The most-visited ಕನ್ನಡ Wikipedia articles, updated daily. Learn more...
ಬಾಬು ಜಗಜೀವನ್ ರಾಮ್ (೫ ಏಪ್ರಿಲ್ ೧೯೦೮ - ೬ ಜುಲೈ ೧೯೮೬) ಇವರು ಜನಪ್ರಿಯವಾಗಿ ಬಾಬೂಜಿ ಎಂದು ಕರೆಯಲ್ಪಡುತ್ತಾರೆ ಹಾಗೂ ಇವರು ಭಾರತದ ಸ್ವಾತಂತ್ರ್ಯ ಹೋರಾಟಗಾರ ಮತ್ತು ಬಿಹಾರದ ರಾಜಕಾರಣಿಯಾಗಿದ್ದರು. ೧೯೩೫ ರಲ್ಲಿ, ದಲಿತರಿಗೆ ಸಮಾನತೆಯನ್ನು ಸಾಧಿಸಲು ಸಮರ್ಪಿತವಾದ ಅಖಿಲ ಭಾರತ ಶೋಷಿತ ವರ್ಗಗಳ ಲೀಗ್ ಅನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು ಮತ್ತು ೧೯೩೭ ರಲ್ಲಿ, ಬಿಹಾರ ವಿಧಾನಸಭೆಗೆ ಆಯ್ಕೆಯಾದರು. ನಂತರ, ಅವರು ಗ್ರಾಮೀಣ ಕಾರ್ಮಿಕ ಚಳವಳಿಯನ್ನು ಸಂಘಟಿಸಿದರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ದೇಶದ ಸ್ಥಳೀಯ ಸಂಸ್ಥೆ ಸೇರಿದಂತೆ ಲೋಕಸಭೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಭಾರತ ರತ್ನ ಪುರಸ್ಕೃತ ಬಿಧಾನ್ ಚಂದ್ರ ರಾಯ್ M.R.C.P., F.R.C.S.ಬಂಗಾಳಿ:বিধান চন্দ্র রায় (೧ ಜುಲೈ ೧೮೮೨–೧ ಜುಲೈ ೧೯೬೨) ಇವರು ಭಾರತದಲ್ಲಿನ ಪಶ್ಚಿಮ ಬಂಗಾಳದ ಎರಡನೇ ಮುಖ್ಯಮಂತ್ರಿಯಾಗಿದ್ದಾರೆ. ಇವರು ಈ ಹುದ್ದೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಪ್ರತಿನಿಧಿಯಾಗಿ ಹದಿನಾಲ್ಕು ವರ್ಷಗಳ ಕಾಲ ೧೯೪೮ ರಿಂದ ೧೯೬೨ರಲ್ಲಿನ ಮರಣದವರೆಗೂ ತಮ್ಮ ಸೇವೆಯನ್ನು ಸಲ್ಲಿಸಿದ್ದಾರೆ. ಇವರು ಅತ್ಯಂತ ಗೌರವಾನ್ವಿತ ವೈದ್ಯರಾಗಿದ್ದರು ಮತ್ತು ಪ್ರಖ್ಯಾತ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಶ್ಯಾಮ್ ಪ್ರಸಾದ್ ಮುಖರ್ಜಿ (ಜುಲೈ ೬, ೧೯೦೧ - ಜೂನ್ ೨೩, ೧೯೫೩) ಭಾರತೀಯ ಜನಸಂಘ ರಾಜಕೀಯ ಪಕ್ಷದ ಸ್ಥಾಪಕ. ಶ್ಯಾಮ ಪ್ರಸಾದ್ ಮುಖರ್ಜಿ (6 ಜುಲೈ 1901 - 23 ಜೂನ್ 1953) ಒಬ್ಬ ಭಾರತೀಯ ರಾಜಕಾರಣಿ, ನ್ಯಾಯವಾದಿ ಮತ್ತು ಶಿಕ್ಷಣತಜ್ಞರಾಗಿದ್ದರು, ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರ ಸಚಿವ ಸಂಪುಟದಲ್ಲಿ "ಕೈಗಾರಿಕೋದ್ಯಮ ಮತ್ತು ಸರಬರಾಜು(ವಾಣಿಜ್ಯೋದ್ಯಮ) ಸಚಿವರಾಗಿ ಕಾರ್ಯನಿರ್ವಹಿಸಿದರು. ಅವರು ಕಾಂಗ್ರೆಸ್ ಪಕ್ಷವಲ್ಲದಿದ್ದರೂ, ಅವರ ಪ್ರತಿಭೆಯನ್ನು ಪರಿಗಣಿಸಿ, ಅವರನ್ನು ನೆಹರು ಮಂತ್ರಿಮಂಡಲಕ್ಕೆ ಸೇರಿಸಿಕೊಂಡಿದ್ದರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಇನ್ಫೋಸಿಸ್ ಭಾರತದ ಬೆಂಗಳೂರು ನಗರದಲ್ಲಿ ಕೇಂದ್ರೀಕೃತವಾದ ಬಹುರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಅತಿ ದೊಡ್ಡ ಸಂಸ್ಥೆಗಳಲ್ಲಿ ಒಂದಾಗಿದ್ದು, ೧,೪೫,೦೦೦ ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿದೆ. ಭಾರತದಲ್ಲಿ ಒಂಬತ್ತು ತಂತ್ರಾಂಶ ಅಭಿವೃದ್ಧಿ ಕೇಂದ್ರ ಮತ್ತು ಪ್ರಪಂಚದಾದ್ಯಂತ ೨೯ ಕಛೇರಿಗಳನ್ನು ಭಾರತ, ಯುಸ್ಎ, ಚೀನಾ, ಆಸ್ಟ್ರೇಲಿಯಾ, ಯುಕೆ, ಕೆನಡ, ಜಪಾನ್ ಹಾಗೂ ಇನ್ನಿತರೆ ರಾಷ್ಟ್ರಗಳಲ್ಲಿದೆ.
ವೈಭವ್ ಸೂರ್ಯವಂಶಿ (ಜನನ ೨೭ ಮಾರ್ಚ್ ೨೦೧೧) ಒಬ್ಬ ಭಾರತೀಯ ಕ್ರಿಕೆಟಿಗ, ಇವರು ದೇಶೀಯ ಕ್ರಿಕೆಟ್ನಲ್ಲಿ ಬಿಹಾರ ಪರ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡುತ್ತಾರೆ. ಎಡಗೈ ಬ್ಯಾಟ್ಸ್ಮನ್ ಆಗಿ, ಅವರು ಜನವರಿ 2024 ರಲ್ಲಿ ಪ್ರಥಮ ದರ್ಜೆ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದರು. ಅವರು ಲಿಸ್ಟ್ ಎ ತಂಡದ ಆರಂಭಿಕ ಆಟಗಾರರಲ್ಲಿ ಅತ್ಯಂತ ಕಿರಿಯರು ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಪಾದಾರ್ಪಣೆ ಮಾಡಿದ ಅತ್ಯಂತ ಕಿರಿಯರು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಮೋಡ ಬಿತ್ತನೆ ಒಂದು ಬಗೆಯ ಹವಾಮಾನ ಬದಲಾವಣೆ, ವಾತಾವರಣದಲ್ಲಿ ವಸ್ತುಗಳನ್ನು ಹರಡಿ ಮೋಡಗಳಿಂದ ಬೀಳುವ ಅವಕ್ಷೇಪನದ ಪ್ರಮಾಣ ಅಥವಾ ಪ್ರಕಾರವನ್ನು ಬದಲಾಯಿಸುವ ಒಂದು ರೀತಿ. ಈ ವಸ್ತುಗಳು ಮೋಡ ಘನೀಕರಣ ಅಥವಾ ಮಂಜುಗಡ್ಡೆ ನಾಭಿಗಳಾಗಿ ಕಾರ್ಯನಿರ್ವಹಿಸುತ್ತವೆ ಮತ್ತು ಮೋಡದೊಳಗಿನ ಸೂಕ್ಷ್ಮಭೌತಿಕ ಪ್ರಕ್ರಿಯೆಗಳನ್ನು ಮಾರ್ಪಾಡು ಮಾಡುತ್ತವೆ. ಅವಕ್ಷೇಪನವನ್ನು (ಮಳೆ ಅಥವಾ ಹಿಮ) ಹೆಚ್ಚಿಸುವುದು ಇದರ ಸಾಮಾನ್ಯ ಉದ್ದೇಶವಾಗಿದೆ, ಆದರೆ ವಿಮಾನ ನಿಲ್ದಾಣಗಳಲ್ಲಿ ಆಲಿಕಲ್ಲು ಮತ್ತು ಮಂಜಿನ ನಿರೋಧವನ್ನೂ ವ್ಯಾಪಕವಾಗಿ ನಡೆಸಲಾಗುತ್ತದೆ.
ಕನ್ನಡದಲ್ಲಿ ವಿಜಯನಗರ ಸಾಹಿತ್ಯವು ೧೪ ರಿಂದ ೧೬ ನೇ ಶತಮಾನದಲ್ಲಿ ವಿಜಯನಗರ ಸಾಮ್ರಾಜ್ಯದ ಉನ್ನತಿಯ ಸಮಯದಲ್ಲಿ ದಕ್ಷಿಣ ಭಾರತದ ಕನ್ನಡ ಭಾಷೆಯಲ್ಲಿ ರಚಿತವಾದ ಸಾಹಿತ್ಯದ ಭಾಗವಾಗಿದೆ. ವಿಜಯನಗರ ಸಾಮ್ರಾಜ್ಯವನ್ನು ೧ನೇ ಹರಿಹರ ಮತ್ತು ಅವನ ಅಣ್ಣ ೧ನೇ ಬುಕ್ಕರಾಯ ೧೩೩೬ರಲ್ಲಿ ಸ್ಥಾಪಿಸಿದರು. ಇದು ೧೬೬೪ ರವರೆಗೆ ಮುಂದುವರೆಯಿತಾದರೂ ೧೫೬೫ ರಲ್ಲಿ ತಾಳಿಕೋಟಾ ಯುದ್ಧದಲ್ಲಿ ಶಾಹಿ ಸುಲ್ತಾನರುಗಳ ಪ್ರಮುಖ ಮಿಲಿಟರಿ ಸೋಲಿನ ನಂತರ ಅದರ ಶಕ್ತಿಯು ಕುಸಿಯಿತು.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಪ್ರಕ್ರೀಯೆಯಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಸಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
ವೈಯಕ್ತಿಕ ಮಾಹಿತಿ ಜನನ ದುರ್ಗಿ ಟುಡು (1958-06-20) 20 June 1958ಉಪರ್ಬೇಡಾ, ಒಡಿಶಾ, ಭಾರತ ರಾಜಕೀಯ ಪಕ್ಷ ಭಾರತೀಯ ಜನತಾ ಪಕ್ಷ ಸಂಗಾತಿ(ಗಳು) ಮಕ್ಕಳು * ಲಕ್ಷ್ಮಣ್ ಮುರ್ಮು (ಮರಣ: 2009) ಸಿಪುನ್ ಮುರ್ಮು (ಮರಣ: 2012) ಇತಿಶ್ರೀ ಮುರ್ಮು ವಾಸಸ್ಥಾನ ಟೆಂಪ್ಲೇಟು:Bulletedlist ಅಭ್ಯಸಿಸಿದ ವಿದ್ಯಾಪೀಠ ರಾಮಾ ದೇವಿ ಮಹಿಳಾ ವಿಶ್ವವಿದ್ಯಾಲಯ (ಬಿಎ) ವೃತ್ತಿ ರಾಜಕಾರಣಿ ಉದ್ಯೋಗ ಶಿಕ್ಷಕಿ ಸಹಿ ಜಾಲತಾಣ presidentofindia.nic.in ಮಿಲಿಟರಿ ಸೇವೆ ಪ್ರಶಸ್ತಿಗಳು ಕೆಳಗೆ ನೋಡಿ ದ್ರೌಪದಿ ಮುರ್ಮು (ಜನನ ೨೦ ಜೂನ್ ೧೯೫೮) ಒಬ್ಬ ಭಾರತೀಯ ರಾಜಕಾರಣಿ, ಇವರು ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯರಾಗಿದ್ದರು. ಅವರು ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾದ ಸ್ಥಳೀಯ, ಪರಿಶಿಷ್ಟ ಬುಡಕಟ್ಟು ಸಮುದಾಯಕ್ಕೆ ಸೇರಿದ ಮೊದಲ ವ್ಯಕ್ತಿ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಕೇಶಿರಾಜ:~ಕನ್ನಡದಲ್ಲಿಯೇ ರಚನೆಗೊಂಡಿರುವ ಸ್ವತಂತ್ರ ಕನ್ನಡ ವ್ಯಾಕರಣ (ಉಪಲಬ್ಧ) ಗ್ರಂಥಗಳಲ್ಲಿ ಶಬ್ದಮಣಿದರ್ಪಣವು ಮೊಟ್ಟ ಮೊದಲನೆಯದು. ಕೇಶಿರಾಜ ೨ನೇ ನಾಗವರ್ಮನ ಕೃತಿಗಳಾದ "ಕಾವ್ಯಾವಲೋಕನ"(ಶಬ್ದ ಸ್ಮೃತಿ) ಗ್ರಂಥಗಳ ಸೂತ್ರ, ವೃತ್ತಿ, ಹಾಗೂ ಪ್ರಯೋಗಗಳನ್ನು ಆಧರಿಸಿದ್ದಾನೆಂದು ವ್ಯಾಕರಣರು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನವಾಗಿ ಇದು ವಿಧಾತ್ಮಕ ಅಥವಾ ಆದರ್ಶ ರೀತಿಯ ವ್ಯಾಕರಣ.
ಆದಿಯೋಗಿ ಪ್ರತಿಮೆಯು ೩೪-ಮೀಟರ್ ಎತ್ತರ (೧೧೨ ಅಡಿ), ೪೫-ಮೀಟರ್ ಉದ್ದ (೧೪೭ ಅಡಿ) ಮತ್ತು ೨೫-ಮೀಟರ್ ಅಗಲದ (೮೨ ಅಡಿ) ಶಿವನ ತಿರುನಾಮಮ್ ಹೊಂದಿರುವ ಉಕ್ಕಿನ ಪ್ರತಿಮೆಯಾಗಿದ್ದು, ತಮಿಳುನಾಡಿನ ಕೊಯಮತ್ತೂರಿನಲ್ಲಿದೆ. ಇದು ವಿಶ್ವದ "ಅತಿದೊಡ್ಡ ಬಸ್ಟ್ ಸ್ಕಲ್ಪ್ಚರ್" ಎಂದು ಗಿನ್ನೆಸ್ ವಿಶ್ವ ದಾಖಲೆಗಳಿಂದ ಗುರುತಿಸಲ್ಪಟ್ಟಿದೆ. ಇಶಾ ಫೌಂಡೇಶನ್ನ ಸಂಸ್ಥಾಪಕ ಮತ್ತು ಮುಖ್ಯಸ್ಥರಾದ ಸದ್ಗುರು ಜಗ್ಗಿ ವಾಸುದೇವ್ ವಿನ್ಯಾಸಗೊಳಿಸಿದ್ದಾರೆ.
ನೋಡಿ:ವಾಯುಗುಣ ಬದಲಾವಣೆ ಹವಾಮಾನವು ವಾತಾವರಣದ ಸ್ಥಿತಿ, ಬಿಸಿ ಅಥವಾ ಶೀತಲ, ತೇವ ಅಥವಾ ಶುಷ್ಕ, ಶಾಂತ ಅಥವಾ ಬಿರುಗಾಳಿಯಿಂದ ಕೂಡಿದ, ನಿಚ್ಚಳ ಅಥವಾ ಮೋಡಕವಿದ ಅನ್ನುವಷ್ಟರ ಮಟ್ಟಿಗೆ. ಬಹುತೇಕ ಹವಾಮಾನ ವಿದ್ಯಮಾನಗಳು ಪರಿವರ್ತನ ಗೋಳದಲ್ಲಿ ಸಂಭವಿಸುತ್ತವೆ, ಸಮಗೋಳದ ಸ್ವಲ್ಪ ಕೆಳಗೆ. ಹವಾಮಾನವು ಸಾಮಾನ್ಯವಾಗಿ ದಿನನಿತ್ಯದ ಉಷ್ಣಾಂಶ ಮತ್ತು ಮಳೆ ಪ್ರಮಾಣವನ್ನು ನಿರ್ದೇಶಿಸಿದರೆ, ವಾಯುಗುಣವು ಸಮಯದ ದೀರ್ಘಾವಧಿಯಲ್ಲಿ ಸರಾಸರಿ ವಾತಾವರಣ ಸ್ಥಿತಿಗಳಿಗಾಗಿ ಬಳಸಲಾಗುವ ಪದ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಕರ್ನಾಟಕ ರಾಜ್ಯದ ಒಂದು ಜಿಲ್ಲೆ, ಎಲ್ಲಿ ಭೂರಮೆ ದೇವ ಸನ್ನಿಧಿ ಬಯಸಿ ಬಿಮ್ಮನೆ ಬಂದಳೋ ಎಲ್ಲಿ ಮೋಹನ ಗಿರಿಯ ಬೆರಗಿನ ರೂಪಿನಿಂದಲಿ ನಿಂದಳೋ ಎಲ್ಲಿ ಮುಗಿಲಲಿ ಮಿಂಚಿನೋಲ್ ಕಾವೇರಿ ಹೊಳೆ ಹೊಳೆ ಹೊಳೆವಳೋ ಎಲ್ಲಿ ನೆಲವನು ತಣಿಸಿ ಜನಮನ ಹೊಲದ ಕಳೆ ಕಳೆ ಕಳೆವಳೋ ಅಲ್ಲೆ ಆ ಕಡೆ ನೋಡಲಾ ಅಲ್ಲೆ ಕೊಡಗರ ನಾಡಲಾ ಅಲ್ಲೆ ಕೊಡಗರ ಬೀಡಲಾ ಭೂಲಕ್ಷ್ಮಿ ಯು ದೇವರ ಸನ್ನಿಧಾನದಲ್ಲಿರಬೇಕೆಂಬ ಬಯಕೆಯಿಂದ ಗಂಭೀರ-ವೈಯಾರದಿಂದ ಬಂದು ನೆಲೆಸಿದ ಕ್ಷೇತ್ರ; ಭೂಮಿಯನ್ನು ತಣಿಸಿ ಜನರಿಗೆ ಅನ್ನವನ್ನೀಯುವ ಕಾವೇರಿ ಹುಟ್ಟಿ ಹರಿಯಲಾರಂಭಿಸುವ ಪ್ರದೇಶ ಕೊಡಗು ಎಂದು ಕವಿವರ್ಯ ಪಂಜೆ ಮಂಗೇಶರಾಯರು ತಮ್ಮ ಹುತ್ತರಿ ಹಾಡು ಎಂಬ ಪದ್ಯದಲ್ಲಿ ಬಣ್ಣಿಸಿದ್ದಾರೆ. ಕರ್ನಾಟಕ ರಾಜ್ಯದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಹಸಿರು ವನರಾಜಿಯಿಂದ, ತೊರೆ, ಝರಿ, ನದಿಗಳಿಂದ ಕೂಡಿದ ಜಿಲ್ಲೆ ಕೊಡಗನ್ನು ಗುರುತಿಸಲು ಇದಕ್ಕಿಂತ ಬೇರೆ ವರ್ಣನೆ ಬೇಕಾಗಿಲ್ಲ. ಕೊಡಗಿಗೆ ಕೂರ್ಗ್ (Coorg) ಎಂಬ ಆಂಗ್ಲೀಯ ಬಳಕೆಯೂ ಇದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಕರ್ನಾಟಕ ವಿಧಾನಸಭೆ ಚುನಾವಣೆ, ೨೦೧೮
ಕರ್ನಾಟಕ ವಿಧಾನಸಭೆಯು 224 ಸದಸ್ಯರ ಸದಸ್ಯ ಬಲವನ್ನು ಹೊಂದಿದೆ. 224 ಸದಸ್ಯ ಬಲವುಳ್ಳ 15 ನೇ ಕರ್ನಾಟಕ ವಿಧಾನಸಭೆಯ 222ವಿಧಾನಸಭಾ ಕ್ಷೇತ್ರಗಳಿಗೆ 12 ಮೇ 2018 ಶನಿವಾರ ಚುನಾವಣೆ ನೆಡೆಯಿತು. ಜಯನಗರ ಬಿಜೆಪಿ ಶಾಸಕ ವಿಜಯ್ ಕುಮಾರ್ 2-5-2018 ರಂದು ನಿಧನರಾದ್ದರಿಂದ ಮತ್ತು ರಾಜರಾಜೇಶ್ವರಿ ನಗರದಲ್ಲಿ ಮತದಾರರ ವಂಚನೆ ಹಗರಣದ ನಂತರ, ಈ ಎರಡು ಕ್ಷೇತ್ರಗಳ ಚುನಾವಣೆ ಮುಂದೂಡಲ್ಪಟ್ಟಿತು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಸಾಮಾನ್ಯವಾಗಿ ಅಣೆಕಟ್ಟು ನಿರ್ಮಾಣದ ಉದ್ದೇಶ ನದಿ ನೀರನ್ನು ಸಂಗ್ರಹಿಸಿ ಅದನ್ನು ನೀರಾವರಿ, ಕುಡಿಯುವ ನೀರು ಪೂರೈಕೆ, ವಿದ್ಯುತ್ ಉತ್ಪಾದನೆ ಹೀಗೆ ವಿವಿಧ ಉದ್ದೇಶಗಳಿಗೆ ಬಳಸಿಕೊಳ್ಳುವುದು. ಅಣೆಕಟ್ಟು ತುಂಬಿದಾಗ ಅದರ ಕ್ರಸ್ಟ್ಗೇಟುಗಳನ್ನು ತೆರೆದು ನದಿಗೆ ನೀರು ಬಿಡಲಾಗುತ್ತದೆ. 3000 ವರ್ಷ ಹಿಂದೆ ನಿರ್ಮಿಸಿದ್ದು ಎನ್ನಲಾಗಿರುವ ಜೋರ್ಡಾನ್ನ ಜಾವಾ ಅಣೆಕಟ್ಟು ಜಗತ್ತಿನ ಅತ್ಯಂತ ಪುರಾತನ ಅಣೆಕಟ್ಟು ಎಂದು ಗುರುತಿಸಲಾಗಿದೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ದ್ರವೀಕೃತ ಪೆಟ್ರೋಲಿಯಮ್ ಅನಿಲ(ಎಲ್ಪಿಜಿ),
ದ್ರವೀಕೃತ ಪೆಟ್ರೋಲಿಯಮ್ ಅನಿಲ(LPG, GPL, LP ಗ್ಯಾಸ್, ಅಥವಾ ಆಟೋಗ್ಯಾಸ್ ಎಂದೂ ಕರೆಯಲಾದ) [[ಸುಲಭವಾಗಿ ಉರಿಯಬಲ್ಲ ಹೈಡ್ರೋಕಾರ್ಬನ್ ಅನಿಲಗಳ ಮಿಶ್ರಣ. ಈ ಅನಿಲವನ್ನು ಬಿಸಿ ಮಾಡುವ ಉಪಕರಣಗಳು ಹಾಗೂ ವಾಹನಗಳಲ್ಲಿ ಇಂಧನ ರೂಪದಲ್ಲಿ ಬಳಸಲಾಗುತ್ತಿದೆ. ಇದಲ್ಲದೆ, ಓಜೋನ್ ಪದರಕ್ಕೆ ಹಾನಿಯನ್ನು ಕಡಿಮೆಗೊಳಿಸುವ ಉದ್ದೇಶದಿಂದ, ಕ್ಲೋರೋಫ್ಲೋರೋಕಾರ್ಬನ್ಗಳ ಬದಲಿಗೆ, ವಾಯುದ್ರವ ನೋದಕ (ಏರೋಸಾಲ್ ಪ್ರೊಪೆಲ್ಲಂಟ್) ಹಾಗೂ ಶೀತಕ|ಸುಲಭವಾಗಿ ಉರಿಯಬಲ್ಲ ಹೈಡ್ರೋಕಾರ್ಬನ್ ಅನಿಲಗಳ ಮಿಶ್ರಣ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಮಹರ್ಷಿ ವಾತ್ಸ್ಯಾಯನ ಕೃತವಾದ ಕಾಮಸೂತ್ರವೆಂಬ ಪ್ರಾಚೀನ ಭಾರತೀಯ ಸಂಸ್ಕೃತ ಗ್ರಂಥ ಮಾನವನ ಲೈಂಗಿಕ ವರ್ತನೆ ಮತ್ತು ಭಾರತೀಯ ಪುರುಷಾರ್ಥ ಚಿಂತನೆಯನ್ನು ಕುರಿತ ಪ್ರಮಾಣಿತ ಕೃತಿಯೆಂಬುದು ಪಂಡಿತಜನ ವೇದ್ಯವಾದ ವಿಷಯ. ವಾತ್ಸ್ಯಾಯನ ಕಾಮಸೂತ್ರವು ಪ್ರಧಾನವಾಗಿ ಸಂಭೋಗ ಭಂಗಿಗಳನ್ನು ಕುರಿತ ಲೈಂಗಿಕ ಕೈಪಿಡಿಯಲ್ಲ.ಅದು ಚೆನ್ನಾಗಿ ಬದುಕುವ ಕಲೆ, ಪ್ರೀತಿಯ ಸ್ವರೂಪ, ಸಂಗಾತಿಗಳನ್ನು ಹುಡುಕುವ ಕ್ರಮ, ಲೈಂಗಿಕ ಜೀವನವನ್ನು ಕಾಪಾಡಿಕೊಳ್ಳುವುದು ಮತ್ತು ಆನಂದ-ಆಧಾರಿತ ಸಾಮರ್ಥ್ಯಗಳಿಗೆ ಸಂಬಂಧಿಸಿದ ಇತರ ಅಂಶಗಳನ್ನು ಕುರಿತು ಮಾರ್ಗದರ್ಶಿಯಾಗಿದೆ. ಇದು ವಿಭಿನ್ನ ಭಾಷ್ಯಗಳೊಂದಿಗೆ (ವ್ಯಾಖ್ಯಾನಗಳು) ಆಧುನಿಕ ಯುಗದಲ್ಲಿ ಉಳಿದುಕೊಂಡಿರುವ ಸಂಕ್ಷಿಪ್ತ ಪೌರುಷ ಪದ್ಯಗಳನ್ನು ಹೊಂದಿರುವ ಸೂತ್ರ ವಿಭಾಗದ ಗ್ರಂಥವಾಗಿದೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ ಪ್ರಾರಂಭವಾಗಿತ್ತು. ಈ ಅಭಿಯಾನವು ಅಧಿಕೃತವಾಗಿ ೨ ಅಕ್ಟೋಬರ್ ೨೦೧೪ರಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭಮಾಡಿದರು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನ Archived 2021-11-12 ವೇಬ್ಯಾಕ್ ಮೆಷಿನ್ ನಲ್ಲಿ.ಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ.
ಕೃಷ್ಣೆ ಹೊಳೆ ದಕ್ಷಿಣ ಭಾರತದ ಎರಡನೆಯ ದೊಡ್ಡ ಹೊಳೆಯಾಗಿದೆ. ಈ ಹೊಳೆಯು ಮಹಾರಾಷ್ಟ್ರದ ಪಶ್ಚಿಮ ಘಟ್ಟದ ಮಹಾದೇವ ಪರ್ವತ ಶ್ರೇಣಿಯಲ್ಲಿ ಮಹಾಬಲೇಶ್ವರದ ಹತ್ತಿರ ಕಡಲು ಮಟ್ಟಕ್ಕಿಂತ ೧೩೩೮ ಮೀಟರ ಎತ್ತರದಲ್ಲಿ ಉಗಮವಾಗಿ ಸುಮಾರು ೧೩೯೨ ಕಿ.ಮಿ.ಗಳಷ್ಟು ಹರಿದು ಆಂಧ್ರಪ್ರದೇಶದ ಹಂಸಲಾದೀವಿಯಲ್ಲಿ ಬಂಗಾಳ ಕೊಲ್ಲಿ ಯನ್ನು ಸೇರುತ್ತದೆ. ಕೃಷ್ಣೆ ಹೊಳೆ ಮಹಾರಾಷ್ಟ್ರ,ಕರ್ನಾಟಕ, ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ಹರಿಯುತ್ತದೆ.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.