The most-visited ಕನ್ನಡ Wikipedia articles, updated daily. Learn more...
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಒಂಬತ್ತು ಒಕ್ಕೂಟ ಪ್ರಾಂತ್ಯಗಳು ಇವೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು. ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಪರಿಸರವನ್ನು ಕಲುಷಿತಗೊಳಿಸುವ,(environmental pollution) ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಜನಪದ ಕ್ರೀಡೆಗಳು ಗ್ರಾಮೀಣ ಜನರಿಂದ ಮನೋರಂಜನೆಗಾಗಿ, ದೈಹಿಕ ವ್ಯಾಯಾಮಕ್ಕಾಗಿ ರಚಿಸಲ್ಪಟ್ಟ ಆಟಗಳು. ಇವುಗಳಲ್ಲಿ ಕಂಡು ಬರುವ ಸಾಮಾನ್ಯ ಅಂಶವೆಂದರೆ ಇವು ಅತೀ ಕಡಿಮೆ ಹಾಗೂ ಸುಲಭದಲ್ಲಿ ದೊರಕುವ ಸಾಮಗ್ರಿಗಳನ್ನು ಬಳಸಿ ಕೊಂಡುಆಟವಾಡಿ ನೆರೆದವರನ್ನು ರಂಜಿಸುವುದು. ಲಗೋರಿ, ಕುಂಟೇ ಬಿಲ್ಲೆ, ಮರಕೋತಿಯಾಟ, ಚಿನ್ನಿದಾಂಡು, ಬುಗುರಿ, ಕಣ್ಣು ಮುಚ್ಚಾಲೆ, ಅಳ್ಳುಮನೆ, ಆಣೆಕಲ್ಲು, ಹಗ್ಗಜಗ್ಗಾಟ ಮುಂತಾದುವು ಜನಪದ ಕ್ರೀಡೆಗಳಾಗಿವೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಪೌರತ್ವ (ತಿದ್ದುಪಡಿ) ಮಸೂದೆ, ೨೦೧೯
ಪೌರತ್ವ (ತಿದ್ದುಪಡಿ) ಮಸೂದೆ, ೨೦೧೯, ೧೯೯೫ರ ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡುವ ಮಸೂದೆಯಾಗಿದ್ದು, ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರೈಸ್ತರಿಗೆ ಪೌರತ್ವ ನೀಡುವ ಉದ್ದೇಶವನ್ನು ಹೊಂದಿದೆ. ಆ ಆರು ಧರ್ಮದವರು ಭಾರತಕ್ಕೆ ೩೧ ಡಿಸೆಂಬರ್ ೨೦೧೪ ಅಥವಾ ಅದಕ್ಕಿಂತಲೂ ಮೊದಲು ಪ್ರವೇಶಿಸಿದವರಾಗಿದ್ದಲ್ಲಿ, ಅವರೆಲ್ಲರೂ ಭಾರತೀಯ ಪೌರತ್ವಕ್ಕೆ ಅರ್ಹರು.ಕೇಂದ್ರ ಸಚಿವ ಸಂಪುಟವು ೪ ಡಿಸೆಂಬರ್ ೨೦೧೯ ರಂದು ಮಸೂದೆಯನ್ನು ಮುಂದಿಟ್ಟಿತು. ಇದನ್ನು ಡಿಸೆಂಬರ್ ೧೦ ರಂದು ಲೋಕಸಭೆಯು ಅಂಗೀಕರಿಸಿತು ಹಾಗೂ ಡಿಸೆಂಬರ್ ೧೧ ರಂದು ರಾಜ್ಯಸಭೆಯು ಇದನ್ನು ಅಂಗೀಕಾರ ಮಾಡಿತು.
ಮಾಧ್ಯಮ ಅಥವಾ ಸಮೂಹ ಮಾಧ್ಯಮ ಎಂದು ಸಾಮಾನ್ಯವಾಗಿ ಪತ್ರಿಕೆ, ಬಾನುಲಿ ಮತ್ತು ದೂರದರ್ಶನಗಳನ್ನು ಸೇರಿಸಿ ಹೇಳುತ್ತಾರೆ. ಸಂಗೀತ, ನೃತ್ಯ, ನಾಟಕ, ಅಂತರ್ಜಾಲ ಕ್ಷೇತ್ರ, ಭಿತ್ತಿ ಚಿತ್ರ-ಪತ್ರ, ಜಾಹೀರಾತು, ಡಂಗುರ, ಸಿನಿಮಾ – ಇವುಗಳನ್ನೂ ಕೂಡ ಮಾಧ್ಯಮವನ್ನಾಗಿ ಪರಿಗಣಿಸಬಹುದು. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವು ಕಾರ್ಯನಿರ್ವಹಿಸುತ್ತದೆ.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
sneha ಕಸದ ಸಂಗ್ರಹ, ಸಾಗಣೆ, ಸಂಸ್ಕರಣೆ, ಮರುಬಳಕೆ ಅಥವಾ ವಿಲೆವಾರಿ ಹಾಗು ತ್ಯಾಜ್ಯ ವಸ್ತುಗಳ ನಿರ್ವಹಣೆಯನ್ನು ತಾಜ್ಯ ನಿರ್ವಹಣೆ ಎನ್ನುತ್ತೇವೆ.ಮಾನವನು ಬಳಸಿದ ವಸ್ತುಗಳ ಉಳಿದ ಭಾಗವನ್ನು ತ್ಯಾಜ್ಯದ ಉಗಮ ಎಂದು ಹೇಳಬಹುದು. ಈ ವ್ಯರ್ಥ ವಸ್ತುಗಳು ಮನುಷ್ಯನ ಆರೋಗ್ಯ, ಪರಿಸರ ಸೌಂದರ್ಯದ ಮೇಲೆ ಕೆಟ್ಟ ಪ್ರಭಾವ ಬೀರುತ್ತವೆ. ಇದರ ಜೊತೆಯಲ್ಲಿ ಕಸದೊಳಗಿನ ರಸ ತೆಗೆಯಲು ಕೂಡಾ ಇವು ಸಂಪನ್ಮೂಲಗಳಾಗಿ ಬಹುಮುಖ್ಯ ಪಾತ್ರ ನಿರ್ವಹಿಸುತ್ತವೆ.
== ಸರ್ವಾಂತಯಾ೯ಮಿ ಪ್ಲಾಸ್ಟಿಕ್ ಮೆದುವಾದ ಮತ್ತು ವಿವಿಧ ಆಕಾರಗಳ ಘನ ಕಾಯಗಳನ್ನು ಹೊಂದಿರುವ ಸಿಂಥಟಿಕ್ ವಸ್ತು ಪ್ಲಾಸ್ಟಿಕ್ಗಳನ್ನು ಹೆಚ್ಚಿನ ಅಣು ದ್ರವ್ಯರಾಶಿಯ ಜೈವಿಕ ಪಾಲಿಮರ್ಗಳು ಆದರೆ ಸಾಮಾನ್ಯವಾಗಿ ಇತರ ಪದಾರ್ಥಗಳುನ್ನು ಹೊಂದಿರುತ್ತದೆ. ವಿಶ್ವದಾದ್ಯಂತ ಘನ ತ್ಯಾಜ್ಯ ವಸ್ತುಗಳ ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿದೆ. ಮಿತಿಮೀರಿ ಬೆಳೆಯುತ್ತಿರುವ ಜನಸಂಖ್ಯೆ, ಅತಿ ಭರದಿಂದ ತಲೆಯೆತ್ತಿ ಮೆರೆಯುತ್ತಿರುವ ನಗರಗಳು, ತ್ಯಾಜ್ಯ ವಸ್ತುಗಳ ಹೆಚ್ಚಳಕ್ಕೆ ಮುಖ್ಯವಾದ ಕಾರಣಗಳು, ತ್ಯಾಜ್ಯ ವಸ್ತುಗಳ ವಿಲೇವಾರಿಗೆ ಇದು ದೊಡ್ಡ ಸವಾಲಾಗಿದೆ.
ಬೆಳೆಯ ಆವರ್ತನೆ, ಹಸಿರು- ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಪರಿಸರ ರಕ್ಷಣೆಯು ವ್ಯಕ್ತಿಗಳು, ಸಂಘಟನೆಗಳು ಮತ್ತು ಸರ್ಕಾರಗಳಿಂದ ನೈಸರ್ಗಿಕ ಪರಿಸರವನ್ನು ರಕ್ಷಿಸುವ ಅಭ್ಯಾಸವಾಗಿದೆ. ಅದರ ಉದ್ದೇಶಗಳು ನೈಸರ್ಗಿಕ ಸಂಪನ್ಮೂಲಗಳನ್ನು ಮತ್ತು ಅಸ್ತಿತ್ವದಲ್ಲಿರುವ ನೈಸರ್ಗಿಕ ಪರಿಸರವನ್ನು ಸಂರಕ್ಷಿಸುವುದಾಗಿದೆ ಮತ್ತು ಸಾಧ್ಯವಾದಲ್ಲಿ, ಹಾನಿ ಮತ್ತು ರಿವರ್ಸ್ ಪ್ರವೃತ್ತಿಯನ್ನು ಸರಿಪಡಿಸುವು ಗಿದೆ. ಅತಿಯಾದ ಅನುಭೊಗದ ಒತ್ತಡ, ಜನಸಂಖ್ಯಾ ಬೆಳವಣಿಗೆ ಮತ್ತು ತಂತ್ರಜ್ಞಾನದ ಕಾರಣದಿಂದ, ಜೈವಿಕ ಪರಿಸರವು ಕುಸಿಯುತ್ತಿದೆ ಕೆಲವೊಮ್ಮೆ ಶಾಶ್ವತವಾಗಿ ನಶವಗುತ್ತಿದೆ.
ಸುಭಾಷ್ ಚಂದ್ರ ಬೋಸ್ ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ.ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮುದ್ರಣಾಲಯ ಯು.ಎಸ್, ೧೯೯೬,.ಸ್ಟುವರ್ಟ್ ರೇ ಸರ್ಬ್ಯಾಕರ್, ಸಮಾಧಿ: ದ ನ್ಯೂಮಿನಸ್ ಅಂಡ್ ಸೆಸ್ಸೇಟಿವ್ ಇನ್ ಇಂಡೋ-ಟಿಬೆಟನ್ ಯೋಗ.
ವೈದ್ಯಶಾಸ್ತ್ರದಲ್ಲಿ, ಕೆಮ್ಮು ಉಸಿರಾಟದ ದೊಡ್ಡ ಸಾಗುನಾಳಗಳನ್ನು ಹೆಚ್ಚುವರಿ ರಸಗಳು, ಉದ್ರೇಕಕಾರಿಗಳು, ಬಾಹ್ಯ ಕಣಗಳು ಮತ್ತು ಸೂಕ್ಷ್ಮಜೀವಿಗಳಿಂದ ಮುಕ್ತವಾಗಿಸಲು ನೆರವಾಗುವ ಒಂದು ಹಠಾತ್ ಮತ್ತು ಹಲವುವೇಳೆ ಪುನರಾವರ್ತಿಸುವ ರಕ್ಷಣಾ ನಿರಿಚ್ಛಾ ಪ್ರತಿಕ್ರಿಯೆ. ಕೆಮ್ಮಿನ ನಿರಿಚ್ಛಾ ಪ್ರತಿಕ್ರಿಯೆಯು ಮೂರು ಹಂತಗಳನ್ನು ಒಳಗೊಳ್ಳುತ್ತದೆ: ಉಚ್ಛ್ವಾಸ, ಮುಚ್ಚಿದ ಕಂಠದ್ವಾರದ ವಿರುದ್ಧ ಬಲವಂತದ ನಿಶ್ವಾಸ, ಮತ್ತು ಕಂಠದ್ವಾರದ ತೆರೆಯುವಿಕೆಯ ತರುವಾಯ ಶ್ವಾಸಕೋಶಗಳಿಂದ ಗಾಳಿಯ ರಭಸದ ಬಿಡುಗಡೆ, ಸಾಮಾನ್ಯವಾಗಿ ವಿಶಿಷ್ಟವಾದ ಶಬ್ದದ ಸಹಿತ. ಕೆಮ್ಮು ಸ್ವಯಂಪ್ರೇರಿತವಾಗಿ ಅಥವಾ ಅನೈಚ್ಛಿಕವಾಗಿ ಆಗಬಹುದು, ಆದರೆ ಹಲವುವೇಳೆ ಅದು ಅನೈಚ್ಛಿಕವಾಗಿರುತ್ತದೆ.
ಮಳೆನೀರು ಕೊಯ್ಲು ಎಂಬುದು ಮಳೆನೀರನ್ನು ಒಟ್ಟುಗೂಡಿಸುವ, ಅಥವಾ ಸಂಚಯನ ಮಾಡುವ ಮತ್ತು ಶೇಖರಿಸಿಟ್ಟುಕೊಳ್ಳುವ ವಿಧಾನಕ್ಕಿರುವ ಹೆಸರು. ಕುಡಿಯುವ ನೀರನ್ನು ಒದಗಿಸಲು ಜಾನುವಾರುಗಳಿಗೆ ನೀರುಣಿಸಲು ನೀರಾವರಿಗಾಗಿ ನೀರಿನ ವ್ಯವಸ್ಥೆ ಮಾಡಲು ಅಥವಾ ಅಂತರ್ಜಲ ಪುನರ್ಭರ್ತಿಕಾರ್ಯ ಎಂದು ಕರೆಯಲಾಗುವ ಪ್ರಕ್ರಿಯೆಯೊಂದರಲ್ಲಿ ನೀರುಪೊಟರೆಯನ್ನು ಪುನಃ ತುಂಬಿಸಲು ಮಳೆನೀರು ಕೊಯ್ಲು ಪದ್ಧತಿಯನ್ನು ಬಳಸಿಕೊಂಡು ಬರಲಾಗಿದೆ. ಮನೆಗಳು, ಗುಡಾರಗಳು ಮತ್ತು ಸ್ಥಳೀಯ ಸಾರ್ವಜನಿಕ ಕಟ್ಟಡಗಳ ಛಾವಣಿಗಳಿಂದ ಅಥವಾ ವಿಶೇಷವಾಗಿ ಸಿದ್ಧಗೊಳಿಸಲಾದ ನೆಲದ ಪ್ರದೇಶಗಳಿಂದ ಸಂಗ್ರಹಿಸಲಾದ ಮಳೆನೀರು, ಕುಡಿಯುವ ನೀರಿಗೆ ತನ್ನದೇ ಆದ ಪ್ರಮುಖ ಕೊಡುಗೆಯನ್ನು ನೀಡಬಲ್ಲದು.