The most-visited ಕನ್ನಡ Wikipedia articles, updated daily. Learn more...
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಎಡಿನ್ಬರ್ಗ್ (pronounced /ˈɛdɪnb(ʌ)ɹə/ ( listen), ED-in-brə ಅಥವಾ ED-in-bə-rə; (ಸ್ಕಾಟಿಷ್ ಭಾಷೆಯಲ್ಲಿ : ಈಡನ್ಬರ್ಗ್/ಎಡಿನ್ಬರ್ಗ್/ಎಂಬ್ರಾ/ಎಂಬುರ್ರೀ) ನಗರವು (ಗೇಲಿಕ್ ಭಾಷಿಕ: ಡುನ್ ಐಡೆಯಾನ್ನ್) ಸ್ಕಾಟ್ಲೆಂಡ್ನ ರಾಜಧಾನಿಯಾಗಿದೆ. ಯುನೈಟೆಡ್ ಕಿಂಗ್ಡಮ್ನಲ್ಲಿ ಏಳನೇ ಬಹು ಜನಭರಿತ ನಗರವಾಗಿದ್ದು ಸ್ಕಾಟ್ಲೆಂಡ್ನ ಎರಡನೇ ಬೃಹತ್ ಮಹಾನಗರವಾಗಿದೆ. ಸ್ಕಾಟ್ಲೆಂಡ್'ನ 32 ಸ್ಥಳೀಯ ಸರಕಾರಿ ಪೌರಸಮಿತೀಯ ಪ್ರದೇಶಗಳಲ್ಲಿ ಎಡಿನ್ಬರ್ಗ್ ಮಹಾನಗರ ಪೌರಸಮಿತಿ ಪ್ರದೇಶವು ಒಂದಾಗಿದೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ಆರಂಭಗೊಂಡಿದ್ದರೂ, ಅದು ಹೆಚ್ಚು ಪ್ರಚಲಿತಕ್ಕೆ ಬಂದುದು ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಮಾನವ ಹಕ್ಕುಗಳು ಭಾರತದಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿಯು (ವಸ್ತುಸ್ಥಿತಿ) ಬಹಳ ಸಂಕೀರ್ಣ ರಚನೆಯಾಗಿದೆ. ಕಾರಣವೆಂದರೆ ದೇಶದ ವಿಶಾಲವಾದ ಭೂ ಭಾಗ ಮತ್ತು ಅತ್ಯದ್ಭುತ ವೈವಿಧ್ಯತೆಯ ಪರಿಣಾಮವಾಗಿ, ಇದರ ಸ್ಥಾನವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರದ ನೀತಿ ಮತ್ತು ಈ ದೇಶದ ಸಾರ್ವಭೌಮತ್ವ, ಸಾಮಾಜಿಕ ಸಮಾನತೆ, ಪ್ರಜಾತಂತ್ರ ಗಣರಾಜ್ಯ ರಾಷ್ಟ್ರವಾಗಿದ್ದು, ಮತ್ತು ಇತಿಹಾಸವನ್ನು ದಾಖಲಿಸಿದ್ದ ಹಳೆಯ ವಸಾಹತುಶಾಹಿ ಪ್ರಾಂತ್ಯಗಳಂತಿದೆ. ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳ ನೀಡಿಕೆಯ ಜೊತೆ, ಧಾರ್ಮಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಟ್ಟಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (2018 ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಬೆಳೆಯ ಆವರ್ತನೆ, ಹಸಿರು ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಕಯ್ಯಾರ ಕಿಞ್ಞಣ್ಣ ರೈ (ಜೂನ್ ೮, ೧೯೧೫ - ಆಗಸ್ಟ್ ೯, ೨೦೧೫) ಅಖಿಲ ಕರ್ನಾಟಕದ ಮಹಾಕವಿಯಾಗಿ, ಹಿರಿಯ ಸಾಹಿತಿಯಾಗಿ, ಬಹುಭಾಷಾ ವಿದ್ವಾಂಸರಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ, ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಮುಂಚೂಣಿಯ ನಾಯಕರಾಗಿ, ಕಾಸರಗೋಡು ವಿಲೀನೀಕರಣ ಕ್ರಿಯಾಸಮಿತಿಯ ಪ್ರಧಾನ ಸಂಚಾಕರಾಗಿ, ನಿರಂತರವಾಗಿ ದುಡಿದವರು. ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈರವರು, ಅಖಿಲಭಾರತ ಮಟ್ಟದಲ್ಲಿ ಜರುಗಿದ ೬೬ ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಲಾಲಾ ಲಜಪತ ರಾಯ್ (ಜನವರಿ ೨೮, ೧೮೬೫syed wasiqh- 29th 9 september ನವೆಂಬರ್ ೧೭, ೧೯೨೮) ಭಾರತಕ್ಕಾಗಿ ತಮ್ಮ ಪ್ರಾಣವನ್ನು ಸಮರ್ಪಿಸಿದ ಸ್ವಾತಂತ್ರ್ಯ ಹೋರಾಟಗಾರರಾಗಿಯೂ, ಶ್ರೇಷ್ಠ ಬರಹಗಾರರಾಗಿಯೂ ಭಾರತೀಯ ಇತಿಹಾಸದಲ್ಲಿ ಪ್ರಸಿದ್ಧರಾಗಿದ್ದಾರೆ. ಲಾಲಾ ಲಜಪತ ರಾಯ್ ಅವರು ದೇಶದ ಪ್ರಖ್ಯಾತ ತ್ರಿಮೂರ್ತಿಗಳಾದ ‘ಲಾಲ್ – ಬಾಲ್ – ಪಾಲ್’ ಇವರಲ್ಲಿ ಒಬ್ಬರು. ಮತ್ತಿಬ್ಬರು ಬಾಲ ಗಂಗಾಧರ ತಿಲಕ್ ಮತ್ತು ಬಿಪಿನ್ ಚಂದ್ರ ಪಾಲರು.
ಮಾನಸಿಕ ಆರೋಗ್ಯ ವು ,ಆರೋಗ್ಯಕರವಾಗಿರುವ ಗ್ರಹಣಶಕ್ತಿಯ ಅಥವಾ ಭಾವನೆಯ ಮಟ್ಟವನ್ನು ಅಥವಾ ಮಾನಸಿಕ ಅಸ್ವಸ್ಥತೆ ಇಲ್ಲದಿರುವುದನ್ನು ವಿವರಿಸುತ್ತದೆ. ರಚನಾತ್ಮಕ ಮನೋವಿಜ್ಞಾನ ಅಥವಾ ಸಮಗ್ರತಾ ಸಿದ್ಧಾಂತ ವಿಭಾಗದ ದೃಷ್ಟಿಕೋನಗಳಿಂದ ಮಾನಸಿಕ ಆರೋಗ್ಯ, ಜೀವನವನ್ನು ಅನುಭವಿಸಬಲ್ಲ ವ್ಯಕ್ತಿಯ ಸಾಮರ್ಥ್ಯವನ್ನು ಹಾಗು ಜೀವನದ ಚಟುವಟಿಕೆಗಳು ಮತ್ತು ಮನೋವೈಜ್ಞಾನಿಕ ಸ್ಥಿತಿಸ್ಥಾಪಕತ್ವ ವನ್ನು ಸಾಧಿಸಲು ಮಾಡುವ ಪ್ರಯತ್ನದ ನಡುವೆ ಸಮತೋಲನೆ ಗಳಿಸುವುದನ್ನು ಒಳಗೊಂಡಿದೆ. ಮಾನಸಿಕ ಆರೋಗ್ಯವೆಂಬುದು ನಮ್ಮ ಭಾವನೆಗಳ ಅಭಿವ್ಯಕ್ತಿಯಾಗಿದ್ದು, ಬೇಡಿಕೆಗಳ ವ್ಯಾಪ್ತಿಗೆ ಯಶಸ್ವಿಯಾಗಿ ಹೊಂದಿಕೊಳ್ಳುವುದನ್ನು ಸೂಚಿಸುತ್ತದೆ.
ಗದ್ದರ್ ಪಕ್ಷ ಭಾರತದ ಹೋರಾಟದಲ್ಲಿ ಸಂಪೂರ್ಣ ಸ್ವಾತಂತ್ರ್ಯವನ್ನು ಪಡೆಯಲು ಬ್ರಿಟಿಷರನ್ನು ಶಸ್ತ್ರಾಸ್ತ್ರ ಬಂಡಾಯದಿಂದ ಕಿತ್ತೊಗೆಯ ಬೇಕೆಂದು ಕ್ರಾಂತಿಕಾರಿಗಳು ಕಾರ್ಯಾಚರಣೆ ನಡೆಸಲು ಪ್ರಾರಂಭಿಸಿದ್ದರು. ಈ ಕ್ರಾಂತಿಕಾರಿಗಳು ಯುರೋಪ್, ಅಮೆರಿಕ, ಮಧ್ಯಏಷ್ಯ ಮತ್ತು ಆಗ್ನೇಯ ಏಷ್ಯಗಳಲ್ಲಿ ತಮ್ಮ ಚಟುವಟಿಕೆಯ ಕೇಂದ್ರಗಳನ್ನು ಸ್ಥಾಪಿಸಿಕೊಂಡಿದ್ದರು. ಇವರುಗಳು ಸಾವನ್ನು ಅಥವಾ ಸೆರೆಯಾಗುವುದರಿಂದ ಎದುರಿಸಲು ಹೆದರಿ ವಿದೇಶಗಳಿಗೆ ಹೋದವರಲ್ಲ.
ನಮ್ಮ ಸುತ್ತಮುತ್ತಲಿನ ಪ್ರದೇಶವೇ ಪರಿಸರ. ಈ ಪರಿಸರವೂ ಮರ ಗಿಡಗಳು ಹಾಗೂ ಪ್ರಾಣಿ ಪಕ್ಷಿಗಳಿಂದ ಕೂಡಿ5ದೆ.ಇದರೊಂದಿಗೆ ಮಾನವನು ಅನ್ಯೋನ್ಯತೆಯಿಂದ ಜೀವಿಸುತಿದ್ದಾನೆ.ಇವೆಲ್ಲದರ ನಡುವೆ ಮಾನವನು ತನ್ನ ಸ್ವಾರ್ಥತೆಯನ್ನು ತೋರಿಸುತ್ತಾನೆ.ಇದರಿಂದಾಗಿ ಪರಿಸರವು ಹಲವಾರು ತೊಂದರೆಗೆ ಒಳಗಾಗಿದೆ.ಇದರಲ್ಲಿ ಪರಿಸರವೂ ಎದುರಿಸುವ ಮೂರು ಮುಖ್ಯವಾದ ತೊಂದರೆಗಳೆಂದರೆ ವಾಯು ಮಾಲಿನ್ಯ , ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ. ಇದರ ಮುಖ್ಯ ಕಾರಣವೆಂದರೆ ಹೆಚ್ಚಾಗುತ್ತಿರುವ ಜನಸಂಖ್ಯೆ.ಜನರು ಬಳಸುವ ವಾಹನಗಳಿಂದ ಕೆಟ್ಟ ಹೊಗೆ ಹೊರಬರುತ್ತದೆ.ಕಾರ್ಖಾನೆಗಳಿಂದ ಹೊರಬರುವ ರಾಸಾಯನಿಕ ಹೊಗೆ ವಾಯು ಮಾಲಿನ್ಯಕ್ಕೆ ಕಾರಣವಾಗುತ್ತದೆ.ಮಾನವನ ಇಂದಿನ ದಿನಚರಿಕೆಯಿಂದ ಹಾಗೂ ಕಾರ್ಖಾನೆಗಳಿಂದ ಹೊರ ಬಿಡುವ ಕಸಗಳು, ನೀರನ್ನು ಮಾಲಿನ್ಯಗೊಳಿಸುತ್ತದೆ.ವಾಹನಗಳಿಂದ,ಮದುವೆ ಸಮಾರಂಭಗಳಲ್ಲಿ ಹಾಗೂ ದೀಪಾವಳಿಯ ಸಮಯದಲ್ಲಿ ಉಪಯೋಗಿಸುವ ಪಟಾಕಿಯಿಂದ ಶಬ್ದ ಮಾಲಿನ್ಯವಾಗುತ್ತದೆ.ಇದೆಲ್ಲಾ ಮಾನವನ ಮೇಲೆಯೇ ಪ್ರಭಾವ ಬೀರುತ್ತದೆ.ಮಾಲಿನ್ಯವೂ ಮಿತಿಮೀರಿದರೆ ಮಾನವನಿಗೆ ಈ ಪರಿಸರದಲ್ಲಿ ಜೀವಿಸಲು ಅಸಾಧ್ಯವಾಗುತ್ತದೆ.ಆದುದರಿಂದ ಈ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಜವಬ್ದಾರಿ ನಮ್ಮದಾಗಿದೆ.ಮುಂದಿನ ಪೀಳಿಗೆಗೆ ಈ ಪರಿಸರವು ಉಳಿಯ ಬೇಕಾದರೆ ಇಂದಿನಿಂದಲೇ ಒಳ್ಳೆಯ ಬದಲಾವಣೆಯನ್ನು ಮಾಡಬೇಕಾಗಿದೆ.
ಚುನಾವಣೆ ಯೆನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ.ಇದರಲ್ಲಿ,ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚುನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ,ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಜಾಗತಿಕ ತಾಪಮಾನ ನಿಯಂತ್ರಣಜಾಗತಿಕ ತಾಪಮಾನ ಏರಿಕೆ ಯೆಂದರೆ 20 ನೇ ಶತಮಾನದ ಮಧ್ಯಭಾಗದಲ್ಲಿ ಭೂಮಿಯ ಮೇಲ್ಮೈ-ಸಮೀಪದಲ್ಲಿರುವ ವಾಯು ಮತ್ತು ಸಾಗರ ಪ್ರದೇಶಗಳಲ್ಲಿ ಆದ ಸರಾಸರಿ ತಾಪಮಾನದ ಏರಿಕೆ ಹಾಗೂ ಅದರ ಪ್ರಕ್ಷೇಪಿತ ಮುಂದುವರಿಕೆ. ಜಾಗತಿಕ ಮೇಲ್ಮೈ ಉಷ್ಣತೆಯು ಕಳೆದ ಶತಮಾನದಲ್ಲಿ 0.74 ± 0.18 °C (1.33 ± 0.32 °F)ರಷ್ಟು ಹೆಚ್ಚಿದೆ. ಹವಾಮಾನ ಬದಲಾವಣೆಯ ಕುರಿತಾದ ಅಂತರ-ಸರಕಾರಿ ಮಂಡಳಿಯು (IPCC) ಅಗೆದು ತೆಗೆದ ಇಂಧನಗಳು ಮತ್ತು ಅರಣ್ಯನಾಶಗಳಂತಹಾ ಮಾನವ ಚಟುವಟಿಕೆಗಳಿಂದಾದ ಹಸಿರುಮನೆ ಅನಿಲಗಳ ಸಂಗ್ರಹದ ಹೆಚ್ಚಳವು 20ನೇ ಶತಮಾನ ದ ಮಧ್ಯಕಾಲದ ನಂತರದ ತಾಪಮಾನ ಏರಿಕೆಗೆ ಕಾರಣವೆಂದು ತೀರ್ಮಾನಕ್ಕೆ ಬಂದಿದೆ.