The most-visited ಕನ್ನಡ Wikipedia articles, updated daily. Learn more...
ಕರ್ನಾಟಕ ವಿಧಾನಸಭೆ ಚುನಾವಣೆ, ೨೦೧೮
ಕರ್ನಾಟಕದ ಎಲ್ಲಾ ೨೨೪ ವಿಧಾನಸಭಾ ಕ್ಷೇತ್ರಕ್ಕೆ ಶಾಸಕರನ್ನು ಆಯ್ಕೆ ಮಾಡಲು ೨೦೧೮ರಲ್ಲಿ ಕರ್ನಾಟಕ ವಿಧಾನಸಭೆಯ ಚುನಾವಣೆ ನಡೆಯಲಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ gfhvಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಮಹಾದೇವಿ ವರ್ಮಾ (೧೯೦೭- ೧೧, ಸೆಪ್ಟೆಂಬರ್ ೧೯೮೭) ಹಿಂದಿ ಭಾಷೆಯ ಪ್ರಸಿದ್ಧ ಕವಯಿತ್ರಿ, ಸ್ವಾತಂತ್ರ್ಯ ಹೋರಾಟಗಾರ್ತಿ, ಮಹಿಳಾ ಹಕ್ಕುಗಳ ಪ್ರತಿಪಾದಕಿ ಹಾಗು ಶಿಕ್ಷಣ ತಜ್ಞೆ.೧೯೧೪ರಿಂದ ೧೯೩೮ರವರೆಗೆ ಹಿಂದಿ ಸಾಹಿತ್ಯಲೋಕದಲ್ಲಿ ನೆಡೆದ ಛಾಯಾವಾದ ಸಾಹಿತ್ಯ ಪ್ರಕಾರ ಹಾಗು ಹಲವು ಕವಿ ಸಮ್ಮೇಳನಗಳಲ್ಲಿ ಇವರು ಪ್ರಮುಖ ಪಾತ್ರವನ್ನು ನಿರ್ವಹಿಸಿದರು. "ಆಧುನಿಕ ಮೀರಾ" ಎಂದು ಖ್ಯಾತರಾಗಿದ್ದ ಇವರು ೧೯೮೨ ರಲ್ಲಿ ಜ್ಞಾನಪೀಠ ಪ್ರಶಸ್ತಿ ಪಡೆದರು. ಅಲಹಾಬಾದಿನಲ್ಲಿರುವ ಪ್ರಯಾಗ್ ಮಹಿಳಾ ವಿದ್ಯಾಪೀಠದ ಪ್ರಾಂಶುಪಾಲೆ ಹಾಗು ಉಪ-ಕುಲಪತಿಯಾಗಿಯು ಸಹ ಇವರು ಕಾರ್ಯ ನಿರ್ವಹಿಸಿದರು.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ
ಟೆಂಪ್ಲೇಟು:Pp-protect ಇಂಟರ್ನ್ಯಾಷನಲ್ ಸ್ಟ್ಯಾಂಡರ್ಡ್ ಬುಕ್ ಸಂಖ್ಯೆ (ಐ.ಎಸ್.ಬಿ.ಎನ್) /ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ ಒಂದು ವಿಶಿಷ್ಟವಾದ ಸಂಖ್ಯೆ. ಪ್ರಕಾಶಕರು ಐಎಸ್ಬಿಎನ್ ಅನ್ನು ಪುಸ್ತಕ ಶೀರ್ಷಿಕೆಗೆ ನಿಯೋಜಿಸುತ್ತಾರೆ.ಒಂದು ಐಎಸ್ಬಿಎನ್ ಮುಖ್ಯವಾಗಿ ಪ್ರಕಾಶಕರು, ಪುಸ್ತಕ ಮಾರಾಟಗಾರರು, ಗ್ರಂಥಾಲಯಗಳು, ಇಂಟರ್ನೆಟ್ ಚಿಲ್ಲರೆ ವ್ಯಾಪಾರಿಗಳು ಮತ್ತು ಇತರ ಪೂರೈಕೆ ಸರಪಳಿಗಳು ಆದೇಶ, ಪಟ್ಟಿಗಳು, ಮಾರಾಟದ ದಾಖಲೆಗಳು ಮತ್ತು ಷೇರು ನಿಯಂತ್ರಣ ಉದ್ದೇಶಗಳಿಗಾಗಿ ಬಳಸಲ್ಪಡುವ ಒಂದು ಉತ್ಪನ್ನ ಗುರುತಿಸುವಿಕೆ. ಐಎಸ್ಬಿಎನ್ ನೋಂದಾಯಿಸುವವರನ್ನು ನಿರ್ದಿಷ್ಟ ಶೀರ್ಷಿಕೆ, ಆವೃತ್ತಿ ಮತ್ತು ಸ್ವರೂಪವನ್ನು ಗುರುತಿಸುತ್ತದೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
ಚುನಾವಣೆ ಯೆನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ.ಇದರಲ್ಲಿ,ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚುನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ,ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಕಂಪ್ಯೂಟರ್ ಒಳರವಾನೆ ಸಂಸ್ಕರಣೆ ಹಾಗೂ ಹೊರರವಾನೆ ಸಾಧನಗಳನ್ನು ಹೊಂದಿದ್ದು ಒಳರವಾನೆ ಸಾಧನಗಳ ಮೂಲಕ ನೀಡಿದಂತಹ ಮಾಹಿತಿಯನ್ನು ಸಂಸ್ಕರಿಸಿ ಹೊರರವಾನೆ ಸಾಧನಗಳ ಮೂಲಕ ಉಪಯೋಗಿಸಿ(ಯೂಜರ್)ಗೆ ನೀಡುವುದಲ್ಲದೇ ಮಾಹಿತಿ ಮತ್ತು ದತ್ತಾಂಶಗಳನ್ನು ಶೇಖರಿಸಿಡಬಹುದಾದ ಸಾಧನವಾಗಿರುತ್ತದೆ ಅಲ್ಲದೇ ಶೇಖರಿಸಿಟ್ಟ ಅಥವಾ ನಾವು ನೀಡಿದಂತಹಾ ಮಾಹಿತಿಯನ್ನು ಒಂದು ಗಣಕಯಂತ್ರ ದಿಂದ ಮತ್ತೊಂದು ಗಣಕಯಂತ್ರಕ್ಕೆ ಸಂಪರ್ಕಜಾಲದ ಮೂಲಕ ನಮ್ಮ ಆದೇಶದ ಮೇರೆಗೆ ರವಾನಿಸುತ್ತದೆ.
ಭಾರತೀಯ ೨೦೦೦ ರೂಪಾಯಿ ನೋಟು (₹ 2000) ಭಾರತೀಯ ರೂಪಾಯಿಯ ಒಂದು ಪಂಗಡವಾಗಿದೆ.ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ₹ 500 ಮತ್ತು ₹ 1000 ಬ್ಯಾಂಕ್ನೋಟುಗಳ ನಿಷೇಧಿಸಿದ ನಂತರ 8 ನವೆಂಬರ್ 2016 ರಂದು ಬಿಡುಗಡೆ ಮಾಡಿತು ಮತ್ತು 10 ನವೆಂಬರ್ 2016 ರಿಂದ ಚಲಾವಣೆಯಲ್ಲಿದೆ.ಇದು ಸಂಪೂರ್ಣ ಹೊಸ ವಿನ್ಯಾಸದೊಂದಿಗೆ ಮಹಾತ್ಮ ಗಾಂಧಿ ಹೊಸ ಸರಣಿಯ ಬ್ಯಾಂಕ್ನೋಟುಗಳ ಒಂದು ಭಾಗವಾಗಿದೆ.ಭಾರತೀಯ ₹ 2000 ರೂಪಾಯಿ ಟಿಪ್ಪಣಿ ಆರ್ಬಿಐ ಮುದ್ರಿಸಿರುವ ಅತ್ಯಧಿಕ ಕರೆನ್ಸಿ ನೋಟ್ ಆಗಿದ್ದು ಅದು ಸಕ್ರಿಯ ಚಲಾವಣೆಯಲ್ಲಿದೆ, ಆರ್ಬಿಐ ಅಧಿಕೃತ ಪ್ರಕಟಣೆಗೆ ಮುಂಚಿತವಾಗಿ, ಅಕ್ಟೋಬರ್ 2016 ರ ಅಂತ್ಯದ ವೇಳೆಗೆ ಮೈಸೂರಿನ ಕರೆನ್ಸಿ ಪ್ರಿಂಟಿಂಗ್ ಪ್ರೆಸ್ನಿಂದ ₹ 2000 ಟಿಪ್ಪಣಿಗಳನ್ನು ಮುದ್ರಿಸಲಾಗಿದೆಯೆಂದು ಮಾಧ್ಯಮ ವರದಿ ಮಾಡಿದೆ.ಭಾರತೀಯ ೫೦೦ ಮತ್ತು ೧೦೦೦ ರೂಪಾಯಿ ನೋಟುಗಳ ಚಲಾವಣೆ ರದ್ದತಿ ನಂತರ , ಐದು ಹೊಸ ಕರೆನ್ಸಿ ನೋಟುಗಳನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಪ್ರಕಟಿಸಿದೆ - ₹ 2,000, ₹ 500, ₹ 200, ₹ 50, ಮತ್ತು ₹ 1.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ ಇದರಲ್ಲಿ ಇಪ್ಪತ್ತೊಂಬತ್ತು ರಾಜ್ಯಗಳು ಹಾಗು ಏಳು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಮಾಧ್ಯಮ ಅಥವಾ ಸಮೂಹ ಮಾಧ್ಯಮ ಎಂದು ಸಾಮಾನ್ಯವಾಗಿ ಪತ್ರಿಕೆ, ಬಾನುಲಿ ಮತ್ತು ದೂರದರ್ಶನಗಳನ್ನು ಸೇರಿಸಿ ಹೇಳುತ್ತಾರೆ. ಸಂಗೀತ, ನೃತ್ಯ, ನಾಟಕ, ಅಂತರ್ಜಾಲ ಕ್ಷೇತ್ರ, ಭಿತ್ತಿ ಚಿತ್ರ-ಪತ್ರ, ಜಾಹೀರಾತು, ಡಂಗುರ, ಸಿನಿಮಾ – ಇವುಗಳನ್ನೂ ಕೂಡ ಮಾಧ್ಯಮವನ್ನಾಗಿ ಪರಿಗಣಿಸಬಹುದು. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವು ಕಾರ್ಯನಿರ್ವಹಿಸುತ್ತದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಇಂದಿರಾ ಪ್ರಿಯದರ್ಶಿನಿ ಗಾಂಧಿ (ಹಿಂದಿ:इंदिरा प्रियदर्शिनी गांधीಇಂದಿರಾ ಪ್ರಿಯದರ್ಶಿನಿ ಗಾಂಧಿ; ನಿ: ನೆಹರು; (೧೯ ನವೆಂಬರ್ ೧೯೧೭ – ೩೧ ಅಕ್ಟೋಬರ್ ೧೯೮೪) ೧೯೬೬ರಿಂದ ೧೯೭೭ರವೆಗೆ ಸತತ ಮೂರು ಬಾರಿ ಭಾರತ ಗಣತಂತ್ರ ದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ನಾಲ್ಕನೇ ಬಾರಿ ೧೯೮೦ರಿಂದ ೧೯೮೪ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಅವರು ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಇಂದಿನವರೆಗೆ ಆ ಸ್ಥಾನ ಅವರ ಪಾಲಿನದ್ದೇ ಆಗಿದೆ.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಬೆಳೆಯ ಆವರ್ತನೆ, ಹಸಿರು ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಅಂತರರಾಷ್ಟ್ರೀಯ ರೆಡ್ ಕ್ರಾಸ್ ಸಂಸ್ಥೆ
ಅಂತರರಾಷ್ಟ್ರೀಯ ರೆಡ್ ಕ್ರಾಸ್ ಸಂಸ್ಥೆಯು ಸ್ವಿಟ್ಜರ್ಲ್ಯಾಂಡ್ ದೇಶದ ಜಿನೀವ ನಗರದಲ್ಲಿ ಸ್ಥಿತವಾಗಿರುವ ಒಂದು ಜನಸೇವಾಪರ ಸಂಸ್ಥೆ. ಜಿನೀವ ಒಪ್ಪಂದಗಳಲ್ಲಿ ಭಾಗಿಯಾಗಿರುವ ದೇಶಗಳು ಯುದ್ಧ ಕಾಲದಲ್ಲಿ ಈ ಸಂಸ್ಥೆಗೆ ಯುದ್ಧದಿಂದ ಪ್ರಭಾವಿತರಾಗಿರುವವರನ್ನು ಚಿಕಿತ್ಸೆ ನೀಡುವ ಹಕ್ಕನ್ನು ನೀಡಿವೆ. ೧೮೬೪ರಲ್ಲಿ ಹೆನ್ರಿ ಡುನಾಂಟ್ ಅವರಿಂದ ಸ್ಥಾಪಿತವಾದ ಈ ಸಂಸ್ಥೆಗೆ ೧೯೧೭, ೧೯೪೪ ಮತ್ತು ೧೯೬೩ರ ನೊಬೆಲ್ ಶಾಂತಿ ಪುರಸ್ಕಾರಗಳು ದೊರಕಿವೆ.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಭಾರತದ ಸಾಮಾಜಿಕ -ಧಾರ್ಮಿಕ ಸುಧಾರಣ ಕ್ರಿಯೆಯಲ್ಲಿ ,ಹೆಚ್ಚು ತೊಡಗಿಸಿಕೊಂಡ ಬ್ರಹ್ಮ ಸಮಾಜ ವನ್ನು ೧೮೨೮ ರಲ್ಲಿ ಹುಟ್ಟು ಹಾಕಿದ್ದು, ರಾಜ ರಾಮ್ ಮೋಹನ್ ರೋಯ್ (ಆಗಸ್ಟ್ ೧೪, ೧೭೭೪ – ಸೆಪ್ಟೆಂಬರ್ ೨೭, ೧೮೩೩),ಬ್ರಾಹ್ಮೋ ಸಭಾ ದ ಸಂಸ್ಥಾಪಕರು , (ಜೊತೆಗೆ ದ್ವಾರಕನಾಥ್ ಟ್ಯಾಗೋರ್ ಮತ್ತು ಇತರ ಬೆಂಗಾಲಿ ಬ್ರಾಹ್ಮಣರು ). ರಾಜನೀತಿ , ಸಾರ್ವಜನಿಕ ಆಡಳಿತ ಮತ್ತು ವಿದ್ಯಾಭ್ಯಾಸ ಹಾಗೆ ಧರ್ಮದೊಂದಿಗೆ ,ಅವರ ಪ್ರಭಾವ ಪಾರದರ್ಶಕವಾಗಿತ್ತು. ಹಿಂದೂ ಧರ್ಮದ ಉತ್ತರ ಕ್ರಿಯಾ ಪದ್ಧತಿಯಲ್ಲಿ , ಸತಿಪದ್ಧತಿಯನ್ವಯ ವಿಧವೆಯನ್ನು ಗಂಡಂದಿರ ಅಗ್ನಿ ಚಿತೆಯ ಮೇಲೆ ಬಲವಂತವಾಗಿ ಸುಡುತ್ತಿದ್ದ 'ಸತಿ' ಪದ್ಧತಿಯನ್ನು ರದ್ದು ಮಾಡುವ ಹೋರಾಟದಲ್ಲಿ ಹೆಚ್ಚು ಕ್ರಿಯಾಶಿಳರಾಗಿದ್ದರು.