The most-visited ಕನ್ನಡ Wikipedia articles, updated daily. Learn more...
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ
ಟೆಂಪ್ಲೇಟು:Pp-protect ಇಂಟರ್ನ್ಯಾಷನಲ್ ಸ್ಟ್ಯಾಂಡರ್ಡ್ ಬುಕ್ ಸಂಖ್ಯೆ (ಐ.ಎಸ್.ಬಿ.ಎನ್) /ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ ಒಂದು ವಿಶಿಷ್ಟವಾದ ಸಂಖ್ಯೆ. ಪ್ರಕಾಶಕರು ಐಎಸ್ಬಿಎನ್ ಅನ್ನು ಪುಸ್ತಕ ಶೀರ್ಷಿಕೆಗೆ ನಿಯೋಜಿಸುತ್ತಾರೆ.ಒಂದು ಐಎಸ್ಬಿಎನ್ ಮುಖ್ಯವಾಗಿ ಪ್ರಕಾಶಕರು, ಪುಸ್ತಕ ಮಾರಾಟಗಾರರು, ಗ್ರಂಥಾಲಯಗಳು, ಇಂಟರ್ನೆಟ್ ಚಿಲ್ಲರೆ ವ್ಯಾಪಾರಿಗಳು ಮತ್ತು ಇತರ ಪೂರೈಕೆ ಸರಪಳಿಗಳು ಆದೇಶ, ಪಟ್ಟಿಗಳು, ಮಾರಾಟದ ದಾಖಲೆಗಳು ಮತ್ತು ಷೇರು ನಿಯಂತ್ರಣ ಉದ್ದೇಶಗಳಿಗಾಗಿ ಬಳಸಲ್ಪಡುವ ಒಂದು ಉತ್ಪನ್ನ ಗುರುತಿಸುವಿಕೆ. ಐಎಸ್ಬಿಎನ್ ನೋಂದಾಯಿಸುವವರನ್ನು ನಿರ್ದಿಷ್ಟ ಶೀರ್ಷಿಕೆ, ಆವೃತ್ತಿ ಮತ್ತು ಸ್ವರೂಪವನ್ನು ಗುರುತಿಸುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ gfhvಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಕಂಪ್ಯೂಟರ್ ಒಳರವಾನೆ ಸಂಸ್ಕರಣೆ ಹಾಗೂ ಹೊರರವಾನೆ ಸಾಧನಗಳನ್ನು ಹೊಂದಿದ್ದು ಒಳರವಾನೆ ಸಾಧನಗಳ ಮೂಲಕ ನೀಡಿದಂತಹ ಮಾಹಿತಿಯನ್ನು ಸಂಸ್ಕರಿಸಿ ಹೊರರವಾನೆ ಸಾಧನಗಳ ಮೂಲಕ ಉಪಯೋಗಿಸಿ(ಯೂಜರ್)ಗೆ ನೀಡುವುದಲ್ಲದೇ ಮಾಹಿತಿ ಮತ್ತು ದತ್ತಾಂಶಗಳನ್ನು ಶೇಖರಿಸಿಡಬಹುದಾದ ಸಾಧನವಾಗಿರುತ್ತದೆ ಅಲ್ಲದೇ ಶೇಖರಿಸಿಟ್ಟ ಅಥವಾ ನಾವು ನೀಡಿದಂತಹಾ ಮಾಹಿತಿಯನ್ನು ಒಂದು ಗಣಕಯಂತ್ರ ದಿಂದ ಮತ್ತೊಂದು ಗಣಕಯಂತ್ರಕ್ಕೆ ಸಂಪರ್ಕಜಾಲದ ಮೂಲಕ ನಮ್ಮ ಆದೇಶದ ಮೇರೆಗೆ ರವಾನಿಸುತ್ತದೆ.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಡಾ.ವಿಷ್ಣುವರ್ಧನ್ (ಜನನ: ಸೆಪ್ಟೆಂಬರ್ ೧೮ ೧೯೫೨ | ಮರಣ :ಡಿಸೆಂಬರ್ ೩೦ ೨೦೦೯) ಕನ್ನಡ ಚಿತ್ರರಂಗದ ಪ್ರಸಿದ್ಧ ನಟರಲ್ಲಿ ಒಬ್ಬರು.ಸಂಪತ್ ಕುಮಾರ್ ಎಂಬುದು ಇವರ ಮೂಲ ಹೆಸರು. ಸಾಹಸಸಿಂಹ ಎಂಬ ಬಿರುದು ಪಡೆದ ಡಾ.ವಿಷ್ಣುವರ್ಧನ್ ಇದುವರೆಗೆ ಒಟ್ಟು ಸುಮಾರು ೨೦೦ ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. ಹಲವಾರು ತಮಿಳು, ತೆಲುಗು, ಮಲಯಾಳಂ, ಹಿಂದಿ ಸಿನೆಮಾಗಳಲ್ಲೂ ನಟಿಸಿದ್ದಾರೆ.
ಕ್ರಿಕೆಟ್ ಎಂಬುದು ದಾಂಡು ಮತ್ತು ಚೆಂಡುಗಳ ಆಟ. ಬ್ಯಾಟ್ ಮತ್ತು ಚೆಂಡುಗಳಿಗೆ ಸಂಬಂಧಪಟ್ಟ ಪಂಗಡದ ಆಟವೆಂದೂ ಹಾಗೂ ೧೬ನೇ ಶತಮಾನದಲ್ಲಿ ದಕ್ಷಿಣ ಇಂಗ್ಲೆಂಡಿನಲ್ಲಿ ಆಡಲ್ಪಟ್ಟಿದ್ದು ಎಂಬ ಬಗ್ಗೆ ಆಧಾರವಿದೆ.೧೮ನೇಯ ಶತಮಾನದ ಅಂತ್ಯದ ಸಮಯದಲ್ಲಿ ಕ್ರಿಕೆಟ್ ಇಂಗ್ಲೆಂಡಿನ ರಾಷ್ಟ್ರೀಯ ಕ್ರೀಡೆಯಾಗಿ ಅಭಿವೃದ್ಧಿ ಹೊಂದಿತ್ತು. ಬ್ರಿಟೀಷ್ ಸಾಮ್ರಾಜ್ಯದ ವಿಸ್ತರಣೆಯು ಸಮುದ್ರದಾಚೆಗಿನ ದೇಶಗಳೊಡನೆ ಕ್ರಿಕೆಟ್ ಅಡಲು ಅನುವು ಮಾಡಿಕೊಟ್ಟಿತು ಮತ್ತು ಹತ್ತೊಂಬತ್ತನೆಯ ಶತಮಾನದ ಮಧ್ಯಭಾಗದಲ್ಲಿ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನು ನಡೆಸಲಾಗಿತ್ತು.ಇಂದು ಆಟಗಳ ಆಡಳಿತಾತ್ಮಕ ಅಂಗವಾದ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ೧೦೪ ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿದೆ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಕಾರ್ಗಿಲ್ ಸಂಘರ್ಷ ವೆಂದೇ ಹೆಸರಾದ ಕಾರ್ಗಿಲ್ ಯುದ್ದವು ಭಾರತ ಮತ್ತು ಪಾಕಿಸ್ತಾನದ ಮಧ್ಯೆ ನಡೆದ ಸಶಸ್ತ್ರ ಸಂಘರ್ಷವಾಗಿದ್ದು, ಕಾಶ್ಮೀರದ ಕಾರ್ಗಿಲ್ ಜಿಲ್ಲೆ ಮತ್ತು ನಿಯಂತ್ರಣ ರೇಖೆಯಿರುವ ಪ್ರದೇಶಗಳಲ್ಲಿ 1999ರ ಮೇ ಮತ್ತು ಜುಲೈ ನಡುವೆ ಸಂಭವಿಸಿತು. ಉಭಯ ರಾಷ್ಟ್ರಗಳ ನಡುವಿನ de facto ಗಡಿಯಾಗಿರುವ ನಿಯಂತ್ರಣ ರೇಖೆಯಲ್ಲಿ(LOC)ರುವ ಭಾರತದ ನೆಲೆಗಳಿಗೆ ಪಾಕಿಸ್ತಾನದ ಸೈನಿಕರು ಮತ್ತು ಕಾಶ್ಮೀರಿ ಉಗ್ರಗಾಮಿಗಳು ನುಸುಳಿದ್ದೇ ಯುದ್ಧಕ್ಕೆ ಕಾರಣ. ಯುದ್ಧದ ಆರಂಭದ ಹಂತಗಳಲ್ಲಿ, ಕಾರ್ಗಿಲ್ ಕದನಕ್ಕೆ ಸ್ವತಂತ್ರ ಕಾಶ್ಮೀರಿ ಉಗ್ರಗಾಮಿಗಳ ಮೇಲೆ ಪಾಕಿಸ್ತಾನ ಗೂಬೆ ಕೂರಿಸಿತು, ಆದರೆ ಯುದ್ಧಾನಂತರದ ಸಾವು ನೋವುಗಳ ದಾಖಲೆಗಳು ಮತ್ತು ಆ ಬಳಿಕ ಪಾಕಿಸ್ತಾನದ ಪ್ರಧಾನ ಮಂತ್ರಿ ಮತ್ತು ಸೇನಾ ಸಿಬ್ಬಂದಿ ಮುಖ್ಯಸ್ಥರು ನೀಡಿದ ಹೇಳಿಕೆಗಳು, ಜನರಲ್ ಅಶ್ರಫ್ ರಷೀದ್ ನೇತೃತ್ವದ ಪಾಕಿಸ್ತಾನಿ ಅರೆಸೇನೆ ಪಡೆಗಳು ಈ ಯುದ್ಧದಲ್ಲಿ ಪಾಲ್ಗೊಂಡಿದ್ದನ್ನು ರುಜುವಾತು ಮಾಡಿತು.
ಇಂದಿರಾ ಪ್ರಿಯದರ್ಶಿನಿ ಗಾಂಧಿ (ಹಿಂದಿ:इंदिरा प्रियदर्शिनी गांधीಇಂದಿರಾ ಪ್ರಿಯದರ್ಶಿನಿ ಗಾಂಧಿ; ನಿ: ನೆಹರು; (೧೯ ನವೆಂಬರ್ ೧೯೧೭ – ೩೧ ಅಕ್ಟೋಬರ್ ೧೯೮೪) ೧೯೬೬ರಿಂದ ೧೯೭೭ರವೆಗೆ ಸತತ ಮೂರು ಬಾರಿ ಭಾರತ ಗಣತಂತ್ರ ದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ನಾಲ್ಕನೇ ಬಾರಿ ೧೯೮೦ರಿಂದ ೧೯೮೪ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಅವರು ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಇಂದಿನವರೆಗೆ ಆ ಸ್ಥಾನ ಅವರ ಪಾಲಿನದ್ದೇ ಆಗಿದೆ.
ಲಿಂಗ ಸಮಾನತೆ ಹಾಗೂ ಮಹಿಳಾ ಸಬಲೀಕರಣ
ಲಿಂಗ ಸಮಾನತೆ ಹಾಗೂ ಮಹಿಳಾ ಸಬಲೀಕರಣಗಳನ್ನು ಅರ್ಥ ಮಾಡಿಕೊಳ್ಳುವುದು ಬಹಳ ಅವಶ್ಯಕ.ಹೆಣ್ಣು ಮತ್ತು ಗಂಡು ಎಂಬ ಜೈವಿಕ ಲಕ್ಷಣಗಳು ಲಿಂಗ ಎಂಬುದಾಗಿ ವ್ಯಕ್ತಿಯ ಹುಟ್ಟಿನಿಂದಲೇ ನಿರ್ಧರವಾಗುತ್ತದೆ. ಲಿಂಗವು ಸೃಷ್ಟಿಯ ಸಹಜ ಸ್ಥಿ ತಿ. ದೈಹಿಕ ರಚನೆ ಹಾಗೂ ಸಂತಾನೋತ್ಪತಿಯ ಕ್ರಿಯೆಗಳಲ್ಲಿ ಹೆಣ್ಣು ಹಾಗು ಗಂಡು ವಿಶೇಷವಾದ ಗುಣಗಳನ್ನು ಹೊಂದಿದ್ದಾರೆ.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
ಕರ್ನಾಟಕ ವಿಧಾನಸಭೆ ಚುನಾವಣೆ, ೨೦೧೮
ಕರ್ನಾಟಕದ ಎಲ್ಲಾ ೨೨೪ ವಿಧಾನಸಭಾ ಕ್ಷೇತ್ರಕ್ಕೆ ಶಾಸಕರನ್ನು ಆಯ್ಕೆ ಮಾಡಲು ೨೦೧೮ರಲ್ಲಿ ಕರ್ನಾಟಕ ವಿಧಾನಸಭೆಯ ಚುನಾವಣೆ ನಡೆಯಲಿದೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ತಾಜ್ ಮಹಲ್ (pronounced /tɑdʒ məˈhɑl/; ಹಿಂದಿ: ताज महल ; ಪರ್ಷಿಯನ್/ಉರ್ದು: تاج محل ) ಭಾರತದ ಆಗ್ರಾದಲ್ಲಿರುವ ಭವ್ಯ ಸಮಾಧಿಯಾಗಿದೆ. ಇದನ್ನು ಮೊಘಲ್ ಚಕ್ರವರ್ತಿ ಷಹ ಜಹಾನ್ ತನ್ನ ಮೆಚ್ಚಿನ ಪತ್ನಿ ಮಮ್ತಾಜ್ ಮಹಲ್ಳ ನೆನಪಿಗಾಗಿ ಕಟ್ಟಿಸಿದನು. ಪರ್ಷಿಯನ್, ಭಾರತೀಯ ಮತ್ತು ಮುಸ್ಲಿಂ ವಾಸ್ತುಶೈಲಿಗಳ ಸಮ್ಮಿಶ್ರಣವಾದ ಮೊಘಲ್ ವಾಸ್ತುಶೈಲಿಗೆ ತಾಜ್ ಮಹಲ್ ("ತಾಜ್" ಎಂದೂ ಕರೆಯಲ್ಪಡುತ್ತದೆ) ಅತ್ಯುತ್ತಮ ಉದಾಹರಣೆಯೆಂದು ಪರಿಗಣಿಸಲಾಗಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ ಇದರಲ್ಲಿ ಇಪ್ಪತ್ತೊಂಬತ್ತು ರಾಜ್ಯಗಳು ಹಾಗು ಏಳು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.