The most-visited ಕನ್ನಡ Wikipedia articles, updated daily. Learn more...
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು., ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿ . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು. ಇದನ್ನು ಎಲ್ಲರು ಧರಿಸಿ ಪೂಜಿಸಬಹುದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಥಾಮಸ್ ಜೆಫರ್ಸನ್ (ಏಪ್ರಿಲ್ ೧೩, ೧೭೪೩ – ಜುಲೈ ೪, ೧೮೨೬) ಇವರು ಯುನೈಟೆಡ್ ಸ್ಟೇಟ್ಸ್ನ ಮೂರನೇಯ ಅಧ್ಯಕ್ಷರಾಗಿದ್ದರು(೧೮೦೧–೧೮೦೯), ಮತ್ತು ಡಿಕ್ಲರೇಷನ್ ಆಫ್ ಇಂಡಿಪೆಂಡೆನ್ಸ್ನ ಪ್ರಮುಖ ಲೇಖಕರು(೧೭೭೬). ಜೆಫರ್ಸನ್ರವರು ಪ್ರಬಲ ವರ್ಚಸ್ಸಿನ ಸ್ಥಾಪಕ ಪಿತಾಮಹರಲ್ಲಿ ಒಬ್ಬರು, ಇವರು ಯುನೈಟೆಡ್ ಸ್ಟೇಟ್ಸ್ನಲ್ಲಿನ ಪ್ರಜಾಧಿಪತ್ಯವಾದಿತ್ವದಬಗೆಗಿನ ಅವರ ಆದರ್ಶಧ್ಯೇಯದ ಅಭಿವೃದ್ಧಿಯಿಂದ ಪ್ರಖ್ಯಾತರಾದರು. ಜೆಫರ್ಸನ್ ಅಮೆರಿಕಾವನ್ನು ಪ್ರಖ್ಯಾತ "ಸ್ವತಂತ್ರ್ಯ ಸಾಮ್ರಾಜ್ಯದ" ಹಿಂದಿನ ಬಲವೆಂದು, ಅದು ಪ್ರಜಾಧಿಪತ್ಯವಾದಿತ್ವವನ್ನು ಅಭಿವೃದ್ಧಿ ಪಡೆಸಬಹುದು ಮತ್ತು ಬ್ರಿಟಿಷ್ ಸಾಮ್ರಾಜ್ಯದ ಸಾಮ್ರಾಜ್ಯಶಾಹಿಯನ್ನು ವಿರೋಧಿಸಬಹುದೆಂದು ಊಹಿಸಿದರು.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ಆರಂಭಗೊಂಡಿದ್ದರೂ, ಅದು ಹೆಚ್ಚು ಪ್ರಚಲಿತಕ್ಕೆ ಬಂದುದು ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (2018 ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಆಸ್ಥಾನದ ಸಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ನಮ್ಮ ಸುತ್ತಮುತ್ತಲಿನ ಪ್ರದೇಶವೇ ಪರಿಸರ. ಈ ಪರಿಸರವೂ ಮರ ಗಿಡಗಳು ಹಾಗೂ ಪ್ರಾಣಿ ಪಕ್ಷಿಗಳಿಂದ ಕೂಡಿ5ದೆ.ಇದರೊಂದಿಗೆ ಮಾನವನು ಅನ್ಯೋನ್ಯತೆಯಿಂದ ಜೀವಿಸುತಿದ್ದಾನೆ.ಇವೆಲ್ಲದರ ನಡುವೆ ಮಾನವನು ತನ್ನ ಸ್ವಾರ್ಥತೆಯನ್ನು ತೋರಿಸುತ್ತಾನೆ.ಇದರಿಂದಾಗಿ ಪರಿಸರವು ಹಲವಾರು ತೊಂದರೆಗೆ ಒಳಗಾಗಿದೆ.ಇದರಲ್ಲಿ ಪರಿಸರವೂ ಎದುರಿಸುವ ಮೂರು ಮುಖ್ಯವಾದ ತೊಂದರೆಗಳೆಂದರೆ ವಾಯು ಮಾಲಿನ್ಯ , ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ. ಇದರ ಮುಖ್ಯ ಕಾರಣವೆಂದರೆ ಹೆಚ್ಚಾಗುತ್ತಿರುವ ಜನಸಂಖ್ಯೆ.ಜನರು ಬಳಸುವ ವಾಹನಗಳಿಂದ ಕೆಟ್ಟ ಹೊಗೆ ಹೊರಬರುತ್ತದೆ.ಕಾರ್ಖಾನೆಗಳಿಂದ ಹೊರಬರುವ ರಾಸಾಯನಿಕ ಹೊಗೆ ವಾಯು ಮಾಲಿನ್ಯಕ್ಕೆ ಕಾರಣವಾಗುತ್ತದೆ.ಮಾನವನ ಇಂದಿನ ದಿನಚರಿಕೆಯಿಂದ ಹಾಗೂ ಕಾರ್ಖಾನೆಗಳಿಂದ ಹೊರ ಬಿಡುವ ಕಸಗಳು, ನೀರನ್ನು ಮಾಲಿನ್ಯಗೊಳಿಸುತ್ತದೆ.ವಾಹನಗಳಿಂದ,ಮದುವೆ ಸಮಾರಂಭಗಳಲ್ಲಿ ಹಾಗೂ ದೀಪಾವಳಿಯ ಸಮಯದಲ್ಲಿ ಉಪಯೋಗಿಸುವ ಪಟಾಕಿಯಿಂದ ಶಬ್ದ ಮಾಲಿನ್ಯವಾಗುತ್ತದೆ.ಇದೆಲ್ಲಾ ಮಾನವನ ಮೇಲೆಯೇ ಪ್ರಭಾವ ಬೀರುತ್ತದೆ.ಮಾಲಿನ್ಯವೂ ಮಿತಿಮೀರಿದರೆ ಮಾನವನಿಗೆ ಈ ಪರಿಸರದಲ್ಲಿ ಜೀವಿಸಲು ಅಸಾಧ್ಯವಾಗುತ್ತದೆ.ಆದುದರಿಂದ ಈ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಜವಬ್ದಾರಿ ನಮ್ಮದಾಗಿದೆ.ಮುಂದಿನ ಪೀಳಿಗೆಗೆ ಈ ಪರಿಸರವು ಉಳಿಯ ಬೇಕಾದರೆ ಇಂದಿನಿಂದಲೇ ಒಳ್ಳೆಯ ಬದಲಾವಣೆಯನ್ನು ಮಾಡಬೇಕಾಗಿದೆ.
ಬೆಳೆಯ ಆವರ್ತನೆ, ಹಸಿರು- ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಮಾನವ ಹಕ್ಕುಗಳು ಭಾರತದಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿಯು (ವಸ್ತುಸ್ಥಿತಿ) ಬಹಳ ಸಂಕೀರ್ಣ ರಚನೆಯಾಗಿದೆ. ಕಾರಣವೆಂದರೆ ದೇಶದ ವಿಶಾಲವಾದ ಭೂ ಭಾಗ ಮತ್ತು ಅತ್ಯದ್ಭುತ ವೈವಿಧ್ಯತೆಯ ಪರಿಣಾಮವಾಗಿ, ಇದರ ಸ್ಥಾನವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರದ ನೀತಿ ಮತ್ತು ಈ ದೇಶದ ಸಾರ್ವಭೌಮತ್ವ, ಸಾಮಾಜಿಕ ಸಮಾನತೆ, ಪ್ರಜಾತಂತ್ರ ಗಣರಾಜ್ಯ ರಾಷ್ಟ್ರವಾಗಿದ್ದು, ಮತ್ತು ಇತಿಹಾಸವನ್ನು ದಾಖಲಿಸಿದ್ದ ಹಳೆಯ ವಸಾಹತುಶಾಹಿ ಪ್ರಾಂತ್ಯಗಳಂತಿದೆ. ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳ ನೀಡಿಕೆಯ ಜೊತೆ, ಧಾರ್ಮಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಟ್ಟಿದೆ.
ಟಿಪ್ಪು ಸಾಹಿಬ್ ಎಂದೂ ಕರೆಯಲ್ಪಡುತ್ತಿದ್ದ ಟಿಪ್ಪು ಸುಲ್ತಾನ್ (೧೭೫೩ - ಮೇ ೪, ೧೭೯೯), ೧೭೮೨ ರಿಂದ ಮೈಸೂರು ಸಂಸ್ಥಾನದ ರಾಜ ಹಾಗೂ ಭಾರತದಲ್ಲಿ ಬ್ರಿಟೀಷ್ ಸಾಮ್ರಾಜ್ಯಶಾಹಿಯ ವಿರುದ್ಧ ಆಗಿನ ಕಾಲದ ಪ್ರಮುಖ ಹೋರಾಟಗಾರರಲ್ಲಿ ಒಬ್ಬ. ಈ ಹೋರಾಟದ ಪರಿಣಾಮವಾಗಿ ಟಿಪ್ಪುವಿಗೆ ಶೇರ್-ಎ-ಮೈಸೂರ್ (ಮೈಸೂರ ಹುಲಿ) ಎಂಬ ಬಿರುದು ಉಂಟು. ಮೈಸೂರಿನ ಇತಿಹಾಸದಲ್ಲಿ ಮರೆಯಲಾಗದ ಹೆಸರು ಈತನದು.
ಮೊಘಲ್ ಸಾಮ್ರಾಜ್ಯ (ಉರ್ದು:: مغل باد شاہ) ಭಾರತೀಯ ಉಪಖಂಡದ ಉತ್ತರ ಭಾಗಗಳನ್ನು ೧೫೨೬ ರಿಂದ ಆಳಿದ ಮುಖ್ಯ ಸಾಮ್ರಾಜ್ಯಗಳಲ್ಲಿ ಒಂದು. ಮೊಘಲ್ ಸಾಮ್ರಾಜ್ಯದ ಸ್ಥಾಪನೆ ೧೫೨೬ ರಲ್ಲಿ ಬಾಬರ್ ನಿಂದ ನಡೆಯಿತು - ಮೊದಲ ಪಾಣಿಪಟ್ ಯುದ್ಧದಲ್ಲಿ ಇಬ್ರಾಹಿಮ್ ಲೋದಿಯನ್ನು ಸೋಲಿಸಿದ ನಂತರ. ಹುಮಾಯೂನ್ ನ ಕಾಲದಲ್ಲಿ ಶೇರ್ ಷಾ ಮೊಘಲ್ ಸಾಮ್ರಾಜ್ಯವನ್ನು ಸೋಲಿಸಿದರೂ, ನಂತರ ಅಕ್ಬರ್ ನ ಕೆಳಗೆ ಮೇಲೇರಲಾರಂಭಿಸಿದ ಮೊಘಲ್ ಸಾಮ್ರಾಜ್ಯ ಔರಂಗಜೇಬನ ಕಾಲದ ವರೆಗೂ ಬೆಳೆಯಿತು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಇಕ್ಷ್ವಾಕು ವಂಶದ ದೊರೆ ರಾಜ ಹರಿಶ್ಚಂದ್ರ ಸತ್ಯಪಾಲನೆಗಾಗಿ ಹೆಸರಾದವನು.ತಂದೆ ಸೂರ್ಯ ವಂಶದ ದೊರೆ ತ್ರಿಶಂಕು,ತಾಯಿ ಸತ್ಯವ್ರತೆಯ ಮಗ ಮುಂದೆ ಸತ್ಯ ಹರಿಶ್ಚಂದ್ರನೆಂದು ಪ್ರಸಿದ್ದಿ ಪಡೆದನು. ಒಂದಾನೊಂದು ಕಾಲದಲ್ಲಿ ಹರಿಶ್ಚಂದ್ರನೆಂಬ ರಾಜನು ಆಯೋಧ್ಯ ಎಂಬ ರಾಜ್ಯವನು ಚಾಣಕ್ಷ್ಯತನದಿಂದ ರಾಜ್ಯವನು ಆಳುತ್ತಿದನು ಮತ್ತು ಅವನು ಸತ್ಯವನು ಬಿಟ್ಟು ಬೇರೆ ಏನನ್ನು ಹೇಳುತ್ತಿರಲಿಲ್ಲ ಯಾವಾಗಲು ಸಂತೋಷದಿಂದ ರಾಜ್ಯಭಾರ ಮಾಡುತ್ತಿದ್ದ. ಆ ಸಮಯದಲ್ಲಿ ದೇವರುಗಳು ಅವನಿಗೂಂದು ಸತ್ವಪರೀಕ್ಷೆಯನ್ನು ಕೊಡಲು ನಿರ್ಧರಿಸಿದರು.
ಹೇಮರೆಡ್ಡಿ ಮಲ್ಲಮ್ಮ (ಚಲನಚಿತ್ರ ೧೯೪೫)
ಹೇಮರೆಡ್ಡಿ ಮಲ್ಲಮ್ಮ ಎಸ್.ಸೌಂದರ್ಯರಾಜನ್ ನಿರ್ದೆಶನದಲ್ಲಿ ಗುಬ್ಬಿ ವೀರಣ್ಣ ನಿರ್ಮಿಸಿ ೧೯೪೫ ಯಲ್ಲಿ ಬಿಡುಗಡೆ ಆದ ಕನ್ನಡ ಚಲನಚಿತ್ರ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಸಂಶೋಧನೆ ಎಂಬುದನ್ನು ಜ್ಞಾನದ ಸಲುವಾಗಿ ನಡೆಸುವ ಹುಡುಕಾಟ ಎಂದು ವ್ಯಾಖ್ಯಾನಿಸಬಹುದು,ಅಥವಾ ಮುಕ್ತ ಮನಸ್ಸಿನಿಂದ ಯಾವುದೇ ಶಿಸ್ತುಬದ್ದ ಶೋಧನೆ,ತನಿಖೆ ಮೂಲಕ ನವೀನ ಸಂಗತಿಗಳ ಹುಟ್ಟುಹಾಕಿ ಹೊಸ ಅಥವಾ ಅಸ್ತಿತ್ವದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು.ಒಂದು ವೈಜ್ಞಾನಿಕ ಪದ್ದತಿಯಂತೆ ಹೊಸ ಸಿದ್ದಾಂತಗಳ ಅಭಿವೃದ್ಧಿಪಡಿಸುವಿಕೆಯೇ ಸಂಶೋಧನೆಯಾಗಿದೆ. ಮೂಲಭೂತ ಸಂಶೋಧನೆಯ ಪ್ರಾಥಮಿಕ ಉದ್ದೇಶವೆಂದರೆ, (ಅದನ್ನು ಅನ್ವಯಿಕ ಸಂಶೋಧನೆಗೆ ವಿರೋಧವೆನ್ನಲಾಗುತ್ತದೆ.)ಆವಿಷ್ಕಾರಗೊಳಿಸುವಿಕೆ,ವಿವರವಾಗಿ ಅರ್ಥೈಸುವಿಕೆ ಮತ್ತು ಅಭಿವೃದ್ಧಿ ಮೂಲಕ ಮನುಷ್ಯನ ಜ್ಞಾನವನ್ನು ನಿರ್ಧಿಷ್ಟ ಪದ್ದತಿ ಮತ್ತು ಶಿಸ್ತುಗಳಿಗೆ ಅಳವಡಿಸುವುದೇ ಆಗಿದೆ.ನಮ್ಮ ಜಗತ್ತು ಮತ್ತು ಬ್ರಹ್ಮಾಂಡದಲ್ಲಿನ ವೈಜ್ಞಾನಿಕ ಭೌತಿಕ ವಸ್ತುಗಳ ಮೇಲೆ ವಿಸ್ತಾರವಾದ ತಿಳಿವಳಿಕೆ ಪಡೆಯುವುದು. ವೈಜ್ಞಾನಿಕ ಸಂಶೋಧನೆ ಯು ವೈಜ್ಞಾನಿಕ ಪದ್ದತಿಯ ಅಳವಡಿಕೆಯನ್ನು ಅವಲಂಬಿಸಿದೆ.ಈ ಮೂಲಕ ಅದು ಕುತೂಹಲವನ್ನು ಬಡಿದೆಬ್ಬಿಸಿ ಫಲಿತಾಂಶಕ್ಕಾಗಿ ಸಜ್ಜುಗೊಳಿಸುತ್ತದೆ.
ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ
ಟೆಂಪ್ಲೇಟು:Pp-protect ಇಂಟರ್ನ್ಯಾಷನಲ್ ಸ್ಟ್ಯಾಂಡರ್ಡ್ ಬುಕ್ ಸಂಖ್ಯೆ (ಐ.ಎಸ್.ಬಿ.ಎನ್) /ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ ಒಂದು ವಿಶಿಷ್ಟವಾದ ಸಂಖ್ಯೆ. ಪ್ರಕಾಶಕರು ಐಎಸ್ಬಿಎನ್ ಅನ್ನು ಪುಸ್ತಕ ಶೀರ್ಷಿಕೆಗೆ ನಿಯೋಜಿಸುತ್ತಾರೆ.ಒಂದು ಐಎಸ್ಬಿಎನ್ ಮುಖ್ಯವಾಗಿ ಪ್ರಕಾಶಕರು, ಪುಸ್ತಕ ಮಾರಾಟಗಾರರು, ಗ್ರಂಥಾಲಯಗಳು, ಇಂಟರ್ನೆಟ್ ಚಿಲ್ಲರೆ ವ್ಯಾಪಾರಿಗಳು ಮತ್ತು ಇತರ ಪೂರೈಕೆ ಸರಪಳಿಗಳು ಆದೇಶ, ಪಟ್ಟಿಗಳು, ಮಾರಾಟದ ದಾಖಲೆಗಳು ಮತ್ತು ಷೇರು ನಿಯಂತ್ರಣ ಉದ್ದೇಶಗಳಿಗಾಗಿ ಬಳಸಲ್ಪಡುವ ಒಂದು ಉತ್ಪನ್ನ ಗುರುತಿಸುವಿಕೆ. ಐಎಸ್ಬಿಎನ್ ನೋಂದಾಯಿಸುವವರನ್ನು ನಿರ್ದಿಷ್ಟ ಶೀರ್ಷಿಕೆ, ಆವೃತ್ತಿ ಮತ್ತು ಸ್ವರೂಪವನ್ನು ಗುರುತಿಸುತ್ತದೆ.
ಇಪ್ಪತ್ತನೇ ಶತಮಾನದ ಆದಿಯಲ್ಲಿ ಇಂಗ್ಲಿಷ್ ಸಾಹಿತ್ಯ ದ ಪ್ರಭಾವದಿಂದ ಕನ್ನಡ ಸಾಹಿತ್ಯವು ಹೊಸ ಹುಟ್ಟನ್ನು ಪಡೆದು ಹಳೆಗನ್ನಡ -ನಡುಗನ್ನಡ ಸಾಹಿತ್ಯಕ್ಕಿಂತ ಬೇರೆಯಾದ ನವೋದಯ ಸಾಹಿತ್ಯವೆಂದು ಹೊಸ ಸಾಹಿತ್ಯ ಪ್ರಕಾರ ದಲ್ಲಿ ಕಾಣಿಸಿಕೊಂಡಿತು. ಇದು ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಕಾವ್ಯ, ಕವನ, ಭಾವಗೀತೆ, ಹೀಗೆ ವಿವಿಧ ಪ್ರಕಾರಗಳಲ್ಲಿ ಬಹುಬೇಗ ಅಭಿವೃದ್ಧಿ ಪಡೆದು ವಿಫುಲ ಸಾಹಿತ್ಯ ಬೆಳವಣಿಗೆಗೆ ಕಾರಣವಾಯಿತು. ಇದರಲ್ಲಿ ಮುಖ್ಯವಾದ ಕಾವ್ಯ ಪ್ರಕಾರಗಳಲ್ಲಿ, ಭಾವಗೀತೆ, ಕವನ, ಕಗ್ಗ, ವಚನದ ಲಕ್ಷಣದ ಮತ್ತು ರಗಳೆ ಛಂದಸ್ಸಿನ ಸಾನೆಟ್ ಮಾದರಿಯ ಪದ್ಯಗಳು ಮುಖ್ಯವಾದವು.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಕಾರ್ಗಿಲ್ ಸಂಘರ್ಷ ವೆಂದೇ ಹೆಸರಾದ ಕಾರ್ಗಿಲ್ ಯುದ್ದವು ಭಾರತ ಮತ್ತು ಪಾಕಿಸ್ತಾನದ ಮಧ್ಯೆ ನಡೆದ ಸಶಸ್ತ್ರ ಸಂಘರ್ಷವಾಗಿದ್ದು, ಕಾಶ್ಮೀರದ ಕಾರ್ಗಿಲ್ ಜಿಲ್ಲೆ ಮತ್ತು ನಿಯಂತ್ರಣ ರೇಖೆಯಿರುವ ಪ್ರದೇಶಗಳಲ್ಲಿ 1999ರ ಮೇ ಮತ್ತು ಜುಲೈ ನಡುವೆ ಸಂಭವಿಸಿತು. ಉಭಯ ರಾಷ್ಟ್ರಗಳ ನಡುವಿನ de facto ಗಡಿಯಾಗಿರುವ ನಿಯಂತ್ರಣ ರೇಖೆಯಲ್ಲಿ(LOC)ರುವ ಭಾರತದ ನೆಲೆಗಳಿಗೆ ಪಾಕಿಸ್ತಾನದ ಸೈನಿಕರು ಮತ್ತು ಕಾಶ್ಮೀರಿ ಉಗ್ರಗಾಮಿಗಳು ನುಸುಳಿದ್ದೇ ಯುದ್ಧಕ್ಕೆ ಕಾರಣ. ಯುದ್ಧದ ಆರಂಭದ ಹಂತಗಳಲ್ಲಿ, ಕಾರ್ಗಿಲ್ ಕದನಕ್ಕೆ ಸ್ವತಂತ್ರ ಕಾಶ್ಮೀರಿ ಉಗ್ರಗಾಮಿಗಳ ಮೇಲೆ ಪಾಕಿಸ್ತಾನ ಗೂಬೆ ಕೂರಿಸಿತು, ಆದರೆ ಯುದ್ಧಾನಂತರದ ಸಾವು ನೋವುಗಳ ದಾಖಲೆಗಳು ಮತ್ತು ಆ ಬಳಿಕ ಪಾಕಿಸ್ತಾನದ ಪ್ರಧಾನ ಮಂತ್ರಿ ಮತ್ತು ಸೇನಾ ಸಿಬ್ಬಂದಿ ಮುಖ್ಯಸ್ಥರು ನೀಡಿದ ಹೇಳಿಕೆಗಳು, ಜನರಲ್ ಅಶ್ರಫ್ ರಷೀದ್ ನೇತೃತ್ವದ ಪಾಕಿಸ್ತಾನಿ ಅರೆಸೇನೆ ಪಡೆಗಳು ಈ ಯುದ್ಧದಲ್ಲಿ ಪಾಲ್ಗೊಂಡಿದ್ದನ್ನು ರುಜುವಾತು ಮಾಡಿತು.
ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ. ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ವೀರಶೈವ ಕವಿ.
ಉಮಾಶ್ರೀ (ಮೇ ೧೦, ೧೯೫೭) ಕನ್ನಡ ರಂಗಭೂಮಿ ಮತ್ತು ಚಲನಚಿತ್ರರಂಗದ ಪ್ರತಿಭಾನ್ವಿತ ಅಭಿನೇತ್ರಿ. ರಂಗಭೂಮಿಯ ತಾಜಾ ಪ್ರತಿಭೆಯಾದುದರಿಂದ, ಭಾವುಕತೆಯಲ್ಲಾಗಲಿ, ಹಾವ ಭಾವಗಳಲ್ಲಾಗಲಿ, ಅಭಿವ್ಯಕ್ತಿಯಲ್ಲಾಗಲಿ ಅವರ ಸಮಕ್ಕೆ ಇರುವ ಕಲಾವಿದರು ಅಪರೂಪವೆಂಬುದು ಕನ್ನಡ ಚಲನಚಿತ್ರಾಸಕ್ತರ ಒಕ್ಕೊರಲಿನ ಅಭಿಪ್ರಾಯ. ಕೆಲವೊಂದು ವೈಶಿಷ್ಟ್ಯಪೂರ್ಣ ಪಾತ್ರಗಳಲ್ಲಿ ಆಕೆ ತನ್ನ ಕಂಗಳಲ್ಲೇ ತುಂಬಿ ಕೊಡುವ ನಟನೆಯ ಪೂರ್ಣತ್ವ ಅಪ್ರತಿಮವಾದದ್ದು.
ಮಧ್ಯ ಏಷ್ಯಾದಿಂದ ಬಂದ ಮುಸ್ಲಿಂಜಯಶಾಲಿ, ಜಹೀರ್ ಉದ್ -ದಿನ್ ಮಹಮ್ಮದ್ ಬಾಬರ್ (February 23 [O.S. February 14] 1483 — January 5 [O.S. December 26, 1530] 1531) ಹಲವಾರು ಸತತ ಸೋಲಿನಿಂದ ,ಎದೆಗುಂದದೆ ಅಂತಿಮವಾಗಿ ಭಾರತದಲ್ಲಿ ಮುಘಲ್ ಸಾಮ್ರಾಜ್ಯ ಸ್ಥಾಪಿಸಿದನು .https://www.britannica.com/biography/Babur ತನ್ನ ತಂದೆಯ ಮೂಲಕ ತೈಮೂರುವಂಶದ ನೇರಸ್ಥಾನಾಗಿ , ಗೆನ್ಗೀಸ್ ಖಾನ್ ನ ವಂಶಸ್ಥನಾದದ್ದು , ತಾಯಿಯ ಮೂಲಕ . ಬಾಬರ್ ತನ್ನ ವಂಶ ಪರಂಪರೆಯನ್ನು ಟಿಮುರಿಡ್ ಮತ್ತು ಚಾಘತಯ್ -ಟರ್ಕಿಕ್ ಎಂದು ಗುರುತಿಸಿಕೊಂಡಿದ್ದು,ತನ್ನ ಹುಟ್ಟು ,ವಾತಾವರಣ, ತರಭೇತಿ ಮತ್ತು ಸಂಸ್ಕೃತಿಗಳು ಪೆರ್ಸಿಯನ್ ಸಂಸ್ಕೃತಿ ಯಿಂದ ಬಂದವುಗಳೆಂದು,ಆದುದರಿಂದ ತನ್ನ ವಂಶದವರಿಂದ ಬಂದ ಇವುಗಳನ್ನು ತನ್ನ ಜವಾಬ್ದಾರಿಯಿಂದ ಪೋಷಿಸಬೇಕೆಂದು, ಪೆರ್ಸಿಯನ್ ಸಂಸ್ಕೃತಿಯ ಪ್ರಭಾವ ವನ್ನು ಭಾರತದ ಉಪಖಂಡ ದಲ್ಲಿ ವಿಸ್ತರಿಸಿ , ಬುದ್ಧಿವಂತಿಕೆಯ ಸಾಹಿತ್ಯ , ಕಲೆ , ಮತ್ತು ಚಾರಿತ್ರಿಕ ಫಲಿತಾಂಶದ ಮೂಲಕ ಪರಿಚಯಿಸಲು ಉದ್ಯುಕ್ತನಾದನು.