The most-visited ಕನ್ನಡ Wikipedia articles, updated daily. Learn more...
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಉಲ್ಕಾವೃಷ್ಟಿಯು ರಾತ್ರಿ ಆಕಾಶದಲ್ಲಿ ಒಂದು ಬಿಂದುವಿನಿಂದ ಅನೇಕ ಉಲ್ಕೆಗಳು ಉತ್ಪತ್ತಿಯಾದಂತೆ ಕಾಣುವ ಒಂದು ಖಗೋಳ ಘಟನೆ. ಈ ಉಲ್ಕೆಗಳಿಗೆ ಕಾರಣ ಸಮಾನಾಂತರ ಪಥಗಳ ಮೇಲೆ ವಿಪರೀತವಾದ ಅತಿವೇಗದಲ್ಲಿ ಭೂಮಿಯ ವಾತಾವರಣವನ್ನು ಪ್ರವೇಶಿಸುವ, ಉಲ್ಕಾಕಲ್ಪಗಳೆಂದು ಕರೆಯಲಾದ, ಬಾಹ್ಯಾಕಾಶದ ಭಗ್ನಾವಶೇಷಗಳ ಪ್ರವಾಹ. ಬಹುತೇಕ ಉಲ್ಕೆಗಳು ಮರಳಿನ ಒಂದು ಕಣಕ್ಕಿಂತ ಚಿಕ್ಕದಾಗಿರುತ್ತವೆ, ಹಾಗಾಗಿ ಬಹುತೇಕ ಎಲ್ಲವೂ ವಿಘಟಿತವಾಗುತ್ತವೆ ಮತ್ತು ಭೂಮಿಯ ಮೇಲ್ಮೈಯನ್ನು ಎಂದಿಗೂ ಮುಟ್ಟುವುದಿಲ್ಲ.
ಪ್ಯಾನ್ ಅಮೆರಿಕನ್ ಕ್ಲಿಪ್ಪರ್-೭೩ ವಿಮಾನದ ಗಗನ ಸಖಿಯರ ಮುಖ್ಯಸ್ಥೆಯಾಗಿದ್ದ ಭಾರತೀಯ ವೀರ ಮಹಿಳೆ, ನೀರಜಾ ಭಾನೋಟ್ ವಿಮಾನಯಾನದ ಇತಿಹಾಸದಲ್ಲಿ ಒಂದು ಮರೆಯಲಾರದ ವಿಕ್ರಮವನ್ನು ಸ್ಥಾಪಿಸಿದ್ದರು. ಅವರ ಪ್ರೀತಿಯ ತಂದೆ, ಹರೀಶ್ ಭಾನೋಟ್ ರವರು ಮಗಳನ್ನು 'ಲಾಡೋ'(ಪ್ರೀತಿಪಾತ್ರಳು ಎಂಬರ್ಥದಲ್ಲಿ),ಎಂದು ಸಂಬೋಧಿಸುತ್ತಿದ್ದರು. ಭಯೋತ್ಪಾದಕರ ಕಪಿ ಮುಷ್ಟಿಯಲ್ಲಿ ಬಂಧಿತವಾಗಿದ್ದ ಪ್ಯಾನ್ ಅಮೆರಿಕನ್ ವಿಮಾನದ ಪರಿಚಾರಿಕೆಯಾಗಿದ್ದ ನೀರಜರವರ ಹಣೆಗೆ ಗುಂಟಿಟ್ಟು ನಿಂತಿದ್ದ ೪ ಜನ ಭಯೋತ್ಪಾದಕರಿಂದ ೩೦೦ ಕ್ಕೂ ಅಧಿಕಮಂದಿ ಪ್ರಯಾಣಿಕರಿಗೆ ಪುನರ್ಜನ್ಮಕೊಟ್ಟು ತಮ್ಮ ತಮ್ಮ ಜೀವವನ್ನೇ ಆಹುತಿಯಾಗಿ ಅರ್ಪಿಸಿದ 'ನೀರಜಾ ಭಾನೋಟ್', ತಮ್ಮ ೨೪ ನೇ ವರ್ಷದ ಹುಟ್ಟುಹಬ್ಬದಂದು ಈ ಶೌರ್ಯದ ಕಾರ್ಯವೆಸಗಿ ಅಮರರಾದರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜಾಗತಿಕ ತಾಪಮಾನ ಏರಿಕೆಯ ಪರಿಣಾಮಗಳು
ಜಾಗತಿಕ ತಾಪಮಾನ ಏರಿಕೆಯ ಅಪಾಯಗಳು ಮತ್ತು ಪರಿಣಾಮಗಳ ಬಗ್ಗೆ ನೀಡಲಾದ ಗ್ರಾಫಿಕಲ್ ವಿವರಣೆ. ಈ ವರದಿಗೆ ನಂತರ ಮಾಡಲಾದ ಸುಧಾರಣೆಗಳ ಪ್ರಕಾರ ಅಪಾಯಗಳು ಗಣನೀಯವಾಗಿ ಹೆಚ್ಚಾದವು.ಜಾಗತಿಕ ತಾಪಮಾನ ಏರಿಕೆಯ ಪರಿಣಾಮಗಳು ಮತ್ತು ಹವಾಗುಣ ಬದಲಾವಣೆಗಳು ಈ ಲೇಖನದಲ್ಲಿ "ಜಾಗತಿಕ ತಾಪಮಾನ ಏರಿಕೆ" ಮತ್ತು "ಹವಾಗುಣ ಬದಲಾವಣೆ" - ಈ ಎರಡೂ ಪದಗಳನ್ನು ಒಂದರ ಬದಲಾಗಿ ಇನ್ನೊಂದರಂತೆ ಬಳಸಲಾಗಿದೆ. ಪರಿಸರ ಮತ್ತು ಮಾನವ ಜೀವನದ ಬಗ್ಗೆ ಕಳಕಳಿ ಮೂಡಿಸಿವೆ.
ಕವಲೇದುರ್ಗ ತೀರ್ಥಹಳ್ಳಿ ತಾಲ್ಲೂಕಿನ ಹಸಿರು ಸಿರಿಯಿಂದ ಸಮೃದ್ಧವಾದ ಮೋಹಕ ತಾಣ.ತೀರ್ಥಹಳ್ಳಿಯಿಂದ ೧೮ ಕಿ.ಮೀ ಹಾಗೂ ಶಿವಮೊಗ್ಗದಿಂದ ಸುಮಾರು ೮೦ ಕಿ.ಮೀ ದೂರದಲ್ಲಿದೆ. ತೀರ್ಥಹಳ್ಳಿ - ಸಾಲೂರು ಮಾರ್ಗವಾಗಿ ದಟ್ಟ ಕಾಡುಗಳಿಂದ ಕೂಡಿದ ಸಹ್ಯಾದ್ರಿ ಶ್ರೇಣಿಯ ಮಡಿಲಲ್ಲಿ ಸಾಗಿದಾಗ ಈ ದುರ್ಗ ಎದುರಾಗುತ್ತದೆ. ಇದೊಂದು ಪೌರಾಣಿಕ ಮತ್ತು ಐತಿಹಾಸಿಕ ಮಹತ್ವದ ನೈಸರ್ಗಿಕ ಸುಂದರ ತಾಣ.ಇಲ್ಲಿ ೯ನೇ ಶತಮಾನದ ಕೋಟೆ ಇದೆ.
ಆಲ್ಬರ್ಟ್ ಐನ್ಸ್ಟೀನ್ ( ಜರ್ಮನ್ ಉಚ್ಛಾರಣೆ ) (ಮಾರ್ಚ್ ೧೪, ೧೮೭೯ - ಏಪ್ರಿಲ್ ೧೮, ೧೯೫೫) ೨೦ನೇ ಶತಮಾನದ ಜರ್ಮನಿ ಮೂಲದ ಭೌತವಿಜ್ಞಾನಿ. ಇವರು ಸಾಪೇಕ್ಷತ ಸಿದ್ಧಾಂತವನ್ನು (ಥಿಯರಿ ಆಫ್ ರಿಲೇಟಿವಿಟಿ) ಜಗತ್ತಿನ ಮುಂದಿಟ್ಟವರು. ಕ್ವಾಂಟಮ್ ಮೆಕ್ಯಾನಿಕ್ಸ್, ಸ್ಟ್ಯಾಟಿಸ್ಟಿಕಲ್ ಮೆಕ್ಯಾನಿಕ್ಸ್ ಹಾಗೂ ವಿಶ್ವಶಾಸ್ತ್ರ (ಕಾಸ್ಮಾಲಜಿ)ಗಳಲ್ಲಿ ಕೂಡ ಮಹತ್ತರವಾದ ಕಾಣಿಕೆ ನೀಡಿದ್ದಾರೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ.
ಗೊರೂರು ರಾಮಸ್ವಾಮಿ ಅಯ್ಯಂಗಾರ್(ಜುಲೈ ೪, ೧೯೦೪ - ಸೆಪ್ಟೆಂಬರ್ ೮, ೧೯೯೧) ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ಅವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಸ್ವಾತಂತ್ರ್ಯ ಚಳುವಳಿ, ಮೈಸೂರಿನಲ್ಲಿ ಪ್ರಜಾ ಸರ್ಕಾರಕ್ಕಾಗಿ ಚಳುವಳಿ, ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಹೋರಾಡಿ ಹರಿಜನೋದ್ಧಾರ ಮತ್ತು ಗ್ರಾಮೊದ್ಧಾರಕ್ಕಾಗಿ ಶ್ರಮಿಸಿದ ಅವರೊಬ್ಬ ಅಪ್ರತಿಮ ಗಾಂಧಿವಾದಿ.
ಮಂಗಾ (ಕಂಜೀ: 漫画; ಹಿರಂಗಾನಾ: まんが; ಕಟಕಾನಾ: マンガ; listen ) (English: /ˈmɑːŋɡə/ ಅಥವಾ /ˈmæŋɡə/) ಕಾಮಿಕ್ಸ್ ನಿಂದ ಕೂಡಿರುವ ಮತ್ತು ಮುದ್ರಿತ ಕಾರ್ಟೂನ್ಗಳು (ಕೆಲವುಸಲ ಕೊಮಿಕ್ಕು コミック) ಎಂದು ಜಪಾನೀಸ್ ಭಾಷೆಯಲ್ಲಿ ಕರೆಯುತ್ತಾರೆ ಮತ್ತು 19 ನೇ ಶತಮಾನದಲ್ಲಿ ಜಪಾನ್ ನಲ್ಲಿ ಅದರ ಶೈಲಿಯನ್ನು ನಿಗಧಿತಗೊಳಿಸಲಾಯಿತು. ಎರಡನೇ ಮಹಾಯುದ್ಧದ ಕೆಲವೇ ದಿನಗಳ ನಂತರ ಮಂಗದ ಆಧುನಿಕತೆಯ ಯುಗ ಪ್ರಾರಂಭವಾಯಿತು, ಆದರೆ ಅವರು ಪೂರ್ವ ಜಪಾನಿಗಳ ಕಲೆಗಿಂತ ಸುದೀರ್ಘವಾದ ಇತಿಹಾಸವನ್ನು ಹೊಂದಿದ್ದಾರೆ. ಜಪಾನಿನಲ್ಲಿ ಎಲ್ಲಾ ವಯಸ್ಸಿನ ಜನರು ಮಂಗವನ್ನು ಓದುತ್ತಾರೆ.
ಯಾವ ಭವ್ಯ ಭಾರತ ಇಸ್ಲಾಮೀ ಭಯೋತ್ಪಾದಕರ ದಾಳಿ, ದೌರ್ಜನ್ಯದ ಆಡಳಿತದವಯಲ್ಲಿ ನಲುಗುತ್ತಿತ್ತೋ, ಯಾವ ಹಿಂದೂಸ್ತಾನದ ಹಿಂದೂಗಳನ್ನು ಪಶುಗಳಿಗಿಂತ ಕಡೆಯಾಗಿ ನಡೆಸಿಕೊಳ್ಳಲಾಗುತ್ತಿತ್ತೋ... ಅಂಥಾ ದೇಶದ ದಾಸ್ಯಮುಕ್ತಿಗಾಗಿ, ಸ್ವಾಭಿಮಾನಿ ಸ್ವತಂತ್ರ ಜೀವನಕ್ಕಾಗಿ, ಹಿಂದವೀ ಸ್ವರಾಜ್ಯದ ಸ್ಥಾಪನೆಗಾಗಿ ಹೋರಾಡಿದ ಮರ್ದ್ ಮರಾಠಾ ನಮ್ಮೆಲ್ಲರ ಹೆಮ್ಮೆಯ ವೀರ ಶಿವಾಜಿ. ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿ ಭೋಂಸ್ಲೆ (ಫೆಬ್ರುವರಿ ೧೯, ೧೬೩೦ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆಸಲ್ಪಡುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ. ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ.
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಪ್ರತಿ ವರ್ಷ ಫೆಬ್ರವರಿ ೨೮ನೇ ದಿನಾಂಕವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ. ವಿಜ್ಞಾನ ಹಾಗೂ ನಮ್ಮ ಜೀವನದಲ್ಲಿ ಅದರ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಉದ್ದೇಶ. ಉಪನ್ಯಾಸಗಳು, ಚರ್ಚಾಸ್ಪರ್ಧೆಗಳು, ರಸಪ್ರಶ್ನೆ, ವಸ್ತುಪ್ರದರ್ಶನ - ಹೀಗೆ ಅನೇಕ ಚಟುವಟಿಕೆಗಳನ್ನು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂದರ್ಭದಲ್ಲಿ ದೇಶದ ವಿವಿಧೆಡೆ ಹಮ್ಮಿಕೊಳ್ಳಲಾಗುತ್ತದೆ.
ತಾಜ್ ಮಹಲ್ (pronounced /tɑdʒ məˈhɑl/; ಹಿಂದಿ: ताज महल ; ಪರ್ಷಿಯನ್/ಉರ್ದು: تاج محل ) ಭಾರತದ ಆಗ್ರಾದಲ್ಲಿರುವ ಭವ್ಯ ಸಮಾಧಿಯಾಗಿದೆ. ಇದನ್ನು ಮೊಘಲ್ ಚಕ್ರವರ್ತಿ ಷಹ ಜಹಾನ್ ತನ್ನ ಮೆಚ್ಚಿನ ಪತ್ನಿ ಮಮ್ತಾಜ್ ಮಹಲ್ಳ ನೆನಪಿಗಾಗಿ ಕಟ್ಟಿಸಿದನು. ಪರ್ಷಿಯನ್, ಭಾರತೀಯ ಮತ್ತು ಮುಸ್ಲಿಂ ವಾಸ್ತುಶೈಲಿಗಳ ಸಮ್ಮಿಶ್ರಣವಾದ ಮೊಘಲ್ ವಾಸ್ತುಶೈಲಿಗೆ ತಾಜ್ ಮಹಲ್ ("ತಾಜ್" ಎಂದೂ ಕರೆಯಲ್ಪಡುತ್ತದೆ) ಅತ್ಯುತ್ತಮ ಉದಾಹರಣೆಯೆಂದು ಪರಿಗಣಿಸಲಾಗಿದೆ.