The most-visited ಕನ್ನಡ Wikipedia articles, updated daily. Learn more...
ಜಲಿಯನ್ವಾಲಾ ಬಾಗ್ ಹತ್ಯಾಹಾಂಡ (ಅಥವಾ ಅಮೃತಸರ ಹತ್ಯಾಹಾಂಡ) - ಅಮೃತಸರದಲ್ಲಿರುವ ಜಲಿಯನ್ವಾಲಾ ಬಾಗ್ ಉದ್ಯಾನದಲ್ಲಿ ಏಪ್ರಿಲ್ ೧೩, ೧೯೧೯ರಂದು ಬ್ರಿಟೀಷ್ ಭಾರತ ಸೇನೆಯಿಂದ ಅಲ್ಲಿ ನೆರೆದಿದ್ದ ಗಂಡಸರು, ಹೆಂಗಸರು, ಮಕ್ಕಳೆಲ್ಲರ ಮೇಲೆ ನಡೆಸಿದ ಗುಂಡಿನ ದಾಳಿಯ ಪರಿಣಾಮವಾಗಿ ನಡೆದ ಮಾರಣಹೋಮ. ಅಧಿಕೃತ ಮೂಲಗಳ ಪ್ರಕಾರ ಸಾವಿಗೀಡಾದವರ ಸಂಖ್ಯೆ ೩೭೯. ಖಾಸಗಿ ಮೂಲಗಳ ಪ್ರಕಾರ ಸಾವಿಗೀಡಾದವರ ಸಂಖ್ಯೆ ಸಾವಿರಕ್ಕೂ ಹೆಚ್ಚು ಹಾಗು ಗಾಯಗೊಂಡವರ ಸಂಖ್ಯೆ ೧೨೦೦ಕ್ಕೂ ಹೆಚ್ಚು., ಮತ್ತು ಸಿವಿಲ್ ಶಸ್ತ್ರಚಿಕಿತ್ಸಾ ತಜ್ಞ ಡಾ.ಸ್ಮಿತ್ ನೀಡಿದ ಮಾಹಿತಿಯ ಪ್ರಕಾರ, ಸಾವಿಗೀಡಾದವರು ೧೮೦೦ಕ್ಕೂ ಹೆಚ್ಚು.
ಜಲಿಯನ್ ವಾಲಾ ಬಾಗ್(Hindi: जलियांवाला बाग) ಎನ್ನುವ ಹೆಸರು ಪ್ರತೀ ಭಾರತೀಯರನ್ನು ಬೆಚ್ಚಿ ಬೀಳಿಸುವಂತಹ ಹೆಸರು, ಬ್ರಿಟಿಷರ ಕಾಲದಲ್ಲಿ ನಡೆದ ನರಮೇಧವೇ ಇದಕ್ಕಿರುವ ಕಾರಣ. ಸುಮಾರು ಆರುವರೆ ಎಕರೆ ಪ್ರದೇಶದಲ್ಲಿ ವಿಶಾಲವಾಗಿ ಹರಡಿರುವ ಜಲಿಯನ್ ವಾಲಾ ಬಾಗ್ ಈಗ ಸಾರ್ವಜನಿಕ ಉದ್ಯಾನವನವಾಗಿದ್ದು ಭಕ್ತಿ ಪರವಶತೆಗೆ ಹೆಸರಾಗಿರುವ ಪಂಜಾಬಿನ ಅಮೃತಸರ ನಗರದಲ್ಲಿದೆ. ರಾಷ್ಟೀಯ ಮಟ್ಟದಲ್ಲಿ ಪ್ರಾಮುಖ್ಯತೆ ಪಡೆದಿರುವ ಈ ಸ್ಮಾರಕ ಸ್ಥಳವನ್ನು ಪಂಜಾಬ್ ರಾಜ್ಯೋತ್ಸವದ ದಿನವಾದ 13 ಎಪ್ರಿಲ್, 1961ರಂದು ಅಂದಿನ ರಾಷ್ಟ್ರಪತಿ ಡಾ.
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
{{#if:| ಕೊಡಗು ಜಿಲ್ಲೆ, ಕರ್ನಾಟಕ ರಾಜ್ಯ ದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಹಸಿರು ವನರಾಶಿಯಿಂದ, ತೊರೆ, ಝರಿ, ನದಿಗಳಿಂದ ಕೂಡಿದ ಪರಿಸರದಲ್ಲಿದೆ. ಅದರ ಬಗ್ಗೆ ಹಲವಾರು ಕನ್ನಡ ಕವಿಗಳು ವರ್ಣಿಸಿದ್ದಾರೆ. ಎಲ್ಲಿ ಭೂರಮೆ ದೇವ ಸನ್ನಿಧಿ ಬಯಸಿ ಬಿಮ್ಮನೆ ಬಂದಳೋ ಎಲ್ಲಿ ಮೋಹನ ಗಿರಿಯ ಬೆರಗಿನ ರೂಪಿನಿಂದಲಿ ನಿಂದಳೋ ಎಲ್ಲಿ ಮುಗಿಲಲಿ ಮಿಂಚಿನೋಲ್ ಕಾವೇರಿ ಹೊಳೆ ಹೊಳೆ ಹೊಳೆವಳೋ ಎಲ್ಲಿ ನೆಲವನು ತಣಿಸಿ ಜನಮನ ಹೊಲದ ಕಳೆ ಕಳೆ ಕಳೆವಳೋ ಅಲ್ಲೆ ಆ ಕಡೆ ನೋಡಲಾ ಅಲ್ಲೆ ಕೊಡಗರ ನಾಡಲಾ ಅಲ್ಲೆ ಕೊಡಗರ ಬೀಡಲಾ ಭೂಲಕ್ಷ್ಮಿಯು ದೇವರ ಸನ್ನಿಧಾನದಲ್ಲಿರಬೇಕೆಂಬ ಬಯಕೆಯಿಂದ ಗಂಭೀರ-ವೈಯಾರದಿಂದ ಬಂದು ನೆಲೆಸಿದ ಕ್ಷೇತ್ರ; ಭೂಮಿಯನ್ನು ತಣಿಸಿ ಜನರಿಗೆ ಅನ್ನವನ್ನೀಯುವ ಕಾವೇರಿ ಹುಟ್ಟಿ ಹರಿಯಲಾರಂಭಿಸುವ ಪ್ರದೇಶ ಕೊಡಗು ಎಂದು ಕವಿವರ್ಯ ಪಂಜೆ ಮಂಗೇಶರಾಯರು ತಮ್ಮ ಹುತ್ತರಿ ಹಾಡು ಎಂಬ ಪದ್ಯದಲ್ಲಿ ಬಣ್ಣಿಸಿದ್ದಾರೆ. .
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಒಂಬತ್ತು ಒಕ್ಕೂಟ ಪ್ರಾಂತ್ಯಗಳು ಇವೆ.
ನ್ಯಾಯ ವಿಜ್ಞಾನ (ಇಂಗ್ಲಿಷ್ನಲ್ಲಿ ಫರೆನ್ಸಿಕ್ ಸೈನ್ಸ್ ಎಂದು ಕರೆಯಲ್ಪಡುವ ಇದನ್ನು ಅನೇಕ ವೇಳೆ ಫರೆನ್ಸಿಕ್ಸ್ ಎಂಬುದಾಗಿ ಮೊಟಕುಗೊಳಿಸಲ್ಪಟ್ಟಿದೆ) ಎಂಬುದು ಒಂದು ಕಾನೂನು ವ್ಯವಸ್ಥೆಗೆ ಸಂಬಂಧಿಸಿದ ಹಿತಾಸಕ್ತಿಯ ಪ್ರಶ್ನೆಗಳನ್ನು ಉತ್ತರಿಸಲು ಅನ್ವಯಿಸಲಾಗುವ ವಿಜ್ಞಾನಗಳ ಒಂದು ವ್ಯಾಪಕ ಶ್ರೇಣಿಯಾಗಿದೆ. ಇದು ಒಂದು ಅಪರಾಧ ಅಥವಾ ಒಂದು ನಾಗರಿಕ ಕ್ರಮಕ್ಕೆ ಸಂಬಂಧಿಸಿರಬಹುದು. ಕಾನೂನು ವ್ಯವಸ್ಥೆಯೊಂದಕ್ಕೆ ಇದು ಹೊಂದಿರುವ ಪ್ರಸ್ತುತತೆಯ ಜೊತೆಜೊತೆಗೆ, ವಿದ್ವತ್ಪೂರ್ಣ ಅಥವಾ ವೈಜ್ಞಾನಿಕ ವಿಧಾನಶಾಸ್ತ್ರ ಹಾಗೂ ರೂಢಮಾದರಿಗಳನ್ನು ನ್ಯಾಯ ವಿಜ್ಞಾನ ವು ಒಳಗೊಳ್ಳುತ್ತದೆ; ಈ ವಿಧಾನಶಾಸ್ತ್ರ ಹಾಗೂ ರೂಢಮಾದರಿಗಳ ಅಡಿಯಲ್ಲಿ, ಮನುಷ್ಯನಿರ್ಮಿತವಿರಬಹುದಾದ, ಅಥವಾ ಬೇರಿನ್ನಾವುದೋ ಭೌತಿಕ ವಸ್ತುವಾಗಿರಬಹುದಾದ (ಒಂದು ಕಳೇಬರದಂಥ ವಸ್ತು) ಒಂದು ಘಟನೆಗೆ ಸಂಬಂಧಿಸಿದ ವಾಸ್ತವಾಂಶಗಳನ್ನು ನಿದರ್ಶನವಾಗಿರುವ ರೀತಿಯಲ್ಲಿ ಕಂಡುಹಿಡಿಯಲಾಗುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ಪಾಂಡವರು ಮಹಾಭಾರತದಲ್ಲಿ ಕಂಡುಬರುವ ಪಾತ್ರಗಳು - ಪಾಂಡು ಹಾಗೂ ಕುಂತಿ-ಮಾದ್ರಿಯರ ಮಕ್ಕಳು.ಪಾಂಡುವಿನ ಮಕ್ಕಳಾದ್ದರಿಂದ ಪಾಂಡವರೆಂದು ಕರೆಯಲ್ಪಟ್ಟರು.ಪಾಂಡವರು ಐದು ಜನ.ಐದು ಜನಕ್ಕೂ ಒಬ್ಬಳೇ ಪತ್ನಿ ದ್ರೌಪದಿ. ಕುಂತಿಯ ಮಕ್ಕಳು: ಯುಧಿಷ್ಠಿರ (ಯಮನಿಂದ) ಭೀಮ (ವಾಯುವಿನಿಂದ) ಅರ್ಜುನ (ಇಂದ್ರನಿಂದ)ಮಾದ್ರಿಯ ಮಕ್ಕಳು:(ಅವಳಿಗಳು) ನಕುಲ (ಅಶ್ವಿನಿ ದೇವತೆಗಳಿಂದ) ಸಹದೇವ (ಅಶ್ವಿನಿ ದೇವತೆಗಳಿಂದ)ಪಾಂಡವರ ಪತ್ನಿ ದ್ರೌಪದಿ. ಮಹಾಭಾರತದ ಕಥೆಯಂತೆ, ಪಾಂಡವರು ಮತ್ತು ಅವರ ದಾಯಾದಿಗಳಾದ ಕೌರವರ ನಡುವೆ ಹಸ್ತಿನಾಪುರದ ಸಿಂಹಾಸನದ ಬಗೆಗಿನ ವಿವಾದ ಏಳುತ್ತದೆ.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದೆ ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ)
ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ:GST) 2016:(Goods and Services Tax Bill or GST Bill 2016) ಭಾರತದ ತೆರಿಗೆ ವ್ಯವಸ್ಥೆಯಲ್ಲಿ ತೆರಿಗೆ ಸುಧಾರಣಾ ಕ್ರಮವಾಗಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯವಸ್ಥೆಯು ದಿ.1 ಜುಲೈ, 2017 ಮಧ್ಯರಾತ್ರಿಯಿಂದಲೇ ದೇಶದಾದ್ಯಂತ ಜಾರಿಗೆ ಬಂದಿದೆ. ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಮಧ್ಯರಾತ್ರಿ 12 ಗಂಟೆಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಗುಂಡಿ ಒತ್ತುವ ಮೂಲಕ ಹೊಸ ತೆರಿಗೆ ವ್ಯವಸ್ಥೆಗೆ ಚಾಲನೆ ನೀಡಿದರು. |} ಸರಕು ಮತ್ತು ಸೇವಾ ತೆರಿಗೆ ಬಿಲ್ ಅಥವಾ ಜಿ.ಎಸ್.ಟಿ ಮಸೂದೆ (ಬಿಲ್) (ಹಿಂದಿ: वस्तु एवं सेवा कर विधेयक), ಅಧಿಕೃತವಾಗಿ ಇದು ಸಂವಿಧಾನದ (ನೂರಾ ಇಪ್ಪತ್ತೆರಡನೇ ತಿದ್ದುಪಡಿ) ಮಸೂದೆ, 2014 ಎಂದು ಪ್ರಸ್ತಾಪಿಸಿದೆ.
ದರ್ಶನ್ (ಜನನ 16 ಫೆಬ್ರವರಿ 1977), ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮದಲ್ಲಿ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟ ತೂಗುದೀಪ ಶ್ರೀನಿವಾಸ್ ಅವರ ಮಗ, ದರ್ಶನ್ ಅವರ ನಟನಾ ವೃತ್ತಿಯನ್ನು 1990 ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು . ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.
ಬ್ರಿಟೀಷರಿಂದ ಆರಂಭಿಸಲ್ಪಪಟ್ಟ ಹಿಂದೂ 'ವೈಯಕ್ತಿಕ ಕಾನೂನಿನ ಸುಧಾರಣೆ ಮತ್ತು ಕ್ರೂಢೀಕರಣ' ಪ್ರಕ್ರಿಯೆಯು,೧೯೪೭ರಲ್ಲಿ ಭಾರತ ಸ್ವಾತಂತ್ರವಾದ ಮೇಲೆ ವಸಾಹತುಶಾಹಿನಂತರದ ಸರ್ಕಾರದ ಪ್ರಧಾನ ಮಂತ್ರಿಯಾದ ಜವಹರಲಾಲ್ ನೆಹರು ನೇತ್ರುತ್ವದಲ್ಲಿ ಸಂಪೂರ್ಣಗೊಂಡಿತು.ಹಸ್ತಕ್ಷೇಪ ಮಾಡದಿರುವ ಬ್ರಿಟಿಷ್ ನೀತಿಯ ಪ್ರಕಾರ, ವೈಯಕ್ತಿಕ ಕಾನೂನಿನ ಸುಧಾರಣೆಯು ಹಿಂದೂ ಸಮುದಾಯದಲ್ಲಿ ಹುಟ್ಟಿದಂತಹ ಬೇಡಿಕೆಯಾಗಿತ್ತು.ಇದು ಆಗಿನ ಸಂಗತಿಯಾಗಿರಲಿಲ್ಲ,ಆ ವೇಳೆಗೆ ಮಹತ್ವವಾದ ವಿರೋಧವು ವಿವಿಧ ಹಿಂದೂ ರಾಜಕಾರಣಿಗಳು,ಸಂಘಟನೆಗಳು ಮತ್ತು ಧಮ೯ಭಕ್ತರುಗಳಿಂದ ವ್ಯಕ್ತವಾಗಿ,ಅನ್ಯಾಯಯುತವಾದದ್ದೆಂದು ಅವರು ಹಿಂದೂ ಸಮುದಾಯದಿಂದ ತಮ್ಮನ್ನು ತಾವು ಬೇಪ೯ಡಿಸಿಕೊಂಡರು ಆದ ಕಾರಣ ಕಾನೂನುಗಳ ಸುಧಾರಣೆಯಾಗಬೇಕಿತ್ತು.ಹೇಗಾದರೂ,ಏಕರೂಪತೆ ಎಂಬುದು ಆದಶ೯ಪ್ರಾಯ ರಾಷ್ಟ್ರದ ಮೊದಲ ಹೆಜ್ಜೆ,ಹೀಗಾಗಿ 'ಕ್ರೂಢಿಕರಣವು' ಹಿಂದೂ ಸಮುದಾಯವನ್ನು ಒಗ್ಗೂಡಿಸುವ ಸಲುವಾಗಿ ಅಗತ್ಯವಾದದ್ದು ಎಂದು ನೆಹರು ಆಡಳಿತವು ಕಂಡುಕೊಂಡಿತು.೧೯೫೫-೫೬ರಲ್ಲಿ ಅವರು ನಾಲ್ಕು ಹಿಂದೂ ಕೋಡ್ ಬಿಲ್ಸ್ ಗಳನ್ನು ಜಾರಿಗೊಳಿಸುವಲ್ಲಿ ಯಶಸ್ವಿಯಾದರು.ಅವುಗಳೆಂದರೆ- (೧)ಹಿಂದೂ ವಿವಾಹ ಕಾಯ್ದೆ (೨)ಹಿಂದೂ ಅನುಪೂವಿ೯ ಅಥವಾ ಅನುಕ್ರಮ ಕಾಯ್ದೆ (೩)ಹಿಂದೂ ಅಲ್ಪಸಂಖ್ಯಾತ ಮತ್ತು ಗಾಡ್೯ನ್ ಶಿಫ್ ಕಾಯ್ದೆ (೪)ಹಿಂದೂ ದತ್ತು ಸ್ವೀಕಾರ ಮತ್ತು ಜೀವನಾಂಶಕಾಯ್ದೆ ಈ ಕಾಯ್ದೆಗಳು ಸ್ತ್ರೀಯರ,ಧಾಮಿ೯ಕ ಮತ್ತು ರಾಷ್ಟ್ರೀಯವಾದಿ ಗುಂಪುಗಳಿಗೆ ಸಂಬಂಧಿಸಿದಂತೆ ಇಂದಿಗೂ ಸಹ ವಿವಾದಾತ್ಮಕವಾಗಿವೆ. ಹಿನ್ನೆಲೆ ಹಿಂದೂಧಮ೯ದ ಜೀವನಸ್ವರೂಪದ ಬಗ್ಗೆ ಬಹಳ ವ್ಯಾಪಕವಾದ ಕೆಲವು ಶಾಶ್ವತವಾದ ನಿಧಿ೯ಷ್ಟ ಮೂಲಭೂತ ನಂಬಿಕೆಗಳು ಇರಬಹುದು.ಹೀಗಾಗಿ ಹಿಂದೂ ಕಾನೂನುಗಳು ಹೆಚ್ಚು ಏಕರೂಪವಾಗಿಲ್ಲದ್ದು.ವಿದ್ವಾಂಸರಾದ ಡೆರೆಟ್ ರವರ ಗ್ರಂಥವಾದ "ಹಿಂದೂ ಕಾನೂನು"ನಲ್ಲಿ ಉಲ್ಲೇಖಿತವಾಗಿದ್ದು-"ನಾವು ಹಿಂದೂಗಳನ್ನು ಗುರುತಿಸುವುದಾದರೆ,ಭೂಮಿಯ ಅಂತ್ಯಭಾಗದಿಂದ ಸಂಗ್ರಹಿಸಲ್ಪಟ್ಟಿರಬಹುದಾದ ಮನುಷ್ಯ ಜೀವಿಗಳ ವೈವಿಧ್ಯಮಯವಾದ ಜೀವನ ಕ್ರಮ,ಮನೋವಿಜ್ಞಾನ,ಹವ್ಯಾಸ,ಮತ್ತು ಕಸುಬು ಮುಂತಾದ ಮಾನವ ಸಮುದಾಯದ ವಿಭಿನ್ನ ಸ್ವರೂಪದ ಆಧಾರದ ಮೇಲೆ ಹಿಂದೂಗಳೆಂದು ವಿವರಿಸಿದ್ದಾರೆ.ಹಾಗೆಯೇ ಧಮ೯ಶಾಸ್ತ್ರವು ಕೆಲೊವೊಂದು ಗ್ರಾಂಥಿಕ ವಿಷಯಗಳ ಮೇಲೆ ಹಿಡಿತವನ್ನು ಹೊಂದಿದೆ ಅವುಗಳಂದರೆ ವಿವಾಹ,ದತ್ತುಸ್ವೀಕಾರ,ಅಲ್ಪಸಂಖ್ಯಾತರು,ಅನುಕ್ರಮ ಹಕ್ಕುದಾರಿಕೆ,ಧಾಮಿ೯ಕ ದತ್ತಿಗಳು ಮತ್ತು ಜಾತಿ ಸವಲತ್ತುಗಳು ಮುಂತಾದ ಖಾಸಗಿ ಕಾನೂನುಗಳಲ್ಲಿ ಹಿಂದೂ ಧಮ೯ ವಿಚಾರಗಳನ್ನು ಕಾಣಬಹುದು.ಹೇಗಾದರೂ,ಹಿಂದೂ ಕಾನೂಗಳ ಅಸಮಂಜಸ ನಿಯಮಗಳನ್ನು ಹೆಸರಿಸುವುದು ಮತ್ತು ವಣಿ೯ಸುವುದು ಕಷ್ಟಸಾಧ್ಯವಾಗಿದ್ದು,ಬೇರೆ ವಿಚಾರಗಳಿಗೆ ಸಂಬಂಧಿಸಿದಂತೆ ಹಿಂದೂ ಕಾನೂನುಗಳು ಕಲಬೆರಕೆಗಳಿಂದಾದ ನಿಯಮಗಳು,ಸಾಮರಸ್ಯವಿಲ್ಲದೆ ಅಪೈಪೋಟಿಯುತವಾಗಿವೆ.ಹೀಗಾಗಿ ಹಿಂದೂ ಕಾನೂಗಳ ಏಕಪ್ರಕಾರತೆಯಲ್ಲಿ ಕೊರತೆಯನ್ನು ಕಾಣಬಹುದು. ಹಿಂದೂ ಕಾನೂನುಗಳ ವಿಷಯ ಮತ್ತು ರಚನೆಯು ಅಂತಿಮವಾಗಿ ಬ್ರಿಟೀಷರ ಆಡಳಿತ ಕಾಲದಲ್ಲಿ ರಕ್ಷಣೆಗೆ ಬಂದು,ಅವರ ಬಹಳಷ್ಟು ಗಮನ ಹಿಂದೂ ಧಾಮಿ೯ಕ ಕಾನೂನು ಗ್ರಂಥಗಳ ಮೇಲಾಗಿ ಏಕಕಾಲದಲ್ಲಿ ಇಂಗ್ಲಿಷ್ ಕಾಯ೯ವಿಧಾನವನ್ನು ಉರಿದುಂಬಿಸಿದರು ಮತ್ತು ಇದ್ದ ಅಂತರವನ್ನು ಆಂಗ್ಲ ಕಾನೂನಿನಿಂದ ಪೂಣ೯ ಮಾಡಿದರು.ನಂತರದ ಅಭಿಪ್ರಾಯಗಳು ಒಂದಕ್ಕೊಂದು ಭಿನ್ನವಾಗಿದ್ದು ವಿಸ್ತಾರವಾದ ವ್ಯತ್ಯಾಸವನ್ನು ಪ್ರಚಲಿತ ಕಾನೂನು ಮತ್ತು ಸಾವ೯ಜನಿಕ ಅವಶ್ಯಕತೆ ಮಧ್ಯೆ ಕಂಡುಕೊಂಡರು,ಹಾಗೂ ಇದನ್ನು ಹೆಚ್ಚು ಜನರು ಒಪ್ಪಿ ಗಣನೀಯವಾದ ಅಸಂಗತೆ ಮತ್ತು ಅಸಾಮರಸ್ಯ ಹುಟ್ಟಿಕೊಳ್ಳುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.ಬ್ರಿಟೀಷರ ವಸಾಹತುಶಾಹಿ ಸಕಾ೯ರ ಆಡಳಿತ ವ್ಯವಸ್ಥೆಯಲ್ಲಿ ಪಸರಿಸಿದ್ದ ವ್ಯಾಪಕವಾದ ಹಸ್ತಕ್ಷೇಪರಹಿತ ನೀತಿಯಲ್ಲಿ ,ನಾಗರೀಕ ವಿಷಯಗಳನ್ನು ಆಯಾ ಧಾಮಿ೯ಕ ಸಮುದಾಯಗಳ ಮೂಲಕ ವ್ಯವಹರಿಸಬೇಕು.ಹೀಗಾಗಿ ಈ ಸಮುದಾಯಗಳ ವ್ಯಾಪ್ತಿಗೆ ಬಿದ್ದಿದ್ದ ವಿಷಯಗಳನ್ನು ವೈಯಕ್ತಿಕ ಕಾನೂನುಗಳೆಂದು ಕರೆಯಲಾಯಿತು.ಭಾರತೀಯ ರಾಜಕೀಯ ವ್ಯವಸ್ಥೆಯನ್ನು ಸಂಘಟಿಸುವಲ್ಲಿ,೧೯೪೦ರ ವೇಳೆಯ ಮೊದಲೇ ಬ್ರಿಟೀಷರಿಂದ ಆರಂಭವಾದ ವೈಯಕ್ತಿಕ ಹಿಂದೂ ಕಾನೂನುಗಳ ಕ್ರೂಢೀಕರಣ ಪ್ರಕ್ರಿಯೆಯು ಬಹಳ ಪ್ರಮುಖವಾದದ್ದು ಆಗಿದೆ.
ಕನ್ನಡದಲ್ಲಿ ಗದ್ಯಸಾಹಿತ್ಯ :- ಸದ್ಯದಲ್ಲಿ ಕನ್ನಡ ಗದ್ಯ ಸಾಹಿತ್ಯದ ಇತಿಹಾಸವನ್ನು ಹಲ್ಮಿಡಿ ಶಾಸನದಿಂದ (ಸು.450) ಗುರುತಿಸಬಹುದು. ಸು.5ನೆಯ ಶತಮಾನದಿಂದ ಸು.18ನೆಯ ಶತಮಾನದವರೆಗೆ ಅಸಂಖ್ಯ ಗದ್ಯ ಶಾಸನಗಳು ದೊರೆಯುತ್ತವೆ. ಅವುಗಳಲ್ಲಿ ವೀರಗಲ್ಲು, ಮಾಸ್ತಿಕಲ್ಲು, ದತ್ತಿಶಾಸನಗಳಲ್ಲಿಯ ಗದ್ಯ ಆಯಾ ಕಾಲದ ಐತಿಹಾಸಿಕ, ಸಾಮಾಜಿಕ ಮತ್ತು ಇತರ ಸಂಗತಿಗಳೊಂದಿಗೆ ಭಾಷಾಸ್ವರೂಪವನ್ನು ತಿಳಿಸುತ್ತದೆ.