The most-visited ಕನ್ನಡ Wikipedia articles, updated daily. Learn more...
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ಆರಂಭಗೊಂಡಿದ್ದರೂ, ಅದು ಹೆಚ್ಚು ಪ್ರಚಲಿತಕ್ಕೆ ಬಂದುದು ೨೦೧೫-೨೦೧೬ನೇ ಸಾಲಿನಲ್ಲಿ. (ಆಂಗ್ಲ:Clean India Mission)ಇದು ಭಾರತ ಸರ್ಕಾರದ ಅಭಿಯಾನವಾಗಿದ್ದೂ, ರಸ್ತೆ, ಬೀದಿ ಹಾಗೂ ಮೂಲಸೌಕರ್ಯಗಳ ನಿರ್ಮಲೀಕರಣಕ್ಕಾಗಿ ಆರಂಭಿಸಲಾಗಿದೆ . .ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ gfhvಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1509-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಏಡ್ಸ್ (ಅಕ್ವೈರ್ಡ್ ಇಮ್ಯೂನ್ ಡಿಫಿಷಿಯನ್ಸಿ ಸಿಂಡ್ರೊಮ್ ಅಥವಾ ಅಕ್ವೈರ್ಡ್ ಇಮ್ಯುನೊ ಡಿಫಿಷಿಯನ್ಸಿ ಸಿಂಡ್ರೋಮ್) ಎಚ್ಐವಿ (ಹ್ಯೂಮನ್ ಇಮ್ಯುನೊ ಡಿಫಿಷಿಯನ್ಸಿ ವೈರಸ್) ಎಂಬ ವೈರಸ್ ಉಂಟಾಗುವ ಲಕ್ಷಣವಾಗಿದ್ದು ಇದು. ಅನಾರೋಗ್ಯ, ನಿರೋಧಕ ವ್ಯವಸ್ಥೆಯ ಬದಲಾಯಿಸುತ್ತದೆ ಹೆಚ್ಚು ದುರ್ಬಲ ಸೋಂಕುಗಳು ಮತ್ತು ರೋಗಗಳಿಗೆ ಜನರು ಮಾಡುವ. ಸಿಂಡ್ರೋಮ್ ಮುಂದುವರೆದಂತೆ ಈ ಪ್ರಭಾವಕ್ಕೆ ಹಾಳಾಗುತ್ತದೆ.ಎಚ್ಐವಿ ಸೋಂಕಿತ ವ್ಯಕ್ತಿಯನ್ನು (ವೀರ್ಯ ಮತ್ತು ಯೋನಿ ದ್ರವಗಳು, ರಕ್ತ ಮತ್ತು ಎದೆ ಹಾಲು) ದೇಹದ ದ್ರವಗಳು ಕಂಡುಬರುತ್ತದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಜಾಗತಿಕ ತಾಪಮಾನ ನಿಯಂತ್ರಣ ಜಾಗತಿಕ ತಾಪಮಾನ ಏರಿಕೆ ಯೆಂದರೆ 20ನೇ ಶತಮಾನದ ಮಧ್ಯಭಾಗದಲ್ಲಿ ಭೂಮಿಯ ಮೇಲ್ಮೈ-ಸಮೀಪದಲ್ಲಿರುವ ವಾಯು ಮತ್ತು ಸಾಗರ ಪ್ರದೇಶಗಳಲ್ಲಿ ಆದ ಸರಾಸರಿ ತಾಪಮಾನದ ಏರಿಕೆ ಹಾಗೂ ಅದರ ಪ್ರಕ್ಷೇಪಿತ ಮುಂದುವರಿಕೆ. ಜಾಗತಿಕ ಮೇಲ್ಮೈ ಉಷ್ಣತೆಯು ಕಳೆದ ಶತಮಾನದಲ್ಲಿ 0.74 ± 0.18 °C (1.33 ± 0.32 °F)ರಷ್ಟು ಹೆಚ್ಚಿದೆ. ಹವಾಮಾನ ಬದಲಾವಣೆಯ ಕುರಿತಾದ ಅಂತರ-ಸರಕಾರಿ ಮಂಡಳಿಯು (IPCC) ಅಗೆದು ತೆಗೆದ ಇಂಧನಗಳು ಮತ್ತು ಅರಣ್ಯನಾಶಗಳಂತಹಾ ಮಾನವ ಚಟುವಟಿಕೆಗಳಿಂದಾದ ಹಸಿರುಮನೆ ಅನಿಲಗಳ ಸಂಗ್ರಹದ ಹೆಚ್ಚಳವು 20ನೇ ಶತಮಾನ ದ ಮಧ್ಯಕಾಲದ ನಂತರದ ತಾಪಮಾನ ಏರಿಕೆಗೆ ಕಾರಣವೆಂದು ತೀರ್ಮಾನಕ್ಕೆ ಬಂದಿದೆ.
ಬ್ಲ್ಯಾಕ್ಜಾಕ್ ಪ್ರಪಂಚದಲ್ಲೇ ಅತಿ ವ್ಯಾಪಕವಾಗಿ ಆಡುವ ಕ್ಯಾಸಿನೊ ಬ್ಯಾಂಕಿಂಗ್ ಆಟವಾಗಿದೆ, ಇದನ್ನು ಟ್ವೆಂಟಿ-ಒನ್ , ವಿಂಗ್ಟ್-ಎಟ್-ಉನ್ ("ಟ್ವೆಂಟಿ-ಒನ್"ಗೆ ಫ್ರೆಂಚ್ನಲ್ಲಿ) ಅಥವಾ ಪಾಂಟೂನ್ ಎಂದೂ ಕರೆಯುತ್ತಾರೆ. ಈ ಪ್ರಮಾಣಿತ ಆಟವನ್ನು 52 ಎಲೆಗಳನ್ನು ಹೊಂದಿರುವ ಒಂದು ಅಥವಾ ಅದಕ್ಕಿಂತ ಹೆಚ್ಚು ಆಂಗ್ಲೊ-ಅಮೆರಿಕನ್ ಡೆಕ್(ಇಸ್ಪೀಟು ಕಟ್ಟು)ಗಳನ್ನು ಬಳಸಿಕೊಂಡು ಆಡಲಾಗುತ್ತದೆ. ಈ ಆಟದ ಮೂಲಭೂತ ನಿಯಮಗಳೆಂದರೆ ಇಪ್ಪತ್ತೊಂದು ಮೌಲ್ಯವನ್ನು ಹಂಚುವ ಮೂಲಕ ಕೈಯಲ್ಲಿರುವ ಆರಂಭಿಕ ಎರಡು ಎಲೆಗಳ ಮೌಲ್ಯವನ್ನು ಸೇರಿಸುವುದಾಗಿರುತ್ತದೆ.
Bulleted list item ಭಾರತದಲ್ಲಿ ಬಡತನ ಬಹುವ್ಯಾಪಕವಾಗಿದ್ದು, ವಿಶ್ವದ ಒಟ್ಟು ಬಡವರ ಸಂಖ್ಯೆಯಲ್ಲಿ ಮೂರನೇ ಒಂದು ಭಾಗ ರಾಷ್ಟ್ರದಲ್ಲಿದ್ದಾರೆಂದು ಅಂದಾಜು ಮಾಡಲಾಗಿದೆ. ಭಾರತದ ಯೋಜನಾ ಆಯೋಗ ಬಳಸಿದ ಮಾನದಂಡದ ಅನ್ವಯ 2004-2005ರಲ್ಲಿ ಜನಸಂಖ್ಯೆಯ 27.5% ಬಡತನ ರೇಖೆ ಕೆಳಗೆ(ಕಡುಬಡತನ)ವಾಸಿಸಿದ್ದು, 1977-1978ರಲ್ಲಿ 51.3%ಗಿಂತ ಮತ್ತು 1993-1994ರಲ್ಲಿ 36%ಗಿಂತ ಕೆಳಮುಖದಲ್ಲಿದೆ. UN ಅಭಿವೃದ್ಧಿ ಕಾರ್ಯಕ್ರಮ, ಮಾನವ ಅಭಿವೃದ್ಧಿ ಸೂಚ್ಯಂಕದ(HDI)ಪ್ರಕಾರ,ಭಾರತದ ಜನಸಂಖ್ಯೆಯಲ್ಲಿ 75.6% ದಿನಕ್ಕೆ $2ಗಿಂತ ಕಡಿಮೆ ಆದಾಯದಲ್ಲಿ ಜೀವಿಸುತ್ತಿದ್ದಾರೆ.
ರನ್ನನು ಕ್ರಿ.ಶ.೯೪೯ರಲ್ಲಿ ಬೆಳಗಲಿ (ಈಗಿನ ರನ್ನ ಬೆಳಗಲಿ ತಾ|| ಮುಧೋಳ) ಗ್ರಾಮದಲ್ಲಿ ಜನಿಸಿದನು. ತಂದೆ ಜಿನವಲ್ಲಭ , ತಾಯಿ ಅಬ್ಬಲಬ್ಬೆ. ರನ್ನನು ಜೈನ ಮನೆತನದ ಬಳೆಗಾರ ಕುಲದವನು.ಚಾಲುಕ್ಯರ ಎರಡನೆಯ ತೈಲಪ ಚಕ್ರವರ್ತಿ ಆಹವಮಲ್ಲನ ಆಸ್ಥಾನಕವಿಯಾಗಿದ್ದು ಕವಿಚಕ್ರವರ್ತಿ ಎಂಬ ಬಿರುದನ್ನು ಪಡೆದಿದ್ದನು.ಆ ಕಾಲದ ಪ್ರಸಿದ್ಧ ಗುರು ಅಜಿತಸೇನಾಚಾರ್ಯರ ಬಳಿ ರನ್ನನ ವಿದ್ಯಾಭ್ಯಾಸ.
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಈತನನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯ ಶಿವನಿಗೇ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯನನ್ನೇ ಮೊದಲ ವಚನಕಾರನೆಂದು ಗುರುತಿಸಲಾಗುತ್ತದೆ.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಕಂಪ್ಯೂಟರ್ ಒಳರವಾನೆ ಸಂಸ್ಕರಣೆ ಹಾಗೂ ಹೊರರವಾನೆ ಸಾಧನಗಳನ್ನು ಹೊಂದಿದ್ದು ಒಳರವಾನೆ ಸಾಧನಗಳ ಮೂಲಕ ನೀಡಿದಂತಹ ಮಾಹಿತಿಯನ್ನು ಸಂಸ್ಕರಿಸಿ ಹೊರರವಾನೆ ಸಾಧನಗಳ ಮೂಲಕ ಉಪಯೋಗಿ(ಯೂಜರ್)ಗೆ ನೀಡುವುದಲ್ಲದೇ ಮಾಹಿತಿ ಮತ್ತು ದತ್ತಾಂಶಗಳನ್ನು ಶೇಖರಿಸಿಡಬಹುದಾದ ಸಾಧನವಾಗಿರುತ್ತದೆ ಅಲ್ಲದೇ ಶೇಖರಿಸಿಟ್ಟ ಅಥವಾ ನಾವು ನೀಡಿದಂತಹಾ ಮಾಹಿತಿಯನ್ನು ಒಂದು ಗಣಕಯಂತ್ರ ದಿಂದ ಮತ್ತೊಂದು ಗಣಕಯಂತ್ರಕ್ಕೆ ಸಂಪರ್ಕಜಾಲದ ಮೂಲಕ ನಮ್ಮ ಆದೇಶದ ಮೇರೆಗೆ ರವಾನಿಸುತ್ತದೆ..
ನೋಡಿ:ವಾಯುಗುಣ ಬದಲಾವಣೆ ಹವಾಮಾನವು ವಾತಾವರಣದ ಸ್ಥಿತಿ, ಬಿಸಿ ಅಥವಾ ಶೀತಲ, ತೇವ ಅಥವಾ ಶುಷ್ಕ, ಶಾಂತ ಅಥವಾ ಬಿರುಗಾಳಿಯಿಂದ ಕೂಡಿದ, ನಿಚ್ಚಳ ಅಥವಾ ಮೋಡಕವಿದ ಅನ್ನುವಷ್ಟರ ಮಟ್ಟಿಗೆ. ಬಹುತೇಕ ಹವಾಮಾನ ವಿದ್ಯಮಾನಗಳು ಪರಿವರ್ತನ ಗೋಳದಲ್ಲಿ ಸಂಭವಿಸುತ್ತವೆ, ಸಮಗೋಳದ ಸ್ವಲ್ಪ ಕೆಳಗೆ. ಹವಾಮಾನವು ಸಾಮಾನ್ಯವಾಗಿ ದಿನನಿತ್ಯದ ಉಷ್ಣಾಂಶ ಮತ್ತು ಮಳೆ ಪ್ರಮಾಣವನ್ನು ನಿರ್ದೇಶಿಸಿದರೆ, ವಾಯುಗುಣವು ಸಮಯದ ದೀರ್ಘಾವಧಿಯಲ್ಲಿ ಸರಾಸರಿ ವಾತಾವರಣ ಸ್ಥಿತಿಗಳಿಗಾಗಿ ಬಳಸಲಾಗುವ ಪದ.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಅಂಗೈ ರೇಖೆ ನೋಡಿ ಹೇಳುವ ಭವಿಷ್ಯ or ಹಸ್ತ ಸಾಮುದ್ರಿಕ ಶಾಸ್ತ್ರ (ಇದನ್ನು cheiromancy ಎಂತಲೂ ಬರೆಯಲಾಗುತ್ತದೆ, ಗ್ರೀಕ್ನಲ್ಲಿ cheir (χειρ), “hand”; manteia (μαντεία), “divination”), ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ. ಹಸ್ತ ಸಾಮುದ್ರಿಕ ಶಾಸ್ತ್ರವನ್ನು ರೂಢಿಮಾಡಿಕೊಂಡಿರುವವರನ್ನು ಸಾಮಾನ್ಯವಾಗಿ ಹಸ್ತ ಸಾಮುದ್ರಿಕರು , ಹಸ್ತ ಓದುಗರು , ಕೈ ಓದುಗರು , ಹಸ್ತ ವಿಶ್ಲೇಷಕರು ,ಅಥವಾ ಕೈರೊಲೊಜಿಸ್ಟ್ಗಳು ಎಂದು ಕರೆಯಲಾಗುತ್ತದೆ.
ವಿಕಿಪೀಡಿಯ [ಇಂಗ್ಲಿಷ್: Wikipedia ವಿಕಿಪೀಡಿಯ] ಒಂದು ಅಂತರ್ಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಅ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಬೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.
ಭಾರತದ ಸಂವಿಧಾನದ ಪ್ರಕಾರ ಭಾರತದ ರಾಜಕೀಯ ಪಕ್ಷಗಳು ಭಾರತದ ವಿವಿಧ ರಾಜ್ಯಗಳಲ್ಲಿ ಸಾಂವಿಧಾನಿಕ ಅಧಿಕಾರಕ್ಕೆ ಸ್ಪರ್ಧಿಸುವ ರಾಜಕೀಯ ಪಕ್ಷಗಳು. ಒಂದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಸಾಂವಿಧಾನಿಕ ಅಧಿಕಾರವನ್ನು ಹೊಂದಿರುವ ಸದಸ್ಯರಿರುವ ಪಕ್ಷಗಳು ರಾಷ್ಟ್ರೀಯ ಪಕ್ಷಗಳೆಂದು ಕರೆಯಲಾಗುತ್ತವೆ. ಇವುಗಳಲ್ಲಿ ಮುಖ್ಯವಾದವು: ಬಹುಜನ ಸಮಾಜ ಪಕ್ಷ (BSP) - ಮಾಯಾವತಿ ಕುಮಾರಿ ಅವರ ನೇತೃತ್ವದಲ್ಲಿ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಮಾನವ ಹಕ್ಕುಗಳು ಭಾರತದಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿಯು (ವಸ್ತುಸ್ಥಿತಿ) ಬಹಳ ಸಂಕೀರ್ಣ ರಚನೆಯಾಗಿದೆ. ಕಾರಣವೆಂದರೆ ದೇಶದ ವಿಶಾಲವಾದ ಭೂ ಭಾಗ ಮತ್ತು ಅತ್ಯದ್ಭುತ ವೈವಿಧ್ಯತೆಯ ಪರಿಣಾಮವಾಗಿ, ಇದರ ಸ್ಥಾನವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರದ ನೀತಿ ಮತ್ತು ಈ ದೇಶದ ಸಾರ್ವಭೌಮತ್ವ, ಸಾಮಾಜಿಕ ಸಮಾನತೆ, ಪ್ರಜಾತಂತ್ರ ಗಣರಾಜ್ಯ ರಾಷ್ಟ್ರವಾಗಿದ್ದು, ಮತ್ತು ಇತಿಹಾಸವನ್ನು ದಾಖಲಿಸಿದ್ದ ಹಳೆಯ ವಸಾಹತುಶಾಹಿ ಪ್ರಾಂತ್ಯಗಳಂತಿದೆ. ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳ ನೀಡಿಕೆಯ ಜೊತೆ, ಧಾರ್ಮಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಟ್ಟಿದೆ.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಶಬ್ದ ಮಾಲಿನ್ಯ (ಅಥವಾ ವಾತಾವರಣದಲ್ಲಿನ ಸದ್ದು) ಮಾನವ ಅಥವಾ ಪ್ರಾಣಿಗಳ ಜೀವನದ ಮೇಲೆ ದುಃಪರಿಣಾಮ ಬೀರಿ ಅವುಗಳ ಜೀವನ ಚಟುವಟಿಕೆಯ ಸಮತೋಲಕ್ಕೆ ಭಂಗ ತರುವಂಥ , ಮನುಷ್ಯ-ಪ್ರಾಣಿ-ಯಂತ್ರಗಳಿಂದ ಹೊಮ್ಮಿ ಬರುವ ಸಪ್ಪಳಕ್ಕೆ 'ಶಬ್ದ ಮಾಲಿನ್ಯ' ಎನ್ನಲಾಗಿದೆ. ಸಾಮಾನ್ಯವಾಗಿ ಸಾರಿಗೆ, ಅದರಲ್ಲೂ ವಿಶೇಷವಾಗಿ ಮೋಟಾರ್ ವಾಹನಸಂಚಾರದಿಂದ ಹೊಮ್ಮುವ ಶಬ್ದ ಈ ಮಲಿನತೆಗೆ ತನ್ನ ಕಾಣಿಕೆ ನೀಡುತ್ತದೆ. ನಾಯ್ಸ್ ಎಂಬ ಪದ ಲ್ಯಾಟಿನ್ ಭಾಷೆಯ ನಾಸಿಯ very good ಎಂಬ ಪದದಿಂದ ವ್ಯುತ್ಪತ್ತಿ ಹೊಂದಿದೆ.
ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ಬ್ಲಾಗ್ (ವೆಬ್ಲಾಗ್ ಎಂಬುದರ ಹ್ರಸ್ವ ರೂಪ)ಅಂತರ್ಜಾಲದ ಒಂದು ವಿಧವಾಗಿದ್ದು, ಸಾಮಾನ್ಯವಾಗಿ ಪ್ರತ್ಯೇಕ ಖಾಸಗಿ ವ್ಯಕ್ತಿಗಳಿಂದ ನಿರ್ವಹಿಸಲ್ಪಡುವ ತಾಣವಾಗಿರುತ್ತದೆ. ಇದರಲ್ಲಿ ಪ್ರತಿಕ್ರಿಯಾತ್ಮಕ ಲೇಖನಗಳು, ಕಾರ್ಯಕ್ರಮಗಳ ವಿವರಣೆ, ಗ್ರಾಫಿಕ್ಸ್, ವಿಡಿಯೋ ಮೊದಲಾದವುಗಳನ್ನು ನಿರಂತರವಾಗಿ ದಾಖಲಿಸಲಾಗುತ್ತದೆ. ಹೀಗೆ ದಾಖಲಿಸಲಾಗುವ ಲೇಖನಗಳು ಸಾಮಾನ್ಯವಾಗಿ ಹಿಮ್ಮುಖ ಕ್ರಮಾಂಕದಲ್ಲಿ ಪ್ರದರ್ಶನಗೊಳ್ಳುತ್ತವೆ.
ಕನ್ನಡ ಸಾಹಿತ್ಯ ಅನೇಕ ಪ್ರಕಾರಗಳಿಂದ ಶ್ರೀಮಂತವಾಗಿದೆ. ಸಾಹಿತ್ಯ ಪ್ರಕಾರದ ಸ್ವರೂಪ,ರಚನೆ(structure) ಆಧಾರದ ಮೇಲೆ ಈ ಕೆಳಕಂಡಂತೆ ವಿಂಗಡಿಸಬಹುದು.ಕನ್ನಡ ಸಾಹಿತ್ಯವೇ ಬೇರೆ -ಕನ್ನಡ ಸಾಹತ್ಯ ಪ್ರಕಾರಗಳೇ ಬೇರೆ ಆದ್ದರಿಂದ ಕನ್ನಡ ಸಾಹಿತ್ಯಕ್ಕೆ ಬೇರೆ ಶೀರ್ಶಿಕೆ ಕೊಡುವುದೇ ಉಚಿತ. ಸಾಹಿತ್ಯದ ವಿಷಯ ದೊಡ್ಡದು .ಅದರಲ್ಲಿ ಪ್ರಾಚೀನ ಸಾಹಿತ್ಯದಿಂದ ಅರ್ವಾಚೀನ ಸಾಹಿತ್ಯ ಎಲ್ಲಾ ವಿಷಯಗಳನ್ನು ಹಾಕಬಹುದು.
ಅಮೆರಿಕ ಸಂಯುಕ್ತ ಸಂಸ್ಥಾನ ವು (ಸಾಮಾನ್ಯವಾಗಿ ಸಂಯುಕ್ತ ಸಂಸ್ಥಾನ , ಯುಎಸ್ , ಯುಎಸ್ಎ ಅಥವಾ ಅಮೆರಿಕಾ ಎಂದು ಕರೆಯಲ್ಪಡುವ) ಐವತ್ತು ರಾಜ್ಯಗಳು ಮತ್ತು ಒಳ ಆಡಳಿತದಲ್ಲಿ ಸ್ವತಂತ್ರವಾಗಿರುವ ಡಿಸ್ಟ್ರಿಕ್ಟ್ಯನ್ನೊಳಗೊಂಡ ಒಂದು ಸ್ವಾಯತ್ತ ಸಾಂವಿಧಾನಿಕ ಗಣರಾಜ್ಯ. ಬಹುತೇಕ ಕೇಂದ್ರ ಭಾಗದ ಉತ್ತರ ಅಮೆರಿಕಾದಲ್ಲಿ ಸ್ಥಿತವಾಗಿರುವ ಈ ದೇಶದ ಒತ್ತೊತ್ತಾಗಿರುವ 48 ರಾಜ್ಯಗಳು ಹಾಗೂ ಪ್ರಧಾನ ಡಿಸ್ಟ್ರಿಕ್ಟ್ ವಾಷಿಂಗ್ಟನ್ ಡಿಸಿ, ಪೆಸಿಫಿಕ್ ಹಾಗೂ ಅಟ್ಲಾಂಟಿಕ್ ಸಮುದ್ರಗಳ ನಡುವೆ ನೆಲೆಗೊಂಡಿದ್ದು, ಉತ್ತರದಲ್ಲಿ ಕೆನಡಾ ಹಾಗೂ ದಕ್ಷಿಣದಲ್ಲಿ ಮೆಕ್ಸಿಕೋಗಳನ್ನು ಗಡಿಗಳಾಗಿ ಹೊಂದಿದೆ. ಅಲಾಸ್ಕಾ ರಾಜ್ಯವು ವಾಯುವ್ಯ ಭಾಗದಲ್ಲಿದ್ದು, ಕೆನಡಾವನ್ನು ಉತ್ತರ ದಿಕ್ಕಿನಲ್ಲೂ ಬೇರಿಂಗ್ ಜಲಸಂಧಿಯನ್ನು ಹಾದು ರಷ್ಯಾವನ್ನು ಪಶ್ಚಿಮ ದಿಕ್ಕಿನಲ್ಲೂ ಹೊಂದಿದೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಕ್ಯಾನ್ಸರ್ (/ˈkænsə(r)/ ( listen)ವೈದ್ಯಕೀಯ ಪದಗಳಲ್ಲಿ:ಮಾಲಿಗಂಟ್ (ಕೇಡು ತರುವ)ನಿಯೊಪ್ಲಾಸ್ಮ್ (ಊತದ ಗೆಡ್ಡ),ಇದನ್ನು ಅರ್ಬುದ ರೋಗ ಎಂದು ಕರೆಯುತ್ತಾರೆ.ಇದರಲ್ಲಿ ಕೋಶಗಳ ಒಂದು ಸಮೂಹವು ಅನಿಯಂತ್ರಿತ ಬೆಳವಣಿಗೆ ಯನ್ನು ತೋರಿಸುತ್ತವೆ.ಅಂದರೆ ಸಾಮಾನ್ಯಕ್ಕಿಂತಲೂ ಮಿತಿಮೀರಿದ ಕೋಶಗಳ ವಿಭಜನೆ),ಅಂಗಾಂಶಗಳ ಮೇಲೆ ದುರಾಕ್ರಮಣ (ಶರೀರದ ಒಂದು ಭಾಗದಲ್ಲಿ ಇದು ಕಾಣಿಸಿಕೊಂಡರೆ ಅಕ್ಕಪಕ್ಕದ ಕೋಶಗಳನ್ನು ನಾಶಪಡಿಸುತ್ತದೆ).ಇದು ಹಲವು ಬಾರಿ ದೇಹದ ಇತರ ಭಾಗಗಳಿಗೆ ವೇಗವಾಗಿ ಪಸರಿಸು ತ್ತದೆ.(ರಕ್ತ ಅಥವಾ ಕೀವುಗಳಂತಹ ಮಲಿನ ದ್ರವಗಳ ಮೂಲಕ ದೇಹದ ಎಲ್ಲೆಡೆಯೂ ಹಬ್ಬಿಕೊಳ್ಳುತ್ತದೆ.) ಕ್ಯಾನ್ಸರ್ ನ ಹಾನಿಕಾರಕ ಲಕ್ಷಣಗಳು ಇತರೆ ಸಾಮಾನ್ಯ ಗೆಡ್ಡೆಗಳು,ಅಂದರೆ ತಾವೇ ತಾವಾಗಿ ಹುಟ್ಟಿಕೊಂಡವುಗಳು ಸ್ವಯಂ ಮಿತಿಗೊಳಪಟ್ಟವುಗಳು ಇತರ ಅಂಗಾಂಶಗಳ ಮೇಲೆ ಆಕ್ರಮಣ ಅಥವಾ ನಾಶಮಡುವ ಪ್ರವೃತ್ತಿಯು ಕ್ಯಾನ್ಸರ್ ಗಿಂತ ಭಿನ್ನವಾಗಿದೆ. ಲುಕೆಮಿಯಾ ಕೂಡಾ ನಾಲ್ಕು ಕ್ಯಾನ್ಸರ್ ಗಳಲ್ಲಿ ಒಂದಾದರೂ ಇದು ಊತದ ಗೆಡ್ದೆಯ ಲಕ್ಷಣ ಹೊಂದಿರುವದಿಲ್ಲ. ವೈದ್ಯಕೀಯ ವಿಜ್ಞಾನದಲ್ಲಿ ಇದರ ಅಧ್ಯಯನ,ರೋಗ ನಿದಾನ ಪತ್ತೆ,ಚಿಕಿತ್ಸೆ ಮತ್ತು ಕ್ಯಾನ್ಸರ್ ನಿರ್ಮೂಲನೆಯ ಅಂಶಗಳನ್ನು ಹೊಂದಿರುವ ವೈದ್ಯಕೀಯ ಶಾಖೆಯನ್ನು ಆಂಕಾಲಜಿ ಎಂದು ಕರೆಯುತ್ತಾರೆ.
ಯಾವ ಭವ್ಯ ಭಾರತ ಇಸ್ಲಾಮೀ ಭಯೋತ್ಪಾದಕರ ದಾಳಿ, ದೌರ್ಜನ್ಯದ ಆಡಳಿತದವಯಲ್ಲಿ ನಲುಗುತ್ತಿತ್ತೋ, ಯಾವ ಹಿಂದೂಸ್ತಾನದ ಹಿಂದೂಗಳನ್ನು ಪಶುಗಳಿಗಿಂತ ಕಡೆಯಾಗಿ ನಡೆಸಿಕೊಳ್ಳಲಾಗುತ್ತಿತ್ತೋ... ಅಂಥಾ ದೇಶದ ದಾಸ್ಯಮುಕ್ತಿಗಾಗಿ, ಸ್ವಾಭಿಮಾನಿ ಸ್ವತಂತ್ರ ಜೀವನಕ್ಕಾಗಿ, ಹಿಂದವೀ ಸ್ವರಾಜ್ಯದ ಸ್ಥಾಪನೆಗಾಗಿ ಹೋರಾಡಿದ ಮರ್ದ್ ಮರಾಠಾ ನಮ್ಮೆಲ್ಲರ ಹೆಮ್ಮೆಯ ವೀರ ಶಿವಾಜಿ. ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿ ಭೋಂಸ್ಲೆ (ಫೆಬ್ರುವರಿ ೧೯, ೧೬೩೦ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.
ಮೊಘಲ್ ಸಾಮ್ರಾಜ್ಯ (ಉರ್ದು:: مغل باد شاہ) ಭಾರತೀಯ ಉಪಖಂಡದ ಉತ್ತರ ಭಾಗಗಳನ್ನು ೧೫೨೬ ರಿಂದ ಆಳಿದ ಮುಖ್ಯ ಸಾಮ್ರಾಜ್ಯಗಳಲ್ಲಿ ಒಂದು. ಮೊಘಲ್ ಸಾಮ್ರಾಜ್ಯದ ಸ್ಥಾಪನೆ ೧೫೨೬ ರಲ್ಲಿ ಬಾಬರ್ ನಿಂದ ನಡೆಯಿತು - ಮೊದಲ ಪಾಣಿಪಟ್ ಯುದ್ಧದಲ್ಲಿ ಇಬ್ರಾಹಿಮ್ ಲೋದಿಯನ್ನು ಸೋಲಿಸಿದ ನಂತರ. ಹುಮಾಯೂನ್ ನ ಕಾಲದಲ್ಲಿ ಶೇರ್ ಷಾ ಮೊಘಲ್ ಸಾಮ್ರಾಜ್ಯವನ್ನು ಸೋಲಿಸಿದರೂ, ನಂತರ ಅಕ್ಬರ್ ನ ಕೆಳಗೆ ಮೇಲೇರಲಾರಂಭಿಸಿದ ಮೊಘಲ್ ಸಾಮ್ರಾಜ್ಯ ಔರಂಗಜೇಬನ ಕಾಲದ ವರೆಗೂ ಬೆಳೆಯಿತು.