The most-visited ಕನ್ನಡ Wikipedia articles, updated daily. Learn more...
ಸುಭಾಷ್ ಚಂದ್ರ ಬೋಸ್ ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು.
ಸುಭಾಷ್ ಚಂದ್ರ ಬೋಸ್ ೧೮೯೭ ಜನವರಿ ೨೩ರಲ್ಲಿ ಹುಟ್ಟಿದ್ದರು ೧೮ ಆಗಸ್ಟ್ ೧೯೪೪೫ ೪೮ ವರ್ಷ ಇವರ ಪ್ರತಿಭಟನೆಯ ದೇಶಭಕ್ತಿ ಅವರನ್ನು ಭಾರತದ ನಾಯಕ ಮಾಡಿದ ಒಬ್ಬ ಭಾರತೀಯ ರಾಷ್ಟ್ರೀಯತಾವಾದಿ, ಆದರೆ ಅವರ ಪ್ರಯತ್ನ ಮಹಾಯುದ್ದದಲ್ಲಿ ನಾಜಿ ಜರ್ಮನಿ ಮತ್ತು ಜಪಾನ್ ತೊಂದರೆಗೊಳಗಾಗಿರುವ ಆಸ್ತಿಯನ್ನು ಬಿಟ್ಟು ಹೋಗಿವೆ ಸಹಾಯದಿಂದ ಬ್ರಿಟಿಷ್ ಆಡಳಿತದ ಭಾರತ ವಿಮುಕ್ತಿಗೊಳಿಸುವ ಗೌರವ ನೇತಾಜಿ ಹಿಂದೂಸ್ತಾನಿ ಭಾಷೆ ಗೌರವಾನ್ವಿತ ನಾಯಕರಾದ ಮೊದಲ ವೇಳೆಗೆ ಜರ್ಮನಿಯ ಬೋಸ್ ಅನ್ವಯಿಸಲಾಗಿದೆ ಇಂಡಿಷ್ ಲೀಜನ್ ಮತ್ತು ೧೯೪೨ ರ ಆರಂಭದಲ್ಲಿ ಬರ್ಲಿನ್ ಭಾರತ ವಿಶೇಷ ಬ್ಯೂರೋ ಜರ್ಮನ್ ಮತ್ತು ಭಾರತೀಯ ಅಧೀಕಾರಿಗಳು ಭಾರತೀಯ ಸೈನಿಕರು,ಈಗ ಭಾರತದಾದ್ಯಂತ ವ್ಯಾಪಕವಾಗಿ ಬಳಸಲಾಗುತ್ತದೆ. ಹಿಂದಿನ ಬೋಸ್ ೧೯೩೮ ಮತ್ತು ೧೯೩೯ ರಲ್ಲಿ ಕಾಂಗ್ರೆಸ್ ಅಧ್ಯಕ್ಷ ಆಗಲು ಏರುತ್ತಿರುವ,೧೯೨೦ ಮತ್ತು ೧೯೩೦ ರಲ್ಲಿ ಭಾರತೀಯ ರಾಷ್ರೀಯ ಕಾಂಗ್ರೆಸ್ ಕಿರಿಯ ತೀವ್ರಗಾಮಿ ಆದಾಗ್ಯೂ ಅವರು ೧೯೩೯ ರಲ್ಲಿ ಕಾಂಗ್ರಸ್ ನಾಯಕತ್ವದ ಸ್ಥಾನಗಳನ್ನು ಪದಚ್ಯುತಗೊಳಿಸಿ ಮೋಹನ್ ಕೆ ಗಾಂಧಿ ಮತ್ತು ಕಾಂಗ್ರೆಸ್ ವರಿಷ್ಠರು ಭಿನ್ನಾಭಿಪ್ರಾಯಗಳ ಕೆಳಗಿನ ತರುವಾಯ ೧೯೪೦ರಲ್ಲಿ ಭಾರತ ತಪ್ಪಿಸಿಕೊಂಡು ಮೊದಲು ಬ್ರಿಟಿಷರು ಗೃಹಬಂಧನದಲ್ಲಿ ಇರಿಸಲಾಗಿತ್ತು. ಬೋಸ್ ನಾಯಕತ್ವ ಇತರ ಸ್ಥಾಪಿಸಿದ ಜನರು ಮತ್ತು ಜನಾಂಗೀಯ ಸಮುದಾಯಗಳ ಕಡೆಗೆ ಅದರ ವರ್ತನೆಗಳೂ ಜೊತೆ ಹವಾಗುಣ ವೈತಿರಿಕ ,ಭಾರತದ ಸ್ವಾತಂತ್ರದ ಕಾರಣ ಸಹಾನುಭೂತಿ, ಕೆಲವೊಮ್ಮೆ ಚಂಚಲ,ಅನಿರಿಕ್ಡಿತ ನೀಡಿತ್ತು.ಅಲ್ಲಿ ಎಪ್ರಿಲ ೧೯೪೧,ರಲ್ಲಿ ಜರ್ಮನಿಗೆ ಆಗಮಿಸಿದರು.ನಂವೆಬರ ೧೯೪೧ ರಲ್ಲಿ [೧೧][೧೨],ಜೊತೆಗೆ ಜರ್ಮನ ಹಣ, ಉಚಿತ ಭಾರತ ಸೆಂಟರ ಭೋಸ ರಾತ್ರಿಯ ಪ್ರಸಾರ ಇದು.ಬರ್ಲಿನ್ ರಲ್ಲಿ ಸ್ಥಾಪಿಸಲಾಯಿತು, ಮತ್ತು ಶೀರ್ಘವೇ ಉಚಿತ ಇಂಡಿಯಾ ರೇಡಿಯೊ ಮಾಡಲಾಯಿತು.೩೦೦೦ ಬಲವಾದ ಉಚಿತ ಭಾರತ ಲೀಜನ ಎರ್ವಿನ ರೋಮೆಲ್ ನ ಆಫ್ರಿಕಾ ಕಾರ್ಪ್ಸ ವಶಪಡಿಸಿಕೊಂಡರು ಭಾರತೀಯರು ಒಳಗೊಂಡ, ಭಾರತದ ಸಂಭಾವ ಭವಿಷ್ಯದ ಜರ್ಮನ್ ಭೂಮಿ ಆಕ್ರಮಣದ ನೆರವಾಗಲೆಂದು ರಚಿಸಲಾಯಿತು.[೧೩] ಈ ಸಮಯದಲ್ಲಿ ಬೋಸ್ ಕೂಡ ತಂದೆ ಆದರು,.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಚುನಾವಣೆ ಯೆನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ.ಇದರಲ್ಲಿ,ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚುನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ,ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು. ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಶ್ರೀ ಪುರಂದರದಾಸರು (೧೪೮೦ ಪುರಂದರ ದಾಸ) [1] - ಒಂದು (c 1484 ಸಿ 1564) ಹರಿದಾಸ , ಸರ್ವೋಚ್ಚ ಮಹಾನ್ ಭಕ್ತ ಕೃಷ್ಣ , ಒಂದು ವೈಷ್ಣವ ಕವಿ ಮತ್ತು ಸಂತ ಮತ್ತು ಸಮಾಜ ಸುಧಾರಕ. ಅವರು ಶಿಷ್ಯನಾಗಿದ್ದ ದ್ವೈತ ತತ್ವಶಾಸ್ತ್ರಜ್ಞ-ಸಂತ ವ್ಯಸತಿರ್ಥ , ಮತ್ತು ಮತ್ತೊಂದು ಒಂದು ಸಮಕಾಲೀನ ಹರಿದಾಸ , ಕನಕದಾಸ . ಅವರ ಗುರು, ವ್ಯಾಸತಿರ್ಥ , ಒಂದು ಹಾಡಿನಲ್ಲಿ ಪುರಂದರ ದಾಸನನ್ನು ವೈಭವೀಕರಿಸಿದರು: ದಾಸರೆಂದರೆ ಪುರಂದರ ದಾಸರಾಯ .
ದಿ ಇಂಡಿಯನ್ ನ್ಯಾಷನಲ್ ಆರ್ಮಿ ಅಥವಾ ಆಝಾದ್ ಹಿಂದ್ ಫೌಜ್ ಎರಡನೆಯ ಮಹಾಯುಧ್ಧದಲ್ಲಿ ಇಂಪೀರಿಯಲ್ ಜಪಾನ್ ಆರ್ಮಿ ಯೊಂದಿಗೆ ಮಿತ್ರಸೈನ್ಯದ ವಿರುದ್ಧ ಹೋರಾಡಿದ ಭಾರತೀಯ ಸಂಸ್ಥೆ. ಎರಡನೆಯ ಮಹಾಯುಧ್ಧದ ಸಮಯದಲ್ಲಿ ಜಪಾನಿಯರಿಂದ ಯುಧ್ಧ ಕೈದಿಗಳಾದ ಬ್ರಿಟಿಷ್ ಸೈನ್ಯದ ಭಾರತೀಯರನ್ನು ಸಂಘಟಿಸಿ ಈ ಸೈನ್ಯ ವನ್ನು ರಚಿಸಲಾಯಿತು. ಈ ಸೈನ್ಯವನ್ನು ಸಂಘಟಿಸುವದರಲ್ಲಿ ರಾಸಬಿಹಾರಿ ಘೋಷ ತುಂಬಾ ಶ್ರಮಪಟ್ಟವರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (2018 ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಪರಿಸರವನ್ನು ಕಲುಷಿತಗೊಳಿಸುವ,(environmental pollution) ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಪೌರತ್ವ (ತಿದ್ದುಪಡಿ) ಮಸೂದೆ, ೨೦೧೯
ಪೌರತ್ವ (ತಿದ್ದುಪಡಿ) ಮಸೂದೆ, ೨೦೧೯, ೧೯೯೫ರ ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡುವ ಮಸೂದೆಯಾಗಿದ್ದು, ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರೈಸ್ತರಿಗೆ ಪೌರತ್ವ ನೀಡುವ ಉದ್ದೇಶವನ್ನು ಹೊಂದಿದೆ. ಆ ಆರು ಧರ್ಮದವರು ಭಾರತಕ್ಕೆ ೩೧ ಡಿಸೆಂಬರ್ ೨೦೧೪ ಅಥವಾ ಅದಕ್ಕಿಂತಲೂ ಮೊದಲು ಪ್ರವೇಶಿಸಿದವರಾಗಿದ್ದಲ್ಲಿ, ಅವರೆಲ್ಲರೂ ಭಾರತೀಯ ಪೌರತ್ವಕ್ಕೆ ಅರ್ಹರು.ಕೇಂದ್ರ ಸಚಿವ ಸಂಪುಟವು ೪ ಡಿಸೆಂಬರ್ ೨೦೧೯ ರಂದು ಮಸೂದೆಯನ್ನು ಮುಂದಿಟ್ಟಿತು. ಇದನ್ನು ಡಿಸೆಂಬರ್ ೧೦ ರಂದು ಲೋಕಸಭೆಯು ಅಂಗೀಕರಿಸಿತು ಹಾಗೂ ಡಿಸೆಂಬರ್ ೧೧ ರಂದು ರಾಜ್ಯಸಭೆಯು ಇದನ್ನು ಅಂಗೀಕಾರ ಮಾಡಿತು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಒಂಬತ್ತು ಒಕ್ಕೂಟ ಪ್ರಾಂತ್ಯಗಳು ಇವೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಅಥವಾ . 63 ವರ್ಷಗಳ ಹಿಂದೆ , 21 ಬಂದೂಕುಗಳ ಸೆಲ್ಯೂಟ್ ಮತ್ತು ಡಾ ರಾಜೇಂದ್ರ ಪ್ರಸಾದರ ಭಾರತದ ರಾಷ್ಟ್ರೀಯ ಧ್ವಜದಲ್ಲಿ unfurling ಜನವರಿ 26, 1950 ರಂದು ಭಾರತೀಯ ಗಣರಾಜ್ಯ ಐತಿಹಾಸಿಕ ಜನ್ಮ ಘೋಷಿಸಿತು; ನಮ್ಮ ದೇಶದ ನಂತರ 894 ದಿನಗಳ ಬ್ರಿಟಿಷ್ ರೂಲ್ ನ ವಾಪಸಾತಿ ನಂತರ ಪರಮಾಧಿಕಾರದ ಆಯಿತು . ಅಂದಿನಿಂದ ಪ್ರತಿ ವರ್ಷ ದಿನ ರಾಷ್ಟ್ರದೆಲ್ಲೆಡೆ ದೊಡ್ಡ ಹೆಮ್ಮೆ ಮತ್ತು ಸಂತೋಷ ಆಚರಿಸಲಾಗುತ್ತದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಭಾರತದ ರಾಷ್ತ್ರೀಯ ಧ್ವಜ'ದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಸ್ವಾತಂತ್ರ್ಯ ಬಂದಾಗಿನಿಂದಲೂ, ಭಾರತದಲ್ಲಿನ ಚುನಾವಣೆಗಳು ತಮ್ಮ ವಿಕಸನದಲ್ಲಿ ಸುದೀರ್ಘವಾದ ಹಾದಿಯನ್ನು ಸವೆಸಿವೆಯಾದರೂ, ಅಷ್ಟು ಸಮಯವೂ ಚುನಾವಣೆಗಳು ಸ್ವತಂತ್ರ ಭಾರತದ ಒಂದು ಗಮನಾರ್ಹವಾದ ಸಾಂಸ್ಕೃತಿಕ ಅಂಶವೆನಿಸಿಕೊಂಡಿವೆ. 2004ರಲ್ಲಿ ನಡೆದ ಭಾರತೀಯ ಚುನಾವಣೆಗಳು 670 ದಶಲಕ್ಷಕ್ಕೂ ಹೆಚ್ಚಿನ ಜನರಿರುವ ಮತದಾರ ಸಮುದಾಯವೊಂದನ್ನು ಒಳಗೊಂಡಿದ್ದವು; ಇದು ಮುಂದಿನ ಅತಿದೊಡ್ಡ ಸ್ಥಾನವನ್ನು ಹೊಂದಿರುವ ಯುರೋಪಿನ ಸಂಸತ್ ಚುನಾವಣೆಗಳಿಗೆ ಹೋಲಿಸಿದಾಗ ದುಪ್ಪಟ್ಟು ಪ್ರಮಾಣಕ್ಕಿಂತಲೂ ಹೆಚ್ಚಿನದು ಎನಿಸಿಕೊಂಡಿತ್ತು. ಅಷ್ಟೇ ಅಲ್ಲ, 1989ರ ವೆಚ್ಚಗಳಿಗೆ ಹೋಲಿಸಿದಾಗ ಈ ಅವಧಿಯ ಘೋಷಿತ ಖರ್ಚುವೆಚ್ಚವು ಮೂರುಪಟ್ಟು ಹೆಚ್ಚಾಗಿ, ಅದು ಬಹುಮಟ್ಟಿಗೆ 300 ದಶಲಕ್ಷ $ನಷ್ಟು ಪ್ರಮಾಣವನ್ನು ತಲುಪಿತ್ತು ಮತ್ತು ಈ ಚುನಾವಣೆಯಲ್ಲಿ 1 ದಶಲಕ್ಷಕ್ಕೂ ಹೆಚ್ಚಿನ ವಿದ್ಯುನ್ಮಾನ ಮತದಾನ ಯಂತ್ರಗಳು ಬಳಸಲ್ಪಟ್ಟವು.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಮಾನವ ಹಕ್ಕುಗಳು ಭಾರತದಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿಯು (ವಸ್ತುಸ್ಥಿತಿ) ಬಹಳ ಸಂಕೀರ್ಣ ರಚನೆಯಾಗಿದೆ. ಕಾರಣವೆಂದರೆ ದೇಶದ ವಿಶಾಲವಾದ ಭೂ ಭಾಗ ಮತ್ತು ಅತ್ಯದ್ಭುತ ವೈವಿಧ್ಯತೆಯ ಪರಿಣಾಮವಾಗಿ, ಇದರ ಸ್ಥಾನವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರದ ನೀತಿ ಮತ್ತು ಈ ದೇಶದ ಸಾರ್ವಭೌಮತ್ವ, ಸಾಮಾಜಿಕ ಸಮಾನತೆ, ಪ್ರಜಾತಂತ್ರ ಗಣರಾಜ್ಯ ರಾಷ್ಟ್ರವಾಗಿದ್ದು, ಮತ್ತು ಇತಿಹಾಸವನ್ನು ದಾಖಲಿಸಿದ್ದ ಹಳೆಯ ವಸಾಹತುಶಾಹಿ ಪ್ರಾಂತ್ಯಗಳಂತಿದೆ. ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳ ನೀಡಿಕೆಯ ಜೊತೆ, ಧಾರ್ಮಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಟ್ಟಿದೆ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
== ಸರ್ವಾಂತಯಾ೯ಮಿ ಪ್ಲಾಸ್ಟಿಕ್ ಮೆದುವಾದ ಮತ್ತು ವಿವಿಧ ಆಕಾರಗಳ ಘನ ಕಾಯಗಳನ್ನು ಹೊಂದಿರುವ ಸಿಂಥಟಿಕ್ ವಸ್ತು ಪ್ಲಾಸ್ಟಿಕ್ಗಳನ್ನು ಹೆಚ್ಚಿನ ಅಣು ದ್ರವ್ಯರಾಶಿಯ ಜೈವಿಕ ಪಾಲಿಮರ್ಗಳು ಆದರೆ ಸಾಮಾನ್ಯವಾಗಿ ಇತರ ಪದಾರ್ಥಗಳುನ್ನು ಹೊಂದಿರುತ್ತದೆ. ವಿಶ್ವದಾದ್ಯಂತ ಘನ ತ್ಯಾಜ್ಯ ವಸ್ತುಗಳ ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿದೆ. ಮಿತಿಮೀರಿ ಬೆಳೆಯುತ್ತಿರುವ ಜನಸಂಖ್ಯೆ, ಅತಿ ಭರದಿಂದ ತಲೆಯೆತ್ತಿ ಮೆರೆಯುತ್ತಿರುವ ನಗರಗಳು, ತ್ಯಾಜ್ಯ ವಸ್ತುಗಳ ಹೆಚ್ಚಳಕ್ಕೆ ಮುಖ್ಯವಾದ ಕಾರಣಗಳು, ತ್ಯಾಜ್ಯ ವಸ್ತುಗಳ ವಿಲೇವಾರಿಗೆ ಇದು ದೊಡ್ಡ ಸವಾಲಾಗಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಜಾಗತಿಕ ತಾಪಮಾನ ನಿಯಂತ್ರಣಜಾಗತಿಕ ತಾಪಮಾನ ಏರಿಕೆ ಯೆಂದರೆ 20 ನೇ ಶತಮಾನದ ಮಧ್ಯಭಾಗದಲ್ಲಿ ಭೂಮಿಯ ಮೇಲ್ಮೈ-ಸಮೀಪದಲ್ಲಿರುವ ವಾಯು ಮತ್ತು ಸಾಗರ ಪ್ರದೇಶಗಳಲ್ಲಿ ಆದ ಸರಾಸರಿ ತಾಪಮಾನದ ಏರಿಕೆ ಹಾಗೂ ಅದರ ಪ್ರಕ್ಷೇಪಿತ ಮುಂದುವರಿಕೆ. ಜಾಗತಿಕ ಮೇಲ್ಮೈ ಉಷ್ಣತೆಯು ಕಳೆದ ಶತಮಾನದಲ್ಲಿ 0.74 ± 0.18 °C (1.33 ± 0.32 °F)ರಷ್ಟು ಹೆಚ್ಚಿದೆ. ಹವಾಮಾನ ಬದಲಾವಣೆಯ ಕುರಿತಾದ ಅಂತರ-ಸರಕಾರಿ ಮಂಡಳಿಯು (IPCC) ಅಗೆದು ತೆಗೆದ ಇಂಧನಗಳು ಮತ್ತು ಅರಣ್ಯನಾಶಗಳಂತಹಾ ಮಾನವ ಚಟುವಟಿಕೆಗಳಿಂದಾದ ಹಸಿರುಮನೆ ಅನಿಲಗಳ ಸಂಗ್ರಹದ ಹೆಚ್ಚಳವು 20ನೇ ಶತಮಾನ ದ ಮಧ್ಯಕಾಲದ ನಂತರದ ತಾಪಮಾನ ಏರಿಕೆಗೆ ಕಾರಣವೆಂದು ತೀರ್ಮಾನಕ್ಕೆ ಬಂದಿದೆ.
ಭಾರತೀಯ ಸಂವಿಧಾನದ ೩೭೦ನೇ ವಿಧಿಯು ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ಸ್ವಾಯತ್ತ ಸ್ಥಾನಮಾನವನ್ನು ನೀಡುವ ವಿಧಿಯಾಗಿದೆ. ಈ ವಿಧಿಯನ್ನು ಸಂವಿಧಾನದ ಭಾಗ XXI ರಲ್ಲಿ ರಚಿಸಲಾಗಿದೆ: ತಾತ್ಕಾಲಿಕ, ಪರಿವರ್ತನಾ ಮತ್ತು ವಿಶೇಷ ನಿಬಂಧನೆಗಳು. ಜಮ್ಮು ಮತ್ತು ಕಾಶ್ಮೀರದ ಸಂವಿಧಾನ ಸಭೆಯು ಸ್ಥಾಪನೆಯಾದ ನಂತರ, ಭಾರತೀಯ ಸಂವಿಧಾನದ ವಿಧಿಗಳನ್ನು ರಾಜ್ಯಕ್ಕೆ ಅನ್ವಯಿಸಲು ಅಥವಾ ೩೭೦ನೇ ವಿಧಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಲು ಶಿಫಾರಸು ಮಾಡಲು, ಅದಕ್ಕೆ ಅಧಿಕಾರ ನೀಡಲಾಯಿತು.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ.ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮುದ್ರಣಾಲಯ ಯು.ಎಸ್, ೧೯೯೬,.ಸ್ಟುವರ್ಟ್ ರೇ ಸರ್ಬ್ಯಾಕರ್, ಸಮಾಧಿ: ದ ನ್ಯೂಮಿನಸ್ ಅಂಡ್ ಸೆಸ್ಸೇಟಿವ್ ಇನ್ ಇಂಡೋ-ಟಿಬೆಟನ್ ಯೋಗ.
ಲಾಲಾ ಲಜಪತ ರಾಯ್ (ಜನವರಿ ೨೮, ೧೮೬೫syed wasiqh- 29th 9 september ನವೆಂಬರ್ ೧೭, ೧೯೨೮) ಭಾರತಕ್ಕಾಗಿ ತಮ್ಮ ಪ್ರಾಣವನ್ನು ಸಮರ್ಪಿಸಿದ ಸ್ವಾತಂತ್ರ್ಯ ಹೋರಾಟಗಾರರಾಗಿಯೂ, ಶ್ರೇಷ್ಠ ಬರಹಗಾರರಾಗಿಯೂ ಭಾರತೀಯ ಇತಿಹಾಸದಲ್ಲಿ ಪ್ರಸಿದ್ಧರಾಗಿದ್ದಾರೆ. ಲಾಲಾ ಲಜಪತ ರಾಯ್ ಅವರು ದೇಶದ ಪ್ರಖ್ಯಾತ ತ್ರಿಮೂರ್ತಿಗಳಾದ ‘ಲಾಲ್ – ಬಾಲ್ – ಪಾಲ್’ ಇವರಲ್ಲಿ ಒಬ್ಬರು. ಮತ್ತಿಬ್ಬರು ಬಾಲ ಗಂಗಾಧರ ತಿಲಕ್ ಮತ್ತು ಬಿಪಿನ್ ಚಂದ್ರ ಪಾಲರು.
ಒಂದು ಜೀವಿಯ ದೇಹ-ಮನಸ್ಸು ಸಂಪೂರ್ಣ ಸಮತೋಲನದಲ್ಲಿರುವ ಸ್ಥಿತಿಯನ್ನು ಆರೋಗ್ಯ ಎಂದು ಕರೆಯಬಹುದು. ವಿಶ್ವ ಆರೋಗ್ಯ ಸಂಸ್ಥೆಯ ೧೯೪೫ರ ಹೇಳಿಕೆಯ ಪ್ರಕಾರ "ಆರೋಗ್ಯವೆಂದರೆ ಸಂಪೂರ್ಣ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಸುಸ್ಥಿತಿ - ಕೇವಲ ರೋಗ, ಭಾದೆಗಳ ಗೈರು ಹಾಜರಿಯಷ್ಟೇ ಅಲ್ಲ"ಆರೋಗ್ಯವೇ ಭಾಗ್ಯ.. ಮಾನವನಿಗೆ ಪರಿಸ್ಥಿತಿಗೆ ಹೊಂದಿಕೊಳ್ಳುವ ಮತ್ತು ದೈಹಿಕ, ಮಾನಸಿಕ ಅಥವಾ ಸಾಮಾಜಿಕ ಸವಾಲುಗಳನ್ನು ಎದುರಿಸುವಾಗ ಸ್ವಯಂ ನಿರ್ವಹಿಸುವ ಸಾಮರ್ಥ್ಯ ಇದೆ.