The most-visited ಕನ್ನಡ Wikipedia articles, updated daily. Learn more...
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ಆರಂಭಗೊಂಡಿದ್ದರೂ, ಅದು ಹೆಚ್ಚು ಪ್ರಚಲಿತಕ್ಕೆ ಬಂದುದು ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ನಮ್ಮ ಸುತ್ತಮುತ್ತಲಿನ ಪ್ರದೇಶವೇ ಪರಿಸರ. ಈ ಪರಿಸರವೂ ಮರ ಗಿಡಗಳು ಹಾಗೂ ಪ್ರಾಣಿ ಪಕ್ಷಿಗಳಿಂದ ಕೂಡಿ5ದೆ.ಇದರೊಂದಿಗೆ ಮಾನವನು ಅನ್ಯೋನ್ಯತೆಯಿಂದ ಜೀವಿಸುತಿದ್ದಾನೆ.ಇವೆಲ್ಲದರ ನಡುವೆ ಮಾನವನು ತನ್ನ ಸ್ವಾರ್ಥತೆಯನ್ನು ತೋರಿಸುತ್ತಾನೆ.ಇದರಿಂದಾಗಿ ಪರಿಸರವು ಹಲವಾರು ತೊಂದರೆಗೆ ಒಳಗಾಗಿದೆ.ಇದರಲ್ಲಿ ಪರಿಸರವೂ ಎದುರಿಸುವ ಮೂರು ಮುಖ್ಯವಾದ ತೊಂದರೆಗಳೆಂದರೆ ವಾಯು ಮಾಲಿನ್ಯ , ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ. ಇದರ ಮುಖ್ಯ ಕಾರಣವೆಂದರೆ ಹೆಚ್ಚಾಗುತ್ತಿರುವ ಜನಸಂಖ್ಯೆ.ಜನರು ಬಳಸುವ ವಾಹನಗಳಿಂದ ಕೆಟ್ಟ ಹೊಗೆ ಹೊರಬರುತ್ತದೆ.ಕಾರ್ಖಾನೆಗಳಿಂದ ಹೊರಬರುವ ರಾಸಾಯನಿಕ ಹೊಗೆ ವಾಯು ಮಾಲಿನ್ಯಕ್ಕೆ ಕಾರಣವಾಗುತ್ತದೆ.ಮಾನವನ ಇಂದಿನ ದಿನಚರಿಕೆಯಿಂದ ಹಾಗೂ ಕಾರ್ಖಾನೆಗಳಿಂದ ಹೊರ ಬಿಡುವ ಕಸಗಳು, ನೀರನ್ನು ಮಾಲಿನ್ಯಗೊಳಿಸುತ್ತದೆ.ವಾಹನಗಳಿಂದ,ಮದುವೆ ಸಮಾರಂಭಗಳಲ್ಲಿ ಹಾಗೂ ದೀಪಾವಳಿಯ ಸಮಯದಲ್ಲಿ ಉಪಯೋಗಿಸುವ ಪಟಾಕಿಯಿಂದ ಶಬ್ದ ಮಾಲಿನ್ಯವಾಗುತ್ತದೆ.ಇದೆಲ್ಲಾ ಮಾನವನ ಮೇಲೆಯೇ ಪ್ರಭಾವ ಬೀರುತ್ತದೆ.ಮಾಲಿನ್ಯವೂ ಮಿತಿಮೀರಿದರೆ ಮಾನವನಿಗೆ ಈ ಪರಿಸರದಲ್ಲಿ ಜೀವಿಸಲು ಅಸಾಧ್ಯವಾಗುತ್ತದೆ.ಆದುದರಿಂದ ಈ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಜವಬ್ದಾರಿ ನಮ್ಮದಾಗಿದೆ.ಮುಂದಿನ ಪೀಳಿಗೆಗೆ ಈ ಪರಿಸರವು ಉಳಿಯ ಬೇಕಾದರೆ ಇಂದಿನಿಂದಲೇ ಒಳ್ಳೆಯ ಬದಲಾವಣೆಯನ್ನು ಮಾಡಬೇಕಾಗಿದೆ.
ಚುನಾವಣೆ ಯೆನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ.ಇದರಲ್ಲಿ,ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚುನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ,ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ.
sneha ಕಸದ ಸಂಗ್ರಹ, ಸಾಗಣೆ, ಸಂಸ್ಕರಣೆ, ಮರುಬಳಕೆ ಅಥವಾ ವಿಲೆವಾರಿ ಹಾಗು ತ್ಯಾಜ್ಯ ವಸ್ತುಗಳ ನಿರ್ವಹಣೆಯನ್ನು ತಾಜ್ಯ ನಿರ್ವಹಣೆ ಎನ್ನುತ್ತೇವೆ.ಮಾನವನು ಬಳಸಿದ ವಸ್ತುಗಳ ಉಳಿದ ಭಾಗವನ್ನು ತ್ಯಾಜ್ಯದ ಉಗಮ ಎಂದು ಹೇಳಬಹುದು. ಈ ವ್ಯರ್ಥ ವಸ್ತುಗಳು ಮನುಷ್ಯನ ಆರೋಗ್ಯ, ಪರಿಸರ ಸೌಂದರ್ಯದ ಮೇಲೆ ಕೆಟ್ಟ ಪ್ರಭಾವ ಬೀರುತ್ತವೆ. ಇದರ ಜೊತೆಯಲ್ಲಿ ಕಸದೊಳಗಿನ ರಸ ತೆಗೆಯಲು ಕೂಡಾ ಇವು ಸಂಪನ್ಮೂಲಗಳಾಗಿ ಬಹುಮುಖ್ಯ ಪಾತ್ರ ನಿರ್ವಹಿಸುತ್ತವೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಬೆಳೆಯ ಆವರ್ತನೆ, ಹಸಿರು- ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (2018 ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು., ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿ . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು. ಇದನ್ನು ಎಲ್ಲರು ಧರಿಸಿ ಪೂಜಿಸಬಹುದು.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಜಾಗತಿಕ ತಾಪಮಾನ ನಿಯಂತ್ರಣಜಾಗತಿಕ ತಾಪಮಾನ ಏರಿಕೆ ಯೆಂದರೆ 20 ನೇ ಶತಮಾನದ ಮಧ್ಯಭಾಗದಲ್ಲಿ ಭೂಮಿಯ ಮೇಲ್ಮೈ-ಸಮೀಪದಲ್ಲಿರುವ ವಾಯು ಮತ್ತು ಸಾಗರ ಪ್ರದೇಶಗಳಲ್ಲಿ ಆದ ಸರಾಸರಿ ತಾಪಮಾನದ ಏರಿಕೆ ಹಾಗೂ ಅದರ ಪ್ರಕ್ಷೇಪಿತ ಮುಂದುವರಿಕೆ. ಜಾಗತಿಕ ಮೇಲ್ಮೈ ಉಷ್ಣತೆಯು ಕಳೆದ ಶತಮಾನದಲ್ಲಿ 0.74 ± 0.18 °C (1.33 ± 0.32 °F)ರಷ್ಟು ಹೆಚ್ಚಿದೆ. ಹವಾಮಾನ ಬದಲಾವಣೆಯ ಕುರಿತಾದ ಅಂತರ-ಸರಕಾರಿ ಮಂಡಳಿಯು (IPCC) ಅಗೆದು ತೆಗೆದ ಇಂಧನಗಳು ಮತ್ತು ಅರಣ್ಯನಾಶಗಳಂತಹಾ ಮಾನವ ಚಟುವಟಿಕೆಗಳಿಂದಾದ ಹಸಿರುಮನೆ ಅನಿಲಗಳ ಸಂಗ್ರಹದ ಹೆಚ್ಚಳವು 20ನೇ ಶತಮಾನ ದ ಮಧ್ಯಕಾಲದ ನಂತರದ ತಾಪಮಾನ ಏರಿಕೆಗೆ ಕಾರಣವೆಂದು ತೀರ್ಮಾನಕ್ಕೆ ಬಂದಿದೆ.
ಮನೆಯಂಗಣದಲ್ಲಿನ ಗುಬ್ಬಚ್ಚಿಗಳು ಹಾಗೂ ಇನ್ನಿತರ ಪಕ್ಷಿಗಳ ಬಗೆಗೆ ಜನ ಜಾಗೃತಿ ಉಂಟುಮಾಡಿ ಅವುಗಳ ಸಂಕುಲಕ್ಕೆ ಉಂಟಾಗುತ್ತಿರುವ ಭೀತಿಯನ್ನು ತಡೆಗಟ್ಟುವ ಪ್ರಯತ್ನವಾಗಿ ಮಾರ್ಚ್ 20 ದಿನವನ್ನು ವಿಶ್ವ ಗುಬ್ಬಚ್ಚಿಗಳ ದಿನವಾಗಿ ಆಚರಿಸಲಾಗುತ್ತಿದೆ. ಭಾರತದ ನೇಚರ್ ಫಾರೆವರ್ ಸೊಸೈಟಿಯ ಪ್ರಮುಖ ಆಸಕ್ತಿಯ ಮೇರೆಗೆ ಪ್ರಾರಂಭಗೊಂಡಿರುವ ಈ ಆಚರಣೆಗೆ, ಫ್ರಾನ್ಸಿನ ಇಕೋ-ಸಿಸ್ ಆಕ್ಷನ್ ಫೌಂಡೆಶನ್ ಮತ್ತು ವಿಶ್ವದ ಅನೇಕ ಸಂಸ್ಥೆಗಳು ಸಹಯೋಗ ನೀಡಿವೆ.ಸಂಸ್ಥೆಯ ನಿರ್ಮಾತೃ ಮೊಹಮ್ಮದ್ ದಿಲ್ವಾರ್ ಅವರು 2010ರಲ್ಲಿ ಗುಬ್ಬಚ್ಚಿಗಳ ದಿನವನ್ನು ಜಗತ್ತಿಗೆ ಪರಿಚಯಿಸಿದರು.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಸುಭಾಷ್ ಚಂದ್ರ ಬೋಸ್ (সুভাষ চন্দ্র বসু; ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣದಿಂದಾಗಿಯೇ ಇದ್ದರು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಒಬ್ಬ ವ್ಯಕ್ತಿ ಕೆಲಸ ಮಾಡಲು ಲಭ್ಯನಿದ್ದು, ಕೆಲಸಮಾಡುವ ಇಚ್ಚೆಯನ್ನೂ ಹೊಂದಿದ್ದು, ಆದರೆ ಸಧ್ಯಕ್ಕೆ ಆತನಿಗೆ ಮಾಡಲು ಕೆಲಸವಿಲ್ಲದೇ ಇದ್ದಾಗ ನಿರುದ್ಯೋಗ ವು ಉದ್ಭವಿಸುತ್ತದೆ. ಸಾಮಾನ್ಯವಾಗಿ ನಿರುದ್ಯೋಗ ವರ್ಗದ ಸಮೂಹವನ್ನು ಒಟ್ಟು ನಿರುದ್ಯೋಗ ದರವನ್ನು ಬಳಸಿಕೊಂಡು ಮಾಪನಮಾಡುತ್ತಾರೆ. ಇದನ್ನು ಒಟ್ಟೂ ಶ್ರಮ ಶಕ್ತಿಯಲ್ಲಿರುವ ಶೇಕಡಾವಾರು ನಿರುದ್ಯೋಗಿಗಳ ಮೂಲಕ ವ್ಯಾಖ್ಯಾನಿಸಲಾಗುತ್ತದೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಸ್ವಾತಂತ್ರ್ಯ ಬಂದಾಗಿನಿಂದಲೂ, ಭಾರತದಲ್ಲಿನ ಚುನಾವಣೆಗಳು ತಮ್ಮ ವಿಕಸನದಲ್ಲಿ ಸುದೀರ್ಘವಾದ ಹಾದಿಯನ್ನು ಸವೆಸಿವೆಯಾದರೂ, ಅಷ್ಟು ಸಮಯವೂ ಚುನಾವಣೆಗಳು ಸ್ವತಂತ್ರ ಭಾರತದ ಒಂದು ಗಮನಾರ್ಹವಾದ ಸಾಂಸ್ಕೃತಿಕ ಅಂಶವೆನಿಸಿಕೊಂಡಿವೆ. 2004ರಲ್ಲಿ ನಡೆದ ಭಾರತೀಯ ಚುನಾವಣೆಗಳು 670 ದಶಲಕ್ಷಕ್ಕೂ ಹೆಚ್ಚಿನ ಜನರಿರುವ ಮತದಾರ ಸಮುದಾಯವೊಂದನ್ನು ಒಳಗೊಂಡಿದ್ದವು; ಇದು ಮುಂದಿನ ಅತಿದೊಡ್ಡ ಸ್ಥಾನವನ್ನು ಹೊಂದಿರುವ ಯುರೋಪಿನ ಸಂಸತ್ ಚುನಾವಣೆಗಳಿಗೆ ಹೋಲಿಸಿದಾಗ ದುಪ್ಪಟ್ಟು ಪ್ರಮಾಣಕ್ಕಿಂತಲೂ ಹೆಚ್ಚಿನದು ಎನಿಸಿಕೊಂಡಿತ್ತು. ಅಷ್ಟೇ ಅಲ್ಲ, 1989ರ ವೆಚ್ಚಗಳಿಗೆ ಹೋಲಿಸಿದಾಗ ಈ ಅವಧಿಯ ಘೋಷಿತ ಖರ್ಚುವೆಚ್ಚವು ಮೂರುಪಟ್ಟು ಹೆಚ್ಚಾಗಿ, ಅದು ಬಹುಮಟ್ಟಿಗೆ 300 ದಶಲಕ್ಷ $ನಷ್ಟು ಪ್ರಮಾಣವನ್ನು ತಲುಪಿತ್ತು ಮತ್ತು ಈ ಚುನಾವಣೆಯಲ್ಲಿ 1 ದಶಲಕ್ಷಕ್ಕೂ ಹೆಚ್ಚಿನ ವಿದ್ಯುನ್ಮಾನ ಮತದಾನ ಯಂತ್ರಗಳು ಬಳಸಲ್ಪಟ್ಟವು.
ರಸಾಯನಶಾಸ್ತ್ರದಲ್ಲಿ ಒಂದು ದ್ರಾವಣದಲ್ಲಿ ಕರಗಿರುವ ರಾಸಾಯನಿಕದ ಪ್ರಮಾಣ ಎಷ್ಟೆಂದು ಕಂಡುಹಿಡಿಯುವುದಕ್ಕೆ ಟೈಟ್ರೇಷನ್ ಎಂಬ ಪ್ರಯೋಗವನ್ನು ಬಳಸುತ್ತಾರೆ . "ಎ" ಎಂಬ ದ್ರಾವಣಕ್ಕೆ ನಿಧಾನವಾಗಿ ಇನ್ನೊಂದು ದ್ರಾವಣ "ಬಿ" ಎಂಬುದನ್ನು ಬೆರೆಸುತ್ತಾ ಎಷ್ಟು ಪ್ರಮಾಣದ "ಬಿ" ದ್ರಾವಣವನ್ನು ಬೆರೆಸಿದಾಗ ಎರಡೂ ದ್ರಾವಣಗಳು ಪರಸ್ಪರ ಪ್ರತಿಸ್ಪಂದಿಸುತ್ತವೆ ಎಂದು ಗಮನಿಸಿ ತನ್ಮೂಲಕ "ಎ" ಎಂಬ ದ್ರಾವಣದ ತೀಕ್ಷ್ಣತೆಯನ್ನು ಕಂಡುಹಿಡಿಯಲಾಗುತ್ತದೆ. ಟೈಟ್ರೇಷನ್ ಉಪಕರಣವನ್ನು ಚಿತ್ರದಲ್ಲಿ ತೋರಿಸಲಾಗಿದೆ.
ಶಬ್ದ ಮಾಲಿನ್ಯ (ಅಥವಾ ವಾತಾವರಣದಲ್ಲಿನ ಸದ್ದು) ಮಾನವ ಅಥವಾ ಪ್ರಾಣಿಗಳ ಜೀವನದ ಮೇಲೆ ದುಃಪರಿಣಾಮ ಬೀರಿ ಅವುಗಳ ಜೀವನ ಚಟುವಟಿಕೆಯ ಸಮತೋಲಕ್ಕೆ ಭಂಗ ತರುವಂಥ , ಮನುಷ್ಯ-ಪ್ರಾಣಿ-ಯಂತ್ರಗಳಿಂದ ಹೊಮ್ಮಿ ಬರುವ ಸಪ್ಪಳಕ್ಕೆ 'ಶಬ್ದ ಮಾಲಿನ್ಯ' ಎನ್ನಲಾಗಿದೆ. ಸಾಮಾನ್ಯವಾಗಿ ಸಾರಿಗೆ, ಅದರಲ್ಲೂ ವಿಶೇಷವಾಗಿ ಮೋಟಾರ್ ವಾಹನಸಂಚಾರದಿಂದ ಹೊಮ್ಮುವ ಶಬ್ದ ಈ ಮಲಿನತೆಗೆ ತನ್ನ ಕಾಣಿಕೆ ನೀಡುತ್ತದೆ. ನಾಯ್ಸ್ ಎಂಬ ಪದ ಲ್ಯಾಟಿನ್ ಭಾಷೆಯ ನಾಸಿಯ very good ಎಂಬ ಪದದಿಂದ ವ್ಯುತ್ಪತ್ತಿ ಹೊಂದಿದೆ.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಶಿವಕುಮಾರ ಸ್ವಾಮಿ (ಜನನ- ಶಿವಣ್ಣ, ೧ ಏಪ್ರಿಲ್ ೧೯೦೭ - ೨೧ ಜನವರಿ ೨೦೧೯) ಒಬ್ಬ ಭಾರತೀಯ ಆಧ್ಯಾತ್ಮಿಕ ನಾಯಕ, ಮಾನವೀಯ ಮತ್ತು ಶಿಕ್ಷಣತಜ್ಞ.ಅವರು ಹಿಂದೂ ಲಿಂಗಾಯತ ಧಾರ್ಮಿಕ ವ್ಯಕ್ತಿಯಾಗಿದ್ದರು ಮತ್ತು ಕರ್ನಾಟಕದ ಸಿದ್ದಗಂಗಾ ಮಠದ ಮಠಾಧಿಪತಿಗಳಾಗಿದ್ದರು. ಅವರು ಶ್ರೀ ಸಿದ್ದಗಂಗ ಎಜುಕೇಶನ್ ಸೊಸೈಟಿಯನ್ನು ಸ್ಥಾಪಿಸಿದರು.ಹಿಂದೂಧರ್ಮದ ಲಿಂಗಾಯತ ಸಂಪ್ರದಾಯದ ಅತ್ಯಂತ ಗೌರವಾನ್ವಿತ ಅನುಯಾಯಿಯಾಗಿದ್ದರು. ಅವರನ್ನು ರಾಜ್ಯದಲ್ಲಿ ನಡೆದಾಡುವ ದೇವರು ಎಂದು ಕೂಡ ಉಲ್ಲೇಖಿಸಲಾಗಿದೆ.ಭಾರತದಲ್ಲಿ ವಾಸಿಸುತ್ತಿದ್ದ ಅತಿ ಪುರಾತನ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು.
ಕೃಷ್ಣಾ ನದಿ ದಕ್ಷಿಣ ಭಾರತದ ಎರಡನೆಯ ದೊಡ್ಡ ನದಿಯಾಗಿದೆ. ಈ ನದಿ ಮಹಾರಾಷ್ಟ್ರದ ಪಶ್ಚಿಮ ಘಟ್ಟದ ಮಹಾದೇವ ಪರ್ವತ ಶ್ರೇಣಿಯಲ್ಲಿ ಮಹಾಬಲೇಶ್ವರದ ಹತ್ತಿರ ಸಮುದ್ರ ಮಟ್ಟಕ್ಕಿಂತ ೧೩೩೮ ಮೀಟರ ಎತ್ತರದಲ್ಲಿ ಉಗಮವಾಗಿ ಸುಮಾರು ೧೩೯೨ ಕಿ.ಮಿ.ಗಳಷ್ಟು ಹರಿದು ಆಂಧ್ರಪ್ರದೇಶದ ಹಂಸಲಾದೀವಿಯಲ್ಲಿ ಬಂಗಾಳ ಕೊಲ್ಲಿ ಯನ್ನು ಸೇರುತ್ತದೆ. ಕೃಷ್ಣಾ ನದಿ ಮಹಾರಾಷ್ಟ್ರ,ಕರ್ನಾಟಕ, ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ಪ್ರವಹಿಸುತ್ತದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಅರಣ್ಯನಾಶ ಎಂದರೆ ನೈಸರ್ಗಿಕವಾಗಿ ಕಾಣಸಿಗುವ ಅರಣ್ಯಗಳನ್ನು ಮಾನವ ಚಟುವಟಿಕೆಗಳಾದ ಕತ್ತರಿಸುವಿಕೆ ಹಾಗೂ/ಅಥವಾ ಬೆಂಕಿಯಿಂದ ಅರಣ್ಯ ಪ್ರದೇಶದ ಮರಗಿಡಗಳನ್ನು ನಾಶಕ್ಕೊಳಪಡುವ ಕ್ರಿಯೆಯಾಗಿದೆ. ಅರಣ್ಯನಾಶಕ್ಕೆ ಹಲವಾರು ಕಾರಣಗಳಿವೆ: ಮರಗಳು ಅಥವಾ ಅವುಗಳಿಂದ ದೊರಕುವ ಇದ್ದಿಲನ್ನು ಇಂಧನಕ್ಕಾಗಿ ಅಥವಾ ಮಾನವರಿಂದ ಬಳಕೆಯಾಗಲ್ಪಡುವ ಉತ್ಪನ್ನಗಳನ್ನಾಗಿ ಮಾರಾಟ ಮಾಡಲಾಗುತ್ತದೆ, ಇದರ ಜೊತೆಗೆ ತೆರವುಗೊಂಡ ಭೂಮಿಯನ್ನು ಮಾನವರು ಜಾನುವಾರುಗಳ ಮೇವಿಗಾಗಿ, ವಾಣಿಜ್ಯ ಉತ್ಪನ್ನಗಳನ್ನು ಪಡೆಯಲು, ಹಾಗೂ ವಾಸಯೋಗ್ಯ ಸ್ಥಳಗಳಿಗಾಗಿ ಬಳಕೆ ಮಾಡಲಾಗುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಅರಣ್ಯ ಪುನರ್ ನಿರ್ಮಾಣ ಮಾಡದೇ ಜನರು ಮರಗಳನ್ನು ಕಡಿದುಹಾಕುತ್ತಿದ್ದಾರೆ, ಇದರಿಂದಾಗಿ ವಾಸಸ್ಥಾನಗಳಿಗೆ ಆದ ಹಾನಿಯಿಂದಾಗಿ ಜೀವ ವೈವಿಧ್ಯತೆ ನಾಶವಾಗಿದ್ದು ವಾತಾವರಣದಲ್ಲಿ ಶುಷ್ಕತೆ ಹೆಚ್ಚುತ್ತಿದೆ.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.
ಆಂಧ್ರ ಪ್ರದೇಶ (ತೆಲುಗು:ఆంధ్ర ప్రదేశ్) ( pronunciation , ಭಾಷಾಂತರ: ಆಂಧ್ರದ ಪ್ರಾಂತ್ಯ ), ಸಂಕ್ಷಿಪ್ತವಾಗಿ ಎ.ಪಿ. ಎಂದು ಕರೆಯಲ್ಪಡುವ ರಾಜ್ಯವಾಗಿದ್ದು ಇದುಭಾರತದ ಆಗ್ನೇಯ ಕರಾವಳಿ ಭಾಗದಲ್ಲಿದೆ. ಭಾರತದಲ್ಲಿ ಇದು ವಿಸ್ತೀರ್ಣದ ಆಧಾರದಲ್ಲಿ ಭಾರತದ ರಾಜ್ಯಗಳ ಪಟ್ಟಿ|ವಿಸ್ತೀರ್ಣದಲ್ಲಿ ಎಂಟನೇ ಅತಿದೊಡ್ಡ ರಾಜ್ಯವಾಗಿದೆ ಮತ್ತು ಜನಸಂಖ್ಯೆಯ ಆಧಾರದಲ್ಲಿ ಭಾರತದ ರಾಜ್ಯಗಳ ಪಟ್ಟಿ|ಜನಸಂಖ್ಯೆಯಲ್ಲಿ ಹತ್ತನೇ ಅತಿ ದೊಡ್ಡ ರಾಜ್ಯವಾಗಿದೆ.
ದರ್ಶನ್ (ಜನನ 16 ಫೆಬ್ರವರಿ 1977), ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟ ತೂಗುದೀಪ ಶ್ರೀನಿವಾಸ್ ಅವರ ಮಗ, ದರ್ಶನ್ ಅವರ ನಟನಾ ವೃತ್ತಿಯನ್ನು 1990 ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು . ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಪ್ರಬಂಧ ರಚನೆ - ಅರ್ಥಪೂರ್ಣ ಖಚಿತ ವಾಕ್ಯಗಳ ಮೂಲಕ ವ್ಯಕ್ತಿಯ ಆಲೋಚನೆಗಳನ್ನು ಲಿಖಿತವಾಗಿ ಅಭಿವ್ಯಕ್ತಿಸುವ ಹಾಗೂ ನಿರ್ದಿಷ್ಟ ವಿಷಯಗಳನ್ನು ಕ್ರಮಬದ್ಧ ರೀತಿಯಲ್ಲಿ ಸಮರ್ಪಕವಾಗಿ ನಿರೂಪಿಸುವ ಪರಿ. ಇದು ವ್ಯಾಕರಣದ ಒಂದು ಅಂಗ. ==ಪ್ರಬಂಧಗಳು==amm na baga ಪ್ರಬಂಧ ರಚನೆಯು ಸಾಮಾನ್ಯವಾಗಿ ಲೇಖಕನ ವ್ಯಕ್ತಿತ್ವ ವೈಶಿಷ್ಟ್ಯದಿಂದ ಕೂಡಿದ ಸ್ವತಂತ್ರ ನಿರ್ದಿಷ್ಟ ಲಘು ಬರೆವಣಿಗೆ.
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಕಾರವು ಬಂದಾಗ 'ಐ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂದಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.
ಮಳೆನೀರು ಕೊಯ್ಲು ಎಂಬುದು ಮಳೆನೀರನ್ನು ಒಟ್ಟುಗೂಡಿಸುವ, ಅಥವಾ ಸಂಚಯನ ಮಾಡುವ ಮತ್ತು ಶೇಖರಿಸಿಟ್ಟುಕೊಳ್ಳುವ ವಿಧಾನಕ್ಕಿರುವ ಹೆಸರು. ಕುಡಿಯುವ ನೀರನ್ನು ಒದಗಿಸಲು ಜಾನುವಾರುಗಳಿಗೆ ನೀರುಣಿಸಲು ನೀರಾವರಿಗಾಗಿ ನೀರಿನ ವ್ಯವಸ್ಥೆ ಮಾಡಲು ಅಥವಾ ಅಂತರ್ಜಲ ಪುನರ್ಭರ್ತಿಕಾರ್ಯ ಎಂದು ಕರೆಯಲಾಗುವ ಪ್ರಕ್ರಿಯೆಯೊಂದರಲ್ಲಿ ನೀರುಪೊಟರೆಯನ್ನು ಪುನಃ ತುಂಬಿಸಲು ಮಳೆನೀರು ಕೊಯ್ಲು ಪದ್ಧತಿಯನ್ನು ಬಳಸಿಕೊಂಡು ಬರಲಾಗಿದೆ. ಮನೆಗಳು, ಗುಡಾರಗಳು ಮತ್ತು ಸ್ಥಳೀಯ ಸಾರ್ವಜನಿಕ ಕಟ್ಟಡಗಳ ಛಾವಣಿಗಳಿಂದ ಅಥವಾ ವಿಶೇಷವಾಗಿ ಸಿದ್ಧಗೊಳಿಸಲಾದ ನೆಲದ ಪ್ರದೇಶಗಳಿಂದ ಸಂಗ್ರಹಿಸಲಾದ ಮಳೆನೀರು, ಕುಡಿಯುವ ನೀರಿಗೆ ತನ್ನದೇ ಆದ ಪ್ರಮುಖ ಕೊಡುಗೆಯನ್ನು ನೀಡಬಲ್ಲದು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.