The most-visited ಕನ್ನಡ Wikipedia articles, updated daily. Learn more...
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು. ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
ನಮ್ಮ ಸುತ್ತಮುತ್ತಲಿನ ಪ್ರದೇಶವೇ ಪರಿಸರ. ಈ ಪರಿಸರವoj ಮರ ಗಿಡಗಳು ಹಾಗೂ ಪ್ರಾಣಿ ಪಕ್ಷಿಗಳಿಂದ ಕೂಡಿದೆ.ಇದರೊಂದಿಗೆ ಮಾನವನು ಅನ್ಯೋನ್ಯತೆಯಿಂದ ಜೀವಿಸುತಿದ್ದಾನೆ.ಇವೆಲ್ಲದರ ನಡುವೆ ಮಾನವನು ತನ್ನನpಸ್ವಾರ್ಥತೆಯನ್ನು ತೋರಿಸುತ್ತಾನೆ.ಇದರಿಂದಾಗಿ ಪರಿಸರವು ಹಲವಾರು ತೊಂದರೆಗೆ ಒಳಗಾಗಿದೆ.ಇದರಲ್ಲಿ ಪರಿಸರವೂ ಎದುರಿಸುವ ಮೂರು ಮುಖ್ಯವಾದ ತೊಂದರೆಗಳೆಂದರೆ ವಾಯು ಮಾಲಿನ್ಯ , ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ. ಇದರ ಮುಖ್ಯ ಕಾರಣವೆಂದರೆ ಹೆಚ್ಚಾಗುತ್ತಿರುವ ಜನಸಂಖ್ಯೆ.ಜನರು ಬಳಸುವ ವಾಹನಗಳಿಂದ ಕೆಟ್ಟ ಹೊಗೆ ಹೊರಬರುತ್ತದೆ.ಕಾರ್ಖಾನೆಗಳಿಂದ ಹೊರಬರುವ ರಾಸಾಯನಿಕ ಹೊಗೆ ವಾಯು ಮಾಲಿನ್ಯಕ್ಕೆ ಕಾರಣವಾಗುತ್ತದೆ.ಮಾನವನ ಇಂದಿನ ದಿನಚರಿಕೆಯಿಂದ ಹಾಗೂ ಕಾರ್ಖಾನೆಗಳಿಂದ ಹೊರ ಬಿಡುವ ಕಸಗಳು, ನೀರನ್ನು ಮಾಲಿನ್ಯಗೊಳಿಸುತ್ತದೆ.ವಾಹನಗಳಿಂದ,ಮದುವೆ ಸಮಾರಂಭಗಳಲ್ಲಿ ಹಾಗೂ ದೀಪಾವಳಿಯ ಸಮಯದಲ್ಲಿ ಉಪಯೋಗಿಸುವ ಪಟಾಕಿಯಿಂದ ಶಬ್ದ ಮಾಲಿನ್ಯವಾಗುತ್ತದೆ.ಇದೆಲ್ಲಾ ಮಾನವನ ಮೇಲೆಯೇ ಪ್ರಭಾವ ಬೀರುತ್ತದೆ.ಮಾಲಿನ್ಯವೂ ಮಿತಿಮೀರಿದರೆ ಮಾನವನಿಗೆ ಈ ಪರಿಸರದಲ್ಲಿ ಜೀವಿಸಲು ಅಸಾಧ್ಯವಾಗುತ್ತದೆ.ಆದುದರಿಂದ ಈ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಜವಬ್ದಾರಿ ನಮ್ಮದಾಗಿದೆ.ಮುಂದಿನ ಪೀಳಿಗೆಗೆ ಈ ಪರಿಸರವು ಉಳಿಯ ಬೇಕಾದರೆ ಇಂದಿನಿಂದಲೇ ಒಳ್ಳೆಯ ಬದಲಾವಣೆಯನ್ನು ಮಾಡಬೇಕಾಗಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು., ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿ . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು. ಇದನ್ನು ಎಲ್ಲರು ಧರಿಸಿ ಪೂಜಿಸಬಹುದು.
ಪರಿಸರವನ್ನು ಕಲುಷಿತಗೊಳಿಸುವ,(environmental pollution) ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಚಂದ್ರಯಾನ-೨ (ಸಂಸ್ಕೃತ:चंद्रयान-२, lit: Moon-vehicle pronunciation ), ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆಯ ಸಂಪೂರ್ಣ ದೇಶೀಯ ತಂತ್ರಜ್ಞಾನ ಅಳವಡಿಸಿ ನಿರ್ಮಿಸಿರುವ ಚಾಂದ್ರ ಪರಿಶೋಧನಾ ಅಭಿಯಾನ. ೨೨ ಜುಲೈ ೨೦೧೯ ರ ಅಪರಾಹ್ನ ೦೨ ಗಂಟೆ ೪೩ (2ಗಂ.43 ನಿ.ಕ್ಕೆ)ನಿಮಿಷ ಭಾರತೀಯ ಕಾಲಮಾನಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಜಿಯೋಸಿಂಕ್ರೋನಸ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಮಾರ್ಕ್ 3 (ಜಿ ಎಸ್ ಎಲ್ ವಿ ಎಂಕೆ 3-ಎಂ1 ) ರಾಕೆಟ್ ಮೂಲಕ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು.ಇಸ್ರೋದ ಮಹತ್ವಾಕಾಂಕ್ಷೆಯ ಯೋಜನೆಯ ಭಾಗವಾಗಿ ಒಂದು ಚಾಂದ್ರ ಕಕ್ಷೆಗಾಮಿ, ರೋವರ್ ಹಾಗು ಒಂದು ಭೂಸ್ಪರ್ಶಕ ಒಳಗೊಂಡಿರುವ ಇದು ಸೆಪ್ಟೆಂಬರ್ ವೇಳೆಗೆ ಚಂದ್ರನ ದಕ್ಷಿಣ ದ್ರುವಕ್ಕೆ ಇಳಿಯುವ ಯೋಜನೆ ಇದೆ. ಚಂದ್ರನ ದಕ್ಷಿಣ ಧ್ರುವ ಪ್ರದೇಶಕ್ಕೆ ಭೂಸ್ಪರ್ಶಕವನ್ನು ಇಳಿಸುವ ಮೊಟ್ಟ ಮೊದಲ ಯೋಜನೆ ಇದಾಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (2018 ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಕೆರೆ-ಕಟ್ಟೆ, ನದಿ, ಅಣೆಕಟ್ಟೆ, ಸರೋವರ ಮುಂತಾದ ಕಡೆ ಶೇಖರಣೆಯಾಗಿರುವ ನೀರು ರಭಸವಾಗಿ ಉಕ್ಕಿ ಹರಿದು ವಿಶಾಲವಾದ ಭೂ ಪ್ರದೇಶವನ್ನು ಮುಳುಗಿಸುವುದೇ ಪ್ರವಾಹ ಅಥವಾ ಜಲಪ್ರವಾಹ. "ಹರಿಯುವ ನೀರು" ಎಂಬ ಅರ್ಥದಲ್ಲಿ ಈ ಪದ ಅಲೆಗಳಗಳ ಒಳಹರಿವಿಗೂ ಅನ್ವಯಿಸಬಹುದು. ನದಿ, ಸರೊವರಗಳಂಥ ನೀರಿನ ಸಂಗ್ರಹಾಗಾರಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣ ಜಾಸ್ತಿಯಾಗಿ ಅದು ಉಕ್ಕಿ ಹರಿದಾಗ ಪ್ರವಾಹಗಳುಂಟಾಗಬಹುದು.
ಭಾರತದಲ್ಲಿ ಬ್ರಿಟಿಷ್ ಆಡಳಿತದ ವೇಳೆಯಲ್ಲಿ, ಉಪ್ಪಿನ ಮೇಲೆ ವಿಧಿಸಿದ ಕರವನ್ನು ವಿರೋಧಿಸಿ ಮಹಾತ್ಮ ಗಾಂಧಿಯವರು ನಡೆಸಿದ ಸತ್ಯಾಗ್ರಹ ಚಳುವಳಿಯನ್ನು ಉಪ್ಪಿನ ಸತ್ಯಾಗ್ರಹ ಅಥವಾ ದಾಂಡಿ ಯಾತ್ರೆ ಎನ್ನಲಾಗುತ್ತದೆ. ಉಪ್ಪಿನ ಮೇಲಿನ ಕರವನ್ನು ವಿರೋಧಿಸಿ, ಮಹಾತ್ಮ ಗಾಂಧಿಯವರು ತಮ್ಮಅನುಯಾಯಿಗಳೊಡನೆ, ಸಬರಮತಿ ಆಶ್ರಮದಿಂದ ಸಮುದ್ರ ತಟದಲ್ಲಿರುವ ದಾಂಡಿಯವರೆಗಿನ ೨೪೦ ಮೈಲಿಗಳನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದರು. ಇಲ್ಲಿ ಈ ಕರದ ವಿರೋಧದ ಸಂಕೇತವಾಗಿ ನಿಬಂಧನೆಯ ವಿರುದ್ಧವಾಗಿ ಉಪ್ಪನ್ನು ತಯಾರಿಸಿದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಟೆಂಪ್ಲೇಟು:Chembox ECHAಸಾಂದ್ರತೆ 2.144 g/L (0 °C), gas ಕರಗು ಬಿಂದು 80.7 K, −192.5 °C ಕುದಿ ಬಿಂದು 161.3 K, −111.9 °C ಕರಗುವಿಕೆ ನೀರಿನಲ್ಲಿ 0.105 g/100mL (0 °C) ವಕ್ರೀಕಾರಕ ಸೂಚಿ (nD) (ರಿಫ್ರಾಕ್ಟಿವ್ ಇಂಡೆಕ್ಸ್) 1.2226 (liquid) ಉಷ್ಣರಸಾಯನಶಾಸ್ತ್ರ ರೂಪಗೊಳ್ಳುವ ಸ್ಟ್ಯಾಂಡರ್ಡ್ ಶಾಖಪ್ರಮಾಣ ΔfHo298 +142.3 kJ·mol−1ಸ್ಟ್ಯಾಂಡರ್ಡ್ಮೋಲಾರ್ ಎಂಟ್ರಪಿ So298 237.7 J·K−1.mol−1 Hazards ಇಯು ವರ್ಗೀಕರಣ {{{value}}} ಸಂಬಂಧಿತ ಸಂಯುಕ್ತಗಳು Y (verify) (what is: Y/N?)Infobox references ಓಝೋನ್' ('O3 ), ಅಥವಾ ಟ್ರೈಆಕ್ಸಿಜನ್ ಎಂಬುದು ಒಂದು ತ್ರಿಪರಮಾಣ್ವಕ ಅಣುವಾಗಿದ್ದು, ಮೂರು ಆಮ್ಲಜನಕ ಪರಮಾಣುಗಳನ್ನು ಇದು ಒಳಗೊಂಡಿದೆ. ದ್ವಿಪರಮಾಣ್ವಕ ಭಿನ್ನರೂಪಕ್ಕಿಂತ (O2) ಸಾಕಷ್ಟು ಕಡಿಮೆ ಸ್ಥಿರವಾಗಿರುವ ಆಮ್ಲಜನಕದ ಒಂದು ಭಿನ್ನರೂಪ ಇದಾಗಿದೆ. ಕೆಳಮಟ್ಟದ ವಾತಾವರಣದಲ್ಲಿರುವ ಓಝೋನ್ ಒಂದು ವಾಯು ಮಾಲಿನ್ಯಕಾರಕವಾಗಿದ್ದು, ಪ್ರಾಣಿಗಳ ಉಸಿರಾಟದ ವ್ಯವಸ್ಥೆಗಳ ಮೇಲೆ ಇದು ಅಪಾಯಕಾರಿ ಪರಿಣಾಮಗಳನ್ನು ಬೀರುತ್ತದೆ ಮತ್ತು ಸೂಕ್ಷ್ಮ ಸ್ವಭಾವದ ಸಸ್ಯಗಳನ್ನು ಸುಡುತ್ತದೆ; ಆದಾಗ್ಯೂ, ಮೇಲುಮಟ್ಟದ ವಾತಾವರಣದಲ್ಲಿನ ಓಝೋನ್ ಪದರವು ಪ್ರಯೋಜನಕಾರಿಯಾಗಿದ್ದು, ಹಾನಿಕಾರಕ ನೇರಳಾತೀತ ಬೆಳಕು ಭೂಮಿಯ ಮೇಲ್ಮೈಯನ್ನು ತಲುಪುವುದನ್ನು ಸಮರ್ಥವಾಗಿ ತಡೆಗಟ್ಟುತ್ತದೆ.
ಈತನನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯ ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯನನ್ನೇ ಮೊದಲ ವಚನಕಾರನೆಂದು ಗುರುತಿಸಲಾಗುತ್ತದೆ.
ಜಾಗತಿಕ ತಾಪಮಾನ ನಿಯಂತ್ರಣಜಾಗತಿಕ ತಾಪಮಾನ ಏರಿಕೆ ಯೆಂದರೆ 20 ನೇ ಶತಮಾನದ ಮಧ್ಯಭಾಗದಲ್ಲಿ ಭೂಮಿಯ ಮೇಲ್ಮೈ-ಸಮೀಪದಲ್ಲಿರುವ ವಾಯು ಮತ್ತು ಸಾಗರ ಪ್ರದೇಶಗಳಲ್ಲಿ ಆದ ಸರಾಸರಿ ತಾಪಮಾನದ ಏರಿಕೆ ಹಾಗೂ ಅದರ ಪ್ರಕ್ಷೇಪಿತ ಮುಂದುವರಿಕೆ. ಜಾಗತಿಕ ಮೇಲ್ಮೈ ಉಷ್ಣತೆಯು ಕಳೆದ ಶತಮಾನದಲ್ಲಿ 0.74 ± 0.18 °C (1.33 ± 0.32 °F)ರಷ್ಟು ಹೆಚ್ಚಿದೆ. ಹವಾಮಾನ ಬದಲಾವಣೆಯ ಕುರಿತಾದ ಅಂತರ-ಸರಕಾರಿ ಮಂಡಳಿಯು (IPCC) ಅಗೆದು ತೆಗೆದ ಇಂಧನಗಳು ಮತ್ತು ಅರಣ್ಯನಾಶಗಳಂತಹಾ ಮಾನವ ಚಟುವಟಿಕೆಗಳಿಂದಾದ ಹಸಿರುಮನೆ ಅನಿಲಗಳ ಸಂಗ್ರಹದ ಹೆಚ್ಚಳವು 20ನೇ ಶತಮಾನ ದ ಮಧ್ಯಕಾಲದ ನಂತರದ ತಾಪಮಾನ ಏರಿಕೆಗೆ ಕಾರಣವೆಂದು ತೀರ್ಮಾನಕ್ಕೆ ಬಂದಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಇಕ್ಷ್ವಾಕು ವಂಶದ ದೊರೆ ರಾಜ ಹರಿಶ್ಚಂದ್ರ ಸತ್ಯಪಾಲನೆಗಾಗಿ ಹೆಸರಾದವನು.ತಂದೆ ಸೂರ್ಯ ವಂಶದ ದೊರೆ ತ್ರಿಶಂಕು,ತಾಯಿ ಸತ್ಯವ್ರತೆಯ ಮಗ ಮುಂದೆ ಸತ್ಯ ಹರಿಶ್ಚಂದ್ರನೆಂದು ಪ್ರಸಿದ್ದಿ ಪಡೆದನು. ಒಂದಾನೊಂದು ಕಾಲದಲ್ಲಿ ಹರಿಶ್ಚಂದ್ರನೆಂಬ ರಾಜನು ಆಯೋಧ್ಯ ಎಂಬ ರಾಜ್ಯವನು ಚಾಣಕ್ಷ್ಯತನದಿಂದ ರಾಜ್ಯವನು ಆಳುತ್ತಿದನು ಮತ್ತು ಅವನು ಸತ್ಯವನು ಬಿಟ್ಟು ಬೇರೆ ಏನನ್ನು ಹೇಳುತ್ತಿರಲಿಲ್ಲ ಯಾವಾಗಲು ಸಂತೋಷದಿಂದ ರಾಜ್ಯಭಾರ ಮಾಡುತ್ತಿದ್ದ. ಆ ಸಮಯದಲ್ಲಿ ದೇವರುಗಳು ಅವನಿಗೂಂದು ಸತ್ವಪರೀಕ್ಷೆಯನ್ನು ಕೊಡಲು ನಿರ್ಧರಿಸಿದರು.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
ಇಸ್ರೋ ಭಾರತದ ಅಂತರಿಕ್ಷ ಸಂಶೋಧನಾ ಸಂಸ್ಥೆ (ISRO - Indian Space Research Organisation). ಇದು ಬೆಂಗಳೂರಿನಲ್ಲಿ ಮುಖ್ಯ ಕಛೇರಿಯನ್ನು ಹೊಂದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊಂದಿದೆ. ಇಸ್ರೋದ ಮುಖ್ಯ ಕೇಂದ್ರಗಳು ಬೆಂಗಳೂರು, ತಿರುವನಂತಪುರ (ಕೇರಳ), ಅಹಮದಾಬಾದ್ (ಗುಜರಾತ್), ಮಹೇಂದ್ರಗಿರಿ(ತ.ನಾ), ಹಾಸನ(ಕರ್ನಾಟಕ) ಮತ್ತು ಶ್ರಿಹರಿಕೋಟ (ಆಂಧ್ರ ಪ್ರದೇಶ) ಗಳಲ್ಲಿ ಇವೆ.
ಬೆಳೆಯ ಆವರ್ತನೆ, ಹಸಿರು- ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.ಜನಪ್ರಿಯ ಸಂಸ್ಕೃತಿ ಅಥವಾ ಭಾಷೆ, ಕಲ್ಪನೆಗಳ ಅಂತರರಾಷ್ಟ್ರೀಯ ಮಟ್ಟದ ಹರಡುವಿಕೆಯನ್ನು ಸೂಚಿಸಲು ಈ ಪದವನ್ನು ಉಪಯೋಗಿಸಲಾಗುವುದು.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳುಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ .ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಅವರ ಅನುಪಸ್ಥಿತಿಯಲ್ಲಿ, ಭಾರತದ ಸುಪ್ರೀಂ ಕೋರ್ಟ್ನ ಹಿರಿಯ ನ್ಯಾಯಾಧೀಶರಿಂದ ಅಧ್ಯಕ್ಷರ ಪ್ರಮಾಣ ವಚನ ಸ್ವೀಕರಿಸಲಾಗುತ್ತದೆ.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಕೆ.ಎಸ್.ನರಸಿಂಹಸ್ವಾಮಿ, ಕನ್ನಡಿಗರ ಪ್ರೇಮಕವಿ,ಕನ್ನಡಿಗರ ಅತ್ಯಂತ ಪ್ರೀತಿಯ ಕವನಸಂಕಲನಗಳಲ್ಲೊಂದಾದ, ಮೈಸೂರು ಮಲ್ಲಿಗೆ ಯ ಕರ್ತೃ.(ಜನವರಿ ೨೬ ೧೯೧೫-ಡಿಸೆಂಬರ್ ೨೮ ೨೦೦೩) 'ಮೈಸೂರು ಮಲ್ಲಿಗೆ', ಕೆ.ಎಸ್.ನರಸಿಂಹಸ್ವಾಮಿಯವರ ಮೊದಲ ಕವನ ಸಂಕಲನವಾಗಿದೆ. ಇದು ಮನೆ ಮನೆಯ ಮಾತಾಗಿ, ಕಾವ್ಯವಾಗಿ, ಹಾಡಾಗಿ ಹರಿದಿದೆ. ಇದುವರೆವಿಗೂ ಇಪ್ಪತ್ತೈದಕ್ಕೂ ಹೆಚ್ಚು ಬಾರಿ ಮುದ್ರಣ ಭಾಗ್ಯ ಪಡೆದಿದೆ.
ಅತಿ ಹೆಚ್ಚು ಹಣ ಗಳಿಸಿದ ಭಾರತೀಯ ಚಲನಚಿತ್ರಗಳ ಪಟ್ಟಿ
ಇದು ಅತ್ಯಂತ ಹೆಚ್ಚು ಹಣ ಗಳಿಸಿದ ಭಾರತೀಯ ಚಿತ್ರಗಳ ಶ್ರೇಯಾಂಕವಾಗಿದೆ, ಇದರಲ್ಲಿ ಸಂಪ್ರದಾಯವಾದಿ ಜಾಗತಿಕ ಗಲ್ಲಾ ಪೆಟ್ಟಿಗೆಯ ಅಂದಾಜಿನ ಆಧಾರದ ಮೇಲೆ ಹಲವಾರು ಭಾಷೆಗಳಿಂದ ಬರುವ ಚಲನಚಿತ್ರಗಳು ಪ್ರಸಿದ್ಧವಾದ ಮೂಲಗಳಿಂದ ವರದಿಯಾಗಿದೆ. ಭಾರತದಲ್ಲಿ ದೇಶೀಯ ಗಲ್ಲಾಪೆಟ್ಟಿಗೆಯಲ್ಲಿ ಯಾವುದೇ ಅಧಿಕೃತ ಟ್ರ್ಯಾಕಿಂಗ್ ಇಲ್ಲ, ಮತ್ತು ಇಂಡಿಯನ್ ಸೈಟ್ಗಳ ಪ್ರಕಾಶನ ದತ್ತಾಂಶವನ್ನು ಆಗಾಗ್ಗೆ ತಮ್ಮ ದೇಶೀಯ ಬಾಕ್ಸ್ ಆಫೀಸ್ ಅಂದಾಜು ಹೆಚ್ಚಿಸಲು ಒತ್ತಾಯಿಸಲಾಗುತ್ತದೆ. ಭಾರತೀಯ ಚಲನಚಿತ್ರಗಳು 20 ನೇ ಶತಮಾನದ ಆರಂಭದಿಂದಲೂ ಸಹ ಪ್ರಪಂಚದಾದ್ಯಂತ ಮಾರುಕಟ್ಟೆಗಳಲ್ಲಿ ಪ್ರದರ್ಶಿಸಲ್ಪಟ್ಟಿದೆ.
ಚುನಾವಣೆ ಯೆನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ.ಇದರಲ್ಲಿ,ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚುನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ,ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ.
ಅರಣ್ಯನಾಶ ಎಂದರೆ ನೈಸರ್ಗಿಕವಾಗಿ ಕಾಣಸಿಗುವ ಅರಣ್ಯಗಳನ್ನು ಮಾನವ ಚಟುವಟಿಕೆಗಳಾದ ಕತ್ತರಿಸುವಿಕೆ ಹಾಗೂ/ಅಥವಾ ಬೆಂಕಿಯಿಂದ ಅರಣ್ಯ ಪ್ರದೇಶದ ಮರಗಿಡಗಳನ್ನು ನಾಶಕ್ಕೊಳಪಡುವ ಕ್ರಿಯೆಯಾಗಿದೆ. ಅರಣ್ಯನಾಶಕ್ಕೆ ಹಲವಾರು ಕಾರಣಗಳಿವೆ: ಮರಗಳು ಅಥವಾ ಅವುಗಳಿಂದ ದೊರಕುವ ಇದ್ದಿಲನ್ನು ಇಂಧನಕ್ಕಾಗಿ ಅಥವಾ ಮಾನವರಿಂದ ಬಳಕೆಯಾಗಲ್ಪಡುವ ಉತ್ಪನ್ನಗಳನ್ನಾಗಿ ಮಾರಾಟ ಮಾಡಲಾಗುತ್ತದೆ, ಇದರ ಜೊತೆಗೆ ತೆರವುಗೊಂಡ ಭೂಮಿಯನ್ನು ಮಾನವರು ಜಾನುವಾರುಗಳ ಮೇವಿಗಾಗಿ, ವಾಣಿಜ್ಯ ಉತ್ಪನ್ನಗಳನ್ನು ಪಡೆಯಲು, ಹಾಗೂ ವಾಸಯೋಗ್ಯ ಸ್ಥಳಗಳಿಗಾಗಿ ಬಳಕೆ ಮಾಡಲಾಗುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಅರಣ್ಯ ಪುನರ್ ನಿರ್ಮಾಣ ಮಾಡದೇ ಜನರು ಮರಗಳನ್ನು ಕಡಿದುಹಾಕುತ್ತಿದ್ದಾರೆ, ಇದರಿಂದಾಗಿ ವಾಸಸ್ಥಾನಗಳಿಗೆ ಆದ ಹಾನಿಯಿಂದಾಗಿ ಜೀವ ವೈವಿಧ್ಯತೆ ನಾಶವಾಗಿದ್ದು ವಾತಾವರಣದಲ್ಲಿ ಶುಷ್ಕತೆ ಹೆಚ್ಚುತ್ತಿದೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ತಾಜ್ ಮಹಲ್ (pronounced /tɑdʒ məˈhɑl/; ಹಿಂದಿ: ताज महल ; ಪರ್ಷಿಯನ್/ಉರ್ದು: تاج محل ) ಭಾರತದ ಆಗ್ರಾದಲ್ಲಿರುವ ಭವ್ಯ ಸಮಾಧಿಯಾಗಿದೆ. ಇದನ್ನು ಮೊಘಲ್ ಚಕ್ರವರ್ತಿ ಷಹ ಜಹಾನ್ ತನ್ನ ಮೆಚ್ಚಿನ ಪತ್ನಿ ಮಮ್ತಾಜ್ ಮಹಲ್ಳ ನೆನಪಿಗಾಗಿ ಕಟ್ಟಿಸಿದನು. ಪರ್ಷಿಯನ್, ಭಾರತೀಯ ಮತ್ತು ಮುಸ್ಲಿಂ ವಾಸ್ತುಶೈಲಿಗಳ ಸಮ್ಮಿಶ್ರಣವಾದ ಮೊಘಲ್ ವಾಸ್ತುಶೈಲಿಗೆ ತಾಜ್ ಮಹಲ್ ("ತಾಜ್" ಎಂದೂ ಕರೆಯಲ್ಪಡುತ್ತದೆ) ಅತ್ಯುತ್ತಮ ಉದಾಹರಣೆಯೆಂದು ಪರಿಗಣಿಸಲಾಗಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಭಾರತೀಯ ಸಂವಿಧಾನದ ೩೭೦ನೇ ವಿಧಿಯು ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ಸ್ವಾಯತ್ತ ಸ್ಥಾನಮಾನವನ್ನು ನೀಡುವ ವಿಧಿಯಾಗಿದೆ. ಈ ವಿಧಿಯನ್ನು ಸಂವಿಧಾನದ ಭಾಗ XXI ರಲ್ಲಿ ರಚಿಸಲಾಗಿದೆ: ತಾತ್ಕಾಲಿಕ, ಪರಿವರ್ತನಾ ಮತ್ತು ವಿಶೇಷ ನಿಬಂಧನೆಗಳು. ಜಮ್ಮು ಮತ್ತು ಕಾಶ್ಮೀರದ ಸಂವಿಧಾನ ಸಭೆಯು ಸ್ಥಾಪನೆಯಾದ ನಂತರ, ಭಾರತೀಯ ಸಂವಿಧಾನದ ವಿಧಿಗಳನ್ನು ರಾಜ್ಯಕ್ಕೆ ಅನ್ವಯಿಸಲು ಅಥವಾ ೩೭೦ನೇ ವಿಧಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಲು ಶಿಫಾರಸು ಮಾಡಲು, ಅದಕ್ಕೆ ಅಧಿಕಾರ ನೀಡಲಾಯಿತು.
ಕನ್ನಡದಲ್ಲಿ ಮಹಿಳಾ ಸಾಹಿತ್ಯದ ಸಾವಿರದೈನೂರು ವರ್ಷಗಳ ಕನ್ನಡ ಸಾಹಿತ್ಯ ಚರಿತ್ರೆಯನ್ನು ಗಮನಿಸಿದರೆ ೨೦ನೆಯ ಶತಮಾನಕ್ಕೆ ಕಾಲಿರಿಸುವವರೆಗೆ ಮಹಿಳೆಯರೇ ರಚಿಸಿದ ಸಾಹಿತ್ಯ, ಮಹಿಳಾ ಸಾಹಿತ್ಯವೆಂಬ ಹೆಸರಿನಲ್ಲಿ ಗುರುತಿಸಬಹುದಾದಂಥದ್ದು ಹೆಚ್ಚು ಕಂಡುಬರುವುದಿಲ್ಲ. ಸ್ತ್ರೀಯರು ವಿದ್ಯೆಯಿಂದ ವಂಚಿತರಾದದ್ದು, ಪುರುಷ ಪ್ರಧಾನ ಸಾಮಾಜಿಕ ವ್ಯವಸ್ಥೆಯಲ್ಲಿ ಸಾರ್ವಜನಿಕ ಜೀವನದಲ್ಲಿ ಭಾಗಿಯಾಗುವ ಹೆಚ್ಚಿನ ಅವಕಾಶಗಳು ಸೃಷ್ಟಿಯಾಗದೇ ಹೋದದ್ದು, ಸ್ವಾತಂತ್ರ್ಯವಿರದ ಅವಲಂಬನೆಯ ಜೀವನವೇ ಪ್ರಧಾನವಾದದ್ದು - ಇಂಥ ಅನೇಕ ಕಾರಣಗಳಿಂದಾಗಿ ಮಹಿಳೆ ಕನ್ನಡ ಸಾಹಿತ್ಯದ ಮುಖ್ಯವಾಹಿನಿಯಲ್ಲಿ ಬಹುಕಾಲದವರೆಗೆ ಅನನ್ಯತೆಯನ್ನು ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. ಇದಕ್ಕೆ ಅಲ್ಲೊಂದು ಇಲ್ಲೊಂದು ಅಪವಾದಗಳಿರಬಹುದು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೊಂಬತ್ತು ರಾಜ್ಯಗಳು ಹಾಗು ಎಂಟು ಒಕ್ಕೂಟ ಪ್ರಾಂತ್ಯಗಳು ಇವೆ.