The most-visited ಕನ್ನಡ Wikipedia articles, updated daily. Learn more...
ಅಬ್ರಹಾಂ ಒರ್ಟೆಲಿಯಸ್ (ಆರ್ಟೆಲ್ಸ್, ಒರ್ಥೆಲಿಯಸ್, ವರ್ಟೆಲ್ಸ್; 14 ಏಪ್ರಿಲ್ 1527 - 28 ಜೂನ್ 1598) ಫ್ಲೆಮಿಶ್ ಕಾರ್ಟೊಗ್ರಾಫರ್ ಮತ್ತು ಭೂಗೋಳಶಾಸ್ತ್ರಜ್ಞರಾಗಿದ್ದರು, ಸಾಂಪ್ರದಾಯಿಕವಾಗಿ ಮೊದಲ ಆಧುನಿಕ ಅಟ್ಲಾಸ್ ಸೃಷ್ಟಿಕರ್ತರಾಗಿ ಗುರುತಿಸಲ್ಪಟ್ಟರು,ಥಿಯಟ್ರಮ್ ಆರ್ಬಿಸ್ ಟೆರಾರಮ್ (ದಿ ಥಿಯೇಟರ್ ಆಫ್ ದಿ ವರ್ಲ್ಡ್). ಒರ್ಟೆಲಿಯಸ್ನ್ನು ನೆದರ್ಲ್ಯಾಂಡ್ನ ಕಾರ್ಟೋಗ್ರಫಿ ಶಾಲೆಯ ಸಂಸ್ಥಾಪಕರಲ್ಲಿ ಒಬ್ಬರೆಂದು ಪರಿಗಣಿಸಲಾಗುತ್ತದೆ ಮತ್ತು ಅದರ ಸುವರ್ಣಯುಗದಲ್ಲಿ (ಸುಮಾರು 1570-1670) ಶಾಲೆಯ ಅತ್ಯಂತ ಗಮನಾರ್ಹ ಪ್ರತಿನಿಧಿಗಳಲ್ಲಿ ಒಬ್ಬರು.1570 ರಲ್ಲಿ ಅವರ ಅಟ್ಲಾಸ್ನ ಪ್ರಕಟಣೆ ಸಾಮಾನ್ಯವಾಗಿ ನೆದರ್ ಲ್ಯಾಂಡಿಷ್ ಕಾರ್ಟೊಗ್ರಫಿಯ ಸುವರ್ಣ ಯುಗದ ಅಧಿಕೃತ ಆರಂಭವೆಂದು ಪರಿಗಣಿಸಲ್ಪಟ್ಟಿದೆ. ತಮ್ಮ ಪ್ರಸ್ತುತ ಸ್ಥಾನಗಳಿಗೆ ತೇಲುವ ಮೊದಲು ಖಂಡಗಳು ಒಟ್ಟಿಗೆ ಸೇರಿಕೊಂಡಿದ್ದವು ಎಂದು ಊಹಿಸುವ ಮೊದಲ ವ್ಯಕ್ತಿ ಎನ್ನಲಾಗಿದೆ.
ಭೂಫಲಕ ಸಿದ್ಧಾಂತವು (ಪ್ಲೇಟ್ ಟೆಕ್ಟೋನಿಕ್ಸ್) ದೊಡ್ಡ ಮಟ್ಟದ ಭೂಪ್ರದೇಶಗಳ (ಶಿಲಾಗೋಳ ಅಥವಾ ಲಿಥೊಸ್ಪಿಯರ್) ಚಲನೆಯನ್ನು ವಿವರಿಸುವ ವೈಜ್ಞಾನಿಕ ಸಿದ್ಧಾಂತ. ಇದರ ಸೈದ್ಧಾಂತಿಕ ಮಾದರಿಗಳು ಇಪ್ಪತ್ತನೆಯ ಶತಮಾನದ ಆರಂಭದಲ್ಲಿ ಹುಟ್ಟಿದ ಖಂಡಗಳ ಅಲೆತದ ಆಧಾರದ ಮೇಲೆ ರೂಪಗೊಂಡಿವೆ. ಭೂವಿಜ್ಞಾನಿಗಳು ಸಾಗರ ತಳದ ಹರಡುವಿಕೆಯ ತಡವಾದ ೧೯೫೦ರ ದಶಕ ಮತ್ತು ಆರಂಭಿಕ ೧೯೬೦ರ ದಶಕಗಳ ನಡುವೆ ಸಿದ್ಧವಾದ ಮೇಲೆ ಈ ಸಿದ್ಧಾಂತವನ್ನು ಒಪ್ಪಿಕೊಂಡರು.
ಅಡೆಲಿನ್ ವರ್ಜೀನಿಯಾ ವೂಲ್ಫ್ (ನೀ ಸ್ಟೀಫನ್; 25 ಜನವರಿ 1882 - 28 ಮಾರ್ಚ್ 1941) ಒಬ್ಬ ಇಂಗ್ಲಿಷ್ ಬರಹಗಾರ್ತಿ .ಅವರು ಇಪ್ಪತ್ತನೇ ಶತಮಾನದ ಅಗ್ರಗಣ್ಯ ಆಧುನಿಕತಾವಾದಿಗಳಲ್ಲಿ ಒಬ್ಬರಾಗಿದ್ದರು ಮತ್ತು ಪ್ರಜ್ಞೆಯ ಸ್ಟ್ರೀಮ್ ಅನ್ನು ನಿರೂಪಣಾ ಸಾಧನವಾಗಿ ಬಳಸುವ ಪ್ರವರ್ತಕರಾಗಿದ್ದಾರೆ. ಲಂಡನ್ನ ಕೆನ್ಸಿಂಗ್ಟನ್ನಲ್ಲಿ ಶ್ರೀಮಂತ ಮನೆಯೊಂದರಲ್ಲಿ ಜನಿಸಿದ ಅವರು ಲಂಡನ್ನ ಕಿಂಗ್ಸ್ ಕಾಲೇಜ್ ನಲ್ಲಿ ಶಿಕ್ಷಣ ಪಡೆದ ನಂತರ ಮಹಿಳೆಯರ ಉನ್ನತ ಶಿಕ್ಷಣದ ಆರಂಭಿಕ ಸುಧಾರಕರಿಗೆ ಪರಿಚಯವಾದರು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಕರ್ನಾಟಕ ವಿಧಾನಸಭೆ ಚುನಾವಣೆ, ೨೦೧೮
ಕರ್ನಾಟಕದ ಎಲ್ಲಾ ೨೨೪ ವಿಧಾನಸಭಾ ಕ್ಷೇತ್ರಕ್ಕೆ ಶಾಸಕರನ್ನು ಆಯ್ಕೆ ಮಾಡಲು ೨೦೧೮ರಲ್ಲಿ ಕರ್ನಾಟಕ ವಿಧಾನಸಭೆಯ ಚುನಾವಣೆ ದಿ.೧೨-೫-೨೦೧೮ರಂದು ನಡೆಯಿತು.
ರಾಬರ್ಟ್ ವಾನ್ ರಾಂಕೆ ಗ್ರೇವ್ಸ್ ಜನನ ೨೪ ಜುಲೈ ೧೮೯೫ - ೭ ಡಿಸೆಂಬರ್ ೧೯೮೫ ಇತನನ್ನು ರಾಬರ್ಟ್ ರಾಂಕೆ ಗ್ರೇವ್ಸ್ ಎಂದೂ ಕರೆಯುತ್ತಾರೆ. ಸಾಮಾನ್ಯ ರಾಬರ್ಟ್ ಗ್ರೇವ್ಸ್, ಓರ್ವ ಇಂಗ್ಲಿಷ್ ಕವಿ, ಐತಿಹಾಸಿಕ ಕಾದಂಬರಿಕಾರ, ವಿಮರ್ಶಕ ಮತ್ತು ಶಾಸ್ತ್ರೀಯ. ಆಸ್ಕರ್ ವೈಲ್ಡ್ಗೆ ಹೋಲುವ ರೀತಿಯಲ್ಲಿ, ರಾಬರ್ಟ್ ಗ್ರೇವ್ಸ್ ಐರಿಶ್ ಪುರಾಣಗಳ ವಿದ್ಯಾರ್ಥಿಯಾಗಿದ್ದು, ವಿಲಿಯಂ ವೈಲ್ಡ್ ಅವರೊಂದಿಗೆ ಈತನ ಕುಟುಂಬ, ಗೇಲಿಕ್ ಪುನರುಜ್ಜೀವನದ ಉತ್ತರಾಧಿಕಾರಿಗಳಾಗಿದ್ದರು.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ gfhvಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಭೌಗೋಳಿಕ ನಿರ್ದೇಶಾಂಕ ಪದ್ಧತಿಯು ಭೂಮಿಯ ಮೇಲಿನ ಪ್ರತಿಯೊಂದು ನೆಲೆಯನ್ನು ಮೂರು ನಿರ್ದೇಶಾಂಕಗಳಲ್ಲಿ ನಿರೂಪಿಸಲು, ಮುಖ್ಯವಾಗಿ ಒಂದು ಗೋಳ ನಿರ್ದೇಶಾಂಕ ಪದ್ಧತಿಯನ್ನು ಬಳಸಿ, ಸಾಧ್ಯವಾಗಿಸುವ ಒಂದು ನಿರ್ದೇಶಾಂಕ ಪದ್ಧತಿ. ಭೂಮಿಯು ಒಂದು ಗೋಳವಲ್ಲ, ಅದು ಒಂದು ಅಂಡಾಕಾರದ ಘನಾಕೃತಿಗೆ ಸಮೀಪದ ಒಂದು ಅಸಮ ರೂಪದ ಆಕಾರ; ಪ್ರತಿ ಸ್ಥಳವರ್ಣನಾ ಬಿಂದುವನ್ನು ಸಂಖ್ಯೆಗಳ ಒಂದು ನಿಶ್ಚಿತ ಕ್ರಮಗೊಂಡ ವರ್ಗವಾಗಿ ಖಚಿತವಾಗಿ ನಮೂದಿಸಬಲ್ಲ ಒಂದು ನಿರ್ದೇಶಾಂಕ ಪದ್ಧತಿಯನ್ನು ನಿರೂಪಿಸುವುದು ಸವಾಲು. ಅಕ್ಷಾಂಶವು (ಸಂಕ್ಷೇಪ: ಲ್ಯಾಟಿನ್., φ, ಅಥವಾ ಫೈ) ಗೋಳದ ಕೇಂದ್ರದಿಂದ ಅಳೆಯಲಾದ ಭೂಮಿಯ ಮೇಲ್ಮೈ ಮೇಲಿನ ಒಂದು ಬಿಂದುವಿನಿಂದ ಸಮಭಾಜಕ ಸಮತಲದವರೆಗಿನ ಕೋನ.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ. ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ವೀರಶೈವ ಕವಿ.
ಕಾರ್ಗಿಲ್ ಸಂಘರ್ಷ ವೆಂದೇ ಹೆಸರಾದ ಕಾರ್ಗಿಲ್ ಯುದ್ದವು ಭಾರತ ಮತ್ತು ಪಾಕಿಸ್ತಾನದ ಮಧ್ಯೆ ನಡೆದ ಸಶಸ್ತ್ರ ಸಂಘರ್ಷವಾಗಿದ್ದು, ಕಾಶ್ಮೀರದ ಕಾರ್ಗಿಲ್ ಜಿಲ್ಲೆ ಮತ್ತು ನಿಯಂತ್ರಣ ರೇಖೆಯಿರುವ ಪ್ರದೇಶಗಳಲ್ಲಿ 1999ರ ಮೇ ಮತ್ತು ಜುಲೈ ನಡುವೆ ಸಂಭವಿಸಿತು. ಉಭಯ ರಾಷ್ಟ್ರಗಳ ನಡುವಿನ de facto ಗಡಿಯಾಗಿರುವ ನಿಯಂತ್ರಣ ರೇಖೆಯಲ್ಲಿ(LOC)ರುವ ಭಾರತದ ನೆಲೆಗಳಿಗೆ ಪಾಕಿಸ್ತಾನದ ಸೈನಿಕರು ಮತ್ತು ಕಾಶ್ಮೀರಿ ಉಗ್ರಗಾಮಿಗಳು ನುಸುಳಿದ್ದೇ ಯುದ್ಧಕ್ಕೆ ಕಾರಣ. ಯುದ್ಧದ ಆರಂಭದ ಹಂತಗಳಲ್ಲಿ, ಕಾರ್ಗಿಲ್ ಕದನಕ್ಕೆ ಸ್ವತಂತ್ರ ಕಾಶ್ಮೀರಿ ಉಗ್ರಗಾಮಿಗಳ ಮೇಲೆ ಪಾಕಿಸ್ತಾನ ಗೂಬೆ ಕೂರಿಸಿತು, ಆದರೆ ಯುದ್ಧಾನಂತರದ ಸಾವು ನೋವುಗಳ ದಾಖಲೆಗಳು ಮತ್ತು ಆ ಬಳಿಕ ಪಾಕಿಸ್ತಾನದ ಪ್ರಧಾನ ಮಂತ್ರಿ ಮತ್ತು ಸೇನಾ ಸಿಬ್ಬಂದಿ ಮುಖ್ಯಸ್ಥರು ನೀಡಿದ ಹೇಳಿಕೆಗಳು, ಜನರಲ್ ಅಶ್ರಫ್ ರಷೀದ್ ನೇತೃತ್ವದ ಪಾಕಿಸ್ತಾನಿ ಅರೆಸೇನೆ ಪಡೆಗಳು ಈ ಯುದ್ಧದಲ್ಲಿ ಪಾಲ್ಗೊಂಡಿದ್ದನ್ನು ರುಜುವಾತು ಮಾಡಿತು.
ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ
ಟೆಂಪ್ಲೇಟು:Pp-protect ಇಂಟರ್ನ್ಯಾಷನಲ್ ಸ್ಟ್ಯಾಂಡರ್ಡ್ ಬುಕ್ ಸಂಖ್ಯೆ (ಐ.ಎಸ್.ಬಿ.ಎನ್) /ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ ಒಂದು ವಿಶಿಷ್ಟವಾದ ಸಂಖ್ಯೆ. ಪ್ರಕಾಶಕರು ಐಎಸ್ಬಿಎನ್ ಅನ್ನು ಪುಸ್ತಕ ಶೀರ್ಷಿಕೆಗೆ ನಿಯೋಜಿಸುತ್ತಾರೆ.ಒಂದು ಐಎಸ್ಬಿಎನ್ ಮುಖ್ಯವಾಗಿ ಪ್ರಕಾಶಕರು, ಪುಸ್ತಕ ಮಾರಾಟಗಾರರು, ಗ್ರಂಥಾಲಯಗಳು, ಇಂಟರ್ನೆಟ್ ಚಿಲ್ಲರೆ ವ್ಯಾಪಾರಿಗಳು ಮತ್ತು ಇತರ ಪೂರೈಕೆ ಸರಪಳಿಗಳು ಆದೇಶ, ಪಟ್ಟಿಗಳು, ಮಾರಾಟದ ದಾಖಲೆಗಳು ಮತ್ತು ಷೇರು ನಿಯಂತ್ರಣ ಉದ್ದೇಶಗಳಿಗಾಗಿ ಬಳಸಲ್ಪಡುವ ಒಂದು ಉತ್ಪನ್ನ ಗುರುತಿಸುವಿಕೆ. ಐಎಸ್ಬಿಎನ್ ನೋಂದಾಯಿಸುವವರನ್ನು ನಿರ್ದಿಷ್ಟ ಶೀರ್ಷಿಕೆ, ಆವೃತ್ತಿ ಮತ್ತು ಸ್ವರೂಪವನ್ನು ಗುರುತಿಸುತ್ತದೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಬೆಳೆಯ ಆವರ್ತನೆ, ಹಸಿರು ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಕಂಪ್ಯೂಟರ್ ಒಳರವಾನೆ ಸಂಸ್ಕರಣೆ ಹಾಗೂ ಹೊರರವಾನೆ ಸಾಧನಗಳನ್ನು ಹೊಂದಿದ್ದು ಒಳರವಾನೆ ಸಾಧನಗಳ ಮೂಲಕ ನೀಡಿದಂತಹ ಮಾಹಿತಿಯನ್ನು ಸಂಸ್ಕರಿಸಿ ಹೊರರವಾನೆ ಸಾಧನಗಳ ಮೂಲಕ ಉಪಯೋಗಿಸಿ(ಯೂಜರ್)ಗೆ ನೀಡುವುದಲ್ಲದೇ ಮಾಹಿತಿ ಮತ್ತು ದತ್ತಾಂಶಗಳನ್ನು ಶೇಖರಿಸಿಡಬಹುದಾದ ಸಾಧನವಾಗಿರುತ್ತದೆ ಅಲ್ಲದೇ ಶೇಖರಿಸಿಟ್ಟ ಅಥವಾ ನಾವು ನೀಡಿದಂತಹಾ ಮಾಹಿತಿಯನ್ನು ಒಂದು ಗಣಕಯಂತ್ರ ದಿಂದ ಮತ್ತೊಂದು ಗಣಕಯಂತ್ರಕ್ಕೆ ಸಂಪರ್ಕಜಾಲದ ಮೂಲಕ ನಮ್ಮ ಆದೇಶದ ಮೇರೆಗೆ ರವಾನಿಸುತ್ತದೆ.
ಜಾಗತಿಕ ತಾಪಮಾನ ನಿಯಂತ್ರಣ ಜಾಗತಿಕ ತಾಪಮಾನ ಏರಿಕೆ ಯೆಂದರೆ 20ನೇ ಶತಮಾನದ ಮಧ್ಯಭಾಗದಲ್ಲಿ ಭೂಮಿಯ ಮೇಲ್ಮೈ-ಸಮೀಪದಲ್ಲಿರುವ ವಾಯು ಮತ್ತು ಸಾಗರ ಪ್ರದೇಶಗಳಲ್ಲಿ ಆದ ಸರಾಸರಿ ತಾಪಮಾನದ ಏರಿಕೆ ಹಾಗೂ ಅದರ ಪ್ರಕ್ಷೇಪಿತ ಮುಂದುವರಿಕೆ. ಜಾಗತಿಕ ಮೇಲ್ಮೈ ಉಷ್ಣತೆಯು ಕಳೆದ ಶತಮಾನದಲ್ಲಿ 0.74 ± 0.18 °C (1.33 ± 0.32 °F)ರಷ್ಟು ಹೆಚ್ಚಿದೆ. ಹವಾಮಾನ ಬದಲಾವಣೆಯ ಕುರಿತಾದ ಅಂತರ-ಸರಕಾರಿ ಮಂಡಳಿಯು (IPCC) ಅಗೆದು ತೆಗೆದ ಇಂಧನಗಳು ಮತ್ತು ಅರಣ್ಯನಾಶಗಳಂತಹಾ ಮಾನವ ಚಟುವಟಿಕೆಗಳಿಂದಾದ ಹಸಿರುಮನೆ ಅನಿಲಗಳ ಸಂಗ್ರಹದ ಹೆಚ್ಚಳವು 20ನೇ ಶತಮಾನ ದ ಮಧ್ಯಕಾಲದ ನಂತರದ ತಾಪಮಾನ ಏರಿಕೆಗೆ ಕಾರಣವೆಂದು ತೀರ್ಮಾನಕ್ಕೆ ಬಂದಿದೆ.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
ಹರಿದಾಸ ಭಕ್ತಿ ಚಳುವಳಿಯು ಭಾರತದ ಸಾಂಸ್ಕೃತಿಕ ಇತಿಹಾಸಕ್ಕೆ ಒಂದು ಮಹತ್ವದ ತಿರುವು ನೀಡಿತ್ತು. ಆರು ಶತಮಾನಗಳ ಅವಧಿಯಲ್ಲಿ ಹಲವು ಸಂತರು ಹಾಗು ಯೊಗಿಗಳು ದಕ್ಷಿಣ ಭಾರತ ಅದರಲ್ಲೂ ವಿಶೇಷವಾಗಿ ಕರ್ನಾಟಕದ ಸಂಸ್ಕಾರ, ತತ್ವ ಹಾಗು ಕಲೆಯನ್ನು ರೂಪಗೊಳಿಸುವಲ್ಲಿ ಸಹಾಯ ಮಾಡಿದ್ದಾರೆ, ಅವರು ಸಾಕಷ್ಟು ಧಾರ್ಮಿಕ ಪ್ರಭಾವವನ್ನು ಜನ ಸಮೂಹ ಹಾಗು ದಕ್ಷಿಣ ಭಾರತವನ್ನು ಆಳಿದ ರಾಜ್ಯಗಳ ಮೇಲೆ ಬೀರಿದರು. ಈ ಚಳುವಳಿಯನ್ನು ಪ್ರಾರಂಭಿಸಿದ್ದು ಹರಿದಾಸರು (ಕನ್ನಡ:ಹರಿದಾಸರು,ಇದರ ಅಕ್ಷರಶಃ ಅರ್ಥವೆಂದರೆ 'ಹರಿಯ ಸೇವಕರು') ಹಾಗು ಆಕಾರ ಪಡೆದದ್ದು ೧೩ನೆಯ- ೧೪ನೆಯ ಶತಮಾನದ, ಕಾಲಮಾನದಲ್ಲಿ, ವಿಜಯನಗರ ಸಾಮ್ರಾಜ್ಯ ಆಳ್ವಿಕೆಯಾ ಕಾಲದಲ್ಲಿ ಹಾಗು ಅದರ ಮುನ್ನ.
ಈತನನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯ ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯನನ್ನೇ ಮೊದಲ ವಚನಕಾರನೆಂದು ಗುರುತಿಸಲಾಗುತ್ತದೆ.
ಇಂದಿರಾ ಪ್ರಿಯದರ್ಶಿನಿ ಗಾಂಧಿ (ಹಿಂದಿ:इंदिरा प्रियदर्शिनी गांधीಇಂದಿರಾ ಪ್ರಿಯದರ್ಶಿನಿ ಗಾಂಧಿ; ನಿ: ನೆಹರು; (೧೯ ನವೆಂಬರ್ ೧೯೧೭ – ೩೧ ಅಕ್ಟೋಬರ್ ೧೯೮೪) ೧೯೬೬ರಿಂದ ೧೯೭೭ರವೆಗೆ ಸತತ ಮೂರು ಬಾರಿ ಭಾರತ ಗಣತಂತ್ರ ದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ನಾಲ್ಕನೇ ಬಾರಿ ೧೯೮೦ರಿಂದ ೧೯೮೪ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಅವರು ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಇಂದಿನವರೆಗೆ ಆ ಸ್ಥಾನ ಅವರ ಪಾಲಿನದ್ದೇ ಆಗಿದೆ.