ಮುಂಚೆ ವಿದೇಶಾಂಗ ಸಚಿವರಾಗಿ, ವಿರೋಧ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇವರು ತಮ್ಮ ಸಭ್ಯತೆ, ಹಾಸ್ಯಪ್ರಜ್ಞೆ, ಉದಾರ ವ್ಯಕ್ತಿತ್ವ ಮತ್ತು ನಡವಳಿಕೆಗಳಿಂದ ಅತ್ಯಂತ ಜನಪ್ರಿಯ ನಾಯಕರಾಗಿದ್ದರು.
ಕ್ರಿಸ್ಮಸ್ ಎಂದರೆ ಕ್ರಿಸ್ತಜಯಂತಿ ಅಥವಾ ಯೇಸುಕ್ರಿಸ್ತನು ಹುಟ್ಟಿದ ಸಂಭ್ರಮದ ದಿನ. ಜಗತ್ತಿನಾದ್ಯಂತ ಪ್ರತಿ ವರ್ಷದ ಡಿಸೆಂಬರ್ ತಿಂಗಳ ಇಪ್ಪತ್ತೈದನೇ ದಿನವನ್ನು ಯೇಸುಕ್ರಿಸ್ತನ ಹುಟ್ಟುಹಬ್ಬವಾಗಿ ಆಚರಿಸಲಾಗುತ್ತದೆ. ಕ್ರೈಸ್ತ ಸುವಾರ್ತೆ(ಗಾಸ್ಪೆಲ್)ಯ ಪ್ರಕಾರ ಯೇಸುಕ್ರಿಸ್ತನು ಮೇರಿ ಮತ್ತು ಜೋಸೆಫರ ಮಗನಾಗಿ ಇಂದು ಇಸ್ರೇಲ್ನಲ್ಲಿರುವ ಬೆತ್ಲಹೆಮ್ ಎಂಬ ಊರಿನಲ್ಲಿ ಹುಟ್ಟಿದ.
ಕೆಜಿಎಫ್ ಭಾಗ೧ ೨೦೧೮ರಲ್ಲಿ ಬಿಡುಗಡೆಯಾದ ಭಾರತೀಯ ಕನ್ನಡ ಚಲನಚಿತ್ರ.ಇದನ್ನು ಮೂಲ ಭಾಷೆಯಿಂದ ಬೆರೆ ಭಾಷೆಯಲ್ಲಿ ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಧ್ವನಿಪಥದೊಂದಿಗೆ(ಡಬ್ ಮಾಡಿ) ಬಿಡುಗಡೆಯಾಯಿತು. ಚಲನಚಿತ್ರವನ್ನು ಪ್ರಶಾಂತ್ ನೀಲ್ ಅವರು ಬರೆದು ನಿರ್ದೇಶಿಸಿದ್ದಾರೆ ಮತ್ತು ಹೋಂಬಾಳೆ ಚಲನಚಿತ್ರಗಳ ಬ್ಯಾನರ್ನಡಿಯಲ್ಲಿ ವಿಜಯ್ ಕಿರಗಂದೂರ್ ಅವರು ನಿರ್ಮಿಸಿದ್ದಾರೆ.ಯಶ್ ಮತ್ತು Garuda ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. 2018 ರ ಆಗಸ್ಟ್ 15 ರಂದು ಈ ಚಿತ್ರದ ಚಿತ್ರೀಕರಣವು ಪೂರ್ಣಗೊಂಡಿದೆ , ಈ ಚಿತ್ರವು 2018 ರ ಡಿಸೆಂಬರ್ 21 ರಂದು ಬಿಡುಗಡೆಯಾಗಲಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ಆರಂಭಗೊಂಡಿದ್ದರೂ, ಅದು ಹೆಚ್ಚು ಪ್ರಚಲಿತಕ್ಕೆ ಬಂದುದು ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಯಶ್ (ನವೀನ್ ಕುಮಾರ್ ಗೌಡ ಜನ್ಮ ಹೆಸರು) ಭಾರತೀಯ ಚಲನಚಿತ್ರ ನಟ, ಮುಖ್ಯವಾಗಿ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಚಲನಚಿತ್ರಗಳಲ್ಲಿ ಅಭಿನಯಿಸುವದಕ್ಕೆ ಮೊದಲು ಅವರು ರಂಗಕಲೆ ನಾಟಕಗಳು ಮತ್ತು ದೂರದರ್ಶನ ಸೋಪ್ಗಳಲ್ಲಿ ಕಾಣಿಸಿಕೊಂಡರು. ಯಶ್ ೨೦೦೭ ರಲ್ಲಿ ಜಂಭದ ಹುಡುಗಿ ಅವರ ಚಲನಚಿತ್ರದ ಚೊಚ್ಚಲ ಪ್ರವೇಶವನ್ನು ಮಾಡಿದರು, ಈ ಚಿತ್ರದಲ್ಲಿ ಪೋಷಕ ಪಾತ್ರವನ್ನು ನಿರ್ವಹಿಸಿದರು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಬೆಳೆಯ ಆವರ್ತನೆ, ಹಸಿರು ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (2018 ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ನಮ್ಮ ಸುತ್ತಮುತ್ತಲಿನ ಪ್ರದೇಶವೇ ಪರಿಸರ. ಈ ಪರಿಸರವೂ ಮರ ಗಿಡಗಳು ಹಾಗೂ ಪ್ರಾಣಿ ಪಕ್ಷಿಗಳಿಂದ ಕೂಡಿ5ದೆ.ಇದರೊಂದಿಗೆ ಮಾನವನು ಅನ್ಯೋನ್ಯತೆಯಿಂದ ಜೀವಿಸುತಿದ್ದಾನೆ.ಇವೆಲ್ಲದರ ನಡುವೆ ಮಾನವನು ತನ್ನ ಸ್ವಾರ್ಥತೆಯನ್ನು ತೋರಿಸುತ್ತಾನೆ.ಇದರಿಂದಾಗಿ ಪರಿಸರವು ಹಲವಾರು ತೊಂದರೆಗೆ ಒಳಗಾಗಿದೆ.ಇದರಲ್ಲಿ ಪರಿಸರವೂ ಎದುರಿಸುವ ಮೂರು ಮುಖ್ಯವಾದ ತೊಂದರೆಗಳೆಂದರೆ ವಾಯು ಮಾಲಿನ್ಯ , ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ. ಇದರ ಮುಖ್ಯ ಕಾರಣವೆಂದರೆ ಹೆಚ್ಚಾಗುತ್ತಿರುವ ಜನಸಂಖ್ಯೆ.ಜನರು ಬಳಸುವ ವಾಹನಗಳಿಂದ ಕೆಟ್ಟ ಹೊಗೆ ಹೊರಬರುತ್ತದೆ.ಕಾರ್ಖಾನೆಗಳಿಂದ ಹೊರಬರುವ ರಾಸಾಯನಿಕ ಹೊಗೆ ವಾಯು ಮಾಲಿನ್ಯಕ್ಕೆ ಕಾರಣವಾಗುತ್ತದೆ.ಮಾನವನ ಇಂದಿನ ದಿನಚರಿಕೆಯಿಂದ ಹಾಗೂ ಕಾರ್ಖಾನೆಗಳಿಂದ ಹೊರ ಬಿಡುವ ಕಸಗಳು, ನೀರನ್ನು ಮಾಲಿನ್ಯಗೊಳಿಸುತ್ತದೆ.ವಾಹನಗಳಿಂದ,ಮದುವೆ ಸಮಾರಂಭಗಳಲ್ಲಿ ಹಾಗೂ ದೀಪಾವಳಿಯ ಸಮಯದಲ್ಲಿ ಉಪಯೋಗಿಸುವ ಪಟಾಕಿಯಿಂದ ಶಬ್ದ ಮಾಲಿನ್ಯವಾಗುತ್ತದೆ.ಇದೆಲ್ಲಾ ಮಾನವನ ಮೇಲೆಯೇ ಪ್ರಭಾವ ಬೀರುತ್ತದೆ.ಮಾಲಿನ್ಯವೂ ಮಿತಿಮೀರಿದರೆ ಮಾನವನಿಗೆ ಈ ಪರಿಸರದಲ್ಲಿ ಜೀವಿಸಲು ಅಸಾಧ್ಯವಾಗುತ್ತದೆ.ಆದುದರಿಂದ ಈ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಜವಬ್ದಾರಿ ನಮ್ಮದಾಗಿದೆ.ಮುಂದಿನ ಪೀಳಿಗೆಗೆ ಈ ಪರಿಸರವು ಉಳಿಯ ಬೇಕಾದರೆ ಇಂದಿನಿಂದಲೇ ಒಳ್ಳೆಯ ಬದಲಾವಣೆಯನ್ನು ಮಾಡಬೇಕಾಗಿದೆ.
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಕೋಲಾರ ಚಿನ್ನದ ಗಣಿ (ಕೆ.ಜಿ.ಎಫ್) (English: Kolar Gold Field) ಕರ್ನಾಟಕದ ಒಂದು ಸಣ್ಣ ಗಣಿಗಾರಿಕೆ ಪಟ್ಟಣ.ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿದೆ.ಇಲ್ಲಿ ಗಣಿ ನೌಕರರ ಕುಟುಂಬಗಳು ವಾಸಿಸುತ್ತಿದ್ದಾರೆ.ಕೆ.ಜಿ.ಎಫ್ ಪೂರ್ವಭಾಗದಲ್ಲಿ ಒಂದು ಪರ್ವತಗಳ ಸಾಲಿದೆ,ಇದರಲ್ಲಿ ದೊಡ್ಡ ಬೆಟ್ಟ ಪರ್ವತ ಒಂದಾಗಿದೆ.ಇದು ಸಮುದ್ರ ಮಟ್ಟದಿಂದ ೩೧೯೫ ಅಡಿಯಿದ್ದು, ಅತ್ಯಂತ ಎದ್ದುಕಾಣುವ ಬಿಂದುವಾಗಿದೆ.ಕೆ.ಜಿ.ಎಫ್ ನಿಂದ ಸುಮಾರು 30 ಕಿಲೊಮೀಟರ್ ದೂರದಲ್ಲಿ ಕೋಲಾರ ಇದೆ ಹಾಗು ಸುಮಾರು 100 ಕಿಲೊಮೀಟರ್ ಅಂತರದಲ್ಲಿ ಬೆಂಗಳೂರಿದೆ.ಕೆ.ಜಿ.ಎಫ್ ಚಿನ್ನದ ಗಣಿಯನ್ನು ಕಡಿಮೆ ನಿಕ್ಷೇಪಗಳು ಮತ್ತು ಹೆಚ್ಚುತ್ತಿರುವ ಬೆಲೆಯ ಕಾರಣ ಬಿ.ಜಿ.ಎಂ.ಎಲ್ ಮೂಲಕ 2001 ರಲ್ಲಿ ಮುಚ್ಚಲಾಯಿತು.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಒಂದು ಜೀವಿಯ ದೇಹ-ಮನಸ್ಸು ಸಂಪೂರ್ಣ ಸಮತೋಲನದಲ್ಲಿರುವ ಸ್ಥಿತಿಯನ್ನು ಆರೋಗ್ಯ ಎಂದು ಕರೆಯಬಹುದು. ವಿಶ್ವ ಆರೋಗ್ಯ ಸಂಸ್ಥೆಯ ೧೯೪೫ರ ಹೇಳಿಕೆಯ ಪ್ರಕಾರ "ಆರೋಗ್ಯವೆಂದರೆ ಸಂಪೂರ್ಣ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಸುಸ್ಥಿತಿ - ಕೇವಲ ರೋಗ, ಭಾದೆಗಳ ಗೈರು ಹಾಜರಿಯಷ್ಟೇ ಅಲ್ಲ"ಆರೋಗ್ಯವೇ ಭಾಗ್ಯ.. ಮಾನವನಿಗೆ ಪರಿಸ್ಥಿತಿಗೆ ಹೊಂದಿಕೊಳ್ಳುವ ಮತ್ತು ದೈಹಿಕ, ಮಾನಸಿಕ ಅಥವಾ ಸಾಮಾಜಿಕ ಸವಾಲುಗಳನ್ನು ಎದುರಿಸುವಾಗ ಸ್ವಯಂ ನಿರ್ವಹಿಸುವ ಸಾಮರ್ಥ್ಯ ಇದೆ.
ಅಸ್ತಿತ್ವವಾದ ಎಂಬುದು ಅನೇಕ, 19ನೇ- ಮತ್ತು 20ನೇ-ಶತಮಾನದ ದಾರ್ಶನಿಕರ ಕೃತಿಗೆ ಅನ್ವಯಿಸಲಾಗಿರುವ ಶಬ್ದವಾಗಿದೆ. ಈ ದಾರ್ಶನಿಕರು ತಾವು ಹೊಂದಿದ್ದ ಗಹನವಾದ ಸೈದ್ಧಾಂತಿಕ ಅಭಿಪ್ರಾಯಭೇದಗಳ ಹೊರತಾಗಿಯೂ, ತತ್ತ್ವಚಿಂತನೆಯ ಆಲೋಚನೆಯ ಗಮನವು ಪ್ರತ್ಯೇಕ ವ್ಯಕ್ತಿಯ ಅಸ್ತಿತ್ವದ ಸ್ಥಿತಿಗಳು ಹಾಗೂ ಅವುಗಳ ಭಾವಗಳು, ವರ್ತನೆಗಳು, ಹೊಣೆಗಾರಿಕೆಗಳು, ಮತ್ತು ಆಲೋಚನೆಗಳೊಂದಿಗೆ ವ್ಯವಹರಿಸುವಂತಿರಬೇಕು ಎಂಬುದನ್ನು ಸಾಮಾನ್ಯವಾಗಿ ಸಮರ್ಥಿಸಿದರು. 19ನೇ ಶತಮಾನದ ಆರಂಭದ ದಾರ್ಶನಿಕನಾದ ಸೋರೆನ್ ಕಿರ್ಕಗಾರ್ಡ್ ಎಂಬಾತನನ್ನು ಅಸ್ತಿತ್ವವಾದದ ಜನಕ ಎಂಬುದಾಗಿ ಮರಣಾನಂತರದಲ್ಲಿ ಪರಿಗಣಿಸಲಾಗಿದೆ.
ಅತಿ ಹೆಚ್ಚು ಹಣ ಗಳಿಸಿದ ಭಾರತೀಯ ಚಲನಚಿತ್ರಗಳ ಪಟ್ಟಿ
ಇದು ಅತ್ಯಂತ ಹೆಚ್ಚು ಹಣ ಗಳಿಸಿದ ಭಾರತೀಯ ಚಿತ್ರಗಳ ಶ್ರೇಯಾಂಕವಾಗಿದೆ, ಇದರಲ್ಲಿ ಸಂಪ್ರದಾಯವಾದಿ ಜಾಗತಿಕ ಗಲ್ಲಾ ಪೆಟ್ಟಿಗೆಯ ಅಂದಾಜಿನ ಆಧಾರದ ಮೇಲೆ ಹಲವಾರು ಭಾಷೆಗಳಿಂದ ಬರುವ ಚಲನಚಿತ್ರಗಳು ಪ್ರಸಿದ್ಧವಾದ ಮೂಲಗಳಿಂದ ವರದಿಯಾಗಿದೆ. ಭಾರತದಲ್ಲಿ ದೇಶೀಯ ಗಲ್ಲಾಪೆಟ್ಟಿಗೆಯಲ್ಲಿ ಯಾವುದೇ ಅಧಿಕೃತ ಟ್ರ್ಯಾಕಿಂಗ್ ಇಲ್ಲ, ಮತ್ತು ಇಂಡಿಯನ್ ಸೈಟ್ಗಳ ಪ್ರಕಾಶನ ದತ್ತಾಂಶವನ್ನು ಆಗಾಗ್ಗೆ ತಮ್ಮ ದೇಶೀಯ ಬಾಕ್ಸ್ ಆಫೀಸ್ ಅಂದಾಜು ಹೆಚ್ಚಿಸಲು ಒತ್ತಾಯಿಸಲಾಗುತ್ತದೆ. ಭಾರತೀಯ ಚಲನಚಿತ್ರಗಳು 20 ನೇ ಶತಮಾನದ ಆರಂಭದಿಂದಲೂ ಸಹ ಪ್ರಪಂಚದಾದ್ಯಂತ ಮಾರುಕಟ್ಟೆಗಳಲ್ಲಿ ಪ್ರದರ್ಶಿಸಲ್ಪಟ್ಟಿದೆ.
ಸರ್ ಐಸಾಕ್ ನ್ಯೂಟನ್ FRS (4 ಜನವರಿ 1643– 31 ಮಾರ್ಚ್ 1727 [OS: 25 December 1642– 20 March 1727]) ರವರು ಓರ್ವ ಆಂಗ್ಲ ಭೌತವಿಜ್ಞಾನಿ, ಗಣಿತಜ್ಞ , ಖಗೋಳಶಾಸ್ತ್ರಜ್ಞ, ಸ್ವಾಭಾವಿಕ ತತ್ವಜ್ಞಾನಿ, ರಸಸಿದ್ಧಾಂತಿ, ಹಾಗೂ ಬ್ರಹ್ಮಜ್ಞಾನಿಯಾಗಿದ್ದರು. ಗಮನಾರ್ಹ ಪ್ರಮಾಣದ ತಜ್ಞರು ಹಾಗೂ ಸಾರ್ವಜನಿಕರು ಅವರ ಬಗ್ಗೆ ಇತಿಹಾಸದ ಬಹುಪ್ರಭಾವಿ ವ್ಯಕ್ತಿ ಎಂದು ತಿಳಿದು ಭಾವಿಸಿಕೊಂಡಿದ್ದಾರೆ. 1687ರಲ್ಲಿ ಪ್ರಕಟಿಸಿದ ಅವರ ಫಿಲಾಸೊಫೀಸ್ ನ್ಯಾಚ್ಯುರಲಿಸ್ ಪ್ರಿನ್ಸಿಪಿಯಾ ಮ್ಯಾಥೆಮೆಟಿಕಾ (ಸಾಮಾನ್ಯವಾಗಿ ಪ್ರಿನ್ಸಿಪಿಯಾ ಎಂದು ಕರೆಯಲ್ಪಡುವ) ಪುಸ್ತಕವು ವಿಜ್ಞಾನದ ಇತಿಹಾಸದಲ್ಲೇ ಬಹು ಪ್ರಭಾವೀ ಪುಸ್ತಕಗಳಲ್ಲಿ ಒಂದಾಗಿದ್ದು ಅಭಿಜಾತ ಯಂತ್ರಶಾಸ್ತ್ರಕ್ಕೆ ಉತ್ತಮ ತಳಪಾಯ ಒದಗಿಸಿಕೊಟ್ಟ ಕೃತಿಯೆಂಬ ಹೆಗ್ಗಳಿಕೆ ಹೊಂದಿದೆ.
ಭಾರತದ ರಾಷ್ತ್ರೀಯ ಧ್ವಜ'ದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಈತನನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯ ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯನನ್ನೇ ಮೊದಲ ವಚನಕಾರನೆಂದು ಗುರುತಿಸಲಾಗುತ್ತದೆ.