The most-visited ಕನ್ನಡ Wikipedia articles, updated daily. Learn more...
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ಆರಂಭಗೊಂಡಿದ್ದರೂ, ಅದು ಹೆಚ್ಚು ಪ್ರಚಲಿತಕ್ಕೆ ಬಂದುದು ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (2018 ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಬೆಳೆಯ ಆವರ್ತನೆ, ಹಸಿರು- ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಕೆಜಿಎಫ್ ಅಧ್ಯಾಯ ೧ ೨೦೧೮ರಲ್ಲಿ ಬಿಡುಗಡೆಯಾದ ಭಾರತೀಯ ಕನ್ನಡ ಚಲನಚಿತ್ರ.ಇದನ್ನು ಮೂಲ ಭಾಷೆಯಿಂದ ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಧ್ವನಿಪಥದೊಂದಿಗೆ(ಡಬ್ ಮಾಡಿ) ಬಿಡುಗಡೆ ಮಾಡಲಾಯಿತು. ಚಲನಚಿತ್ರವನ್ನು ಉಗ್ರಂ ಖ್ಯಾತಿಯ ಪ್ರಶಾಂತ್ ನೀಲ್ ಅವರು ಬರೆದು ನಿರ್ದೇಶಿಸಿದ್ದಾರೆ ಮತ್ತು ಹೋಂಬಾಳೆ ಚಲನಚಿತ್ರಗಳ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರ್ ಅವರು ನಿರ್ಮಿಸಿದ್ದಾರೆ. ಯಶ್ ಮತ್ತು ರಾಮಚಂದ್ರ ರಾಜು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಒಂದು ಜೀವಿಯ ದೇಹ-ಮನಸ್ಸು ಸಂಪೂರ್ಣ ಸಮತೋಲನದಲ್ಲಿರುವ ಸ್ಥಿತಿಯನ್ನು ಆರೋಗ್ಯ ಎಂದು ಕರೆಯಬಹುದು. ವಿಶ್ವ ಆರೋಗ್ಯ ಸಂಸ್ಥೆಯ ೧೯೪೫ರ ಹೇಳಿಕೆಯ ಪ್ರಕಾರ "ಆರೋಗ್ಯವೆಂದರೆ ಸಂಪೂರ್ಣ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಸುಸ್ಥಿತಿ - ಕೇವಲ ರೋಗ, ಭಾದೆಗಳ ಗೈರು ಹಾಜರಿಯಷ್ಟೇ ಅಲ್ಲ"ಆರೋಗ್ಯವೇ ಭಾಗ್ಯ.. ಮಾನವನಿಗೆ ಪರಿಸ್ಥಿತಿಗೆ ಹೊಂದಿಕೊಳ್ಳುವ ಮತ್ತು ದೈಹಿಕ, ಮಾನಸಿಕ ಅಥವಾ ಸಾಮಾಜಿಕ ಸವಾಲುಗಳನ್ನು ಎದುರಿಸುವಾಗ ಸ್ವಯಂ ನಿರ್ವಹಿಸುವ ಸಾಮರ್ಥ್ಯ ಇದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಕೆಳದಿಯ ಚನ್ನಮ್ಮ ಕ್ರಿ.ಶ.೧೬೭೨ರಿಂದ ಕ್ರಿ.ಶ.೧೬೯೭ರವರೆಗೆ ಕೆಳದಿ ಸಂಸ್ಥಾನವನ್ನು ಆಳಿದ ವೀರ ಮಹಿಳೆ. ರಾಣಿ ಚೆನ್ನಮ್ಮ ಛತ್ರಪತಿ ಶಿವಾಜಿಯ ಎರಡನೆಯ ಮಗನಾದ ರಾಜರಾಮನಿಗೆ ನೀಡಿದ ಆಶ್ರಯ ಮತ್ತು ಅದರ ಪರಿಣಾಮವಾಗಿ ಯುದ್ಧಕ್ಕೆ ಬಂದ ಔರಂಗಜೇಬನ ಸೈನ್ಯವನ್ನು ಸೋಲಿಸಿದ್ದು ಅವಳ ಆಳ್ವಿಕೆಯ ಅತ್ಯಂತ ಮಹತ್ತ್ವದ ಸಂಗತಿಗಳು. ತನ್ನ ಸ್ಥಿರ ಸಂಕಲ್ಪ, ದೂರದೃಷ್ಟಿ ಹಾಗೂ ಕಲಿತನಗಳಿಂದ ಇಕ್ಕೇರಿ ಸಂಸ್ಥಾನವನ್ನು ವಿಪತ್ತಿನಿಂದ ಪಾರು ಮಾಡಿದಳೆಂದು ಚೆನ್ನಮ್ಮ ಪ್ರಸಿದ್ಧಳಾಗಿದ್ದಾಳೆ.
ನಮ್ಮ ಸುತ್ತಮುತ್ತಲಿನ ಪ್ರದೇಶವೇ ಪರಿಸರ. ಈ ಪರಿಸರವೂ ಮರ ಗಿಡಗಳು ಹಾಗೂ ಪ್ರಾಣಿ ಪಕ್ಷಿಗಳಿಂದ ಕೂಡಿ5ದೆ.ಇದರೊಂದಿಗೆ ಮಾನವನು ಅನ್ಯೋನ್ಯತೆಯಿಂದ ಜೀವಿಸುತಿದ್ದಾನೆ.ಇವೆಲ್ಲದರ ನಡುವೆ ಮಾನವನು ತನ್ನ ಸ್ವಾರ್ಥತೆಯನ್ನು ತೋರಿಸುತ್ತಾನೆ.ಇದರಿಂದಾಗಿ ಪರಿಸರವು ಹಲವಾರು ತೊಂದರೆಗೆ ಒಳಗಾಗಿದೆ.ಇದರಲ್ಲಿ ಪರಿಸರವೂ ಎದುರಿಸುವ ಮೂರು ಮುಖ್ಯವಾದ ತೊಂದರೆಗಳೆಂದರೆ ವಾಯು ಮಾಲಿನ್ಯ , ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ. ಇದರ ಮುಖ್ಯ ಕಾರಣವೆಂದರೆ ಹೆಚ್ಚಾಗುತ್ತಿರುವ ಜನಸಂಖ್ಯೆ.ಜನರು ಬಳಸುವ ವಾಹನಗಳಿಂದ ಕೆಟ್ಟ ಹೊಗೆ ಹೊರಬರುತ್ತದೆ.ಕಾರ್ಖಾನೆಗಳಿಂದ ಹೊರಬರುವ ರಾಸಾಯನಿಕ ಹೊಗೆ ವಾಯು ಮಾಲಿನ್ಯಕ್ಕೆ ಕಾರಣವಾಗುತ್ತದೆ.ಮಾನವನ ಇಂದಿನ ದಿನಚರಿಕೆಯಿಂದ ಹಾಗೂ ಕಾರ್ಖಾನೆಗಳಿಂದ ಹೊರ ಬಿಡುವ ಕಸಗಳು, ನೀರನ್ನು ಮಾಲಿನ್ಯಗೊಳಿಸುತ್ತದೆ.ವಾಹನಗಳಿಂದ,ಮದುವೆ ಸಮಾರಂಭಗಳಲ್ಲಿ ಹಾಗೂ ದೀಪಾವಳಿಯ ಸಮಯದಲ್ಲಿ ಉಪಯೋಗಿಸುವ ಪಟಾಕಿಯಿಂದ ಶಬ್ದ ಮಾಲಿನ್ಯವಾಗುತ್ತದೆ.ಇದೆಲ್ಲಾ ಮಾನವನ ಮೇಲೆಯೇ ಪ್ರಭಾವ ಬೀರುತ್ತದೆ.ಮಾಲಿನ್ಯವೂ ಮಿತಿಮೀರಿದರೆ ಮಾನವನಿಗೆ ಈ ಪರಿಸರದಲ್ಲಿ ಜೀವಿಸಲು ಅಸಾಧ್ಯವಾಗುತ್ತದೆ.ಆದುದರಿಂದ ಈ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಜವಬ್ದಾರಿ ನಮ್ಮದಾಗಿದೆ.ಮುಂದಿನ ಪೀಳಿಗೆಗೆ ಈ ಪರಿಸರವು ಉಳಿಯ ಬೇಕಾದರೆ ಇಂದಿನಿಂದಲೇ ಒಳ್ಳೆಯ ಬದಲಾವಣೆಯನ್ನು ಮಾಡಬೇಕಾಗಿದೆ.
ಶ್ರೀ ರಾಮಕೃಷ್ಣ ಪರಮಹಂಸ (ಫೆಬ್ರವರಿ ೧೮, ೧೮೩೬ - ಆಗಸ್ಟ್ ೧೬, ೧೮೮೬) ಭಾರತದ ಪ್ರಸಿದ್ಧ ಧಾರ್ಮಿಕ ನೇತೃಗಳಲ್ಲಿ ಒಬ್ಬರು. ಕಾಳಿಯ ಆರಾಧಕರಾಗಿದ್ದ ಪರಮಹಂಸರು ಅದ್ವೈತ ವೇದಾಂತ ಸಿದ್ಧಾಂತವನ್ನು ಬೋಧಿಸಿದರಲ್ಲದೆ, ಎಲ್ಲ ಧರ್ಮಗಳೂ ಒಂದೇ ಗುರಿಯತ್ತ ನಮ್ಮನ್ನು ಒಯ್ಯುತ್ತವೆ ಎಂದು ನಂಬಿದ್ದರು. ೧೯ ನೆಯ ಶತಮಾನದ ಹಿಂದೂ ಧರ್ಮದ ಪುನರುಜ್ಜೀವನಕ್ಕೆ ದಾರಿ ಮಾಡಿಕೊಟ್ಟ ವ್ಯಕ್ತಿಗಳಲ್ಲಿ ಪರಮಹಂಸರೂ ಒಬ್ಬರು.ಇವರ ಮೊದಲ ಹೆಸರು "ಗಧಾದರ".
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಹರಿದಾಸ ಭಕ್ತಿ ಚಳುವಳಿಯು ಭಾರತದ ಸಾಂಸ್ಕೃತಿಕ ಇತಿಹಾಸಕ್ಕೆ ಒಂದು ಮಹತ್ವದ ತಿರುವು ನೀಡಿತ್ತು. ಆರು ಶತಮಾನಗಳ ಅವಧಿಯಲ್ಲಿ ಹಲವು ಸಂತರು ಹಾಗು ಯೊಗಿಗಳು ದಕ್ಷಿಣ ಭಾರತ ಅದರಲ್ಲೂ ವಿಶೇಷವಾಗಿ ಕರ್ನಾಟಕದ ಸಂಸ್ಕಾರ, ತತ್ವ ಹಾಗು ಕಲೆಯನ್ನು ರೂಪಗೊಳಿಸುವಲ್ಲಿ ಸಹಾಯ ಮಾಡಿದ್ದಾರೆ, ಅವರು ಸಾಕಷ್ಟು ಧಾರ್ಮಿಕ ಪ್ರಭಾವವನ್ನು ಜನ ಸಮೂಹ ಹಾಗು ದಕ್ಷಿಣ ಭಾರತವನ್ನು ಆಳಿದ ರಾಜ್ಯಗಳ ಮೇಲೆ ಬೀರಿದರು.ಈ ಚಳುವಳಿಯನ್ನು ಪ್ರಾರಂಭಿಸಿದ್ದು ಹರಿದಾಸರು (ಕನ್ನಡ:ಹರಿದಾಸರು,ಇದರ ಅಕ್ಷರಶಃ ಅರ್ಥವೆಂದರೆ 'ಹರಿಯ ಸೇವಕರು') ಹಾಗು ಆಕಾರ ಪಡೆದದ್ದು ೧೩ನೆಯ- ೧೪ನೆಯ ಶತಮಾನದ, ಕಾಲಮಾನದಲ್ಲಿ, ವಿಜಯನಗರ ಸಾಮ್ರಾಜ್ಯ ಆಳ್ವಿಕೆಯಾ ಕಾಲದಲ್ಲಿ ಹಾಗು ಅದರ ಮುನ್ನ. ಈ ಚಳುವಳಿಯ ಮುಕ್ಯ ಗುರಿ ಮಧ್ವಾಚಾರ್ಯರ ದ್ವೈತ ತತ್ತ್ವಶಾಸ್ತ್ರ (ಮಧ್ವ ಸಿದ್ಧಾಂತ )ವನ್ನು ಜನಸಾಮಾನ್ಯರಲ್ಲಿ ದಾಸ ಸಾಹಿತ್ಯ (ಭಗವಂತನ ಸೇವಕರ ಸಾಹಿತ್ಯ)ದ ಮಾಧ್ಯಮದಲ್ಲಿ ಪ್ರಸಾರಿಸುವುದು.ಶ್ರೀಪಾದರಾಯ, ವ್ಯಾಸತೀರ್ಥ, ವಾದಿರಾಜತೀರ್ಥ, ಪುರಂದರ ದಾಸ ಹಾಗು ಕನಕ ದಾಸರಂತಹ ಪ್ರಖ್ಯಾತ ಹಿಂದೂ ತತ್ವಜ್ಞಾನಿಗಳು, ಕವಿಗಳು ಹಾಗು ವಿದ್ವಾಂಸ ಈ ಸಮಯದಲ್ಲಿ ಮುಖ್ಯ ಪಾತ್ರ ವಹಿಸಿದರು.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಜಾಗತಿಕ ತಾಪಮಾನ ನಿಯಂತ್ರಣಜಾಗತಿಕ ತಾಪಮಾನ ಏರಿಕೆ ಯೆಂದರೆ 20 ನೇ ಶತಮಾನದ ಮಧ್ಯಭಾಗದಲ್ಲಿ ಭೂಮಿಯ ಮೇಲ್ಮೈ-ಸಮೀಪದಲ್ಲಿರುವ ವಾಯು ಮತ್ತು ಸಾಗರ ಪ್ರದೇಶಗಳಲ್ಲಿ ಆದ ಸರಾಸರಿ ತಾಪಮಾನದ ಏರಿಕೆ ಹಾಗೂ ಅದರ ಪ್ರಕ್ಷೇಪಿತ ಮುಂದುವರಿಕೆ. ಜಾಗತಿಕ ಮೇಲ್ಮೈ ಉಷ್ಣತೆಯು ಕಳೆದ ಶತಮಾನದಲ್ಲಿ 0.74 ± 0.18 °C (1.33 ± 0.32 °F)ರಷ್ಟು ಹೆಚ್ಚಿದೆ. ಹವಾಮಾನ ಬದಲಾವಣೆಯ ಕುರಿತಾದ ಅಂತರ-ಸರಕಾರಿ ಮಂಡಳಿಯು (IPCC) ಅಗೆದು ತೆಗೆದ ಇಂಧನಗಳು ಮತ್ತು ಅರಣ್ಯನಾಶಗಳಂತಹಾ ಮಾನವ ಚಟುವಟಿಕೆಗಳಿಂದಾದ ಹಸಿರುಮನೆ ಅನಿಲಗಳ ಸಂಗ್ರಹದ ಹೆಚ್ಚಳವು 20ನೇ ಶತಮಾನ ದ ಮಧ್ಯಕಾಲದ ನಂತರದ ತಾಪಮಾನ ಏರಿಕೆಗೆ ಕಾರಣವೆಂದು ತೀರ್ಮಾನಕ್ಕೆ ಬಂದಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಜನಪದ ಕ್ರೀಡೆಗಳು ಗ್ರಾಮೀಣ ಜನರಿಂದ ಮನೋರಂಜನೆಗಾಗಿ, ದೈಹಿಕ ವ್ಯಾಯಾಮಕ್ಕಾಗಿ ರಚಿಸಲ್ಪಟ್ಟ ಆಟಗಳು. ಇವುಗಳಲ್ಲಿ ಕಂಡು ಬರುವ ಸಾಮಾನ್ಯ ಅಂಶವೆಂದರೆ ಇವು ಅತೀ ಕಡಿಮೆ ಹಾಗೂ ಸುಲಭದಲ್ಲಿ ದೊರಕುವ ಸಾಮಗ್ರಿಗಳನ್ನು ಬಳಸಿ ಕೊಂಡುಆಟವಾಡಿ ನೆರೆದವರನ್ನು ರಂಜಿಸುವುದು. ಲಗೋರಿ, ಕುಂಟೇ ಬಿಲ್ಲೆ, ಮರಕೋತಿಯಾಟ, ಚಿನ್ನಿದಾಂಡು, ಬುಗುರಿ, ಕಣ್ಣು ಮುಚ್ಚಾಲೆ, ಅಳ್ಳುಮನೆ, ಆಣೆಕಲ್ಲು, ಹಗ್ಗಜಗ್ಗಾಟ ಮುಂತಾದುವು ಜನಪದ ಕ್ರೀಡೆಗಳಾಗಿವೆ.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.