The most-visited English Wikipedia articles, updated daily. Learn more...
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1487-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
'ಡಾ. ಸರ್ವೆಪಲ್ಲಿ ರಾಧಾಕೃಷ್ಣನ್' [[೧]](Telugu: సర్వేపల్లి రాధాకృష్ణ, (Kannada: ಸರ್ವಪಲ್ಲಿ ರಾಧಾಕೃಷ್ಣನ್) (ಜನನ : ೫ ನೇ ಸೆಪ್ಟೆಂಬರ್, ೧೮೮೮.) ಇವರು ಶಿಕ್ಷಣದ ಬಗ್ಗೆ ಅತ್ಯಂತ ಗೌರವ, ಪ್ರೀತಿ, ನಿಷ್ಠೆಯನ್ನು ಹೊಂದಿದ್ದರು. ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆಗೈದಿರುವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರಲ್ಲಿ ಪ್ರಮುಖರಾಗಿದ್ದಾರೆ.
ಹ್ಯಾರಿ ಪಾಟರ್ ಬ್ರಿಟಿಷ್ ಲೇಖಕಿ ಜೆ.ಕೆ.ರೌಲಿಂಗ್ ರ ಅವಾಸ್ತವ ಕಲ್ಪನೆಯುಳ್ಳ ಕಾದಂಬರಿಯ ಏಳು ಪುಸ್ತಕಗಳ ಸರಣಿ. ಈ ಪುಸ್ತಕಗಳು ಹಾಗ್ವರ್ಟ್ಸ್ ಮಾಟ ಮತ್ತು ಮಾಂತ್ರಿಕ ವಿದ್ಯೆಯ ಶಾಲೆಯಲ್ಲಿ ಕಲಿಯುತ್ತಿರುವ ಹ್ಯಾರಿ ಪಾಟರ್ ಎಂಬ ಹದಿ ವಯಸ್ಸಿನ ಮಾಂತ್ರಿಕ ಮತ್ತು ಅವನ ಸ್ನೇಹಿತರಾದ ರಾನ್ ವೆಸ್ಲೆ ಮತ್ತು ಹರ್ಮಿಯನ್ ಗ್ರಾಂಗರ್ ರ ಜೊತೆಗಿನ ಸಾಹಸಗಳ ಘಟನೆಗಳನ್ನು ವಿವರಿಸುತ್ತದೆ. ಈ ಕಥೆಯ ಕೇಂದ್ರ ವಿಷಯವು ಮಾಂತ್ರಿಕ ಜಗತ್ತನ್ನು ಗೆಲ್ಲುವ ಹುಡುಕಾಟದಲ್ಲಿರುವ ಮತ್ತು ಮಾಂತ್ರಿಕರಲ್ಲದ ಸಾಮಾನ್ಯ ಜನರನ್ನು (ಮಗ್ಗಲ್ಸ್) ತನ್ನ ಆಳ್ವಿಕೆಗೆ ಸ್ವಾಧಿನ ಪಡಿಸಿಕೊಳ್ಳುವ ಗುರಿಯನ್ನು ಹೊಂದಿರುವ, ಹ್ಯಾರಿಯ ಹೆತ್ತವರನ್ನು ಕೊಂದ ದುಷ್ಟ ಮಾಂತ್ರಿಕ ಲಾರ್ಡ್ ವೊಲ್ಡೆಮೊರ್ಟ್ನ ವಿರುದ್ಧ ಹ್ಯಾರಿಯ ಹೋರಾಟದ ಕುರಿತಾಗಿದೆ.
ಗೊರೂರು ರಾಮಸ್ವಾಮಿ ಅಯ್ಯಂಗಾರ್(ಜುಲೈ ೪, ೧೯೦೪ - ಸೆಪ್ಟೆಂಬರ್ ೮, ೧೯೯೧) ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ಅವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಸ್ವಾತಂತ್ರ್ಯ ಚಳುವಳಿ, ಮೈಸೂರಿನಲ್ಲಿ ಪ್ರಜಾ ಸರ್ಕಾರಕ್ಕಾಗಿ ಚಳುವಳಿ, ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಹೋರಾಡಿ ಹರಿಜನೋದ್ಧಾರ ಮತ್ತು ಗ್ರಾಮೊದ್ಧಾರಕ್ಕಾಗಿ ಶ್ರಮಿಸಿದ ಅವರೊಬ್ಬ ಅಪ್ರತಿಮ ಗಾಂಧಿವಾದಿ.
ತುಳಸಿ (ಒಸಿಮಮ್ ಬೆಸಿಲಿಕಂ )(pronounced /ˈbæzəl/ಅಥವಾ/ˈbeɪzəl/), ಲಾಮಿಯಾಸಿಯೆ(ಪುದೀನ ಸಸ್ಯಗಳು) ಸಸ್ಯ ಜಾತಿಯ, ಎಳೆಯದಾದ, ಬಹಳ ಕಡಿಮೆ ಎತ್ತರದಲ್ಲಿ ಬೆಳೆಯುವ ಸಸ್ಯವಾಗಿದೆ. ತುಳಸಿ ನಳಪಾಕಕ್ಕೆ ಯೋಗ್ಯ ಸಸ್ಯವಾಗಿದ್ದು ಇಟಾಲಿಯನ್ ಪಾಕದಲ್ಲಿ ಪ್ರಮುಖವಾಗಿ ಬಳಸಲ್ಪಡುತ್ತದೆ. ಜೊತೆಗೆ ಇದು ತೈವಾನ್ ನಂತಹ ಈಶಾನ್ಯ ಏಷಿಯಾ ಹಾಗು ಥೈಲ್ಯಾಂಡ್, ವಿಯೆಟ್ನಾಂ, ಕಾಂಬೋಡಿಯ, ಹಾಗು ಲಾವೋಸ್ ನಂತಹ ಆಗ್ನೇಯ ಏಷಿಯಾದ ಪಾಕಪದ್ದತಿಗಳಲ್ಲಿ ಒಂದು ಪ್ರಮುಖ ಪಾತ್ರ ವಹಿಸುತ್ತದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆಸಲ್ಪಡುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ. ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮಹೇಂದ್ರ ಸಿಂಗ್ ಧೋನಿ, MS ಧೋನಿ ಎಂದೂ ಸಂಕ್ಷ್ತಿಪ್ತ ರೂಪದಲ್ಲಿ ಕರೆಯಲಾಗುತ್ತದೆ. pronunciation (ಹಿಂದಿ:महेन्द्र सिंह धोनी) (ಜನನ ಬಿಹಾರದ ರಾಂಚಿಯಲ್ಲಿ 7 ಜುಲೈ 1981ರಂದು) (ಈಗಿನ ಜಾರ್ಖಂಡ್) ಇವರು ಭಾರತದ ಕ್ರಿಕೆಟಿಗ ಮತ್ತು ಭಾರತ ಕ್ರಿಕೆಟ್ ತಂಡದ ಪ್ರಸ್ತುತ ನಾಯಕರಾಗಿದ್ದಾರೆ. ಆರಂಭದಲ್ಲಿ ಅತಿ ಅಬ್ಬರದ ಮತ್ತು ಆಕ್ರಮಣಕಾರಿ ಬ್ಯಾಟ್ಸ್ಮ್ಯಾನ್ ಎಂದು ಗುರುತಿಸಿಕೊಂಡರೂ ಸಹ, ನಂತರ ಧೋನಿಯು ಭಾರತದ ಏಕದಿನ (ODI) ತಂಡದ ಶಾಂತ ಸ್ವಭಾವದ ನಾಯಕರಲ್ಲಿ ಒಬ್ಬರಂತೆ ಗುರ್ತಿಸಲ್ಪಡುತ್ತಾರೆ.
ಭಗತ್ ಸಿಂಗ್(೧೯೦೭–೧೯೩೧) ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಭಾರತದ ಮೊದಲ ಮಾರ್ಕ್ಸಿಸ್ಟ್ ಗಳಲ್ಲೊಬ್ಬರು. ಭಗತ್ ಸಿಂಗ್ ಅವರು ಸೆಪ್ಟೆಂಬರ್ ೨೭, ೧೯೦೭ರಲ್ಲಿ ಪಂಜಾಬ್ ಲಾಯಲ್ ಪುರ ಜಿಲ್ಲೆಯ 'ಬಾಂಗಾ' ಎಂಬ ಹಳ್ಳಿಯ ಸಿಖ್ ಸಮುದಾಯದ ಸರ್ದಾರ್ ಕಿಶನ್ ಸಿಂಗ್ ಮತ್ತು ವಿದ್ಯಾವತಿಯವರಿಗೆ ಜನಿಸಿದರು. ಜಲಿಯನ್ ವಾಲಾ ಬಾಗ್ ದುರಂತದಿಂದ ಪ್ರಭಾವಿತರಾದ ಇವರು ಸ್ವಾತಂತ್ರ ಸಂಗ್ರಾಮಕ್ಕೆ ಧುಮುಕಿದರು.
ಸಿಂಧೂ ನದಿಗೆ ಸೇರುವ ಅದರ ಉಪನದಿಗಳಾದ ಝೀಲಮ್ (ವಿತ್ರಸ್ತ), ಚೀನಾಬ್ (ಅಶಿಕ್ನಿ), ರಾವಿ (ಪರುಷ್ನೀ), ಬೀಯಾಸ್ (ವಿಪಾಶ) ಮತ್ತು ಸಟ್ಲೆಜ್ (ಶತದ್ರು) ಎಂಬ ಐದು ನದಿಗಳ ಈ ಪ್ರದೇಶ ಎರಡು ವಿಭಿನ್ನ ಸಂಸ್ಕೃತಿಗಳ ಆಗರವಾಗಿದ್ದರೂ ಇವುಗಳ ನಡುವೆ ಅತಿಶಯವಾಗಿ ಸಂಬಂಧಗಳಿವೆ. ಮಿಟ್ನೆ, ಖೈಬರ್, ಪೀವರ್ ಮತ್ತು ಬೊಲಾನ್ ಕಣಿವೆಗಳು ವಾಯುವ್ಯದಲ್ಲಿ ಹಿಮಾಲಯದ ಆಚೆ ಇರುವ ದೇಶಗಳೊಡನ ಸಂಬಂಧವನ್ನು ಕಲ್ಪಿಸಿವೆ. ಶತಮಾನಗಳಿಂದಲೂ ಪಾಶ್ಚಾತ್ಯ ಜನರು ಸತತವಾಗಿ ಈ ಪ್ರದೇಶದ ಮೂಲಕ ಹಾದು ಭಾರತಕ್ಕೆ ಬಂದಿದ್ದಾರೆ.
ಏಡ್ಸ್ (ಅಕ್ವೈರ್ಡ್ ಇಮ್ಯೂನ್ ಡಿಫಿಷಿಯನ್ಸಿ ಸಿಂಡ್ರೊಮ್ ಅಥವಾ ಅಕ್ವೈರ್ಡ್ ಇಮ್ಯುನೊ ಡಿಫಿಷಿಯನ್ಸಿ ಸಿಂಡ್ರೋಮ್) ಎಚ್ಐವಿ (ಹ್ಯೂಮನ್ ಇಮ್ಯುನೊ ಡಿಫಿಷಿಯನ್ಸಿ ವೈರಸ್) ಎಂಬ ವೈರಸ್ ಉಂಟಾಗುವ ಲಕ್ಷಣವಾಗಿದ್ದು ಇದು. ಅನಾರೋಗ್ಯ, ನಿರೋಧಕ ವ್ಯವಸ್ಥೆಯ ಬದಲಾಯಿಸುತ್ತದೆ ಹೆಚ್ಚು ದುರ್ಬಲ ಸೋಂಕುಗಳು ಮತ್ತು ರೋಗಗಳಿಗೆ ಜನರು ಮಾಡುವ. ಸಿಂಡ್ರೋಮ್ ಮುಂದುವರೆದಂತೆ ಈ ಪ್ರಭಾವಕ್ಕೆ ಹಾಳಾಗುತ್ತದೆ.ಎಚ್ಐವಿ ಸೋಂಕಿತ ವ್ಯಕ್ತಿಯನ್ನು (ವೀರ್ಯ ಮತ್ತು ಯೋನಿ ದ್ರವಗಳು, ರಕ್ತ ಮತ್ತು ಎದೆ ಹಾಲು) ದೇಹದ ದ್ರವಗಳು ಕಂಡುಬರುತ್ತದೆ.
ಬಹ್ರೇನ್ , ಅಧಿಕೃತವಾದ ಬಹ್ರೇನ್ ರಾಜ್ಯ (ಅರೇಬಿಕ್: مملكة البحرين, Mamlakat al-Baḥrayn, ವಾಸ್ತವವಾಗಿ: "ಎರಡು ಸಮುದ್ರಗಳ ರಾಜ್ಯ") ಒಂದು ಸಣ್ಣ ದ್ವೀಪಗಳ ರಾಷ್ಟ್ರ ಪರ್ಷಿಯನ್ ಗಲ್ಫ್ನಲ್ಲಿ ಅಲ್ ಖಲೀಫಾ ರಾಯಲ್ ಪ್ಯಾಮಿಲಿ ಯಿಂದ ಆಳಲ್ಪಡುತ್ತಿತ್ತು. ಸೌದಿ ಅರೇಬಿಯಾ ಪಶ್ಚಿಮಕ್ಕೆ ನೆಲೆನಿಂತಿದೆ ಮತ್ತು ಕಿಂಗ್ ಫಾಹ್ದ ಕಾಸ್ವೇ ಮಾರ್ಗವು ಬಹ್ರೇನ್ಗೆ ಸಂಪರ್ಕಿಸುತ್ತದೆ, ಅದನ್ನು 25 ನವೆಂಬರ್ 1986 ರಂದು ಅಧಿಕೃತವಾಗಿ ತೆರೆಯಲಾಯಿತು. ಖತಾರ್ ಗೆ ಆಗ್ನೇಯ ದಿಕ್ಕಿಗೆ ಬಹ್ರೇನ್ ಗಲ್ಫ್ ಇದೆ.
ಕ್ರಿಕೆಟ್ ಎಂಬುದು ದಾಂಡು ಮತ್ತು ಚೆಂಡುಗಳ ಆಟ ಬ್ಯಾಟ್ ಮತ್ತು ಚೆಂಡುಗಳಿಗೆ ಸಂಬಂಧಪಟ್ಟ ಪಂಗಡದ ಆಟವೆಂದೂ ಹಾಗೂ ೧೬ನೇ ಶತಮಾನದಲ್ಲಿ ದಕ್ಷಿಣ ಇಂಗ್ಲೆಂಡಿನಲ್ಲಿ ಆಡಲ್ಪಟ್ಟಿದ್ದು ಎಂಬ ಬಗ್ಗೆ ಆಧಾರವಿದೆ.೧೮ನೇಯ ಶತಮಾನದ ಅಂತ್ಯದ ಸಮಯದಲ್ಲಿ ಕ್ರಿಕೆಟ್ ಇಂಗ್ಲೆಂಡಿನ ರಾಷ್ಟ್ರೀಯ ಕ್ರೀಡೆಯಾಗಿ ಅಭಿವೃದ್ಧಿ ಹೊಂದಿತ್ತು. ಬ್ರಿಟೀಷ್ ಸಾಮ್ರಾಜ್ಯದ ವಿಸ್ತರಣೆಯು ಸಮುದ್ರದಾಚೆಗಿನ ದೇಶಗಳೊಡನೆ ಕ್ರಿಕೆಟ್ ಅಡಲು ಅನುವು ಮಾಡಿಕೊಟ್ಟಿತು ಮತ್ತು ಹತ್ತೊಂಬತ್ತನೆಯ ಶತಮಾನದ ಮಧ್ಯಭಾಗದಲ್ಲಿ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನು ನಡೆಸಲಾಗಿತ್ತು.ಇಂದು ಆಟಗಳ ಆಡಳಿತಾತ್ಮಕ ಅಂಗವಾದ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ೧೦೪ ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿದೆ. ಆಟದ ನಿಯಮಾವಳಿಗಳು ಕ್ರಿಕೆಟ್ನ ಕಾನೂನುಗಳು ಎಂದು ಪರಿಚಿತವಾಗಿವೆ.