The most-visited ಕನ್ನಡ Wikipedia articles, updated daily. Learn more...
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು. ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಟೆಂಪ್ಲೇಟು:Chembox ECHAಸಾಂದ್ರತೆ 2.144 g/L (0 °C), gas ಕರಗು ಬಿಂದು 80.7 K, −192.5 °C ಕುದಿ ಬಿಂದು 161.3 K, −111.9 °C ಕರಗುವಿಕೆ ನೀರಿನಲ್ಲಿ 0.105 g/100mL (0 °C) ವಕ್ರೀಕಾರಕ ಸೂಚಿ (nD) (ರಿಫ್ರಾಕ್ಟಿವ್ ಇಂಡೆಕ್ಸ್) 1.2226 (liquid) ಉಷ್ಣರಸಾಯನಶಾಸ್ತ್ರ ರೂಪಗೊಳ್ಳುವ ಸ್ಟ್ಯಾಂಡರ್ಡ್ ಶಾಖಪ್ರಮಾಣ ΔfHo298 +142.3 kJ·mol−1ಸ್ಟ್ಯಾಂಡರ್ಡ್ಮೋಲಾರ್ ಎಂಟ್ರಪಿ So298 237.7 J·K−1.mol−1 Hazards ಇಯು ವರ್ಗೀಕರಣ {{{value}}} ಸಂಬಂಧಿತ ಸಂಯುಕ್ತಗಳು Y (verify) (what is: Y/N?)Infobox references ಓಝೋನ್' ('O3 ), ಅಥವಾ ಟ್ರೈಆಕ್ಸಿಜನ್ ಎಂಬುದು ಒಂದು ತ್ರಿಪರಮಾಣ್ವಕ ಅಣುವಾಗಿದ್ದು, ಮೂರು ಆಮ್ಲಜನಕ ಪರಮಾಣುಗಳನ್ನು ಇದು ಒಳಗೊಂಡಿದೆ. ದ್ವಿಪರಮಾಣ್ವಕ ಭಿನ್ನರೂಪಕ್ಕಿಂತ (O2) ಸಾಕಷ್ಟು ಕಡಿಮೆ ಸ್ಥಿರವಾಗಿರುವ ಆಮ್ಲಜನಕದ ಒಂದು ಭಿನ್ನರೂಪ ಇದಾಗಿದೆ. ಕೆಳಮಟ್ಟದ ವಾತಾವರಣದಲ್ಲಿರುವ ಓಝೋನ್ ಒಂದು ವಾಯು ಮಾಲಿನ್ಯಕಾರಕವಾಗಿದ್ದು, ಪ್ರಾಣಿಗಳ ಉಸಿರಾಟದ ವ್ಯವಸ್ಥೆಗಳ ಮೇಲೆ ಇದು ಅಪಾಯಕಾರಿ ಪರಿಣಾಮಗಳನ್ನು ಬೀರುತ್ತದೆ ಮತ್ತು ಸೂಕ್ಷ್ಮ ಸ್ವಭಾವದ ಸಸ್ಯಗಳನ್ನು ಸುಡುತ್ತದೆ; ಆದಾಗ್ಯೂ, ಮೇಲುಮಟ್ಟದ ವಾತಾವರಣದಲ್ಲಿನ ಓಝೋನ್ ಪದರವು ಪ್ರಯೋಜನಕಾರಿಯಾಗಿದ್ದು, ಹಾನಿಕಾರಕ ನೇರಳಾತೀತ ಬೆಳಕು ಭೂಮಿಯ ಮೇಲ್ಮೈಯನ್ನು ತಲುಪುವುದನ್ನು ಸಮರ್ಥವಾಗಿ ತಡೆಗಟ್ಟುತ್ತದೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
ನಮ್ಮ ಸುತ್ತಮುತ್ತಲಿನ ಪ್ರದೇಶವೇ ಪರಿಸರ. ಈ ಪರಿಸರವoj ಮರ ಗಿಡಗಳು ಹಾಗೂ ಪ್ರಾಣಿ ಪಕ್ಷಿಗಳಿಂದ ಕೂಡಿದೆ.ಇದರೊಂದಿಗೆ ಮಾನವನು ಅನ್ಯೋನ್ಯತೆಯಿಂದ ಜೀವಿಸುತಿದ್ದಾನೆ.ಇವೆಲ್ಲದರ ನಡುವೆ ಮಾನವನು ತನ್ನನpಸ್ವಾರ್ಥತೆಯನ್ನು ತೋರಿಸುತ್ತಾನೆ.ಇದರಿಂದಾಗಿ ಪರಿಸರವು ಹಲವಾರು ತೊಂದರೆಗೆ ಒಳಗಾಗಿದೆ.ಇದರಲ್ಲಿ ಪರಿಸರವೂ ಎದುರಿಸುವ ಮೂರು ಮುಖ್ಯವಾದ ತೊಂದರೆಗಳೆಂದರೆ ವಾಯು ಮಾಲಿನ್ಯ , ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ. ಇದರ ಮುಖ್ಯ ಕಾರಣವೆಂದರೆ ಹೆಚ್ಚಾಗುತ್ತಿರುವ ಜನಸಂಖ್ಯೆ.ಜನರು ಬಳಸುವ ವಾಹನಗಳಿಂದ ಕೆಟ್ಟ ಹೊಗೆ ಹೊರಬರುತ್ತದೆ.ಕಾರ್ಖಾನೆಗಳಿಂದ ಹೊರಬರುವ ರಾಸಾಯನಿಕ ಹೊಗೆ ವಾಯು ಮಾಲಿನ್ಯಕ್ಕೆ itಕಾರಣವಾಗುತ್ತದೆ.ಮಾನವನ ಇಂದಿನ ದಿನಚರಿಕೆಯಿಂದ ಹಾಗೂ ಕಾರ್ಖಾನೆಗಳಿಂದ ಹೊರ ಬಿಡುವ ಕhಸಗಳು, ನೀರನ್ನು ಮಾಲಿನ್ಯಗೊಳಿಸುತ್ತದೆ.ವಾಹನಗಳಿಂದ,ಮದುವೆ ಸಮಾರಂಭಗಳಲ್ಲಿ ಹಾಗೂ ದೀಪಾವಳಿಯ ಸಮಯದಲ್ಲಿ ಉಪಯೋಗಿಸುವ ಪಟಾಕಿಯಿಂದ ಶಬ್ದ ಮಾಲಿನ್ಯವಾಗುತ್ತದೆ.ಇದೆಲ್ಲಾ ಮಾನವನ ಮೇಲೆಯೇ ಪ್ರಭಾವ ಬೀರುತ್ತದೆ.ಮಾಲಿನ್ಯವೂ ಮಿತಿಮೀರಿದರೆ ಮಾನವನಿಗೆ ಈ ಪರಿಸರದಲ್ಲಿ ಜೀವಿಸಲು ಅಸಾಧ್ಯವಾಗುತ್ತದೆ.ಆದುದರಿಂದ ಈ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಜವಬ್ದಾರಿ ನಮ್ಮದಾಗಿದೆ.ಮುಂದಿನ ಪೀಳಿಗೆಗೆ ಈ ಪರಿಸರವು ಉಳಿಯ ಬೇಕಾದರೆ ಇಂದಿನಿಂದಲೇ ಒಳ್ಳೆಯ ಬದಲಾವಣೆಯನ್ನು ಮಾಡಬೇಕಾಗಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು., ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿ . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು. ಇದನ್ನು ಎಲ್ಲರು ಧರಿಸಿ ಪೂಜಿಸಬಹುದು.
ಚಂದ್ರಯಾನ-೨ (ಸಂಸ್ಕೃತ:चंद्रयान-२, lit: Moon-vehicle pronunciation ), ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆಯ ಸಂಪೂರ್ಣ ದೇಶೀಯ ತಂತ್ರಜ್ಞಾನ ಅಳವಡಿಸಿ ನಿರ್ಮಿಸಿರುವ ಚಾಂದ್ರ ಪರಿಶೋಧನಾ ಅಭಿಯಾನ. ೨೨ ಜುಲೈ ೨೦೧೯ ರ ಅಪರಾಹ್ನ ೦೨ ಗಂಟೆ ೪೩ (2ಗಂ.43 ನಿ.ಕ್ಕೆ)ನಿಮಿಷ ಭಾರತೀಯ ಕಾಲಮಾನಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಜಿಯೋಸಿಂಕ್ರೋನಸ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಮಾರ್ಕ್ 3 (ಜಿ ಎಸ್ ಎಲ್ ವಿ ಎಂಕೆ 3-ಎಂ1 ) ರಾಕೆಟ್ ಮೂಲಕ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು.ಇಸ್ರೋದ ಮಹತ್ವಾಕಾಂಕ್ಷೆಯ ಯೋಜನೆಯ ಭಾಗವಾಗಿ ಒಂದು ಚಾಂದ್ರ ಕಕ್ಷೆಗಾಮಿ, ರೋವರ್ ಹಾಗು ಒಂದು ಭೂಸ್ಪರ್ಶಕ ಒಳಗೊಂಡಿರುವ ಇದು ಸೆಪ್ಟೆಂಬರ್ ವೇಳೆಗೆ ಚಂದ್ರನ ದಕ್ಷಿಣ ದ್ರುವಕ್ಕೆ ಇಳಿಯುವ ಯೋಜನೆ ಇದೆ. ಚಂದ್ರನ ದಕ್ಷಿಣ ಧ್ರುವ ಪ್ರದೇಶಕ್ಕೆ ಭೂಸ್ಪರ್ಶಕವನ್ನು ಇಳಿಸುವ ಮೊಟ್ಟ ಮೊದಲ ಯೋಜನೆ ಇದಾಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಪರಿಸರವನ್ನು ಕಲುಷಿತಗೊಳಿಸುವ,(environmental pollution) ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
೧೯೪೭ ಅಗಸ್ಟ ೧೫ರಂದು ಭಾರತ ಸ್ವತಂತ್ರವಾಯಿತು.ಆದರೆ ಆಗ ಭಾರತದೊಡನೆ ವಿಲೀನವಾಗಲು ಬಯಸಿದ ತನ್ನ ಸಂಸ್ಥಾನದ ಬಹುಜನರ ಅಭಿಪ್ರಾಯವನ್ನು ವಿರೋಧಿಸಿದ ಹೈದರಾಬಾದಿನ ನಿಜಾಮ ಮೀರ್ ಉಸ್ಮಾನ್ ಅಲಿ, "ಡೆಕ್ಕನ್ ರೇಡಿಯೋ" (ಅಥವಾ "ನಿಜಾಮ್ ರೇಡಿಯೋ" ) ಮೂಲಕ ಹೈದರಾಬಾದ ಸಂಸ್ಥಾನವನ್ನು ಸ್ವತಂತ್ರ ರಾಷ್ಟ್ರವೆಂದು ಘೋಷಿಸಿದ. ನಿರೀಕ್ಷೆಯಂತೆ ಪಾಕಿಸ್ತಾನವು ಹೈದರಾಬಾದ ಸ್ವತಂತ್ರ ರಾಷ್ಟ್ರವೆಂದು ಮಾನ್ಯ ಮಾಡಿದ ಮೊದಲ ದೇಶವಾಯಿತು. ಭಾರತಕ್ಕೆ ಸ್ವಾತಂತ್ರ್ಯ ದೊರೆಯುವ ಹಲವು ವರ್ಷಗಳು ಮೊದಲಿನಿಂದ, ನಿಜಾಮ್ "ಸೋಲರಿಯದ ಅಲ್ಲಾಹುವಿನ ಸೈನಿಕರು" ಎಂದು ಕರೆದು ಕೊಳ್ಳುತ್ತಿದ್ದ ತನ್ನ ಸೇನೆಗೆ ಮತ್ತು ನಿಜಾಂ ಪೋಲಿಸರಿಗೆ ಬ್ರಿಟಿಷರ ಸೇನಾಧಿಕಾರಿಗಳಿಂದ ತರಬೇತಿ ಶಿಬಿರಗಳನ್ನು ನೆಡೆಸಿದ್ದ ಮತ್ತು ಆಗ ಪ್ರಸಿದ್ಧವಾಗಿದ್ದ ಸಿಡ್ನಿ ಕಾಟನ್ ಬಂದೂಕುಗಳು ಮತ್ತು ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ಸಂಗ್ರಹಿಸಿದ್ದ.ಆ ಕಾಲಲ್ಲಿ ವಿಶ್ವದ ಗಣನೀಯ ಶ್ರೀಮಂತರಲ್ಲಿ ಒಬ್ಬನಾಗಿದ್ದ ನಿಜಾಮ್ ಮೀರ್ ಉಸ್ಮಾನ್ ಅಲಿಗೆ, ಹೈದರಾಬಾದ ಸಂಸ್ಥಾನವನ್ನು ಸ್ವತಂತ್ರ ರಾಷ್ಟ್ರವೆಂದು ಘೋಷಿಸಲು ಬ್ರಿಟಿಷ್ ಹಾಗು ಪಾಕಿಸ್ತಾನಿ ರಾಜಕಾರಣಿಗಳ ಪ್ರತ್ಯಕ್ಷ ಮತ್ತು ಪರೋಕ್ಷ ಬೆಂಬಲವಿತ್ತು.
ಸುಭಾಷ್ ಚಂದ್ರ ಬೋಸ್ (সুভাষ চন্দ্র বসু; ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
"ಇವರು ೧೯೦೭ ರಲ್ಲಿ ಜನಿಸಿದರು." ಶ್ರೀ ಕಡಿದಾಳ್ ಮಂಜಪ್ಪನವರು ಶಿವಮೊಗ್ಗ ಜಿಲ್ಲೆಯ ತೀರ್ಥ ಹಳ್ಳಿ ತಾಲೂಕಿನ ಹಾರೋಹಳ್ಳಿಯಲ್ಲಿ ಜನಿಸಿದರು. ತೀರ್ಥಹಳ್ಳಿ,ಶಿವಮೊಗ್ಗ,ಬೆಂಗಳೂರು ಮತ್ತು ಮೈಸೂರುಗಳಲ್ಲಿ ವಿದ್ಯಾಬ್ಯಾಸ ಮಾಡಿ ಬಿ,ಎ.ಪದವಿ ಪಡೆದರು.ಪೂನಾದಲ್ಲಿ ಕಾನೂನು ಪದವಿ ಪಡೆದರು.೧೯೨೭ರಲ್ಲಿಯೇ ಗಾಂದೀಜಿಯವರ ದರ್ಶನ ಪಡೆದು ಅವರ ತತ್ವಗಳಿಗೆ ಮಾರು ಹೋಗಿ ಅಂದಿನಿಂದಲೇ ಗಾಂದೀವಾದಿಯಾದರು. ೧೯೩೫ರಲ್ಲಿ ಶಿವಮೊಗ್ಗದಲ್ಲಿ ವಕೀಲಿ ವೃತ್ತಿ ಆರಂಭಿಸಿದರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (2018 ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಓಝೋನ್ ಪದರ ಸೂರ್ಯನಿಂದ ಹೊರಸೂಸುವ ನೇರಳಾತೀತ ವಿಕಿರಣಗಳನ್ನು ಹೀರಿಕೊಳ್ಳುವ ಭೂಮಿಯ ವಾಯುಮಂಡಲದಲ್ಲಿ ಒಂದು ಪ್ರದೇಶವಾಗಿರುತ್ತದೆ . ಇದು ವಾಯುಮಂಡಲದಲ್ಲಿ ಓಝೋನ್ O3 ನ ಅನಿಲದ ಅಧಿಕ ಸಾಂದ್ರತೆಯನ್ನು ಹೊಂದಿದೆ. ಭೂಮಿಯ ಮೇಲೆ ಸುಮಾರು ೧೦ ಕಿ.ಮೀ ನಿಂದ ೪೦ ಕಿ.ಮೀ.ರ ವರೆಗೆ ವ್ಯಾಪಿಸಲ್ಪಟ್ಟಿರುವ ಈ ಪ್ರದೇಶವು ಸೂರ್ಯನಿಂದ ಬಿಡುಗಡೆಯಾಗುವ ನೇರಳಾತೀತ ವಿಕಿರಣಗಳನ್ನು ಹೀರಿಕೊಂಡು ಭೂಮಿಗೆ ಅವುಗಳು ತಲಪುವುದನ್ನು ತಡೆಗಟ್ಟುತ್ತವೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಕೆರೆ-ಕಟ್ಟೆ, ನದಿ, ಅಣೆಕಟ್ಟೆ, ಸರೋವರ ಮುಂತಾದ ಕಡೆ ಶೇಖರಣೆಯಾಗಿರುವ ನೀರು ರಭಸವಾಗಿ ಉಕ್ಕಿ ಹರಿದು ವಿಶಾಲವಾದ ಭೂ ಪ್ರದೇಶವನ್ನು ಮುಳುಗಿಸುವುದೇ ಪ್ರವಾಹ ಅಥವಾ ಜಲಪ್ರವಾಹ. "ಹರಿಯುವ ನೀರು" ಎಂಬ ಅರ್ಥದಲ್ಲಿ ಈ ಪದ ಅಲೆಗಳಗಳ ಒಳಹರಿವಿಗೂ ಅನ್ವಯಿಸಬಹುದು. ನದಿ, ಸರೊವರಗಳಂಥ ನೀರಿನ ಸಂಗ್ರಹಾಗಾರಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣ ಜಾಸ್ತಿಯಾಗಿ ಅದು ಉಕ್ಕಿ ಹರಿದಾಗ ಪ್ರವಾಹಗಳುಂಟಾಗಬಹುದು.
ಓಝೋನ್ ಪದರು ಸವಕಳಿ(ಸಾಮರ್ಥ್ಯ ಕುಂದು)
ಓಝೋನ್ ಸವಕಳಿ ಯು ಎರಡು ಪ್ರತ್ಯೇಕ ಆದರೆ ಪರಸ್ಪರ ಸಂಬಂಧವಿರುವ ಹೇಳಿಕೆಗಳನ್ನು ವಿವರಿಸುತ್ತದೆ: ಓಝೋನ್ ಈ ಪೃಥ್ವಿಯ ಸಂರಕ್ಷಣಾ ಕವಚ. ವಿಷಾದದ ಸಂಗತಿಯೆಂದ್ರೆ ಇದು ಸದ್ಯ ಮಾನವ ನಿರ್ಮಿತ ತಪ್ಪುಗಳಿಂದಾಗಿ ತನ್ನ ಸಾಮರ್ಥ್ಯ ಕಳೆದುಕೊಳ್ಳುತ್ತಿದೆ. ವಾಯು ಮಾಲಿನ್ಯ ಮತ್ತು ಪರಿಸರ ನಾಶದಿಂದಾಗಿ ರಕ್ಷಣಾ ಕವಚ ಕಳೆಗುಂದುತ್ತಿದೆ.
ಆಲ್ಬರ್ಟ್ ಐನ್ಸ್ಟೀನ್ ( ಜರ್ಮನ್ ಉಚ್ಛಾರಣೆ ) (ಮಾರ್ಚ್ ೧೪, ೧೮೭೯ - ಏಪ್ರಿಲ್ ೧೮, ೧೯೫೫) ೨೦ನೇ ಶತಮಾನದ ಜರ್ಮನಿ ಮೂಲದ ಭೌತವಿಜ್ಞಾನಿ. ಇವರು ಸಾಪೇಕ್ಷತ ಸಿದ್ಧಾಂತವನ್ನು (ಥಿಯರಿ ಆಫ್ ರಿಲೇಟಿವಿಟಿ) ಜಗತ್ತಿನ ಮುಂದಿಟ್ಟವರು. ಕ್ವಾಂಟಮ್ ಮೆಕ್ಯಾನಿಕ್ಸ್, ಸ್ಟ್ಯಾಟಿಸ್ಟಿಕಲ್ ಮೆಕ್ಯಾನಿಕ್ಸ್ ಹಾಗೂ ವಿಶ್ವಶಾಸ್ತ್ರ (ಕಾಸ್ಮಾಲಜಿ)ಗಳಲ್ಲಿ ಕೂಡ ಮಹತ್ತರವಾದ ಕಾಣಿಕೆ ನೀಡಿದ್ದಾರೆ.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಈತನನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯ ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯನನ್ನೇ ಮೊದಲ ವಚನಕಾರನೆಂದು ಗುರುತಿಸಲಾಗುತ್ತದೆ.
ಜಾಗತಿಕ ತಾಪಮಾನ ನಿಯಂತ್ರಣಜಾಗತಿಕ ತಾಪಮಾನ ಏರಿಕೆ ಯೆಂದರೆ 20 ನೇ ಶತಮಾನದ ಮಧ್ಯಭಾಗದಲ್ಲಿ ಭೂಮಿಯ ಮೇಲ್ಮೈ-ಸಮೀಪದಲ್ಲಿರುವ ವಾಯು ಮತ್ತು ಸಾಗರ ಪ್ರದೇಶಗಳಲ್ಲಿ ಆದ ಸರಾಸರಿ ತಾಪಮಾನದ ಏರಿಕೆ ಹಾಗೂ ಅದರ ಪ್ರಕ್ಷೇಪಿತ ಮುಂದುವರಿಕೆ. ಜಾಗತಿಕ ಮೇಲ್ಮೈ ಉಷ್ಣತೆಯು ಕಳೆದ ಶತಮಾನದಲ್ಲಿ 0.74 ± 0.18 °C (1.33 ± 0.32 °F)ರಷ್ಟು ಹೆಚ್ಚಿದೆ. ಹವಾಮಾನ ಬದಲಾವಣೆಯ ಕುರಿತಾದ ಅಂತರ-ಸರಕಾರಿ ಮಂಡಳಿಯು (IPCC) ಅಗೆದು ತೆಗೆದ ಇಂಧನಗಳು ಮತ್ತು ಅರಣ್ಯನಾಶಗಳಂತಹಾ ಮಾನವ ಚಟುವಟಿಕೆಗಳಿಂದಾದ ಹಸಿರುಮನೆ ಅನಿಲಗಳ ಸಂಗ್ರಹದ ಹೆಚ್ಚಳವು 20ನೇ ಶತಮಾನ ದ ಮಧ್ಯಕಾಲದ ನಂತರದ ತಾಪಮಾನ ಏರಿಕೆಗೆ ಕಾರಣವೆಂದು ತೀರ್ಮಾನಕ್ಕೆ ಬಂದಿದೆ.
ಭಾರತದ ರಾಷ್ತ್ರೀಯ ಧ್ವಜ'ದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಅರಣ್ಯನಾಶ ಎಂದರೆ ನೈಸರ್ಗಿಕವಾಗಿ ಕಾಣಸಿಗುವ ಅರಣ್ಯಗಳನ್ನು ಮಾನವ ಚಟುವಟಿಕೆಗಳಾದ ಕತ್ತರಿಸುವಿಕೆ ಹಾಗೂ/ಅಥವಾ ಬೆಂಕಿಯಿಂದ ಅರಣ್ಯ ಪ್ರದೇಶದ ಮರಗಿಡಗಳನ್ನು ನಾಶಕ್ಕೊಳಪಡುವ ಕ್ರಿಯೆಯಾಗಿದೆ. ಅರಣ್ಯನಾಶಕ್ಕೆ ಹಲವಾರು ಕಾರಣಗಳಿವೆ: ಮರಗಳು ಅಥವಾ ಅವುಗಳಿಂದ ದೊರಕುವ ಇದ್ದಿಲನ್ನು ಇಂಧನಕ್ಕಾಗಿ ಅಥವಾ ಮಾನವರಿಂದ ಬಳಕೆಯಾಗಲ್ಪಡುವ ಉತ್ಪನ್ನಗಳನ್ನಾಗಿ ಮಾರಾಟ ಮಾಡಲಾಗುತ್ತದೆ, ಇದರ ಜೊತೆಗೆ ತೆರವುಗೊಂಡ ಭೂಮಿಯನ್ನು ಮಾನವರು ಜಾನುವಾರುಗಳ ಮೇವಿಗಾಗಿ, ವಾಣಿಜ್ಯ ಉತ್ಪನ್ನಗಳನ್ನು ಪಡೆಯಲು, ಹಾಗೂ ವಾಸಯೋಗ್ಯ ಸ್ಥಳಗಳಿಗಾಗಿ ಬಳಕೆ ಮಾಡಲಾಗುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಅರಣ್ಯ ಪುನರ್ ನಿರ್ಮಾಣ ಮಾಡದೇ ಜನರು ಮರಗಳನ್ನು ಕಡಿದುಹಾಕುತ್ತಿದ್ದಾರೆ, ಇದರಿಂದಾಗಿ ವಾಸಸ್ಥಾನಗಳಿಗೆ ಆದ ಹಾನಿಯಿಂದಾಗಿ ಜೀವ ವೈವಿಧ್ಯತೆ ನಾಶವಾಗಿದ್ದು ವಾತಾವರಣದಲ್ಲಿ ಶುಷ್ಕತೆ ಹೆಚ್ಚುತ್ತಿದೆ.
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ)
ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ:GST) 2016:(Goods and Services Tax Bill or GST Bill 2016) ಭಾರತದ ತೆರಿಗೆ ವ್ಯವಸ್ಥೆಯಲ್ಲಿ ತೆರಿಗೆ ಸುಧಾರಣಾ ಕ್ರಮವಾಗಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯವಸ್ಥೆಯು ದಿ.1 ಜುಲೈ, 2017 ಮಧ್ಯರಾತ್ರಿಯಿಂದಲೇ ದೇಶದಾದ್ಯಂತ ಜಾರಿಗೆ ಬಂದಿದೆ. ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಮಧ್ಯರಾತ್ರಿ 12 ಗಂಟೆಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಗುಂಡಿ ಒತ್ತುವ ಮೂಲಕ ಹೊಸ ತೆರಿಗೆ ವ್ಯವಸ್ಥೆಗೆ ಚಾಲನೆ ನೀಡಿದರು. |} ಸರಕು ಮತ್ತು ಸೇವಾ ತೆರಿಗೆ ಬಿಲ್ ಅಥವಾ ಜಿ.ಎಸ್.ಟಿ ಮಸೂದೆ (ಬಿಲ್) (ಹಿಂದಿ: वस्तु एवं सेवा कर विधेयक), ಅಧಿಕೃತವಾಗಿ ಇದು ಸಂವಿಧಾನದ (ನೂರಾ ಇಪ್ಪತ್ತೆರಡನೇ ತಿದ್ದುಪಡಿ) ಮಸೂದೆ, 2014 ಎಂದು ಪ್ರಸ್ತಾಪಿಸಿದೆ.
ಅನ್ನಿ ಬೆಸೆಂಟ್ (pronounced /ˈbɛsənt/; ನೀ ವುಡ್ ; ಕ್ಲಾಫಾಮ್, ಲಂಡನ್ 1 ಆಕ್ಟೋಬರ್ 1847 – ಭಾರತದ ಅಡ್ಯಾರ್ನಲ್ಲಿ, 20 ಸೆಪ್ಟೆಂಬರ್ 1933) ಪ್ರಖ್ಯಾತ ಥಿಯೊಸೊಫಿಸ್ಟ್, ಮಹಿಳಾ ಹಕ್ಕುಗಳ ಕ್ರಾಂತಿಕಾರಿ, ಬರಹಗಾರ್ತಿ ಮತ್ತು ವಾಗ್ಮಿ ಮತ್ತು ಐರಿಷ್ ಮತ್ತು ಭಾರತದ ಸ್ವ-ಆಡಳಿತ ಬೆಂಬಲಗಾರ್ತಿ. 1873ರಲ್ಲಿ ಅವರು ಫ್ರಾಂಕ್ ಬೆಸೆಂಟ್ ಅವರನ್ನು ವಿವಾಹವಾದರು ಮತ್ತು ಲಂಡನ್ಗೆ ತೆರಳಿದರು, ಅಲ್ಲಿ ಅವರು [[ನ್ಯಾಷನಲ್ ಸೆಕ್ಯುಲರ್ ಸೊಸೈಟಿಯ ಒಬ್ಬ ಪ್ರಖ್ಯಾತ ಸಭಾಪತಿ ಮತ್ತು ಬರಹಗಾರ್ತಿ ಹಾಗೂ ಚಾರ್ಲ್ಸ್ ಬ್ರಾಡ್ಲಾಗ್|ನ್ಯಾಷನಲ್ ಸೆಕ್ಯುಲರ್ ಸೊಸೈಟಿಯ ಒಬ್ಬ ಪ್ರಖ್ಯಾತ ಸಭಾಪತಿ ಮತ್ತು ಬರಹಗಾರ್ತಿ ಹಾಗೂ ಚಾರ್ಲ್ಸ್ ಬ್ರಾಡ್ಲಾಗ್]]ರ ಅಪ್ತ ಗೆಳತಿಯಾದರು. ಜನನ ನಿಯಂತ್ರಣ ಚಳುವಳಿಗಾರ ಚಾರ್ಲ್ಸ್ ನೊಲ್ಟನ್ರಿಂದ ಒಂದು ಪುಸ್ತಕವನ್ನು ಬಿಡುಗಡೆ ಮಾಡಿಸಿದ ಕಾರಣಕ್ಕಾಗಿ 1877ರಲ್ಲಿ ಅವರುಗಳ ಮೇಲೆ ಕಾನೂನು ಕ್ರಮ ಜರುಗಿಸಲಾಯಿತು.
ಅತಿ ಹೆಚ್ಚು ಹಣ ಗಳಿಸಿದ ಭಾರತೀಯ ಚಲನಚಿತ್ರಗಳ ಪಟ್ಟಿ
ಇದು ಅತ್ಯಂತ ಹೆಚ್ಚು ಹಣ ಗಳಿಸಿದ ಭಾರತೀಯ ಚಿತ್ರಗಳ ಶ್ರೇಯಾಂಕವಾಗಿದೆ, ಇದರಲ್ಲಿ ಸಂಪ್ರದಾಯವಾದಿ ಜಾಗತಿಕ ಗಲ್ಲಾ ಪೆಟ್ಟಿಗೆಯ ಅಂದಾಜಿನ ಆಧಾರದ ಮೇಲೆ ಹಲವಾರು ಭಾಷೆಗಳಿಂದ ಬರುವ ಚಲನಚಿತ್ರಗಳು ಪ್ರಸಿದ್ಧವಾದ ಮೂಲಗಳಿಂದ ವರದಿಯಾಗಿದೆ. ಭಾರತದಲ್ಲಿ ದೇಶೀಯ ಗಲ್ಲಾಪೆಟ್ಟಿಗೆಯಲ್ಲಿ ಯಾವುದೇ ಅಧಿಕೃತ ಟ್ರ್ಯಾಕಿಂಗ್ ಇಲ್ಲ, ಮತ್ತು ಇಂಡಿಯನ್ ಸೈಟ್ಗಳ ಪ್ರಕಾಶನ ದತ್ತಾಂಶವನ್ನು ಆಗಾಗ್ಗೆ ತಮ್ಮ ದೇಶೀಯ ಬಾಕ್ಸ್ ಆಫೀಸ್ ಅಂದಾಜು ಹೆಚ್ಚಿಸಲು ಒತ್ತಾಯಿಸಲಾಗುತ್ತದೆ. ಭಾರತೀಯ ಚಲನಚಿತ್ರಗಳು 20 ನೇ ಶತಮಾನದ ಆರಂಭದಿಂದಲೂ ಸಹ ಪ್ರಪಂಚದಾದ್ಯಂತ ಮಾರುಕಟ್ಟೆಗಳಲ್ಲಿ ಪ್ರದರ್ಶಿಸಲ್ಪಟ್ಟಿದೆ.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಇಟ್ಯಾಲಿಯನ್ ಪಾಕಪದ್ಧತಿ ಯು ಕ್ರಿಸ್ತ ಪೂರ್ವ ನಾಲ್ಕನೆಯ ಶತಮಾನದಷ್ಟು ಹಿಂದಿನ ಮೂಲಗಳನ್ನು ಹೊಂದಿದೆ. ಇದು ಹಲವು ಶತಮಾನಗಳ ಸಾಮಾಜಿಕ ಮತ್ತು ರಾಜಕೀಯ ಬದಲಾವಣೆಗಳ ಕಾಲದಲ್ಲಿ ಅಭಿವೃದ್ಧಿ ಹೊಂದಿದೆ. ಇಟ್ಯಾಲಿಯನ್ ಪಾಕಪದ್ಧತಿ ಸ್ವತಃ ಎಟ್ರಸ್ಕನ್, ಪುರಾತನ ಗ್ರೀಕ್, ಪುರಾತನ ರೋಮನ್, ಬೈಝಾಂಟೀನ್, ಜರ್ಮನಿಕ್, ಗೇಲಿಕ್, ನಾರ್ಮನ್, ಯೆಹೂದಿ ಹಾಗೂ ಅರಬ್ ಪಾಕಪದ್ಧತಿಗಳಿಂದ ಪ್ರಭಾವಿತವಾಗಿದೆ.
ಮಾಧ್ಯಮ ಅಥವಾ ಸಮೂಹ ಮಾಧ್ಯಮ ಎಂದು ಸಾಮಾನ್ಯವಾಗಿ ಪತ್ರಿಕೆ, ಬಾನುಲಿ ಮತ್ತು ದೂರದರ್ಶನಗಳನ್ನು ಸೇರಿಸಿ ಹೇಳುತ್ತಾರೆ. ಸಂಗೀತ, ನೃತ್ಯ, ನಾಟಕ, ಅಂತರ್ಜಾಲ ಕ್ಷೇತ್ರ, ಭಿತ್ತಿ ಚಿತ್ರ-ಪತ್ರ, ಜಾಹೀರಾತು, ಡಂಗುರ, ಸಿನಿಮಾ – ಇವುಗಳನ್ನೂ ಕೂಡ ಮಾಧ್ಯಮವನ್ನಾಗಿ ಪರಿಗಣಿಸಬಹುದು. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವು ಕಾರ್ಯನಿರ್ವಹಿಸುತ್ತದೆ.