The most-visited ಕನ್ನಡ Wikipedia articles, updated daily. Learn more...
ಕಾರ್ಗಿಲ್ ಸಂಘರ್ಷ ವೆಂದೇ ಹೆಸರಾದ ಕಾರ್ಗಿಲ್ ಯುದ್ದವು ಭಾರತ ಮತ್ತು ಪಾಕಿಸ್ತಾನದ ಮಧ್ಯೆ ನಡೆದ ಸಶಸ್ತ್ರ ಸಂಘರ್ಷವಾಗಿದ್ದು, ಕಾಶ್ಮೀರದ ಕಾರ್ಗಿಲ್ ಜಿಲ್ಲೆ ಮತ್ತು ನಿಯಂತ್ರಣ ರೇಖೆಯಿರುವ ಪ್ರದೇಶಗಳಲ್ಲಿ 1999ರ ಮೇ ಮತ್ತು ಜುಲೈ ನಡುವೆ ಸಂಭವಿಸಿತು. ಉಭಯ ರಾಷ್ಟ್ರಗಳ ನಡುವಿನ de facto ಗಡಿಯಾಗಿರುವ ನಿಯಂತ್ರಣ ರೇಖೆಯಲ್ಲಿ(LOC)ರುವ ಭಾರತದ ನೆಲೆಗಳಿಗೆ ಪಾಕಿಸ್ತಾನದ ಸೈನಿಕರು ಮತ್ತು ಕಾಶ್ಮೀರಿ ಉಗ್ರಗಾಮಿಗಳು ನುಸುಳಿದ್ದೇ ಯುದ್ಧಕ್ಕೆ ಕಾರಣ. ಯುದ್ಧದ ಆರಂಭದ ಹಂತಗಳಲ್ಲಿ, ಕಾರ್ಗಿಲ್ ಕದನಕ್ಕೆ ಸ್ವತಂತ್ರ ಕಾಶ್ಮೀರಿ ಉಗ್ರಗಾಮಿಗಳ ಮೇಲೆ ಪಾಕಿಸ್ತಾನ ಗೂಬೆ ಕೂರಿಸಿತು, ಆದರೆ ಯುದ್ಧಾನಂತರದ ಸಾವು ನೋವುಗಳ ದಾಖಲೆಗಳು ಮತ್ತು ಆ ಬಳಿಕ ಪಾಕಿಸ್ತಾನದ ಪ್ರಧಾನ ಮಂತ್ರಿ ಮತ್ತು ಸೇನಾ ಸಿಬ್ಬಂದಿ ಮುಖ್ಯಸ್ಥರು ನೀಡಿದ ಹೇಳಿಕೆಗಳು, ಜನರಲ್ ಅಶ್ರಫ್ ರಷೀದ್ ನೇತೃತ್ವದ ಪಾಕಿಸ್ತಾನಿ ಅರೆಸೇನೆ ಪಡೆಗಳು ಈ ಯುದ್ಧದಲ್ಲಿ ಪಾಲ್ಗೊಂಡಿದ್ದನ್ನು ರುಜುವಾತು ಮಾಡಿತು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮)(2nd October 1869 ) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು. ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ಆರಂಭಗೊಂಡಿದ್ದರೂ, ಅದು ಹೆಚ್ಚು ಪ್ರಚಲಿತಕ್ಕೆ ಬಂದುದು ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು., ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿ . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು. ಇದನ್ನು ಎಲ್ಲರು ಧರಿಸಿ ಪೂಜಿಸಬಹುದು.
ಚಂದ್ರಯಾನ-೨ (ಸಂಸ್ಕೃತ:चंद्रयान-२, lit: Moon-vehicle pronunciation ), ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆಯ ಸಂಪೂರ್ಣ ದೇಶೀಯ ತಂತ್ರಜ್ಞಾನ ಅಳವಡಿಸಿ ನಿರ್ಮಿಸಿರುವ ಚಾಂದ್ರ ಪರಿಶೋಧನಾ ಅಭಿಯಾನ. ೨೨ ಜುಲೈ ೨೦೧೯ ರ ಅಪರಾಹ್ನ ೦೨ ಗಂಟೆ ೪೩ (2ಗಂ.43 ನಿ.ಕ್ಕೆ)ನಿಮಿಷ ಭಾರತೀಯ ಕಾಲಮಾನಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಜಿಯೋಸಿಂಕ್ರೋನಸ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಮಾರ್ಕ್ 3 (ಜಿ ಎಸ್ ಎಲ್ ವಿ ಎಂಕೆ 3-ಎಂ1 ) ರಾಕೆಟ್ ಮೂಲಕ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು.ಇಸ್ರೋದ ಮಹತ್ವಾಕಾಂಕ್ಷೆಯ ಯೋಜನೆಯ ಭಾಗವಾಗಿ ಒಂದು ಚಾಂದ್ರ ಕಕ್ಷೆಗಾಮಿ, ರೋವರ್ ಹಾಗು ಒಂದು ಭೂಸ್ಪರ್ಶಕ ಒಳಗೊಂಡಿರುವ ಇದು ಸೆಪ್ಟೆಂಬರ್ ವೇಳೆಗೆ ಚಂದ್ರನ ದಕ್ಷಿಣ ದ್ರುವಕ್ಕೆ ಇಳಿಯುವ ಯೋಜನೆ ಇದೆ. ಚಂದ್ರನ ದಕ್ಷಿಣ ಧ್ರುವ ಪ್ರದೇಶಕ್ಕೆ ಭೂಸ್ಪರ್ಶಕವನ್ನು ಇಳಿಸುವ ಮೊಟ್ಟ ಮೊದಲ ಯೋಜನೆ ಇದಾಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಒಬ್ಬ ವ್ಯಕ್ತಿ ಕೆಲಸ ಮಾಡಲು ಲಭ್ಯನಿದ್ದು, ಕೆಲಸಮಾಡುವ ಇಚ್ಚೆಯನ್ನೂ ಹೊಂದಿದ್ದು, ಆದರೆ ಸಧ್ಯಕ್ಕೆ ಆತನಿಗೆ ಮಾಡಲು ಕೆಲಸವಿಲ್ಲದೇ ಇದ್ದಾಗ ನಿರುದ್ಯೋಗ ವು ಉದ್ಭವಿಸುತ್ತದೆ. ಸಾಮಾನ್ಯವಾಗಿ ನಿರುದ್ಯೋಗ ವರ್ಗದ ಸಮೂಹವನ್ನು ಒಟ್ಟು ನಿರುದ್ಯೋಗ ದರವನ್ನು ಬಳಸಿಕೊಂಡು ಮಾಪನಮಾಡುತ್ತಾರೆ. ಇದನ್ನು ಒಟ್ಟೂ ಶ್ರಮ ಶಕ್ತಿಯಲ್ಲಿರುವ ಶೇಕಡಾವಾರು ನಿರುದ್ಯೋಗಿಗಳ ಮೂಲಕ ವ್ಯಾಖ್ಯಾನಿಸಲಾಗುತ್ತದೆ.
ನಮ್ಮ ಸುತ್ತಮುತ್ತಲಿನ ಪ್ರದೇಶವೇ ಪರಿಸರ. ಈ ಪರಿಸರವೂ ಮರ ಗಿಡಗಳು ಹಾಗೂ ಪ್ರಾಣಿ ಪಕ್ಷಿಗಳಿಂದ ಕೂಡಿದೆ.ಇದರೊಂದಿಗೆ ಮಾನವನು ಅನ್ಯೋನ್ಯತೆಯಿಂದ ಜೀವಿಸುತಿದ್ದಾನೆ.ಇವೆಲ್ಲದರ ನಡುವೆ ಮಾನವನು ತನ್ನ ಸ್ವಾರ್ಥತೆಯನ್ನು ತೋರಿಸುತ್ತಾನೆ.ಇದರಿಂದಾಗಿ ಪರಿಸರವು ಹಲವಾರು ತೊಂದರೆಗೆ ಒಳಗಾಗಿದೆ.ಇದರಲ್ಲಿ ಪರಿಸರವೂ ಎದುರಿಸುವ ಮೂರು ಮುಖ್ಯವಾದ ತೊಂದರೆಗಳೆಂದರೆ ವಾಯು ಮಾಲಿನ್ಯ , ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ. ಇದರ ಮುಖ್ಯ ಕಾರಣವೆಂದರೆ ಹೆಚ್ಚಾಗುತ್ತಿರುವ ಜನಸಂಖ್ಯೆ.ಜನರು ಬಳಸುವ ವಾಹನಗಳಿಂದ ಕೆಟ್ಟ ಹೊಗೆ ಹೊರಬರುತ್ತದೆ.ಕಾರ್ಖಾನೆಗಳಿಂದ ಹೊರಬರುವ ರಾಸಾಯನಿಕ ಹೊಗೆ ವಾಯು ಮಾಲಿನ್ಯಕ್ಕೆ itಕಾರಣವಾಗುತ್ತದೆ.ಮಾನವನ ಇಂದಿನ ದಿನಚರಿಕೆಯಿಂದ ಹಾಗೂ ಕಾರ್ಖಾನೆಗಳಿಂದ ಹೊರ ಬಿಡುವ ಕhಸಗಳು, ನೀರನ್ನು ಮಾಲಿನ್ಯಗೊಳಿಸುತ್ತದೆ.ವಾಹನಗಳಿಂದ,ಮದುವೆ ಸಮಾರಂಭಗಳಲ್ಲಿ ಹಾಗೂ ದೀಪಾವಳಿಯ ಸಮಯದಲ್ಲಿ ಉಪಯೋಗಿಸುವ ಪಟಾಕಿಯಿಂದ ಶಬ್ದ ಮಾಲಿನ್ಯವಾಗುತ್ತದೆ.ಇದೆಲ್ಲಾ ಮಾನವನ ಮೇಲೆಯೇ ಪ್ರಭಾವ ಬೀರುತ್ತದೆ.ಮಾಲಿನ್ಯವೂ ಮಿತಿಮೀರಿದರೆ ಮಾನವನಿಗೆ ಈ ಪರಿಸರದಲ್ಲಿ ಜೀವಿಸಲು ಅಸಾಧ್ಯವಾಗುತ್ತದೆ.ಆದುದರಿಂದ ಈ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಜವಬ್ದಾರಿ ನಮ್ಮದಾಗಿದೆ.ಮುಂದಿನ ಪೀಳಿಗೆಗೆ ಈ ಪರಿಸರವು ಉಳಿಯ ಬೇಕಾದರೆ ಇಂದಿನಿಂದಲೇ ಒಳ್ಳೆಯ ಬದಲಾವಣೆಯನ್ನು ಮಾಡಬೇಕಾಗಿದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (2018 ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆ
ಇಸ್ರೋ ಭಾರತದ ಅಂತರಿಕ್ಷ ಸಂಶೋಧನಾ ಸಂಸ್ಥೆ (ISRO - Indian Space Research Organisation). ಇದು ಬೆಂಗಳೂರಿನಲ್ಲಿ ಮುಖ್ಯ ಕಛೇರಿಯನ್ನು ಹೊಂದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊಂದಿದೆ. ಇಸ್ರೋದ ಮುಖ್ಯ ಕೇಂದ್ರಗಳು ಬೆಂಗಳೂರು, ತಿರುವನಂತಪುರ (ಕೇರಳ), ಅಹಮದಾಬಾದ್ (ಗುಜರಾತ್), ಮಹೇಂದ್ರಗಿರಿ(ತ.ನಾ), ಹಾಸನ(ಕರ್ನಾಟಕ) ಮತ್ತು ಶ್ರಿಹರಿಕೋಟ (ಆಂಧ್ರ ಪ್ರದೇಶ) ಗಳಲ್ಲಿ ಇವೆ.
ಸುಭಾಷ್ ಚಂದ್ರ ಬೋಸ್ (সুভাষ চন্দ্র বসু; ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣದಿಂದಾಗಿಯೇ ಇದ್ದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಸುಧಾ ಚಂದ್ರನ್ ರವರು(೨೭ ಸಪ್ಟೆಂಬರ್ ೧೯೬೫) ಭಾರತೀಯ ಚಲನಚಿತ್ರ ಮತ್ತು ಕಿರುತರೆ ನಟಿ ಹಾಗೂ ಭರತನಾಟ್ಯ ನೃತ್ಯ ಕಲಾವಿದೆ . ಸುಧಾ ಚಂದ್ರನ್ ಮತ್ತು ಆಕೆಯ ತಂದೆ ತಾಯಿಯೊಂದಿಗೆ ೨ ಮೇ ೧೯೮೧ ರಂದು ದೇವಸ್ಥಾನಕ್ಕೆ ತೆರಳುತ್ತಿರುವಾಗ ತಮಿಳುನಾಡಿನ ತಿರುಚಿರಾಪಲ್ಲಿ ಬಳಿ ರಸ್ತೆ ಅಪಘಾತದಿಂದಾಗಿ ತನ್ನ ಕಾಲನ್ನು ಕಳೆದುಕೊಂಡರು . ನಂತರ ಕೃತಕ ಕಾಲಿನ ಸಹಾಯದಿಂದ ಅವರು ನಡೆಯಲು ಪ್ರಾರಂಭಿಸಿದರು.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಇಂದಿರಾ ಪ್ರಿಯದರ್ಶಿನಿ ಗಾಂಧಿಇಂದಿರಾ ಪ್ರಿಯದರ್ಶಿನಿ ಗಾಂಧಿ; ನಿ: ನೆಹರು; (೧೯ ನವೆಂಬರ್ ೧೯೧೭ – ೩೧ ಅಕ್ಟೋಬರ್ ೧೯೮೪) ೧೯೬೬ರಿಂದ ೧೯೭೭ರವೆಗೆ ಸತತ ಮೂರು ಬಾರಿ ಭಾರತ ಗಣತಂತ್ರ ದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ನಾಲ್ಕನೇ ಬಾರಿ ೧೯೮೦ರಿಂದ ೧೯೮೪ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಅವರು ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಇಂದಿನವರೆಗೆ ಆ ಸ್ಥಾನ ಅವರ ಪಾಲಿನದ್ದೇ ಆಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ, ೨೦೧೮
ಕರ್ನಾಟಕ ವಿಧಾನಸಭೆಯು 224 ಸದಸ್ಯರ ಸದಸ್ಯ ಬಲವನ್ನು ಹೊಂದಿದೆ. 224 ಸದಸ್ಯ ಬಲವುಳ್ಳ 15 ನೇ ಕರ್ನಾಟಕ ವಿಧಾನಸಭೆಯ 222ವಿಧಾನಸಭಾ ಕ್ಷೇತ್ರಗಳಿಗೆ 12 ಮೇ 2018 ಶನಿವಾರ ಚುನಾವಣೆ ನೆಡೆಯಿತು. ಜಯನಗರ ಬಿಜೆಪಿ ಶಾಸಕ ವಿಜಯ್ ಕುಮಾರ್ 2-5-2018 ರಂದು ನಿಧನರಾದ್ದರಿಂದ ಮತ್ತು ರಾಜರಾಜೇಶ್ವರಿ ನಗರದಲ್ಲಿ ಮತದಾರರ ವಂಚನೆ ಹಗರಣದ ನಂತರ, ಈ ಎರಡು ಕ್ಷೇತ್ರಗಳ ಚುನಾವಣೆ ಮುಂದೂಡಲ್ಪಟ್ಟಿತು.
ಮದರ್ ತೆರೇಸಾಸುಮಾರು 45 ವರ್ಷಗಳಿಗೂ ಹೆಚ್ಚು ಕಾಲ ಇವರು ಬಡವರ, ರೋಗಿಗಳ, ಅನಾಥರ ಮತ್ತು ಮರಣ ಸಂಕಟದಲ್ಲಿರುವವರ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಂಡವರು. 1970ರ ವೇಳೆಗೆ ಇವರು ಒಬ್ಬ ಮಾನವತಾ ವಾದಿಯಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾದರು. ಮದರ್ ತೆರೇಸಾ ಒಬ್ಬ ಮಹಾ ಮಾನವತಾವಾದಿಯಾಗಿ ಬಡವರ, ನಿರ್ಗತಿಕರ, ರೋಗಿಗಳ, ಅನಾಥರ, ವೃದ್ಧರ ಪರವಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಇವರಿಗೆ ವಿಶ್ವದ ಅತ್ಯುನ್ನತ ನೊಬೆಲ್ ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಭಾರತದ ರಾಷ್ತ್ರೀಯ ಧ್ವಜ'ದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.
ಬೆಳೆಯ ಆವರ್ತನೆ, ಹಸಿರು- ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಮಳೆನೀರು ಕೊಯ್ಲು ಎಂಬುದು ಮಳೆನೀರನ್ನು ಒಟ್ಟುಗೂಡಿಸುವ, ಅಥವಾ ಸಂಚಯನ ಮಾಡುವ ಮತ್ತು ಶೇಖರಿಸಿಟ್ಟುಕೊಳ್ಳುವ ವಿಧಾನಕ್ಕಿರುವ ಹೆಸರು. ಕುಡಿಯುವ ನೀರನ್ನು ಒದಗಿಸಲು ಜಾನುವಾರುಗಳಿಗೆ ನೀರುಣಿಸಲು ನೀರಾವರಿಗಾಗಿ ನೀರಿನ ವ್ಯವಸ್ಥೆ ಮಾಡಲು ಅಥವಾ ಅಂತರ್ಜಲ ಪುನರ್ಭರ್ತಿಕಾರ್ಯ ಎಂದು ಕರೆಯಲಾಗುವ ಪ್ರಕ್ರಿಯೆಯೊಂದರಲ್ಲಿ ನೀರುಪೊಟರೆಯನ್ನು ಪುನಃ ತುಂಬಿಸಲು ಮಳೆನೀರು ಕೊಯ್ಲು ಪದ್ಧತಿಯನ್ನು ಬಳಸಿಕೊಂಡು ಬರಲಾಗಿದೆ. ಮನೆಗಳು, ಗುಡಾರಗಳು ಮತ್ತು ಸ್ಥಳೀಯ ಸಾರ್ವಜನಿಕ ಕಟ್ಟಡಗಳ ಛಾವಣಿಗಳಿಂದ ಅಥವಾ ವಿಶೇಷವಾಗಿ ಸಿದ್ಧಗೊಳಿಸಲಾದ ನೆಲದ ಪ್ರದೇಶಗಳಿಂದ ಸಂಗ್ರಹಿಸಲಾದ ಮಳೆನೀರು, ಕುಡಿಯುವ ನೀರಿಗೆ ತನ್ನದೇ ಆದ ಪ್ರಮುಖ ಕೊಡುಗೆಯನ್ನು ನೀಡಬಲ್ಲದು.
ಜಾಗತಿಕ ತಾಪಮಾನ ನಿಯಂತ್ರಣಜಾಗತಿಕ ತಾಪಮಾನ ಏರಿಕೆ ಯೆಂದರೆ 20 ನೇ ಶತಮಾನದ ಮಧ್ಯಭಾಗದಲ್ಲಿ ಭೂಮಿಯ ಮೇಲ್ಮೈ-ಸಮೀಪದಲ್ಲಿರುವ ವಾಯು ಮತ್ತು ಸಾಗರ ಪ್ರದೇಶಗಳಲ್ಲಿ ಆದ ಸರಾಸರಿ ತಾಪಮಾನದ ಏರಿಕೆ ಹಾಗೂ ಅದರ ಪ್ರಕ್ಷೇಪಿತ ಮುಂದುವರಿಕೆ. ಜಾಗತಿಕ ಮೇಲ್ಮೈ ಉಷ್ಣತೆಯು ಕಳೆದ ಶತಮಾನದಲ್ಲಿ 0.74 ± 0.18 °C (1.33 ± 0.32 °F)ರಷ್ಟು ಹೆಚ್ಚಿದೆ. ಹವಾಮಾನ ಬದಲಾವಣೆಯ ಕುರಿತಾದ ಅಂತರ-ಸರಕಾರಿ ಮಂಡಳಿಯು (IPCC) ಅಗೆದು ತೆಗೆದ ಇಂಧನಗಳು ಮತ್ತು ಅರಣ್ಯನಾಶಗಳಂತಹಾ ಮಾನವ ಚಟುವಟಿಕೆಗಳಿಂದಾದ ಹಸಿರುಮನೆ ಅನಿಲಗಳ ಸಂಗ್ರಹದ ಹೆಚ್ಚಳವು 20ನೇ ಶತಮಾನ ದ ಮಧ್ಯಕಾಲದ ನಂತರದ ತಾಪಮಾನ ಏರಿಕೆಗೆ ಕಾರಣವೆಂದು ತೀರ್ಮಾನಕ್ಕೆ ಬಂದಿದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.