The most-visited ಕನ್ನಡ Wikipedia articles, updated daily. Learn more...
ಕೆಳದಿ ನಾಯಕರು, ಬೇಡನೊರೆ ನಾಯಕರು , ಇಕ್ಕೇರಿ ರಾಜರು (1499-1763) ಕರ್ನಾಟಕ ರಾಜ್ಯವನ್ನಾಳಿದ ಭಾರತೀಯ ರಾಜವಂಶ. ಇದು ಕರ್ನಾಟಕ ರಾಜ್ಯದ ಶಿವಮೊಗ್ಗ ಜಿಲ್ಲೆಯ ಕೆಳದಿಯಲ್ಲಿ ರಾಜಧಾನಿಯಾಗಿತ್ತು.ಮಧ್ಯಕಾಲೀನ ನಂತರದ ಕರ್ನಾಟಕದಲ್ಲಿ ಇದು ಪ್ರಮುಖ ಪ್ರಮುಖ ರಾಜವಂಶವಾಗಿತ್ತು.ಅವರು ಆರಂಭದಲ್ಲಿ ಪ್ರಸಿದ್ಧ ವಿಜಯನಗರ ಸಾಮ್ರಾಜ್ಯದ ಸಾಮಂತರಾಗಿ ಆಳಿದರು.೧೫೬೫ ರಲ್ಲಿ ವಿಜಯನಗರ ಸಾಮ್ರಾಜ್ಯದ ಪತನದ ನಂತರ ದಕ್ಷಿಣ ಭಾರತದಲ್ಲಿ ಉದ್ಭವಿಸಿದ ಗೊಂದಲದ ಸಮಯದಲ್ಲಿ ಇವರು ಕರ್ನಾಟಕದ ಇತಿಹಾಸದಲ್ಲೇ ಪ್ರಮುಖ ಪಾತ್ರವಹಿಸಿ, ಶಿವಮೊಗ್ಗ ಸೇರಿದಂತೆ ಕರ್ನಾಟಕದ ಪ್ರಮುಖ ಭಾಗಗಳಲ್ಲಿ ಆಳ್ವಿಕೆ ನಡೆಸಿದರು (ಶಿವಮೊಗ್ಗ, ಕರಾವಳಿಯ ಎಲ್ಲಾ ಜಿಲ್ಲೆಗಳು, ಮಧ್ಯ ಭಾಗದ ಕೆಲವು ಜಿಲ್ಲೆಗಳು).ಸಾಮ್ರಾಜ್ಯ 1565 ರಲ್ಲಿ ನಂತರ, ಅವರು ಸ್ವಾತಂತ್ರ್ಯ ಪಡೆಯಿತು ಮತ್ತು ಉದ್ದಕ್ಕೂ ಗಮನಾರ್ಹ ಪಶ್ಚಿಮ ಘಟ್ಟಗಳ ಮಲೆನಾಡು ಪ್ರದೇಶದ ಈಗಿನ ಕರ್ನಾಟಕ, ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಮತ್ತು ಮತ್ತು ಭಾಗಗಳು ಹಲವು ಪ್ರದೇಶಗಳಲ್ಲಿ, ಉತ್ತರ ಕೇರಳ, ಮಲಬಾರಿನ ಭಾಗಗಳು ಬಯಲುಪ್ರದೇಶಗಳಲ್ಲಿ ಆಳ್ವಿಕೆ ತುಂಗಭದ್ರ ನದಿ. ಕ್ರಿ.ಶ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ಆರಂಭಗೊಂಡಿದ್ದರೂ, ಅದು ಹೆಚ್ಚು ಪ್ರಚಲಿತಕ್ಕೆ ಬಂದುದು ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ನಮ್ಮ ಸುತ್ತಮುತ್ತಲಿನ ಪ್ರದೇಶವೇ ಪರಿಸರ. ಈ ಪರಿಸರವೂ ಮರ ಗಿಡಗಳು ಹಾಗೂ ಪ್ರಾಣಿ ಪಕ್ಷಿಗಳಿಂದ ಕೂಡಿ5ದೆ.ಇದರೊಂದಿಗೆ ಮಾನವನು ಅನ್ಯೋನ್ಯತೆಯಿಂದ ಜೀವಿಸುತಿದ್ದಾನೆ.ಇವೆಲ್ಲದರ ನಡುವೆ ಮಾನವನು ತನ್ನ ಸ್ವಾರ್ಥತೆಯನ್ನು ತೋರಿಸುತ್ತಾನೆ.ಇದರಿಂದಾಗಿ ಪರಿಸರವು ಹಲವಾರು ತೊಂದರೆಗೆ ಒಳಗಾಗಿದೆ.ಇದರಲ್ಲಿ ಪರಿಸರವೂ ಎದುರಿಸುವ ಮೂರು ಮುಖ್ಯವಾದ ತೊಂದರೆಗಳೆಂದರೆ ವಾಯು ಮಾಲಿನ್ಯ , ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ. ಇದರ ಮುಖ್ಯ ಕಾರಣವೆಂದರೆ ಹೆಚ್ಚಾಗುತ್ತಿರುವ ಜನಸಂಖ್ಯೆ.ಜನರು ಬಳಸುವ ವಾಹನಗಳಿಂದ ಕೆಟ್ಟ ಹೊಗೆ ಹೊರಬರುತ್ತದೆ.ಕಾರ್ಖಾನೆಗಳಿಂದ ಹೊರಬರುವ ರಾಸಾಯನಿಕ ಹೊಗೆ ವಾಯು ಮಾಲಿನ್ಯಕ್ಕೆ itಕಾರಣವಾಗುತ್ತದೆ.ಮಾನವನ ಇಂದಿನ ದಿನಚರಿಕೆಯಿಂದ ಹಾಗೂ ಕಾರ್ಖಾನೆಗಳಿಂದ ಹೊರ ಬಿಡುವ ಕhಸಗಳು, ನೀರನ್ನು ಮಾಲಿನ್ಯಗೊಳಿಸುತ್ತದೆ.ವಾಹನಗಳಿಂದ,ಮದುವೆ ಸಮಾರಂಭಗಳಲ್ಲಿ ಹಾಗೂ ದೀಪಾವಳಿಯ ಸಮಯದಲ್ಲಿ ಉಪಯೋಗಿಸುವ ಪಟಾಕಿಯಿಂದ ಶಬ್ದ ಮಾಲಿನ್ಯವಾಗುತ್ತದೆ.ಇದೆಲ್ಲಾ ಮಾನವನ ಮೇಲೆಯೇ ಪ್ರಭಾವ ಬೀರುತ್ತದೆ.ಮಾಲಿನ್ಯವೂ ಮಿತಿಮೀರಿದರೆ ಮಾನವನಿಗೆ ಈ ಪರಿಸರದಲ್ಲಿ ಜೀವಿಸಲು ಅಸಾಧ್ಯವಾಗುತ್ತದೆ.ಆದುದರಿಂದ ಈ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಜವಬ್ದಾರಿ ನಮ್ಮದಾಗಿದೆ.ಮುಂದಿನ ಪೀಳಿಗೆಗೆ ಈ ಪರಿಸರವು ಉಳಿಯ ಬೇಕಾದರೆ ಇಂದಿನಿಂದಲೇ ಒಳ್ಳೆಯ ಬದಲಾವಣೆಯನ್ನು ಮಾಡಬೇಕಾಗಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
| data15 = | label16 = ತಂಡದ ಅಲಿಯಾಸ್ಗಳು | data16 = | label17 = ಭಾಗದಾರಿಕೆಗಳು | data17 = | label18 = ಪ್ರಮುಖ ಅಲಿಯಾಸ್ಗಳು | data18 = | label19 = ಸಾಮರ್ಥ್ಯಗಳು | data19 = }} ಬ್ಯಾಟ್ಮ್ಯಾನ್ , ಮೊದಲು "the Bat-Man " ಎಂದು ಉಲ್ಲೇಖಿಸಲಾಗಿದ್ದು ಮತ್ತು ಈಗಲೂ ಆಗಾಗ "the Batman " ಎಂದು ಉಲ್ಲೇಖಿಸಲಾಗುತ್ತದೆ, ಇದು ಒಂದುಕಲ್ಪಿತ ಕಥೆ ಪಾತ್ರ, ಒಂದು ಕಾಮಿಕ್ ಪುಸ್ತಕದ ಸೂಪರ್ ಹೀರೋ ಆಗಿದ್ದು, ಇದನ್ನು ಕಲಾವಿದ ಬಾಬ್ ಕೇನ್ಮತ್ತು ಬರಹಗಾರ ಬಿಲ್ ಫಿಂಗರ್ ಅವರು ಜಂಟಿಯಾಗಿ ಸೃಷ್ಟಿಸಿದ್ದರು ಮತ್ತು (ಆದರೂ ಅಧಿಕೃತ ಮನ್ನಣೆಯನ್ನು ಕಾನೆ ಮಾತ್ರ ಪಡೆಯುತ್ತಾರೆ),DC ಕಾಮಿಕ್ಸ್ನಿಂದ ಪ್ರಕಟಿಸಲ್ಪಡುತ್ತದೆ. ಈ ಪಾತ್ರವು ಮೊದಲಿಗೆ ಡಿಟೆಕ್ಟಿವ್ ಕಾಮಿಕ್ಸ್ #27ನಲ್ಲಿ ಮೇ 1939ರಲ್ಲಿ ಕಾಣಿಸಿಕೊಂಡಿತು. ಅವನು ಹೆಚ್ಚುವರಿಯಾಗಿ "ದಿ ಕೇಪ್ಡ್ ಕ್ರುಸೇಡರ್ ","ದಿ ಡಾರ್ಕ್ ನೈಟ್ ", "ದಿ ವರ್ಲ್ಡ್’ಸ್ ಗ್ರೇಟೇಸ್ಟ್ ಡಿಟೆಕ್ಟಿವ್ ", ಅಥವಾ ಸರಳವಾಗಿ "ದಿ ಬ್ಯಾಟ್ " ಎಂದು ಪರಿಚಿತನಾಗಿದ್ದಾನೆ.
ಕಾರ್ಗಿಲ್ ಸಂಘರ್ಷ ವೆಂದೇ ಹೆಸರಾದ ಕಾರ್ಗಿಲ್ ಯುದ್ದವು ಭಾರತ ಮತ್ತು ಪಾಕಿಸ್ತಾನದ ಮಧ್ಯೆ ನಡೆದ ಸಶಸ್ತ್ರ ಸಂಘರ್ಷವಾಗಿದ್ದು, ಕಾಶ್ಮೀರದ ಕಾರ್ಗಿಲ್ ಜಿಲ್ಲೆ ಮತ್ತು ನಿಯಂತ್ರಣ ರೇಖೆಯಿರುವ ಪ್ರದೇಶಗಳಲ್ಲಿ 1999ರ ಮೇ ಮತ್ತು ಜುಲೈ ನಡುವೆ ಸಂಭವಿಸಿತು. ಉಭಯ ರಾಷ್ಟ್ರಗಳ ನಡುವಿನ de facto ಗಡಿಯಾಗಿರುವ ನಿಯಂತ್ರಣ ರೇಖೆಯಲ್ಲಿ(LOC)ರುವ ಭಾರತದ ನೆಲೆಗಳಿಗೆ ಪಾಕಿಸ್ತಾನದ ಸೈನಿಕರು ಮತ್ತು ಕಾಶ್ಮೀರಿ ಉಗ್ರಗಾಮಿಗಳು ನುಸುಳಿದ್ದೇ ಯುದ್ಧಕ್ಕೆ ಕಾರಣ. ಯುದ್ಧದ ಆರಂಭದ ಹಂತಗಳಲ್ಲಿ, ಕಾರ್ಗಿಲ್ ಕದನಕ್ಕೆ ಸ್ವತಂತ್ರ ಕಾಶ್ಮೀರಿ ಉಗ್ರಗಾಮಿಗಳ ಮೇಲೆ ಪಾಕಿಸ್ತಾನ ಗೂಬೆ ಕೂರಿಸಿತು, ಆದರೆ ಯುದ್ಧಾನಂತರದ ಸಾವು ನೋವುಗಳ ದಾಖಲೆಗಳು ಮತ್ತು ಆ ಬಳಿಕ ಪಾಕಿಸ್ತಾನದ ಪ್ರಧಾನ ಮಂತ್ರಿ ಮತ್ತು ಸೇನಾ ಸಿಬ್ಬಂದಿ ಮುಖ್ಯಸ್ಥರು ನೀಡಿದ ಹೇಳಿಕೆಗಳು, ಜನರಲ್ ಅಶ್ರಫ್ ರಷೀದ್ ನೇತೃತ್ವದ ಪಾಕಿಸ್ತಾನಿ ಅರೆಸೇನೆ ಪಡೆಗಳು ಈ ಯುದ್ಧದಲ್ಲಿ ಪಾಲ್ಗೊಂಡಿದ್ದನ್ನು ರುಜುವಾತು ಮಾಡಿತು.
ಈತನನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯ ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯನನ್ನೇ ಮೊದಲ ವಚನಕಾರನೆಂದು ಗುರುತಿಸಲಾಗುತ್ತದೆ.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (2018 ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು., ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿ . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು. ಇದನ್ನು ಎಲ್ಲರು ಧರಿಸಿ ಪೂಜಿಸಬಹುದು.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳುಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ .ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಅವರ ಅನುಪಸ್ಥಿತಿಯಲ್ಲಿ, ಭಾರತದ ಸುಪ್ರೀಂ ಕೋರ್ಟ್ನ ಹಿರಿಯ ನ್ಯಾಯಾಧೀಶರಿಂದ ಅಧ್ಯಕ್ಷರ ಪ್ರಮಾಣ ವಚನ ಸ್ವೀಕರಿಸಲಾಗುತ್ತದೆ.
ಸುಭಾಷ್ ಚಂದ್ರ ಬೋಸ್ (সুভাষ চন্দ্র বসু; ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣದಿಂದಾಗಿಯೇ ಇದ್ದರು.
ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ಲೋಕಸಭೆಗೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ, ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.
ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರ ಪಟ್ಟಿ ಕನ್ನಡ ಭಾಷೆ
ಕೇಂದ್ರ ಸರ್ಕಾರವು ೧೯೫೫ ರಲ್ಲಿ ಸಾಹಿತ್ಯ ಅಕಾಡೆಮೆಯನ್ನು ಸ್ಠಾಪಿಸತು. ಇದುವರೆಗೆ ೬೧ ಕನ್ನಡದ ಲೇಖಕರಿಗೆ ಈ ಪ್ರಶಸ್ತಿ ಲಬಿಸಿದೆ. ೧೯೫೭ ಹಾಗೂ ೧೯೬೩ ರಲ್ಲಿ ಪ್ರಶಸ್ತಿಯನ್ನು ಕೊಡಲಾಗಿಲ್ಲ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಐಸಿಸಿ ಕ್ರಿಕೆಟ್ ವಿಶ್ವ ಕಪ್ ಪುರುಷರ ಅತಿ ಪ್ರತಿಷ್ಠಿತ ಏಕದಿನ ಅಂತರರಾಷ್ಟ್ರೀಯ (ODI) ಕ್ರಿಕೆಟ್ ಪಂದ್ಯಾವಳಿಯಾಗಿದೆ. ಈ ಕ್ರೀಡೆಯ ನಿರ್ವಹಣಾ ಮಂಡಳಿಯಾದ ಅಂತರರಾಷ್ಟ್ರೀಯ ಕ್ರಿಕೆಟ್ ಪರಿಷತ್ (ಐಸಿಸಿ) ಈ ಕ್ರೀಡೆಯನ್ನು ಆಯೋಜಿಸುತ್ತದೆ. ಪ್ರಾಥಮಿಕ ಅರ್ಹತಾ ಸುತ್ತಿನ ಪಂದ್ಯಗಳು ನಡೆದ ನಂತರ, ಅರ್ಹತೆ ಗಳಿಸಿದ ತಂಡಗಳು, ನಾಲ್ಕು ವರ್ಷಗಳಲ್ಲೊಮ್ಮೆ ನಡೆಯುವ ಈ ಪಂದ್ಯಾವಳಿಯಲ್ಲಿ ಸ್ಪರ್ಧಿಸುತ್ತವೆ.
ಒಬ್ಬ ವ್ಯಕ್ತಿ ಕೆಲಸ ಮಾಡಲು ಲಭ್ಯನಿದ್ದು, ಕೆಲಸಮಾಡುವ ಇಚ್ಚೆಯನ್ನೂ ಹೊಂದಿದ್ದು, ಆದರೆ ಸಧ್ಯಕ್ಕೆ ಆತನಿಗೆ ಮಾಡಲು ಕೆಲಸವಿಲ್ಲದೇ ಇದ್ದಾಗ ನಿರುದ್ಯೋಗ ವು ಉದ್ಭವಿಸುತ್ತದೆ. ಸಾಮಾನ್ಯವಾಗಿ ನಿರುದ್ಯೋಗ ವರ್ಗದ ಸಮೂಹವನ್ನು ಒಟ್ಟು ನಿರುದ್ಯೋಗ ದರವನ್ನು ಬಳಸಿಕೊಂಡು ಮಾಪನಮಾಡುತ್ತಾರೆ. ಇದನ್ನು ಒಟ್ಟೂ ಶ್ರಮ ಶಕ್ತಿಯಲ್ಲಿರುವ ಶೇಕಡಾವಾರು ನಿರುದ್ಯೋಗಿಗಳ ಮೂಲಕ ವ್ಯಾಖ್ಯಾನಿಸಲಾಗುತ್ತದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಇದೇ ಹೆಸರಿನ ಕಾದಂಬರಿಯ ಬಗ್ಗೆ ಲೇಖನಕ್ಕಾಗಿ ಇಲ್ಲಿ ನೋಡಿ. ಗ್ರಹಣವು ಒಂದು ಬಾಹ್ಶಾಕಾಶದವಸ್ತುವು ಮತ್ತೊಂದರ ನೆರಳಿನಲ್ಲಿ ಚಲಿಸಿದಾಗ ಉಂಟಾಗುವ ಒಂದು ಖಗೋಳಶಾಸ್ತ್ರೀಯ ಘಟನೆ. ಸೌರಮಂಡಲದಂತಹ ಒಂದು ತಾರಾಮಂಡಲದಲ್ಲಿ ಗ್ರಹಣ ಉಂಟಾದಾಗ, ಒಂದು ಬಗೆಯ ಸಂಯೋಗದ (ಸರಳ ರೇಖೆಯಲ್ಲಿ ಒಂದೇ ಗುರುತ್ವಾಕರ್ಷಣ ವ್ಯವಸ್ಥೆಯಲ್ಲಿನ ಮೂರು ಅಥವಾ ಹೆಚ್ಚು ಬಾಹ್ಯಾಕಾಶ ಕಾಯಗಳ ಹೊಂದಿಕೆ) ರಚನೆಯಾಗುತ್ತದೆ.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಕೃಷ್ಣಾ ನದಿ ದಕ್ಷಿಣ ಭಾರತದ ಎರಡನೆಯ ದೊಡ್ಡ ನದಿಯಾಗಿದೆ. ಈ ನದಿ ಮಹಾರಾಷ್ಟ್ರದ ಪಶ್ಚಿಮ ಘಟ್ಟದ ಮಹಾದೇವ ಪರ್ವತ ಶ್ರೇಣಿಯಲ್ಲಿ ಮಹಾಬಲೇಶ್ವರದ ಹತ್ತಿರ ಸಮುದ್ರ ಮಟ್ಟಕ್ಕಿಂತ ೧೩೩೮ ಮೀಟರ ಎತ್ತರದಲ್ಲಿ ಉಗಮವಾಗಿ ಸುಮಾರು ೧೩೯೨ ಕಿ.ಮಿ.ಗಳಷ್ಟು ಹರಿದು ಆಂಧ್ರಪ್ರದೇಶದ ಹಂಸಲಾದೀವಿಯಲ್ಲಿ ಬಂಗಾಳ ಕೊಲ್ಲಿ ಯನ್ನು ಸೇರುತ್ತದೆ. ಕೃಷ್ಣಾ ನದಿ ಮಹಾರಾಷ್ಟ್ರ,ಕರ್ನಾಟಕ, ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ಪ್ರವಹಿಸುತ್ತದೆ.
ಕ್ರಿಕೆಟ್ ಎಂಬುದು ದಾಂಡು ಮತ್ತು ಚೆಂಡುಗಳ ಆಟ. ಬ್ಯಾಟ್ ಮತ್ತು ಚೆಂಡುಗಳಿಗೆ ಸಂಬಂಧಪಟ್ಟ ಪಂಗಡದ ಆಟವೆಂದೂ ಹಾಗೂ ೧೬ನೇ ಶತಮಾನದಲ್ಲಿ ದಕ್ಷಿಣ ಇಂಗ್ಲೆಂಡಿನಲ್ಲಿ ಆಡಲ್ಪಟ್ಟಿದ್ದು ಎಂಬ ಬಗ್ಗೆ ಆಧಾರವಿದೆ.೧೮ನೇಯ ಶತಮಾನದ ಅಂತ್ಯದ ಸಮಯದಲ್ಲಿ ಕ್ರಿಕೆಟ್ ಇಂಗ್ಲೆಂಡಿನ ರಾಷ್ಟ್ರೀಯ ಕ್ರೀಡೆಯಾಗಿ ಅಭಿವೃದ್ಧಿ ಹೊಂದಿತ್ತು. ಬ್ರಿಟೀಷ್ ಸಾಮ್ರಾಜ್ಯದ ವಿಸ್ತರಣೆಯು ಸಮುದ್ರದಾಚೆಗಿನ ದೇಶಗಳೊಡನೆ ಕ್ರಿಕೆಟ್ ಅಡಲು ಅನುವು ಮಾಡಿಕೊಟ್ಟಿತು ಮತ್ತು ಹತ್ತೊಂಬತ್ತನೆಯ ಶತಮಾನದ ಮಧ್ಯಭಾಗದಲ್ಲಿ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನು ನಡೆಸಲಾಗಿತ್ತು.ಇಂದು ಆಟಗಳ ಆಡಳಿತಾತ್ಮಕ ಅಂಗವಾದ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ೧೦೪ ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿದೆ.ಆಟದ ನಿಯಮಾವಳಿಗಳು ಕ್ರಿಕೆಟ್ನ ಕಾನೂನುಗಳು ಎಂದು ಪರಿಚಿತವಾಗಿವೆ.ಇವೆಲ್ಲವುಗಳ ಉಸ್ತುವಾರಿಯನ್ನು ಗ್ರಂಥಸ್ವಾಮ್ಯ ಹೊಂದಿರುವ ICC ಮತ್ತು ಮೆಲ್ಬೋರ್ನ್ ಕ್ರಿಕೆಟ್ ಕ್ಲಬ್ ನೋಡಿಕೊಳ್ಳುತ್ತಿದೆ.ಕ್ರಿಕೆಟ್ ಆಟವನ್ನು ಕ್ರಿಕೆಟ್ ಮೈದಾನದ ಮಧ್ಯಭಾಗದಲ್ಲಿರುವ ಪಿಚ್ ಮೇಲೆ ಆಡಿಸಲಾಗುತ್ತದೆ.ಪಂದ್ಯವನ್ನು ಒಂದೊಂದು ಪಂಗಡದಲ್ಲಿಯೂ ಹನ್ನೊಂದು ಜನ ಆಟಗಾರರು ಇರುವ ಎರಡು ಪಂಗಡಗಳ ನಡುವೆ ಆಡಿಸಲಾಗುತ್ತದೆ.ಬ್ಯಾಟಿಂಗ್ ಮಾಡುತ್ತಿರುವ ಪಂಗಡ ಔಟ್ ಆಗದೆ ಸಾಧ್ಯವಾದಷ್ಟು ರನ್ ಗಳಿಸಲು ಪ್ರಯತ್ನಿಸುತ್ತಿದ್ದರೆ ಬೌಲಿಂಗ್ ಮತ್ತು ಫೀಲ್ಡಿಂಗ್ ಮಾಡುತ್ತಿರುವ ಇನ್ನೊಂದು ಪಂಗಡ ಬ್ಯಾಟಿಂಗ್ ಮಾಡುತ್ತಿರುವ ಪಂಗಡದ ಬ್ಯಾಟ್ಸ್ಮನ್ಗಳನ್ನ ಚದುರಿಸಿ ಕಡಿಮೆ ಅಂಕಕ್ಕೆ ಮಿತಿಗೊಳಿಸಲು ಪ್ರಯತ್ನಿಸುತ್ತಿರುತ್ತದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೊಂಬತ್ತು ರಾಜ್ಯಗಳು ಹಾಗು ಏಳು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಕಾರವು ಬಂದಾಗ 'ಐ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂದಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.
ಮೂರನೆಯ ಪಾಣಿಪತ್ ಯುದ್ಧ ೧೭೬೧ರ ಜನವರಿ ೧೪ರಂದು ಇಂದಿನ ಹರ್ಯಾಣದಲ್ಲಿರುವ ಪಾಣಿಪತ್ನಲ್ಲಿ (29.39° N 76.97° E) ಮರಾಠ ಸಾಮ್ರಾಜ್ಯ ಮತ್ತು ಅಹ್ಮದ್ ಶಾಹ್ ದುರ್ರಾನಿ (ಅಹ್ಮದ್ ಶಾಹ್ ಅಬ್ದಾಲಿ ಎಂದೂ ಕೂಡ ಕರೆಯಲಾಗುತ್ತದೆ) ನೇತೃತ್ವದ ಪಾಶ್ತುನ್ ಜನರ ಸೇನೆಯ ಮಧ್ಯೆ ನಡೆದ ಯುದ್ಧ. ಇದು ಪಾಣಿಪತ್ ಅಲ್ಲಿ ನಡೆದ ಮೂರನೆಯ ಯುದ್ಧ. ಈ ಯುದ್ಧದಲ್ಲಿ ಫ್ರೆಂಚರಿಂದ ಮದ್ದು ಗುಂಡು ಮತ್ತಿ ತರಬೇತಿ ಗಳಿಸಿದ್ದ ಮರಾಠರಿಗೂ, ಅಹಮದ್ ಶಾ ಅಬ್ದಾಲಿಯ ಸಬಲ ಕುದುರೆ ಕಾಳಗ ನಿಪುಣರ ಮಧ್ಯೆ ಮುಖಾಮುಖಿಯಾಯಿತು.