The most-visited ಕನ್ನಡ Wikipedia articles, updated daily. Learn more...
ಡಿಸೆಂಬರ್ ೧೬, ೨೦೧೨ರಂದು ಭಾರತದ ರಾಜಧಾನಿ ದೆಹಲಿಯಲ್ಲಿ ವೈದ್ಯವಿದ್ಯಾರ್ಥಿನಿಯೊಬ್ಬಳನ್ನು ಚಲಿಸುತ್ತಿದ್ದ ಬಸ್ನಲ್ಲಿ ಆರು ಮಂದಿ ದುಷ್ಕರ್ಮಿಗಳು ಕಬ್ಬಿಣದ ಸರಳಿನಿದ ಹೊಡೆಯುವ ಮೂಲಕ ದಾರುಣವಾಗಿ ಅತ್ಯಾಚಾರ ಮಾಡಿದ್ದರು. ಈ ಪೈಶಾಚಿಕ ಘಟನೆಯಿಂದಾಗಿ ದುದರ್ೈವಿ ಯುವತಿಯ ತಲೆ ಹಾಗೂ ಕರುಳಿಗೆ ತೀವ್ರವಾದ ಗಾಯಗಳುಂಟಾಗಿದ್ದವು. ೧೩ ದಿನಗಳ ಕಾಲ ಸಾವು ಬದುಕಿನೊಂದಿಗೆ ಹೋರಾಡಿದ ಯುವತಿ ಅಂತಿಮವಾಗಿ ೨೯, ಡಿಸೆಂಬರ್ ೨೦೧೨ರಂದು ಕೊನೆಯುಸಿರೆಳೆದಳು.
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ಕೊರೋನಾ ವೈರಸಗಳು (ರೋಗಾಣುಗಳು) ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಒಂಬತ್ತು ಒಕ್ಕೂಟ ಪ್ರಾಂತ್ಯಗಳು ಇವೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ತಂತಿವಾದ್ಯಗಳು ಸಂಗೀತಗಾರನು ಯಾವುದೋ ರೀತಿಯಲ್ಲಿ ತಂತಿಗಳನ್ನು ನುಡಿಸಿದಾಗ ಅಥವಾ ಬಾಜಿಸಿದಾಗ, ಕಂಪಿಸುವ ತಂತಿಗಳಿಂದ ಶಬ್ದವನ್ನು ಉತ್ಪತ್ತಿಮಾಡುವ ಸಂಗೀತ ವಾದ್ಯಗಳು. ಸಂಗೀತಗಾರರು ತಂತಿಗಳನ್ನು ತಮ್ಮ ಬೆರಳುಗಳು ಅಥವಾ ಮೀಟು ದಂತದಿಂದ ಮೀಟುವ ಮೂಲಕ ಕೆಲವು ತಂತಿವಾದ್ಯಗಳನ್ನು ನುಡಿಸುತ್ತಾರೆ, ಮತ್ತು ಇತರ ತಂತಿವಾದ್ಯಗಳನ್ನು ತಂತಿಗಳನ್ನು ಒಂದು ಹಗುರವಾದ ಕಟ್ಟಿಗೆಯ ಸುತ್ತಿಗೆಯಿಂದ ಹೊಡೆದು ಅಥವಾ ತಂತಿಗಳನ್ನು ಕಮಾನಿನಿಂದ ಉಜ್ಜಿ ನುಡಿಸುತ್ತಾರೆ. ಹಾರ್ಪ್ಸಿಕಾರ್ಡ್ನಂತಹ ಕೆಲವು ಕೀಲಿಮಣೆ ವಾದ್ಯಗಳಲ್ಲಿ, ಸಂಗೀತಗಾರನು ಒಂದು ಕೀಲಿಯನ್ನು ಒತ್ತಿದಾಗ ಅದು ತಂತಿಯನ್ನು ಮೀಟುತ್ತದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತದಲ್ಲಿ ೨೦೨೦ ಕೊರೋನಾವೈರಸ್ ಸಾಂಕ್ರಾಮಿಕ
ದೆಹಲಿ ಹರಿಯಾಣ, ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ಮತ್ತು ಉತ್ತರ ಪ್ರದೇಶಗಳಲ್ಲಿ, ಸಾಂಕ್ರಾಮಿಕ ರೋಗಗಳ ಕಾಯ್ದೆ-೧೮೯೭ ಪ್ರಕಾರ ಇದನ್ನು ಸಾಂಕ್ರಾಮಿಕ ರೋಗವೆಂದು ಘೋಷಿಸಲಾಗಿದೆ. ಶಿಕ್ಷಣ ಸಂಸ್ಥೆಗಳು ಮತ್ತು ಅನೇಕ ವಾಣಿಜ್ಯ ಸಂಸ್ಥೆಗಳು ಸ್ಥಗಿತಗೊಂಡಿವೆ. ಭಾರತವು ಎಲ್ಲಾ ಪ್ರವಾಸಿ ವೀಸಾಗಳನ್ನು ಅಮಾನತುಗೊಳಿಸಿದೆ.
ಇಂದಿರಾ ಪ್ರಿಯದರ್ಶಿನಿ ಗಾಂಧಿಇಂದಿರಾ ಪ್ರಿಯದರ್ಶಿನಿ ಗಾಂಧಿ; ನಿ: ನೆಹರು; (೧೯ ನವೆಂಬರ್ ೧೯೧೭ – ೩೧ ಅಕ್ಟೋಬರ್ ೧೯೮೪) ೧೯೬೬ರಿಂದ ೧೯೭೭ರವೆಗೆ ಸತತ ಮೂರು ಬಾರಿ ಭಾರತ ಗಣತಂತ್ರ ದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ನಾಲ್ಕನೇ ಬಾರಿ ೧೯೮೦ರಿಂದ ೧೯೮೪ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಅವರು ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಇಂದಿನವರೆಗೆ ಆ ಸ್ಥಾನ ಅವರ ಪಾಲಿನದ್ದೇ ಆಗಿದೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಮನೆಯಂಗಣದಲ್ಲಿನ ಗುಬ್ಬಚ್ಚಿಗಳು ಹಾಗೂ ಇನ್ನಿತರ ಪಕ್ಷಿಗಳ ಬಗೆಗೆ ಜನ ಜಾಗೃತಿ ಉಂಟುಮಾಡಿ ಅವುಗಳ ಸಂಕುಲಕ್ಕೆ ಉಂಟಾಗುತ್ತಿರುವ ಭೀತಿಯನ್ನು ತಡೆಗಟ್ಟುವ ಪ್ರಯತ್ನವಾಗಿ ಮಾರ್ಚ್ 20 ದಿನವನ್ನು ವಿಶ್ವ ಗುಬ್ಬಚ್ಚಿಗಳ ದಿನವಾಗಿ ಆಚರಿಸಲಾಗುತ್ತಿದೆ. ಭಾರತದ ನೇಚರ್ ಫಾರೆವರ್ ಸೊಸೈಟಿಯ ಪ್ರಮುಖ ಆಸಕ್ತಿಯ ಮೇರೆಗೆ ಪ್ರಾರಂಭಗೊಂಡಿರುವ ಈ ಆಚರಣೆಗೆ, ಫ್ರಾನ್ಸಿನ ಇಕೋ-ಸಿಸ್ ಆಕ್ಷನ್ ಫೌಂಡೆಶನ್ ಮತ್ತು ವಿಶ್ವದ ಅನೇಕ ಸಂಸ್ಥೆಗಳು ಸಹಯೋಗ ನೀಡಿವೆ.ಸಂಸ್ಥೆಯ ನಿರ್ಮಾತೃ ಮೊಹಮ್ಮದ್ ದಿಲ್ವಾರ್ ಅವರು 2010ರಲ್ಲಿ ಗುಬ್ಬಚ್ಚಿಗಳ ದಿನವನ್ನು ಜಗತ್ತಿಗೆ ಪರಿಚಯಿಸಿದರು.
ಅಟಲ್ ಬಿಹಾರಿ ವಾಜಪೇಯಿ( 25 ಡಿಸೆಂಬರ್ 1924 - 16 ಆಗಸ್ಟ್ 2018)ಯವರು ಭಾರತದ ಮಾಜಿ ಪ್ರಧಾನಮಂತ್ರಿ, ರಾಜಕಾರಣಿ, ಶ್ರೇಷ್ಠ ಸಂಸದೀಯ ಪಟು, ವಾಗ್ಮಿ, ಕವಿ, ನೇತಾರ ಹಾಗೂ ಜನನಾಯಕ. ಮೂರು ಬಾರಿ ಭಾರತದ ಪ್ರಧಾನಮಂತ್ರಿಯಾಗಿ ಇದಕ್ಕೂ ಮುಂಚೆ ವಿದೇಶಾಂಗ ಸಚಿವರಾಗಿ, ವಿರೋಧ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇವರು ತಮ್ಮ ಸಭ್ಯತೆ, ಹಾಸ್ಯಪ್ರಜ್ಞೆ, ಉದಾರ ವ್ಯಕ್ತಿತ್ವ ಮತ್ತು ನಡವಳಿಕೆಗಳಿಂದ ಅತ್ಯಂತ ಜನಪ್ರಿಯ ನಾಯಕರಾಗಿದ್ದರು.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಬಹುರಾಷ್ಟ್ರೀಯ ನಿಗಮಗಳ ಉಗಮ ಮತ್ತು ಬೆಳವಣಿಗೆಯು ದ್ವಿತೀಯ ಜಾಗತಿಕ ಮಹಾಯುದ್ಧದ ನಂತರದ ವಿದ್ಯಮಾನವಾಗಿದೆ. ಬಹುರಾಷ್ಟ್ರೀಯ ನಿಗಮಗಳು ಇಂದು ಜಗತ್ತಿನಲ್ಲಿ ಅತ್ಯಂತ ಪ್ರಮುಖ ಸ್ಥಾನವನ್ನು ಹೊಂದಿದೆ. ಜಗತ್ತಿನ ಒಟ್ಟು ಉತ್ಪಾದನೆಯಲ್ಲಿ ಸುಮಾರು ಶೇ.೩೦ ರಷ್ಟನ್ನು ಬಹುರಾಷ್ಟ್ರೀಯ ನಿಗಮಗಳು ಉತ್ಪಾದಿಸುತ್ತಿವೆ ಎಂಬ ಅಂಶವನ್ನು ಗಮನಿಸಿದರೆ ವಿಶ್ವ ಆರ್ಥಿಕತೆಯಲ್ಲಿ ಅವುಗಳ ಮಹತ್ವ ಅರಿವಿಗೆ ಬರುತ್ತದೆ.
ಪಿ.ಲಂಕೇಶ್, ಕನ್ನಡದ ಖ್ಯಾತ ಸಾಹಿತಿಗಳಲ್ಲೊಬ್ಬರು ಹಾಗೂ ಲಂಕೇಶ್ ಪತ್ರಿಕೆಯ ಸ್ಥಾಪಕ ಸಂಪಾದಕರು. ಕವಿ, ಕಥೆಗಾರ, ಕಾದಂಬರಿಕಾರ, ಅಂಕಣಕಾರ, ನಾಟಕಕಾರ, ನಟ, ನಿರ್ದೇಶಕ -ಹೀಗೆ ಬಹುಮುಖ ವ್ಯಕ್ತಿತ್ವವನ್ನು ಹೊಂದಿದವರು.ಇದು ಪತ್ರಿಕೋದ್ಯೋಗಿಯಾಗಿ ಹೆಸರು ಮಾಡಿರುವ ಲಂಕೇಶರು ಪ್ರಸಿದ್ದಿ ಪಡೆದದ್ದು ನಾಟಕಕಾರರಾಗಿ.ನಾಟಕ ಕ್ಷೇತ್ರಕ್ಕೆ ಅವರು ಕೊಟ್ಟಿರುವ ನಾಟಕಗಳು ಅನೇಕಇವರು u.
ಪರಿಸರವನ್ನು ಕಲುಷಿತಗೊಳಿಸುವ,(environmental pollution) ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಕರ್ನಾಟಕ ವಿಧಾನಸಭೆ ಚುನಾವಣೆ, ೨೦೧೮
ಕರ್ನಾಟಕ ವಿಧಾನಸಭೆಯು 224 ಸದಸ್ಯರ ಸದಸ್ಯ ಬಲವನ್ನು ಹೊಂದಿದೆ. 224 ಸದಸ್ಯ ಬಲವುಳ್ಳ 15 ನೇ ಕರ್ನಾಟಕ ವಿಧಾನಸಭೆಯ 222ವಿಧಾನಸಭಾ ಕ್ಷೇತ್ರಗಳಿಗೆ 12 ಮೇ 2018 ಶನಿವಾರ ಚುನಾವಣೆ ನೆಡೆಯಿತು. ಜಯನಗರ ಬಿಜೆಪಿ ಶಾಸಕ ವಿಜಯ್ ಕುಮಾರ್ 2-5-2018 ರಂದು ನಿಧನರಾದ್ದರಿಂದ ಮತ್ತು ರಾಜರಾಜೇಶ್ವರಿ ನಗರದಲ್ಲಿ ಮತದಾರರ ವಂಚನೆ ಹಗರಣದ ನಂತರ, ಈ ಎರಡು ಕ್ಷೇತ್ರಗಳ ಚುನಾವಣೆ ಮುಂದೂಡಲ್ಪಟ್ಟಿತು.
ಅಸುರರು ಅಧಿಕಾರಕ್ಕಾಗಿ ಹೆಚ್ಚು ದಯಾಳು ದೇವರೊಡನೆ (ಸುರರು ಎಂದೂ ಕರೆಯಲಾಗುತ್ತದೆ) ಸ್ಪರ್ಧಿಸುವ ಭಾರತೀಯ ಪಠ್ಯಗಳಲ್ಲಿನ ಪೌರಾಣಿಕ ಜೀವಿಗಳು. ಭಾರತೀಯ ಪಠ್ಯಗಳಲ್ಲಿ ಅಸುರರನ್ನು ಒಳ್ಳೆ ಅಥವಾ ಕೆಟ್ಟ ಗುಣಗಳಿರುವ ಬಲಿಷ್ಠ ಅತಿಮಾನುಷ ದೇವಮಾನವರು ಅಥವಾ ರಾಕ್ಷಸರು ಎಂದು ವರ್ಣಿಸಲಾಗಿದೆ. ಒಳ್ಳೆ ಅಸುರರನ್ನು ಆದಿತ್ಯರು ಎಂದು ಕರೆಯಲಾಗುತ್ತದೆ ಮತ್ತು ಇವರ ಮುಖಂಡ ವರುಣ, ದುಷ್ಟ ಅಸುರರನ್ನು ದಾನವರು ಎಂದು ಕರೆಯಲಾಗುತ್ತದೆ ಮತ್ತು ಇವರ ಮುಖಂಡ ವೃತ್ರ.
ಬೆಳೆಯ ಆವರ್ತನೆ, ಹಸಿರು- ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣ ವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. 1990 ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು 2007 ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಮಾನವ ಹಕ್ಕುಗಳು ಭಾರತದಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿಯು (ವಸ್ತುಸ್ಥಿತಿ) ಬಹಳ ಸಂಕೀರ್ಣ ರಚನೆಯಾಗಿದೆ. ಕಾರಣವೆಂದರೆ ದೇಶದ ವಿಶಾಲವಾದ ಭೂ ಭಾಗ ಮತ್ತು ಅತ್ಯದ್ಭುತ ವೈವಿಧ್ಯತೆಯ ಪರಿಣಾಮವಾಗಿ, ಇದರ ಸ್ಥಾನವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರದ ನೀತಿ ಮತ್ತು ಈ ದೇಶದ ಸಾರ್ವಭೌಮತ್ವ, ಸಾಮಾಜಿಕ ಸಮಾನತೆ, ಪ್ರಜಾತಂತ್ರ ಗಣರಾಜ್ಯ ರಾಷ್ಟ್ರವಾಗಿದ್ದು, ಮತ್ತು ಇತಿಹಾಸವನ್ನು ದಾಖಲಿಸಿದ್ದ ಹಳೆಯ ವಸಾಹತುಶಾಹಿ ಪ್ರಾಂತ್ಯಗಳಂತಿದೆ. ಭಾರತದ ಸಂವಿಧಾನವು ಮೂಲಭೂತ ಹಕ್ಕುಗಳ ನೀಡಿಕೆಯ ಜೊತೆ, ಧಾರ್ಮಿಕ ಸ್ವಾತಂತ್ರ್ಯವನ್ನೂ ಒದಗಿಸಿಕೊಟ್ಟಿದೆ.
ಕ್ಯಾನ್ಸರ್ (/ˈkænsə(r)/ ( listen)ವೈದ್ಯಕೀಯ ಪದಗಳಲ್ಲಿ:ಮಾಲಿಗಂಟ್ (ಕೇಡು ತರುವ)ನಿಯೊಪ್ಲಾಸ್ಮ್ (ಊತದ ಗೆಡ್ಡೆ),ಇದನ್ನು ಅರ್ಬುದ ರೋಗ ಎಂದು ಕರೆಯುತ್ತಾರೆ.ಇದರಲ್ಲಿ ಕೋಶಗಳ ಒಂದು ಸಮೂಹವು ಅನಿಯಂತ್ರಿತ ಬೆಳವಣಿಗೆ ಯನ್ನು ತೋರಿಸುತ್ತವೆ.ಅಂದರೆ ಸಾಮಾನ್ಯಕ್ಕಿಂತಲೂ ಮಿತಿಮೀರಿದ ಕೋಶಗಳ ವಿಭಜನೆ),ಅಂಗಾಂಶಗಳ ಮೇಲೆ ದುರಾಕ್ರಮಣ (ಶರೀರದ ಒಂದು ಭಾಗದಲ್ಲಿ ಇದು ಕಾಣಿಸಿಕೊಂಡರೆ ಅಕ್ಕಪಕ್ಕದ ಕೋಶಗಳನ್ನು ನಾಶಪಡಿಸುತ್ತದೆ).ಇದು ಹಲವು ಬಾರಿ ದೇಹದ ಇತರ ಭಾಗಗಳಿಗೆ ವೇಗವಾಗಿ ಪಸರಿಸು ತ್ತದೆ.(ರಕ್ತ ಅಥವಾ ಕೀವುಗಳಂತಹ ಮಲಿನ ದ್ರವಗಳ ಮೂಲಕ ದೇಹದ ಎಲ್ಲೆಡೆಯೂ ಹಬ್ಬಿಕೊಳ್ಳುತ್ತದೆ.) ಕ್ಯಾನ್ಸರ್ ನ ಹಾನಿಕಾರಕ ಲಕ್ಷಣಗಳು ಇತರೆ ಸಾಮಾನ್ಯ ಗೆಡ್ಡೆಗಳು,ಅಂದರೆ ತಾವೇ ತಾವಾಗಿ ಹುಟ್ಟಿಕೊಂಡವುಗಳು ಸ್ವಯಂ ಮಿತಿಗೊಳಪಟ್ಟವುಗಳು ಇತರ ಅಂಗಾಂಶಗಳ ಮೇಲೆ ಆಕ್ರಮಣ ಅಥವಾ ನಾಶಮಡುವ ಪ್ರವೃತ್ತಿಯು ಕ್ಯಾನ್ಸರ್ ಗಿಂತ ಭಿನ್ನವಾಗಿದೆ. ಲುಕೆಮಿಯಾ ಕೂಡಾ ನಾಲ್ಕು ಕ್ಯಾನ್ಸರ್ ಗಳಲ್ಲಿ ಒಂದಾದರೂ ಇದು ಊತದ ಗೆಡ್ದೆಯ ಲಕ್ಷಣ ಹೊಂದಿರುವದಿಲ್ಲ. ವೈದ್ಯಕೀಯ ವಿಜ್ಞಾನದಲ್ಲಿ ಇದರ ಅಧ್ಯಯನ,ರೋಗ ನಿದಾನ ಪತ್ತೆ,ಚಿಕಿತ್ಸೆ ಮತ್ತು ಕ್ಯಾನ್ಸರ್ ನಿರ್ಮೂಲನೆಯ ಅಂಶಗಳನ್ನು ಹೊಂದಿರುವ ವೈದ್ಯಕೀಯ ಶಾಖೆಯನ್ನು ಆಂಕಾಲಜಿ ಎಂದು ಕರೆಯುತ್ತಾರೆ.
ಪಾಟೀಲ ಪುಟ್ಟಪ್ಪ (೧೯೨೧ ಜನವರಿ ೧೪ - ಮಾರ್ಚ್ ೧೬, ೨೦೨೦) ಭಾರತೀಯ ಬರಹಗಾರ, ಅನುಭವಿ ಪತ್ರಕರ್ತ ಮತ್ತು ಹುಬ್ಬಳ್ಳಿ ಮೂಲದ ಕಾರ್ಯಕರ್ತರಾಗಿದ್ದರು. ಕನ್ನಡ ದಿನಪತ್ರಿಕೆ ವಿಶ್ವವಾಣಿ ಸ್ಥಾಪಕ-ಸಂಪಾದಕರಾಗಿದ್ದರು.ಪುಟ್ಟಪ್ಪ, 1940 ಮತ್ತು 1950 ರ ದಶಕದ ಅಂತ್ಯದಲ್ಲಿ ಕನ್ನಡಿಗರು ಬಹುಸಂಖ್ಯಾತರಾಗಿದ್ದ ಪ್ರದೇಶಗಳನ್ನು ಏಕೀಕರಿಸುವಂತೆ ಒತ್ತಾಯಿಸಿ ಆಂದೋಲನದಲ್ಲಿ ಮುಂಚೂಣಿಯಲ್ಲಿದ್ದರು. ಅವರು ಧಾರವಾಡ ಮೂಲದ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿದ್ದರು.
ಕರ್ಕೋಟಕ ಎಂಟು ಮಂದಿ ಸರ್ಪರಾಜರಲ್ಲಿ ಒಬ್ಬ. ದಕ್ಷಬ್ರಹ್ಮನ ಮಗಳಾದ ಕದ್ರು ಹಾಗೂ ಕಶ್ಯಪರ ಮಗ. ನಿಷಧ ದೇಶಾಧಿಪತಿ ನಳ ಚಕ್ರವರ್ತಿ ಪುಷ್ಕರನೊಡನೆ ಜೂಜಾಡಿ ರಾಜ್ಯಭ್ರಷ್ಟನಾಗಿ ಕಾಡು ಸೇರಿ ತನ್ನ ಪತ್ನಿ ದಮಯಂತಿಯನ್ನು ಅಗಲಿ ಹೋಗುತ್ತಿದ್ದಾಗ ನಾರದರ ಶಾಪದಿಂದ ದಾವಾಗ್ನಿಯಲ್ಲಿ ಬಿದ್ದು ಸುಟ್ಟು ಹೋಗುತ್ತಿದ್ದ ಕರ್ಕೋಟಕ ನಳನನ್ನು ಕಂಡು ತನ್ನನ್ನು ದಾವಾಗ್ನಿಯಿಂದ ತಪ್ಪಿಸಿದರೆ ಪ್ರತ್ಯುಪಕಾರ ಮಾಡುವುದಾಗಿ ತಿಳಿಸಲು ನಳ ಮರುಕಗೊಂಡು ಕರ್ಕೋಟಕನನ್ನು ಜ್ವಾಲೆಯಿಂದ ಹೊರಕ್ಕೆ ತೆಗೆದ.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ.ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮುದ್ರಣಾಲಯ ಯು.ಎಸ್, ೧೯೯೬,.ಸ್ಟುವರ್ಟ್ ರೇ ಸರ್ಬ್ಯಾಕರ್, ಸಮಾಧಿ: ದ ನ್ಯೂಮಿನಸ್ ಅಂಡ್ ಸೆಸ್ಸೇಟಿವ್ ಇನ್ ಇಂಡೋ-ಟಿಬೆಟನ್ ಯೋಗ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.