The most-visited ಕನ್ನಡ Wikipedia articles, updated daily. Learn more...
ಪೌರತ್ವ (ತಿದ್ದುಪಡಿ) ಮಸೂದೆ, ೨೦೧೯
ಪೌರತ್ವ (ತಿದ್ದುಪಡಿ) ಮಸೂದೆ, ೨೦೧೯, ೧೯೯೫ರ ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡುವ ಮಸೂದೆಯಾಗಿದ್ದು, ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರೈಸ್ತರಿಗೆ ಪೌರತ್ವ ನೀಡುವ ಉದ್ದೇಶವನ್ನು ಹೊಂದಿದೆ. ಆ ಆರು ಧರ್ಮದವರು ಭಾರತಕ್ಕೆ ೩೧ ಡಿಸೆಂಬರ್ ೨೦೧೪ ಅಥವಾ ಅದಕ್ಕಿಂತಲೂ ಮೊದಲು ಪ್ರವೇಶಿಸಿದವರಾಗಿದ್ದಲ್ಲಿ, ಅವರೆಲ್ಲರೂ ಭಾರತೀಯ ಪೌರತ್ವಕ್ಕೆ ಅರ್ಹರು.ಕೇಂದ್ರ ಸಚಿವ ಸಂಪುಟವು ೪ ಡಿಸೆಂಬರ್ ೨೦೧೯ ರಂದು ಮಸೂದೆಯನ್ನು ಮುಂದಿಟ್ಟಿತು. ಇದನ್ನು ಡಿಸೆಂಬರ್ ೧೦ ರಂದು ಲೋಕಸಭೆಯು ಅಂಗೀಕರಿಸಿತು ಹಾಗೂ ಡಿಸೆಂಬರ್ ೧೧ ರಂದು ರಾಜ್ಯಸಭೆಯು ಇದನ್ನು ಅಂಗೀಕಾರ ಮಾಡಿತು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು. ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
ಭಾರತ ಬಿಟ್ಟು ತೊಲಗಿ ಚಳುವಳಿಯು ಒಂದು ಅಸಹಕಾರ ಚಳುವಳಿಯಾಗಿದ್ದು ಆಗಸ್ಟ್ ೧೯೪೨ರಲ್ಲಿ ಮಹಾತ್ಮಾ ಗಾಂಧಿಯವರ ಮುಂದಾಳತ್ವದಲ್ಲಿ ನಡೆಯಿತು. ಇದರ ಗುರಿ ಬ್ರಿಟಿಷ್ ಸರ್ಕಾರದಿಂದ ಭಾರತದ ಸ್ವಾತಂತ್ರ್ಯ ಪಡೆಯುವುದಾಗಿತ್ತು. ೮ ಆಗಸ್ಟ್ ರಂದು ಮುಂಬಯಿಯ ಗೊವಾಳಿಯ ಮೈದಾನ(ಇಂದಿನ ಹೆಸರು - ಆಗಸ್ಟ್ ಕ್ರಾಂತಿ ಮೈದಾನ)ದಲ್ಲಿ ಗಾಂಧೀಜಿಯವರ ಮಾಡು ಇಲ್ಲವೆ ಮಡಿ ಎಂಬ ಘೋಷಣೆಯೊಂದಿಗೆ ಪ್ರಾರಂಭವಾಯಿತು.
ಯೋಗ (ಸಂಸ್ಕೃತ, ಪಾಲಿ: yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (2018 ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಶ್ರೀನಿವಾಸ ರಾಮಾನುಜನ ಅಯ್ಯ೦ಗಾರ್ ರಾಮಾನುಜನ್ (ಡಿಸ೦ಬರ್ ೨೨, ೧೮೮೭ - ಏಪ್ರಿಲ್ ೨೬, ೧೯೨೦) ವಿಶ್ವದ ಶ್ರೇಷ್ಠ ಗಣಿತಜ್ಞರೆಂದು ಪ್ರಖ್ಯಾತರಾಗಿದ್ದಾರೆ. “ಪ್ರತಿ ಧನಪೂರ್ಣಾಂಶವೂ ರಾಮಾನುಜನ್ನರ ವೈಯಕ್ತಿಕ ಮಿತ್ರರುಗಳಲ್ಲೊಂದು” ಎಂಬುದು ಲೋಕದಲ್ಲಿ ವಿಖ್ಯಾತ ನುಡಿ. ಅವರಿಗೆ “ಸಂಖ್ಯೆಗಳ ವೈಲಕ್ಷಣಗಳನ್ನು ನಂಬಲಸಾಧ್ಯವಾದಂಥ ರೀತಿಯಲ್ಲಿ ನೆನಪಿಡುವ’ ಅಪೂರ್ವ ಸಾಮರ್ಥ್ಯವಿತ್ತು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಪರಿಸರವನ್ನು ಕಲುಷಿತಗೊಳಿಸುವ,(environmental pollution) ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಒಂದು ಜೀವಿಯ ದೇಹ-ಮನಸ್ಸು ಸಂಪೂರ್ಣ ಸಮತೋಲನದಲ್ಲಿರುವ ಸ್ಥಿತಿಯನ್ನು ಆರೋಗ್ಯ ಎಂದು ಕರೆಯಬಹುದು. ವಿಶ್ವ ಆರೋಗ್ಯ ಸಂಸ್ಥೆಯ ೧೯೪೫ರ ಹೇಳಿಕೆಯ ಪ್ರಕಾರ "ಆರೋಗ್ಯವೆಂದರೆ ಸಂಪೂರ್ಣ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಸುಸ್ಥಿತಿ - ಕೇವಲ ರೋಗ, ಭಾದೆಗಳ ಗೈರು ಹಾಜರಿಯಷ್ಟೇ ಅಲ್ಲ"ಆರೋಗ್ಯವೇ ಭಾಗ್ಯ.. ಮಾನವನಿಗೆ ಪರಿಸ್ಥಿತಿಗೆ ಹೊಂದಿಕೊಳ್ಳುವ ಮತ್ತು ದೈಹಿಕ, ಮಾನಸಿಕ ಅಥವಾ ಸಾಮಾಜಿಕ ಸವಾಲುಗಳನ್ನು ಎದುರಿಸುವಾಗ ಸ್ವಯಂ ನಿರ್ವಹಿಸುವ ಸಾಮರ್ಥ್ಯ ಇದೆ.
ಪರಿಸರ ರಕ್ಷಣೆಯು ವ್ಯಕ್ತಿಗಳು, ಸಂಘಟನೆಗಳು ಮತ್ತು ಸರ್ಕಾರಗಳಿಂದ ನೈಸರ್ಗಿಕ ಪರಿಸರವನ್ನು ರಕ್ಷಿಸುವ ಅಭ್ಯಾಸವಾಗಿದೆ. ಅದರ ಉದ್ದೇಶಗಳು ನೈಸರ್ಗಿಕ ಸಂಪನ್ಮೂಲಗಳನ್ನು ಮತ್ತು ಅಸ್ತಿತ್ವದಲ್ಲಿರುವ ನೈಸರ್ಗಿಕ ಪರಿಸರವನ್ನು ಸಂರಕ್ಷಿಸುವುದಾಗಿದೆ ಮತ್ತು ಸಾಧ್ಯವಾದಲ್ಲಿ, ಹಾನಿ ಮತ್ತು ರಿವರ್ಸ್ ಪ್ರವೃತ್ತಿಯನ್ನು ಸರಿಪಡಿಸುವು ಗಿದೆ. ಅತಿಯಾದ ಅನುಭೊಗದ ಒತ್ತಡ, ಜನಸಂಖ್ಯಾ ಬೆಳವಣಿಗೆ ಮತ್ತು ತಂತ್ರಜ್ಞಾನದ ಕಾರಣದಿಂದ, ಜೈವಿಕ ಪರಿಸರವು ಕುಸಿಯುತ್ತಿದೆ ಕೆಲವೊಮ್ಮೆ ಶಾಶ್ವತವಾಗಿ ನಶವಗುತ್ತಿದೆ.
ಪೌರನೆಂದರೆ ಪೌರತ್ವ (ದೇಶ ಅಥವಾ ನಗರದಂತಹ ಒಂದು ರಾಜಕೀಯ ಸಮುದಾಯದಲ್ಲಿ ಸದಸ್ಯತ್ವ) ಹೊಂದಿರುವ ಒಬ್ಬ ವ್ಯಕ್ತಿ. ಪೌರತ್ವ] ಅಥವ ನಾಗರಿಕತ್ವವೆಂದರೆ ಒಂದು ಪದ್ಧತಿ ಅಥವಾ ಕಾನೂನಿನ ಅಡಿಯಲ್ಲಿ ಮಾನ್ಯತೆ ವ್ಯಕ್ತಿಯ ಸ್ಥಿತಿಗೆ ಸದಸ್ಯತ್ವ ಕೊಡಲಾಗುತ್ತದೆ. ಒಂದು ವ್ಯಕ್ತಿಯು ಅನೇಕ ನಾಗರೀಕತ್ವಗಳನ್ನು ಹೊಂದಿರಬಹುದು ಮತ್ತು ಯಾವುದೇ ರಾಜ್ಯದ ಪೌರತ್ವ ಹೊಂದಿಲ್ಲದ ಒಬ್ಬ ವ್ಯಕ್ತಿಯು 'ಸ್ಥಿತಿಯಿಲ್ಲದ'ವ ಎಂದು ಹೇಳಲಾಗುತ್ತದೆ.
ಸುಭಾಷ್ ಚಂದ್ರ ಬೋಸ್ (; ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು.
ಚುನಾವಣೆ ಯೆನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ.ಇದರಲ್ಲಿ,ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚುನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ,ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
== ಸರ್ವಾಂತಯಾ೯ಮಿ ಪ್ಲಾಸ್ಟಿಕ್ ಮೆದುವಾದ ಮತ್ತು ವಿವಿಧ ಆಕಾರಗಳ ಘನ ಕಾಯಗಳನ್ನು ಹೊಂದಿರುವ ಸಿಂಥಟಿಕ್ ವಸ್ತು ಪ್ಲಾಸ್ಟಿಕ್ಗಳನ್ನು ಹೆಚ್ಚಿನ ಅಣು ದ್ರವ್ಯರಾಶಿಯ ಜೈವಿಕ ಪಾಲಿಮರ್ಗಳು ಆದರೆ ಸಾಮಾನ್ಯವಾಗಿ ಇತರ ಪದಾರ್ಥಗಳುನ್ನು ಹೊಂದಿರುತ್ತದೆ. ವಿಶ್ವದಾದ್ಯಂತ ಘನ ತ್ಯಾಜ್ಯ ವಸ್ತುಗಳ ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿದೆ. ಮಿತಿಮೀರಿ ಬೆಳೆಯುತ್ತಿರುವ ಜನಸಂಖ್ಯೆ, ಅತಿ ಭರದಿಂದ ತಲೆಯೆತ್ತಿ ಮೆರೆಯುತ್ತಿರುವ ನಗರಗಳು, ತ್ಯಾಜ್ಯ ವಸ್ತುಗಳ ಹೆಚ್ಚಳಕ್ಕೆ ಮುಖ್ಯವಾದ ಕಾರಣಗಳು, ತ್ಯಾಜ್ಯ ವಸ್ತುಗಳ ವಿಲೇವಾರಿಗೆ ಇದು ದೊಡ್ಡ ಸವಾಲಾಗಿದೆ.
ಬೆಳೆಯ ಆವರ್ತನೆ, ಹಸಿರು- ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಭಾರತದ ರಾಷ್ತ್ರೀಯ ಧ್ವಜ'ದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಒಂಬತ್ತು ಒಕ್ಕೂಟ ಪ್ರಾಂತ್ಯಗಳು ಇವೆ.
ಸಿಂಧೂ ನದಿ (ಸ್ಥಳೀಯವಾಗಿ ಸಿಂಧು ಎಂದು ಕರೆಯಲ್ಪಡುತ್ತದೆ) ಏಷ್ಯಾದಲ್ಲೇ ಅತ್ಯಂತ ಉದ್ದದ ನದಿಗಳಲ್ಲಿ ಒಂದಾಗಿದೆ. ಮಾನಸ ಸರೋವರದ ಸಮೀಪದ ಟಿಬೆಟಿಯನ್ ಪ್ರಸ್ಥಭೂಮಿಯಮೂಲದ, ನದಿ ಜಮ್ಮು ಮತ್ತು ಕಾಶ್ಮೀರದ ಲಡಾಖ್ಪ್ರದೇಶದ ಮೂಲಕ, ಗಿಲ್ಗಿಟ್-ಬಾಲ್ಟಿಸ್ತಾನ್ ಮತ್ತು ಹಿಂದುಕುಶ್ ವ್ಯಾಪ್ತಿಯ ಕಡೆಗೆ ಕೋರ್ಸ್ ಅನ್ನು ಹಾದು ಹೋಗುತ್ತದೆ ಮತ್ತು ನಂತರ ಪಾಕಿಸ್ತಾನದ ಉದ್ದಕ್ಕೂ ವಿಲೀನಗೊಳ್ಳಲು ದಕ್ಷಿಣದ ದಿಕ್ಕಿನಲ್ಲಿ ಹರಿಯುತ್ತದೆ. ಸಿಂಧ್ನಬಂದರು ನಗರ ಕರಾಚಿ ಬಳಿ ಅರೇಬಿಯನ್ ಸಮುದ್ರದಲ್ಲಿ.
ಪುಸರ್ಲಾ ವೆಂಕಟ ಸಿಂಧು (ಜನನ ೫ ಜುಲೈ ೧೯೯೫)( ತೆಲುಗು : సింధూ ) ಅಂತರರಾಷ್ಟ್ರೀಯ ಖ್ಯಾತಿಯ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ.ಹೈದರಾಬಾದ್ ನ ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ತರಬೇತಿ ಪಡೆಯುವ ಇವರು, ಭಾರತೀಯ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುತ್ತಿರುವ ಸ್ವಸಹಾಯ ಸಂಸ್ಥೆಯಾದ ಒಲಿಂಪಿಕ್ ಗೋಲ್ಡ್ ಕ್ವೆಸ್ಟ್ ನ ಭಾಗವಾಗಿದ್ದಾರೆ. ೧೦ ಆಗಸ್ಟ್ ೨೦೧೩ ರಂದು ಇವರು ಚೀನಾ ದಲ್ಲಿ ಜರುಗಿದ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ (ಪ್ರಕಾಶ್ ಪಡುಕೋಣೆ ೧೯೮೩ ರಲ್ಲಿ ಕಂಚು ಗೆದ್ದಿದ್ದಾರೆ. ಅನಂತರ ಭಾರತದ ಮೊದಲ ಸಿಂಗಲ್ಸ್ ಪದಕ) ನ ಸಿಂಗಲ್ಸ್ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆಯಾಗಿದ್ದಾರೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆs.k.d.r.d.p. "ಹನಿ ಹನಿ ಸೇರಿದರೆ ಹಳ್ಳ ತೆನೆ ತೆನೆ ಕೂಡಿದರೆ ಬಳ್ಳ" ಎಂಬ ಆಡು ಮಾತಿಗೆ ಮತ್ತೊಂದು ಹೆಸರು "ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆ". ೧೯೮೨ ಬೆಳ್ತಂಗಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆಗೆ ಚಾಲನೆ ನೀಡಲಾಯಿತು.ಡಾ.ವೀರೇಂದ್ರ ಹೆಗ್ಗಡೆಯವರ ಕನಸಿನ ಕೂಸಾದ ಯೋಜನೆ ಇಂದು ಕರ್ನಾಟಕದ ಹಳ್ಳಿ ಹಳ್ಳಿಯಲ್ಲೂ ತಲೆಯೆತ್ತಿದೆ.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
ಜನಪದ ಕ್ರೀಡೆಗಳು ಗ್ರಾಮೀಣ ಜನರಿಂದ ಮನೋರಂಜನೆಗಾಗಿ, ದೈಹಿಕ ವ್ಯಾಯಾಮಕ್ಕಾಗಿ ರಚಿಸಲ್ಪಟ್ಟ ಆಟಗಳು. ಇವುಗಳಲ್ಲಿ ಕಂಡು ಬರುವ ಸಾಮಾನ್ಯ ಅಂಶವೆಂದರೆ ಇವು ಅತೀ ಕಡಿಮೆ ಹಾಗೂ ಸುಲಭದಲ್ಲಿ ದೊರಕುವ ಸಾಮಗ್ರಿಗಳನ್ನು ಬಳಸಿ ಕೊಂಡುಆಟವಾಡಿ ನೆರೆದವರನ್ನು ರಂಜಿಸುವುದು. ಲಗೋರಿ, ಕುಂಟೇ ಬಿಲ್ಲೆ, ಮರಕೋತಿಯಾಟ, ಚಿನ್ನಿದಾಂಡು, ಬುಗುರಿ, ಕಣ್ಣು ಮುಚ್ಚಾಲೆ, ಅಳ್ಳುಮನೆ, ಆಣೆಕಲ್ಲು, ಹಗ್ಗಜಗ್ಗಾಟ ಮುಂತಾದುವು ಜನಪದ ಕ್ರೀಡೆಗಳಾಗಿವೆ.
|ordo = Proteales | familia = Nelumbonaceae | genus = [[Nelumbo]ugh| species = N. nucifera | binomial = Nelumbo nucifera | binomial_authority = Gaertn. | synonyms = Nelumbium speciosum Willd. Nymphaea nelumbo Nymphaea stellata}} ಕಮಲ (ನೀಲಂಬೊ ನೂಸಿಫೆರಾ) ನೀಲಂಬೊನೇಸಿಯಿ ಕುಟುಂಬದಲ್ಲಿನ ಜಲವಾಸಿ ಸಸ್ಯದ ಎರಡು ಪ್ರಜಾತಿಗಳಲ್ಲಿ ಒಂದು.
[[ಚಿತ್ರ:GolGumbaz2.jpg |right|thumb|250px|ಗೋಲ ಗುಂಬಜ್] ಗೋಲ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.