The most-visited ಕನ್ನಡ Wikipedia articles, updated daily. Learn more...
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ಆರಂಭಗೊಂಡಿದ್ದರೂ, ಅದು ಹೆಚ್ಚು ಪ್ರಚಲಿತಕ್ಕೆ ಬಂದುದು ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
ನಮ್ಮ ಸುತ್ತಮುತ್ತಲಿನ ಪ್ರದೇಶವೇ ಪರಿಸರ. ಈ ಪರಿಸರವೂ ಮರ ಗಿಡಗಳು ಹಾಗೂ ಪ್ರಾಣಿ ಪಕ್ಷಿಗಳಿಂದ ಕೂಡಿ5ದೆ.ಇದರೊಂದಿಗೆ ಮಾನವನು ಅನ್ಯೋನ್ಯತೆಯಿಂದ ಜೀವಿಸುತಿದ್ದಾನೆ.ಇವೆಲ್ಲದರ ನಡುವೆ ಮಾನವನು ತನ್ನ ಸ್ವಾರ್ಥತೆಯನ್ನು ತೋರಿಸುತ್ತಾನೆ.ಇದರಿಂದಾಗಿ ಪರಿಸರವು ಹಲವಾರು ತೊಂದರೆಗೆ ಒಳಗಾಗಿದೆ.ಇದರಲ್ಲಿ ಪರಿಸರವೂ ಎದುರಿಸುವ ಮೂರು ಮುಖ್ಯವಾದ ತೊಂದರೆಗಳೆಂದರೆ ವಾಯು ಮಾಲಿನ್ಯ , ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ. ಇದರ ಮುಖ್ಯ ಕಾರಣವೆಂದರೆ ಹೆಚ್ಚಾಗುತ್ತಿರುವ ಜನಸಂಖ್ಯೆ.ಜನರು ಬಳಸುವ ವಾಹನಗಳಿಂದ ಕೆಟ್ಟ ಹೊಗೆ ಹೊರಬರುತ್ತದೆ.ಕಾರ್ಖಾನೆಗಳಿಂದ ಹೊರಬರುವ ರಾಸಾಯನಿಕ ಹೊಗೆ ವಾಯು ಮಾಲಿನ್ಯಕ್ಕೆ ಕಾರಣವಾಗುತ್ತದೆ.ಮಾನವನ ಇಂದಿನ ದಿನಚರಿಕೆಯಿಂದ ಹಾಗೂ ಕಾರ್ಖಾನೆಗಳಿಂದ ಹೊರ ಬಿಡುವ ಕಸಗಳು, ನೀರನ್ನು ಮಾಲಿನ್ಯಗೊಳಿಸುತ್ತದೆ.ವಾಹನಗಳಿಂದ,ಮದುವೆ ಸಮಾರಂಭಗಳಲ್ಲಿ ಹಾಗೂ ದೀಪಾವಳಿಯ ಸಮಯದಲ್ಲಿ ಉಪಯೋಗಿಸುವ ಪಟಾಕಿಯಿಂದ ಶಬ್ದ ಮಾಲಿನ್ಯವಾಗುತ್ತದೆ.ಇದೆಲ್ಲಾ ಮಾನವನ ಮೇಲೆಯೇ ಪ್ರಭಾವ ಬೀರುತ್ತದೆ.ಮಾಲಿನ್ಯವೂ ಮಿತಿಮೀರಿದರೆ ಮಾನವನಿಗೆ ಈ ಪರಿಸರದಲ್ಲಿ ಜೀವಿಸಲು ಅಸಾಧ್ಯವಾಗುತ್ತದೆ.ಆದುದರಿಂದ ಈ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಜವಬ್ದಾರಿ ನಮ್ಮದಾಗಿದೆ.ಮುಂದಿನ ಪೀಳಿಗೆಗೆ ಈ ಪರಿಸರವು ಉಳಿಯ ಬೇಕಾದರೆ ಇಂದಿನಿಂದಲೇ ಒಳ್ಳೆಯ ಬದಲಾವಣೆಯನ್ನು ಮಾಡಬೇಕಾಗಿದೆ.
ಚುನಾವಣೆ ಯೆನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ.ಇದರಲ್ಲಿ,ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚುನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ,ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
೨೦೦೮ ರ ನವೆಂಬರ್ ೨೬ ರಂದು ಪಾಕೀಸ್ತಾನದ ೧೦ ಭಯೋತ್ಪಾದಕರು ಸಮುದ್ರದ ಮೂಲಕ ಭಾರತದ ಮುಂಬೈನಲ್ಲಿ ನುಸುಳಿ ೧೬೬ ಜನ ಅಮಾಯಕರನ್ನು ಹತ್ಯೆಗೈದಿದ್ದರು. ಮುಂಬೈನ ಪ್ರತಿಷ್ಠಿತ ತಾಜ್ ಪ್ಯಾಲೇಸ್ ಹೋಟೆಲ್ ಒಳಗೆ ಸಿಕ್ಕಿಹಾಕಿಕೊಂಡಿದ್ದ ಜನರನ್ನು ಪಾರುಮಾಡಲು ನ್ಯಾಷನಲ್ ಸೆಕ್ಯೂರಿಟೀ ಗಾರ್ಡ್ ಕಮಾಂಡೋ ಆಗಿದ್ದ ಸಂದೀಪ್ ಹೋರಾಡುತ್ತಲೇ ಮಡಿದಿದ್ದರು. ಗುಂಡು ಅವರ ಎದೆಗೆ ನಾಟಿದಾಗಲೂ, " ದಯವಿಟ್ಟು ಮೇಲೆಹತ್ತಿಬರಬೇಡಿ; ನಾನೊಬ್ಬನೇ ಅವರನ್ನು ಎದುರಿಸುತ್ತೇನೆ", ಎಂದು ಹೇಳಿ ನುಗ್ಗಿದ ವೀರ ಯೋಧ ಸಂದೀಪ್ ನನ್ನು, ಎನ್.ಎಸ್.ಜಿ.ಅಧಿಕಾರಿಗಳು ನೆನೆಯುತ್ತಾರೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು., ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿ . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು. ಇದನ್ನು ಎಲ್ಲರು ಧರಿಸಿ ಪೂಜಿಸಬಹುದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಸ್ವಾತಂತ್ರ್ಯ ಬಂದಾಗಿನಿಂದಲೂ, ಭಾರತದಲ್ಲಿನ ಚುನಾವಣೆಗಳು ತಮ್ಮ ವಿಕಸನದಲ್ಲಿ ಸುದೀರ್ಘವಾದ ಹಾದಿಯನ್ನು ಸವೆಸಿವೆಯಾದರೂ, ಅಷ್ಟು ಸಮಯವೂ ಚುನಾವಣೆಗಳು ಸ್ವತಂತ್ರ ಭಾರತದ ಒಂದು ಗಮನಾರ್ಹವಾದ ಸಾಂಸ್ಕೃತಿಕ ಅಂಶವೆನಿಸಿಕೊಂಡಿವೆ. 2004ರಲ್ಲಿ ನಡೆದ ಭಾರತೀಯ ಚುನಾವಣೆಗಳು 670 ದಶಲಕ್ಷಕ್ಕೂ ಹೆಚ್ಚಿನ ಜನರಿರುವ ಮತದಾರ ಸಮುದಾಯವೊಂದನ್ನು ಒಳಗೊಂಡಿದ್ದವು; ಇದು ಮುಂದಿನ ಅತಿದೊಡ್ಡ ಸ್ಥಾನವನ್ನು ಹೊಂದಿರುವ ಯುರೋಪಿನ ಸಂಸತ್ ಚುನಾವಣೆಗಳಿಗೆ ಹೋಲಿಸಿದಾಗ ದುಪ್ಪಟ್ಟು ಪ್ರಮಾಣಕ್ಕಿಂತಲೂ ಹೆಚ್ಚಿನದು ಎನಿಸಿಕೊಂಡಿತ್ತು. ಅಷ್ಟೇ ಅಲ್ಲ, 1989ರ ವೆಚ್ಚಗಳಿಗೆ ಹೋಲಿಸಿದಾಗ ಈ ಅವಧಿಯ ಘೋಷಿತ ಖರ್ಚುವೆಚ್ಚವು ಮೂರುಪಟ್ಟು ಹೆಚ್ಚಾಗಿ, ಅದು ಬಹುಮಟ್ಟಿಗೆ 300 ದಶಲಕ್ಷ $ನಷ್ಟು ಪ್ರಮಾಣವನ್ನು ತಲುಪಿತ್ತು ಮತ್ತು ಈ ಚುನಾವಣೆಯಲ್ಲಿ 1 ದಶಲಕ್ಷಕ್ಕೂ ಹೆಚ್ಚಿನ ವಿದ್ಯುನ್ಮಾನ ಮತದಾನ ಯಂತ್ರಗಳು ಬಳಸಲ್ಪಟ್ಟವು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (2018 ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಸುಭಾಷ್ ಚಂದ್ರ ಬೋಸ್ (সুভাষ চন্দ্র বসু; ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣದಿಂದಾಗಿಯೇ ಇದ್ದರು.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ರಸಾಯನಶಾಸ್ತ್ರದಲ್ಲಿ ಒಂದು ದ್ರಾವಣದಲ್ಲಿ ಕರಗಿರುವ ರಾಸಾಯನಿಕದ ಪ್ರಮಾಣ ಎಷ್ಟೆಂದು ಕಂಡುಹಿಡಿಯುವುದಕ್ಕೆ ಟೈಟ್ರೇಷನ್ ಎಂಬ ಪ್ರಯೋಗವನ್ನು ಬಳಸುತ್ತಾರೆ . "ಎ" ಎಂಬ ದ್ರಾವಣಕ್ಕೆ ನಿಧಾನವಾಗಿ ಇನ್ನೊಂದು ದ್ರಾವಣ "ಬಿ" ಎಂಬುದನ್ನು ಬೆರೆಸುತ್ತಾ ಎಷ್ಟು ಪ್ರಮಾಣದ "ಬಿ" ದ್ರಾವಣವನ್ನು ಬೆರೆಸಿದಾಗ ಎರಡೂ ದ್ರಾವಣಗಳು ಪರಸ್ಪರ ಪ್ರತಿಸ್ಪಂದಿಸುತ್ತವೆ ಎಂದು ಗಮನಿಸಿ ತನ್ಮೂಲಕ "ಎ" ಎಂಬ ದ್ರಾವಣದ ತೀಕ್ಷ್ಣತೆಯನ್ನು ಕಂಡುಹಿಡಿಯಲಾಗುತ್ತದೆ. ಟೈಟ್ರೇಷನ್ ಉಪಕರಣವನ್ನು ಚಿತ್ರದಲ್ಲಿ ತೋರಿಸಲಾಗಿದೆ.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಕ್ಲಾರಾ ಜೆಟ್ಕಿನ್
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಪ್ರತಿ ವರ್ಷ ಮಾರ್ಚಿ ೮ ರಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ. ಈ ದಿನದಂದು ಮಹಿಳೆಯರ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸಾಧನೆಗಳನ್ನು ನೆನೆಯಲಾಗುತ್ತದೆ.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
ಒಂದು ಜೀವಿಯ ದೇಹ-ಮನಸ್ಸು ಸಂಪೂರ್ಣ ಸಮತೋಲನದಲ್ಲಿರುವ ಸ್ಥಿತಿಯನ್ನು ಆರೋಗ್ಯ ಎಂದು ಕರೆಯಬಹುದು. ವಿಶ್ವ ಆರೋಗ್ಯ ಸಂಸ್ಥೆಯ ೧೯೪೫ರ ಹೇಳಿಕೆಯ ಪ್ರಕಾರ "ಆರೋಗ್ಯವೆಂದರೆ ಸಂಪೂರ್ಣ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಸುಸ್ಥಿತಿ - ಕೇವಲ ರೋಗ, ಭಾದೆಗಳ ಗೈರು ಹಾಜರಿಯಷ್ಟೇ ಅಲ್ಲ"ಆರೋಗ್ಯವೇ ಭಾಗ್ಯ.. ಮಾನವನಿಗೆ ಪರಿಸ್ಥಿತಿಗೆ ಹೊಂದಿಕೊಳ್ಳುವ ಮತ್ತು ದೈಹಿಕ, ಮಾನಸಿಕ ಅಥವಾ ಸಾಮಾಜಿಕ ಸವಾಲುಗಳನ್ನು ಎದುರಿಸುವಾಗ ಸ್ವಯಂ ನಿರ್ವಹಿಸುವ ಸಾಮರ್ಥ್ಯ ಇದೆ.
{{#if:| ಮನಿಲಾ (ಎಂದು ಉಚ್ಚರಿಸಲಾಗುವ /məˈnɪlə/ mə-NIL-ə; Filipino: Maynila), ಮನಿಲಾ ನಗರವು ಫಿಲಿಫೈನ್ಸ್ನ ಅಧಿಕೃತ ರಾಜಧಾನಿಯಾಗಿದೆ. ಇದು ಪೆಟೆರೋಸ್ ಮುನಿಸಿಪಾಲಿಟಿಯೊಂದಿಗೆ ಸೇರಿ ಮನಿಲಾ ಮಹಾನಗರ ಪಾಲಿಕೆಯಾಗಿದ್ದು, ೧೬ ನಗರಗಳಲ್ಲಿ ಒಂದಾದ ಇದು ಪ್ರಪಂಚದ ಅತಿ ಜನಸಾಂದ್ರತೆ ನಗರ ಪ್ರದೇಶಗಳಲ್ಲೊಂದಾಗಿದೆ. ಲುಜಾನ್ ದ್ವೀಪದ ಪಶ್ಚಿಮ ಭಾಗದಲ್ಲಿರುವ ಇದು ಮನಿಲಾ ಕೊಲ್ಲಿಯ ಪೂರ್ವ ತೀರಗಳಲ್ಲಿದೆ.
ಮಾತೆ ಮಹಾದೇವಿ: (ಮಾರ್ಚ್ ೧೩, ೧೯೪೬-ಮಾರ್ಚ್ ೧೪, ೨೦೧೯) ಗುರು ಲಿಂಗಾನಂದರವರಿಂದ ಪ್ರಭಾವಿತರಾಗಿ, ಕಿರಿಯ ವಯಸ್ಸಿನಲ್ಲಿ ಸನ್ಯಾಸ ಸ್ವೀಕರಿಸಿ, ಎಂದು ತಮ್ಮ ಭಕ್ತರಿಂದ ಗುರುತಿಸಲ್ಪಡುವ ಮಾತೆ ಮಹಾದೇವಿ, ಉತ್ತಮ ವಾಗ್ಮಿ ಮತ್ತು ಸಾಹಿತಿಗಳಾಗಿದ್ದಾರೆ. ಕೂಡಲ ಸಂಗಮದಲ್ಲಿ ಹಾಗೂ ಬಸವ ಕಲ್ಯಾಣದಲ್ಲಿ ಶರಣ ಧರ್ಮ ಪ್ರಚಾರಕ್ಕಾಗಿ ಶರಣ ಸಮ್ಮೇಳನವನ್ನು ಪ್ರತಿ ವರ್ಷ ನಡೆಸುತ್ತಿದ್ದಾರೆ. ಆಧ್ಯಾತ್ಮ ಸಾಗರದ ಅನರ್ಘ್ಯ ರತ್ನ ಪರಮ ಪೂಜ್ಯ ಮಾತೆ ಮಹಾದೇವಿಯವರ (ಬಸವಾತ್ಮಜೆಯವರ ) ಬದುಕಿನ ಒಂದು ನೋಟ.
ಬೆಳೆಯ ಆವರ್ತನೆ, ಹಸಿರು- ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಹಿನ್ನೆಲೆ ಗಾಯನವು ಒಬ್ಬ ಗಾಯಕನ (ಗಾಯಕಿಯ) ಗಾಯನವನ್ನು ಚಲನಚಿತ್ರಗಳಲ್ಲಿ ಬಳಕೆಗಾಗಿ ಪೂರ್ವಭಾವಿಯಾಗಿ ಧ್ವನಿಮುದ್ರಿಸಿಲಿಡಲಾಗುವ ಒಂದು ಪ್ರಕ್ರಿಯೆ. ಧ್ವನಿವಾಹಿನಿಗಳಿಗಾಗಿ ಧ್ವನಿಮುದ್ರಿಸಿಡಲಾದ ಹಿನ್ನೆಲೆ ಗಾಯಕರ ಹಾಡುಗಳಿಗೆ ಕ್ಯಾಮೆರಾದ ಎದುರು ಚಿತ್ರನಟರು ಅಥವಾ ಚಿತ್ರನಟಿಯರು ತಮ್ಮ ತುಟಿಗಳ ಚಲನೆಯನ್ನು ಹೊಂದಿಸುತ್ತಾರೆ. ವಿಶೇಷವಾಗಿ ಭಾರತೀಯ ಉಪಖಂಡದಲ್ಲಿ ನಿರ್ಮಿಸಲಾದ ದಕ್ಷಿಣ ಏಷ್ಯಾದ ಚಲನಚಿತ್ರಗಳು ಈ ತಂತ್ರವನ್ನು ಬಳಸುತ್ತವೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ಲೋಕಸಭೆಗೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ, ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.
ಜಾಗತಿಕ ತಾಪಮಾನ ನಿಯಂತ್ರಣಜಾಗತಿಕ ತಾಪಮಾನ ಏರಿಕೆ ಯೆಂದರೆ 20 ನೇ ಶತಮಾನದ ಮಧ್ಯಭಾಗದಲ್ಲಿ ಭೂಮಿಯ ಮೇಲ್ಮೈ-ಸಮೀಪದಲ್ಲಿರುವ ವಾಯು ಮತ್ತು ಸಾಗರ ಪ್ರದೇಶಗಳಲ್ಲಿ ಆದ ಸರಾಸರಿ ತಾಪಮಾನದ ಏರಿಕೆ ಹಾಗೂ ಅದರ ಪ್ರಕ್ಷೇಪಿತ ಮುಂದುವರಿಕೆ. ಜಾಗತಿಕ ಮೇಲ್ಮೈ ಉಷ್ಣತೆಯು ಕಳೆದ ಶತಮಾನದಲ್ಲಿ 0.74 ± 0.18 °C (1.33 ± 0.32 °F)ರಷ್ಟು ಹೆಚ್ಚಿದೆ. ಹವಾಮಾನ ಬದಲಾವಣೆಯ ಕುರಿತಾದ ಅಂತರ-ಸರಕಾರಿ ಮಂಡಳಿಯು (IPCC) ಅಗೆದು ತೆಗೆದ ಇಂಧನಗಳು ಮತ್ತು ಅರಣ್ಯನಾಶಗಳಂತಹಾ ಮಾನವ ಚಟುವಟಿಕೆಗಳಿಂದಾದ ಹಸಿರುಮನೆ ಅನಿಲಗಳ ಸಂಗ್ರಹದ ಹೆಚ್ಚಳವು 20ನೇ ಶತಮಾನ ದ ಮಧ್ಯಕಾಲದ ನಂತರದ ತಾಪಮಾನ ಏರಿಕೆಗೆ ಕಾರಣವೆಂದು ತೀರ್ಮಾನಕ್ಕೆ ಬಂದಿದೆ.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.
ಬತ್ತಳಿಕೆಯು ಬಾಣಗಳು, ಕ್ವಾರಲ್ಗಳು, ಅಥವಾ ಈಟಿಗಳನ್ನು ಇಡಲು ಒಂದು ಧಾರಕ. ಅದನ್ನು, ಬಿಲ್ಲುಗಾರಿಕೆಯ ಬಗೆ ಮತ್ತು ಬಿಲ್ಲುಗಾರನ ವೈಯಕ್ತಿಕ ಆದ್ಯತೆಯನ್ನು ಆಧರಿಸಿ, ಬಿಲ್ಲುಗಾರನ ಶರೀರ, ಬಿಲ್ಲು, ಅಥವಾ ನೆಲದ ಮೇಲೆ ಒಯ್ಯಬಹುದು. ಬತ್ತಳಿಕೆಗಳನ್ನು ಸಾಂಪ್ರದಾಯಿಕವಾಗಿ ಚಕ್ಕಳ, ಕಟ್ಟಿಗೆ, ತುಪ್ಪಳ, ಮತ್ತು ಇತರ ನೈಸರ್ಗಿಕ ವಸ್ತುಗಳಿಂದ ತಯಾರಿಸಲಾಗುತ್ತಿತ್ತು, ಆದರೆ ಈಗ ಹಲವುವೇಳೆ ಲೋಹ ಅಥವಾ ಪ್ಲಾಸ್ಟಿಕ್ನಿಂದ ತಯಾರಿಸಲ್ಪಡುತ್ತವೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೊಂಬತ್ತು ರಾಜ್ಯಗಳು ಹಾಗು ಏಳು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ತಂಬಾಕು ಉರಿಸಿ ಅದರ ಹೊಗೆಯ ರುಚಿ ತೆಗೆದುಕೊಳ್ಳುವ ಅಥವಾ ಉಸಿರಿನ ಮೂಲಕ ಒಳತೆಗೆದುಕೊಳ್ಳುವುದನ್ನು ತಂಬಾಕು ಸೇವನೆ ಯೆಂದು ಕರೆಯಲಾಗುತ್ತದೆ. ಈ ಅಭ್ಯಾಸವು ಕ್ರಿ.ಪೂ 5000–3000ದಷ್ಟು ಹಿಂದೆಯೇ ರೂಢಿಯಲ್ಲಿತ್ತು BC. ಹಲವಾರು ನಾಗರೀಕತೆಗಳ ಧಾರ್ಮಿಕ ಆಚರಣೆಗಳ ಸಂದರ್ಭದಲ್ಲಿ ಧೂಪವುರಿಸುತ್ತಿದ್ದು, ಇದು ಮುಂದೆ ಉಪಭೋಗದ ಅಥವಾ ಸಾಮಾಜಿಕ ಸಾಧನವಾಗಿ ಬಳಕೆಯಾಗತೊಡಗಿತು. ಪ್ರಾಚೀನ ವಿಶ್ವದಲ್ಲಿ ತಂಬಾಕನ್ನು 1500ರ ಅಂತ್ಯಭಾಗದ ವೇಳೆಗೆ ಪರಿಚಯಿಸಲಾಯಿತು ಮತ್ತು ಇದು ವ್ಯಾಪಾರ ಮಾರ್ಗಗಳ ಮುಖಾಂತರ ಬೇರೆ ಸ್ಥಳಗಳನ್ನು ತಲುಪತೊಡಗಿತು.