The most-visited ಕನ್ನಡ Wikipedia articles, updated daily. Learn more...
ಭೌಗೋಳಿಕ ನಿರ್ದೇಶಾಂಕ ಪದ್ಧತಿಯು ಭೂಮಿಯ ಮೇಲಿನ ಪ್ರತಿಯೊಂದು ನೆಲೆಯನ್ನು ಮೂರು ನಿರ್ದೇಶಾಂಕಗಳಲ್ಲಿ ನಿರೂಪಿಸಲು, ಮುಖ್ಯವಾಗಿ ಒಂದು ಗೋಳ ನಿರ್ದೇಶಾಂಕ ಪದ್ಧತಿಯನ್ನು ಬಳಸಿ, ಸಾಧ್ಯವಾಗಿಸುವ ಒಂದು ನಿರ್ದೇಶಾಂಕ ಪದ್ಧತಿ. ಭೂಮಿಯು ಒಂದು ಗೋಳವಲ್ಲ, ಅದು ಒಂದು ಅಂಡಾಕಾರದ ಘನಾಕೃತಿಗೆ ಸಮೀಪದ ಒಂದು ಅಸಮ ರೂಪದ ಆಕಾರ; ಪ್ರತಿ ಸ್ಥಳವರ್ಣನಾ ಬಿಂದುವನ್ನು ಸಂಖ್ಯೆಗಳ ಒಂದು ನಿಶ್ಚಿತ ಕ್ರಮಗೊಂಡ ವರ್ಗವಾಗಿ ಖಚಿತವಾಗಿ ನಮೂದಿಸಬಲ್ಲ ಒಂದು ನಿರ್ದೇಶಾಂಕ ಪದ್ಧತಿಯನ್ನು ನಿರೂಪಿಸುವುದು ಸವಾಲು. ಅಕ್ಷಾಂಶವು (ಸಂಕ್ಷೇಪ: ಲ್ಯಾಟಿನ್., φ, ಅಥವಾ ಫೈ) ಗೋಳದ ಕೇಂದ್ರದಿಂದ ಅಳೆಯಲಾದ ಭೂಮಿಯ ಮೇಲ್ಮೈ ಮೇಲಿನ ಒಂದು ಬಿಂದುವಿನಿಂದ ಸಮಭಾಜಕ ಸಮತಲದವರೆಗಿನ ಕೋನ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ gfhvಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದೂ ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಆನಂದಿ ಗೋಪಾಲ ಜೋಷಿ ಅಥವಾ ಆನಂದಿಬಾಯಿ ಗೋಪಾಲರಾವ್ ಜೋಶಿ (March 31, 1865 - February 26, 1887)ರವರು ಪಾಶ್ಚಾತ್ಯ ವೈದ್ಯಕೀಯ ಪದವಿ ಪಡೆದ ಮೊಟ್ಟಮೊದಲ ಮಹಿಳಾ ವೈದ್ಯೆ. (ಕಾದಂಬಿನಿ ಗಂಗೂಲಿಯವರೂ ಸಹ ಇದೇ ವರ್ಷ,ಅಂದರೇ ೧೮೮೬ ರಲ್ಲಿ ಆದರೇ ಆನಂದಿಬಾಯಿಯ ನಂತರ ಪದವಿ ಪಡೆದರು). ಅಷ್ಟೇ ಅಲ್ಲದೇ ಪಾಶ್ಚಾತ್ಯ ಮೊಟ್ಟಮೊದಲ ಹಿಂದೂ ಮಹಿಳೆ, ಮತ್ತು ಅಮೇರಿಕಾದ ನೆಲದ ಮೇಲೆ ನಡೆದ ಮೊದಲ ಹಿಂದೂ ಮಹಿಳೆ ಎಂಬ ಹೆಗ್ಗಳಿಕೆಯೂ ಇವರಿಗೇ ಸಲ್ಲುತ್ತದೆ.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಬಿಂದ್ಯಾ ರಾಮ್ (ಹುಟ್ಟಿದ್ದು, ೨ ಅಕ್ಟೋಬರ್ ೧೯೯೨), ತನ್ನ ಸಿನಿಮಾ ಕ್ಷೇತ್ರದ ಹೆಸರಿನಿಂದ ಜನಪ್ರಿಯರಾಗಿರುವ ರಚಿತಾ ರಾಮ್, ಅವರು ಭಾರತದ ನಟಿ. ಪ್ರಥಮವಾಗಿ ಕನ್ನಡ ಚಿತ್ರರಂಗದಲ್ಲಿ ಅವರು ತುಂಬ ಹೆಸರುವಾಸಿಯಾಗಿದ್ದಾರೆ, ಅವರು ಕನ್ನಡದ ಕಿರುತೆರೆಯ ದೈನಿಕ ಧಾರಾವಾಹಿ ಎರಿಯಸ್ ಎಂಬ ಧಾರಾವಾಹಿಯಲ್ಲಿ ಕಾಣಿಸಿಕೊಂಡರು. ಯಶಸ್ವಿ ದೂರದರ್ಶನ ವೃತ್ತಿಜೀವನದ ನಂತರ, ರಚಿತಾ ಅವರು, ಮೊದಲನೆಯ ಚಿತ್ರ "ಬುಲ್ ಬುಲ್"ನಲ್ಲಿ ದರ್ಶನ್ ಜೊತೆಗ ನಾಯಕಿಯಾಗಿ ನಟಿಸಿದರು.
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಕಾರವು ಬಂದಾಗ 'ಐ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂದಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.
ನೀತಿ ಆಯೋಗ ಅಥವಾ ಭಾರತದ ಬದಲಾವಣೆಗಾಗಿನ ರಾಷ್ಟ್ರೀಯ ಸಂಸ್ಥೆ (ನ್ಯಾಷನಲ್ ಇನ್ಸ್ಟಿಟ್ಯೂಟಷನ್ ಫಾರ್ ಟ್ರಾನ್ಸ್ ಫಾರ್ಮಿಂಗ್ ಇಂಡಿಯಾ:NITI=National Institution for Transforming India)ವನ್ನು ಭಾರತದ ಯೋಜನಾ ಆಯೋಗದ ಬದಲಿಗೆ ಜನವರಿ ೨,೨೦೧೫ರಲ್ಲಿ ಸ್ಥಾಪಿಸಲಾಗಿದೆ.. ಇದು ಮುಖ್ಯವಾಗಿ ಭಾರತದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನೀತಿ ರೂಪಣೆಯಲ್ಲಿ ಬೌದ್ಧಿಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ.
ಮಹೇಂದ್ರ ಸಿಂಗ್ ಧೋನಿ, MS ಧೋನಿ ಎಂದೂ ಸಂಕ್ಷ್ತಿಪ್ತ ರೂಪದಲ್ಲಿ ಕರೆಯಲಾಗುತ್ತದೆ. pronunciation ಜನನ ಬಿಹಾರದ ರಾಂಚಿಯಲ್ಲಿ 7 ಜುಲೈ 1981ರಂದು (ಈಗಿನ ಜಾರ್ಖಂಡ್) ಇವರು ಭಾರತದ ಕ್ರಿಕೆಟಿಗ ಮತ್ತು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕರು. ಆರಂಭದಲ್ಲಿ ಅತಿ ಅಬ್ಬರದ ಮತ್ತು ಆಕ್ರಮಣಕಾರಿ ಬ್ಯಾಟ್ಸ್ಮ್ಯಾನ್ ಎಂದು ಗುರುತಿಸಿಕೊಂಡರೂ, ನಂತರ ಧೋನಿಯವರು ಭಾರತದ ಏಕದಿನ (ODI) ತಂಡದ ಶಾಂತ ಸ್ವಭಾವದ ನಾಯಕರಲ್ಲಿ ಒಬ್ಬರಂತೆ ಗುರ್ತಿಸಲ್ಪಡುತ್ತಾರೆ.
ಚುನಾವಣೆ ಯೆನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ.ಇದರಲ್ಲಿ,ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚುನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ,ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ
ಟೆಂಪ್ಲೇಟು:Pp-protect ಇಂಟರ್ನ್ಯಾಷನಲ್ ಸ್ಟ್ಯಾಂಡರ್ಡ್ ಬುಕ್ ಸಂಖ್ಯೆ (ಐ.ಎಸ್.ಬಿ.ಎನ್) /ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ ಒಂದು ವಿಶಿಷ್ಟವಾದ ಸಂಖ್ಯೆ. ಪ್ರಕಾಶಕರು ಐಎಸ್ಬಿಎನ್ ಅನ್ನು ಪುಸ್ತಕ ಶೀರ್ಷಿಕೆಗೆ ನಿಯೋಜಿಸುತ್ತಾರೆ.ಒಂದು ಐಎಸ್ಬಿಎನ್ ಮುಖ್ಯವಾಗಿ ಪ್ರಕಾಶಕರು, ಪುಸ್ತಕ ಮಾರಾಟಗಾರರು, ಗ್ರಂಥಾಲಯಗಳು, ಇಂಟರ್ನೆಟ್ ಚಿಲ್ಲರೆ ವ್ಯಾಪಾರಿಗಳು ಮತ್ತು ಇತರ ಪೂರೈಕೆ ಸರಪಳಿಗಳು ಆದೇಶ, ಪಟ್ಟಿಗಳು, ಮಾರಾಟದ ದಾಖಲೆಗಳು ಮತ್ತು ಷೇರು ನಿಯಂತ್ರಣ ಉದ್ದೇಶಗಳಿಗಾಗಿ ಬಳಸಲ್ಪಡುವ ಒಂದು ಉತ್ಪನ್ನ ಗುರುತಿಸುವಿಕೆ. ಐಎಸ್ಬಿಎನ್ ನೋಂದಾಯಿಸುವವರನ್ನು ನಿರ್ದಿಷ್ಟ ಶೀರ್ಷಿಕೆ, ಆವೃತ್ತಿ ಮತ್ತು ಸ್ವರೂಪವನ್ನು ಗುರುತಿಸುತ್ತದೆ.
ಮಧ್ಯ ಏಷ್ಯಾದಿಂದ ಬಂದ ಮುಸ್ಲಿಂಜಯಶಾಲಿ, ಜಹೀರ್ ಉದ್ -ದಿನ್ ಮಹಮ್ಮದ್ ಬಾಬರ್ (February 23 [O.S. February 14] 1483 — January 5 [O.S. December 26, 1530] 1531) ಹಲವಾರು ಸತತ ಸೋಲಿನಿಂದ ,ಎದೆಗುಂದದೆ ಅಂತಿಮವಾಗಿ ಭಾರತದಲ್ಲಿ ಮುಘಲ್ ಸಾಮ್ರಾಜ್ಯ ಸ್ಥಾಪಿಸಿದನು . ತನ್ನ ತಂದೆಯ ಮೂಲಕ ತೈಮೂರುವಂಶದ ನೇರಸ್ಥಾನಾಗಿ , ಗೆನ್ಗೀಸ್ ಖಾನ್ ನ ವಂಶಸ್ಥನಾದದ್ದು , ತಾಯಿಯ ಮೂಲಕ . ಬಾಬರ್ ತನ್ನ ವಂಶ ಪರಂಪರೆಯನ್ನು ಟಿಮುರಿಡ್ ಮತ್ತು ಚಾಘತಯ್ -ಟರ್ಕಿಕ್ ಎಂದು ಗುರುತಿಸಿಕೊಂಡಿದ್ದು,ತನ್ನ ಹುಟ್ಟು ,ವಾತಾವರಣ, ತರಭೇತಿ ಮತ್ತು ಸಂಸ್ಕೃತಿಗಳು ಪೆರ್ಸಿಯನ್ ಸಂಸ್ಕೃತಿ ಯಿಂದ ಬಂದವುಗಳೆಂದು,ಆದುದರಿಂದ ತನ್ನ ವಂಶದವರಿಂದ ಬಂದ ಇವುಗಳನ್ನು ತನ್ನ ಜವಾಬ್ದಾರಿಯಿಂದ ಪೋಷಿಸಬೇಕೆಂದು, ಪೆರ್ಸಿಯನ್ ಸಂಸ್ಕೃತಿಯ ಪ್ರಭಾವ ವನ್ನು ಭಾರತದ ಉಪಖಂಡ ದಲ್ಲಿ ವಿಸ್ತರಿಸಿ , ಬುದ್ಧಿವಂತಿಕೆಯ ಸಾಹಿತ್ಯ , ಕಲೆ , ಮತ್ತು ಚಾರಿತ್ರಿಕ ಫಲಿತಾಂಶದ ಮೂಲಕ ಪರಿಚಯಿಸಲು ಉದ್ಯುಕ್ತನಾದನು.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ಮಾಧ್ಯಮ ಅಥವಾ ಸಮೂಹ ಮಾಧ್ಯಮ ಎಂದು ಸಾಮಾನ್ಯವಾಗಿ ಪತ್ರಿಕೆ, ಬಾನುಲಿ ಮತ್ತು ದೂರದರ್ಶನಗಳನ್ನು ಸೇರಿಸಿ ಹೇಳುತ್ತಾರೆ. ಸಂಗೀತ, ನೃತ್ಯ, ನಾಟಕ, ಅಂತರ್ಜಾಲ ಕ್ಷೇತ್ರ, ಭಿತ್ತಿ ಚಿತ್ರ-ಪತ್ರ, ಜಾಹೀರಾತು, ಡಂಗುರ, ಸಿನಿಮಾ – ಇವುಗಳನ್ನೂ ಕೂಡ ಮಾಧ್ಯಮವನ್ನಾಗಿ ಪರಿಗಣಿಸಬಹುದು. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವು ಕಾರ್ಯನಿರ್ವಹಿಸುತ್ತದೆ.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಮದರ್ ತೆರೇಸಾಸುಮಾರು 45 ವರ್ಷಗಳಿಗೂ ಹೆಚ್ಚು ಕಾಲ ಇವರು ಬಡವರ, ರೋಗಿಗಳ, ಅನಾಥರ ಮತ್ತು ಮರಣ ಸಂಕಟದಲ್ಲಿರುವವರ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಂಡವರು. 1970ರ ವೇಳೆಗೆ ಇವರು ಒಬ್ಬ ಮಾನವತಾ ವಾದಿಯಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾದರು. ಮದರ್ ತೆರೇಸಾ ಒಬ್ಬ ಮಹಾ ಮಾನವತಾವಾದಿಯಾಗಿ ಬಡವರ, ನಿರ್ಗತಿಕರ, ರೋಗಿಗಳ, ಅನಾಥರ, ವೃದ್ಧರ ಪರವಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಇವರಿಗೆ ವಿಶ್ವದ ಅತ್ಯುನ್ನತ ನೊಬೆಲ್ ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಲಿಂಗ ಸಮಾನತೆ ಹಾಗೂ ಮಹಿಳಾ ಸಬಲೀಕರಣ
ಲಿಂಗ ಸಮಾನತೆ ಹಾಗೂ ಮಹಿಳಾ ಸಬಲೀಕರಣಗಳನ್ನು ಅರ್ಥ ಮಾಡಿಕೊಳ್ಳುವುದು ಬಹಳ ಅವಶ್ಯಕ.ಹೆಣ್ಣು ಮತ್ತು ಗಂಡು ಎಂಬ ಜೈವಿಕ ಲಕ್ಷಣಗಳು ಲಿಂಗ ಎಂಬುದಾಗಿ ವ್ಯಕ್ತಿಯ ಹುಟ್ಟಿನಿಂದಲೇ ನಿರ್ಧರವಾಗುತ್ತದೆ. ಲಿಂಗವು ಸೃಷ್ಟಿಯ ಸಹಜ ಸ್ಥಿ ತಿ. ದೈಹಿಕ ರಚನೆ ಹಾಗೂ ಸಂತಾನೋತ್ಪತಿಯ ಕ್ರಿಯೆಗಳಲ್ಲಿ ಹೆಣ್ಣು ಹಾಗು ಗಂಡು ವಿಶೇಷವಾದ ಗುಣಗಳನ್ನು ಹೊಂದಿದ್ದಾರೆ.
ಭಾರತ ಸರ್ಕಾರವು ಇಂದು ಭಾರತೀಯ ಕಾನೂನು ಆಧಾರಿತ ಮೀಸಲಾತಿಯ ಸೌಲಭ್ಯವನ್ನು ಶೇಕಡಾವಾರು ಪ್ರಮಾಣದ ಮೇಲೆ ಸರ್ಕಾರಿ ಮತ್ತು ಸಾರ್ವಜನಿಕ ಕಂಪನಿಗಳ ನೇಮಕಾತಿಯಲ್ಲಿ ಸೇವಾವಕಾಶವನ್ನು ಒದಗಿಸುತ್ತಿದೆ. ಅಷ್ಟೇ ಅಲ್ಲದೇ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿಯೂ ಮೀಸಲಾತಿ ನೀಡುತ್ತದೆ.ಆದರೆ ಧಾರ್ಮಿಕ/ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳನ್ನು ಈ ನಿಯಮಗಳಿಂದ ಹೊರತುಪಡಿಸಲಾಗಿದೆ. ಪ್ರಮುಖವಾದುದ್ದೆಂದರೆ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳಿಗೆ ಅಂದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಸಾಮಾಜಿಕ ಹಿಂದುಳಿದಿರುವಿಕೆಯನ್ನು ಹೋಗಲಾಡಿಸಲು ಸರ್ಕಾರ ಇದನ್ನು ಜಾರಿಗೊಳಿಸಿದೆ.ಇದನ್ನು ನೀಡುವ ಕಾರಣವೆಂದರೆ ಅವರು ಇಂತಹ ಸೇವಾವಲಯಗಳಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಸೂಕ್ತ ಪ್ರಮಾಣದ ಪ್ರಾತಿನಿಧಿತ್ವ ಹೊಂದಿರುವುದಿಲ್ಲ.ಈ ಕೊರತೆ ನೀಗಿಸಲು ಭಾರತ ಸರ್ಕಾರವು ಈ ಕೋಟಾ ಪದ್ದತಿಯನ್ನು ಜಾರಿಗೊಳಿಸಿದೆ.
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ)
ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ:GST) 2016:(Goods and Services Tax Bill or GST Bill 2016) ಭಾರತದ ತೆರಿಗೆ ವ್ಯವಸ್ಥೆಯಲ್ಲಿ ತೆರಿಗೆ ಸುಧಾರಣಾ ಕ್ರಮವಾಗಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯವಸ್ಥೆಯು ದಿ.1 ಜುಲೈ, 2017 ಮಧ್ಯರಾತ್ರಿಯಿಂದಲೇ ದೇಶದಾದ್ಯಂತ ಜಾರಿಗೆ ಬಂದಿದೆ. ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಮಧ್ಯರಾತ್ರಿ 12 ಗಂಟೆಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಗುಂಡಿ ಒತ್ತುವ ಮೂಲಕ ಹೊಸ ತೆರಿಗೆ ವ್ಯವಸ್ಥೆಗೆ ಚಾಲನೆ ನೀಡಿದರು. |} ಸರಕು ಮತ್ತು ಸೇವಾ ತೆರಿಗೆ ಬಿಲ್ ಅಥವಾ ಜಿ.ಎಸ್.ಟಿ ಮಸೂದೆ (ಬಿಲ್) (ಹಿಂದಿ: वस्तु एवं सेवा कर विधेयक), ಅಧಿಕೃತವಾಗಿ ಇದು ಸಂವಿಧಾನದ (ನೂರಾ ಇಪ್ಪತ್ತೆರಡನೇ ತಿದ್ದುಪಡಿ) ಮಸೂದೆ, 2014 ಎಂದು ಪ್ರಸ್ತಾಪಿಸಿದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಮಂಗಳೂರು (ತುಳು: ಕುಡ್ಲ; ಕೊಂಕಣಿ: ಕೊಡಿಯಾಲ್; ಬ್ಯಾರಿ: ಮೈಕಾಲ; ಆಂಗ್ಲ: ಮ್ಯಾಂಗಲೋರ್; ಮಲಯಾಳಂ: ಮಂಗಲಾಪುರಂ) ಕರ್ನಾಟಕದ ನೈಋತ್ಯದಲ್ಲಿರುವ ಪ್ರಮುಖ ರೇವು ಪಟ್ಟಣ ಹಾಗೂ ಕರ್ನಾಟಕದ ಪ್ರಮುಖ ನಗರಗಳಲ್ಲೊಂದು. ಭಾರತದ ಪಶ್ಚಿಮ ಕರಾವಳಿಯಲ್ಲಿ ಅರಬ್ಬೀ ಸಮುದ್ರದ ತೀರದಲ್ಲಿರುವ ಇದು ತನ್ನ ಪೂರ್ವದಲ್ಲಿ ಪಶ್ಚಿಮ ಘಟ್ಟಗಳನ್ನು ಹೊಂದಿದೆ. ಮಂಗಳೂರು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಆಡಳಿತ ಕೇಂದ್ರ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಬ ಗೊರೂರು ರಾಮಸ್ವಾಮಿ ಅಯ್ಯಂಗಾರ್(ಜುಲೈ 4, ೧೯೦೪ - ಸೆಪ್ಟಂಬರ್ 8, ೧೯೯೧) ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ಅವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಸ್ವಾತಂತ್ರ್ಯ ಚಳುವಳಿ, ಮೈಸೂರಿನಲ್ಲಿ ಪ್ರಜಾ ಸರ್ಕಾರಕ್ಕಾಗಿ ಚಳುವಳಿ, ಕರ್ನಾಟಕ ಏಕೀಕರಣ ಚಳುವಳಿಗಳಲ್ಲಿ ಹೋರಾಡಿ ಹರಿಜನೋದ್ಧಾರ ಮತ್ತು ಗ್ರಾಮೊದ್ಧಾರಕ್ಕಾಗಿ ಶ್ರಮಿಸಿದ ಅವರೊಬ್ಬ ಅಪ್ರತಿಮ ಗಾಂಧಿವಾದಿ.
== ಮಾಹಿತಿ ಹಕ್ಕು ಕಾಯಿದೆ 2005 (RTI ) ಎಂಬುದು ಭಾರತದ ಸಂಸತ್ತಿನ ಒಂದು ಕಾಯಿದೆಯಾಗಿದೆ. ಇದು ಭಾರತದಲ್ಲಿ ಮಾಹಿತಿಯ ಸ್ವಾತಂತ್ರ್ಯದ ಶಾಸನದ ಒಂದು ರಾಷ್ಟ್ರೀಯ ಮಟ್ಟದ ಕಾರ್ಯಗತಗೊಳಿಸುವಿಕೆಯಾಗಿದ್ದು, "ಮಾಹಿತಿ ಹಕ್ಕಿನ ಕಾರ್ಯಸಾಧ್ಯ ಆಡಳಿತ ಪದ್ಧತಿಯನ್ನು ನಾಗರಿಕರಿಗಾಗಿ ಸಜ್ಜುಗೊಳಿಸುವುದಕ್ಕೆ" ಸಂಬಂಧಿಸಿದ ಉದ್ದೇಶವು ಇದರ ಹಿಂದೆ ಅಡಗಿದೆ. ರಾಜ್ಯ-ಮಟ್ಟ ಕಾನೂನೊಂದರ ಅಡಿಯಲ್ಲಿ ಪರಿಗಣಿಸಿ ಚರ್ಚಿಸಲ್ಪಟ್ಟಿರುವ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಹೊರತುಪಡಿಸಿದ, ಭಾರತದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ಕಾಯಿದೆಯು ಅನ್ವಯಿಸುತ್ತದೆ.