The most-visited ಕನ್ನಡ Wikipedia articles, updated daily. Learn more...
ಚಿಪ್ಕೋ ಚಳುವಳಿ ಅಥವಾ ಚಿಪ್ಕೋ ಆಂದೋಲನ ಎಂಬುದು ಮಹಾತ್ಮ ಗಾಂಧಿಯವರ ಮೂಲಮಂತ್ರಗಳಾದ ಸತ್ಯಾಗ್ರಹ ಮ್ಮತ್ತು ಅಂಹಿಸೆಗಳಂತೆ ಮರಗಳನ್ನು ಅಪ್ಪಿಕೊಳ್ಳುವುದರ ಮೂಲಕ ಮರ ಕಡಿಯುವುದರ ಬಗ್ಗೆ ಅಸಹಕಾರ ತೋರಿಸಿದ ಪ್ರಮುಖ ಚಳುವಳಿಯಾಗಿದೆ. ಚಿಪ್ಕೋ ಚಳುವಳಿಯು ಮೊದಲಿಗೆ ೧೯೭೦ರಲ್ಲಿ ಉತ್ತರಖಂಡದ ಗರ್ವಾಲಹಿಮಾಲಯ ಹಾಗೂ ಉತ್ತರಪ್ರದೇಶದಲ್ಲಿ ಅತಿಯಾಗಿ ನಡೆಯುತ್ತಿದ್ದ ಅರಣ್ಯನಾಶದ ಬಗ್ಗೆ ಅರಿವು ಮೂಡಿಸುವುದರ ಮೂಲಕ ಆರಂಭವಾಯಿತು. ಮಾರ್ಚ್ ೨೬ ೧೯೭೪ರಲ್ಲಿ ಉತ್ತರಖಂಡ ರಾಜ್ಯದ ಚಮೋಲಿ ಜಿಲ್ಲೆಯ ರೇನಿಹಳ್ಳಿ ಮತ್ತು ಹೇಮ ವಾಲ್ಘಂಟೆಯಲ್ಲಿ ಕೆಲವು ಮಹಿಳೆಯರು ಭಯಬೀತರಾಗಿ ತಮ್ಮ ಕಾಡಿನ ಸಾಂಪ್ರದಾಯಿಕ ಹಕ್ಕನ್ನು ವಾಪಸ್ಸು ಪಡೆಯುವ ಸಲುವಾಗಿ ಇವರು ಮರಕಡಿಯುವುದನ್ನು ವಿರೋಧಿಸಿ ಹೋರಾಟ ನಡೆಸಿದರು.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ gfhvಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಭೌಗೋಳಿಕ ನಿರ್ದೇಶಾಂಕ ಪದ್ಧತಿಯು ಭೂಮಿಯ ಮೇಲಿನ ಪ್ರತಿಯೊಂದು ನೆಲೆಯನ್ನು ಮೂರು ನಿರ್ದೇಶಾಂಕಗಳಲ್ಲಿ ನಿರೂಪಿಸಲು, ಮುಖ್ಯವಾಗಿ ಒಂದು ಗೋಳ ನಿರ್ದೇಶಾಂಕ ಪದ್ಧತಿಯನ್ನು ಬಳಸಿ, ಸಾಧ್ಯವಾಗಿಸುವ ಒಂದು ನಿರ್ದೇಶಾಂಕ ಪದ್ಧತಿ. ಭೂಮಿಯು ಒಂದು ಗೋಳವಲ್ಲ, ಅದು ಒಂದು ಅಂಡಾಕಾರದ ಘನಾಕೃತಿಗೆ ಸಮೀಪದ ಒಂದು ಅಸಮ ರೂಪದ ಆಕಾರ; ಪ್ರತಿ ಸ್ಥಳವರ್ಣನಾ ಬಿಂದುವನ್ನು ಸಂಖ್ಯೆಗಳ ಒಂದು ನಿಶ್ಚಿತ ಕ್ರಮಗೊಂಡ ವರ್ಗವಾಗಿ ಖಚಿತವಾಗಿ ನಮೂದಿಸಬಲ್ಲ ಒಂದು ನಿರ್ದೇಶಾಂಕ ಪದ್ಧತಿಯನ್ನು ನಿರೂಪಿಸುವುದು ಸವಾಲು. ಅಕ್ಷಾಂಶವು (ಸಂಕ್ಷೇಪ: ಲ್ಯಾಟಿನ್., φ, ಅಥವಾ ಫೈ) ಗೋಳದ ಕೇಂದ್ರದಿಂದ ಅಳೆಯಲಾದ ಭೂಮಿಯ ಮೇಲ್ಮೈ ಮೇಲಿನ ಒಂದು ಬಿಂದುವಿನಿಂದ ಸಮಭಾಜಕ ಸಮತಲದವರೆಗಿನ ಕೋನ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಇಂದಿರಾ ಪ್ರಿಯದರ್ಶಿನಿ ಗಾಂಧಿ (ಹಿಂದಿ:इंदिरा प्रियदर्शिनी गांधीಇಂದಿರಾ ಪ್ರಿಯದರ್ಶಿನಿ ಗಾಂಧಿ; ನಿ: ನೆಹರು; (೧೯ ನವೆಂಬರ್ ೧೯೧೭ – ೩೧ ಅಕ್ಟೋಬರ್ ೧೯೮೪) ೧೯೬೬ರಿಂದ ೧೯೭೭ರವೆಗೆ ಸತತ ಮೂರು ಬಾರಿ ಭಾರತ ಗಣತಂತ್ರ ದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ನಾಲ್ಕನೇ ಬಾರಿ ೧೯೮೦ರಿಂದ ೧೯೮೪ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಅವರು ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಇಂದಿನವರೆಗೆ ಆ ಸ್ಥಾನ ಅವರ ಪಾಲಿನದ್ದೇ ಆಗಿದೆ.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದೆ ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ ಇದರಲ್ಲಿ ಇಪ್ಪತ್ತೊಂಬತ್ತು ರಾಜ್ಯಗಳು ಹಾಗು ಏಳು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಮಾಧ್ಯಮ ಅಥವಾ ಸಮೂಹ ಮಾಧ್ಯಮ ಎಂದು ಸಾಮಾನ್ಯವಾಗಿ ಪತ್ರಿಕೆ, ಬಾನುಲಿ ಮತ್ತು ದೂರದರ್ಶನಗಳನ್ನು ಸೇರಿಸಿ ಹೇಳುತ್ತಾರೆ. ಸಂಗೀತ, ನೃತ್ಯ, ನಾಟಕ, ಅಂತರ್ಜಾಲ ಕ್ಷೇತ್ರ, ಭಿತ್ತಿ ಚಿತ್ರ-ಪತ್ರ, ಜಾಹೀರಾತು, ಡಂಗುರ, ಸಿನಿಮಾ – ಇವುಗಳನ್ನೂ ಕೂಡ ಮಾಧ್ಯಮವನ್ನಾಗಿ ಪರಿಗಣಿಸಬಹುದು. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವು ಕಾರ್ಯನಿರ್ವಹಿಸುತ್ತದೆ.
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ)
ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ:GST) 2016:(Goods and Services Tax Bill or GST Bill 2016) ಭಾರತದ ತೆರಿಗೆ ವ್ಯವಸ್ಥೆಯಲ್ಲಿ ತೆರಿಗೆ ಸುಧಾರಣಾ ಕ್ರಮವಾಗಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯವಸ್ಥೆಯು ದಿ.1 ಜುಲೈ, 2017 ಮಧ್ಯರಾತ್ರಿಯಿಂದಲೇ ದೇಶದಾದ್ಯಂತ ಜಾರಿಗೆ ಬಂದಿದೆ. ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಮಧ್ಯರಾತ್ರಿ 12 ಗಂಟೆಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಗುಂಡಿ ಒತ್ತುವ ಮೂಲಕ ಹೊಸ ತೆರಿಗೆ ವ್ಯವಸ್ಥೆಗೆ ಚಾಲನೆ ನೀಡಿದರು. |} ಸರಕು ಮತ್ತು ಸೇವಾ ತೆರಿಗೆ ಬಿಲ್ ಅಥವಾ ಜಿ.ಎಸ್.ಟಿ ಮಸೂದೆ (ಬಿಲ್) (ಹಿಂದಿ: वस्तु एवं सेवा कर विधेयक), ಅಧಿಕೃತವಾಗಿ ಇದು ಸಂವಿಧಾನದ (ನೂರಾ ಇಪ್ಪತ್ತೆರಡನೇ ತಿದ್ದುಪಡಿ) ಮಸೂದೆ, 2014 ಎಂದು ಪ್ರಸ್ತಾಪಿಸಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಕನ್ನಡ ಮಾಸಪತ್ರಿಕೆ ಜಯಂತಿ ಕುರಿತಾದ ಮಾಹಿತಿಗೆ ಈ ಲೇಖನ ನೋಡಿ. ಕನ್ನಡ ಚಿತ್ರರಂಗದ ಪ್ರಮುಖ ನಾಯಕಿಯರಲ್ಲಿ ಒಬ್ಬರು. ೧೯೬೮ರಲ್ಲಿ ತೆರೆ ಕಂಡ ವೈ,ಅರ್,ಸ್ವಾಮಿ ನಿರ್ದೇಶನದ "ಜೇನು ಗೂಡು " ಚಿತ್ರದ ಮೂಲಕ ಚಿತ್ರ ರಂಗ ಪ್ರವೇಶಿಸಿದ ಜಯಂತಿಯವರ ಮೂಲ ಹೆಸರು"ಕಮಲ ಕುಮಾರಿ.ಅದಕ್ಕಿಂತ ಮುನ್ನ "ಜಗದೇಕ ವೀರನ ಕಥೆ "ಚಿತ್ರದಲ್ಲಿ ಸಣ್ಣ ಪಾತ್ರ ವೊಂದರಲ್ಲಿ ಅಭಿನಯಿಸಿದ್ದಾರೆ.ಒಟ್ಟು ಆರು ಭಾಷೆಯ ಚಿತ್ರಗಳಲ್ಲಿ ಅಭಿನಯಿಸಿರುವ ಜಯಂತಿ ಕನ್ನಡದ ೧೯೦ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.ನಿರ್ಮಾಪಕಿಯೂ ನಿರ್ದೇಶಕಿಯೂ ಆಗಿರುವ ಇವರು ೧೯೬೫ರ "ಮಿಸ್ ಲೀಲಾವತಿ" ಚಿತ್ರದ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಬಂದಿದೆ."ಎರಡು ಮುಖ"(೧೯೬೯),ಮನಸ್ಸಿನಂತೆ ಮಾಂಗಲ್ಯ"(೧೯೭೬),"ಧರ್ಮ ದಾರಿ ತಪ್ಪಿತು"(೧೯೮೧),ಮಸಣದ ಹೂವು (೧೯೮೫),"ಆನಂದ್ "(೧೯೮೬) ಚಿತ್ರಗಳ ಅಭಿನಯಕ್ಕಾಗಿ ಐದು ಬಾರಿ ರಾಜ್ಯ ಪ್ರಶಸ್ತಿ ಗಳಿಸಿದ್ದಾರೆ.ಎಡಕಲ್ಲು ಗುಡ್ಡದ ಮೇಲೆ ಚಿತ್ರದಲ್ಲಿ ಜಯಂತಿಯವರು ಕಾಮತೃಷೆಯಿಂದ ಬಳಲುವ ಹೆಣ್ಣಾಗಿ ಮೊದಲ ಭಾರಿಗೆ ವಿಶಿಷ್ಟ ಅಭಿನಯ ನೀಡಿದ್ದಾರೆ.
ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ
ಟೆಂಪ್ಲೇಟು:Pp-protect ಇಂಟರ್ನ್ಯಾಷನಲ್ ಸ್ಟ್ಯಾಂಡರ್ಡ್ ಬುಕ್ ಸಂಖ್ಯೆ (ಐ.ಎಸ್.ಬಿ.ಎನ್) /ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ ಒಂದು ವಿಶಿಷ್ಟವಾದ ಸಂಖ್ಯೆ. ಪ್ರಕಾಶಕರು ಐಎಸ್ಬಿಎನ್ ಅನ್ನು ಪುಸ್ತಕ ಶೀರ್ಷಿಕೆಗೆ ನಿಯೋಜಿಸುತ್ತಾರೆ.ಒಂದು ಐಎಸ್ಬಿಎನ್ ಮುಖ್ಯವಾಗಿ ಪ್ರಕಾಶಕರು, ಪುಸ್ತಕ ಮಾರಾಟಗಾರರು, ಗ್ರಂಥಾಲಯಗಳು, ಇಂಟರ್ನೆಟ್ ಚಿಲ್ಲರೆ ವ್ಯಾಪಾರಿಗಳು ಮತ್ತು ಇತರ ಪೂರೈಕೆ ಸರಪಳಿಗಳು ಆದೇಶ, ಪಟ್ಟಿಗಳು, ಮಾರಾಟದ ದಾಖಲೆಗಳು ಮತ್ತು ಷೇರು ನಿಯಂತ್ರಣ ಉದ್ದೇಶಗಳಿಗಾಗಿ ಬಳಸಲ್ಪಡುವ ಒಂದು ಉತ್ಪನ್ನ ಗುರುತಿಸುವಿಕೆ. ಐಎಸ್ಬಿಎನ್ ನೋಂದಾಯಿಸುವವರನ್ನು ನಿರ್ದಿಷ್ಟ ಶೀರ್ಷಿಕೆ, ಆವೃತ್ತಿ ಮತ್ತು ಸ್ವರೂಪವನ್ನು ಗುರುತಿಸುತ್ತದೆ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಕಂಪ್ಯೂಟರ್ ಒಳರವಾನೆ ಸಂಸ್ಕರಣೆ ಹಾಗೂ ಹೊರರವಾನೆ ಸಾಧನಗಳನ್ನು ಹೊಂದಿದ್ದು ಒಳರವಾನೆ ಸಾಧನಗಳ ಮೂಲಕ ನೀಡಿದಂತಹ ಮಾಹಿತಿಯನ್ನು ಸಂಸ್ಕರಿಸಿ ಹೊರರವಾನೆ ಸಾಧನಗಳ ಮೂಲಕ ಉಪಯೋಗಿ(ಯೂಜರ್)ಗೆ ನೀಡುವುದಲ್ಲದೇ ಮಾಹಿತಿ ಮತ್ತು ದತ್ತಾಂಶಗಳನ್ನು ಶೇಖರಿಸಿಡಬಹುದಾದ ಸಾಧನವಾಗಿರುತ್ತದೆ ಅಲ್ಲದೇ ಶೇಖರಿಸಿಟ್ಟ ಅಥವಾ ನಾವು ನೀಡಿದಂತಹಾ ಮಾಹಿತಿಯನ್ನು ಒಂದು ಗಣಕಯಂತ್ರ ದಿಂದ ಮತ್ತೊಂದು ಗಣಕಯಂತ್ರಕ್ಕೆ ಸಂಪರ್ಕಜಾಲದ ಮೂಲಕ ನಮ್ಮ ಆದೇಶದ ಮೇರೆಗೆ ರವಾನಿಸುತ್ತದೆ..
ಜಾಗತಿಕ ತಾಪಮಾನ ನಿಯಂತ್ರಣ ಜಾಗತಿಕ ತಾಪಮಾನ ಏರಿಕೆ ಯೆಂದರೆ 20ನೇ ಶತಮಾನದ ಮಧ್ಯಭಾಗದಲ್ಲಿ ಭೂಮಿಯ ಮೇಲ್ಮೈ-ಸಮೀಪದಲ್ಲಿರುವ ವಾಯು ಮತ್ತು ಸಾಗರ ಪ್ರದೇಶಗಳಲ್ಲಿ ಆದ ಸರಾಸರಿ ತಾಪಮಾನದ ಏರಿಕೆ ಹಾಗೂ ಅದರ ಪ್ರಕ್ಷೇಪಿತ ಮುಂದುವರಿಕೆ. ಜಾಗತಿಕ ಮೇಲ್ಮೈ ಉಷ್ಣತೆಯು ಕಳೆದ ಶತಮಾನದಲ್ಲಿ 0.74 ± 0.18 °C (1.33 ± 0.32 °F)ರಷ್ಟು ಹೆಚ್ಚಿದೆ. ಹವಾಮಾನ ಬದಲಾವಣೆಯ ಕುರಿತಾದ ಅಂತರ-ಸರಕಾರಿ ಮಂಡಳಿಯು (IPCC) ಅಗೆದು ತೆಗೆದ ಇಂಧನಗಳು ಮತ್ತು ಅರಣ್ಯನಾಶಗಳಂತಹಾ ಮಾನವ ಚಟುವಟಿಕೆಗಳಿಂದಾದ ಹಸಿರುಮನೆ ಅನಿಲಗಳ ಸಂಗ್ರಹದ ಹೆಚ್ಚಳವು 20ನೇ ಶತಮಾನ ದ ಮಧ್ಯಕಾಲದ ನಂತರದ ತಾಪಮಾನ ಏರಿಕೆಗೆ ಕಾರಣವೆಂದು ತೀರ್ಮಾನಕ್ಕೆ ಬಂದಿದೆ.
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಕಾರವು ಬಂದಾಗ 'ಐ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂದಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.