The most-visited ಕನ್ನಡ Wikipedia articles, updated daily. Learn more...
ಸಾಮಾನ್ಯವಾಗಿ "ಬ್ರೇಕ್ ಡ್ಯಾನ್ಸಿಂಗ್ " ಎಂದು ಕರೆಯಲ್ಪಡುವ ಬಿ-ಬಾಯಿಂಗ್ ಮೊದಲಿಗೆ ಆಫ್ರಿಕನ್ ಅಮೆರಿಕನ್ ರ ಪೈಕಿ ಹಿಪ್-ಹಾಪ್ ಶೈಲಿಯ ಒಂದು ಅಂಗವಾಗಿ ಸೃಷ್ಟಿಸಿ, ಅಭಿವೃದ್ಧಿಗೊಳಿಸಲ್ಪಟ್ಟ ಒಂದು ಜನಪ್ರಿಯ ಸ್ಟ್ರೀಟ್ ಡ್ಯಾನ್ಸ್ (ಬೀದಿ ನೃತ್ಯ)ದ ಮಾದರಿಯಾಗಿದೆ; ನಂತರದ ದಿನಗಳಲ್ಲಿ ಇದು ನ್ಯೂ ಯಾರ್ಕ್ ನಗರದ ಲ್ಯಾಟಿನೋ ಯುವಕರಿಂದ ಮತ್ತಷ್ಟು ಅಭಿವೃದ್ಧಿಗೊಳಿಸಲ್ಪಟ್ಟಿತು. ಈ ನೃತ್ಯವು ನಾಲ್ಕು ಅಂಶಗಳನ್ನು ಒಳಗೊಂಡಿದೆ: ಟಾಪ್ ರಾಕ್ , ಡೌನ್ ರಾಕ್ , ಶಕ್ತ ಚಲನೆಗಳು ಮತ್ತು ಸ್ಥಬ್ಧ/ಅತ್ಮಹತ್ಯೆಗಳು(ಸೂಯಿಸೈಡ್) ಗಳು . ಈ ನೃತ್ಯವನ್ನು ಹಿಪ್-ಹಾಪ್ ಮತ್ತು ಇತರ ರೀತಿಯ, ಸಾಮಾನ್ಯವಾಗಿ ಸಂಗೀತದ ವಿರಾಮಗಳನ್ನು ಹೆಚ್ಚಿಸಲೆಂದೇ ಮರುಸಂಕಲಿತವಾದ ಸಂಗೀತದ ನುಡಿಗಳಿಗೆ ಅನುಗುಣವಾಗಿ ಆಡಲಾಗುತ್ತದೆ.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಅಮೆರಿಕ ಸಂಯುಕ್ತ ಸಂಸ್ಥಾನ ವು (ಸಾಮಾನ್ಯವಾಗಿ ಸಂಯುಕ್ತ ಸಂಸ್ಥಾನ , ಯುಎಸ್ , ಯುಎಸ್ಎ ಅಥವಾ ಅಮೆರಿಕಾ ಎಂದು ಕರೆಯಲ್ಪಡುವ) ಐವತ್ತು ರಾಜ್ಯಗಳು ಮತ್ತು ಒಳ ಆಡಳಿತದಲ್ಲಿ ಸ್ವತಂತ್ರವಾಗಿರುವ ಡಿಸ್ಟ್ರಿಕ್ಟ್ಯನ್ನೊಳಗೊಂಡ ಒಂದು ಸ್ವಾಯತ್ತ ಸಾಂವಿಧಾನಿಕ ಗಣರಾಜ್ಯ. ಬಹುತೇಕ ಕೇಂದ್ರ ಭಾಗದ ಉತ್ತರ ಅಮೆರಿಕಾದಲ್ಲಿ ಸ್ಥಿತವಾಗಿರುವ ಈ ದೇಶದ ಒತ್ತೊತ್ತಾಗಿರುವ 48 ರಾಜ್ಯಗಳು ಹಾಗೂ ಪ್ರಧಾನ ಡಿಸ್ಟ್ರಿಕ್ಟ್ ವಾಷಿಂಗ್ಟನ್ ಡಿಸಿ, ಪೆಸಿಫಿಕ್ ಹಾಗೂ ಅಟ್ಲಾಂಟಿಕ್ ಸಮುದ್ರಗಳ ನಡುವೆ ನೆಲೆಗೊಂಡಿದ್ದು, ಉತ್ತರದಲ್ಲಿ ಕೆನಡಾ ಹಾಗೂ ದಕ್ಷಿಣದಲ್ಲಿ ಮೆಕ್ಸಿಕೋಗಳನ್ನು ಗಡಿಗಳಾಗಿ ಹೊಂದಿದೆ. ಅಲಾಸ್ಕಾ ರಾಜ್ಯವು ವಾಯುವ್ಯ ಭಾಗದಲ್ಲಿದ್ದು, ಕೆನಡಾವನ್ನು ಉತ್ತರ ದಿಕ್ಕಿನಲ್ಲೂ ಬೇರಿಂಗ್ ಜಲಸಂಧಿಯನ್ನು ಹಾದು ರಷ್ಯಾವನ್ನು ಪಶ್ಚಿಮ ದಿಕ್ಕಿನಲ್ಲೂ ಹೊಂದಿದೆ.
'ಡಾ. ಸರ್ವೆಪಲ್ಲಿ ರಾಧಾಕೃಷ್ಣನ್' [[೧]](Telugu: సర్వేపల్లి రాధాకృష్ణ, (Kannada: ಸರ್ವಪಲ್ಲಿ ರಾಧಾಕೃಷ್ಣನ್) (ಜನನ : ೫ ನೇ ಸೆಪ್ಟೆಂಬರ್, ೧೮೮೮.) ಇವರು ಶಿಕ್ಷಣದ ಬಗ್ಗೆ ಅತ್ಯಂತ ಗೌರವ, ಪ್ರೀತಿ, ನಿಷ್ಠೆಯನ್ನು ಹೊಂದಿದ್ದರು. ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆಗೈದಿರುವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರಲ್ಲಿ ಪ್ರಮುಖರಾಗಿದ್ದಾರೆ.
ವಿಕಿಪೀಡಿಯ [ಇಂಗ್ಲಿಷ್: Wikipedia ವಿಕಿಪೀಡಿಯ] ಒಂದು ಅಂತರ್ಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಅ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಬೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ.
ಸರ್ ಐಸಾಕ್ ನ್ಯೂಟನ್ FRS (4 ಜನವರಿ 1643– 31 ಮಾರ್ಚ್ 1727 [OS: 25 December 1642– 20 March 1727]) ರವರು ಓರ್ವ ಆಂಗ್ಲ ಭೌತವಿಜ್ಞಾನಿ, ಗಣಿತಜ್ಞ , ಖಗೋಳಶಾಸ್ತ್ರಜ್ಞ, ಸ್ವಾಭಾವಿಕ ತತ್ವಜ್ಞಾನಿ, ರಸಸಿದ್ಧಾಂತಿ, ಹಾಗೂ ಬ್ರಹ್ಮಜ್ಞಾನಿಯಾಗಿದ್ದರು. ಗಮನಾರ್ಹ ಪ್ರಮಾಣದ ತಜ್ಞರು ಹಾಗೂ ಸಾರ್ವಜನಿಕರು ಅವರ ಬಗ್ಗೆ ಇತಿಹಾಸದ ಬಹುಪ್ರಭಾವಿ ವ್ಯಕ್ತಿ ಎಂದು ತಿಳಿದು ಭಾವಿಸಿಕೊಂಡಿದ್ದಾರೆ. 1687ರಲ್ಲಿ ಪ್ರಕಟಿಸಿದ ಅವರ ಫಿಲಾಸೊಫೀಸ್ ನ್ಯಾಚ್ಯುರಲಿಸ್ ಪ್ರಿನ್ಸಿಪಿಯಾ ಮ್ಯಾಥೆಮೆಟಿಕಾ (ಸಾಮಾನ್ಯವಾಗಿ ಪ್ರಿನ್ಸಿಪಿಯಾ ಎಂದು ಕರೆಯಲ್ಪಡುವ) ಪುಸ್ತಕವು ವಿಜ್ಞಾನದ ಇತಿಹಾಸದಲ್ಲೇ ಬಹು ಪ್ರಭಾವೀ ಪುಸ್ತಕಗಳಲ್ಲಿ ಒಂದಾಗಿದ್ದು ಅಭಿಜಾತ ಯಂತ್ರಶಾಸ್ತ್ರಕ್ಕೆ ಉತ್ತಮ ತಳಪಾಯ ಒದಗಿಸಿಕೊಟ್ಟ ಕೃತಿಯೆಂಬ ಹೆಗ್ಗಳಿಕೆ ಹೊಂದಿದೆ.
ಭಾರತದ ರಾಷ್ತ್ರೀಯ ಧ್ವಜ'ದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು, ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.