The most-visited ಕನ್ನಡ Wikipedia articles, updated daily. Learn more...
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮)(2nd October 1869 ) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು. ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಭಾರತದ ರಾಷ್ತ್ರೀಯ ಧ್ವಜ'ದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಸುಭಾಷ್ ಚಂದ್ರ ಬೋಸ್ (সুভাষ চন্দ্র বসু; ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣದಿಂದಾಗಿಯೇ ಇದ್ದರು.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು., ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿ . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು. ಇದನ್ನು ಎಲ್ಲರು ಧರಿಸಿ ಪೂಜಿಸಬಹುದು.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ಆರಂಭಗೊಂಡಿದ್ದರೂ, ಅದು ಹೆಚ್ಚು ಪ್ರಚಲಿತಕ್ಕೆ ಬಂದುದು ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (2018 ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಪಾಂಡವರು ಮಹಾಭಾರತದಲ್ಲಿ ಕಂಡುಬರುವ ಪಾತ್ರಗಳು - ಪಾಂಡು ಹಾಗೂ ಕುಂತಿ-ಮಾದ್ರಿಯರ ಮಕ್ಕಳು.ಪಾಂಡುವಿನ ಮಕ್ಕಳಾದ್ದರಿಂದ ಪಾಂಡವರೆಂದು ಕರೆಯಲ್ಪಟ್ಟರು.ಪಾಂಡವರು ಐದು ಜನ.ಐದು ಜನಕ್ಕೂ ಒಬ್ಬಳೇ ಪತ್ನಿ ದ್ರೌಪದಿ. ಕುಂತಿಯ ಮಕ್ಕಳು: ಯುಧಿಷ್ಠಿರ (ಯಮನಿಂದ) ಭೀಮ (ವಾಯುವಿನಿಂದ) ಅರ್ಜುನ (ಇಂದ್ರನಿಂದ)ಮಾದ್ರಿಯ ಮಕ್ಕಳು:(ಅವಳಿಗಳು) ನಕುಲ (ಅಶ್ವಿನಿ ದೇವತೆಗಳಿಂದ) ಸಹದೇವ (ಅಶ್ವಿನಿ ದೇವತೆಗಳಿಂದ)ಪಾಂಡವರ ಪತ್ನಿ ದ್ರೌಪದಿ. ಮಹಾಭಾರತದ ಕಥೆಯಂತೆ, ಪಾಂಡವರು ಮತ್ತು ಅವರ ದಾಯಾದಿಗಳಾದ ಕೌರವರ ನಡುವೆ ಹಸ್ತಿನಾಪುರದ ಸಿಂಹಾಸನದ ಬಗೆಗಿನ ವಿವಾದ ಏಳುತ್ತದೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಕೆರೆ-ಕಟ್ಟೆ, ನದಿ, ಅಣೆಕಟ್ಟೆ, ಸರೋವರ ಮುಂತಾದ ಕಡೆ ಶೇಖರಣೆಯಾಗಿರುವ ನೀರು ರಭಸವಾಗಿ ಉಕ್ಕಿ ಹರಿದು ವಿಶಾಲವಾದ ಭೂ ಪ್ರದೇಶವನ್ನು ಮುಳುಗಿಸುವುದೇ ಪ್ರವಾಹ ಅಥವಾ ಜಲಪ್ರವಾಹ. "ಹರಿಯುವ ನೀರು" ಎಂಬ ಅರ್ಥದಲ್ಲಿ ಈ ಪದ ಅಲೆಗಳಗಳ ಒಳಹರಿವಿಗೂ ಅನ್ವಯಿಸಬಹುದು. ನದಿ, ಸರೊವರಗಳಂಥ ನೀರಿನ ಸಂಗ್ರಹಾಗಾರಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣ ಜಾಸ್ತಿಯಾಗಿ ಅದು ಉಕ್ಕಿ ಹರಿದಾಗ ಪ್ರವಾಹಗಳುಂಟಾಗಬಹುದು.
ನಮ್ಮ ಸುತ್ತಮುತ್ತಲಿನ ಪ್ರದೇಶವೇ ಪರಿಸರ. ಈ ಪರಿಸರವೂ ಮರ ಗಿಡಗಳು ಹಾಗೂ ಪ್ರಾಣಿ ಪಕ್ಷಿಗಳಿಂದ ಕೂಡಿದೆ.ಇದರೊಂದಿಗೆ ಮಾನವನು ಅನ್ಯೋನ್ಯತೆಯಿಂದ ಜೀವಿಸುತಿದ್ದಾನೆ.ಇವೆಲ್ಲದರ ನಡುವೆ ಮಾನವನು ತನ್ನ ಸ್ವಾರ್ಥತೆಯನ್ನು ತೋರಿಸುತ್ತಾನೆ.ಇದರಿಂದಾಗಿ ಪರಿಸರವು ಹಲವಾರು ತೊಂದರೆಗೆ ಒಳಗಾಗಿದೆ.ಇದರಲ್ಲಿ ಪರಿಸರವೂ ಎದುರಿಸುವ ಮೂರು ಮುಖ್ಯವಾದ ತೊಂದರೆಗಳೆಂದರೆ ವಾಯು ಮಾಲಿನ್ಯ , ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ. ಇದರ ಮುಖ್ಯ ಕಾರಣವೆಂದರೆ ಹೆಚ್ಚಾಗುತ್ತಿರುವ ಜನಸಂಖ್ಯೆ.ಜನರು ಬಳಸುವ ವಾಹನಗಳಿಂದ ಕೆಟ್ಟ ಹೊಗೆ ಹೊರಬರುತ್ತದೆ.ಕಾರ್ಖಾನೆಗಳಿಂದ ಹೊರಬರುವ ರಾಸಾಯನಿಕ ಹೊಗೆ ವಾಯು ಮಾಲಿನ್ಯಕ್ಕೆ itಕಾರಣವಾಗುತ್ತದೆ.ಮಾನವನ ಇಂದಿನ ದಿನಚರಿಕೆಯಿಂದ ಹಾಗೂ ಕಾರ್ಖಾನೆಗಳಿಂದ ಹೊರ ಬಿಡುವ ಕhಸಗಳು, ನೀರನ್ನು ಮಾಲಿನ್ಯಗೊಳಿಸುತ್ತದೆ.ವಾಹನಗಳಿಂದ,ಮದುವೆ ಸಮಾರಂಭಗಳಲ್ಲಿ ಹಾಗೂ ದೀಪಾವಳಿಯ ಸಮಯದಲ್ಲಿ ಉಪಯೋಗಿಸುವ ಪಟಾಕಿಯಿಂದ ಶಬ್ದ ಮಾಲಿನ್ಯವಾಗುತ್ತದೆ.ಇದೆಲ್ಲಾ ಮಾನವನ ಮೇಲೆಯೇ ಪ್ರಭಾವ ಬೀರುತ್ತದೆ.ಮಾಲಿನ್ಯವೂ ಮಿತಿಮೀರಿದರೆ ಮಾನವನಿಗೆ ಈ ಪರಿಸರದಲ್ಲಿ ಜೀವಿಸಲು ಅಸಾಧ್ಯವಾಗುತ್ತದೆ.ಆದುದರಿಂದ ಈ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಜವಬ್ದಾರಿ ನಮ್ಮದಾಗಿದೆ.ಮುಂದಿನ ಪೀಳಿಗೆಗೆ ಈ ಪರಿಸರವು ಉಳಿಯ ಬೇಕಾದರೆ ಇಂದಿನಿಂದಲೇ ಒಳ್ಳೆಯ ಬದಲಾವಣೆಯನ್ನು ಮಾಡಬೇಕಾಗಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಭಾರತದಲ್ಲಿ ಬ್ರಿಟಿಷ್ ಆಡಳಿತದ ವೇಳೆಯಲ್ಲಿ, ಉಪ್ಪಿನ ಮೇಲೆ ವಿಧಿಸಿದ ಕರವನ್ನು ವಿರೋಧಿಸಿ ಮಹಾತ್ಮ ಗಾಂಧಿಯವರು ನಡೆಸಿದ ಸತ್ಯಾಗ್ರಹ ಚಳುವಳಿಯನ್ನು ಉಪ್ಪಿನ ಸತ್ಯಾಗ್ರಹ ಅಥವಾ ದಾಂಡಿ ಯಾತ್ರೆ ಎನ್ನಲಾಗುತ್ತದೆ. ಉಪ್ಪಿನ ಮೇಲಿನ ಕರವನ್ನು ವಿರೋಧಿಸಿ, ಮಹಾತ್ಮ ಗಾಂಧಿಯವರು ತಮ್ಮಅನುಯಾಯಿಗಳೊಡನೆ, ಸಬರಮತಿ ಆಶ್ರಮದಿಂದ ಸಮುದ್ರ ತಟದಲ್ಲಿರುವ ದಾಂಡಿಯವರೆಗಿನ ೨೪೦ ಮೈಲಿಗಳನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದರು. ಇಲ್ಲಿ ಈ ಕರದ ವಿರೋಧದ ಸಂಕೇತವಾಗಿ ನಿಬಂಧನೆಯ ವಿರುದ್ಧವಾಗಿ ಉಪ್ಪನ್ನು ತಯಾರಿಸಿದರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಬ್ರೀಟಿಷ್ ಆಡಳಿತದ ಮುಕ್ತಾಯದ ನಂತರ ದೇಶ ವಿಭಜನೆಯಲ್ಲಿ ಮುಖ್ಯ ಪಾತ್ರ ವಹಿಸಿದ ಕಾಯ್ದೆ ಭಾರತದ ಸ್ವಾತಂತ್ರ್ಯ ಕಾಯ್ದೆ ೧೯೪೭. ಬ್ರಿಟಿಷ್ ಸಂಸತ್ ನಲ್ಲಿ ಅಂಗೀಕೃತವಾದ ಈ ಕಾಯ್ದೆ ಭಾರತಕ್ಕೆ ಸ್ವಾತಂತ್ರ್ಯ ಕೊಡುವುದರ ಜೊತೆಗೆ ಭಾರತ ಮತ್ತು ಪಾಕಿಸ್ತಾನ ಎಂಬ ಎರಡು ರಾಷ್ಟ್ರಗಳಾಗಿ ವಿಭಜಿಸಿತು. ೧೮ ಜೂಲೈ ೧೯೪೭ ರಲ್ಲಿ ಸಮ್ಮತಿ ಪಡೆದುಕೊಂಡ ಈ ಕಾಯ್ದೆ ಭಾರತ ಹಾಗು ಪಾಕಿಸ್ತಾನದಲ್ಲಿ ಅದೇ ವರ್ಷದ ಆಗಸ್ಟ್ ೧೫ರಿಂದ ಸಂಪೂರ್ಣ ಅನುಷ್ಠಾನವಾಯಿತು.
{{Quote_box| width=22em|align=|right|quote= ತುಂಗಭದ್ರಾ ಅಣೆಕಟ್ಟು [[File:Tungabadra dam.jpg|thumb|250px|ತುಂಗಭದ್ರಾ ಅಣೆಕಟ್ಟು ಹೆಸರು = ತುಂಗಭದ್ರಾ ಅಣೆಕಟ್ಟು ಅಣೆಕಟ್ಟೆ ನದಿ = ತುಂಗಭದ್ರಾ ನದಿ ಸ್ಥಳ = ಹೊಸಪೇಟೆ, ಬಳ್ಳಾರಿ ಜಿಲ್ಲೆ, ಕರ್ನಾಟಕ, ಭಾರತ ಅಕ್ಷಾಂಶ = 15 ಡಿಗ್ರಿ - 15’ - 0’’ N/ಉತ್ತರ ರೇಖಾಂಶ = 76ಡಿಗ್ರಿ - 21’ - 0” E/ಪೂರ್ವ ಅಣೆಕಟ್ಟೆ ವಿಧ = ಸಮ್ಮಿಶ್ರ, ನಾಲೆ ಉದ್ದ (701 ಮೀ.) ಅಣೆಕಟ್ಟೆ ಉದ್ದ = 2,449ಮೀ. ಅಣೆಕಟ್ಟೆ ಎತ್ತರ = 49.5೦ ಮೀ. ಅಡಿಪಾಯದಿಂದ ಕೋಡಿಯ ಸಾಮರ್ಥ್ಯ = 650,000 ಕ್ಯೂಸೆಕ್ಸ್' ನಿರ್ಮಾಣ ಆರಂಭ = 1949 ಉದ್ಘಾಟನೆ = 1953 ಯೋಜನೆ ಹಣ = ಮಾಲೀಕರು = ಕರ್ನಾಟಕ ರಾಜ್ಯ ನಿರ್ವಹಣೆ = ತುಂಗಭದ್ರಾ ಮಂಡಳಿ(ನಿಗಮ) ಜಲಾಶಯದ ಹೆಸರು = ತುಂಗಭದ್ರಾ ಜಲಾಶಯ ಜಲಾಶಯ ಸಾಮರ್ಥ್ಯ = 101(132) tmcft; 498ಮೀ.ಸಮುದ್ರ ಮಟ್ಟದಿಂದ(msl) ನಿಜ ಸಾಮರ್ಥ್ಯ = 98.7 (116.84) tmcft (at 498ಮೀ./ msl) ಅನುಪಯುಕ್ತ ಸಾಮರ್ಥ್ಯ = 2.3 tmcft (below 477.01ಮೀ.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
=ಪಿಠಿಕೆ಼ ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ಇಂದಿರಾ ಪ್ರಿಯದರ್ಶಿನಿ ಗಾಂಧಿಇಂದಿರಾ ಪ್ರಿಯದರ್ಶಿನಿ ಗಾಂಧಿ; ನಿ: ನೆಹರು; (೧೯ ನವೆಂಬರ್ ೧೯೧೭ – ೩೧ ಅಕ್ಟೋಬರ್ ೧೯೮೪) ೧೯೬೬ರಿಂದ ೧೯೭೭ರವೆಗೆ ಸತತ ಮೂರು ಬಾರಿ ಭಾರತ ಗಣತಂತ್ರ ದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ನಾಲ್ಕನೇ ಬಾರಿ ೧೯೮೦ರಿಂದ ೧೯೮೪ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಅವರು ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಇಂದಿನವರೆಗೆ ಆ ಸ್ಥಾನ ಅವರ ಪಾಲಿನದ್ದೇ ಆಗಿದೆ.
ಸುಭಾಷ್ ಚಂದ್ರ ಬೋಸ್ ೧೮೯೭ ಜನವರಿ ೨೩ರಲ್ಲಿ ಹುಟ್ಟಿದ್ದರು ೧೮ ಆಗಸ್ಟ್ ೧೯೪೪೫ ೪೮ ವರ್ಷ ಇವರ ಪ್ರತಿಭಟನೆಯ ದೇಶಭಕ್ತಿ ಅವರನ್ನು ಭಾರತದ ನಾಯಕ ಮಾಡಿದ ಒಬ್ಬ ಭಾರತೀಯ ರಾಷ್ಟ್ರೀಯತಾವಾದಿ, ಆದರೆ ಅವರ ಪ್ರಯತ್ನ ಮಹಾಯುದ್ದದಲ್ಲಿ ನಾಜಿ ಜರ್ಮನಿ ಮತ್ತು ಜಪಾನ್ ತೊಂದರೆಗೊಳಗಾಗಿರುವ ಆಸ್ತಿಯನ್ನು ಬಿಟ್ಟು ಹೋಗಿವೆ ಸಹಾಯದಿಂದ ಬ್ರಿಟಿಷ್ ಆಡಳಿತದ ಭಾರತ ವಿಮುಕ್ತಿಗೊಳಿಸುವ ಗೌರವ ನೇತಾಜಿ ಹಿಂದೂಸ್ತಾನಿ ಭಾಷೆ ಗೌರವಾನ್ವಿತ ನಾಯಕರಾದ ಮೊದಲ ವೇಳೆಗೆ ಜರ್ಮನಿಯ ಬೋಸ್ ಅನ್ವಯಿಸಲಾಗಿದೆ ಇಂಡಿಷ್ ಲೀಜನ್ ಮತ್ತು ೧೯೪೨ ರ ಆರಂಭದಲ್ಲಿ ಬರ್ಲಿನ್ ಭಾರತ ವಿಶೇಷ ಬ್ಯೂರೋ ಜರ್ಮನ್ ಮತ್ತು ಭಾರತೀಯ ಅಧೀಕಾರಿಗಳು ಭಾರತೀಯ ಸೈನಿಕರು,ಈಗ ಭಾರತದಾದ್ಯಂತ ವ್ಯಾಪಕವಾಗಿ ಬಳಸಲಾಗುತ್ತದೆ. ಹಿಂದಿನ ಬೋಸ್ ೧೯೩೮ ಮತ್ತು ೧೯೩೯ ರಲ್ಲಿ ಕಾಂಗ್ರೆಸ್ ಅಧ್ಯಕ್ಷ ಆಗಲು ಏರುತ್ತಿರುವ,೧೯೨೦ ಮತ್ತು ೧೯೩೦ ರಲ್ಲಿ ಭಾರತೀಯ ರಾಷ್ರೀಯ ಕಾಂಗ್ರೆಸ್ ಕಿರಿಯ ತೀವ್ರಗಾಮಿ ಆದಾಗ್ಯೂ ಅವರು ೧೯೩೯ ರಲ್ಲಿ ಕಾಂಗ್ರಸ್ ನಾಯಕತ್ವದ ಸ್ಥಾನಗಳನ್ನು ಪದಚ್ಯುತಗೊಳಿಸಿ ಮೋಹನ್ ಕೆ ಗಾಂಧಿ ಮತ್ತು ಕಾಂಗ್ರೆಸ್ ವರಿಷ್ಠರು ಭಿನ್ನಾಭಿಪ್ರಾಯಗಳ ಕೆಳಗಿನ ತರುವಾಯ ೧೯೪೦ರಲ್ಲಿ ಭಾರತ ತಪ್ಪಿಸಿಕೊಂಡು ಮೊದಲು ಬ್ರಿಟಿಷರು ಗೃಹಬಂಧನದಲ್ಲಿ ಇರಿಸಲಾಗಿತ್ತು. ಬೋಸ್ ನಾಯಕತ್ವ ಇತರ ಸ್ಥಾಪಿಸಿದ ಜನರು ಮತ್ತು ಜನಾಂಗೀಯ ಸಮುದಾಯಗಳ ಕಡೆಗೆ ಅದರ ವರ್ತನೆಗಳೂ ಜೊತೆ ಹವಾಗುಣ ವೈತಿರಿಕ ,ಭಾರತದ ಸ್ವಾತಂತ್ರದ ಕಾರಣ ಸಹಾನುಭೂತಿ, ಕೆಲವೊಮ್ಮೆ ಚಂಚಲ,ಅನಿರಿಕ್ಡಿತ ನೀಡಿತ್ತು.ಅಲ್ಲಿ ಎಪ್ರಿಲ ೧೯೪೧,ರಲ್ಲಿ ಜರ್ಮನಿಗೆ ಆಗಮಿಸಿದರು.ನಂವೆಬರ ೧೯೪೧ ರಲ್ಲಿ [೧೧][೧೨],ಜೊತೆಗೆ ಜರ್ಮನ ಹಣ, ಉಚಿತ ಭಾರತ ಸೆಂಟರ ಭೋಸ ರಾತ್ರಿಯ ಪ್ರಸಾರ ಇದು.ಬರ್ಲಿನ್ ರಲ್ಲಿ ಸ್ಥಾಪಿಸಲಾಯಿತು, ಮತ್ತು ಶೀರ್ಘವೇ ಉಚಿತ ಇಂಡಿಯಾ ರೇಡಿಯೊ ಮಾಡಲಾಯಿತು.೩೦೦೦ ಬಲವಾದ ಉಚಿತ ಭಾರತ ಲೀಜನ ಎರ್ವಿನ ರೋಮೆಲ್ ನ ಆಫ್ರಿಕಾ ಕಾರ್ಪ್ಸ ವಶಪಡಿಸಿಕೊಂಡರು ಭಾರತೀಯರು ಒಳಗೊಂಡ, ಭಾರತದ ಸಂಭಾವ ಭವಿಷ್ಯದ ಜರ್ಮನ್ ಭೂಮಿ ಆಕ್ರಮಣದ ನೆರವಾಗಲೆಂದು ರಚಿಸಲಾಯಿತು.[೧೩] ಈ ಸಮಯದಲ್ಲಿ ಬೋಸ್ ಕೂಡ ತಂದೆ ಆದರು,.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಕೃಷ್ಣಾ ನದಿ ದಕ್ಷಿಣ ಭಾರತದ ಎರಡನೆಯ ದೊಡ್ಡ ನದಿಯಾಗಿದೆ. ಈ ನದಿ ಮಹಾರಾಷ್ಟ್ರದ ಪಶ್ಚಿಮ ಘಟ್ಟದ ಮಹಾದೇವ ಪರ್ವತ ಶ್ರೇಣಿಯಲ್ಲಿ ಮಹಾಬಲೇಶ್ವರದ ಹತ್ತಿರ ಸಮುದ್ರ ಮಟ್ಟಕ್ಕಿಂತ ೧೩೩೮ ಮೀಟರ ಎತ್ತರದಲ್ಲಿ ಉಗಮವಾಗಿ ಸುಮಾರು ೧೩೯೨ ಕಿ.ಮಿ.ಗಳಷ್ಟು ಹರಿದು ಆಂಧ್ರಪ್ರದೇಶದ ಹಂಸಲಾದೀವಿಯಲ್ಲಿ ಬಂಗಾಳ ಕೊಲ್ಲಿ ಯನ್ನು ಸೇರುತ್ತದೆ. ಕೃಷ್ಣಾ ನದಿ ಮಹಾರಾಷ್ಟ್ರ,ಕರ್ನಾಟಕ, ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ಪ್ರವಹಿಸುತ್ತದೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಅರಣ್ಯನಾಶ ಎಂದರೆ ನೈಸರ್ಗಿಕವಾಗಿ ಕಾಣಸಿಗುವ ಅರಣ್ಯಗಳನ್ನು ಮಾನವ ಚಟುವಟಿಕೆಗಳಾದ ಕತ್ತರಿಸುವಿಕೆ ಹಾಗೂ/ಅಥವಾ ಬೆಂಕಿಯಿಂದ ಅರಣ್ಯ ಪ್ರದೇಶದ ಮರಗಿಡಗಳನ್ನು ನಾಶಕ್ಕೊಳಪಡುವ ಕ್ರಿಯೆಯಾಗಿದೆ. ಅರಣ್ಯನಾಶಕ್ಕೆ ಹಲವಾರು ಕಾರಣಗಳಿವೆ: ಮರಗಳು ಅಥವಾ ಅವುಗಳಿಂದ ದೊರಕುವ ಇದ್ದಿಲನ್ನು ಇಂಧನಕ್ಕಾಗಿ ಅಥವಾ ಮಾನವರಿಂದ ಬಳಕೆಯಾಗಲ್ಪಡುವ ಉತ್ಪನ್ನಗಳನ್ನಾಗಿ ಮಾರಾಟ ಮಾಡಲಾಗುತ್ತದೆ, ಇದರ ಜೊತೆಗೆ ತೆರವುಗೊಂಡ ಭೂಮಿಯನ್ನು ಮಾನವರು ಜಾನುವಾರುಗಳ ಮೇವಿಗಾಗಿ, ವಾಣಿಜ್ಯ ಉತ್ಪನ್ನಗಳನ್ನು ಪಡೆಯಲು, ಹಾಗೂ ವಾಸಯೋಗ್ಯ ಸ್ಥಳಗಳಿಗಾಗಿ ಬಳಕೆ ಮಾಡಲಾಗುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಅರಣ್ಯ ಪುನರ್ ನಿರ್ಮಾಣ ಮಾಡದೇ ಜನರು ಮರಗಳನ್ನು ಕಡಿದುಹಾಕುತ್ತಿದ್ದಾರೆ, ಇದರಿಂದಾಗಿ ವಾಸಸ್ಥಾನಗಳಿಗೆ ಆದ ಹಾನಿಯಿಂದಾಗಿ ಜೀವ ವೈವಿಧ್ಯತೆ ನಾಶವಾಗಿದ್ದು ವಾತಾವರಣದಲ್ಲಿ ಶುಷ್ಕತೆ ಹೆಚ್ಚುತ್ತಿದೆ.
ಸುಧಾ ಚಂದ್ರನ್ ರವರು(೨೭ ಸಪ್ಟೆಂಬರ್ ೧೯೬೫) ಭಾರತೀಯ ಚಲನಚಿತ್ರ ಮತ್ತು ಕಿರುತರೆ ನಟಿ ಹಾಗೂ ಭರತನಾಟ್ಯ ನೃತ್ಯ ಕಲಾವಿದೆ . ಸುಧಾ ಚಂದ್ರನ್ ಮತ್ತು ಆಕೆಯ ತಂದೆ ತಾಯಿಯೊಂದಿಗೆ ೨ ಮೇ ೧೯೮೧ ರಂದು ದೇವಸ್ಥಾನಕ್ಕೆ ತೆರಳುತ್ತಿರುವಾಗ ತಮಿಳುನಾಡಿನ ತಿರುಚಿರಾಪಲ್ಲಿ ಬಳಿ ರಸ್ತೆ ಅಪಘಾತದಿಂದಾಗಿ ತನ್ನ ಕಾಲನ್ನು ಕಳೆದುಕೊಂಡರು . ನಂತರ ಕೃತಕ ಕಾಲಿನ ಸಹಾಯದಿಂದ ಅವರು ನಡೆಯಲು ಪ್ರಾರಂಭಿಸಿದರು.
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಟಿಪ್ಪು ಸಾಹಿಬ್ ಎಂದೂ ಕರೆಯಲ್ಪಡುತ್ತಿದ್ದ ಟಿಪ್ಪು ಸುಲ್ತಾನ್ (೧೭೫೩ - ಮೇ ೪, ೧೭೯೯), ೧೭೮೨ ರಿಂದ ಮೈಸೂರು ಸಂಸ್ಥಾನದ ರಾಜ ಹಾಗೂ ಭಾರತದಲ್ಲಿ ಬ್ರಿಟೀಷ್ ಸಾಮ್ರಾಜ್ಯಶಾಹಿಯ ವಿರುದ್ಧ ಆಗಿನ ಕಾಲದ ಪ್ರಮುಖ ಹೋರಾಟಗಾರರಲ್ಲಿ ಒಬ್ಬ. ಈ ಹೋರಾಟದ ಪರಿಣಾಮವಾಗಿ ಟಿಪ್ಪುವಿಗೆ ಶೇರ್-ಎ-ಮೈಸೂರ್ (ಮೈಸೂರ ಹುಲಿ) ಎಂಬ ಬಿರುದು ಉಂಟು. ಮೈಸೂರಿನ ಇತಿಹಾಸದಲ್ಲಿ ಮರೆಯಲಾಗದ ಹೆಸರು ಈತನದು.
ಬೆಳೆಯ ಆವರ್ತನೆ, ಹಸಿರು- ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.