The most-visited ಕನ್ನಡ Wikipedia articles, updated daily. Learn more...
ಏಡ್ಸ್ (ಅಕ್ವೈರ್ಡ್ ಇಮ್ಯೂನ್ ಡಿಫಿಷಿಯನ್ಸಿ ಸಿಂಡ್ರೊಮ್ ಅಥವಾ ಅಕ್ವೈರ್ಡ್ ಇಮ್ಯುನೊ ಡಿಫಿಷಿಯನ್ಸಿ ಸಿಂಡ್ರೋಮ್) ಎಚ್ಐವಿ (ಹ್ಯೂಮನ್ ಇಮ್ಯುನೊ ಡಿಫಿಷಿಯನ್ಸಿ ವೈರಸ್) ಎಂಬ ವೈರಸ್ ಉಂಟಾಗುವ ಲಕ್ಷಣವಾಗಿದ್ದು ಇದು. ಅನಾರೋಗ್ಯ, ನಿರೋಧಕ ವ್ಯವಸ್ಥೆಯ ಬದಲಾಯಿಸುತ್ತದೆ ಹೆಚ್ಚು ದುರ್ಬಲ ಸೋಂಕುಗಳು ಮತ್ತು ರೋಗಗಳಿಗೆ ಜನರು ಮಾಡುವ. ಸಿಂಡ್ರೋಮ್ ಮುಂದುವರೆದಂತೆ ಈ ಪ್ರಭಾವಕ್ಕೆ ಹಾಳಾಗುತ್ತದೆ.ಎಚ್ಐವಿ ಸೋಂಕಿತ ವ್ಯಕ್ತಿಯನ್ನು (ವೀರ್ಯ ಮತ್ತು ಯೋನಿ ದ್ರವಗಳು, ರಕ್ತ ಮತ್ತು ಎದೆ ಹಾಲು) ದೇಹದ ದ್ರವಗಳು ಕಂಡುಬರುತ್ತದೆ.
ವಿಮೆ: ಅನಿಶ್ಚಿತ ನಷ್ಟ ಎಂಬ ಗಂಡಾಂತರದ ವಿರುದ್ಧ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ರೂಪಿಸುವ ಒಂದು ರೀತಿಯ ಅಪಾಯ ನಿರ್ವಹಣೆಯ ಉಪಾಯವೇ ವಿಮೆ ಎಂದು ಕಾನೂನು ಮತ್ತು ಅರ್ಥಶಾಸ್ತ್ರ ಪರಿಗಣಿಸುತ್ತವೆ.ಗಡಾಂತರದಿಂದ ಸಂಭವಿಸುವ ನಷ್ಟವನ್ನು ಭರ್ತಿ ಮಾಡುವುದಕ್ಕಾಗಿ, ಪಾವತಿ ಮಾಡಿರುವ 'ಕಂತಿ'ನ ಮೊತ್ತದ ನ್ಯಾಯೋಚಿತ ವಿನಿಮಯವೇ ವಿಮೆ ಎಂದು ವಿಮೆಯನ್ನು ವಿವರಿಸಲಾಗಿದೆ.ಭಾರೀ ಪ್ರಮಾಣದ ಸಂಭವನೀಯ ವಿನಾಶಕಾರಿ ನಷ್ಟವನ್ನು ತಡೆಗಟ್ಟುವ ಉದ್ದೇಶದಿಂದ ಅನುಭವಿಸುವ ನಿಶ್ಚಿತವೂ, ಗೊತ್ತಿರುವಂಥದ್ದೂ ಆದ ಅಲ್ಪ ಪ್ರಮಾಣದ ನಷ್ಟವೆಂದೂ ಇದನ್ನು ಭಾವಿಸಬಹುದು. ವಿಮೆಗಾರ ಎಂದರೆ ವಿಮೆ ಸೇವೆಯನ್ನು ಒದಗಿಸುವ ಸಂಸ್ಥೆ. ವಿಮೆದಾರ ಅಥವಾ ಪಾಲಿಸಿದಾರ ಎಂದರೆ ವಿಮೆಯ ಸೌಲಭ್ಯವನ್ನು ಪಡೆದಿರುವ ವ್ಯಕ್ತಿ ಅಥವಾ ಘಟಕ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ಆರಂಭಗೊಂಡಿದ್ದರೂ, ಅದು ಹೆಚ್ಚು ಪ್ರಚಲಿತಕ್ಕೆ ಬಂದುದು ೨೦೧೫-೨೦೧೬ನೇ ಸಾಲಿನಲ್ಲಿ. (ಆಂಗ್ಲ:Clean India Mission)ಇದು ಭಾರತ ಸರ್ಕಾರದ ಅಭಿಯಾನವಾಗಿದ್ದೂ, ರಸ್ತೆ, ಬೀದಿ ಹಾಗೂ ಮೂಲಸೌಕರ್ಯಗಳ ನಿರ್ಮಲೀಕರಣಕ್ಕಾಗಿ ಆರಂಭಿಸಲಾಗಿದೆ . .ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು.
ಜಾಗತಿಕ ತಾಪಮಾನ ನಿಯಂತ್ರಣ ಜಾಗತಿಕ ತಾಪಮಾನ ಏರಿಕೆ ಯೆಂದರೆ 20ನೇ ಶತಮಾನದ ಮಧ್ಯಭಾಗದಲ್ಲಿ ಭೂಮಿಯ ಮೇಲ್ಮೈ-ಸಮೀಪದಲ್ಲಿರುವ ವಾಯು ಮತ್ತು ಸಾಗರ ಪ್ರದೇಶಗಳಲ್ಲಿ ಆದ ಸರಾಸರಿ ತಾಪಮಾನದ ಏರಿಕೆ ಹಾಗೂ ಅದರ ಪ್ರಕ್ಷೇಪಿತ ಮುಂದುವರಿಕೆ. ಜಾಗತಿಕ ಮೇಲ್ಮೈ ಉಷ್ಣತೆಯು ಕಳೆದ ಶತಮಾನದಲ್ಲಿ 0.74 ± 0.18 °C (1.33 ± 0.32 °F)ರಷ್ಟು ಹೆಚ್ಚಿದೆ. ಹವಾಮಾನ ಬದಲಾವಣೆಯ ಕುರಿತಾದ ಅಂತರ-ಸರಕಾರಿ ಮಂಡಳಿಯು (IPCC) ಅಗೆದು ತೆಗೆದ ಇಂಧನಗಳು ಮತ್ತು ಅರಣ್ಯನಾಶಗಳಂತಹಾ ಮಾನವ ಚಟುವಟಿಕೆಗಳಿಂದಾದ ಹಸಿರುಮನೆ ಅನಿಲಗಳ ಸಂಗ್ರಹದ ಹೆಚ್ಚಳವು 20ನೇ ಶತಮಾನ ದ ಮಧ್ಯಕಾಲದ ನಂತರದ ತಾಪಮಾನ ಏರಿಕೆಗೆ ಕಾರಣವೆಂದು ತೀರ್ಮಾನಕ್ಕೆ ಬಂದಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ gfhvಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1509-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಡಾ.ವಿಷ್ಣುವರ್ಧನ್ (ಜನನ: ಸೆಪ್ಟೆಂಬರ್ ೧೮ ೧೯೫೨ | ಮರಣ :ಡಿಸೆಂಬರ್ ೩೦ ೨೦೦೯) ಕನ್ನಡ ಚಿತ್ರರಂಗದ ಪ್ರಸಿದ್ಧ ನಟರಲ್ಲಿ ಒಬ್ಬರು.ಸಂಪತ್ ಕುಮಾರ್ ಎಂಬುದು ಇವರ ಮೂಲ ಹೆಸರು. ಸಾಹಸಸಿಂಹ ಎಂಬ ಬಿರುದು ಪಡೆದ ಡಾ.ವಿಷ್ಣುವರ್ಧನ್ ಇದುವರೆಗೆ ಒಟ್ಟು ಸುಮಾರು ೨೦೦ ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. ಹಲವಾರು ತಮಿಳು, ತೆಲುಗು, ಮಲಯಾಳಂ, ಹಿಂದಿ ಸಿನೆಮಾಗಳಲ್ಲೂ ನಟಿಸಿದ್ದಾರೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಕಂಪ್ಯೂಟರ್ ಒಳರವಾನೆ ಸಂಸ್ಕರಣೆ ಹಾಗೂ ಹೊರರವಾನೆ ಸಾಧನಗಳನ್ನು ಹೊಂದಿದ್ದು ಒಳರವಾನೆ ಸಾಧನಗಳ ಮೂಲಕ ನೀಡಿದಂತಹ ಮಾಹಿತಿಯನ್ನು ಸಂಸ್ಕರಿಸಿ ಹೊರರವಾನೆ ಸಾಧನಗಳ ಮೂಲಕ ಉಪಯೋಗಿ(ಯೂಜರ್)ಗೆ ನೀಡುವುದಲ್ಲದೇ ಮಾಹಿತಿ ಮತ್ತು ದತ್ತಾಂಶಗಳನ್ನು ಶೇಖರಿಸಿಡಬಹುದಾದ ಸಾಧನವಾಗಿರುತ್ತದೆ ಅಲ್ಲದೇ ಶೇಖರಿಸಿಟ್ಟ ಅಥವಾ ನಾವು ನೀಡಿದಂತಹಾ ಮಾಹಿತಿಯನ್ನು ಒಂದು ಗಣಕಯಂತ್ರ ದಿಂದ ಮತ್ತೊಂದು ಗಣಕಯಂತ್ರಕ್ಕೆ ಸಂಪರ್ಕಜಾಲದ ಮೂಲಕ ನಮ್ಮ ಆದೇಶದ ಮೇರೆಗೆ ರವಾನಿಸುತ್ತದೆ..
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಮರುಬಳಕೆ ಯು ಉಪಯೋಗಿಸಿದ ವಸ್ತುಗಳನ್ನು ಹೊಸ ಉತ್ಪನ್ನಗಳಾಗಿ ತಯಾರಿಸುವುದನ್ನು ಒಳಗೊಳ್ಳುತ್ತದೆ. ಇದನ್ನು ಹೆಚ್ಚು ಉಪಯುಕ್ತ ವಸ್ತುಗಳು ವ್ಯರ್ಥವಾಗಿ ಹೋಗದಂತೆ ತಡೆಯಲು, ತಾಜಾ ಕಚ್ಚಾ ವಸ್ತುಗಳ ಅಪವ್ಯಯ ಮಾಡುವುದನ್ನು ಕಡಿಮೆ ಮಾಡಲು, ಇಂಧನಗಳ ಬಳಕೆ ಕಡಿಮೆ ಮಾಡಲು, ವಾಯು ಮಾಲಿನ್ಯ (ದಹನದ ಪ್ರಕ್ರಿಯೆ ಮಾಡುವುದರಿಂದ ಆಗುವ) ಮತ್ತು ಜಲಮಾಲಿನ್ಯವನ್ನು (ಭೂಮಿಯೊಳಗೆ ಬೇಡದ ವಸ್ತುಗಳನ್ನು ಹೂತುಹಾಕುವುದರಿಂದ ಆಗುವ) ಕಡಿಮೆ ಮಾಡಲು ನಡೆಸಲಾಗುತ್ತದೆ. ಇದು "ಸಾಂಪ್ರದಾಯಿಕ" ತ್ಯಾಜ್ಯ ವಿಸರ್ಜನೆಯನ್ನು ಕಡಿಮೆ ಮಾಡುತ್ತದೆ.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
ವನಸ್ಪತಿ ಯು ಸಾಂಪ್ರದಾಯಿಕ ಅಥವಾ ಜಾನಪದ ಔಷಧ ಪ್ರಕಾರವಾಗಿದ್ದು, ಇದು ಸಸ್ಯ ಮತ್ತು ಸಸ್ಯಜನ್ಯ ಸಾರ, ಸತ್ವಗಳ ಬಳಕೆಯನ್ನವಲಂಭಿಸಿದೆ. ಈ ವನಸ್ಪತಿಯು ಸಸ್ಯಗಳ ಔಷಧಿ, ಔಷಧೀಯ ವನಸ್ಪತಿ, ಗಿಡಮೂಲಿಕೆಗಳ ಔಷಧಿ , ಮೂಲಿಕಾಶಾಸ್ತ್ರ ಮತ್ತು ಮೂಲಿಕಾ ಚಿಕಿತ್ಸೆ ಎಂಬ ಹೆಸರುಗಳಿಂದಲೂ ಕರೆಯಲ್ಪಡುತ್ತದೆ. ಗಿಡಮೂಲಿಕೆಗಳ ಔಷಧಿಯ ವ್ಯಾಪ್ತಿಯು ಕೆಲವೊಮ್ಮೆ ಶಿಲೀಂಧ್ರಗಳು ಮತ್ತು ಜೇನುಹುಳುಗಳ ಉತ್ಪನ್ನಗಳಿಗೂ ಹರಡಿದ್ದು, ಖನಿಜಾಂಶಗಳು, ಚಿಪ್ಪುಗಳು ಹಾಗೂ ಕೆಲವು ಪ್ರಾಣಿಗಳ ದೇಹದ ಭಾಗಗಳನ್ನೂ ಒಳಗೊಂಡಿರುತ್ತವೆ.
ಪರಿಸರ ಇದೇ ಲೇಖನ. ಪರಿಸರ ವ್ಯವಸ್ಥೆ ಎಂಬ ಪದವು ಪರಿಸರವೊಂದರ ಸಂಯೋಜಿತ ಭೌತಿಕ ಮತ್ತು ಜೈವಿಕ ಘಟಕಗಳಿಗೆ ಅನ್ವಯಿಸುತ್ತದೆ. ಒಂದು ಪರಿಸರ ವ್ಯವಸ್ಥೆಯು ಸಾಮಾನ್ಯವಾಗಿ ಸ್ವಾಭಾವಿಕ ಪರಿಸರದೊಳಗಿನ ಒಂದು ಪ್ರದೇಶವಾಗಿದ್ದು, ಬಂಡೆಗಳು ಮತ್ತು ಮಣ್ಣಿನಂಥ ಪರಿಸರದ ಭೌತಿಕ (ಅಜೀವಕ) ಅಂಶಗಳು, ಸಸ್ಯಗಳು ಮತ್ತು ಪ್ರಾಣಿಗಳಂಥ ಸ್ವತಂತ್ರ (ಜೈವಿಕ) ಜೀವಿಗಳೊಂದಿಗೆ ಅದೇ ಸ್ವಾಭಾವಿಕ ನೆಲೆಯೊಳಗೆ ಒಟ್ಟಾಗಿ ಕಾರ್ಯನಿರ್ವಹಿಸುತ್ತವೆ.
ಕನ್ನಡ ಸಾಹಿತ್ಯ ಅನೇಕ ಪ್ರಕಾರಗಳಿಂದ ಶ್ರೀಮಂತವಾಗಿದೆ. ಸಾಹಿತ್ಯ ಪ್ರಕಾರದ ಸ್ವರೂಪ,ರಚನೆ(structure) ಆಧಾರದ ಮೇಲೆ ಈ ಕೆಳಕಂಡಂತೆ ವಿಂಗಡಿಸಬಹುದು.ಕನ್ನಡ ಸಾಹಿತ್ಯವೇ ಬೇರೆ -ಕನ್ನಡ ಸಾಹತ್ಯ ಪ್ರಕಾರಗಳೇ ಬೇರೆ ಆದ್ದರಿಂದ ಕನ್ನಡ ಸಾಹಿತ್ಯಕ್ಕೆ ಬೇರೆ ಶೀರ್ಶಿಕೆ ಕೊಡುವುದೇ ಉಚಿತ. ಸಾಹಿತ್ಯದ ವಿಷಯ ದೊಡ್ಡದು .ಅದರಲ್ಲಿ ಪ್ರಾಚೀನ ಸಾಹಿತ್ಯದಿಂದ ಅರ್ವಾಚೀನ ಸಾಹಿತ್ಯ ಎಲ್ಲಾ ವಿಷಯಗಳನ್ನು ಹಾಕಬಹುದು.
ಮಾನವ ಹಕ್ಕುಗಳು ಭಾರತದಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿಯು (ವಸ್ತುಸ್ಥಿತಿ) ಬಹಳ ಸಂಕೀರ್ಣ ರಚನೆಯಾಗಿದೆ. ಕಾರಣವೆಂದರೆ ದೇಶದ ವಿಶಾಲವಾದ ಭೂ ಭಾಗ ಮತ್ತು ಅತ್ಯದ್ಭುತ ವೈವಿಧ್ಯತೆಯ ಪರಿಣಾಮವಾಗಿ, ಇದರ ಸ್ಥಾನವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರದ ನೀತಿ ಮತ್ತು ಈ ದೇಶದ ಸಾರ್ವಭೌಮತ್ವ, ಸಾಮಾಜಿಕ ಸಮಾನತೆ, ಪ್ರಜಾತಂತ್ರ ಗಣರಾಜ್ಯ ರಾಷ್ಟ್ರವಾಗಿದ್ದು, ಮತ್ತು ಇತಿಹಾಸವನ್ನು ದಾಖಲಿಸಿದ್ದ ಹಳೆಯ ವಸಾಹತುಶಾಹಿ ಪ್ರಾಂತ್ಯಗಳಂತಿದೆ. ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳ ನೀಡಿಕೆಯ ಜೊತೆ, ಧಾರ್ಮಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಟ್ಟಿದೆ.
ವಿಶ್ವ ಪುಸ್ತಕ ಮತ್ತು ಕೃತಿಸ್ವಾಮ್ಯ ದಿನ
ಪ್ರತಿ ವರ್ಷದ ಎಪ್ರೀಲ್ ೨೩ರಂದು ವಿಶ್ವ ಪುಸ್ತಕ ಮತ್ತು ಕೃತಿಸ್ವಾಮ್ಯ ದಿನ (ಇದನ್ನು ಅಂತರಾಷ್ಟ್ರೀಯ ಪುಸ್ತಕ ದಿನ ಎಂದೂ ಕರೆಯುತ್ತಾರೆ). ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಆಯೋಗ (ಯುನೆಸ್ಕೋ) 1995ರಲ್ಲಿ ಮೊದಲ ಬಾರಿಗೆ ಓದುವಿಕೆ, ಪ್ರಕಾಶನ ಮತ್ತು ಕೃತಿಸ್ವಾಮ್ಯಗಳ ಬಗ್ಗೆ ಅರಿವು ಮತ್ತು ಪ್ರಚಾರ ನೀಡಲು ಈ ಕಾರ್ಯಕ್ರಮ ಹಮ್ಮಿಕೊಂಡಿತು. ಈ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಯುನೇಸ್ಕೊ ಯುವಜನತೆಯಲ್ಲಿ ಪುಸ್ತಕ ಪ್ರೇಮ, ಓದಿನ ಖುಷಿ ಅಥವಾ ಗಮ್ಮತ್ತು ಹೆಚ್ಚಿಸುವ ಮತ್ತು ಉತ್ತಮ ಲೇಖಕನ್ನು ಗೌರವಿಸುವ ಹಂಬಲ ಹೊಂದಿದೆ.
== ಮಾಹಿತಿ ಹಕ್ಕು ಕಾಯಿದೆ 2005 (RTI ) ಎಂಬುದು ಭಾರತದ ಸಂಸತ್ತಿನ ಒಂದು ಕಾಯಿದೆಯಾಗಿದೆ. ಇದು ಭಾರತದಲ್ಲಿ ಮಾಹಿತಿಯ ಸ್ವಾತಂತ್ರ್ಯದ ಶಾಸನದ ಒಂದು ರಾಷ್ಟ್ರೀಯ ಮಟ್ಟದ ಕಾರ್ಯಗತಗೊಳಿಸುವಿಕೆಯಾಗಿದ್ದು, "ಮಾಹಿತಿ ಹಕ್ಕಿನ ಕಾರ್ಯಸಾಧ್ಯ ಆಡಳಿತ ಪದ್ಧತಿಯನ್ನು ನಾಗರಿಕರಿಗಾಗಿ ಸಜ್ಜುಗೊಳಿಸುವುದಕ್ಕೆ" ಸಂಬಂಧಿಸಿದ ಉದ್ದೇಶವು ಇದರ ಹಿಂದೆ ಅಡಗಿದೆ. ರಾಜ್ಯ-ಮಟ್ಟ ಕಾನೂನೊಂದರ ಅಡಿಯಲ್ಲಿ ಪರಿಗಣಿಸಿ ಚರ್ಚಿಸಲ್ಪಟ್ಟಿರುವ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಹೊರತುಪಡಿಸಿದ, ಭಾರತದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ಕಾಯಿದೆಯು ಅನ್ವಯಿಸುತ್ತದೆ.
ಅಮೆರಿಕ ಸಂಯುಕ್ತ ಸಂಸ್ಥಾನ ವು (ಸಾಮಾನ್ಯವಾಗಿ ಸಂಯುಕ್ತ ಸಂಸ್ಥಾನ , ಯುಎಸ್ , ಯುಎಸ್ಎ ಅಥವಾ ಅಮೆರಿಕಾ ಎಂದು ಕರೆಯಲ್ಪಡುವ) ಐವತ್ತು ರಾಜ್ಯಗಳು ಮತ್ತು ಒಳ ಆಡಳಿತದಲ್ಲಿ ಸ್ವತಂತ್ರವಾಗಿರುವ ಡಿಸ್ಟ್ರಿಕ್ಟ್ಯನ್ನೊಳಗೊಂಡ ಒಂದು ಸ್ವಾಯತ್ತ ಸಾಂವಿಧಾನಿಕ ಗಣರಾಜ್ಯ. ಬಹುತೇಕ ಕೇಂದ್ರ ಭಾಗದ ಉತ್ತರ ಅಮೆರಿಕಾದಲ್ಲಿ ಸ್ಥಿತವಾಗಿರುವ ಈ ದೇಶದ ಒತ್ತೊತ್ತಾಗಿರುವ 48 ರಾಜ್ಯಗಳು ಹಾಗೂ ಪ್ರಧಾನ ಡಿಸ್ಟ್ರಿಕ್ಟ್ ವಾಷಿಂಗ್ಟನ್ ಡಿಸಿ, ಪೆಸಿಫಿಕ್ ಹಾಗೂ ಅಟ್ಲಾಂಟಿಕ್ ಸಮುದ್ರಗಳ ನಡುವೆ ನೆಲೆಗೊಂಡಿದ್ದು, ಉತ್ತರದಲ್ಲಿ ಕೆನಡಾ ಹಾಗೂ ದಕ್ಷಿಣದಲ್ಲಿ ಮೆಕ್ಸಿಕೋಗಳನ್ನು ಗಡಿಗಳಾಗಿ ಹೊಂದಿದೆ. ಅಲಾಸ್ಕಾ ರಾಜ್ಯವು ವಾಯುವ್ಯ ಭಾಗದಲ್ಲಿದ್ದು, ಕೆನಡಾವನ್ನು ಉತ್ತರ ದಿಕ್ಕಿನಲ್ಲೂ ಬೇರಿಂಗ್ ಜಲಸಂಧಿಯನ್ನು ಹಾದು ರಷ್ಯಾವನ್ನು ಪಶ್ಚಿಮ ದಿಕ್ಕಿನಲ್ಲೂ ಹೊಂದಿದೆ.
ಯೂಲ್ಕಸ್ ಪೆಪ್ಟಿಕಮ್ , PUD ಅಥವಾ ಜಠರ/ಜಠರೀಯ ಹುಣ್ಣು/ವ್ರಣ ರೋಗ , ಎಂದೂ ಕರೆಯಲ್ಪಡುವ ಜಠರ/ಜಠರೀಯ ಹುಣ್ಣು/ವ್ರಣ , ಎಂಬುದು ಜಠರ ಹಾಗೂ ಕರುಳುಗಳ ನಡುವಿನ ಪ್ರದೇಶದಲ್ಲಿ ಉಂಟಾಗುವ ಹುಣ್ಣು/ವ್ರಣ (0.5 cmನಷ್ಟು ಅಥವಾ ಹೆಚ್ಚಿನ ಗಾತ್ರದ ಮ್ಯುಕೋಸಲ್/ಲೋಳೆಪೊರೆ ಸವೆತ ಎಂದು ನಿರೂಪಿಸಲಾಗುವ)ವಾಗಿದ್ದು ಸಾಧಾರಣವಾಗಿ ಆಮ್ಲೀಯವಾಗಿರುವುದರಿಂದ ವಿಪರೀತ ನೋವುಂಟುಮಾಡಬಲ್ಲದಾಗಿರುತ್ತದೆ. 80%ರಷ್ಟು ಹುಣ್ಣು/ವ್ರಣಗಳಿಗೆ ಹೆಲಿಕೋಬ್ಯಾಕ್ಟರ್ ಪೈಲೊರಿ , ಎಂಬ ಹೊಟ್ಟೆ/ಉದರದ ಆಮ್ಲೀಯ ವಾತಾವರಣದಲ್ಲಿ ಜೀವಿಸುವ ಸುರುಳಿ-ಆಕಾರದ ಬ್ಯಾಕ್ಟೀರಿಯ/ಸೂಕ್ಷ್ಮಜೀವಿ/ಏಕಾಣುಜೀವಿಗಳೇ ಕಾರಣವಾಗಿದ್ದರೂ, ಅವುಗಳಲ್ಲಿ ಕೇವಲ 40%ರಷ್ಟು ಪ್ರಕರಣಗಳು ಮಾತ್ರ ವೈದ್ಯರ ಬಳಿ ಹೋಗುತ್ತವೆ. ಹುಣ್ಣು/ವ್ರಣಗಳು ಆಸ್ಪಿರಿನ್ನಂತಹಾ ಔಷಧಗಳಿಂದ ಹಾಗೂ ಇತರ NSAIDಗಳಿಂದ ಕೂಡಾ ಉಂಟಾಗಬಹುದು ಅಥವಾ ಉಲ್ಬಣಿಸಬಹುದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ವಿನಾಯಕ ದಾಮೋದರ ಸಾವರ್ಕರ್ ತಮ್ಮ ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ, ವಿವಿಧ ವಿಷಯಗಳ ಬಗ್ಯೆ ನಿರರ್ಗಳವಾಗಿ ಬರೆಯಬಲ್ಲ ಲೇಖಕ, ಇತಿಹಾಸಕಾರ, ಕವಿ, ತತ್ವಶಾಸ್ತ್ರಜ್ಞ, ಮತ್ತು ಸಮಾಜಸೇವಕ. ಅವರನ್ನು ಕೆಲವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅತಿ ದೊಡ್ಡ ಕ್ರಾಂತಿಕಾರಿ ಎಂದು ಪರಿಗಣಿಸಿದರೆ, ಇನ್ನು ಕೆಲವರು, ಅವರನ್ನು ಕೋಮುವಾದಿಯಾಗಿಯೂ, ಚಾಣಕ್ಯನೀತಿಯವರಾಗಿಯೂ ಭಾವಿಸುತ್ತಾರೆ. ಸ್ವಾತಂತ್ರ್ಯ ಅಂದೋಲನದ ಇತಿಹಾಸದ ಅತ್ಯಂತ ವಿವಾದಾತ್ಮಕ ವ್ಯಕ್ತಿಗಳಲ್ಲಿ ಸಾವರ್ಕರ್ ಪ್ರಮುಖರು.
ಗಂಡು ಪ್ರಾಣಿಗಳಲ್ಲಿ ದೇಹದಿಂದ ಹೊರಚಾಚಿರುವ ಜನನೇಂದ್ರಿಯವನ್ನು ತುಣ್ಣಿ ಅಥವಾ ತುಣ್ಣೆ ಅಥವಾ ಶಿಶ್ನ ಎನ್ನುತ್ತಾರೆ. ಇದು ಮುಖ್ಯವಾಗಿ ಸಂಭೋಗ ಹಾಗೂ ಜೀವ ಪುನರುತ್ಪಾದನೆಯ ಅಂಗವಾಗಿ ಹೆಣ್ಣು ಪ್ರಾಣಿಯೊಳಗೆ ವೀರ್ಯವನ್ನು ಹಾಕಲು ಸಹಾಯಕಾರಿ, ಇದು ಮುಂದುವರೆದ ಪ್ರಾಣಿಗಳಲ್ಲಿ ಮೂತ್ರ ವಿಸರ್ಜನೆಗೂ ಉಪಯೋಗವಾಗುತ್ತದೆ. ಮಾನವನ ತುಣ್ಣಿಯು ಉದ್ರೇಕಗೊಂಡಾಗ ದೊಡ್ಡದಾಗಿಯೂ ಗಟ್ಟಿಯಗಿಯೂ ಮಾರ್ಪಡುತ್ತದೆ, ಆಗ ಸಾಮಾನ್ಯವಾಗಿ 4.2 - 7.5 ಇಂಚು ಉದ್ದವೂ ಹಾಗೂ 4.8 ಇಂಚು ಸುತ್ತಳತೆಯದಾಗಿರುತ್ತದೆ.
ಸಂಶೋಧನೆ ಎಂಬುದನ್ನು ಜ್ಞಾನದ ಸಲುವಾಗಿ ನಡೆಸುವ ಹುಡುಕಾಟ ಎಂದು ವ್ಯಾಖ್ಯಾನಿಸಬಹುದು,ಅಥವಾ ಮುಕ್ತ ಮನಸ್ಸಿನಿಂದ ಯಾವುದೇ ಶಿಸ್ತುಬದ್ದ ಶೋಧನೆ,ತನಿಖೆ ಮೂಲಕ ನವೀನ ಸಂಗತಿಗಳ ಹುಟ್ಟುಹಾಕಿ ಹೊಸ ಅಥವಾ ಅಸ್ತಿತ್ವದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು.ಒಂದು ವೈಜ್ಞಾನಿಕ ಪದ್ದತಿಯಂತೆ ಹೊಸ ಸಿದ್ದಾಂತಗಳ ಅಭಿವೃದ್ಧಿಪಡಿಸುವಿಕೆಯೇ ಸಂಶೋಧನೆಯಾಗಿದೆ. ಮೂಲಭೂತ ಸಂಶೋಧನೆಯ ಪ್ರಾಥಮಿಕ ಉದ್ದೇಶವೆಂದರೆ, (ಅದನ್ನು ಅನ್ವಯಿಕ ಸಂಶೋಧನೆಗೆ ವಿರೋಧವೆನ್ನಲಾಗುತ್ತದೆ.)ಆವಿಷ್ಕಾರಗೊಳಿಸುವಿಕೆ,ವಿವರವಾಗಿ ಅರ್ಥೈಸುವಿಕೆ ಮತ್ತು ಅಭಿವೃದ್ಧಿ ಮೂಲಕ ಮನುಷ್ಯನ ಜ್ಞಾನವನ್ನು ನಿರ್ಧಿಷ್ಟ ಪದ್ದತಿ ಮತ್ತು ಶಿಸ್ತುಗಳಿಗೆ ಅಳವಡಿಸುವುದೇ ಆಗಿದೆ.ನಮ್ಮ ಜಗತ್ತು ಮತ್ತು ಬ್ರಹ್ಮಾಂಡದಲ್ಲಿನ ವೈಜ್ಞಾನಿಕ ಭೌತಿಕ ವಸ್ತುಗಳ ಮೇಲೆ ವಿಸ್ತಾರವಾದ ತಿಳಿವಳಿಕೆ ಪಡೆಯುವುದು. ವೈಜ್ಞಾನಿಕ ಸಂಶೋಧನೆ ಯು ವೈಜ್ಞಾನಿಕ ಪದ್ದತಿಯ ಅಳವಡಿಕೆಯನ್ನು ಅವಲಂಬಿಸಿದೆ.ಈ ಮೂಲಕ ಅದು ಕುತೂಹಲವನ್ನು ಬಡಿದೆಬ್ಬಿಸಿ ಫಲಿತಾಂಶಕ್ಕಾಗಿ ಸಜ್ಜುಗೊಳಿಸುತ್ತದೆ.
Harihara I Bukka Raya I (Hakka Bukka)13ನೇ ಶತಮಾನದಲ್ಲಿ ಕಂಪ್ಲಿಯ ರಾಜನಾಗಿದ್ದ ಕುಮಾರರಾಮ ನಾಯಕ (ಬೇಡ, ವಾಲ್ಮೀಕಿ) ಸಮುದಾಯಕ್ಕೆ ಸೇರಿದ ಪರಾಕ್ರಮಿ ರಾಜ. ಇವನು ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ.
revision of annual fees pertaining to bsc, nursing pharma and BPT OF karnataka state private nursing and paramedical college management seats prescribes as per (1) of the above read in government order as per the letter of director of medical education mentioned above in read (2) of the private medical college management seats fees revision as mentioned below after duly verify with relevent documents and records pertaining to the private nursing. college management seats annual fees havebeen revised by the following government order. the private institutions management seats fee has been revised with immediate effect till the further orders ಸಾಮ್ರಾಟ್ ಅಶೋಕ ಮೌರ್ಯ ಸಾಮ್ರಾಜ್ಯದ ಚಕ್ರವರ್ತಿ(ಕ್ರಿ.ಪೂ ೩೦೪ - ಕ್ರಿ.ಪೂ ೨೩೨).
ಲಿಂಗ ಸಮಾನತೆ ಹಾಗೂ ಮಹಿಳಾ ಸಬಲೀಕರಣ
ಲಿಂಗ ಸಮಾನತೆ ಹಾಗೂ ಮಹಿಳಾ ಸಬಲೀಕರಣಗಳನ್ನು ಅರ್ಥ ಮಾಡಿಕೊಳ್ಳುವುದು ಬಹಳ ಅವಶ್ಯಕ.ಹೆಣ್ಣು ಮತ್ತು ಗಂಡು ಎಂಬ ಜೈವಿಕ ಲಕ್ಷಣಗಳು ಲಿಂಗ ಎಂಬುದಾಗಿ ವ್ಯಕ್ತಿಯ ಹುಟ್ಟಿನಿಂದಲೇ ನಿರ್ಧರವಾಗುತ್ತದೆ. ಲಿಂಗವು ಸೃಷ್ಟಿಯ ಸಹಜ ಸ್ಥಿ ತಿ. ದೈಹಿಕ ರಚನೆ ಹಾಗೂ ಸಂತಾನೋತ್ಪತಿಯ ಕ್ರಿಯೆಗಳಲ್ಲಿ ಹೆಣ್ಣು ಹಾಗು ಗಂಡು ವಿಶೇಷವಾದ ಗುಣಗಳನ್ನು ಹೊಂದಿದ್ದಾರೆ.