The most-visited ಕನ್ನಡ Wikipedia articles, updated daily. Learn more...
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮)(2nd October 1869 ) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು. ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು., ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿ . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು. ಇದನ್ನು ಎಲ್ಲರು ಧರಿಸಿ ಪೂಜಿಸಬಹುದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ನಮ್ಮ ಸುತ್ತಮುತ್ತಲಿನ ಪ್ರದೇಶವೇ ಪರಿಸರ. ಈ ಪರಿಸರವoj ಮರ ಗಿಡಗಳು ಹಾಗೂ ಪ್ರಾಣಿ ಪಕ್ಷಿಗಳಿಂದ ಕೂಡಿದೆ.ಇದರೊಂದಿಗೆ ಮಾನವನು ಅನ್ಯೋನ್ಯತೆಯಿಂದ ಜೀವಿಸುತಿದ್ದಾನೆ.ಇವೆಲ್ಲದರ ನಡುವೆ ಮಾನವನು ತನ್ನನpಸ್ವಾರ್ಥತೆಯನ್ನು ತೋರಿಸುತ್ತಾನೆ.ಇದರಿಂದಾಗಿ ಪರಿಸರವು ಹಲವಾರು ತೊಂದರೆಗೆ ಒಳಗಾಗಿದೆ.ಇದರಲ್ಲಿ ಪರಿಸರವೂ ಎದುರಿಸುವ ಮೂರು ಮುಖ್ಯವಾದ ತೊಂದರೆಗಳೆಂದರೆ ವಾಯು ಮಾಲಿನ್ಯ , ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ. ಇದರ ಮುಖ್ಯ ಕಾರಣವೆಂದರೆ ಹೆಚ್ಚಾಗುತ್ತಿರುವ ಜನಸಂಖ್ಯೆ.ಜನರು ಬಳಸುವ ವಾಹನಗಳಿಂದ ಕೆಟ್ಟ ಹೊಗೆ ಹೊರಬರುತ್ತದೆ.ಕಾರ್ಖಾನೆಗಳಿಂದ ಹೊರಬರುವ ರಾಸಾಯನಿಕ ಹೊಗೆ ವಾಯು ಮಾಲಿನ್ಯಕ್ಕೆ itಕಾರಣವಾಗುತ್ತದೆ.ಮಾನವನ ಇಂದಿನ ದಿನಚರಿಕೆಯಿಂದ ಹಾಗೂ ಕಾರ್ಖಾನೆಗಳಿಂದ ಹೊರ ಬಿಡುವ ಕhಸಗಳು, ನೀರನ್ನು ಮಾಲಿನ್ಯಗೊಳಿಸುತ್ತದೆ.ವಾಹನಗಳಿಂದ,ಮದುವೆ ಸಮಾರಂಭಗಳಲ್ಲಿ ಹಾಗೂ ದೀಪಾವಳಿಯ ಸಮಯದಲ್ಲಿ ಉಪಯೋಗಿಸುವ ಪಟಾಕಿಯಿಂದ ಶಬ್ದ ಮಾಲಿನ್ಯವಾಗುತ್ತದೆ.ಇದೆಲ್ಲಾ ಮಾನವನ ಮೇಲೆಯೇ ಪ್ರಭಾವ ಬೀರುತ್ತದೆ.ಮಾಲಿನ್ಯವೂ ಮಿತಿಮೀರಿದರೆ ಮಾನವನಿಗೆ ಈ ಪರಿಸರದಲ್ಲಿ ಜೀವಿಸಲು ಅಸಾಧ್ಯವಾಗುತ್ತದೆ.ಆದುದರಿಂದ ಈ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಜವಬ್ದಾರಿ ನಮ್ಮದಾಗಿದೆ.ಮುಂದಿನ ಪೀಳಿಗೆಗೆ ಈ ಪರಿಸರವು ಉಳಿಯ ಬೇಕಾದರೆ ಇಂದಿನಿಂದಲೇ ಒಳ್ಳೆಯ ಬದಲಾವಣೆಯನ್ನು ಮಾಡಬೇಕಾಗಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಪರಿಸರವನ್ನು ಕಲುಷಿತಗೊಳಿಸುವ, ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಕೆರೆ-ಕಟ್ಟೆ, ನದಿ, ಅಣೆಕಟ್ಟೆ, ಸರೋವರ ಮುಂತಾದ ಕಡೆ ಶೇಖರಣೆಯಾಗಿರುವ ನೀರು ರಭಸವಾಗಿ ಉಕ್ಕಿ ಹರಿದು ವಿಶಾಲವಾದ ಭೂ ಪ್ರದೇಶವನ್ನು ಮುಳುಗಿಸುವುದೇ ಪ್ರವಾಹ ಅಥವಾ ಜಲಪ್ರವಾಹ. "ಹರಿಯುವ ನೀರು" ಎಂಬ ಅರ್ಥದಲ್ಲಿ ಈ ಪದ ಅಲೆಗಳಗಳ ಒಳಹರಿವಿಗೂ ಅನ್ವಯಿಸಬಹುದು. ನದಿ, ಸರೊವರಗಳಂಥ ನೀರಿನ ಸಂಗ್ರಹಾಗಾರಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣ ಜಾಸ್ತಿಯಾಗಿ ಅದು ಉಕ್ಕಿ ಹರಿದಾಗ ಪ್ರವಾಹಗಳುಂಟಾಗಬಹುದು.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (2018 ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ,ನೈರುತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಸುಭಾಷ್ ಚಂದ್ರ ಬೋಸ್ (সুভাষ চন্দ্র বসু; ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜಾರಿ ನಿರ್ದೇಶನಾಲಯ(Enforcement Directorate - ED) ಭಾರತ ಸರ್ಕಾರದ ಅವಿಭಾಜ್ಯ ಸಂಸ್ಥೆಯಾಗಿದ್ದು ಆರ್ಥಿಕ ಕಾನೂನುಗಳನ್ನು ಶಿಸ್ತು ಬದ್ಧವಾಗಿ ಜಾರಿಮಾಡುವ, ಹಾಗು ಅವು ಪಾಲನೆಯಲ್ಲಿರುವಂತೆ ನಿಗಾ ವಹಿಸುವ ಕರ್ತವ್ಯದಲ್ಲಿ ತೊಡಗಿಕೊಳ್ಳುತ್ತದೆ. ದೇಶದೊಳಗೆ ನಡೆಯುವ ಆರ್ಥಿಕ ಅಪರಾಧಗಳ ಮೇಲೂ ಕಣ್ಗಾವಲು ಇಡುವ ಅಧಿಕಾರ ಜಾರಿ ನಿರ್ದೇಶನಾಲಯಕ್ಕೆ ಇದ್ದು ಇದು ಭಾರತ ಸರ್ಕಾರದ ಹಣಕಾಸು ಸಚಿವಾಲಯದ ಆದಾಯ ವಿಭಾಗದ ಒಂದು ಪ್ರಮುಖ ಭಾಗವಾಗಿದೆ. ಭಾರತೀಯ ಆಡಳಿತಾತ್ಮಕ ಸೇವಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗು ಆದಾಯ ತೆರಿಗೆ ಅಧಿಕಾರಿಗಳನ್ನು ಈ ಸಂಸ್ಥೆ ಒಳಗೊಂಡಿರುತ್ತದೆ.
ಮದರ್ ತೆರೇಸಾಸುಮಾರು 45 ವರ್ಷಗಳಿಗೂ ಹೆಚ್ಚು ಕಾಲ ಇವರು ಬಡವರ, ರೋಗಿಗಳ, ಅನಾಥರ ಮತ್ತು ಮರಣ ಸಂಕಟದಲ್ಲಿರುವವರ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಂಡವರು. 1970ರ ವೇಳೆಗೆ ಇವರು ಒಬ್ಬ ಮಾನವತಾ ವಾದಿಯಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾದರು. ಮದರ್ ತೆರೇಸಾ ಒಬ್ಬ ಮಹಾ ಮಾನವತಾವಾದಿಯಾಗಿ ಬಡವರ, ನಿರ್ಗತಿಕರ, ರೋಗಿಗಳ, ಅನಾಥರ, ವೃದ್ಧರ ಪರವಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಇವರಿಗೆ ವಿಶ್ವದ ಅತ್ಯುನ್ನತ ನೊಬೆಲ್ ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಈತನನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯ ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯನನ್ನೇ ಮೊದಲ ವಚನಕಾರನೆಂದು ಗುರುತಿಸಲಾಗುತ್ತದೆ.
ಟಿಪ್ಪು ಸಾಹಿಬ್ ಎಂದೂ ಕರೆಯಲ್ಪಡುತ್ತಿದ್ದ ಟಿಪ್ಪು ಸುಲ್ತಾನ್ (೧೭೫೩ - ಮೇ ೪, ೧೭೯೯), ೧೭೮೨ ರಿಂದ ಮೈಸೂರು ಸಂಸ್ಥಾನದ ರಾಜ ಹಾಗೂ ಭಾರತದಲ್ಲಿ ಬ್ರಿಟೀಷ್ ಸಾಮ್ರಾಜ್ಯಶಾಹಿಯ ವಿರುದ್ಧ ಆಗಿನ ಕಾಲದ ಪ್ರಮುಖ ಹೋರಾಟಗಾರರಲ್ಲಿ ಒಬ್ಬ. ಈ ಹೋರಾಟದ ಪರಿಣಾಮವಾಗಿ ಟಿಪ್ಪುವಿಗೆ ಶೇರ್-ಎ-ಮೈಸೂರ್ (ಮೈಸೂರ ಹುಲಿ) ಎಂಬ ಬಿರುದು ಉಂಟು. ಮೈಸೂರಿನ ಇತಿಹಾಸದಲ್ಲಿ ಮರೆಯಲಾಗದ ಹೆಸರು ಈತನದು.
ಶ್ರೀ ಪುರಂದರದಾಸರು (೧೪೮೦ – ೧೫೬೪)[೧] ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರಲ್ಲಿ ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ರೈತನು ಕೃಷಿಯಲ್ಲಿ, ಅಥವಾ ಆಹಾರ ಅಥವಾ ಕಚ್ಚಾವಸ್ತುಗಳಿಗಾಗಿ ಸಾವಯವಗಳನ್ನು ಬೆಳೆಸುವಲ್ಲಿ ತೊಡಗಿರುವ ವ್ಯಕ್ತಿ. ಈ ಪದವು ಸಾಮಾನ್ಯವಾಗಿ ಜಮೀನು ಬೆಳೆಗಳು, ಹಣ್ಣಿನ ತೋಟಗಳು, ದ್ರಾಕ್ಷಿತೋಟಗಳು, ಕೋಳಿಗಳು, ಅಥವಾ ಇತರ ಜಾನುವಾರುಗಳನ್ನು ಬೆಳೆಸುವ ಸ್ವಲ್ಪ ಸಂಯೋಜನೆಯನ್ನು ಮಾಡುವ ಜನರಿಗೆ ಅನ್ವಯಿಸುತ್ತದೆ. ರೈತನು ಬೇಸಾಯಮಾಡುವ ಜಮೀನಿನ ಮಾಲೀಕನಾಗಿರಬಹುದು ಅಥವಾ ಇತರರು ಒಡೆಯರಾಗಿರುವ ಜಮೀನಿನಲ್ಲಿ ಕಾರ್ಮಿಕನಾಗಿ ಕೆಲಸ ಮಾಡಬಹುದು, ಆದರೆ ಮುಂದುವರಿದ ಅರ್ಥವ್ಯವಸ್ಥೆಗಳಲ್ಲಿ, ರೈತನು ಸಾಮಾನ್ಯವಾಗಿ ಜಮೀನಿನ ಒಡೆಯನಾಗಿರುತ್ತಾನೆ, ಮತ್ತು ಜಮೀನಿನ ಉದ್ಯೋಗಿಗಳನ್ನು ಜಮೀನು ಕಾರ್ಮಿಕರು, ಅಥವಾ ಆರಂಬದಾಳುಗಳೆಂದು ಕರೆಯಲಾಗುತ್ತದೆ.
ಬೆಳೆಯ ಆವರ್ತನೆ, ಹಸಿರು- ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆ
ಇಸ್ರೋ ಭಾರತದ ಅಂತರಿಕ್ಷ ಸಂಶೋಧನಾ ಸಂಸ್ಥೆ (ISRO - Indian Space Research Organisation). ಇದು ಬೆಂಗಳೂರಿನಲ್ಲಿ ಮುಖ್ಯ ಕಛೇರಿಯನ್ನು ಹೊಂದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊಂದಿದೆ. ಇಸ್ರೋದ ಮುಖ್ಯ ಕೇಂದ್ರಗಳು ಬೆಂಗಳೂರು, ತಿರುವನಂತಪುರ (ಕೇರಳ), ಅಹಮದಾಬಾದ್ (ಗುಜರಾತ್), ಮಹೇಂದ್ರಗಿರಿ(ತ.ನಾ), ಹಾಸನ(ಕರ್ನಾಟಕ) ಮತ್ತು ಶ್ರಿಹರಿಕೋಟ (ಆಂಧ್ರ ಪ್ರದೇಶ) ಗಳಲ್ಲಿ ಇವೆ.
ಏಷ್ಯನ್ ಕ್ರೀಡಾಕೂಟ', ಹಾಗೂ ಏಷ್ಯಾಡ್, ಎಂದೂ ಕರೆಯಲಾಗುವ ಬಹು-ಕ್ರೀಡೆಗಳ ಕ್ರೀಡಾಕೂಟವು ನಾಲ್ಕು ವರ್ಷಕ್ಕೊಮ್ಮೆ ಏಷ್ಯಾದ ಎಲ್ಲಾ ದೇಶಗಳ ಕ್ರೀಡಾಪಟುಗಳ ನಡುವೆ ಆಡಲಾಗುತ್ತದೆ. ಏಷ್ಯನ್ ಕ್ರೀಡಾಕೂಟವು ಭಾರತದ ನವದೆಹಲಿಯ ಮೊದಲ ಕ್ರೀಡಕೂಟದಿಂದ ೧೯೭೮ರ ಕ್ರೀಡಕೂಟದ ತನಕ ಏಷ್ಯನ್ ಗೇಮ್ಸ್ ಫೆಡೆರೆಷನ್ನಿಂದ ನಿಯಂತ್ರಸಲ್ಪಟ್ಟಿತ್ತು. ೧೯೮೨ರ ಕ್ರೀಡಕೂಟದಿಂದ ಒಲಂಪಿಕ್ ಕೌನ್ಸಿಲ್ ಆಫ್ ಏಷ್ಯಾ ದಿಂದ ಆಯೋಜಿಸಲ್ಪಡಲಾಗುತ್ತಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಮಹಾತ್ಮ ಜ್ಯೋತಿಬಾ ಫುಲೆ (೧೮೨೭ - ೧೮೯೦) ಅವರು ಆಧುನಿಕ ಮಹಾರಾಷ್ಟ್ರದ ಸಾಮಾಜಿಕ ಕ್ರಾಂತಿಯ ಮೂಲಪುರುಷರಲ್ಲಿ ಪ್ರಮುಖರು. ಸಮಾಜ ಸುಧಾರಕರಾಗಿ, ಸಮಾನತೆಯ ಹರಿಕಾರರಾಗಿ ದೀನ, ದಲಿತ ಹಿಂದುಳಿದ ವರ್ಗಗಳ ಏಳಿಗೆಗೆ ಅವಿರತವಾಗಿ ಶ್ರಮಿಸಿದವರು. ಇವರು ಜನಸಾಮಾನ್ಯರು ಡಾಂಭಿಕ ಧರ್ಮ, ಪಂಥ, ಸಂಪ್ರದಾಯ ಮುಂತಾದ ಸಂಕುಚಿತ ಭಾವನೆಗಳಿಗೆ ಮರುಳಾಗದೆ, ಮಾನವ ಧರ್ಮವನ್ನು ಅಂಗೀಕರಿಸಬೇಕೆಂದು ಅಪೇಕ್ಷೆ ಪಟ್ಟವರು.ಮಹಾತ್ಮ ಜ್ಯೋತಿಬಾ ಫುಲೆ ಅವರ ಬಗ್ಗೆ ಕನ್ನಡದಲ್ಲಿರುವ ಬಹುತೇಕ ಕೃತಿಗಳಲ್ಲಿ "ಜ್ಯೋತಿಬಾ ಫುಲೆ" ಎಂಬ ಹೆಸರೆ ಬಳಕೆಯಲ್ಲಿದೆ.