The most-visited ಕನ್ನಡ Wikipedia articles, updated daily. Learn more...
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜಾಲತಾಣವು ಒಂದು ಒಂಟಿ ಪ್ರಭಾವಕ್ಷೇತ್ರ ನಾಮದಿಂದ (ಡೊಮೇನ್ ನೇಮ್) ಸೇವೆಪಡೆಯುವ ಸಂಬಂಧಿತ ಜಾಲಪುಟಗಳ ಸಮೂಹ. ಒಂದು ಜಾಲತಾಣವು ಕನಿಷ್ಠ ಒಂದು ವೆಬ್ ಸರ್ವರ್ನಲ್ಲಿ ಸ್ಥಳಾವಕಾಶ ಪಡೆದಿರುತ್ತದೆ, ಮತ್ತು ಏಕರೂಪ ಸಾಧನ ಶೋಧಕ (ಯೂನಿಫ಼ಾರ್ಮ್ ರಿಸೋರ್ಸ್ ಲೊಕೇಟರ್) ಎಂದು ಕರೆಯಲ್ಪಡುವ ಒಂದು ಅಂತರಜಾಲ ವಿಳಾಸದ ಮುಖಾಂತರ ಅಂತರಜಾಲ ಅಥವಾ ಖಾಸಗಿ ಸ್ಥಳೀಯ ವಲಯ ಜಾಲದಂತಹ (ಲೋಕಲ್ ಏರಿಯಾ ನೆಟ್ವರ್ಕ್) ಒಂದು ಜಾಲಬಂಧದ ಮೂಲಕ ಪ್ರವೇಶಿಸಬಲ್ಲದ್ದಾಗಿರುತ್ತದೆ. ಎಲ್ಲ ಸಾರ್ವಜನಿಕವಾಗಿ ಸುಲಭ ಗಮ್ಯ ಜಾಲತಾಣಗಳು ಒಟ್ಟಾಗಿ ವಿಶ್ವವ್ಯಾಪಿ ಜಾಲವನ್ನು (ವರ್ಲ್ಡ್ ವೈಡ್ ವೆಬ್) ರಚಿಸುತ್ತವೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಮಕ್ಕಳ ದಿನಾಚರಣೆ ವಿಶೇಷ ದಿನವಾಗಿದ್ದು, ಮಕ್ಕಳ ಹಕ್ಕುಗಳು, ಆರೈಕೆ ಮತ್ತು ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸಲು ಭಾರತದಾದ್ಯಂತ ಆಚರಿಸಲಾಗುತ್ತದೆ. ಇದನ್ನು ಪ್ರತಿವರ್ಷ ನವೆಂಬರ್ 14 ರಂದು ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರಿಗೆ ಗೌರವವಾಗಿ ಆಚರಿಸಲಾಗುತ್ತದೆ, ಮಕ್ಕಳಲ್ಲಿ ಚಾಚಾ ನೆಹರೂ ಎಂದು ಪ್ರೀತಿಯಿಂದ ಕರೆಯುತ್ತಾರೆ, ಅವರು ಮಕ್ಕಳು ಶಿಕ್ಷಣವನ್ನು ಪೂರೈಸಬೇಕೆಂದು ಸಲಹೆ ನೀಡಿದರು. ಈ ದಿನ, ಭಾರತದಾದ್ಯಂತ, ಮಕ್ಕಳಿಗಾಗಿ ಮತ್ತು ಅನೇಕ ಶೈಕ್ಷಣಿಕ ಮತ್ತು ಪ್ರೇರಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.ಭಾರತದಲ್ಲಿ ಮಕ್ಕಳ ದಿನಾಚರಣೆಯ ಆಚರಣೆಯು 1956 ರ ಹಿಂದಿನದು.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(Kittur Queen Channamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವರು, ಸ್ವಾತಂತ್ರ-ಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
ರೈತನು ಕೃಷಿಯಲ್ಲಿ, ಅಥವಾ ಆಹಾರ ಅಥವಾ ಕಚ್ಚಾವಸ್ತುಗಳಿಗಾಗಿ ಸಾವಯವಗಳನ್ನು ಬೆಳೆಸುವಲ್ಲಿ ತೊಡಗಿರುವ ವ್ಯಕ್ತಿ. ಈ ಪದವು ಸಾಮಾನ್ಯವಾಗಿ ಜಮೀನು ಬೆಳೆಗಳು, ಹಣ್ಣಿನ ತೋಟಗಳು, ದ್ರಾಕ್ಷಿತೋಟಗಳು, ಕೋಳಿಗಳು, ಅಥವಾ ಇತರ ಪ್ರಾಣಿಗಳನ್ನು ಬೆಳೆಸುವ ಸ್ವಲ್ಪ ಸಂಯೋಜನೆಯನ್ನು ಮಾಡುವ ಜನರಿಗೆ ಅನ್ವಯಿಸುತ್ತದೆ. ರೈತನು ಬೇಸಾಯಮಾಡುವ ಜಮೀನಿನ ಮಾಲೀಕನಾಗಿರಬಹುದು ಅಥವಾ ಇತರರು ಒಡೆಯರಾಗಿರುವ ಜಮೀನಿನಲ್ಲಿ ಕಾರ್ಮಿಕನಾಗಿ ಕೆಲಸ ಮಾಡಬಹುದು, ಆದರೆ ಮುಂದುವರಿದ ಅರ್ಥವ್ಯವಸ್ಥೆಗಳಲ್ಲಿ, ರೈತನು ಸಾಮಾನ್ಯವಾಗಿ ಜಮೀನಿನ ಒಡೆಯನಾಗಿರುತ್ತಾನೆ, ಮತ್ತು ಜಮೀನಿನ ಉದ್ಯೋಗಿಗಳನ್ನು ಜಮೀನು ಕಾರ್ಮಿಕರು, ಅಥವಾ ಆರಂಬದಾಳುಗಳೆಂದು ಕರೆಯಲಾಗುತ್ತದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜ ಕೇಶೀರಾಜನ ಶಬ್ದಮಣಿದರ್ಪಣ (ಕ್ರಿ.ಶ. ೧೨೬೦) ದ ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakaran) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಭಾಷಾಶಾಸ್ತ್ರದಲ್ಲಿ, ಒಂದು ನಾಮಪದ ವು ಒಂದು ದೊಡ್ಡ, ಮುಕ್ತ ನಿಘಂಟಿನ ವರ್ಗದ ಒಂದು ಸದಸ್ಯನಾಗಿದ್ದು, ಸದರಿ ನಿಘಂಟಿನ ವರ್ಗದ ಸದಸ್ಯರು ವಾಕ್ಯಾಂಶವೊಂದರ ಕರ್ತೃಪದ, ಕ್ರಿಯಾಪದವೊಂದರ ಕರ್ಮ, ಅಥವಾ ಉಪಸರ್ಗವೊಂದರ ಕರ್ಮದಲ್ಲಿನ ಮುಖ್ಯ ಪದವಾಗಿ ಸಂಭವಿಸಲು ಸಾಧ್ಯವಿದೆ.ನಿಘಂಟಿನ ವರ್ಗಗಳ ಸದಸ್ಯರು, ಅಭಿವ್ಯಕ್ತಿಗಳ ಇತರ ಬಗೆಗಳೊಂದಿಗೆ ಹೇಗೆ ಬೆರೆಯುತ್ತವೆ ಎಂಬುದರ ಪರಿಭಾಷೆಯಲ್ಲಿ ನಿಘಂಟಿನ ವರ್ಗಗಳು ವ್ಯಾಖ್ಯಾನಿಸಲ್ಪಡುತ್ತವೆ. ನಾಮಪದಗಳಿಗೆ ಸಂಬಂಧಿಸಿದ ವಾಕ್ಯರಚನೆಯ ನಿಯಮಗಳು ಭಾಷೆಯಿಂದ ಭಾಷೆಗೆ ಬದಲಾಗುತ್ತವೆ. ಇಂಗ್ಲಿಷ್ ಭಾಷೆಯಲ್ಲಿ, ನಾಮಪದಗಳನ್ನು ವ್ಯಾಖ್ಯಾನಿಸುವಾಗ, ಗುಣವಾಚಿಗಳು ಹಾಗೂ ಗುಣವನ್ನು ಸೂಚಿಸುವ ಗುಣವಾಚಕಗಳೊಂದಿಗೆ ಸಂಭವಿಸಬಲ್ಲ ಮತ್ತು ನಾಮಪದದ ವಾಕ್ಯಾಂಗವೊಂದರ ಪ್ರಧಾನಭಾಗವಾಗಿ ಕಾರ್ಯನಿರ್ವಹಿಸಬಲ್ಲ ಪದಗಳಾಗಿ ನಾಮಪದಗಳು ವಿವರಿಸಲ್ಪಡುತ್ತವೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
ಆಸ್ತಿ ವಿಮೆಯು, ಬೆಂಕಿ, ಕಳ್ಳತನ ಮತ್ತು ಕೆಲವು ಹವಾಮಾನ ಹಾನಿಯಂತಹ, ಆಸ್ತಿಯ ಬಹುತೇಕ ಅಪಾಯಗಳ ವಿರುದ್ಧ ಸಂರಕ್ಷಣೆಯನ್ನು ಒದಗಿಸುತ್ತದೆ. ಇದರಲ್ಲಿ ಬೆಂಕಿ ವಿಮೆ, ಪ್ರವಾಹ ವಿಮೆ, ಭೂಕಂಪ ವಿಮೆ, ಮನೆ ವಿಮೆ ಅಥವ ಬಾಯ್ಲರ್ ವಿಮೆಯಂತಹ ವಿಶೇಷ ವಿಧಗಳ ವಿಮೆಯು ಒಳಗೊಂಡಿದೆ. ಆಸ್ತಿಗೆ ಎರಡು ಮುಖ್ಯ ರೀತಿಗಳಲ್ಲಿ ವಿಮೆ ಮಾಡಿಸಲಾಗುತ್ತದೆ – ಮುಕ್ತ ಅಪಾಯಗಳು (ಓಪನ್ ಪೆರಿಲ್ಸ್) ಮತ್ತು ಹೆಸರಿಸಲ್ಪಟ್ಟ ಅಪಾಯಗಳು (ನೇಮ್ಡ್ ಪೆರಿಲ್ಸ್).ಮುಕ್ತ ಅಪಾಯಗಳು, ಪಾಲಿಸಿಯಲ್ಲಿ ನಿರ್ದಿಷ್ಟವಾಗಿ ಹೊರತುಪಡಿಸದ ಎಲ್ಲಾ ನಷ್ಟಗಳ ಕಾರಣಗಳನ್ನು ಒಳಗೊಂಡಿರುತ್ತದೆ.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ.ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮುದ್ರಣಾಲಯ ಯು.ಎಸ್, ೧೯೯೬,.ಸ್ಟುವರ್ಟ್ ರೇ ಸರ್ಬ್ಯಾಕರ್, ಸಮಾಧಿ: ದ ನ್ಯೂಮಿನಸ್ ಅಂಡ್ ಸೆಸ್ಸೇಟಿವ್ ಇನ್ ಇಂಡೋ-ಟಿಬೆಟನ್ ಯೋಗ.
ಬಾಲ್ಯ ವಿವಾಹ ಎಂದರೆ ಚಿಕ್ಕ ವಯಸ್ಸಿನಲ್ಲಿ ಹುಡುಗ-ಹುಡುಗಿಯನ್ನು ಎರಡು ಕುಟುಂಬಗಳು ಒಪ್ಪಿ ಮದುವೆ ಮಾಡುವುದು. ದೇಶದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸಲಾಗಿದ್ದರೂ ಸಂಪೂರ್ಣ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಹುಡುಗಿಯರಿಗೆ 18 ಹಾಗೂ ಹುಡುಗರಿಗೆ 21 ವರ್ಷವೆಂದು ವಿವಾಹಕ್ಕೆ ವಯಸ್ಸನ್ನು ನಿಗದಿಪಡಿಸಲಾಗಿದ್ದರೂ ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಲೇ ಇದೆ.
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಈ ಕಾರವು ಬಂದಾಗ 'ಏ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂದಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.