The most-visited English Wikipedia articles, updated daily. Learn more...
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ಆರಂಭಗೊಂಡಿದ್ದರೂ, ಅದು ಹೆಚ್ಚು ಪ್ರಚಲಿತಕ್ಕೆ ಬಂದುದು ೨೦೧೫-೨೦೧೬ನೇ ಸಾಲಿನಲ್ಲಿ. (ಆಂಗ್ಲ:Clean India Mission)ಇದು ಭಾರತ ಸರ್ಕಾರದ ಅಭಿಯಾನವಾಗಿದ್ದೂ, ರಸ್ತೆ, ಬೀದಿ ಹಾಗೂ ಮೂಲಸೌಕರ್ಯಗಳ ನಿರ್ಮಲೀಕರಣಕ್ಕಾಗಿ ಆರಂಭಿಸಲಾಗಿದೆ ..ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1509-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚೆನ್ನಮ್ಮನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಏಡ್ಸ್ (ಅಕ್ವೈರ್ಡ್ ಇಮ್ಯೂನ್ ಡಿಫಿಷಿಯನ್ಸಿ ಸಿಂಡ್ರೊಮ್ ಅಥವಾ ಅಕ್ವೈರ್ಡ್ ಇಮ್ಯುನೊ ಡಿಫಿಷಿಯನ್ಸಿ ಸಿಂಡ್ರೋಮ್) ಎಚ್ಐವಿ (ಹ್ಯೂಮನ್ ಇಮ್ಯುನೊ ಡಿಫಿಷಿಯನ್ಸಿ ವೈರಸ್) ಎಂಬ ವೈರಸ್ ಉಂಟಾಗುವ ಲಕ್ಷಣವಾಗಿದ್ದು ಇದು. ಅನಾರೋಗ್ಯ, ನಿರೋಧಕ ವ್ಯವಸ್ಥೆಯ ಬದಲಾಯಿಸುತ್ತದೆ ಹೆಚ್ಚು ದುರ್ಬಲ ಸೋಂಕುಗಳು ಮತ್ತು ರೋಗಗಳಿಗೆ ಜನರು ಮಾಡುವ. ಸಿಂಡ್ರೋಮ್ ಮುಂದುವರೆದಂತೆ ಈ ಪ್ರಭಾವಕ್ಕೆ ಹಾಳಾಗುತ್ತದೆ.ಎಚ್ಐವಿ ಸೋಂಕಿತ ವ್ಯಕ್ತಿಯನ್ನು (ವೀರ್ಯ ಮತ್ತು ಯೋನಿ ದ್ರವಗಳು, ರಕ್ತ ಮತ್ತು ಎದೆ ಹಾಲು) ದೇಹದ ದ್ರವಗಳು ಕಂಡುಬರುತ್ತದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಭೌಗೋಳಿಕ ನಿರ್ದೇಶಾಂಕ ಪದ್ಧತಿಯು ಭೂಮಿಯ ಮೇಲಿನ ಪ್ರತಿಯೊಂದು ನೆಲೆಯನ್ನು ಮೂರು ನಿರ್ದೇಶಾಂಕಗಳಲ್ಲಿ ನಿರೂಪಿಸಲು, ಮುಖ್ಯವಾಗಿ ಒಂದು ಗೋಳ ನಿರ್ದೇಶಾಂಕ ಪದ್ಧತಿಯನ್ನು ಬಳಸಿ, ಸಾಧ್ಯವಾಗಿಸುವ ಒಂದು ನಿರ್ದೇಶಾಂಕ ಪದ್ಧತಿ. ಭೂಮಿಯು ಒಂದು ಗೋಳವಲ್ಲ, ಅದು ಒಂದು ಅಂಡಾಕಾರದ ಘನಾಕೃತಿಗೆ ಸಮೀಪದ ಒಂದು ಅಸಮ ರೂಪದ ಆಕಾರ; ಪ್ರತಿ ಸ್ಥಳವರ್ಣನಾ ಬಿಂದುವನ್ನು ಸಂಖ್ಯೆಗಳ ಒಂದು ನಿಶ್ಚಿತ ಕ್ರಮಗೊಂಡ ವರ್ಗವಾಗಿ ಖಚಿತವಾಗಿ ನಮೂದಿಸಬಲ್ಲ ಒಂದು ನಿರ್ದೇಶಾಂಕ ಪದ್ಧತಿಯನ್ನು ನಿರೂಪಿಸುವುದು ಸವಾಲು. ಅಕ್ಷಾಂಶವು (ಸಂಕ್ಷೇಪ: ಲ್ಯಾಟಿನ್., φ, ಅಥವಾ ಫೈ) ಗೋಳದ ಕೇಂದ್ರದಿಂದ ಅಳೆಯಲಾದ ಭೂಮಿಯ ಮೇಲ್ಮೈ ಮೇಲಿನ ಒಂದು ಬಿಂದುವಿನಿಂದ ಸಮಭಾಜಕ ಸಮತಲದವರೆಗಿನ ಕೋನ.
ಕ್ರಿಸ್ಮಸ್ ಎಂದರೆ ಕ್ರಿಸ್ತಜಯಂತಿ ಅಥವಾ ಯೇಸುಕ್ರಿಸ್ತನು ಹುಟ್ಟಿದ ಸಂಭ್ರಮದ ದಿನ. ಜಗತ್ತಿನಾದ್ಯಂತ ಪ್ರತಿ ವರ್ಷದ ಡಿಸೆಂಬರ್ ತಿಂಗಳ ಇಪ್ಪತ್ತೈದನೇ ದಿನವನ್ನು ಯೇಸುಕ್ರಿಸ್ತನ ಹುಟ್ಟುಹಬ್ಬವಾಗಿ ಆಚರಿಸಲಾಗುತ್ತದೆ. ಕ್ರೈಸ್ತ ಸುವಾರ್ತೆ(ಗಾಸ್ಪೆಲ್)ಯ ಪ್ರಕಾರ ಯೇಸುಕ್ರಿಸ್ತನು ಮೇರಿ ಮತ್ತು ಜೋಸೆಫರ ಮಗನಾಗಿ ಇಂದು ಇಸ್ರೇಲ್ನಲ್ಲಿರುವ ಬೆತ್ಲಹೆಮ್ ಎಂಬ ಊರಿನಲ್ಲಿ ಹುಟ್ಟಿದ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಕಂಪ್ಯೂಟರಿಗೆ ಊಡಿಸಲಾದ ದತ್ತಾಂಶವನ್ನು ನಿರ್ದಿಷ್ಟ ಹೆಜ್ಜೆಗಳಲ್ಲಿ ಸಂಸ್ಕರಿಸಲಾಗುತ್ತದೆ.
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಕವಿತೆ ಹಾಗೂ ಗದ್ಯದಲ್ಲಿ ಮೂಲತಃ ಭಾರತೀಯ ಪ್ರಾಣಿಗಳ ಕಥೆಗಳ ಮೇಲೆ ಆಧಾರಿತ ಒಂದು ಸಂಗ್ರಹವೇ, ಪಂಚತಂತ್ರ ಸಂಸ್ಕೃತ:पञ्चतन्त्र(IAST: ಪಂಚತಂತ್ರ, 'ಐದು ಮೂಲತತ್ವಗಳು') ಕ್ರಿಸ್ತ ಪೂರ್ವ 3 ರನೇ ಶತಮಾನದಲ್ಲಿ ರಚಿಸಲ್ಪಟ್ಟಿದೆಯೆಂದು ಕೆಲವು ವಿದ್ವಾಂಸರು ನಂಬುವ, ಮೂಲ ಸಂಸ್ಕೃತ ಗ್ರಂಥ, ವಿಷ್ಣು ಶರ್ಮರಿಗೆ ಆ ಕೀರ್ತಿಯು ಸಲ್ಲುತ್ತದೆ. ಆದಾಗ್ಯೂ, "ನಾವು ಊಹಿಸಲೂ ಸಾಧ್ಯವಾದಷ್ಟು ಹಳೆಯದಾದ ಪ್ರಾಣಿಗಳ ಸಣ್ಣ ನೀತಿಯ ಕಥೆಗಳನ್ನು" ಒಳಗೊಂಡಿರುವ, ಪುರಾತನ ಮೌಖಿಕ ಪರಂಪರೆಗಳ ಮೇಲೆ ಅದು ಆಧರಿಸಲ್ಪಟ್ಟಿದೆ. ಅದು "ಖಂಡಿತವಾಗಿಯೂ ಭಾರತದ ಅತ್ಯಂತ ಹೆಚ್ಚು ಬಾರಿ ಮತ್ತೆ ಮತ್ತೆ ಭಾಷಾಂತರಿಸಲ್ಪಟ್ಟಿರುವ ಸಾಹಿತ್ಯಿಕ ಉತ್ಪನ್ನ" ಹಾಗೂ ಹೇಳಬೇಕೆಂದರೆ ಇವುಗಳು ವಿಶ್ವದಲ್ಲೇ ಅತ್ಯಂತ ಹೆಚ್ಚು ವಿಶಾಲವಾಗಿ ತಿಳಿದಿರುವ ಕಥೆಯ ಸಂಗ್ರಹಗಳಲ್ಲೊಂದು.
ಮಹೇಂದ್ರ ಸಿಂಗ್ ಧೋನಿ, MS ಧೋನಿ ಎಂದೂ ಸಂಕ್ಷ್ತಿಪ್ತ ರೂಪದಲ್ಲಿ ಕರೆಯಲಾಗುತ್ತದೆ. pronunciation (ಹಿಂದಿ:महेन्द्र सिंह धोनी) (ಜನನ ಬಿಹಾರದ ರಾಂಚಿಯಲ್ಲಿ 7 ಜುಲೈ 1981ರಂದು) (ಈಗಿನ ಜಾರ್ಖಂಡ್) ಇವರು ಭಾರತದ ಕ್ರಿಕೆಟಿಗ ಮತ್ತು ಭಾರತ ಕ್ರಿಕೆಟ್ ತಂಡದ ಪ್ರಸ್ತುತ ನಾಯಕರಾಗಿದ್ದಾರೆ. ಆರಂಭದಲ್ಲಿ ಅತಿ ಅಬ್ಬರದ ಮತ್ತು ಆಕ್ರಮಣಕಾರಿ ಬ್ಯಾಟ್ಸ್ಮ್ಯಾನ್ ಎಂದು ಗುರುತಿಸಿಕೊಂಡರೂ ಸಹ, ನಂತರ ಧೋನಿಯು ಭಾರತದ ಏಕದಿನ (ODI) ತಂಡದ ಶಾಂತ ಸ್ವಭಾವದ ನಾಯಕರಲ್ಲಿ ಒಬ್ಬರಂತೆ ಗುರ್ತಿಸಲ್ಪಡುತ್ತಾರೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಅಟಲ್ ಬಿಹಾರಿ ವಾಜಪೇಯಿ (ಜನನ ಡಿಸೆಂಬರ್ ೨೫, ೧೯೨೪) ಅಟಲ್ ಅವರು ಹುಟ್ಟಿದ್ದು ಕ್ರಿಸ್ ಮಸ್ ದಿನದಂದು. ಭಾರತದ ರಾಜಕೀಯದಲ್ಲಿ ಬಹುಕಾಲದಿಂದ ಸಕ್ರಿಯರಾಜಕಾರಣಿಯಾಗಿ ತಮ್ಮ ಅಪೂರ್ವ ಯೋಗದಾನವನ್ನು ನೀಡಿದ್ದಾರೆ. ಅವರೊಬ್ಬ ಕವಿ,ಹೆಸರಾಂತ ಪತ್ರಕರ್ತ, ಶ್ರೇಷ್ಠ ವಾಗ್ಮಿ,ಚಿಂತಕ, ದಾರ್ಶನಿಕ, ನಿಸ್ವಾರ್ಥ ರಾಜಕಾರಣಿ, ಹಾಗೂ ನುಡಿದಂತೆ ನಡೆಯುವ ಮಾನವತಾವಾದಿಯಾಗಿ ಭಾರತ, ಹಾಗೂ ವಿಶ್ವದಲ್ಲಿ ಹೆಸರು ವಾಸಿಯಾಗಿದ್ದಾರೆ.
ಸ್ನೇಹಿತರೊಂದಿಗೆ ಮತ್ತು ಬಂಧುವರ್ಗದವರೊಂದಿಗೆ ಸಂಪರ್ಕ ಸಾಧಿಸಲು ಅವರನ್ನು ಮುಖತಃ ಭೇಟಿಯಾಗುವುದು ಅಥವಾ ಅವರೊಂದಿಗೆ ಪತ್ರ ವ್ಯವಹಾರ ಇಟ್ಟುಕೊಳ್ಳುವುದು ಹಿಂದೊಮ್ಮೆ ಅನಿವಾರ್ಯವಾಗಿತ್ತು. ಎಲೆಕ್ಟ್ರಾನಿಕ್ ಸಂಪರ್ಕ ಸಾಧನಗಳು ಲಭ್ಯವಾದ ನಂತರ ಇ-ಮೇಲ್ ("ಮಿಂಚೆ", ಎಲೆಕ್ಟ್ರಾನಿಕ್ ಮೇಲ್) ಜನಪ್ರಿಯವಾಯಿತು. ತದನಂತರ ಸಾಮಾಜಿಕ ತಾಣಗಳು (ಸೋಷಿಯಲ್ ನೆಟ್ವರ್ಕಿಂಗ್) ಎಂಬ ಪರಿಕಲ್ಪನೆ ಹುಟ್ಟಿತು.
ವಿಕಿಪೀಡಿಯ [ಇಂಗ್ಲಿಷ್: Wikipedia ವಿಕಿಪೀಡಿಯ] ಒಂದು ಅಂತರ್ಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಅ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಬೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.
ಮಾನವ ಹಕ್ಕುಗಳು ಭಾರತದಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿಯು (ವಸ್ತುಸ್ಥಿತಿ) ಬಹಳ ಸಂಕೀರ್ಣ ರಚನೆಯಾಗಿದೆ. ಕಾರಣವೆಂದರೆ ದೇಶದ ವಿಶಾಲವಾದ ಭೂ ಭಾಗ ಮತ್ತು ಅತ್ಯದ್ಭುತ ವೈವಿಧ್ಯತೆಯ ಪರಿಣಾಮವಾಗಿ, ಇದರ ಸ್ಥಾನವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರದ ನೀತಿ ಮತ್ತು ಈ ದೇಶದ ಸಾರ್ವಭೌಮತ್ವ, ಸಾಮಾಜಿಕ ಸಮಾನತೆ, ಪ್ರಜಾತಂತ್ರ ಗಣರಾಜ್ಯ ರಾಷ್ಟ್ರವಾಗಿದ್ದು, ಮತ್ತು ಇತಿಹಾಸವನ್ನು ದಾಖಲಿಸಿದ್ದ ಹಳೆಯ ವಸಾಹತುಶಾಹಿ ಪ್ರಾಂತ್ಯಗಳಂತಿದೆ. ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳ ನೀಡಿಕೆಯ ಜೊತೆ, ಧಾರ್ಮಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಟ್ಟಿದೆ.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.