The most-visited ಕನ್ನಡ Wikipedia articles, updated daily. Learn more...
ಯಾವ ಭವ್ಯ ಭಾರತ ಇಸ್ಲಾಮೀ ಭಯೋತ್ಪಾದಕರ ದಾಳಿ, ದೌರ್ಜನ್ಯದ ಆಡಳಿತದವಯಲ್ಲಿ ನಲುಗುತ್ತಿತ್ತೋ, ಯಾವ ಹಿಂದೂಸ್ತಾನದ ಹಿಂದೂಗಳನ್ನು ಪಶುಗಳಿಗಿಂತ ಕಡೆಯಾಗಿ ನಡೆಸಿಕೊಳ್ಳಲಾಗುತ್ತಿತ್ತೋ... ಅಂಥಾ ದೇಶದ ದಾಸ್ಯಮುಕ್ತಿಗಾಗಿ, ಸ್ವಾಭಿಮಾನಿ ಸ್ವತಂತ್ರ ಜೀವನಕ್ಕಾಗಿ, ಹಿಂದವೀ ಸ್ವರಾಜ್ಯದ ಸ್ಥಾಪನೆಗಾಗಿ ಹೋರಾಡಿದ ಮರ್ದ್ ಮರಾಠಾ ನಮ್ಮೆಲ್ಲರ ಹೆಮ್ಮೆಯ ವೀರ ಶಿವಾಜಿ. ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿ ಭೋಂಸ್ಲೆ (ಫೆಬ್ರುವರಿ ೧೯, ೧೬೩೦ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ಆರಂಭಗೊಂಡಿದ್ದರೂ, ಅದು ಹೆಚ್ಚು ಪ್ರಚಲಿತಕ್ಕೆ ಬಂದುದು ೨೦೧೫-೨೦೧೬ನೇ ಸಾಲಿನಲ್ಲಿ. (ಆಂಗ್ಲ:Clean India Mission)ಇದು ಭಾರತ ಸರ್ಕಾರದ ಅಭಿಯಾನವಾಗಿದ್ದೂ, ರಸ್ತೆ, ಬೀದಿ ಹಾಗೂ ಮೂಲಸೌಕರ್ಯಗಳ ನಿರ್ಮಲೀಕರಣಕ್ಕಾಗಿ ಆರಂಭಿಸಲಾಗಿದೆ . .ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1509-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಜಾಗತಿಕ ತಾಪಮಾನ ನಿಯಂತ್ರಣ ಜಾಗತಿಕ ತಾಪಮಾನ ಏರಿಕೆ ಯೆಂದರೆ 20ನೇ ಶತಮಾನದ ಮಧ್ಯಭಾಗದಲ್ಲಿ ಭೂಮಿಯ ಮೇಲ್ಮೈ-ಸಮೀಪದಲ್ಲಿರುವ ವಾಯು ಮತ್ತು ಸಾಗರ ಪ್ರದೇಶಗಳಲ್ಲಿ ಆದ ಸರಾಸರಿ ತಾಪಮಾನದ ಏರಿಕೆ ಹಾಗೂ ಅದರ ಪ್ರಕ್ಷೇಪಿತ ಮುಂದುವರಿಕೆ. ಜಾಗತಿಕ ಮೇಲ್ಮೈ ಉಷ್ಣತೆಯು ಕಳೆದ ಶತಮಾನದಲ್ಲಿ 0.74 ± 0.18 °C (1.33 ± 0.32 °F)ರಷ್ಟು ಹೆಚ್ಚಿದೆ. ಹವಾಮಾನ ಬದಲಾವಣೆಯ ಕುರಿತಾದ ಅಂತರ-ಸರಕಾರಿ ಮಂಡಳಿಯು (IPCC) ಅಗೆದು ತೆಗೆದ ಇಂಧನಗಳು ಮತ್ತು ಅರಣ್ಯನಾಶಗಳಂತಹಾ ಮಾನವ ಚಟುವಟಿಕೆಗಳಿಂದಾದ ಹಸಿರುಮನೆ ಅನಿಲಗಳ ಸಂಗ್ರಹದ ಹೆಚ್ಚಳವು 20ನೇ ಶತಮಾನ ದ ಮಧ್ಯಕಾಲದ ನಂತರದ ತಾಪಮಾನ ಏರಿಕೆಗೆ ಕಾರಣವೆಂದು ತೀರ್ಮಾನಕ್ಕೆ ಬಂದಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಮಾಧ್ಯಮ ಅಥವಾ ಸಮೂಹ ಮಾಧ್ಯಮ ಎಂದು ಸಾಮಾನ್ಯವಾಗಿ ಪತ್ರಿಕೆ, ಬಾನುಲಿ ಮತ್ತು ದೂರದರ್ಶನಗಳನ್ನು ಸೇರಿಸಿ ಹೇಳುತ್ತಾರೆ. ಸಂಗೀತ, ನೃತ್ಯ, ನಾಟಕ, ಅಂತರ್ಜಾಲ ಕ್ಷೇತ್ರ, ಭಿತ್ತಿ ಚಿತ್ರ-ಪತ್ರ, ಜಾಹೀರಾತು, ಡಂಗುರ, ಸಿನಿಮಾ – ಇವುಗಳನ್ನೂ ಕೂಡ ಮಾಧ್ಯಮವನ್ನಾಗಿ ಪರಿಗಣಿಸಬಹುದು. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವು ಕಾರ್ಯನಿರ್ವಹಿಸುತ್ತದೆ.
ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚೆನ್ನಮ್ಮನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಕಂಪ್ಯೂಟರಿಗೆ ಊಡಿಸಲಾದ ದತ್ತಾಂಶವನ್ನು ನಿರ್ದಿಷ್ಟ ಹೆಜ್ಜೆಗಳಲ್ಲಿ ಸಂಸ್ಕರಿಸಲಾಗುತ್ತದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಅಮೆರಿಕ ಸಂಯುಕ್ತ ಸಂಸ್ಥಾನ ವು (ಸಾಮಾನ್ಯವಾಗಿ ಸಂಯುಕ್ತ ಸಂಸ್ಥಾನ , ಯುಎಸ್ , ಯುಎಸ್ಎ ಅಥವಾ ಅಮೆರಿಕಾ ಎಂದು ಕರೆಯಲ್ಪಡುವ) ಐವತ್ತು ರಾಜ್ಯಗಳು ಮತ್ತು ಒಳ ಆಡಳಿತದಲ್ಲಿ ಸ್ವತಂತ್ರವಾಗಿರುವ ಡಿಸ್ಟ್ರಿಕ್ಟ್ಯನ್ನೊಳಗೊಂಡ ಒಂದು ಸ್ವಾಯತ್ತ ಸಾಂವಿಧಾನಿಕ ಗಣರಾಜ್ಯ. ಬಹುತೇಕ ಕೇಂದ್ರ ಭಾಗದ ಉತ್ತರ ಅಮೆರಿಕಾದಲ್ಲಿ ಸ್ಥಿತವಾಗಿರುವ ಈ ದೇಶದ ಒತ್ತೊತ್ತಾಗಿರುವ 48 ರಾಜ್ಯಗಳು ಹಾಗೂ ಪ್ರಧಾನ ಡಿಸ್ಟ್ರಿಕ್ಟ್ ವಾಷಿಂಗ್ಟನ್ ಡಿಸಿ, ಪೆಸಿಫಿಕ್ ಹಾಗೂ ಅಟ್ಲಾಂಟಿಕ್ ಸಮುದ್ರಗಳ ನಡುವೆ ನೆಲೆಗೊಂಡಿದ್ದು, ಉತ್ತರದಲ್ಲಿ ಕೆನಡಾ ಹಾಗೂ ದಕ್ಷಿಣದಲ್ಲಿ ಮೆಕ್ಸಿಕೋಗಳನ್ನು ಗಡಿಗಳಾಗಿ ಹೊಂದಿದೆ. ಅಲಾಸ್ಕಾ ರಾಜ್ಯವು ವಾಯುವ್ಯ ಭಾಗದಲ್ಲಿದ್ದು, ಕೆನಡಾವನ್ನು ಉತ್ತರ ದಿಕ್ಕಿನಲ್ಲೂ ಬೇರಿಂಗ್ ಜಲಸಂಧಿಯನ್ನು ಹಾದು ರಷ್ಯಾವನ್ನು ಪಶ್ಚಿಮ ದಿಕ್ಕಿನಲ್ಲೂ ಹೊಂದಿದೆ.
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ದೂರದರ್ಶನ ಪ್ರಕಟಣೆ ಅಥವಾ ದೂರದರ್ಶನ ಜಾಹೀರಾತುಗಳು , ಅನೇಕ ವೇಳೆ ಕೇವಲ ಜಾಹೀರಾತು, ಪ್ರಸ್ತಾವ, ಆಡ್ ಅಥವಾ ಆಡ್-ಫಿಲ್ಮ್ (ಇಂಡಿಯಾ)-ಇದು ಒಂದು ಸಂಸ್ಥೆಯಿಂದ ವೀಕ್ಷಕರಿಗೆ ಒಂದು ಸಂದೇಶ ವನ್ನು ರವಾನಿಸುವ ಸಲುವಾಗಿ ನಿರ್ಮಿಸಲ್ಪಟ್ಟ ಮತ್ತು ಅದಕ್ಕಾಗಿ ಹಣ ನೀಡಲ್ಪಟ್ಟ ಒಂದು ದೂರದರ್ಶನ ಕಾರ್ಯಕ್ರಮವಾಗಿದೆ. ಜಾಹೀರಾತು ನಿರ್ಮಾಣದ ಗುರು ಹ್ಯಾಡ್ಲಿಯವರ ಪ್ರಕಾರ ಜಾಹೀರಾತು ಪ್ರದರ್ಶನಕ್ಕೆ ಯರೊಬ್ಬರೂ ಕೂಡ ಎಮ್ಪಿಟಿ ಯ ಅಧ್ಯಯನ ಮಾಡುವ ಅವಶ್ಯಕತೆಯಿಲ್ಲ. ಜಾಹೀರಾತು ಆದಾಯವು ಹೆಚ್ಚ ಖಾಸಗಿ ಮಾಲಿಕತ್ವದಲ್ಲಿರುವ ದೂರದರ್ಶನ ಸಂಪರ್ಕಜಾಲಗಳಿಗೆ ಬಂಡವಾಳ ಹೂಡಿಕೆಗೆ ಗಣನೀಯ ಪ್ರಮಾಣದ ಆದಾಯವನ್ನು ಒದಗಿಸುತ್ತದೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ಏಡ್ಸ್ (ಅಕ್ವೈರ್ಡ್ ಇಮ್ಯೂನ್ ಡಿಫಿಷಿಯನ್ಸಿ ಸಿಂಡ್ರೊಮ್ ಅಥವಾ ಅಕ್ವೈರ್ಡ್ ಇಮ್ಯುನೊ ಡಿಫಿಷಿಯನ್ಸಿ ಸಿಂಡ್ರೋಮ್) ಎಚ್ಐವಿ (ಹ್ಯೂಮನ್ ಇಮ್ಯುನೊ ಡಿಫಿಷಿಯನ್ಸಿ ವೈರಸ್) ಎಂಬ ವೈರಸ್ ಉಂಟಾಗುವ ಲಕ್ಷಣವಾಗಿದ್ದು ಇದು. ಅನಾರೋಗ್ಯ, ನಿರೋಧಕ ವ್ಯವಸ್ಥೆಯ ಬದಲಾಯಿಸುತ್ತದೆ ಹೆಚ್ಚು ದುರ್ಬಲ ಸೋಂಕುಗಳು ಮತ್ತು ರೋಗಗಳಿಗೆ ಜನರು ಮಾಡುವ. ಸಿಂಡ್ರೋಮ್ ಮುಂದುವರೆದಂತೆ ಈ ಪ್ರಭಾವಕ್ಕೆ ಹಾಳಾಗುತ್ತದೆ.ಎಚ್ಐವಿ ಸೋಂಕಿತ ವ್ಯಕ್ತಿಯನ್ನು (ವೀರ್ಯ ಮತ್ತು ಯೋನಿ ದ್ರವಗಳು, ರಕ್ತ ಮತ್ತು ಎದೆ ಹಾಲು) ದೇಹದ ದ್ರವಗಳು ಕಂಡುಬರುತ್ತದೆ.
ವಿಜ್ಞಾನವು ಬ್ರಹ್ಮಾಂಡದ ಬಗ್ಗೆ ಪರೀಕ್ಷಣೀಯ ವಿವರಣೆಗಳು ಮತ್ತು ಭವಿಷ್ಯವಾಣಿಗಳ ರೂಪದಲ್ಲಿ ಜ್ಞಾನವನ್ನು ನಿರ್ಮಿಸುವ ಮತ್ತು ಸಂಘಟಿಸುವ ಒಂದು ವ್ಯವಸ್ಥಿತ ಯೋಜನೆ.. ಮಾನವನಿಂದ ತಿಳಿಯಬಲ್ಲ ವಿಶ್ವದ ಬಗೆಗಿನ ಜ್ಞಾನದ ಸಮೂಹವೆ ವಿಜ್ಞಾನ. ಒಂದು ಹಳೆಯ ಮತ್ತು ನಿಕಟವಾಗಿ ಸಂಬಂಧಿತ ಅರ್ಥದಲ್ಲಿ, "ವಿಜ್ಞಾನ"ವು, ತಾರ್ಕಿಕವಾಗಿ ವಿವರಿಸಬಲ್ಲ ಮತ್ತು ವಿಶ್ವಾಸಾರ್ಹವಾಗಿ ಅನ್ವಯಿಸಬಲ್ಲ ಪ್ರಕಾರದ, ಜ್ಞಾನದ ಮಂಡಲವನ್ನೇ ನಿರ್ದೇಶಿಸುತ್ತದೆ.
ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
ತಂತ್ರಜ್ಞಾನವು ಒಂದು ಜೀವಜಾತಿಯಿಂದ ಉಪಕರಣಗಳು ಹಾಗೂ ಕುಶಲಕರ್ಮಗಳ ಬಳಕೆ ಮತ್ತು ಜ್ಞಾನಕ್ಕೆ ಸಂಬಂಧಿಸಿರುವ, ಮತ್ತು ಒಂದು ಜೀವಜಾತಿಯ ಪರಿಸರವನ್ನು ನಿಯಂತ್ರಿಸಲು ಹಾಗೂ ಅದಕ್ಕೆ ಹೊಂದಿಕೊಳ್ಳಲು ಜೀವಜಾತಿಯ ಸಾಮರ್ಥ್ಯದ ಮೇಲೆ ಅದು ಹೇಗೆ ಪರಿಣಾಮ ಬೀರುತ್ತದೆಂಬುದನ್ನು ತಿಳಿಸುವ ಒಂದು ವಿಶಾಲವಾದ ಪರಿಕಲ್ಪನೆಯಾಗಿದೆ. ಆದರೆ, ಒಂದು ನಿಖರವಾದ ವ್ಯಾಖ್ಯಾನ ಸಾಧ್ಯವಿಲ್ಲ; "ತಂತ್ರಜ್ಞಾನವು" ಮಾನವಕುಲಕ್ಕೆ ಉಪಯುಕ್ತವಾಗಿರುವ ಯಂತ್ರಗಳು, ಯಂತ್ರಾಂಶ ಅಥವಾ ಗೃಹೋಪಕರಣಗಳಂತಹ ಭೌತಿಕ ವಸ್ತುಗಳನ್ನು ನಿರ್ದೇಶಿಸಬಹುದು, ಆದರೆ, ವ್ಯವಸ್ಥೆಗಳು, ಸಂಘಟನೆಯ ವಿಧಾನಗಳು, ಮತ್ತು ತಂತ್ರಗಳ ಸಹಿತ ಹೆಚ್ಚು ವಿಶಾಲವಾದ ವಿಷಯಗಳನ್ನೂ ಒಳಗೊಳ್ಳಬಹುದು. ಒಂದು ಸಮಸ್ಯೆಯನ್ನು ಪರಿಹರಿಸಲು ಸಲುವಾಗಿ , ಒಂದು ಸಮಸ್ಯೆಗೆ ಮೊದಲೇ ಅಸ್ತಿತ್ವದಲ್ಲಿರುವ ಪರಿಹಾರ ಸುಧಾರಿಸಲು ಒಂದು ಗುರಿಯನ್ನು ಸಾಧಿಸಲು , ಒಂದು ಅನ್ವಯಿಕ ಇನ್ಪುಟ್ ಔಟ್ಪುಟ್ ಸಂಬಂಧಿಸಿದಂತೆ ನಿರ್ವಹಿಸಲು ಅಥವಾ ಒಂದು ನಿರ್ದಿಷ್ಟ ಕಾರ್ಯ ನಿರ್ವಹಿಸಲು.
ಫ್ರಾನ್ಸ್ ಪಶ್ಚಿಮ ಯೂರೋಪಿನಲ್ಲಿರುವ ದೇಶ.ಇದು ಯುರೋಪ್ ಖಂಡದ ಮೂರನೆಯ ಅತ್ಯಂತ ದೊಡ್ಡ ದೇಶ.ಇದು ಯುರೋಪಿನ ಒಂದು ಬಲಾಡ್ಯ ದೇಶವಾಗಿದೆ.ಇದು ಪ್ರಪಂಚದ ಹಲವೆಡೆ ತನ್ನ ವಸಾಹತುಗಳನ್ನು ಸ್ಥಾಪಿಸಿ ಹತ್ತಂಭತ್ತನೆಯ ಶತಮಾನ ಮತ್ತು ೨೦ನೆಯ ಶತಮಾನದ ಮೊದಲ ಭಾಗದಲ್ಲಿ ಅತ್ಯಂತ ಪ್ರಭಾವಶಾಲಿಯಾಗಿತ್ತು.ಸಾಂಸ್ಕೃತಿಕವಾಗಿ ಹಲವಾರು ಚಿಂತಕರು, ಕಲಾವಿದರು,ವಿಜ್ಞಾನಿಗಳನ್ನು ಹೊಂದಿ ಈಗಲೂ ಪ್ರಪಂಚದ ಗಮನಸೆಳೆಯುತ್ತಿದೆ. ಪ್ರಪಂಚದಲ್ಲಿ ನಾಲ್ಕನೆಯದಾಗಿ ಅತೀ ಹೆಚ್ಚು ಪಾರಂಪರಿಕ ತಾಣಗಳಿದ್ದು, ವರ್ಷಕ್ಕೆ ೮ ಕೊಟಿಗಿಂತಲೂ ಹೆಚ್ಚು ಪ್ರವಾಸಿಗಳನ್ನು ಸೆಳೆಯುತ್ತಿದೆ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಕನ್ನಡ ಸಾಹಿತ್ಯ ಅನೇಕ ಪ್ರಕಾರಗಳಿಂದ ಶ್ರೀಮಂತವಾಗಿದೆ. ಸಾಹಿತ್ಯ ಪ್ರಕಾರದ ಸ್ವರೂಪ,ರಚನೆ(structure) ಆಧಾರದ ಮೇಲೆ ಈ ಕೆಳಕಂಡಂತೆ ವಿಂಗಡಿಸಬಹುದು.ಕನ್ನಡ ಸಾಹಿತ್ಯವೇ ಬೇರೆ -ಕನ್ನಡ ಸಾಹತ್ಯ ಪ್ರಕಾರಗಳೇ ಬೇರೆ ಆದ್ದರಿಂದ ಕನ್ನಡ ಸಾಹಿತ್ಯಕ್ಕೆ ಬೇರೆ ಶೀರ್ಶಿಕೆ ಕೊಡುವುದೇ ಉಚಿತ. ಸಾಹಿತ್ಯದ ವಿಷಯ ದೊಡ್ಡದು .ಅದರಲ್ಲಿ ಪ್ರಾಚೀನ ಸಾಹಿತ್ಯದಿಂದ ಅರ್ವಾಚೀನ ಸಾಹಿತ್ಯ ಎಲ್ಲಾ ವಿಷಯಗಳನ್ನು ಹಾಕಬಹುದು.
ಪರಿಸರ ಇದೇ ಲೇಖನ. ಪರಿಸರ ವ್ಯವಸ್ಥೆ ಎಂಬ ಪದವು ಪರಿಸರವೊಂದರ ಸಂಯೋಜಿತ ಭೌತಿಕ ಮತ್ತು ಜೈವಿಕ ಘಟಕಗಳಿಗೆ ಅನ್ವಯಿಸುತ್ತದೆ. ಒಂದು ಪರಿಸರ ವ್ಯವಸ್ಥೆಯು ಸಾಮಾನ್ಯವಾಗಿ ಸ್ವಾಭಾವಿಕ ಪರಿಸರದೊಳಗಿನ ಒಂದು ಪ್ರದೇಶವಾಗಿದ್ದು, ಬಂಡೆಗಳು ಮತ್ತು ಮಣ್ಣಿನಂಥ ಪರಿಸರದ ಭೌತಿಕ (ಅಜೀವಕ) ಅಂಶಗಳು, ಸಸ್ಯಗಳು ಮತ್ತು ಪ್ರಾಣಿಗಳಂಥ ಸ್ವತಂತ್ರ (ಜೈವಿಕ) ಜೀವಿಗಳೊಂದಿಗೆ ಅದೇ ಸ್ವಾಭಾವಿಕ ನೆಲೆಯೊಳಗೆ ಒಟ್ಟಾಗಿ ಕಾರ್ಯನಿರ್ವಹಿಸುತ್ತವೆ.