The most-visited ಕನ್ನಡ Wikipedia articles, updated daily. Learn more...
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ಆರಂಭಗೊಂಡಿದ್ದರೂ, ಅದು ಹೆಚ್ಚು ಪ್ರಚಲಿತಕ್ಕೆ ಬಂದುದು ೨೦೧೫-೨೦೧೬ನೇ ಸಾಲಿನಲ್ಲಿ. (ಆಂಗ್ಲ:Clean India Mission)ಇದು ಭಾರತ ಸರ್ಕಾರದ ಅಭಿಯಾನವಾಗಿದ್ದೂ, ರಸ್ತೆ, ಬೀದಿ ಹಾಗೂ ಮೂಲಸೌಕರ್ಯಗಳ ನಿರ್ಮಲೀಕರಣಕ್ಕಾಗಿ ಆರಂಭಿಸಲಾಗಿದೆ . .ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ gfhvಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ಏಡ್ಸ್ (ಅಕ್ವೈರ್ಡ್ ಇಮ್ಯೂನ್ ಡಿಫಿಷಿಯನ್ಸಿ ಸಿಂಡ್ರೊಮ್ ಅಥವಾ ಅಕ್ವೈರ್ಡ್ ಇಮ್ಯುನೊ ಡಿಫಿಷಿಯನ್ಸಿ ಸಿಂಡ್ರೋಮ್) ಎಚ್ಐವಿ (ಹ್ಯೂಮನ್ ಇಮ್ಯುನೊ ಡಿಫಿಷಿಯನ್ಸಿ ವೈರಸ್) ಎಂಬ ವೈರಸ್ ಉಂಟಾಗುವ ಲಕ್ಷಣವಾಗಿದ್ದು ಇದು. ಅನಾರೋಗ್ಯ, ನಿರೋಧಕ ವ್ಯವಸ್ಥೆಯ ಬದಲಾಯಿಸುತ್ತದೆ ಹೆಚ್ಚು ದುರ್ಬಲ ಸೋಂಕುಗಳು ಮತ್ತು ರೋಗಗಳಿಗೆ ಜನರು ಮಾಡುವ. ಸಿಂಡ್ರೋಮ್ ಮುಂದುವರೆದಂತೆ ಈ ಪ್ರಭಾವಕ್ಕೆ ಹಾಳಾಗುತ್ತದೆ.ಎಚ್ಐವಿ ಸೋಂಕಿತ ವ್ಯಕ್ತಿಯನ್ನು (ವೀರ್ಯ ಮತ್ತು ಯೋನಿ ದ್ರವಗಳು, ರಕ್ತ ಮತ್ತು ಎದೆ ಹಾಲು) ದೇಹದ ದ್ರವಗಳು ಕಂಡುಬರುತ್ತದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಕಂಪ್ಯೂಟರ್ ಒಳರವಾನೆ ಸಂಸ್ಕರಣೆ ಹಾಗೂ ಹೊರರವಾನೆ ಸಾಧನಗಳನ್ನು ಹೊಂದಿದ್ದು ಒಳರವಾನೆ ಸಾಧನಗಳ ಮೂಲಕ ನೀಡಿದಂತಹ ಮಾಹಿತಿಯನ್ನು ಸಂಸ್ಕರಿಸಿ ಹೊರರವಾನೆ ಸಾಧನಗಳ ಮೂಲಕ ಉಪಯೋಗಿ(ಯೂಜರ್)ಗೆ ನೀಡುವುದಲ್ಲದೇ ಮಾಹಿತಿ ಮತ್ತು ದತ್ತಾಂಶಗಳನ್ನು ಶೇಖರಿಸಿಡಬಹುದಾದ ಸಾಧನವಾಗಿರುತ್ತದೆ ಅಲ್ಲದೇ ಶೇಖರಿಸಿಟ್ಟ ಅಥವಾ ನಾವು ನೀಡಿದಂತಹಾ ಮಾಹಿತಿಯನ್ನು ಒಂದು ಗಣಕಯಂತ್ರ ದಿಂದ ಮತ್ತೊಂದು ಗಣಕಯಂತ್ರಕ್ಕೆ ಸಂಪರ್ಕಜಾಲದ ಮೂಲಕ ನಮ್ಮ ಆದೇಶದ ಮೇರೆಗೆ ರವಾನಿಸುತ್ತದೆ..
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಕನ್ನಡ ಸಾಹಿತ್ಯ ಅನೇಕ ಪ್ರಕಾರಗಳಿಂದ ಶ್ರೀಮಂತವಾಗಿದೆ. ಸಾಹಿತ್ಯ ಪ್ರಕಾರದ ಸ್ವರೂಪ,ರಚನೆ(structure) ಆಧಾರದ ಮೇಲೆ ಈ ಕೆಳಕಂಡಂತೆ ವಿಂಗಡಿಸಬಹುದು.ಕನ್ನಡ ಸಾಹಿತ್ಯವೇ ಬೇರೆ -ಕನ್ನಡ ಸಾಹತ್ಯ ಪ್ರಕಾರಗಳೇ ಬೇರೆ ಆದ್ದರಿಂದ ಕನ್ನಡ ಸಾಹಿತ್ಯಕ್ಕೆ ಬೇರೆ ಶೀರ್ಶಿಕೆ ಕೊಡುವುದೇ ಉಚಿತ. ಸಾಹಿತ್ಯದ ವಿಷಯ ದೊಡ್ಡದು .ಅದರಲ್ಲಿ ಪ್ರಾಚೀನ ಸಾಹಿತ್ಯದಿಂದ ಅರ್ವಾಚೀನ ಸಾಹಿತ್ಯ ಎಲ್ಲಾ ವಿಷಯಗಳನ್ನು ಹಾಕಬಹುದು.
ಜಾಗತಿಕ ತಾಪಮಾನ ನಿಯಂತ್ರಣ ಜಾಗತಿಕ ತಾಪಮಾನ ಏರಿಕೆ ಯೆಂದರೆ 20ನೇ ಶತಮಾನದ ಮಧ್ಯಭಾಗದಲ್ಲಿ ಭೂಮಿಯ ಮೇಲ್ಮೈ-ಸಮೀಪದಲ್ಲಿರುವ ವಾಯು ಮತ್ತು ಸಾಗರ ಪ್ರದೇಶಗಳಲ್ಲಿ ಆದ ಸರಾಸರಿ ತಾಪಮಾನದ ಏರಿಕೆ ಹಾಗೂ ಅದರ ಪ್ರಕ್ಷೇಪಿತ ಮುಂದುವರಿಕೆ. ಜಾಗತಿಕ ಮೇಲ್ಮೈ ಉಷ್ಣತೆಯು ಕಳೆದ ಶತಮಾನದಲ್ಲಿ 0.74 ± 0.18 °C (1.33 ± 0.32 °F)ರಷ್ಟು ಹೆಚ್ಚಿದೆ. ಹವಾಮಾನ ಬದಲಾವಣೆಯ ಕುರಿತಾದ ಅಂತರ-ಸರಕಾರಿ ಮಂಡಳಿಯು (IPCC) ಅಗೆದು ತೆಗೆದ ಇಂಧನಗಳು ಮತ್ತು ಅರಣ್ಯನಾಶಗಳಂತಹಾ ಮಾನವ ಚಟುವಟಿಕೆಗಳಿಂದಾದ ಹಸಿರುಮನೆ ಅನಿಲಗಳ ಸಂಗ್ರಹದ ಹೆಚ್ಚಳವು 20ನೇ ಶತಮಾನ ದ ಮಧ್ಯಕಾಲದ ನಂತರದ ತಾಪಮಾನ ಏರಿಕೆಗೆ ಕಾರಣವೆಂದು ತೀರ್ಮಾನಕ್ಕೆ ಬಂದಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1509-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
'ಡಾ. ಸರ್ವೆಪಲ್ಲಿ ರಾಧಾಕೃಷ್ಣನ್' [[೧]](Telugu: సర్వేపల్లి రాధాకృష్ణ, (Kannada: ಸರ್ವಪಲ್ಲಿ ರಾಧಾಕೃಷ್ಣನ್) (ಜನನ : ೫ ನೇ ಸೆಪ್ಟೆಂಬರ್, ೧೮೮೮.) ಇವರು ಶಿಕ್ಷಣದ ಬಗ್ಗೆ ಅತ್ಯಂತ ಗೌರವ, ಪ್ರೀತಿ, ನಿಷ್ಠೆಯನ್ನು ಹೊಂದಿದ್ದರು. ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆಗೈದಿರುವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರಲ್ಲಿ ಪ್ರಮುಖರಾಗಿದ್ದಾರೆ.
ತಾಜ್ ಮಹಲ್ (pronounced /tɑdʒ məˈhɑl/; ಹಿಂದಿ: ताज महल ; ಪರ್ಷಿಯನ್/ಉರ್ದು: تاج محل ) ಭಾರತದ ಆಗ್ರಾದಲ್ಲಿರುವ ಭವ್ಯ ಸಮಾಧಿಯಾಗಿದೆ. ಇದನ್ನು ಮೊಘಲ್ ಚಕ್ರವರ್ತಿ ಷಹ ಜಹಾನ್ ತನ್ನ ಮೆಚ್ಚಿನ ಪತ್ನಿ ಮಮ್ತಾಜ್ ಮಹಲ್ಳ ನೆನಪಿಗಾಗಿ ಕಟ್ಟಿಸಿದನು. ಪರ್ಷಿಯನ್, ಭಾರತೀಯ ಮತ್ತು ಮುಸ್ಲಿಂ ವಾಸ್ತುಶೈಲಿಗಳ ಸಮ್ಮಿಶ್ರಣವಾದ ಮೊಘಲ್ ವಾಸ್ತುಶೈಲಿಗೆ ತಾಜ್ ಮಹಲ್ ("ತಾಜ್" ಎಂದೂ ಕರೆಯಲ್ಪಡುತ್ತದೆ) ಅತ್ಯುತ್ತಮ ಉದಾಹರಣೆಯೆಂದು ಪರಿಗಣಿಸಲಾಗಿದೆ.
ಶಬ್ದ ಮಾಲಿನ್ಯ (ಅಥವಾ ವಾತಾವರಣದಲ್ಲಿನ ಸದ್ದು) ಮಾನವ ಅಥವಾ ಪ್ರಾಣಿಗಳ ಜೀವನದ ಮೇಲೆ ದುಃಪರಿಣಾಮ ಬೀರಿ ಅವುಗಳ ಜೀವನ ಚಟುವಟಿಕೆಯ ಸಮತೋಲಕ್ಕೆ ಭಂಗ ತರುವಂಥ , ಮನುಷ್ಯ-ಪ್ರಾಣಿ-ಯಂತ್ರಗಳಿಂದ ಹೊಮ್ಮಿ ಬರುವ ಸಪ್ಪಳಕ್ಕೆ 'ಶಬ್ದ ಮಾಲಿನ್ಯ' ಎನ್ನಲಾಗಿದೆ. ಸಾಮಾನ್ಯವಾಗಿ ಸಾರಿಗೆ, ಅದರಲ್ಲೂ ವಿಶೇಷವಾಗಿ ಮೋಟಾರ್ ವಾಹನಸಂಚಾರದಿಂದ ಹೊಮ್ಮುವ ಶಬ್ದ ಈ ಮಲಿನತೆಗೆ ತನ್ನ ಕಾಣಿಕೆ ನೀಡುತ್ತದೆ. ನಾಯ್ಸ್ ಎಂಬ ಪದ ಲ್ಯಾಟಿನ್ ಭಾಷೆಯ ನಾಸಿಯ very good ಎಂಬ ಪದದಿಂದ ವ್ಯುತ್ಪತ್ತಿ ಹೊಂದಿದೆ.
ಮಹಿಳೆಯರ ಸಂತಾನೋತ್ಪತ್ತಿ ವ್ಯವಸ್ಥೆ ಮಹಿಳೆಯರ ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ನಾಲ್ಕು ಮುಖ್ಯ ಭಾಗಗಳಿವೆ, ಯೋನಿ (ಗರ್ಭಕೊಳವೆ) ಗರ್ಭಕೋಶ ೨ ಅಂಡಾಶಯಗಳು ೨ ಫಲೋಪಿಯನ್ ಕೊಳವೆ ಈ ರೀತಿಯಾಗಿ ೪ ಅಂಡಾಶಯಗಳು ಹಲವಾರು ಮೊಟ್ಟೆಗಳನ್ನು ಹೊಂದಿರುತ್ತವೆ. ೧೦-೧೮ ವಯಸ್ಸಿನೊಳಗೆ ಈ ಅಂಡಗಳು ಬೆಳೆದು ಹಣ್ಣಾಗತೊಡಗುತ್ತವೆ. ಪ್ರತಿ ತಿಂಗಳು ಈ ಫಲೋಪಿಯನ್ ಕೊಳವೆಗಳ ಮೂಲಕ ಗಭ್ಯಯ ತಲುಪುವಂತೆ ಈ ಅಂಡಾಶಯಗಳು ಅಂಡಾಣುವನ್ನು ಬಿಡುಗಡೆ ಮಾಡುತ್ತವೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ನೋಡಿ:ವಾಯುಗುಣ ಬದಲಾವಣೆ ಹವಾಮಾನವು ವಾತಾವರಣದ ಸ್ಥಿತಿ, ಬಿಸಿ ಅಥವಾ ಶೀತಲ, ತೇವ ಅಥವಾ ಶುಷ್ಕ, ಶಾಂತ ಅಥವಾ ಬಿರುಗಾಳಿಯಿಂದ ಕೂಡಿದ, ನಿಚ್ಚಳ ಅಥವಾ ಮೋಡಕವಿದ ಅನ್ನುವಷ್ಟರ ಮಟ್ಟಿಗೆ. ಬಹುತೇಕ ಹವಾಮಾನ ವಿದ್ಯಮಾನಗಳು ಪರಿವರ್ತನ ಗೋಳದಲ್ಲಿ ಸಂಭವಿಸುತ್ತವೆ, ಸಮಗೋಳದ ಸ್ವಲ್ಪ ಕೆಳಗೆ. ಹವಾಮಾನವು ಸಾಮಾನ್ಯವಾಗಿ ದಿನನಿತ್ಯದ ಉಷ್ಣಾಂಶ ಮತ್ತು ಮಳೆ ಪ್ರಮಾಣವನ್ನು ನಿರ್ದೇಶಿಸಿದರೆ, ವಾಯುಗುಣವು ಸಮಯದ ದೀರ್ಘಾವಧಿಯಲ್ಲಿ ಸರಾಸರಿ ವಾತಾವರಣ ಸ್ಥಿತಿಗಳಿಗಾಗಿ ಬಳಸಲಾಗುವ ಪದ.
ತಂತ್ರ ಸಂಸ್ಕೃತ:तन्त्र; ನಿರಂತರತೆ ಯನ್ನು ಸೂಚಿಸುವ ಜಾಲ; ಆಂಗ್ಲದಲ್ಲಿ ತಾಂತ್ರಿಸಿಸಂ ಅಥವಾ ತಂತ್ರಿಸಂ ಅಥವಾ ತಂತ್ರಂ ಸಂಸ್ಕೃತ:तन्त्र ಎಂದು ಕರೆಯಲ್ಪಡುವ ತಂತ್ರವು ಒಂದು ತತ್ವಶಾಸ್ತ್ರವಾಗಿದ್ದು, ಇದರಲ್ಲಿ ಶಕ್ತಿಯು ಮುಖ್ಯದೇವತೆಯಾಗಿ ಪೂಜಿಸಲ್ಪಡುವುದಾಗಿದ್ದು ಇಡೀ ಜಗತ್ತು ಶಕ್ತಿ ಮತ್ತು ಶಿವ ನ ದಿವ್ಯಲೀಲೆಗೆ ಒಳಪಟ್ಟದ್ದೆಂದು ಸಾರುತ್ತದೆ; ಸಾಮಾನ್ಯವಾಗಿ ಶಕ್ತಿಪೂಜೆಗೆ ಸಂಬಂಧಿತವಾದ ಯಾವುದೇ ಧಾರ್ಮಿಕಗ್ರಂಥ("ತಂತ್ರಗಳು" ಎಂದು ಕರೆಯಲ್ಪಡುವ)ವನ್ನೂ ಸಹ ತಂತ್ರ ಎಂಬ ಪದದಿಂದಲೇ ಗುರುತಿಸಲಾಗುತ್ತದೆ. ತಂತ್ರವು ಮೂಲತಃ ಆಧ್ಯಾತ್ಮಿಕ ವಿಧಿವಿಧಾನಗಳು ಮತ್ತು ಪೂಜಾ ಆಚರಣೆಯ ಕ್ರಮಗಳನ್ನು ಅರುಹುತ್ತಾ ಮೌಢ್ಯ ಮತ್ತು ಪುನರ್ಜನ್ಮದಿಂದ ಮುಕ್ತಿ ಪಡೆಯಲು ಸಹಾಯಕವಾಗುತ್ತದೆ. ತಂತ್ರಿಸಂ ಹಿಂದೂ, ಸಿಖ್, ಬಾನ್, ಬೌದ್ಧ, ಮತ್ತು ಜೈನ ಮತಗಳ ಾಚರಣೆಗಳ ಮೇಲೆ ಪ್ರಭಾವ ಬೀರಿದೆ.
ಶಿಕ್ಷಣದ ಅರ್ಥ: ಶಿಕ್ಷಣ ಎಂಬ ಪದಕ್ಕೆ ವ್ಯಾಪಕವದ ಅರ್ಥವಿದೆ. ಆ ಅರ್ಥವನ್ನು ಹಿಡಿದಿಡುವ ಒಂದು ಸಮರ್ಥ ವ್ಯಾಖ್ಯೆಯನ್ನು ಅಥವಾ ನಿರ್ದಿಷ್ಟ್ಟವಾಗಿ ಇದೇ ಶಿಕ್ಷಣ ಎಂಬ ವ್ಯಾಖ್ಯೆಯನ್ನು ಕೊಡುವುದು ಕಷ್ಟ್ಟ .ತತ್ವಜ್ಞಾನಿಗಳು ಶಿಕ್ಷಣತಜ್ಞರು ,ರಾಜಕಾರಣಿಗಳು ಮತ್ತು ಸಾಧುಸಂತರು ಇನ್ನು ಮುಂತಾದವರೆಲ್ಲರೂ ತಮ್ಮ ತಮ್ಮ ದೃಷ್ಟಿ ಕೋನಗಳಿಗನುಗುಣವಾಗಿ ಶಿಕ್ಷಣವನ್ನು ವ್ಯಾಖ್ಯಾನಿಸಲು ಪ್ರಯತ್ನಿಸುತ್ತಿದ್ದಾರೆ. ಪ್ರತಿಯೊಂದು ಸಂಪೂರ್ಣವಲ್ಲದಿದ್ದರು ಶಿಕ್ಷಣದ ಬಗ್ಗೆ ಪರಿಗಣಿಸಬೇಕಾದ ಒಂದಲ್ಲ ಒಂದಂಶವನ್ನು ಎತ್ತಿ ಹಿಡಿಯುವದರಿಂದ ಶಿಕ್ಷಣದ ಯಾವುದೇ ವ್ಯಾಖ್ಯೆಯನ್ನು ತಳ್ಳಿಹಾಕುವಂತಿಲ್ಲ.
ಅಮೆರಿಕ ಸಂಯುಕ್ತ ಸಂಸ್ಥಾನ ವು (ಸಾಮಾನ್ಯವಾಗಿ ಸಂಯುಕ್ತ ಸಂಸ್ಥಾನ , ಯುಎಸ್ , ಯುಎಸ್ಎ ಅಥವಾ ಅಮೆರಿಕಾ ಎಂದು ಕರೆಯಲ್ಪಡುವ) ಐವತ್ತು ರಾಜ್ಯಗಳು ಮತ್ತು ಒಳ ಆಡಳಿತದಲ್ಲಿ ಸ್ವತಂತ್ರವಾಗಿರುವ ಡಿಸ್ಟ್ರಿಕ್ಟ್ಯನ್ನೊಳಗೊಂಡ ಒಂದು ಸ್ವಾಯತ್ತ ಸಾಂವಿಧಾನಿಕ ಗಣರಾಜ್ಯ. ಬಹುತೇಕ ಕೇಂದ್ರ ಭಾಗದ ಉತ್ತರ ಅಮೆರಿಕಾದಲ್ಲಿ ಸ್ಥಿತವಾಗಿರುವ ಈ ದೇಶದ ಒತ್ತೊತ್ತಾಗಿರುವ 48 ರಾಜ್ಯಗಳು ಹಾಗೂ ಪ್ರಧಾನ ಡಿಸ್ಟ್ರಿಕ್ಟ್ ವಾಷಿಂಗ್ಟನ್ ಡಿಸಿ, ಪೆಸಿಫಿಕ್ ಹಾಗೂ ಅಟ್ಲಾಂಟಿಕ್ ಸಮುದ್ರಗಳ ನಡುವೆ ನೆಲೆಗೊಂಡಿದ್ದು, ಉತ್ತರದಲ್ಲಿ ಕೆನಡಾ ಹಾಗೂ ದಕ್ಷಿಣದಲ್ಲಿ ಮೆಕ್ಸಿಕೋಗಳನ್ನು ಗಡಿಗಳಾಗಿ ಹೊಂದಿದೆ. ಅಲಾಸ್ಕಾ ರಾಜ್ಯವು ವಾಯುವ್ಯ ಭಾಗದಲ್ಲಿದ್ದು, ಕೆನಡಾವನ್ನು ಉತ್ತರ ದಿಕ್ಕಿನಲ್ಲೂ ಬೇರಿಂಗ್ ಜಲಸಂಧಿಯನ್ನು ಹಾದು ರಷ್ಯಾವನ್ನು ಪಶ್ಚಿಮ ದಿಕ್ಕಿನಲ್ಲೂ ಹೊಂದಿದೆ.
ಸಂವಹನ ವೆಂದರೆ ಅಸ್ತಿತ್ವದಲ್ಲಿರುವ ಒಂದು ವಸ್ತು ವಿನಿಂದ ಇನ್ನೊಂದಕ್ಕೆ ಮಾಹಿತಿ ವರ್ಗಾಯಿಸುವ ಪ್ರಕ್ರಿಯೆಯಾಗಿದೆ. ಸಂಪರ್ಕವೆಂದೂ ಸಹ ಹೇಳುವ ಇದು ತಿಳಿವಳಿಕೆಯನ್ನು ಮನದಟ್ಟು ಮಾಡುವ ಕಾರ್ಯವೂ ಆಗಿದೆ. ಸಂವಹನ ಪ್ರಕ್ರಿಯೆಗಳೆಂದರೆ ಸಂಕೇತಗಳ ಸಂಚಯ ಮತ್ತು ಸಂಕೇತ ಶಾಸ್ತ್ರದ ನಿಯಮಗಳೊಂದಿಗೆ, ಕನಿಷ್ಠ ಎರಡು ಪ್ರತಿನಿಧಿತ್ವಗಳ ನಡುವಿನ ಸಂಕೇತ-ಆಧರಿಸಿದ ಸಂಪರ್ಕದ ಕೊಂಡಿಯಾಗಿದೆ.
ಪುನೀತ್ ರಾಜಕುಮಾರ್ (ಇಂಗ್ಲಿಷ್: Puneet Rajkumar) (ಜನನ 1975 17 ಮಾರ್ಚ್) ಭಾರತೀಯ ಚಿತ್ರನಟ,ಹಿನ್ನೆಲೆ ಗಾಯಕ ಮತ್ತು ದೂರದರ್ಶನ ನಿರೂಪಕ ಪ್ರಾಥಮಿಕವಾಗಿ ಕನ್ನಡ ಸಿನಿಮಾ ರಂಗದಲ್ಲಿ ಕೆಲಸ ಮಾಡುತ್ತಾರೆ . ಪುನೀತ್ 26 ಚಲನಚಿತ್ರಗಳಲ್ಲಿ ನಾಯಕ ನಟನಾಗಿ ನಟನೆ ಮಾಡಿದ್ದಾರೆ .ಬಾಲ್ಯದಲ್ಲಿ ತನ್ನ ತಂದೆ ರಾಜಕುಮಾರ್ ಅಭಿನಯದ ಚಿತ್ರಗಳಲ್ಲಿ ಬಾಲ್ಯ ನಟನಾಗಿ ವಸಂತ ಗೀತಾ (1980), ಭಾಗ್ಯದಾತ (1981), ಚಲಿಸುವ ಮೋಡಗಳು (1982), ಎರಡು ನಕ್ಷತ್ರಗಳು (1983) ಮತ್ತು ಬೆಟ್ಟದ ಹೂವು (1985) ಅವರು ನಟಿಸಿದ ಚಿತ್ರಗಳ ನಟನೆಗೆ ಮೆಚ್ಚುಗೆ ಪಡೆದರು. ಅವರ ಬೆಟ್ಟದ ಹೂವು ಚಿತ್ರದ ರಾಮು ಪಾತ್ರದ ಬಾಲನಟನೆಗೆ ರಾಷ್ಟ್ರ ಚಲನಚಿತ್ರ ಪ್ರಶಸ್ತಿಗೆ ಪಾತ್ರರಾದರು.
ವನಸ್ಪತಿ ಯು ಸಾಂಪ್ರದಾಯಿಕ ಅಥವಾ ಜಾನಪದ ಔಷಧ ಪ್ರಕಾರವಾಗಿದ್ದು, ಇದು ಸಸ್ಯ ಮತ್ತು ಸಸ್ಯಜನ್ಯ ಸಾರ, ಸತ್ವಗಳ ಬಳಕೆಯನ್ನವಲಂಭಿಸಿದೆ. ಈ ವನಸ್ಪತಿಯು ಸಸ್ಯಗಳ ಔಷಧಿ, ಔಷಧೀಯ ವನಸ್ಪತಿ, ಗಿಡಮೂಲಿಕೆಗಳ ಔಷಧಿ , ಮೂಲಿಕಾಶಾಸ್ತ್ರ ಮತ್ತು ಮೂಲಿಕಾ ಚಿಕಿತ್ಸೆ ಎಂಬ ಹೆಸರುಗಳಿಂದಲೂ ಕರೆಯಲ್ಪಡುತ್ತದೆ. ಗಿಡಮೂಲಿಕೆಗಳ ಔಷಧಿಯ ವ್ಯಾಪ್ತಿಯು ಕೆಲವೊಮ್ಮೆ ಶಿಲೀಂಧ್ರಗಳು ಮತ್ತು ಜೇನುಹುಳುಗಳ ಉತ್ಪನ್ನಗಳಿಗೂ ಹರಡಿದ್ದು, ಖನಿಜಾಂಶಗಳು, ಚಿಪ್ಪುಗಳು ಹಾಗೂ ಕೆಲವು ಪ್ರಾಣಿಗಳ ದೇಹದ ಭಾಗಗಳನ್ನೂ ಒಳಗೊಂಡಿರುತ್ತವೆ.
ಮಾಧ್ಯಮ ಅಥವಾ ಸಮೂಹ ಮಾಧ್ಯಮ ಎಂದು ಸಾಮಾನ್ಯವಾಗಿ ಪತ್ರಿಕೆ, ಬಾನುಲಿ ಮತ್ತು ದೂರದರ್ಶನಗಳನ್ನು ಸೇರಿಸಿ ಹೇಳುತ್ತಾರೆ. ಸಂಗೀತ, ನೃತ್ಯ, ನಾಟಕ, ಅಂತರ್ಜಾಲ ಕ್ಷೇತ್ರ, ಭಿತ್ತಿ ಚಿತ್ರ-ಪತ್ರ, ಜಾಹೀರಾತು, ಡಂಗುರ, ಸಿನಿಮಾ – ಇವುಗಳನ್ನೂ ಕೂಡ ಮಾಧ್ಯಮವನ್ನಾಗಿ ಪರಿಗಣಿಸಬಹುದು. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವು ಕಾರ್ಯನಿರ್ವಹಿಸುತ್ತದೆ.
ಅಂಗೈ ರೇಖೆ ನೋಡಿ ಹೇಳುವ ಭವಿಷ್ಯ or ಹಸ್ತ ಸಾಮುದ್ರಿಕ ಶಾಸ್ತ್ರ (ಇದನ್ನು cheiromancy ಎಂತಲೂ ಬರೆಯಲಾಗುತ್ತದೆ, ಗ್ರೀಕ್ನಲ್ಲಿ cheir (χειρ), “hand”; manteia (μαντεία), “divination”), ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ. ಹಸ್ತ ಸಾಮುದ್ರಿಕ ಶಾಸ್ತ್ರವನ್ನು ರೂಢಿಮಾಡಿಕೊಂಡಿರುವವರನ್ನು ಸಾಮಾನ್ಯವಾಗಿ ಹಸ್ತ ಸಾಮುದ್ರಿಕರು , ಹಸ್ತ ಓದುಗರು , ಕೈ ಓದುಗರು , ಹಸ್ತ ವಿಶ್ಲೇಷಕರು ,ಅಥವಾ ಕೈರೊಲೊಜಿಸ್ಟ್ಗಳು ಎಂದು ಕರೆಯಲಾಗುತ್ತದೆ.
REDIRECT Template:Infobox laboratory equipment ಈ ಸೂಕ್ಷ್ಮ ದರ್ಶಕ ವು ( Greek: μικρός, ಮೈಕ್ರೋಸ್ , "ಸೂಕ್ಷ್ಮ" ಮತ್ತುσκοπεῖν, ಸ್ಕೋಪೆನ್ , "ವೀಕ್ಷಿಸು" ಅಥವಾ "ನೋಡು" ನಿಂದ) ಬರಿಯ ಕಣ್ಣಿಗೆ ಕಾಣಿಸದ ಸೂಕ್ಷ್ಮ ವಸ್ತುಗಳನ್ನು ನೋಡಲು ಬಳಸುವ ಉಪಕರಣವಾಗಿದೆ. ಈ ಉಪಕರಣ ಉಪಯೋಗಿಸಿ ಸಣ್ಣ ವಸ್ತುಗಳನ್ನು ಪರೀಕ್ಷಿಸುವ ವಿಜ್ಞಾನಕ್ಕೆ (ವಿಧಾನಕ್ಕೆ)ಸೂಕ್ಷ್ಮ ದರ್ಶನ (ಮೈಕ್ರೋಸ್ಕೋಪಿ) ಎಂದು ಕರೆಯಲಾಗುತ್ತದೆ. ಸೂಕ್ಷ್ಮದರ್ಶಕೀಯ(ಮೈಕ್ರೋಸ್ಕೋಪಿಕ್) ಎಂದರೆ ಸೂಕ್ಷ್ಮ ದರ್ಶಕದ ಸಹಾಯವಿಲ್ಲದೇ ಕಣ್ಣಿಗೆ ಕಾಣಿಸದಿರುವುದು.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ವಿಕಿಪೀಡಿಯ [ಇಂಗ್ಲಿಷ್: Wikipedia ವಿಕಿಪೀಡಿಯ] ಒಂದು ಅಂತರ್ಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಅ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಬೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.