The most-visited ಕನ್ನಡ Wikipedia articles, updated daily. Learn more...
ಸದಾಶಿವ್ ಸೊರಟೂರು ರವರು ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು,ಶಿಕ್ಷಕ ವೃತ್ತಿಯ ಜೊತೆ ಬರವಣಿಗೆಯನ್ನು ಪ್ರವೃತ್ತಿಯಾಗಿ ರೂಢಿಸಿಕೊಂಡು ಕನ್ನಡದ ಹಲವಾರು ದಿನಪತ್ರಿಕೆ,ವಾರಪತ್ರಿಕೆ,ಮಾಸಪತ್ರಿಕೆ ಹಾಗೂ ಪಾಕ್ಷಿಕ ಪತ್ರಿಕೆಗಳಲ್ಲಿ ಅಂಕಣ ಬರೆಯುವ ಮೂಲಕ ಬರವಣಿಗೆಯಲ್ಲಿ ತಮ್ಮ ಕೈ ಚಳಕ ತೋರಿಸಿದ್ದಾರೆ.ಹವ್ಯಾಸಿ ಬರಹದ ಜೊತೆ ಹಲವಾರು ಕೃತಿಗಳನ್ನ,ಕವನ ಸಂಕಲನಗಳನ್ನ ರಚಿಸುವ ಮೂಲಕ ಕನ್ನಡ ಸಾಹಿತ್ಯ ಕ್ಷೇತ್ರದ ಅಳಿಲು ಸೇವೆಯಲ್ಲಿ ತೊಡಗಿದ್ದಾರೆ.ಶಿವದಾಸ ಎಂಬ ಕಾವ್ಯ ನಾಮದೊಂದಿಗೆ ಪ್ರಸಿದ್ಧರಾಗಿದ್ದಾರೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ gfhvಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ
ಟೆಂಪ್ಲೇಟು:Pp-protect ಇಂಟರ್ನ್ಯಾಷನಲ್ ಸ್ಟ್ಯಾಂಡರ್ಡ್ ಬುಕ್ ಸಂಖ್ಯೆ (ಐ.ಎಸ್.ಬಿ.ಎನ್) /ಅಂತರಾಷ್ಟ್ರೀಯ ದರ್ಜೆಯ ಪುಸ್ತಕ ಸಂಖ್ಯೆ ಒಂದು ವಿಶಿಷ್ಟವಾದ ಸಂಖ್ಯೆ. ಪ್ರಕಾಶಕರು ಐಎಸ್ಬಿಎನ್ ಅನ್ನು ಪುಸ್ತಕ ಶೀರ್ಷಿಕೆಗೆ ನಿಯೋಜಿಸುತ್ತಾರೆ.ಒಂದು ಐಎಸ್ಬಿಎನ್ ಮುಖ್ಯವಾಗಿ ಪ್ರಕಾಶಕರು, ಪುಸ್ತಕ ಮಾರಾಟಗಾರರು, ಗ್ರಂಥಾಲಯಗಳು, ಇಂಟರ್ನೆಟ್ ಚಿಲ್ಲರೆ ವ್ಯಾಪಾರಿಗಳು ಮತ್ತು ಇತರ ಪೂರೈಕೆ ಸರಪಳಿಗಳು ಆದೇಶ, ಪಟ್ಟಿಗಳು, ಮಾರಾಟದ ದಾಖಲೆಗಳು ಮತ್ತು ಷೇರು ನಿಯಂತ್ರಣ ಉದ್ದೇಶಗಳಿಗಾಗಿ ಬಳಸಲ್ಪಡುವ ಒಂದು ಉತ್ಪನ್ನ ಗುರುತಿಸುವಿಕೆ. ಐಎಸ್ಬಿಎನ್ ನೋಂದಾಯಿಸುವವರನ್ನು ನಿರ್ದಿಷ್ಟ ಶೀರ್ಷಿಕೆ, ಆವೃತ್ತಿ ಮತ್ತು ಸ್ವರೂಪವನ್ನು ಗುರುತಿಸುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟೃವಾಗಿದೆ. ಭಾರತವು ೧೨೧ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಮಹೇಂದ್ರ ಸಿಂಗ್ ಧೋನಿ, MS ಧೋನಿ ಎಂದೂ ಸಂಕ್ಷ್ತಿಪ್ತ ರೂಪದಲ್ಲಿ ಕರೆಯಲಾಗುತ್ತದೆ. pronunciation ಜನನ ಬಿಹಾರದ ರಾಂಚಿಯಲ್ಲಿ 7 ಜುಲೈ 1981ರಂದು (ಈಗಿನ ಜಾರ್ಖಂಡ್) ಇವರು ಭಾರತದ ಕ್ರಿಕೆಟಿಗ ಮತ್ತು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕರು. ಆರಂಭದಲ್ಲಿ ಅತಿ ಅಬ್ಬರದ ಮತ್ತು ಆಕ್ರಮಣಕಾರಿ ಬ್ಯಾಟ್ಸ್ಮ್ಯಾನ್ ಎಂದು ಗುರುತಿಸಿಕೊಂಡರೂ, ನಂತರ ಧೋನಿಯವರು ಭಾರತದ ಏಕದಿನ (ODI) ತಂಡದ ಶಾಂತ ಸ್ವಭಾವದ ನಾಯಕರಲ್ಲಿ ಒಬ್ಬರಂತೆ ಗುರ್ತಿಸಲ್ಪಡುತ್ತಾರೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಚುನಾವಣೆ ಯೆನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ.ಇದರಲ್ಲಿ,ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚುನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ,ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ.
ಕಾರ್ಗಿಲ್ ಸಂಘರ್ಷ ವೆಂದೇ ಹೆಸರಾದ ಕಾರ್ಗಿಲ್ ಯುದ್ದವು ಭಾರತ ಮತ್ತು ಪಾಕಿಸ್ತಾನದ ಮಧ್ಯೆ ನಡೆದ ಸಶಸ್ತ್ರ ಸಂಘರ್ಷವಾಗಿದ್ದು, ಕಾಶ್ಮೀರದ ಕಾರ್ಗಿಲ್ ಜಿಲ್ಲೆ ಮತ್ತು ನಿಯಂತ್ರಣ ರೇಖೆಯಿರುವ ಪ್ರದೇಶಗಳಲ್ಲಿ 1999ರ ಮೇ ಮತ್ತು ಜುಲೈ ನಡುವೆ ಸಂಭವಿಸಿತು. ಉಭಯ ರಾಷ್ಟ್ರಗಳ ನಡುವಿನ de facto ಗಡಿಯಾಗಿರುವ ನಿಯಂತ್ರಣ ರೇಖೆಯಲ್ಲಿ(LOC)ರುವ ಭಾರತದ ನೆಲೆಗಳಿಗೆ ಪಾಕಿಸ್ತಾನದ ಸೈನಿಕರು ಮತ್ತು ಕಾಶ್ಮೀರಿ ಉಗ್ರಗಾಮಿಗಳು ನುಸುಳಿದ್ದೇ ಯುದ್ಧಕ್ಕೆ ಕಾರಣ. ಯುದ್ಧದ ಆರಂಭದ ಹಂತಗಳಲ್ಲಿ, ಕಾರ್ಗಿಲ್ ಕದನಕ್ಕೆ ಸ್ವತಂತ್ರ ಕಾಶ್ಮೀರಿ ಉಗ್ರಗಾಮಿಗಳ ಮೇಲೆ ಪಾಕಿಸ್ತಾನ ಗೂಬೆ ಕೂರಿಸಿತು, ಆದರೆ ಯುದ್ಧಾನಂತರದ ಸಾವು ನೋವುಗಳ ದಾಖಲೆಗಳು ಮತ್ತು ಆ ಬಳಿಕ ಪಾಕಿಸ್ತಾನದ ಪ್ರಧಾನ ಮಂತ್ರಿ ಮತ್ತು ಸೇನಾ ಸಿಬ್ಬಂದಿ ಮುಖ್ಯಸ್ಥರು ನೀಡಿದ ಹೇಳಿಕೆಗಳು, ಜನರಲ್ ಅಶ್ರಫ್ ರಷೀದ್ ನೇತೃತ್ವದ ಪಾಕಿಸ್ತಾನಿ ಅರೆಸೇನೆ ಪಡೆಗಳು ಈ ಯುದ್ಧದಲ್ಲಿ ಪಾಲ್ಗೊಂಡಿದ್ದನ್ನು ರುಜುವಾತು ಮಾಡಿತು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದೆ ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಕಂಪ್ಯೂಟರ್ ಒಳರವಾನೆ ಸಂಸ್ಕರಣೆ ಹಾಗೂ ಹೊರರವಾನೆ ಸಾಧನಗಳನ್ನು ಹೊಂದಿದ್ದು ಒಳರವಾನೆ ಸಾಧನಗಳ ಮೂಲಕ ನೀಡಿದಂತಹ ಮಾಹಿತಿಯನ್ನು ಸಂಸ್ಕರಿಸಿ ಹೊರರವಾನೆ ಸಾಧನಗಳ ಮೂಲಕ ಉಪಯೋಗಿ(ಯೂಜರ್)ಗೆ ನೀಡುವುದಲ್ಲದೇ ಮಾಹಿತಿ ಮತ್ತು ದತ್ತಾಂಶಗಳನ್ನು ಶೇಖರಿಸಿಡಬಹುದಾದ ಸಾಧನವಾಗಿರುತ್ತದೆ ಅಲ್ಲದೇ ಶೇಖರಿಸಿಟ್ಟ ಅಥವಾ ನಾವು ನೀಡಿದಂತಹಾ ಮಾಹಿತಿಯನ್ನು ಒಂದು ಗಣಕಯಂತ್ರ ದಿಂದ ಮತ್ತೊಂದು ಗಣಕಯಂತ್ರಕ್ಕೆ ಸಂಪರ್ಕಜಾಲದ ಮೂಲಕ ನಮ್ಮ ಆದೇಶದ ಮೇರೆಗೆ ರವಾನಿಸುತ್ತದೆ..
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ)
ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ:GST) 2016:(Goods and Services Tax Bill or GST Bill 2016) ಭಾರತದ ತೆರಿಗೆ ವ್ಯವಸ್ಥೆಯಲ್ಲಿ ತೆರಿಗೆ ಸುಧಾರಣಾ ಕ್ರಮವಾಗಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯವಸ್ಥೆಯು ದಿ.1 ಜುಲೈ, 2017 ಮಧ್ಯರಾತ್ರಿಯಿಂದಲೇ ದೇಶದಾದ್ಯಂತ ಜಾರಿಗೆ ಬಂದಿದೆ. ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಮಧ್ಯರಾತ್ರಿ 12 ಗಂಟೆಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಗುಂಡಿ ಒತ್ತುವ ಮೂಲಕ ಹೊಸ ತೆರಿಗೆ ವ್ಯವಸ್ಥೆಗೆ ಚಾಲನೆ ನೀಡಿದರು. |} ಸರಕು ಮತ್ತು ಸೇವಾ ತೆರಿಗೆ ಬಿಲ್ ಅಥವಾ ಜಿ.ಎಸ್.ಟಿ ಮಸೂದೆ (ಬಿಲ್) (ಹಿಂದಿ: वस्तु एवं सेवा कर विधेयक), ಅಧಿಕೃತವಾಗಿ ಇದು ಸಂವಿಧಾನದ (ನೂರಾ ಇಪ್ಪತ್ತೆರಡನೇ ತಿದ್ದುಪಡಿ) ಮಸೂದೆ, 2014 ಎಂದು ಪ್ರಸ್ತಾಪಿಸಿದೆ.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
ಸಂವಹನ ವೆಂದರೆ ಅಸ್ತಿತ್ವದಲ್ಲಿರುವ ಒಂದು ವಸ್ತು ವಿನಿಂದ ಇನ್ನೊಂದಕ್ಕೆ ಮಾಹಿತಿ ವರ್ಗಾಯಿಸುವ ಪ್ರಕ್ರಿಯೆಯಾಗಿದೆ. ಸಂಪರ್ಕವೆಂದೂ ಸಹ ಹೇಳುವ ಇದು ತಿಳಿವಳಿಕೆಯನ್ನು ಮನದಟ್ಟು ಮಾಡುವ ಕಾರ್ಯವೂ ಆಗಿದೆ. ಸಂವಹನ ಪ್ರಕ್ರಿಯೆಗಳೆಂದರೆ ಸಂಕೇತಗಳ ಸಂಚಯ ಮತ್ತು ಸಂಕೇತ ಶಾಸ್ತ್ರದ ನಿಯಮಗಳೊಂದಿಗೆ, ಕನಿಷ್ಠ ಎರಡು ಪ್ರತಿನಿಧಿತ್ವಗಳ ನಡುವಿನ ಸಂಕೇತ-ಆಧರಿಸಿದ ಸಂಪರ್ಕದ ಕೊಂಡಿಯಾಗಿದೆ.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಇಂದಿರಾ ಪ್ರಿಯದರ್ಶಿನಿ ಗಾಂಧಿ (ಹಿಂದಿ:इंदिरा प्रियदर्शिनी गांधीಇಂದಿರಾ ಪ್ರಿಯದರ್ಶಿನಿ ಗಾಂಧಿ; ನಿ: ನೆಹರು; (೧೯ ನವೆಂಬರ್ ೧೯೧೭ – ೩೧ ಅಕ್ಟೋಬರ್ ೧೯೮೪) ೧೯೬೬ರಿಂದ ೧೯೭೭ರವೆಗೆ ಸತತ ಮೂರು ಬಾರಿ ಭಾರತ ಗಣತಂತ್ರ ದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ನಾಲ್ಕನೇ ಬಾರಿ ೧೯೮೦ರಿಂದ ೧೯೮೪ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಅವರು ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಇಂದಿನವರೆಗೆ ಆ ಸ್ಥಾನ ಅವರ ಪಾಲಿನದ್ದೇ ಆಗಿದೆ.
ಲಿಂಗ ಸಮಾನತೆ ಹಾಗೂ ಮಹಿಳಾ ಸಬಲೀಕರಣ
ಲಿಂಗ ಸಮಾನತೆ ಹಾಗೂ ಮಹಿಳಾ ಸಬಲೀಕರಣಗಳನ್ನು ಅರ್ಥ ಮಾಡಿಕೊಳ್ಳುವುದು ಬಹಳ ಅವಶ್ಯಕ.ಹೆಣ್ಣು ಮತ್ತು ಗಂಡು ಎಂಬ ಜೈವಿಕ ಲಕ್ಷಣಗಳು ಲಿಂಗ ಎಂಬುದಾಗಿ ವ್ಯಕ್ತಿಯ ಹುಟ್ಟಿನಿಂದಲೇ ನಿರ್ಧರವಾಗುತ್ತದೆ. ಲಿಂಗವು ಸೃಷ್ಟಿಯ ಸಹಜ ಸ್ಥಿ ತಿ. ದೈಹಿಕ ರಚನೆ ಹಾಗೂ ಸಂತಾನೋತ್ಪತಿಯ ಕ್ರಿಯೆಗಳಲ್ಲಿ ಹೆಣ್ಣು ಹಾಗು ಗಂಡು ವಿಶೇಷವಾದ ಗುಣಗಳನ್ನು ಹೊಂದಿದ್ದಾರೆ.
ಭಾರತ ದೇಶದ ಪಂಚ ವಾರ್ಷಿಕ ಯೋಜನೆಗಳು
ಭಾರತ ಸರ್ಕಾರ ಇಲ್ಲಿಯವರೆಗೆ 12 ಪಂಚ ವಾರ್ಷಿಕ ಯೋಜನೆಗಳನ್ನು ದೇಶಕ್ಕೆ ಅರ್ಪಿಸಿರುತ್ತದೆ.
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಜಾಗತಿಕ ತಾಪಮಾನ ನಿಯಂತ್ರಣ ಜಾಗತಿಕ ತಾಪಮಾನ ಏರಿಕೆ ಯೆಂದರೆ 20ನೇ ಶತಮಾನದ ಮಧ್ಯಭಾಗದಲ್ಲಿ ಭೂಮಿಯ ಮೇಲ್ಮೈ-ಸಮೀಪದಲ್ಲಿರುವ ವಾಯು ಮತ್ತು ಸಾಗರ ಪ್ರದೇಶಗಳಲ್ಲಿ ಆದ ಸರಾಸರಿ ತಾಪಮಾನದ ಏರಿಕೆ ಹಾಗೂ ಅದರ ಪ್ರಕ್ಷೇಪಿತ ಮುಂದುವರಿಕೆ. ಜಾಗತಿಕ ಮೇಲ್ಮೈ ಉಷ್ಣತೆಯು ಕಳೆದ ಶತಮಾನದಲ್ಲಿ 0.74 ± 0.18 °C (1.33 ± 0.32 °F)ರಷ್ಟು ಹೆಚ್ಚಿದೆ. ಹವಾಮಾನ ಬದಲಾವಣೆಯ ಕುರಿತಾದ ಅಂತರ-ಸರಕಾರಿ ಮಂಡಳಿಯು (IPCC) ಅಗೆದು ತೆಗೆದ ಇಂಧನಗಳು ಮತ್ತು ಅರಣ್ಯನಾಶಗಳಂತಹಾ ಮಾನವ ಚಟುವಟಿಕೆಗಳಿಂದಾದ ಹಸಿರುಮನೆ ಅನಿಲಗಳ ಸಂಗ್ರಹದ ಹೆಚ್ಚಳವು 20ನೇ ಶತಮಾನ ದ ಮಧ್ಯಕಾಲದ ನಂತರದ ತಾಪಮಾನ ಏರಿಕೆಗೆ ಕಾರಣವೆಂದು ತೀರ್ಮಾನಕ್ಕೆ ಬಂದಿದೆ.
ಭಾರತ ಸರ್ಕಾರವು ಇಂದು ಭಾರತೀಯ ಕಾನೂನು ಆಧಾರಿತ ಮೀಸಲಾತಿಯ ಸೌಲಭ್ಯವನ್ನು ಶೇಕಡಾವಾರು ಪ್ರಮಾಣದ ಮೇಲೆ ಸರ್ಕಾರಿ ಮತ್ತು ಸಾರ್ವಜನಿಕ ಕಂಪನಿಗಳ ನೇಮಕಾತಿಯಲ್ಲಿ ಸೇವಾವಕಾಶವನ್ನು ಒದಗಿಸುತ್ತಿದೆ. ಅಷ್ಟೇ ಅಲ್ಲದೇ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿಯೂ ಮೀಸಲಾತಿ ನೀಡುತ್ತದೆ.ಆದರೆ ಧಾರ್ಮಿಕ/ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳನ್ನು ಈ ನಿಯಮಗಳಿಂದ ಹೊರತುಪಡಿಸಲಾಗಿದೆ. ಪ್ರಮುಖವಾದುದ್ದೆಂದರೆ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳಿಗೆ ಅಂದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಸಾಮಾಜಿಕ ಹಿಂದುಳಿದಿರುವಿಕೆಯನ್ನು ಹೋಗಲಾಡಿಸಲು ಸರ್ಕಾರ ಇದನ್ನು ಜಾರಿಗೊಳಿಸಿದೆ.ಇದನ್ನು ನೀಡುವ ಕಾರಣವೆಂದರೆ ಅವರು ಇಂತಹ ಸೇವಾವಲಯಗಳಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಸೂಕ್ತ ಪ್ರಮಾಣದ ಪ್ರಾತಿನಿಧಿತ್ವ ಹೊಂದಿರುವುದಿಲ್ಲ.ಈ ಕೊರತೆ ನೀಗಿಸಲು ಭಾರತ ಸರ್ಕಾರವು ಈ ಕೋಟಾ ಪದ್ದತಿಯನ್ನು ಜಾರಿಗೊಳಿಸಿದೆ.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
ಮಾನವ ಹಕ್ಕುಗಳು ಭಾರತದಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿಯು (ವಸ್ತುಸ್ಥಿತಿ) ಬಹಳ ಸಂಕೀರ್ಣ ರಚನೆಯಾಗಿದೆ. ಕಾರಣವೆಂದರೆ ದೇಶದ ವಿಶಾಲವಾದ ಭೂ ಭಾಗ ಮತ್ತು ಅತ್ಯದ್ಭುತ ವೈವಿಧ್ಯತೆಯ ಪರಿಣಾಮವಾಗಿ, ಇದರ ಸ್ಥಾನವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರದ ನೀತಿ ಮತ್ತು ಈ ದೇಶದ ಸಾರ್ವಭೌಮತ್ವ, ಸಾಮಾಜಿಕ ಸಮಾನತೆ, ಪ್ರಜಾತಂತ್ರ ಗಣರಾಜ್ಯ ರಾಷ್ಟ್ರವಾಗಿದ್ದು, ಮತ್ತು ಇತಿಹಾಸವನ್ನು ದಾಖಲಿಸಿದ್ದ ಹಳೆಯ ವಸಾಹತುಶಾಹಿ ಪ್ರಾಂತ್ಯಗಳಂತಿದೆ. ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳ ನೀಡಿಕೆಯ ಜೊತೆ, ಧಾರ್ಮಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಟ್ಟಿದೆ.
ಸ್ವಾತಂತ್ರ್ಯ ಬಂದಾಗಿನಿಂದಲೂ, ಭಾರತದಲ್ಲಿನ ಚುನಾವಣೆಗಳು ತಮ್ಮ ವಿಕಸನದಲ್ಲಿ ಸುದೀರ್ಘವಾದ ಹಾದಿಯನ್ನು ಸವೆಸಿವೆಯಾದರೂ, ಅಷ್ಟು ಸಮಯವೂ ಚುನಾವಣೆಗಳು ಸ್ವತಂತ್ರ ಭಾರತದ ಒಂದು ಗಮನಾರ್ಹವಾದ ಸಾಂಸ್ಕೃತಿಕ ಅಂಶವೆನಿಸಿಕೊಂಡಿವೆ. 2004ರಲ್ಲಿ ನಡೆದ ಭಾರತೀಯ ಚುನಾವಣೆಗಳು 670 ದಶಲಕ್ಷಕ್ಕೂ ಹೆಚ್ಚಿನ ಜನರಿರುವ ಮತದಾರ ಸಮುದಾಯವೊಂದನ್ನು ಒಳಗೊಂಡಿದ್ದವು; ಇದು ಮುಂದಿನ ಅತಿದೊಡ್ಡ ಸ್ಥಾನವನ್ನು ಹೊಂದಿರುವ ಯುರೋಪಿನ ಸಂಸತ್ ಚುನಾವಣೆಗಳಿಗೆ ಹೋಲಿಸಿದಾಗ ದುಪ್ಪಟ್ಟು ಪ್ರಮಾಣಕ್ಕಿಂತಲೂ ಹೆಚ್ಚಿನದು ಎನಿಸಿಕೊಂಡಿತ್ತು. ಅಷ್ಟೇ ಅಲ್ಲ, 1989ರ ವೆಚ್ಚಗಳಿಗೆ ಹೋಲಿಸಿದಾಗ ಈ ಅವಧಿಯ ಘೋಷಿತ ಖರ್ಚುವೆಚ್ಚವು ಮೂರುಪಟ್ಟು ಹೆಚ್ಚಾಗಿ, ಅದು ಬಹುಮಟ್ಟಿಗೆ 300 ದಶಲಕ್ಷ $ನಷ್ಟು ಪ್ರಮಾಣವನ್ನು ತಲುಪಿತ್ತು ಮತ್ತು ಈ ಚುನಾವಣೆಯಲ್ಲಿ 1 ದಶಲಕ್ಷಕ್ಕೂ ಹೆಚ್ಚಿನ ವಿದ್ಯುನ್ಮಾನ ಮತದಾನ ಯಂತ್ರಗಳು ಬಳಸಲ್ಪಟ್ಟವು.