The most-visited English Wikipedia articles, updated daily. Learn more...
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ಆರಂಭಗೊಂಡಿದ್ದರೂ, ಅದು ಹೆಚ್ಚು ಪ್ರಚಲಿತಕ್ಕೆ ಬಂದುದು ೨೦೧೫-೨೦೧೬ನೇ ಸಾಲಿನಲ್ಲಿ. (ಆಂಗ್ಲ:Clean India Mission)ಇದು ಭಾರತ ಸರ್ಕಾರದ ಅಭಿಯಾನವಾಗಿದ್ದೂ, ರಸ್ತೆ, ಬೀದಿ ಹಾಗೂ ಮೂಲಸೌಕರ್ಯಗಳ ನಿರ್ಮಲೀಕರಣಕ್ಕಾಗಿ ಆರಂಭಿಸಲಾಗಿದೆ . ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚೆನ್ನಮ್ಮನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆಸಲ್ಪಡುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ. ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು (IATA: BLR, ICAO: VOBL) ಬೆಂಗಳೂರು ನಗರಕ್ಕೆ ಸೇವೆ ನೀಡುವ ೪,೭೦೦ ಎಕರೆಗಳ ಒಂದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ. ಇದು ಬೆಂಗಳೂರು ಮಧ್ಯ ಭಾಗದಿಂದ ಸುಮಾರು ೪೦ ಕಿ.ಮಿ. ದೂರದಲ್ಲಿ ದೇವನಹಳ್ಳಿಯಲ್ಲಿದೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಸಾಮಾನ್ಯವಾಗಿ ಬ್ರೆಡ್ ಶಬ್ದವು ರೊಟ್ಟಿ ಎಂಬ ಅರ್ಥಕ್ಕಿಂತ ಹೆಚ್ಚಾಗಿ ಇಂಗ್ಲಿಷ ಉಚ್ಚಾರಣೆಯನ್ನೇ ಎಲ್ಲೆಡೆ ಪ್ರಚಲಿತಗೊಳಿಸಿದೆ.ಬ್ರೆಡ್ ಒಂದು ವ್ಯಾಪಾರಿ ಆಹಾರದ ಸರಕು ಎನ್ನುವಂತೆ ಮಾರಲಾಗುತ್ತದೆ.ಇದನ್ನು ಹಿಟ್ಟಿನಲ್ಲಿ ಮಾಡಿದ ಕಣಕವನ್ನು ನಿರಂತರವಾಗಿ ನಾದಿ ಅದನ್ನು ನೀರು ಬೆರೆಸಿದ ವಿವಿಧ ಮಸಾಲೆ ಪದಾರ್ಥಗಳ ಮಿಶ್ರಣದೊಂದಿಗೆ ಬೇಯಿಸುವುದರ ಮೂಲಕ ತಯಾರಿಸಲಾಗುತ್ತದೆ. ಸಾಮಾನ್ಯವಾಗಿ ಈ ನಾದಿದ ಕಣಕವನ್ನು ಕಾವಲಿಯಲ್ಲಿಟ್ಟು ಸುಡುವ ಅಥವಾ ಬೇಯಿಸುವ ಪ್ರಕ್ರಿಯೆ ನಡೆಯುತ್ತದೆ.ಇನ್ನು ಕೆಲವು ಅಡುಗೆ ಮನೆಗಳಲ್ಲಿ ಬ್ರೆಡ್ ಗಳನ್ನು ಹಬೆ ಮೇಲೆ,ಕೆಂಡದ ಮೇಲೆ ಸುಡಲಾಗುತ್ತದೆ.ಇಲ್ಲವೆ ತೈಲ ರಹಿತ ಬಾಣಲೆ ಅಥವಾ ತವೆ ಮೇಲೆ ಸಿದ್ದಗೊಳಿಸಲಾಗುತ್ತದೆ. ಇದರ ತಯಾರಿಕೆಯಲ್ಲಿ ಹುಳಿ ಪದಾರ್ಥವನ್ನು ಸೇರಿಸಬಹುದು ಅಥವಾ ಸೇರಿಸದೇ ಇರಬಹುದು.
ಅಲರ್ಜಿ ಎಂದರೆ ದೇಹದ ರೋಗದ ನಿರೋಧಕ ಶಕ್ತಿಯ ಮೇಲೆ ಪ್ರತಿರೋಧಕ ಪ್ರತಿಕ್ರಿಯೆ ನೀಡುವ ಒಂದು ಪ್ರಕ್ರಿಯೆಯಾಗಿದೆ .ಬಹಳಷ್ಟು ಸಲ ಇದನ್ನು ಅಟೊಪಿ ಅಥವಾ ತಕ್ಷಣವೇ ತನ್ನ ವಿರುದ್ಧ ಸ್ಪಂದಿಸುವ ಲಕ್ಷಣವಾಗಿದೆ. ಅಲರ್ಜಿಕ್ ಪ್ರತಿಕ್ರಿಯೆಗಳು ಸಾಮಾನ್ಯವಾಗಿ ಪರಿಸರದಲ್ಲಿರುವ ಅಪಾಯಕಾರಿಯಲ್ಲದ ಅಲರ್ಜಿನ್ ಎಂದು ಕರೆಯುವ ವಸ್ತುಗಳ ಮೇಲೆ ಇದು ಸಂಭವಿಸುತ್ತದೆ;ಇಂತಹ ಪ್ರತಿಕ್ರಿಯೆಗಳು ಹುಟ್ಟಿಕೊಂಡುದುದು,ಊಹಿಸಿದ್ದು ಮತ್ತು ತೀವ್ರ ಪರಿಣಾಮಕಾರಿಯೆನಿಸುತ್ತದೆ. ಕಡ್ಡಾಯವಾಗಿ ಹೇಳುವುದಾದರೆ ಅಲರ್ಜಿಯು ನಾಲ್ಕು ಅತಿಸೂಕ್ಷ್ಮ ಪ್ರತಿಕ್ರಿಯೆಗಳಲ್ಲೊಂದಾಗಿದೆ.ಇದನ್ನು ಪ್ರಕಾರ ದ (ಅಥವಾ ತಕ್ಷಣ ದ ವಿಪರೀತ ಪ್ರತಿಕ್ರಿಯೆ ಎನ್ನುವರು) ಇದು ಬಿಳಿ ರಕ್ತ ಕಣಗಳ ಅತಿಹೆಚ್ಚಿನ ಕ್ರಿಯಾತ್ಮಕ ವರ್ತನೆಯೇ ಕಾರಣವಾಗಿದೆ.ಇವುಗಳನ್ನು ಮಾಸ್ತ್ ಕಣಗಳು ಮತ್ತು ಬಾಸೊಫಿಲ್ಸ್ ಗಳು ರೋಗನಿರೋಧಕಗಳ ಮೂಲಕ ತನ್ನ ಗುಣಲಕ್ಷಣ ತೋರುತ್ತದೆ.ಇದನ್ನುIgE,ಎಂದೂ ಕರೆಯುತ್ತಾರೆ,ಇದರಲ್ಲಿ ಉರಿತದ ಪರಿಣಾಮ ಕಾಣಿಸುತ್ತದೆ.
ಡಾಯ್ಚ ಬ್ಯಾಂಕ್ ಎಜಿ (ವಾಸ್ತವವಾಗಿ "ಜರ್ಮನ್ ಬ್ಯಾಂಕ್"; [ˈdɔʏtʃə ˈbaŋk]FWB: DBK, NYSE: DB) ಎನ್ನುವುದು ಒಂದು ಅಂತರಾಷ್ಟ್ರೀಯ ಜಾಗತಿಕ ಬ್ಯಾಂಕ್ ಆಗಿದ್ದು, ಇದರ ಕೇಂದ್ರ ಕಚೇರಿಯು ಜರ್ಮನಿಯ ಫ್ರಾಂಕ್ಫರ್ಟ್ನಲ್ಲಿದೆ. ಬ್ಯಾಂಕ್ ೭೨ ರಾಷ್ಟ್ರಗಳಲ್ಲಿ ೮೦,೦೦೦ ಕ್ಕಿಂತ ಹೆಚ್ಚು ಉದ್ಯೋಗಿಗಳನ್ನು ಹೊಂದಿದೆ, ಮತ್ತು, ಅಮೇರಿಕಾ, ಏಷ್ಯಾ ಫೆಸಿಫಿಕ್ ಮತ್ತು ಪ್ರವರ್ಧಮಾನಕ್ಕೆ ಬರುತ್ತಿರುವ ಮಾರುಕಟ್ಟೆಗಳಲ್ಲಿ ಬೃಹತ್ ಪ್ರಮಾಣದ ಉಪಸ್ಥಿತಿಯನ್ನು ಹೊಂದಿದೆ. ನ್ಯೂಯಾರ್ಕ್, ಲಂಡನ್, ಫ್ರಾಂಕ್ಫರ್ಟ್, ಪ್ಯಾರಿಸ್, ಮಾಸ್ಕೋ, ಆಮ್ಸ್ಟರ್ಡ್ಯಾಮ್, ಟೊರಾಂಟೋ, ಸಾವೋ ಪೋಲೋ, ಸಿಂಗಾಪುರ, ಹಾಂಗ್ ಕಾಂಗ್, ಟೋಕಿಯೋ ಮತ್ತು ಸಿಡ್ನಿ ಸೇರಿದಂತೆ ಪ್ರಮುಖವಾದ ಆರ್ಥಿಕ ಕೇಂದ್ರಗಳಲ್ಲಿ ಡಾಯ್ಚ ಬ್ಯಾಂಕ್ ಕಚೇರಿಗಳನ್ನು ಹೊಂದಿದೆ.
ಡಿವ್ಎಕ್ಸ್ ಎಂಬುದು DivX, Inc.(ಡಿವ್ಎಕ್ಸ್, ಸಂಘಟಿತ ಸಂಸ್ಥೆ)(ಹಿಂದೆ DivXNetworks, Inc. ) ತಯಾರಿಸುವ ಉತ್ಪನ್ನಗಳ ಬ್ರ್ಯಾಂಡ್ ನ ಹೆಸರಾಗಿದೆ. ಡಿವ್ಎಕ್ಸ್ ಕೊಡೆಕ್ ಅನ್ನು ಒಳಗೊಂಡಂತೆ ; ಇದು ಬಹಳ ಉದ್ದವಾಗಿರುವ ವಿಡಿಯೋದ ಒಂದು ಭಾಗವನ್ನು ಸಣ್ಣ ಗಾತ್ರಕ್ಕೆ ಸಂಕುಚಿತ ಗೊಳಿಸುವ ಹಾಗು ತುಲನಾತ್ಮಕವಾಗಿ ಅತ್ಯಂತ ಸ್ಪಷ್ಟವಾಗಿ ಕಾಣಿಸುವಂತಹ ಗುಣಮಟ್ಟವನ್ನು ಹೊಂದಿರುವ ಸಾಮರ್ಥ್ಯದಿಂದ ಇದು ಜನಪ್ರಿಯವಾಗಿದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಕ್ಯಾನ್ಸರ್ (/ˈkænsə(r)/ ( listen)ವೈದ್ಯಕೀಯ ಪದಗಳಲ್ಲಿ:ಮಾಲಿಗಂಟ್ (ಕೇಡು ತರುವ)ನಿಯೊಪ್ಲಾಸ್ಮ್ (ಊತದ ಗೆಡ್ಡ),ಇದನ್ನು ಅರ್ಬುದ ರೋಗ ಎಂದು ಕರೆಯುತ್ತಾರೆ.ಇದರಲ್ಲಿ ಕೋಶಗಳ ಒಂದು ಸಮೂಹವು ಅನಿಯಂತ್ರಿತ ಬೆಳವಣಿಗೆ ಯನ್ನು ತೋರಿಸುತ್ತವೆ.ಅಂದರೆ ಸಾಮಾನ್ಯಕ್ಕಿಂತಲೂ ಮಿತಿಮೀರಿದ ಕೋಶಗಳ ವಿಭಜನೆ),ಅಂಗಾಂಶಗಳ ಮೇಲೆ ದುರಾಕ್ರಮಣ (ಶರೀರದ ಒಂದು ಭಾಗದಲ್ಲಿ ಇದು ಕಾಣಿಸಿಕೊಂಡರೆ ಅಕ್ಕಪಕ್ಕದ ಕೋಶಗಳನ್ನು ನಾಶಪಡಿಸುತ್ತದೆ).ಇದು ಹಲವು ಬಾರಿ ದೇಹದ ಇತರ ಭಾಗಗಳಿಗೆ ವೇಗವಾಗಿ ಪಸರಿಸು ತ್ತದೆ.(ರಕ್ತ ಅಥವಾ ಕೀವುಗಳಂತಹ ಮಲಿನ ದ್ರವಗಳ ಮೂಲಕ ದೇಹದ ಎಲ್ಲೆಡೆಯೂ ಹಬ್ಬಿಕೊಳ್ಳುತ್ತದೆ.) ಕ್ಯಾನ್ಸರ್ ನ ಹಾನಿಕಾರಕ ಲಕ್ಷಣಗಳು ಇತರೆ ಸಾಮಾನ್ಯ ಗೆಡ್ಡೆಗಳು,ಅಂದರೆ ತಾವೇ ತಾವಾಗಿ ಹುಟ್ಟಿಕೊಂಡವುಗಳು ಸ್ವಯಂ ಮಿತಿಗೊಳಪಟ್ಟವುಗಳು ಇತರ ಅಂಗಾಂಶಗಳ ಮೇಲೆ ಆಕ್ರಮಣ ಅಥವಾ ನಾಶಮಡುವ ಪ್ರವೃತ್ತಿಯು ಕ್ಯಾನ್ಸರ್ ಗಿಂತ ಭಿನ್ನವಾಗಿದೆ. ಲುಕೆಮಿಯಾ ಕೂಡಾ ನಾಲ್ಕು ಕ್ಯಾನ್ಸರ್ ಗಳಲ್ಲಿ ಒಂದಾದರೂ ಇದು ಊತದ ಗೆಡ್ದೆಯ ಲಕ್ಷಣ ಹೊಂದಿರುವದಿಲ್ಲ. ವೈದ್ಯಕೀಯ ವಿಜ್ಞಾನದಲ್ಲಿ ಇದರ ಅಧ್ಯಯನ,ರೋಗ ನಿದಾನ ಪತ್ತೆ,ಚಿಕಿತ್ಸೆ ಮತ್ತು ಕ್ಯಾನ್ಸರ್ ನಿರ್ಮೂಲನೆಯ ಅಂಶಗಳನ್ನು ಹೊಂದಿರುವ ವೈದ್ಯಕೀಯ ಶಾಖೆಯನ್ನು ಆಂಕಾಲಜಿ ಎಂದು ಕರೆಯುತ್ತಾರೆ.
ವಿಶ್ವದಲ್ಲಿಯ ಮಾನವ ನಿರ್ಮಿತ ಮತ್ತು ನೈಸರ್ಗಿಕ ವಿಸ್ಮಯಗಳ ವಿಶ್ವದ ಅದ್ಭುತಗಳನ್ನು ಗುರುತಿಸಲು ಕಾಲಕಾಲಕ್ಕೆ ಹಲವಾರು ರೀತಿಯ ಪಟ್ಟಿಗಳನ್ನು ಮಾಡಲಾಗುತ್ತಿದೆ. ಪ್ರಾಚೀನ ವಿಶ್ವದ ಏಳು ಅದ್ಭುತಗಳು ಈ ರೀತಿಯ ಪಟ್ಟಿ ಗಳಲ್ಲಿ ಮೊದಲನೆಯದು. ಈ ಪಟ್ಟಿಯಲ್ಲಿ ಮಾನವನಿರ್ಮಿತ ಉತ್ಕೃಷ್ಟ ಪ್ರಾಚೀನಾವಶೇಷಗಳನ್ನು ಹೆಲೆನಿಕ್ ಸ್ಥಳ ವೀಕ್ಷಕರ ಮಾಹಿತಿ ಗ್ರಂಥದಲ್ಲಿ ಪಟ್ಟಿ ಮಾಡಲಾಗಿದೆ.
ಬೀಟಲ್ಸ್ ಲಿವರ್ ಪೂಲ್ನಲ್ಲಿ 1960ರಲ್ಲಿ ನಿರ್ಮಿತವಾದ ಒಂದು ರಾಕ್ ಸಂಗೀತ ತಂಡ. ಜನಪ್ರಿಯ ಸಂಗೀತ ಇತಿಹಾಸದಲ್ಲಿ ಇದು ಅತಿ ಹೆಚ್ಚು ವಾಣಿಜ್ಯತ್ಮಕವಾಗಿ ಯಶಸ್ಸು ಮತ್ತು ವಿಮರ್ಶಾತ್ಮಕ ಶ್ಲಾಘನೆ ಗಳಿಸಿದ ಸಂಗೀತ ತಂಡಗಳಲ್ಲಿ ಒಂದಾಗಿದೆ. 1962ರಿಂದ ಜಾನ್ ಲೆನನ್ ([ಸ್ವರತರಂಗ]ರಿದಮ್ ಗಿಟಾರ್, ಗಾಯನ), ಪೌಲ್ ಮ್ಯಾಕ್ಕಾರ್ಟ್ನಿ (ಬ್ಯಾಸ್ ಗಿಟಾರ್, ಗಾಯನ), ಜಾರ್ಜ್ ಹ್ಯಾರಿಸನ್ (ಲೀಡ್ ಗಿಟಾರ್, ಗಾಯನ) ಮತ್ತು ರಿಂಗೋ ಸ್ಟಾರ್ರ್ (ಡ್ರಮ್ಸ್, ಗಾಯನ) ರನ್ನು ಈ ತಂಡ ಒಳಗೊಂಡಿದೆ.
ಟ್ಯೂನ ಮೀನು ಗಳು ಸ್ಕಾಂಬ್ರಿಡೇ ವಂಶಕ್ಕೆ ಸೇರಿದ ಕಡಲನೀರಿನ ಮೀನುಗಳಾಗಿದ್ದು, ಇವು ಬಹುತೇಕವಾಗಿ ಥೂನಸ್ ಕುಲದಲ್ಲಿ ಕಂಡುಬರುತ್ತವೆ. ಟ್ಯೂನ ಮೀನುಗಳು ವೇಗದ ಈಜುಗಾರರಾಗಿವೆ, ಮತ್ತು ಕೆಲವೊಂದು 70 km/h (43 mph)ನಷ್ಟು ವೇಗಗಳಲ್ಲಿ ಈಜುವಷ್ಟು ಸಮರ್ಥವಾಗಿವೆ. ಬಿಳಿ ಮಾಂಸವನ್ನು ಹೊಂದಿರುವ ಬಹುತೇಕ ಮೀನುಗಳಿಗಿಂತ ಭಿನ್ನವಾಗಿ, ಟ್ಯೂನ ಮೀನಿನ ಸ್ನಾಯು ಅಂಗಾಂಶವು ನಸುಗೆಂಪು ಬಣ್ಣದಿಂದ ಗಾಢ ಕೆಂಪು ಬಣ್ಣದವರೆಗೆ ವೈವಿಧ್ಯಮಯವಾಗಿರುತ್ತದೆ.
ನಿಕೋಲಾ ಟೆಸ್ಲಾ ರವರು (Serbian: Никола Тесла; ೧೦ ಜುಲೈ ೧೮೫೬ – ೭ ಜನವರಿ ೧೯೪೩) ಓರ್ವ ಆವಿಷ್ಕಾರಕ, ಯಾಂತ್ರಿಕ ಅಭಿಯಂತರ ಮತ್ತು ವಿದ್ಯುತ್ ಅಭಿಯಂತರರಾಗಿದ್ದರು. ೧೯ನೇ ಶತಮಾನದ ಕೊನೆಗೆ ಹಾಗೂ ೨೦ನೇ ಶತಮಾನದ ಆದಿಯ ಅವಧಿಯಲ್ಲಿ ಆದ ವಿದ್ಯುತ್ಕಾಂತತೆ ಕ್ಷೇತ್ರದ ಅನೇಕ ಕ್ರಾಂತಿಕಾರಿ ಬೆಳವಣಿಗೆಗೆ ಕಾರಣಕರ್ತರಾಗಿರುವುದಕ್ಕೆ ಅವರು ಪ್ರಸಿದ್ಧರಾಗಿರುವರಲ್ಲದೇ, ವಾಣಿಜ್ಯ ವಿದ್ಯುಚ್ಛಕ್ತಿಯ ಜನನಕ್ಕೆ ಪ್ರಮುಖ ಕೊಡುಗೆದಾತರಾಗಿದ್ದಾರೆ. ವಿದ್ಯುತ್ತಿನ ವಿತರಣೆಯ ಬಹುಫೇಸ್ ವ್ಯವಸ್ಥೆ ಮತ್ತು AC ಮೋಟಾರ್ಗಳದ್ದೂ ಸೇರಿದಂತೆ ಆಧುನಿಕ ಪರ್ಯಾಯ ವಿದ್ಯುತ್ಪ್ರವಾಹ (AC) ಆಧಾರಿತ ವಿದ್ಯುಚ್ಛಕ್ತಿ ವ್ಯವಸ್ಥೆಗಳಿಗೆ ಟೆಸ್ಲಾ'ರ ಹಕ್ಕುಸ್ವಾಮ್ಯಗಳು ಮತ್ತು ಸೈದ್ಧಾಂತಿಕ ಸಾಧನೆಗಳು ಆಧಾರವಾಗಿದೆ.
ಮೌಲಾನಾ ಅಬ್ದುಲ್ ಕಲಾಂ ಅಜಾದ್ (ಬಂಗಾಳಿ:আবুল কালাম মুহিয়ুদ্দিন আহমেদ আজাদ, ಉರ್ದು: مولانا ابوالکلام محی الدین احمد آزاد; ನವೆಂಬರ್ ೧೧, ೧೮೮೮ - ಫೆಬ್ರುವರಿ ೨೨, ೧೯೫೮) ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರಾಗಿ, ಭಾರತ ಸರ್ಕಾರದ ಶಿಕ್ಷಣ ಮಂತ್ರಿಗಳಾಗಿ ಪ್ರಸಿದ್ಧರೆನಿಸಿದ್ದಾರೆ. ಅವರ ಜನ್ಮದಿನವಾದ ನವೆಂಬರ್ ೧೧ ದಿನಾಂಕವನ್ನು ಭಾರತದ ರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ ಆಚರಿಸಲಾಗುತ್ತಿದೆ.
ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಹೃದಯ ಸ್ನಾಯುವಿನ ಊತಕ ಸಾವು (MI ) ಅಥವಾ ತೀವ್ರ ಹೃದಯ ಸ್ನಾಯುವಿನ ಊತಕ ಸಾವು (AMI ) ಎಂದರೆ ಹೃದಯದ ಒಂದು ಭಾಗಕ್ಕೆ ರಕ್ತ ಪೂರೈಕೆಯಲ್ಲಿ ಅಡ್ಡಿಯುಂಟಾಗಿ ಅಲ್ಲಿನ ಹೃದಯದ ಜೀವಕೋಶಗಳು ಸಾಯುವುದು ಎಂದರ್ಥ, ಇದನ್ನು ಸಾಮಾನ್ಯವಾಗಿ ಹೃದಯಾಘಾತ ಎಂದು ಕರೆಯುತ್ತಾರೆ. ಇದಕ್ಕೆ ಮುಖ್ಯ ಕಾರಣ ಸುಲಭವಾಗಿ ಘಾಸಿಗೊಳಗಾಗುವ ಅಪಧಮನಿಯ-ಕಾಠಿಣ್ಯದ ಪ್ಲೇಕ್(ತಂತುಯುಕ್ತವಾದ ಊತಕದ ಶೇಖರಣೆ)ಯ ಛಿದ್ರವಾಗುವುದರಿಂದ ಉಂಟಾಗುವ ಪರಿಧಮನಿಯ ಮುಚ್ಚಿಕೊಳ್ಳುವಿಕೆ (ತಡೆಗಟ್ಟುವಿಕೆ). ಈ ಪ್ಲೇಕ್ ಅಪಧಮನಿಯ ಪೊರೆಯಲ್ಲಿ ಲಿಪಿಡ್ಗಳು (ಕೊಬ್ಬಿನಾಮ್ಲಗಳು) ಮತ್ತು ಬಿಳಿರಕ್ತಕಣಗಳ (ವಿಶೇಷವಾಗಿ ಮ್ಯಾಕ್ರೊಫೇಜ್ಗಳು) ಅಸ್ಥಿರ ಸಂಗ್ರಹವಾಗಿದೆ.
ಏಡ್ಸ್ (ಅಕ್ವೈರ್ಡ್ ಇಮ್ಯೂನ್ ಡಿಫಿಷಿಯನ್ಸಿ ಸಿಂಡ್ರೊಮ್ ಅಥವಾ ಅಕ್ವೈರ್ಡ್ ಇಮ್ಯುನೊ ಡಿಫಿಷಿಯನ್ಸಿ ಸಿಂಡ್ರೋಮ್) ಎಚ್ಐವಿ (ಹ್ಯೂಮನ್ ಇಮ್ಯುನೊ ಡಿಫಿಷಿಯನ್ಸಿ ವೈರಸ್) ಎಂಬ ವೈರಸ್ ಉಂಟಾಗುವ ಲಕ್ಷಣವಾಗಿದ್ದು ಇದು. ಅನಾರೋಗ್ಯ, ನಿರೋಧಕ ವ್ಯವಸ್ಥೆಯ ಬದಲಾಯಿಸುತ್ತದೆ ಹೆಚ್ಚು ದುರ್ಬಲ ಸೋಂಕುಗಳು ಮತ್ತು ರೋಗಗಳಿಗೆ ಜನರು ಮಾಡುವ. ಸಿಂಡ್ರೋಮ್ ಮುಂದುವರೆದಂತೆ ಈ ಪ್ರಭಾವಕ್ಕೆ ಹಾಳಾಗುತ್ತದೆ.ಎಚ್ಐವಿ ಸೋಂಕಿತ ವ್ಯಕ್ತಿಯನ್ನು (ವೀರ್ಯ ಮತ್ತು ಯೋನಿ ದ್ರವಗಳು, ರಕ್ತ ಮತ್ತು ಎದೆ ಹಾಲು) ದೇಹದ ದ್ರವಗಳು ಕಂಡುಬರುತ್ತದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.