The most-visited ಕನ್ನಡ Wikipedia articles, updated daily. Learn more...
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ಆರಂಭಗೊಂಡಿದ್ದರೂ, ಅದು ಹೆಚ್ಚು ಪ್ರಚಲಿತಕ್ಕೆ ಬಂದುದು ೨೦೧೫-೨೦೧೬ನೇ ಸಾಲಿನಲ್ಲಿ. (ಆಂಗ್ಲ:Clean India Mission)ಇದು ಭಾರತ ಸರ್ಕಾರದ ಅಭಿಯಾನವಾಗಿದ್ದೂ, ರಸ್ತೆ, ಬೀದಿ ಹಾಗೂ ಮೂಲಸೌಕರ್ಯಗಳ ನಿರ್ಮಲೀಕರಣಕ್ಕಾಗಿ ಆರಂಭಿಸಲಾಗಿದೆ . .ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ gfhvಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ವಿನಾಯಕ ದಾಮೋದರ ಸಾವರ್ಕರ್ ತಮ್ಮ ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ, ವಿವಿಧ ವಿಷಯಗಳ ಬಗ್ಯೆ ನಿರರ್ಗಳವಾಗಿ ಬರೆಯಬಲ್ಲ ಲೇಖಕ, ಇತಿಹಾಸಕಾರ, ಕವಿ, ತತ್ವಶಾಸ್ತ್ರಜ್ಞ, ಮತ್ತು ಸಮಾಜಸೇವಕ. ಅವರನ್ನು ಕೆಲವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅತಿ ದೊಡ್ಡ ಕ್ರಾಂತಿಕಾರಿ ಎಂದು ಪರಿಗಣಿಸಿದರೆ, ಇನ್ನು ಕೆಲವರು, ಅವರನ್ನು ಕೋಮುವಾದಿಯಾಗಿಯೂ, ಚಾಣಕ್ಯನೀತಿಯವರಾಗಿಯೂ ಭಾವಿಸುತ್ತಾರೆ. ಸ್ವಾತಂತ್ರ್ಯ ಅಂದೋಲನದ ಇತಿಹಾಸದ ಅತ್ಯಂತ ವಿವಾದಾತ್ಮಕ ವ್ಯಕ್ತಿಗಳಲ್ಲಿ ಸಾವರ್ಕರ್ ಪ್ರಮುಖರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಲಿಂಗ ಸಮಾನತೆ ಹಾಗೂ ಮಹಿಳಾ ಸಬಲೀಕರಣ
ಲಿಂಗ ಸಮಾನತೆ ಹಾಗೂ ಮಹಿಳಾ ಸಬಲೀಕರಣಗಳನ್ನು ಅರ್ಥ ಮಾಡಿಕೊಳ್ಳುವುದು ಬಹಳ ಅವಶ್ಯಕ.ಹೆಣ್ಣು ಮತ್ತು ಗಂಡು ಎಂಬ ಜೈವಿಕ ಲಕ್ಷಣಗಳು ಲಿಂಗ ಎಂಬುದಾಗಿ ವ್ಯಕ್ತಿಯ ಹುಟ್ಟಿನಿಂದಲೇ ನಿರ್ಧರವಾಗುತ್ತದೆ. ಲಿಂಗವು ಸೃಷ್ಟಿಯ ಸಹಜ ಸ್ಥಿ ತಿ. ದೈಹಿಕ ರಚನೆ ಹಾಗೂ ಸಂತಾನೋತ್ಪತಿಯ ಕ್ರಿಯೆಗಳಲ್ಲಿ ಹೆಣ್ಣು ಹಾಗು ಗಂಡು ವಿಶೇಷವಾದ ಗುಣಗಳನ್ನು ಹೊಂದಿದ್ದಾರೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1509-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದೆ ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಜನಪದ ಮತ್ತು ಜಾನಪದ ಎಂಬ ಶಬ್ದಗಳು ಒಂದು ಸಾಮಾಜಿಕ ವ್ಯವಸ್ಥೆಯನ್ನು ಸೂಚಿಸುತ್ತವೆ. ಪ್ರತಿಯೊಂದು ಸಾಮಾಜವೂ ತನ್ನ ಪುರಾತನರ ಸಾರವನ್ನು ಹೀರಿ ತನ್ನ ಸದ್ಯದ ಬದುಕಿಗೊಂದು ಅರ್ಥವನ್ನೂ, ತನ್ನ ಸದ್ಯದ ಸಮಸ್ಯೆಗಳಿ ಗೊಂದು ಪರಿಹಾರವನ್ನೂ, ತನ್ನ ಭಕ್ತಿಗೊಂದು ರೂಪವನ್ನೂ - ಕಲೆ, ತಂತ್ರಜ್ಞಾನ ಇತ್ಯಾದಿಗಳ ಬೆಳವಣಿಗೆಯನ್ನೂ ಸಾಮುದಾಯಿಕವಾಗಿ ನಿರ್ವಹಿಸುತ್ತದೆ. ಇದು ಯಾವುದೇ ಅಧಿಕಾರದ, ಸಂಪ್ರದಾಯದ ಪೋಷಣೆಯಿಲ್ಲದೇ ತನ್ನಿಂದ ತಾನೇ ಹರಿದು ಬಂದು ಮಣ್ಣಿನ ಸಂಸ್ಕೃತಿಯ ಸಾರವಾಗಿ 'ಜಾನಪದ' ಎನ್ನಿಸಿಕೊಂಡಿದೆ.
ಏಡ್ಸ್ (ಅಕ್ವೈರ್ಡ್ ಇಮ್ಯೂನ್ ಡಿಫಿಷಿಯನ್ಸಿ ಸಿಂಡ್ರೊಮ್ ಅಥವಾ ಅಕ್ವೈರ್ಡ್ ಇಮ್ಯುನೊ ಡಿಫಿಷಿಯನ್ಸಿ ಸಿಂಡ್ರೋಮ್) ಎಚ್ಐವಿ (ಹ್ಯೂಮನ್ ಇಮ್ಯುನೊ ಡಿಫಿಷಿಯನ್ಸಿ ವೈರಸ್) ಎಂಬ ವೈರಸ್ ಉಂಟಾಗುವ ಲಕ್ಷಣವಾಗಿದ್ದು ಇದು. ಅನಾರೋಗ್ಯ, ನಿರೋಧಕ ವ್ಯವಸ್ಥೆಯ ಬದಲಾಯಿಸುತ್ತದೆ ಹೆಚ್ಚು ದುರ್ಬಲ ಸೋಂಕುಗಳು ಮತ್ತು ರೋಗಗಳಿಗೆ ಜನರು ಮಾಡುವ. ಸಿಂಡ್ರೋಮ್ ಮುಂದುವರೆದಂತೆ ಈ ಪ್ರಭಾವಕ್ಕೆ ಹಾಳಾಗುತ್ತದೆ.ಎಚ್ಐವಿ ಸೋಂಕಿತ ವ್ಯಕ್ತಿಯನ್ನು (ವೀರ್ಯ ಮತ್ತು ಯೋನಿ ದ್ರವಗಳು, ರಕ್ತ ಮತ್ತು ಎದೆ ಹಾಲು) ದೇಹದ ದ್ರವಗಳು ಕಂಡುಬರುತ್ತದೆ.
ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚೆನ್ನಮ್ಮನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
ಕನ್ನಡ ಸಾಹಿತ್ಯ ಅನೇಕ ಪ್ರಕಾರಗಳಿಂದ ಶ್ರೀಮಂತವಾಗಿದೆ. ಸಾಹಿತ್ಯ ಪ್ರಕಾರದ ಸ್ವರೂಪ,ರಚನೆ(structure) ಆಧಾರದ ಮೇಲೆ ಈ ಕೆಳಕಂಡಂತೆ ವಿಂಗಡಿಸಬಹುದು.ಕನ್ನಡ ಸಾಹಿತ್ಯವೇ ಬೇರೆ -ಕನ್ನಡ ಸಾಹತ್ಯ ಪ್ರಕಾರಗಳೇ ಬೇರೆ ಆದ್ದರಿಂದ ಕನ್ನಡ ಸಾಹಿತ್ಯಕ್ಕೆ ಬೇರೆ ಶೀರ್ಶಿಕೆ ಕೊಡುವುದೇ ಉಚಿತ. ಸಾಹಿತ್ಯದ ವಿಷಯ ದೊಡ್ಡದು .ಅದರಲ್ಲಿ ಪ್ರಾಚೀನ ಸಾಹಿತ್ಯದಿಂದ ಅರ್ವಾಚೀನ ಸಾಹಿತ್ಯ ಎಲ್ಲಾ ವಿಷಯಗಳನ್ನು ಹಾಕಬಹುದು.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಕಂಪ್ಯೂಟರ್ ಒಳರವಾನೆ ಸಂಸ್ಕರಣೆ ಹಾಗೂ ಹೊರರವಾನೆ ಸಾಧನಗಳನ್ನು ಹೊಂದಿದ್ದು ಒಳರವಾನೆ ಸಾಧನಗಳ ಮೂಲಕ ನೀಡಿದಂತಹ ಮಾಹಿತಿಯನ್ನು ಸಂಸ್ಕರಿಸಿ ಹೊರರವಾನೆ ಸಾಧನಗಳ ಮೂಲಕ ಉಪಯೋಗಿ(ಯೂಜರ್)ಗೆ ನೀಡುವುದಲ್ಲದೇ ಮಾಹಿತಿ ಮತ್ತು ದತ್ತಾಂಶಗಳನ್ನು ಶೇಖರಿಸಿಡಬಹುದಾದ ಸಾಧನವಾಗಿರುತ್ತದೆ ಅಲ್ಲದೇ ಶೇಖರಿಸಿಟ್ಟ ಅಥವಾ ನಾವು ನೀಡಿದಂತಹಾ ಮಾಹಿತಿಯನ್ನು ಒಂದು ಗಣಕಯಂತ್ರ ದಿಂದ ಮತ್ತೊಂದು ಗಣಕಯಂತ್ರಕ್ಕೆ ಸಂಪರ್ಕಜಾಲದ ಮೂಲಕ ನಮ್ಮ ಆದೇಶದ ಮೇರೆಗೆ ರವಾನಿಸುತ್ತದೆ..
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಜಾಗತಿಕ ತಾಪಮಾನ ನಿಯಂತ್ರಣ ಜಾಗತಿಕ ತಾಪಮಾನ ಏರಿಕೆ ಯೆಂದರೆ 20ನೇ ಶತಮಾನದ ಮಧ್ಯಭಾಗದಲ್ಲಿ ಭೂಮಿಯ ಮೇಲ್ಮೈ-ಸಮೀಪದಲ್ಲಿರುವ ವಾಯು ಮತ್ತು ಸಾಗರ ಪ್ರದೇಶಗಳಲ್ಲಿ ಆದ ಸರಾಸರಿ ತಾಪಮಾನದ ಏರಿಕೆ ಹಾಗೂ ಅದರ ಪ್ರಕ್ಷೇಪಿತ ಮುಂದುವರಿಕೆ. ಜಾಗತಿಕ ಮೇಲ್ಮೈ ಉಷ್ಣತೆಯು ಕಳೆದ ಶತಮಾನದಲ್ಲಿ 0.74 ± 0.18 °C (1.33 ± 0.32 °F)ರಷ್ಟು ಹೆಚ್ಚಿದೆ. ಹವಾಮಾನ ಬದಲಾವಣೆಯ ಕುರಿತಾದ ಅಂತರ-ಸರಕಾರಿ ಮಂಡಳಿಯು (IPCC) ಅಗೆದು ತೆಗೆದ ಇಂಧನಗಳು ಮತ್ತು ಅರಣ್ಯನಾಶಗಳಂತಹಾ ಮಾನವ ಚಟುವಟಿಕೆಗಳಿಂದಾದ ಹಸಿರುಮನೆ ಅನಿಲಗಳ ಸಂಗ್ರಹದ ಹೆಚ್ಚಳವು 20ನೇ ಶತಮಾನ ದ ಮಧ್ಯಕಾಲದ ನಂತರದ ತಾಪಮಾನ ಏರಿಕೆಗೆ ಕಾರಣವೆಂದು ತೀರ್ಮಾನಕ್ಕೆ ಬಂದಿದೆ.
ನೋಡಿ:ವಾಯುಗುಣ ಬದಲಾವಣೆ ಹವಾಮಾನವು ವಾತಾವರಣದ ಸ್ಥಿತಿ, ಬಿಸಿ ಅಥವಾ ಶೀತಲ, ತೇವ ಅಥವಾ ಶುಷ್ಕ, ಶಾಂತ ಅಥವಾ ಬಿರುಗಾಳಿಯಿಂದ ಕೂಡಿದ, ನಿಚ್ಚಳ ಅಥವಾ ಮೋಡಕವಿದ ಅನ್ನುವಷ್ಟರ ಮಟ್ಟಿಗೆ. ಬಹುತೇಕ ಹವಾಮಾನ ವಿದ್ಯಮಾನಗಳು ಪರಿವರ್ತನ ಗೋಳದಲ್ಲಿ ಸಂಭವಿಸುತ್ತವೆ, ಸಮಗೋಳದ ಸ್ವಲ್ಪ ಕೆಳಗೆ. ಹವಾಮಾನವು ಸಾಮಾನ್ಯವಾಗಿ ದಿನನಿತ್ಯದ ಉಷ್ಣಾಂಶ ಮತ್ತು ಮಳೆ ಪ್ರಮಾಣವನ್ನು ನಿರ್ದೇಶಿಸಿದರೆ, ವಾಯುಗುಣವು ಸಮಯದ ದೀರ್ಘಾವಧಿಯಲ್ಲಿ ಸರಾಸರಿ ವಾತಾವರಣ ಸ್ಥಿತಿಗಳಿಗಾಗಿ ಬಳಸಲಾಗುವ ಪದ.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಅರ್ಥಶಾಸ್ತ್ರವು ಸರಕುಗಳ ಮತ್ತು ಸೇವೆಗಳ ಉತ್ಪಾದನೆ, ಹಂಚುವಿಕೆ ಮತ್ತು ಬಳಕೆಗಳನ್ನು ಅಧ್ಯಯನ ಮಾಡುವ ಒಂದು ಸಮಾಜ ವಿಜ್ಞಾನ. ಪ್ರಚಲಿತ ಆರ್ಥಿಕ ವಿನ್ಯಾಸಗಳು, ಭೌತಿಕ ವಿಜ್ಞಾನಗಳಿಗೆ ಹೆಚ್ಚಿನ ಸಮಾನ ಧರ್ಮವುಳ್ಳ ಒಂದು ಪ್ರಾಯೋಗಿಕ ಹಾದಿ ಬಳಸುವ ಒಂದು ಅಪೇಕ್ಷೆಗೆ ಬದ್ಧವಾಗಿ, ೧೯ನೇ ಶತಮಾನದಲ್ಲಿ ತಡವಾಗಿ ರಾಜಕೀಯ ಆರ್ಥಿಕ ವ್ಯವಸ್ಥೆಯ ವಿಶಾಲವಾದ ವ್ಯಾಪ್ತಿಯಿಂದ ಹೊರಹೊಮ್ಮಿದವು. ಆಧುನಿಕ ಅರ್ಥಶಾಸ್ತ್ರದ ಬಹಳಷ್ಟನ್ನು ನಿರೂಪಿಸುವ ಒಂದು ವ್ಯಾಖ್ಯಾನ ಲಾಯನಲ್ ರಾಬಿನ್ಸ್ರ ಒಂದು ೧೯೩೨ರ ಪ್ರಬಂಧದಲ್ಲಿದೆ: "ಮಾನವೀಯ ವರ್ತನೆಯನ್ನು ಪರ್ಯಾಯ ಉಪಯುಕ್ತತೆಗಳಿರುವ ಮಿತಿಗಳು ಮತ್ತು ದುರ್ಲಭವಾದ ಸಾಧನಗಳ ನಡುವಣ ಒಂದು ಸಂಬಂಧವಾಗಿ ಅಧ್ಯಯನಮಾಡುವ ವಿಜ್ಞಾನ." ವಿರಳತೆಯು ಲಭ್ಯವಾದ ಸಂಪನ್ಮೂಲಗಳು ಎಲ್ಲ ಬೇಕುಗಳನ್ನು ಮತ್ತು ಆವಶ್ಯಕತೆಗಳನ್ನು ನೆರವೇರಿಸಲು ಸಾಕಾಗುವುದಿಲ್ಲ ಎಂದು ಸೂಚಿಸುತ್ತದೆ.
ಮೊಘಲ್ ಸಾಮ್ರಾಜ್ಯ (ಉರ್ದು:: مغل باد شاہ) ಭಾರತೀಯ ಉಪಖಂಡದ ಉತ್ತರ ಭಾಗಗಳನ್ನು ೧೫೨೬ ರಿಂದ ಆಳಿದ ಮುಖ್ಯ ಸಾಮ್ರಾಜ್ಯಗಳಲ್ಲಿ ಒಂದು. ಮೊಘಲ್ ಸಾಮ್ರಾಜ್ಯದ ಸ್ಥಾಪನೆ ೧೫೨೬ ರಲ್ಲಿ ಬಾಬರ್ ನಿಂದ ನಡೆಯಿತು - ಮೊದಲ ಪಾಣಿಪಟ್ ಯುದ್ಧದಲ್ಲಿ ಇಬ್ರಾಹಿಮ್ ಲೋದಿಯನ್ನು ಸೋಲಿಸಿದ ನಂತರ. ಹುಮಾಯೂನ್ ನ ಕಾಲದಲ್ಲಿ ಶೇರ್ ಷಾ ಮೊಘಲ್ ಸಾಮ್ರಾಜ್ಯವನ್ನು ಸೋಲಿಸಿದರೂ, ನಂತರ ಅಕ್ಬರ್ ನ ಕೆಳಗೆ ಮೇಲೇರಲಾರಂಭಿಸಿದ ಮೊಘಲ್ ಸಾಮ್ರಾಜ್ಯ ಔರಂಗಜೇಬನ ಕಾಲದ ವರೆಗೂ ಬೆಳೆಯಿತು.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ತಾಜ್ ಮಹಲ್ (pronounced /tɑdʒ məˈhɑl/; ಹಿಂದಿ: ताज महल ; ಪರ್ಷಿಯನ್/ಉರ್ದು: تاج محل ) ಭಾರತದ ಆಗ್ರಾದಲ್ಲಿರುವ ಭವ್ಯ ಸಮಾಧಿಯಾಗಿದೆ. ಇದನ್ನು ಮೊಘಲ್ ಚಕ್ರವರ್ತಿ ಷಹ ಜಹಾನ್ ತನ್ನ ಮೆಚ್ಚಿನ ಪತ್ನಿ ಮಮ್ತಾಜ್ ಮಹಲ್ಳ ನೆನಪಿಗಾಗಿ ಕಟ್ಟಿಸಿದನು. ಪರ್ಷಿಯನ್, ಭಾರತೀಯ ಮತ್ತು ಮುಸ್ಲಿಂ ವಾಸ್ತುಶೈಲಿಗಳ ಸಮ್ಮಿಶ್ರಣವಾದ ಮೊಘಲ್ ವಾಸ್ತುಶೈಲಿಗೆ ತಾಜ್ ಮಹಲ್ ("ತಾಜ್" ಎಂದೂ ಕರೆಯಲ್ಪಡುತ್ತದೆ) ಅತ್ಯುತ್ತಮ ಉದಾಹರಣೆಯೆಂದು ಪರಿಗಣಿಸಲಾಗಿದೆ.
ಮಧ್ಯ ಏಷ್ಯಾದಿಂದ ಬಂದ ಮುಸ್ಲಿಂಜಯಶಾಲಿ, ಜಹೀರ್ ಉದ್ -ದಿನ್ ಮಹಮ್ಮದ್ ಬಾಬರ್ (February 23 [O.S. February 14] 1483 — January 5 [O.S. December 26, 1530] 1531) ಹಲವಾರು ಸತತ ಸೋಲಿನಿಂದ ,ಎದೆಗುಂದದೆ ಅಂತಿಮವಾಗಿ ಭಾರತದಲ್ಲಿ ಮುಘಲ್ ಸಾಮ್ರಾಜ್ಯ ಸ್ಥಾಪಿಸಿದನು . ತನ್ನ ತಂದೆಯ ಮೂಲಕ ತೈಮೂರುವಂಶದ ನೇರಸ್ಥಾನಾಗಿ , ಗೆನ್ಗೀಸ್ ಖಾನ್ ನ ವಂಶಸ್ಥನಾದದ್ದು , ತಾಯಿಯ ಮೂಲಕ . ಬಾಬರ್ ತನ್ನ ವಂಶ ಪರಂಪರೆಯನ್ನು ಟಿಮುರಿಡ್ ಮತ್ತು ಚಾಘತಯ್ -ಟರ್ಕಿಕ್ ಎಂದು ಗುರುತಿಸಿಕೊಂಡಿದ್ದು,ತನ್ನ ಹುಟ್ಟು ,ವಾತಾವರಣ, ತರಭೇತಿ ಮತ್ತು ಸಂಸ್ಕೃತಿಗಳು ಪೆರ್ಸಿಯನ್ ಸಂಸ್ಕೃತಿ ಯಿಂದ ಬಂದವುಗಳೆಂದು,ಆದುದರಿಂದ ತನ್ನ ವಂಶದವರಿಂದ ಬಂದ ಇವುಗಳನ್ನು ತನ್ನ ಜವಾಬ್ದಾರಿಯಿಂದ ಪೋಷಿಸಬೇಕೆಂದು, ಪೆರ್ಸಿಯನ್ ಸಂಸ್ಕೃತಿಯ ಪ್ರಭಾವ ವನ್ನು ಭಾರತದ ಉಪಖಂಡ ದಲ್ಲಿ ವಿಸ್ತರಿಸಿ , ಬುದ್ಧಿವಂತಿಕೆಯ ಸಾಹಿತ್ಯ , ಕಲೆ , ಮತ್ತು ಚಾರಿತ್ರಿಕ ಫಲಿತಾಂಶದ ಮೂಲಕ ಪರಿಚಯಿಸಲು ಉದ್ಯುಕ್ತನಾದನು.