The most-visited ಕನ್ನಡ Wikipedia articles, updated daily. Learn more...
ಶ್ರೀನಿವಾಸ ರಾಮಾನುಜನ ಅಯ್ಯ೦ಗಾರ್ ರಾಮಾನುಜನ್ (ಡಿಸ೦ಬರ್ ೨೨, ೧೮೮೭ - ಏಪ್ರಿಲ್ ೨೬, ೧೯೨೦) ವಿಶ್ವದ ಶ್ರೇಷ್ಠ ಗಣಿತಜ್ಞರೆಂದು ಪ್ರಖ್ಯಾತರಾಗಿದ್ದಾರೆ. “ಪ್ರತಿ ಧನಪೂರ್ಣಾಂಶವೂ ರಾಮಾನುಜನ್ನರ ವೈಯಕ್ತಿಕ ಮಿತ್ರರುಗಳಲ್ಲೊಂದು” ಎಂಬುದು ಲೋಕದಲ್ಲಿ ವಿಖ್ಯಾತ ನುಡಿ. ಅವರಿಗೆ “ಸಂಖ್ಯೆಗಳ ವೈಲಕ್ಷಣಗಳನ್ನು ನಂಬಲಸಾಧ್ಯವಾದಂಥ ರೀತಿಯಲ್ಲಿ ನೆನಪಿಡುವ’ ಅಪೂರ್ವ ಸಾಮರ್ಥ್ಯವಿತ್ತು.
ಬಾಲ್ಯ ವಿವಾಹ ಎಂದರೆ ಚಿಕ್ಕ ವಯಸ್ಸಿನಲ್ಲಿ ಹುಡುಗ-ಹುಡುಗಿಯನ್ನು ಎರಡು ಕುಟುಂಬಗಳು ಒಪ್ಪಿ ಮದುವೆ ಮಾಡುವುದು. ದೇಶದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸಲಾಗಿದ್ದರೂ ಸಂಪೂರ್ಣ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಹುಡುಗಿಯರಿಗೆ 18 ಹಾಗೂ ಹುಡುಗರಿಗೆ 21 ವರ್ಷವೆಂದು ವಿವಾಹಕ್ಕೆ ವಯಸ್ಸನ್ನು ನಿಗದಿಪಡಿಸಲಾಗಿದ್ದರೂ ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಲೇ ಇದೆ.
ಚುನಾವಣೆ ಯೆನ್ನುವುದು ಒಂದು ಔಪಚಾರಿಕ ವ್ಯವಸ್ಥೆ, ನಿರ್ಧಾರ ಮಾಡುವ ಪ್ರಕ್ರಿಯೆ.ಇದರಲ್ಲಿ,ಜನಸಮೂಹ ಒಬ್ಬನನ್ನು ಸಾರ್ವಜನಿಕ ಕ್ಷೇತ್ರದ ಅಧಿಕಾರವನ್ನು ಹಿಡಿಯಲು ಮಾಡುವ ಆಯ್ಕೆ. ಚುನಾವಣೆಗಳು ಒಂದು ಸಾಧಾರಣ ಯಾಂತ್ರಿಕದಲ್ಲಿ ಆಧುನಿಕ ಪ್ರಾತಿನಿಧಿಕ ಪ್ರಜಾಪ್ರಭುತ್ವವಾಗಿ 17ನೇ ಶತಮಾನದಿಂದ ನಡೆಯುತ್ತಿದೆ. ಚುನಾವಣೆಗಳು-ಶಾಸಕಾಂಗಳಲ್ಲಿ,ಕೆಲವೊಮ್ಮೆ ಕಾರ್ಯಾಂಗ ಮತ್ತು ನ್ಯಾಯಾಂಗಗಳಲ್ಲಿ ಮತ್ತು ಪ್ರಾದೇಶಿಕ ಹಾಗೂ ಸ್ಥಳೀಯ ಸರ್ಕಾರಗಳಿಗೆ ಅಧಿಕಾರಸ್ಥರನ್ನು ತುಂಬುತ್ತದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಉತ್ತರಾಖಂಡ (ಹಿಂದಿಯಲ್ಲಿ: उत्तराखण्ड ಅಥವಾ उत्तराखंड)( ಮೊದಲಿನ ಹೆಸರು ಉತ್ತರಾಂಚಲ ) ರಾಜ್ಯವನ್ನು ಭಾರತ ಗಣರಾಜ್ಯದ ೨೭ನೆಯ ರಾಜ್ಯವನ್ನಾಗಿ ೨೦೦೦ರ ನವೆಂಬರ್ ೯ ರಂದು ರಚಿಸಲಾಯಿತು. ಉತ್ತರಪ್ರದೇಶ ರಾಜ್ಯದ ಹಿಮಾಲಯಪರ್ವತ ಪ್ರಾಂತ್ಯವನ್ನು ಬೇರಾಗಿಸಿ ಉತ್ತರಾಖಂಡ ರಾಜ್ಯವನ್ನು ಅಸ್ತಿತ್ವಕ್ಕೆ ತರಲಾಗಿದೆ. ರಾಜ್ಯದ ಉತ್ತರಕ್ಕೆ ಟಿಬೆಟ್ , ಪೂರ್ವಕ್ಕೆ ನೇಪಾಲ , ದಕ್ಷಿಣ ಹಾಗೂ ಪಶ್ಚಿಮಕ್ಕೆ ಉತ್ತರಪ್ರದೇಶ ರಾಜ್ಯ ಇವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಅರಿಸ್ಟಾಟಲ್ (Greek: Ἀριστοτέλης, ಅರಿಸ್ಟಾಟೆಲೆಸ್ ) (384 BC – 322 BC) ಒಬ್ಬ ಗ್ರೀಕ್ ದಾರ್ಶನಿಕ ಮಾತ್ರವಲ್ಲದೆ, ಪ್ಲೇಟೋನ ಓರ್ವ ವಿದ್ಯಾರ್ಥಿ ಹಾಗೂ ಅಲೆಕ್ಸಾಂಡರ್ನ ಗುರುವಾಗಿದ್ದ. ಭೌತಶಾಸ್ತ್ರ, ತತ್ತ್ವಮೀಮಾಂಸೆ, ಕವಿತೆ, ರಂಗಭೂಮಿ, ಸಂಗೀತ, ತರ್ಕಶಾಸ್ತ್ರ, ಭಾಷಣಶಾಸ್ತ್ರ, ರಾಜಕಾರಣ, ಸರ್ಕಾರ, ನೀತಿಶಾಸ್ತ್ರ, ಜೀವಶಾಸ್ತ್ರ, ಮತ್ತು ಪ್ರಾಣಿಶಾಸ್ತ್ರ ಇವೇ ಮೊದಲಾದವನ್ನು ಒಳಗೊಂಡಂತೆ ಅನೇಕ ವಿಷಯಗಳ ಕುರಿತು ಆತ ಬರೆದ. ಪ್ಲೇಟೋನ ಗುರುವಾದ ಸಾಕ್ರಟಿಸ್ ಮತ್ತು ಪ್ಲೇಟೋನ ಜೊತೆಜೊತೆಗೆ, ಪಾಶ್ಚಿಮಾತ್ಯ ತತ್ತ್ವಶಾಸ್ತ್ರದಲ್ಲಿನ ಅತಿ ಪ್ರಮುಖ ಪ್ರಸಿದ್ಧ ಸಂಸ್ಥಾಪಕರಲ್ಲಿ ಅರಿಸ್ಟಾಟಲ್ ಕೂಡಾ ಒಬ್ಬನಾಗಿದ್ದಾನೆ.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ.ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮುದ್ರಣಾಲಯ ಯು.ಎಸ್, ೧೯೯೬,.ಸ್ಟುವರ್ಟ್ ರೇ ಸರ್ಬ್ಯಾಕರ್, ಸಮಾಧಿ: ದ ನ್ಯೂಮಿನಸ್ ಅಂಡ್ ಸೆಸ್ಸೇಟಿವ್ ಇನ್ ಇಂಡೋ-ಟಿಬೆಟನ್ ಯೋಗ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(Kittur Queen Channamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವರು, ಸ್ವಾತಂತ್ರ-ಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ಲೋಕಸಭೆಗೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ, ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.
ಸುಭಾಷ್ ಚಂದ್ರ ಬೋಸ್ ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜ ಕೇಶೀರಾಜನ ಶಬ್ದಮಣಿದರ್ಪಣ (ಕ್ರಿ.ಶ. ೧೨೬೦) ದ ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakaran) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಸ್ವಾತಂತ್ರ್ಯ ಬಂದಾಗಿನಿಂದಲೂ, ಭಾರತದಲ್ಲಿನ ಚುನಾವಣೆಗಳು ತಮ್ಮ ವಿಕಸನದಲ್ಲಿ ಸುದೀರ್ಘವಾದ ಹಾದಿಯನ್ನು ಸವೆಸಿವೆಯಾದರೂ, ಅಷ್ಟು ಸಮಯವೂ ಚುನಾವಣೆಗಳು ಸ್ವತಂತ್ರ ಭಾರತದ ಒಂದು ಗಮನಾರ್ಹವಾದ ಸಾಂಸ್ಕೃತಿಕ ಅಂಶವೆನಿಸಿಕೊಂಡಿವೆ. 2004ರಲ್ಲಿ ನಡೆದ ಭಾರತೀಯ ಚುನಾವಣೆಗಳು 670 ದಶಲಕ್ಷಕ್ಕೂ ಹೆಚ್ಚಿನ ಜನರಿರುವ ಮತದಾರ ಸಮುದಾಯವೊಂದನ್ನು ಒಳಗೊಂಡಿದ್ದವು; ಇದು ಮುಂದಿನ ಅತಿದೊಡ್ಡ ಸ್ಥಾನವನ್ನು ಹೊಂದಿರುವ ಯುರೋಪಿನ ಸಂಸತ್ ಚುನಾವಣೆಗಳಿಗೆ ಹೋಲಿಸಿದಾಗ ದುಪ್ಪಟ್ಟು ಪ್ರಮಾಣಕ್ಕಿಂತಲೂ ಹೆಚ್ಚಿನದು ಎನಿಸಿಕೊಂಡಿತ್ತು. ಅಷ್ಟೇ ಅಲ್ಲ, 1989ರ ವೆಚ್ಚಗಳಿಗೆ ಹೋಲಿಸಿದಾಗ ಈ ಅವಧಿಯ ಘೋಷಿತ ಖರ್ಚುವೆಚ್ಚವು ಮೂರುಪಟ್ಟು ಹೆಚ್ಚಾಗಿ, ಅದು ಬಹುಮಟ್ಟಿಗೆ 300 ದಶಲಕ್ಷ $ನಷ್ಟು ಪ್ರಮಾಣವನ್ನು ತಲುಪಿತ್ತು ಮತ್ತು ಈ ಚುನಾವಣೆಯಲ್ಲಿ 1 ದಶಲಕ್ಷಕ್ಕೂ ಹೆಚ್ಚಿನ ವಿದ್ಯುನ್ಮಾನ ಮತದಾನ ಯಂತ್ರಗಳು ಬಳಸಲ್ಪಟ್ಟವು.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಕ್ರಿಸ್ಮಸ್ ಎಂದರೆ ಕ್ರಿಸ್ತಜಯಂತಿ ಅಥವಾ ಯೇಸುಕ್ರಿಸ್ತನು ಹುಟ್ಟಿದ ಸಂಭ್ರಮದ ದಿನ. ಜಗತ್ತಿನಾದ್ಯಂತ ಪ್ರತಿ ವರ್ಷದ ಡಿಸೆಂಬರ್ ತಿಂಗಳ ಇಪ್ಪತ್ತೈದನೇ ದಿನವನ್ನು ಯೇಸುಕ್ರಿಸ್ತನ ಹುಟ್ಟುಹಬ್ಬವಾಗಿ ಆಚರಿಸಲಾಗುತ್ತದೆ. ಕ್ರೈಸ್ತ ಸುವಾರ್ತೆ(ಗಾಸ್ಪೆಲ್)ಯ ಪ್ರಕಾರ ಯೇಸುಕ್ರಿಸ್ತನು ಮೇರಿ ಮತ್ತು ಜೋಸೆಫರ ಮಗನಾಗಿ ಇಂದು ಇಸ್ರೇಲ್ನಲ್ಲಿರುವ ಬೆತ್ಲಹೆಮ್ ಎಂಬ ಊರಿನಲ್ಲಿ ಹುಟ್ಟಿದ.
ಭಾರತದ ಸಂವಿಧಾನದ ಪ್ರಕಾರ ಭಾರತದ ರಾಜಕೀಯ ಪಕ್ಷಗಳು ಭಾರತದ ವಿವಿಧ ರಾಜ್ಯಗಳಲ್ಲಿ ಸಾಂವಿಧಾನಿಕ ಅಧಿಕಾರಕ್ಕೆ ಸ್ಪರ್ಧಿಸುವ ರಾಜಕೀಯ ಪಕ್ಷಗಳು. ಒಂದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಸಾಂವಿಧಾನಿಕ ಅಧಿಕಾರವನ್ನು ಹೊಂದಿರುವ ಸದಸ್ಯರಿರುವ ಪಕ್ಷಗಳು ರಾಷ್ಟ್ರೀಯ ಪಕ್ಷಗಳೆಂದು ಕರೆಯಲಾಗುತ್ತವೆ. ಇವುಗಳಲ್ಲಿ ಮುಖ್ಯವಾದವು: ಬಹುಜನ ಸಮಾಜ ಪಕ್ಷ (BSP) - ಮಾಯಾವತಿ ಕುಮಾರಿ ಅವರ ನೇತೃತ್ವದಲ್ಲಿ.
==ವ್ಯಾಖ್ಯೆ ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಬೆಳೆಯ ಆವರ್ತನೆ, ಹಸಿರು- ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಗೌತಮ ಬುದ್ಧ ವಿಷ್ಣುವಿನ ಅವತಾರಗಳಲೊಂದು (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ. ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.
ಅರ್ಜುನನು ಹಿಂದು ಪುರಾಣಗಳಲ್ಲಿ ಒಂದಾದ ಮಹಾಭಾರತದ ನಾಯಕರಲ್ಲಿ ಸಾರಥಿಯೂ, ಆಪ್ತ ಮಿತ್ರನೂ ಆಗಿದ್ದ ಶ್ರೀಕೃಷ್ಣ ಪರಮಾತ್ಮನು ಮನವೂಲಿಸಿದನು. ಯುದ್ಧದಲ್ಲಿ ಅಡಕವಾಗಿರುವ ವಿಷಯಗಳು, ಧೈರ್ಯ, ಯೋಧನೋರ್ವನ ಕರ್ತವ್ಯ, ಮಾನವ ಜೀವನದ ಹಾಗೂ ಆತ್ಮದ ಸ್ವಭಾವ ಹಾಗೂ ದೇವರುಗಳ ಪಾತ್ರ ಇವೇ ಮುಂತಾದವುಗಳಿಂದ ಕೂಡಿದ್ದ ಇವರ ನಡುವಿನ ಸಂಭಾಷಣೆಯು ಮಹಾಭಾರತದ ಅತೀ ಪ್ರಮುಖ ಪ್ರಸಂಗಗಳಲ್ಲಿ ಒಂದಾದ ಭಗವದ್ಗೀತೆಯವಸ್ತುವಾಗಿದೆ. ಕಡೆಯಲ್ಲಿ ಈತನ ಪರಮ ಪ್ರತಿಸ್ಫರ್ಧಿಯಾದ ಕರ್ಣನನ್ನು ಕೊಲ್ಲುವುದರಲ್ಲಿ ಅರ್ಜುನನು ಪ್ರಮುಖ ಪಾತ್ರವನ್ನು ವಹಿಸಿದ್ದನು.