The most-visited ಕನ್ನಡ Wikipedia articles, updated daily. Learn more...
ಭಾರತೀಯ ಜಾತಿ ಪದ್ದತಿ ಯು ಸಾಮಾಜಿಕ ಶ್ರೇಣೀಕರಣವನ್ನು ವಿವರಿಸುತ್ತದೆ.ಅದಲ್ಲದೇ ಸಾಮಾಜಿಕ ನಿರ್ಭಂಧಗಳಡಿ ಭಾರತ ಉಪಖಂಡದ ಸಾವಿರಾರು ಪಂಗಡದ ಪ್ರವರ್ಗಗಳನ್ನು, ವಂಶವಾಹಿನಿಗಳ ಸಮೂಹವನ್ನು ವ್ಯಾಖ್ಯಾನಿಸುತ್ತದೆ.ಇದನ್ನೇ ಜಾತಿ ಗಳು ಅಥವಾ ಕೋಮು ಗಳೆಂದು ಹೇಳಲಾಗುತ್ತದೆ. ಈ ಜಾತಿಯಲ್ಲಿಯೇ ಅನ್ಯಗೋತ್ರ ಗುಂಪುಗಳ ಅಸ್ತಿತ್ವ ಇದೆ,ಇದನ್ನು ಗೋತ್ರಗಳು,ವಂಶವಾಹಿನಿ ಅಥವಾ ಕುಟುಂಬದ ಕುಲಗೋತ್ರವನ್ನು ವೈಯಕ್ತಿಕ ನೆಲೆಯಲ್ಲಿ ಗುರುತಿಸಲಾಗುತ್ತದೆ. ಹಲವಾರು ಉಪ-ಜಾತಿಗಳಲ್ಲಿ ಶಾಕಾದ್ವಿಪಿ,ಕೂಡಾ ಒಂದು,ಒಂದೇ ಗೋತ್ರದಲ್ಲಿ ವಿವಾಹ ಅನುಮತಿಸಿದ್ದರೂ ಅದನ್ನು ಪರ್ಯಾಯ ನಿರ್ಭಂದಿತ ಸಗೋತ್ರ ವಿವಾಹಕ್ಕೆ ಪರಿಗಣಿಸಲಾಗುತ್ತದೆ.(ಉದಾಹರಣೆಗೆ ಅಡ್ಡಹೆಸರುಗಳು ಒಂದೇ ಆಗಿದ್ದರೆ ಅಲ್ಲಿ ವಿವಾಹ ನಿಷಿದ್ದದ ನಿಯಮ ಉಂಟು) ಹಿಂದುತ್ವದೊಂದಿಗೆ ಗುರುತಿಸಿಕೊಂಡಿರುವ ಇತರ ಮುಸ್ಲಿಮರ ಕೆಲವು ಗುಂಪುಗಳು ಮತ್ತು ಕ್ರಿಶ್ಚನ್ ರು ಕೂಡಾ ಇದೇ ತೆರನಾದ ಗುಂಪು ಪ್ರಭೇದವನ್ನು ಹೊಂದಿರುವುದು ಭಾರತದ ಉಪಖಂಡದಲ್ಲಿ ಕಾಣುತ್ತದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಬೆಳೆಯ ಆವರ್ತನೆ, ಹಸಿರು ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಅವಿಚ್ಛಿನ್ನ ಪರಂಪರೆಯ ಶ್ರೀ ರಾಮಚಂದ್ರಾಪುರ ಮಠದ ಗೋಕರ್ಣ ಸಂಸ್ಥಾನದ ಈಗಿನ ಪೀಠಾಧಿಪತಿಗಳು. ಇವರು ಪರಮಪೂಜ್ಯರೂ, ಮಹಾನ್ ತಪಸ್ವಿಗಳೂ, ಶ್ರೇಷ್ಠ ವಿದ್ವಾಂಸರೂ ಆಗಿದ್ದ ಬ್ರಹ್ಮಲೀನ ಶ್ರೀ ಶ್ರೀ ರಾಘವೇಂದ್ರ ಭಾರತೀ ಮಹಾಸ್ವಾಮಿಗಳವರಿಂದ ೧೯೯೪ರ ಏಪ್ರಿಲ್ನಲ್ಲಿ,(೧೫-೪-೧೯೯೪) ಸಂನ್ಯಾಸ ದೀಕ್ಷೆ ಪಡೆದರು. ದಿ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ gfhvಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಬ್ರಿಟೀಷರಿಂದ ಆರಂಭಿಸಲ್ಪಪಟ್ಟ ಹಿಂದೂ 'ವೈಯಕ್ತಿಕ ಕಾನೂನಿನ ಸುಧಾರಣೆ ಮತ್ತು ಕ್ರೂಢೀಕರಣ' ಪ್ರಕ್ರಿಯೆಯು,೧೯೪೭ರಲ್ಲಿ ಭಾರತ ಸ್ವಾತಂತ್ರವಾದ ಮೇಲೆ ವಸಾಹತುಶಾಹಿನಂತರದ ಸರ್ಕಾರದ ಪ್ರಧಾನ ಮಂತ್ರಿಯಾದ ಜವಹರಲಾಲ್ ನೆಹರು ನೇತ್ರುತ್ವದಲ್ಲಿ ಸಂಪೂರ್ಣಗೊಂಡಿತು.ಹಸ್ತಕ್ಷೇಪ ಮಾಡದಿರುವ ಬ್ರಿಟಿಷ್ ನೀತಿಯ ಪ್ರಕಾರ, ವೈಯಕ್ತಿಕ ಕಾನೂನಿನ ಸುಧಾರಣೆಯು ಹಿಂದೂ ಸಮುದಾಯದಲ್ಲಿ ಹುಟ್ಟಿದಂತಹ ಬೇಡಿಕೆಯಾಗಿತ್ತು.ಇದು ಆಗಿನ ಸಂಗತಿಯಾಗಿರಲಿಲ್ಲ,ಆ ವೇಳೆಗೆ ಮಹತ್ವವಾದ ವಿರೋಧವು ವಿವಿಧ ಹಿಂದೂ ರಾಜಕಾರಣಿಗಳು,ಸಂಘಟನೆಗಳು ಮತ್ತು ಧಮ೯ಭಕ್ತರುಗಳಿಂದ ವ್ಯಕ್ತವಾಗಿ,ಅನ್ಯಾಯಯುತವಾದದ್ದೆಂದು ಅವರು ಹಿಂದೂ ಸಮುದಾಯದಿಂದ ತಮ್ಮನ್ನು ತಾವು ಬೇಪ೯ಡಿಸಿಕೊಂಡರು ಆದ ಕಾರಣ ಕಾನೂನುಗಳ ಸುಧಾರಣೆಯಾಗಬೇಕಿತ್ತು.ಹೇಗಾದರೂ,ಏಕರೂಪತೆ ಎಂಬುದು ಆದಶ೯ಪ್ರಾಯ ರಾಷ್ಟ್ರದ ಮೊದಲ ಹೆಜ್ಜೆ,ಹೀಗಾಗಿ 'ಕ್ರೂಢಿಕರಣವು' ಹಿಂದೂ ಸಮುದಾಯವನ್ನು ಒಗ್ಗೂಡಿಸುವ ಸಲುವಾಗಿ ಅಗತ್ಯವಾದದ್ದು ಎಂದು ನೆಹರು ಆಡಳಿತವು ಕಂಡುಕೊಂಡಿತು.೧೯೫೫-೫೬ರಲ್ಲಿ ಅವರು ನಾಲ್ಕು ಹಿಂದೂ ಕೋಡ್ ಬಿಲ್ಸ್ ಗಳನ್ನು ಜಾರಿಗೊಳಿಸುವಲ್ಲಿ ಯಶಸ್ವಿಯಾದರು.ಅವುಗಳೆಂದರೆ- (೧)ಹಿಂದೂ ವಿವಾಹ ಕಾಯ್ದೆ (೨)ಹಿಂದೂ ಅನುಪೂವಿ೯ ಅಥವಾ ಅನುಕ್ರಮ ಕಾಯ್ದೆ (೩)ಹಿಂದೂ ಅಲ್ಪಸಂಖ್ಯಾತ ಮತ್ತು ಗಾಡ್೯ನ್ ಶಿಫ್ ಕಾಯ್ದೆ (೪)ಹಿಂದೂ ದತ್ತು ಸ್ವೀಕಾರ ಮತ್ತು ಜೀವನಾಂಶಕಾಯ್ದೆ ಈ ಕಾಯ್ದೆಗಳು ಸ್ತ್ರೀಯರ,ಧಾಮಿ೯ಕ ಮತ್ತು ರಾಷ್ಟ್ರೀಯವಾದಿ ಗುಂಪುಗಳಿಗೆ ಸಂಬಂಧಿಸಿದಂತೆ ಇಂದಿಗೂ ಸಹ ವಿವಾದಾತ್ಮಕವಾಗಿವೆ. ಹಿನ್ನೆಲೆ ಹಿಂದೂಧಮ೯ದ ಜೀವನಸ್ವರೂಪದ ಬಗ್ಗೆ ಬಹಳ ವ್ಯಾಪಕವಾದ ಕೆಲವು ಶಾಶ್ವತವಾದ ನಿಧಿ೯ಷ್ಟ ಮೂಲಭೂತ ನಂಬಿಕೆಗಳು ಇರಬಹುದು.ಹೀಗಾಗಿ ಹಿಂದೂ ಕಾನೂನುಗಳು ಹೆಚ್ಚು ಏಕರೂಪವಾಗಿಲ್ಲದ್ದು.ವಿದ್ವಾಂಸರಾದ ಡೆರೆಟ್ ರವರ ಗ್ರಂಥವಾದ "ಹಿಂದೂ ಕಾನೂನು"ನಲ್ಲಿ ಉಲ್ಲೇಖಿತವಾಗಿದ್ದು-"ನಾವು ಹಿಂದೂಗಳನ್ನು ಗುರುತಿಸುವುದಾದರೆ,ಭೂಮಿಯ ಅಂತ್ಯಭಾಗದಿಂದ ಸಂಗ್ರಹಿಸಲ್ಪಟ್ಟಿರಬಹುದಾದ ಮನುಷ್ಯ ಜೀವಿಗಳ ವೈವಿಧ್ಯಮಯವಾದ ಜೀವನ ಕ್ರಮ,ಮನೋವಿಜ್ಞಾನ,ಹವ್ಯಾಸ,ಮತ್ತು ಕಸುಬು ಮುಂತಾದ ಮಾನವ ಸಮುದಾಯದ ವಿಭಿನ್ನ ಸ್ವರೂಪದ ಆಧಾರದ ಮೇಲೆ ಹಿಂದೂಗಳೆಂದು ವಿವರಿಸಿದ್ದಾರೆ.ಹಾಗೆಯೇ ಧಮ೯ಶಾಸ್ತ್ರವು ಕೆಲೊವೊಂದು ಗ್ರಾಂಥಿಕ ವಿಷಯಗಳ ಮೇಲೆ ಹಿಡಿತವನ್ನು ಹೊಂದಿದೆ ಅವುಗಳಂದರೆ ವಿವಾಹ,ದತ್ತುಸ್ವೀಕಾರ,ಅಲ್ಪಸಂಖ್ಯಾತರು,ಅನುಕ್ರಮ ಹಕ್ಕುದಾರಿಕೆ,ಧಾಮಿ೯ಕ ದತ್ತಿಗಳು ಮತ್ತು ಜಾತಿ ಸವಲತ್ತುಗಳು ಮುಂತಾದ ಖಾಸಗಿ ಕಾನೂನುಗಳಲ್ಲಿ ಹಿಂದೂ ಧಮ೯ ವಿಚಾರಗಳನ್ನು ಕಾಣಬಹುದು.ಹೇಗಾದರೂ,ಹಿಂದೂ ಕಾನೂಗಳ ಅಸಮಂಜಸ ನಿಯಮಗಳನ್ನು ಹೆಸರಿಸುವುದು ಮತ್ತು ವಣಿ೯ಸುವುದು ಕಷ್ಟಸಾಧ್ಯವಾಗಿದ್ದು,ಬೇರೆ ವಿಚಾರಗಳಿಗೆ ಸಂಬಂಧಿಸಿದಂತೆ ಹಿಂದೂ ಕಾನೂನುಗಳು ಕಲಬೆರಕೆಗಳಿಂದಾದ ನಿಯಮಗಳು,ಸಾಮರಸ್ಯವಿಲ್ಲದೆ ಅಪೈಪೋಟಿಯುತವಾಗಿವೆ.ಹೀಗಾಗಿ ಹಿಂದೂ ಕಾನೂಗಳ ಏಕಪ್ರಕಾರತೆಯಲ್ಲಿ ಕೊರತೆಯನ್ನು ಕಾಣಬಹುದು. ಹಿಂದೂ ಕಾನೂನುಗಳ ವಿಷಯ ಮತ್ತು ರಚನೆಯು ಅಂತಿಮವಾಗಿ ಬ್ರಿಟೀಷರ ಆಡಳಿತ ಕಾಲದಲ್ಲಿ ರಕ್ಷಣೆಗೆ ಬಂದು,ಅವರ ಬಹಳಷ್ಟು ಗಮನ ಹಿಂದೂ ಧಾಮಿ೯ಕ ಕಾನೂನು ಗ್ರಂಥಗಳ ಮೇಲಾಗಿ ಏಕಕಾಲದಲ್ಲಿ ಇಂಗ್ಲಿಷ್ ಕಾಯ೯ವಿಧಾನವನ್ನು ಉರಿದುಂಬಿಸಿದರು ಮತ್ತು ಇದ್ದ ಅಂತರವನ್ನು ಆಂಗ್ಲ ಕಾನೂನಿನಿಂದ ಪೂಣ೯ ಮಾಡಿದರು.ನಂತರದ ಅಭಿಪ್ರಾಯಗಳು ಒಂದಕ್ಕೊಂದು ಭಿನ್ನವಾಗಿದ್ದು ವಿಸ್ತಾರವಾದ ವ್ಯತ್ಯಾಸವನ್ನು ಪ್ರಚಲಿತ ಕಾನೂನು ಮತ್ತು ಸಾವ೯ಜನಿಕ ಅವಶ್ಯಕತೆ ಮಧ್ಯೆ ಕಂಡುಕೊಂಡರು,ಹಾಗೂ ಇದನ್ನು ಹೆಚ್ಚು ಜನರು ಒಪ್ಪಿ ಗಣನೀಯವಾದ ಅಸಂಗತೆ ಮತ್ತು ಅಸಾಮರಸ್ಯ ಹುಟ್ಟಿಕೊಳ್ಳುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.ಬ್ರಿಟೀಷರ ವಸಾಹತುಶಾಹಿ ಸಕಾ೯ರ ಆಡಳಿತ ವ್ಯವಸ್ಥೆಯಲ್ಲಿ ಪಸರಿಸಿದ್ದ ವ್ಯಾಪಕವಾದ ಹಸ್ತಕ್ಷೇಪರಹಿತ ನೀತಿಯಲ್ಲಿ ,ನಾಗರೀಕ ವಿಷಯಗಳನ್ನು ಆಯಾ ಧಾಮಿ೯ಕ ಸಮುದಾಯಗಳ ಮೂಲಕ ವ್ಯವಹರಿಸಬೇಕು.ಹೀಗಾಗಿ ಈ ಸಮುದಾಯಗಳ ವ್ಯಾಪ್ತಿಗೆ ಬಿದ್ದಿದ್ದ ವಿಷಯಗಳನ್ನು ವೈಯಕ್ತಿಕ ಕಾನೂನುಗಳೆಂದು ಕರೆಯಲಾಯಿತು.ಭಾರತೀಯ ರಾಜಕೀಯ ವ್ಯವಸ್ಥೆಯನ್ನು ಸಂಘಟಿಸುವಲ್ಲಿ,೧೯೪೦ರ ವೇಳೆಯ ಮೊದಲೇ ಬ್ರಿಟೀಷರಿಂದ ಆರಂಭವಾದ ವೈಯಕ್ತಿಕ ಹಿಂದೂ ಕಾನೂನುಗಳ ಕ್ರೂಢೀಕರಣ ಪ್ರಕ್ರಿಯೆಯು ಬಹಳ ಪ್ರಮುಖವಾದದ್ದು ಆಗಿದೆ.
ಬೋಧಿಧರ್ಮ, ಚೀನೀ Putidamo , ಜಪಾನೀಸ್ Daruma ಯಾರು , ಸಂಪ್ರದಾಯದ ಪ್ರಕಾರ , ಮಹಾಯಾನ ಬೌದ್ಧ ಧರ್ಮದ ಝೆನ್ ಶಾಖೆ ಸ್ಥಾಪಿಸಿದ ಕೀರ್ತಿಗೆ ಬೌದ್ಧ ಸನ್ಯಾಸಿ , ( 6 ನೇ ಶತಮಾನದ CE ಏಳಿಗೆ ) . ಬೋಧಿಧರ್ಮ ಜೀವನದ ಖಾತೆಗಳನ್ನು ಹೆಚ್ಚಾಗಿ ಪೌರಾಣಿಕ , ಮತ್ತು ಐತಿಹಾಸಿಕ ಮೂಲಗಳು ಪ್ರಾಯೋಗಿಕವಾಗಿ ಅಸ್ತಿತ್ವದಲ್ಲಿಲ್ಲ . ಎರಡು ಸಂಕ್ಷಿಪ್ತ ಸಮಕಾಲೀನ ಖಾತೆಗಳ ( ಒಂದು ದಕ್ಷಿಣ ಭಾರತೀಯ ಪರ್ಷಿಯನ್ , ಇತರ ಅವನನ್ನು ಗುರುತಿಸುತ್ತದೆ ) ( ಇತರ ಹೆಚ್ಚು ಕಿರಿಯ ಅವರನ್ನು ಚಿತ್ರಿಸುವ , ಅವರು 150 ವರ್ಷಗಳ ಹಳೆಯ ಎಂದು ಆರೋಪಿಸಿ ) ಮತ್ತು ರಾಷ್ಟ್ರೀಯತೆ ತನ್ನ ವಯಸ್ಸು ಒಪ್ಪುವುದಿಲ್ಲ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಐತಿಹಾಸಿಕ ಪ್ರಸಿದ್ಧಿಯ ಈ ಊರನ್ನು ಪ್ರವೇಶಿಸುವಾಗ ದೂರದಿಂದಲೇ ಕಾಣುವ ಸುಂದರವಾದ ಪುರಾತನ ದೇವಾಲಯಗಳು ಮತ್ತು ಎತ್ತರವಾದ ಹುಡೆ ನಿಮ್ಮನ್ನು ಆಕರ್ಷಿಸುತ್ತವೆ. ಬನ್ನಿ, ನೋಡಿ ಸಂತೋಷಪಡಿ. ೧೧ನೇಯ ಶತಮಾನದಲ್ಲಿ ಗದಗ ಜಿಲ್ಹೆ ಸೂಡಿಯು ಕಲ್ಯಾಣ ಚಾಲುಕ್ಯ ಅರಸರ ಮಗಳಾದ ಅಪ್ರತಿಮ ಮಹಿಳೆ ಅಕ್ಕಾದೇವಿಯ ಆಡಳಿತ ಕಾಲದಲ್ಲಿ ಶಿಲ್ಪ ಕಲೆಯ ವೈಭವಕ್ಕೆ ಬಹಳ ಪ್ರಶಿದ್ಧಿ ಪಡೆದಿತ್ತೆಂದು ಮತ್ತು ಇಲ್ಲಿಯ ವಿಶ್ವವಿದ್ಯಾನಿಲಯದಲ್ಲಿ ಶಿಲ್ಪಕಲೆ,ಲಲಿತಕಲೆ, ಆಚಾರಸಂಹಿತೆ,ನಾಟ್ಯಶಾಸ್ತ್ರ, ಭಾಷಾ ಅಧ್ಯಯನ, ಕಲಿಸಲಾಗುತ್ತಿತ್ತೆಂದು ಪ್ರಾಚ್ಯ ವಸ್ತು ಇಲಾಖೆಯವರಿಂದ ೧೯೮೯ರಲ್ಲಿ ಇಲ್ಲಿಯ ಅನೇಕ ಶಿಲಾ ಲಿಪಿಗಳಿಂದ ಕಂಡುಬಂದಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ ಇದರಲ್ಲಿ ಇಪ್ಪತ್ತೊಂಬತ್ತು ರಾಜ್ಯಗಳು ಹಾಗು ಏಳು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ
ಟೆಂಪ್ಲೇಟು:Pp-protect ಇಂಟರ್ನ್ಯಾಷನಲ್ ಸ್ಟ್ಯಾಂಡರ್ಡ್ ಬುಕ್ ಸಂಖ್ಯೆ (ಐ.ಎಸ್.ಬಿ.ಎನ್) /ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ ಒಂದು ವಿಶಿಷ್ಟವಾದ ಸಂಖ್ಯೆ. ಪ್ರಕಾಶಕರು ಐಎಸ್ಬಿಎನ್ ಅನ್ನು ಪುಸ್ತಕ ಶೀರ್ಷಿಕೆಗೆ ನಿಯೋಜಿಸುತ್ತಾರೆ.ಒಂದು ಐಎಸ್ಬಿಎನ್ ಮುಖ್ಯವಾಗಿ ಪ್ರಕಾಶಕರು, ಪುಸ್ತಕ ಮಾರಾಟಗಾರರು, ಗ್ರಂಥಾಲಯಗಳು, ಇಂಟರ್ನೆಟ್ ಚಿಲ್ಲರೆ ವ್ಯಾಪಾರಿಗಳು ಮತ್ತು ಇತರ ಪೂರೈಕೆ ಸರಪಳಿಗಳು ಆದೇಶ, ಪಟ್ಟಿಗಳು, ಮಾರಾಟದ ದಾಖಲೆಗಳು ಮತ್ತು ಷೇರು ನಿಯಂತ್ರಣ ಉದ್ದೇಶಗಳಿಗಾಗಿ ಬಳಸಲ್ಪಡುವ ಒಂದು ಉತ್ಪನ್ನ ಗುರುತಿಸುವಿಕೆ. ಐಎಸ್ಬಿಎನ್ ನೋಂದಾಯಿಸುವವರನ್ನು ನಿರ್ದಿಷ್ಟ ಶೀರ್ಷಿಕೆ, ಆವೃತ್ತಿ ಮತ್ತು ಸ್ವರೂಪವನ್ನು ಗುರುತಿಸುತ್ತದೆ.
ಜಲಿಯನ್ವಾಲಾ ಬಾಗ್ ಹತ್ಯಾಹಾಂಡ (ಅಥವಾ ಅಮೃತಸರ ಹತ್ಯಾಹಾಂಡ) - ಅಮೃತಸರದಲ್ಲಿರುವ ಜಲಿಯನ್ವಾಲಾ ಬಾಗ್ ಉದ್ಯಾನದಲ್ಲಿ ಏಪ್ರಿಲ್ ೧೩, ೧೯೧೯ರಂದು ಬ್ರಿಟೀಷ್ ಭಾರತ ಸೇನೆಯಿಂದ ಅಲ್ಲಿ ನೆರೆದಿದ್ದ ಗಂಡಸರು, ಹೆಂಗಸರು, ಮಕ್ಕಳೆಲ್ಲರ ಮೇಲೆ ನಡೆಸಿದ ಗುಂಡಿನ ದಾಳಿಯ ಪರಿಣಾಮವಾಗಿ ನಡೆದ ಮಾರಣಹೋಮ. ಅಧಿಕೃತ ಮೂಲಗಳ ಪ್ರಕಾರ ಸಾವಿಗೀಡಾದವರ ಸಂಖ್ಯೆ ೩೭೯. ಖಾಸಗಿ ಮೂಲಗಳ ಪ್ರಕಾರ ಸಾವಿಗೀಡಾದವರ ಸಂಖ್ಯೆ ಸಾವಿರಕ್ಕೂ ಹೆಚ್ಚು ಹಾಗು ಗಾಯಗೊಂಡವರ ಸಂಖ್ಯೆ ೧೨೦೦ಕ್ಕೂ ಹೆಚ್ಚು., ಮತ್ತು ಸಿವಿಲ್ ಶಸ್ತ್ರಚಿಕಿತ್ಸಾ ತಜ್ಞ ಡಾ.ಸ್ಮಿತ್ ನೀಡಿದ ಮಾಹಿತಿಯ ಪ್ರಕಾರ, ಸಾವಿಗೀಡಾದವರು ೧೮೦೦ಕ್ಕೂ ಹೆಚ್ಚು.
ಜಲಿಯನ್ ವಾಲಾ ಬಾಗ್(Hindi: जलियांवाला बाग) ಎನ್ನುವ ಹೆಸರು ಪ್ರತೀ ಭಾರತೀಯರನ್ನು ಬೆಚ್ಚಿ ಬೀಳಿಸುವಂತಹ ಹೆಸರು, ಬ್ರಿಟಿಷರ ಕಾಲದಲ್ಲಿ ನಡೆದ ನರಮೇಧವೇ ಇದಕ್ಕಿರುವ ಕಾರಣ. ಸುಮಾರು ಆರುವರೆ ಎಕರೆ ಪ್ರದೇಶದಲ್ಲಿ ವಿಶಾಲವಾಗಿ ಹರಡಿರುವ ಜಲಿಯನ್ ವಾಲಾ ಬಾಗ್ ಈಗ ಸಾರ್ವಜನಿಕ ಉದ್ಯಾನವನವಾಗಿದ್ದು ಭಕ್ತಿ ಪರವಶತೆಗೆ ಹೆಸರಾಗಿರುವ ಪಂಜಾಬಿನ ಅಮೃತಸರ ನಗರದಲ್ಲಿದೆ. ರಾಷ್ಟೀಯ ಮಟ್ಟದಲ್ಲಿ ಪ್ರಾಮುಖ್ಯತೆ ಪಡೆದಿರುವ ಈ ಸ್ಮಾರಕ ಸ್ಥಳವನ್ನು ಪಂಜಾಬ್ ರಾಜ್ಯೋತ್ಸವದ ದಿನವಾದ 13 ಎಪ್ರಿಲ್, 1961ರಂದು ಅಂದಿನ ರಾಷ್ಟ್ರಪತಿ ಡಾ.
ಚುನಾವಣೆ ಯೆನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ.ಇದರಲ್ಲಿ,ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚುನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ,ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ಭಾರತ ಸರ್ಕಾರವು ಇಂದು ಭಾರತೀಯ ಕಾನೂನು ಆಧಾರಿತ ಮೀಸಲಾತಿಯ ಸೌಲಭ್ಯವನ್ನು ಶೇಕಡಾವಾರು ಪ್ರಮಾಣದ ಮೇಲೆ ಸರ್ಕಾರಿ ಮತ್ತು ಸಾರ್ವಜನಿಕ ಕಂಪನಿಗಳ ನೇಮಕಾತಿಯಲ್ಲಿ ಸೇವಾವಕಾಶವನ್ನು ಒದಗಿಸುತ್ತಿದೆ. ಅಷ್ಟೇ ಅಲ್ಲದೇ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿಯೂ ಮೀಸಲಾತಿ ನೀಡುತ್ತದೆ.ಆದರೆ ಧಾರ್ಮಿಕ/ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳನ್ನು ಈ ನಿಯಮಗಳಿಂದ ಹೊರತುಪಡಿಸಲಾಗಿದೆ. ಪ್ರಮುಖವಾದುದ್ದೆಂದರೆ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳಿಗೆ ಅಂದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಸಾಮಾಜಿಕ ಹಿಂದುಳಿದಿರುವಿಕೆಯನ್ನು ಹೋಗಲಾಡಿಸಲು ಸರ್ಕಾರ ಇದನ್ನು ಜಾರಿಗೊಳಿಸಿದೆ.ಇದನ್ನು ನೀಡುವ ಕಾರಣವೆಂದರೆ ಅವರು ಇಂತಹ ಸೇವಾವಲಯಗಳಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಸೂಕ್ತ ಪ್ರಮಾಣದ ಪ್ರಾತಿನಿಧಿತ್ವ ಹೊಂದಿರುವುದಿಲ್ಲ.ಈ ಕೊರತೆ ನೀಗಿಸಲು ಭಾರತ ಸರ್ಕಾರವು ಈ ಕೋಟಾ ಪದ್ದತಿಯನ್ನು ಜಾರಿಗೊಳಿಸಿದೆ.
ಇಂದಿರಾ ಪ್ರಿಯದರ್ಶಿನಿ ಗಾಂಧಿ (ಹಿಂದಿ:इंदिरा प्रियदर्शिनी गांधीಇಂದಿರಾ ಪ್ರಿಯದರ್ಶಿನಿ ಗಾಂಧಿ; ನಿ: ನೆಹರು; (೧೯ ನವೆಂಬರ್ ೧೯೧೭ – ೩೧ ಅಕ್ಟೋಬರ್ ೧೯೮೪) ೧೯೬೬ರಿಂದ ೧೯೭೭ರವೆಗೆ ಸತತ ಮೂರು ಬಾರಿ ಭಾರತ ಗಣತಂತ್ರ ದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ನಾಲ್ಕನೇ ಬಾರಿ ೧೯೮೦ರಿಂದ ೧೯೮೪ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಅವರು ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಇಂದಿನವರೆಗೆ ಆ ಸ್ಥಾನ ಅವರ ಪಾಲಿನದ್ದೇ ಆಗಿದೆ.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ
ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಕರ್ನಾಟಕದಲ್ಲಿ ಕನ್ನಡ ಚಲನಚಿತ್ರರಂಗಕ್ಕೆ ನೀಡಲಾಗುವ ಅತ್ಯಂತ ಗಮನಾರ್ಹ ಮತ್ತು ಪ್ರತಿಷ್ಠಿತ ಚಲನಚಿತ್ರ ಪ್ರಶಸ್ತಿಗಳಾಗಿವೆ. ಇವುಗಳನ್ನು ಕನ್ನಡ ಭಾಷಾ ಚಲನಚಿತ್ರಗಳಿಗೆ ಅತ್ಯುನ್ನತ ಪ್ರಶಸ್ತಿಗಳೆಂದು ಪರಿಗಣಿಸಲಾಗಿದೆ. ಚಿತ್ರರಂಗದ ಉತ್ತಮ ಪ್ರತಿಭೆಗಳನ್ನು ಮತ್ತು ಚಿತ್ರಗಳನ್ನು ಗುರುತಿಸಿ ಈ ಗೌರವ ಸಲ್ಲಿಸಲಾಗುವುದು.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಬಗ್ಗೆ ಬೇರೆ ಬೇರೆ ನುಡಿಗಳಲ್ಲಿ ಬರೆದವರನ್ನು ಕನ್ನಡ ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
ಮಹೇಂದ್ರ ಸಿಂಗ್ ಧೋನಿ, MS ಧೋನಿ ಎಂದೂ ಸಂಕ್ಷ್ತಿಪ್ತ ರೂಪದಲ್ಲಿ ಕರೆಯಲಾಗುತ್ತದೆ. pronunciation ಜನನ ಬಿಹಾರದ ರಾಂಚಿಯಲ್ಲಿ 7 ಜುಲೈ 1981ರಂದು (ಈಗಿನ ಜಾರ್ಖಂಡ್) ಇವರು ಭಾರತದ ಕ್ರಿಕೆಟಿಗ ಮತ್ತು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕರು. ಆರಂಭದಲ್ಲಿ ಅತಿ ಅಬ್ಬರದ ಮತ್ತು ಆಕ್ರಮಣಕಾರಿ ಬ್ಯಾಟ್ಸ್ಮ್ಯಾನ್ ಎಂದು ಗುರುತಿಸಿಕೊಂಡರೂ, ನಂತರ ಧೋನಿಯವರು ಭಾರತದ ಏಕದಿನ (ODI) ತಂಡದ ಶಾಂತ ಸ್ವಭಾವದ ನಾಯಕರಲ್ಲಿ ಒಬ್ಬರಂತೆ ಗುರ್ತಿಸಲ್ಪಡುತ್ತಾರೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.