The most-visited ಕನ್ನಡ Wikipedia articles, updated daily. Learn more...
ಅಟಲ್ ಬಿಹಾರಿ ವಾಜಪೇಯಿ( 25 ಡಿಸೆಂಬರ್ 1924 - 16 ಆಗಸ್ಟ್ 2018)ಯವರು ಭಾರತದ ಮಾಜಿ ಪ್ರಧಾನಮಂತ್ರಿ, ರಾಜಕಾರಣಿ, ಶ್ರೇಷ್ಠ ಸಂಸದೀಯ ಪಟು, ವಾಗ್ಮಿ, ಕವಿ, ನೇತಾರ ಹಾಗೂ ಜನನಾಯಕ. ಮೂರು ಬಾರಿ ಭಾರತದ ಪ್ರಧಾನಮಂತ್ರಿಯಾಗಿ ಇದಕ್ಕೂ ಮುಂಚೆ ವಿದೇಶಾಂಗ ಸಚಿವರಾಗಿ, ವಿರೋಧ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇವರು ತಮ್ಮ ಸಭ್ಯತೆ, ಹಾಸ್ಯಪ್ರಜ್ಞೆ, ಉದಾರ ವ್ಯಕ್ತಿತ್ವ ಮತ್ತು ನಡವಳಿಕೆಗಳಿಂದ ಅತ್ಯಂತ ಜನಪ್ರಿಯ ನಾಯಕರಾಗಿದ್ದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ gfhvಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಭಾರತದ ರಾಷ್ತ್ರೀಯ ಧ್ವಜ'ದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಕೈಗಾರಿಕಾ ಕ್ರಾಂತಿಯು ೧೮ ಮತ್ತು ೧೯ನೇ ಶತಮಾನದ ಅವಧಿಯಲ್ಲಿ ಸಂಭವಿಸಿದೆ. ಆ ಅವಧಿಯಲ್ಲಿ ಕೃಷಿ, ಉತ್ಪಾದನೆ,ಗಣಿಗಾರಿಕೆ ಮತ್ತು ಸಾರಿಗೆಯಲ್ಲಿ ಪ್ರಮುಖ ಬದಲಾವಣೆಗಳಿಂದ ಸಾಮಾಜಿಕ ಆರ್ಥಿಕ ಮತ್ತು ಸಾಂಸ್ಕೃತಿಕ ಸ್ಥಿತಿಗತಿಗಳ ಮೇಲೆ ಗಾಢಪರಿಣಾಮ ಬೀರಿತು. ಯುನೈಟೆಡ್ ಕಿಂಗ್ಡಮ್ನಲ್ಲಿ ಪ್ರಾರಂಭವಾದ ಕೈಗಾರಿಕಾ ಕ್ರಾಂತಿ ತರುವಾಯ ಯುರೋಪ್ನಾದ್ಯಂತ, ಉತ್ತರ ಅಮೆರಿಕ ಮತ್ತು ಅಂತಿಮವಾಗಿ ವಿಶ್ವದಲ್ಲಿ ಹರಡಿತು.
{{#if:| ಕೊಡಗು ಜಿಲ್ಲೆ, ಕರ್ನಾಟಕ ರಾಜ್ಯ ದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಹಸಿರು ವನರಾಜಿಯಿಂದ, ತೊರೆ, ಝರಿ, ನದಿಗಳಿಂದ ಕೂಡಿದ ಪರಿಸರದಲ್ಲಿದೆ. ಅದರ ಬಗ್ಗೆ ಹಲವಾರು ಕನ್ನಡ ಕವಿಗಳು ವರ್ಣಿಸಿದ್ದಾರೆ. ಎಲ್ಲಿ ಭೂರಮೆ ದೇವ ಸನ್ನಿಧಿ ಬಯಸಿ ಬಿಮ್ಮನೆ ಬಂದಳೋ ಎಲ್ಲಿ ಮೋಹನ ಗಿರಿಯ ಬೆರಗಿನ ರೂಪಿನಿಂದಲಿ ನಿಂದಳೋ ಎಲ್ಲಿ ಮುಗಿಲಲಿ ಮಿಂಚಿನೋಲ್ ಕಾವೇರಿ ಹೊಳೆ ಹೊಳೆ ಹೊಳೆವಳೋ ಎಲ್ಲಿ ನೆಲವನು ತಣಿಸಿ ಜನಮನ ಹೊಲದ ಕಳೆ ಕಳೆ ಕಳೆವಳೋ ಅಲ್ಲೆ ಆ ಕಡೆ ನೋಡಲಾ ಅಲ್ಲೆ ಕೊಡಗರ ನಾಡಲಾ ಅಲ್ಲೆ ಕೊಡಗರ ಬೀಡಲಾ ಭೂಲಕ್ಷ್ಮಿಯು ದೇವರ ಸನ್ನಿಧಾನದಲ್ಲಿರಬೇಕೆಂಬ ಬಯಕೆಯಿಂದ ಗಂಭೀರ-ವೈಯಾರದಿಂದ ಬಂದು ನೆಲೆಸಿದ ಕ್ಷೇತ್ರ; ಭೂಮಿಯನ್ನು ತಣಿಸಿ ಜನರಿಗೆ ಅನ್ನವನ್ನೀಯುವ ಕಾವೇರಿ ಹುಟ್ಟಿ ಹರಿಯಲಾರಂಭಿಸುವ ಪ್ರದೇಶ ಕೊಡಗು ಎಂದು ಕವಿವರ್ಯ ಪಂಜೆ ಮಂಗೇಶರಾಯರು ತಮ್ಮ ಹುತ್ತರಿ ಹಾಡು ಎಂಬ ಪದ್ಯದಲ್ಲಿ ಬಣ್ಣಿಸಿದ್ದಾರೆ.
ಮದರ್ ತೆರೇಸಾಸುಮಾರು 45 ವರ್ಷಗಳಿಗೂ ಹೆಚ್ಚು ಕಾಲ ಇವರು ಬಡವರ, ರೋಗಿಗಳ, ಅನಾಥರ ಮತ್ತು ಮರಣ ಸಂಕಟದಲ್ಲಿರುವವರ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಂಡವರು. 1970ರ ವೇಳೆಗೆ ಇವರು ಒಬ್ಬ ಮಾನವತಾ ವಾದಿಯಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾದರು. ಮದರ್ ತೆರೇಸಾ ಒಬ್ಬ ಮಹಾ ಮಾನವತಾವಾದಿಯಾಗಿ ಬಡವರ, ನಿರ್ಗತಿಕರ, ರೋಗಿಗಳ, ಅನಾಥರ, ವೃದ್ಧರ ಪರವಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಇವರಿಗೆ ವಿಶ್ವದ ಅತ್ಯುನ್ನತ ನೊಬೆಲ್ ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
"ಅಪಘಾತವಾದ ಸಂಧರ್ಭ" ಸುಧಾ ಚಂದ್ರನ್ ಮತ್ತು ಆಕೆಯ ತಂದೆ ತಾಯಿಯೊಂದಿಗೆ ಮೇ೨ ೧೯೮೧ ಯ ದೇವಸ್ಟ್ಣಾನ ಕ್ಕೆ ತೆರಳೂ ತೀರುವಾಗ ಮಧ್ಯ ರಾತ್ರಿ ಆಕೆ ತೆರಳೂತ್ತಿದ ಬಸ್ ತೀರ್ವ ಅಪಘಾತಕ್ಕೆ ಸಿಲುಕಿತು.ಸುಧಾ ಅವರು ಚಲಕನ ಹಿಂಭಾದಿಯ ಸೀಟೆನಲ್ಲಿ ಕುಲಿತಿದ್ದರಿಂದಾಗಿ ಅಪಘಾತಕ್ಕೆ ಬಲಿಯದರು.ಅಪಘಾತದ ಸಂಧರ್ಭದಲ್ಲಿ ಸುಧಾ ಚಂದ್ರನ್ ರವರು ಕಾಲನ್ನು ಮುಂದಕ್ಕೆ ಚಾಚಿದರು ಇದರಿಂದಾಗಿ ಅವರ ಕಾಲೂ ಸೀಟೀನ ಮಧ್ಯೆಕ್ಕೆ ಸಿಲುಕಿತು. ಬಸ್ ನಲ್ಲಿದ ಪ್ರಯಾಣೀಕರು ಬಹಳಾಷ್ಹ್ಟೂ ಜನ ಗಾಯಗೂಂಡರು.ಸ್ಥಳೀಯರು ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡೀದರು.ಬಲಗಾಲು ತೀರ ಗಾಯಗೂಂಡೀತ್ತು.ವೈದ್ಯರು ಅಕೆಗೆ ಪ್ರಥಮ ಚಿಕಿತ್ಸೆಯನ್ನು ನಿಡೀದರು.ಕೆಲ ದಿನಗಳ ನಂತರ ಆಕೆಯ ಕಾಲು ಗ್ಯಾಂಗ್ರಿನ್ ಆಗಿದೆ ಎಂದು ತಿಳೀಯಿತು.ಕೂಡಲೆ ಕಾಲುಗಲ್ಲನ್ನು ತುಂಡೂ ಮಾಡೂವುದು ಸೂಕ್ತ ಅಥವಾ ಪ್ರಾಣಾಕ್ಕೆ ಅಪಾಯ ಎಂದು ವೈದ್ಯರು ಸಲಹೆ ನೀಡೀದರು. ಸಲಹೆಯ ಮೇರಿಗೆ ಆಕೆಯ ಕಾಲು ತುಂಡೂ ಮಾಡಲಾಯಿತು.
ಬೆಳೆಯ ಆವರ್ತನೆ, ಹಸಿರು ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ತಾಜ್ ಮಹಲ್ (pronounced /tɑdʒ məˈhɑl/; ಹಿಂದಿ: ताज महल ; ಪರ್ಷಿಯನ್/ಉರ್ದು: تاج محل ) ಭಾರತದ ಆಗ್ರಾದಲ್ಲಿರುವ ಭವ್ಯ ಸಮಾಧಿಯಾಗಿದೆ. ಇದನ್ನು ಮೊಘಲ್ ಚಕ್ರವರ್ತಿ ಷಹ ಜಹಾನ್ ತನ್ನ ಮೆಚ್ಚಿನ ಪತ್ನಿ ಮಮ್ತಾಜ್ ಮಹಲ್ಳ ನೆನಪಿಗಾಗಿ ಕಟ್ಟಿಸಿದನು. ಪರ್ಷಿಯನ್, ಭಾರತೀಯ ಮತ್ತು ಮುಸ್ಲಿಂ ವಾಸ್ತುಶೈಲಿಗಳ ಸಮ್ಮಿಶ್ರಣವಾದ ಮೊಘಲ್ ವಾಸ್ತುಶೈಲಿಗೆ ತಾಜ್ ಮಹಲ್ ("ತಾಜ್" ಎಂದೂ ಕರೆಯಲ್ಪಡುತ್ತದೆ) ಅತ್ಯುತ್ತಮ ಉದಾಹರಣೆಯೆಂದು ಪರಿಗಣಿಸಲಾಗಿದೆ.
ಕಾರ್ಗಿಲ್ ಸಂಘರ್ಷ ವೆಂದೇ ಹೆಸರಾದ ಕಾರ್ಗಿಲ್ ಯುದ್ದವು ಭಾರತ ಮತ್ತು ಪಾಕಿಸ್ತಾನದ ಮಧ್ಯೆ ನಡೆದ ಸಶಸ್ತ್ರ ಸಂಘರ್ಷವಾಗಿದ್ದು, ಕಾಶ್ಮೀರದ ಕಾರ್ಗಿಲ್ ಜಿಲ್ಲೆ ಮತ್ತು ನಿಯಂತ್ರಣ ರೇಖೆಯಿರುವ ಪ್ರದೇಶಗಳಲ್ಲಿ 1999ರ ಮೇ ಮತ್ತು ಜುಲೈ ನಡುವೆ ಸಂಭವಿಸಿತು. ಉಭಯ ರಾಷ್ಟ್ರಗಳ ನಡುವಿನ de facto ಗಡಿಯಾಗಿರುವ ನಿಯಂತ್ರಣ ರೇಖೆಯಲ್ಲಿ(LOC)ರುವ ಭಾರತದ ನೆಲೆಗಳಿಗೆ ಪಾಕಿಸ್ತಾನದ ಸೈನಿಕರು ಮತ್ತು ಕಾಶ್ಮೀರಿ ಉಗ್ರಗಾಮಿಗಳು ನುಸುಳಿದ್ದೇ ಯುದ್ಧಕ್ಕೆ ಕಾರಣ. ಯುದ್ಧದ ಆರಂಭದ ಹಂತಗಳಲ್ಲಿ, ಕಾರ್ಗಿಲ್ ಕದನಕ್ಕೆ ಸ್ವತಂತ್ರ ಕಾಶ್ಮೀರಿ ಉಗ್ರಗಾಮಿಗಳ ಮೇಲೆ ಪಾಕಿಸ್ತಾನ ಗೂಬೆ ಕೂರಿಸಿತು, ಆದರೆ ಯುದ್ಧಾನಂತರದ ಸಾವು ನೋವುಗಳ ದಾಖಲೆಗಳು ಮತ್ತು ಆ ಬಳಿಕ ಪಾಕಿಸ್ತಾನದ ಪ್ರಧಾನ ಮಂತ್ರಿ ಮತ್ತು ಸೇನಾ ಸಿಬ್ಬಂದಿ ಮುಖ್ಯಸ್ಥರು ನೀಡಿದ ಹೇಳಿಕೆಗಳು, ಜನರಲ್ ಅಶ್ರಫ್ ರಷೀದ್ ನೇತೃತ್ವದ ಪಾಕಿಸ್ತಾನಿ ಅರೆಸೇನೆ ಪಡೆಗಳು ಈ ಯುದ್ಧದಲ್ಲಿ ಪಾಲ್ಗೊಂಡಿದ್ದನ್ನು ರುಜುವಾತು ಮಾಡಿತು.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಇತರರ ಅಧೀನದಲ್ಲಿ, ಎಂದರೆ ತಮ್ಮ ನೇಮಕದಾರರ, ಉದ್ಯೋಗದಾತರ, ಧಣಿಗಳ ಅಥವಾ ಯಜಮಾನರ ಕೈಕೆಳಗೆ, ದುಡಿಯುವ ಜನರ ಕೆಲಸಕ್ಕೆ ಸಂಬಧಿಸಿದಂತೆ ರಚಿತವಾದ ಎಲ್ಲ ಕಾನೂನುಗಳು (ಲೇಬರ್ ಲಾಸ್). ಇವನ್ನು ಕೈಗಾರಿಕಾ ಕಾನೂನುಗಳು ಅಥವಾ ಕೈಗಾರಿಕಾ ನ್ಯಾಯ ಎಂದೂ ಕರೆಯುವುದುಂಟು. ಆದರೆ ಕೈಗಾರಿಕೋದ್ಯಮಗಳಲ್ಲಿ ದುಡಿಯುವವರು ಮಾತ್ರವೇ ಈ ಕಾನೂನುಗಳ ಪರಿಮಿತಿಯೊಳಕ್ಕೆ ಬರುವುದಿಲ್ಲವಾದ್ದರಿಂದ ಇವನ್ನು ಕಾರ್ಮಿಕ ಕಾನೂನುಗಳು ಎಂದು ಕರೆಯುವುದೇ ಸೂಕ್ತ.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ)
ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ:GST) 2016:(Goods and Services Tax Bill or GST Bill 2016) ಭಾರತದ ತೆರಿಗೆ ವ್ಯವಸ್ಥೆಯಲ್ಲಿ ತೆರಿಗೆ ಸುಧಾರಣಾ ಕ್ರಮವಾಗಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯವಸ್ಥೆಯು ದಿ.1 ಜುಲೈ, 2017 ಮಧ್ಯರಾತ್ರಿಯಿಂದಲೇ ದೇಶದಾದ್ಯಂತ ಜಾರಿಗೆ ಬಂದಿದೆ. ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಮಧ್ಯರಾತ್ರಿ 12 ಗಂಟೆಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಗುಂಡಿ ಒತ್ತುವ ಮೂಲಕ ಹೊಸ ತೆರಿಗೆ ವ್ಯವಸ್ಥೆಗೆ ಚಾಲನೆ ನೀಡಿದರು. |} ಸರಕು ಮತ್ತು ಸೇವಾ ತೆರಿಗೆ ಬಿಲ್ ಅಥವಾ ಜಿ.ಎಸ್.ಟಿ ಮಸೂದೆ (ಬಿಲ್) (ಹಿಂದಿ: वस्तु एवं सेवा कर विधेयक), ಅಧಿಕೃತವಾಗಿ ಇದು ಸಂವಿಧಾನದ (ನೂರಾ ಇಪ್ಪತ್ತೆರಡನೇ ತಿದ್ದುಪಡಿ) ಮಸೂದೆ, 2014 ಎಂದು ಪ್ರಸ್ತಾಪಿಸಿದೆ.