The most-visited ಕನ್ನಡ Wikipedia articles, updated daily. Learn more...
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಒಂಬತ್ತು ಒಕ್ಕೂಟ ಪ್ರಾಂತ್ಯಗಳು ಇವೆ.
ಹಿಂದೂ ಧರ್ಮ ದಲ್ಲಿ , ಸೂರ್ಯ (ದೇವನಾಗರಿ : सूर्य, ಸೂರ್ಯ ("ಅತ್ಯುಚ್ಚ ಬೆಳಕು "); Malay: [Suria] ; ಥಾಯ್:พระอาทิตย์ Suraya, Suriya or Phra Athit) ಮುಖ್ಯ ಸೂರ್ಯನ ದೇವತೆ , ಆದಿತ್ಯ ರಲ್ಲಿ ಒಬ್ಬ ಕಶ್ಯಪ ನ ಮಗ ಮತ್ತು ಅವನ ಹೆಂಡತಿಯರಲ್ಲಿ ಒಬ್ಬಳು , ಅದಿತಿ ; ಇಂದ್ರ ನ ಪತ್ನಿ ; ಅಥವಾ ದಯುಸ್ ಪಿತರ್ (ಅವತರಿಣಿಕೆಯ ಆಧಾರದನ್ವಯ ). ಸಾಮಾನ್ಯವಾಗಿ ಸೂರ್ಯ ನನ್ನು , ಸನ್ಎಂದು ಕರೆಯಲ್ಪಡುತ್ತಾರೆ. ಸೂರ್ಯನಿಗೆ ಕೂದಲುಗಳಿದ್ದು, ಚಿನ್ನ ದ ತೊಳುಗಳಿವೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
ವೇಷ ಲೇಖನಕ್ಕಾಗಿ ಇಲ್ಲಿ ನೋಡಿ. ಹಿಂದೂ ಧರ್ಮದಲ್ಲಿ, ಅವತಾರ (ಸಂಸ್ಕೃತದಲ್ಲಿ "ಅವರೋಹಣ" [ಎಂದರೆ., ಸ್ವರ್ಗದಿಂದ ಭೂಮಿಗೆ]) ದೇವರ ಉದ್ದೇಶಪೂರ್ವಕವಾದ ಅವರೋಹಣವನ್ನು ಉಲ್ಲೇಖಿಸುತ್ತದೆ (ದೇವರು ಸ್ವರ್ಗದಿಂದ ಭೂಮಿಗೆ ಒಂದು ಪುನರ್ಜನ್ಮ , ಅಥವಾ ಅವರೋಹಣ (ವೈಷ್ಣವರಿಗೆ ವಿಷ್ಣು) ಈ ಪದವನ್ನು ಹೆಚ್ಚಾಗಿ ವಿಷ್ಣುವಿನೊಂದಿಗೆ ಬಳಸಲಾಗುತ್ತದೆ. ಆದರೂ ಬೇರೆ ದೇವತೆಗಳಿಗೂ ಕೆಲವೊಮ್ಮೆ ಬಳಸಲಾಗುತ್ತದೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದೆ ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ಪಾಂಡವರು ಮಹಾಭಾರತದಲ್ಲಿ ಕಂಡುಬರುವ ಪಾತ್ರಗಳು - ಪಾಂಡು ಹಾಗೂ ಕುಂತಿ-ಮಾದ್ರಿಯರ ಮಕ್ಕಳು.ಪಾಂಡುವಿನ ಮಕ್ಕಳಾದ್ದರಿಂದ ಪಾಂಡವರೆಂದು ಕರೆಯಲ್ಪಟ್ಟರು.ಪಾಂಡವರು ಐದು ಜನ.ಐದು ಜನಕ್ಕೂ ಒಬ್ಬಳೇ ಪತ್ನಿ ದ್ರೌಪದಿ. ಕುಂತಿಯ ಮಕ್ಕಳು: ಯುಧಿಷ್ಠಿರ (ಯಮನಿಂದ) ಭೀಮ (ವಾಯುವಿನಿಂದ) ಅರ್ಜುನ (ಇಂದ್ರನಿಂದ)ಮಾದ್ರಿಯ ಮಕ್ಕಳು:(ಅವಳಿಗಳು) ನಕುಲ (ಅಶ್ವಿನಿ ದೇವತೆಗಳಿಂದ) ಸಹದೇವ (ಅಶ್ವಿನಿ ದೇವತೆಗಳಿಂದ)ಪಾಂಡವರ ಪತ್ನಿ ದ್ರೌಪದಿ. ಮಹಾಭಾರತದ ಕಥೆಯಂತೆ, ಪಾಂಡವರು ಮತ್ತು ಅವರ ದಾಯಾದಿಗಳಾದ ಕೌರವರ ನಡುವೆ ಹಸ್ತಿನಾಪುರದ ಸಿಂಹಾಸನದ ಬಗೆಗಿನ ವಿವಾದ ಏಳುತ್ತದೆ.
ದರ್ಶನ್ (ಜನನ 16 ಫೆಬ್ರವರಿ 1977), ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮದಲ್ಲಿ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟ ತೂಗುದೀಪ ಶ್ರೀನಿವಾಸ್ ಅವರ ಮಗ, ದರ್ಶನ್ ಅವರ ನಟನಾ ವೃತ್ತಿಯನ್ನು 1990 ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು . ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.
ವರಾಹಾವತಾರ ಹಂದಿಯ ರೂಪದಲ್ಲಿ ಹಿಂದೂ ದೇವತೆ ವಿಷ್ಣುವಿನ ಅವತಾರ, ಮತ್ತು ಇದು ಕೂರ್ಮಾವತಾರದ ನಂತರ ಹಾಗು ನರಸಿಂಹಾವತಾರದ ಮೊದಲು ಬರುತ್ತದೆ. ವರಾಹಾವತಾರವನ್ನು ದಶಾವತಾರಗಳಲ್ಲಿ ಮೂರನೆಯದಾಗಿ ಪಟ್ಟಿಮಾಡಲಾಗುತ್ತದೆ. ದೈತ್ಯ ಹಿರಣ್ಯಾಕ್ಷನು ಭೂಮಿಯನ್ನು (ಭೂದೇವಿಯಾಗಿ ಮೂರ್ತೀಕರಿಸಲಾಗಿದೆ) ಕದ್ದು ಆಕೆಯನ್ನು ಆದಿಸ್ವರೂಪದ ನೀರಿನಲ್ಲಿ ಬಚ್ಚಿಟ್ಟಾಗ, ವಿಷ್ಣು ಆಕೆಯನ್ನು ಕಾಪಾಡಲು ವರಾಹನಾಗಿ ಕಾಣಿಸಿಕೊಂಡನು.
ತ್ರಿಪದಿ ಲಕ್ಷಣ :-- ತ್ರಿಪದಿ ಅಂದರೆ ಮೂರು ಸಾಲಿನ ಪದ್ಯ , ಇದು ಅಚ್ಚಕನ್ನಡದೇಸೀಮಟ್ಟಿನ ಛಂದಸ್ಸಾಗಿದೆ. ಇದರಲ್ಲಿ ಕೂಡ ಹಲವಾರು ಪ್ರಬೇಧಗಳಿದ್ದರೂ ಅಂಶಗಣ ಆಧಾರಿತ ತ್ರಿಪದಿಗಳೇ ಹೆಚ್ಚು ಪ್ರಾಮುಖ್ಯತೆ ಪಡೆದಿವೆಸರ್ವಜ್ಞನ ವಚನಗಳಲ್ಲಿ ಮಾತ್ರಾಗಣಗಳ ಆಧಾರದ ಮೇಲೆ ಕೂಡ ತ್ರಿಪದಿಗಳನ್ನು ರಚಿಸಿರುವುದು ಕಂಡುಬರುತ್ತದೆ. ಅಲ್ಲಿ ಐದು ಮಾತ್ರೆಗಳ ಗಣಗಳನ್ನು ನಾವು ಕಾಣಬಹುದು ಅಂಶಗಣ ಆಧಾರಿತ ತ್ರಿಪದಿಗಳಲ್ಲಿ ಹಲವು ವೈವಿಧ್ಯಗಳಿದ್ದರೂ ಜಾನಪದ ಒನಕೆವಾಡು,ಬೀಸುವಕಲ್ಲಿನ ಹಾಡುಗಳಲ್ಲೆಲ್ಲ ಕಂಡುಬರುವ ಸಾಮಾನ್ಯ ತ್ರಿಪದಿಯ ಲಕ್ಷಣ ಹೀಗಿದೆ ಮೊದಲ ಸಾಲಿನಲ್ಲಿ ನಾಲ್ಕು ವಿಷ್ಣುಗಣಗಳು ಹಾಗೇ ಎರಡನೇ ಸಾಲಿನಲ್ಲಿ ನಾಲ್ಕುಗಣಗಳಲ್ಲಿ ಎರಡನೇ ಗಣ ಬ್ರಹ್ಮಗಣ ಹಾಗೂ ಉಳಿದವು ವಿಷ್ಣುಗಣಗಳು, ಮೂರನೇ ಸಾಲಿನಲ್ಲಿ ಮೂರುಗಣಗಳೂ, ಅದರಲ್ಲಿಯೂ ಎರಡನೇ ಗಣ ಬ್ರಹ್ಮಗಣವಾಗಿರುತ್ತದೆ.
ಅಮೆರಿಕ ಸಂಯುಕ್ತ ಸಂಸ್ಥಾನ ವು (ಸಾಮಾನ್ಯವಾಗಿ ಸಂಯುಕ್ತ ಸಂಸ್ಥಾನ , ಯುಎಸ್ , ಯುಎಸ್ಎ ಅಥವಾ ಅಮೆರಿಕಾ ಎಂದು ಕರೆಯಲ್ಪಡುವ) ಐವತ್ತು ರಾಜ್ಯಗಳು ಮತ್ತು ಒಳ ಆಡಳಿತದಲ್ಲಿ ಸ್ವತಂತ್ರವಾಗಿರುವ ಡಿಸ್ಟ್ರಿಕ್ಟ್ಯನ್ನೊಳಗೊಂಡ ಒಂದು ಸ್ವಾಯತ್ತ ಸಾಂವಿಧಾನಿಕ ಗಣರಾಜ್ಯ. ಬಹುತೇಕ ಕೇಂದ್ರ ಭಾಗದ ಉತ್ತರ ಅಮೆರಿಕಾದಲ್ಲಿ ಸ್ಥಿತವಾಗಿರುವ ಈ ದೇಶದ ಒತ್ತೊತ್ತಾಗಿರುವ 48 ರಾಜ್ಯಗಳು ಹಾಗೂ ಪ್ರಧಾನ ಡಿಸ್ಟ್ರಿಕ್ಟ್ ವಾಷಿಂಗ್ಟನ್ ಡಿಸಿ, ಪೆಸಿಫಿಕ್ ಹಾಗೂ ಅಟ್ಲಾಂಟಿಕ್ ಸಮುದ್ರಗಳ ನಡುವೆ ನೆಲೆಗೊಂಡಿದ್ದು, ಉತ್ತರದಲ್ಲಿ ಕೆನಡಾ ಹಾಗೂ ದಕ್ಷಿಣದಲ್ಲಿ ಮೆಕ್ಸಿಕೋಗಳನ್ನು ಗಡಿಗಳಾಗಿ ಹೊಂದಿದೆ. ಅಲಾಸ್ಕಾ ರಾಜ್ಯವು ವಾಯುವ್ಯ ಭಾಗದಲ್ಲಿದ್ದು, ಕೆನಡಾವನ್ನು ಉತ್ತರ ದಿಕ್ಕಿನಲ್ಲೂ ಬೇರಿಂಗ್ ಜಲಸಂಧಿಯನ್ನು ಹಾದು ರಷ್ಯಾವನ್ನು ಪಶ್ಚಿಮ ದಿಕ್ಕಿನಲ್ಲೂ ಹೊಂದಿದೆ.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
{{Infobox company |name = ಭಾರತೀಯ ರೇಲ್ವೆ |logo = Indian Railway.svg |logo_size = 125px |logo_alt = Indian Railways logo |logo_caption = |logo_padding = center |image = Indian_Railways_Headquarters.jpg |image_size = 250px |image_alt = |image_caption = ಭಾರತೀಯ ರೇಲ್ವೆಯ ಪ್ರಧಾನ ಕಚೇರಿ, ದೆಹಲಿ |native_name = भारतीय रेल Bhāratīya Rel |type = ಸರ್ಕಾರಿ ಸ್ವಾಮ್ಯ |industry = ರೇಲ್ವೆ |founded = 16 ಏಪ್ರಿಲ್ 1853 (1853-೦೪-16) | hq_location_city = ನವ ದೆಹಲಿ | hq_location_country = ಭಾರತ |area_served = ಭಾರತ |key_people = {{unbulleted list|[[ ಪೀಯುಷ್ ಗೋಯಲ್ ] (ರೈಲು ಮಂತ್ರಿ, 2020–)}} |services = ಪ್ರಯಾಣಿಕ ರೈಲುಸರಕು ಸೇವೆಗಳುಭಾಂಗಿ ವಾಹಕಆಹಾರ ಪೂರೈಕೆ ಮತ್ತು ಪ್ರವಾಸೋದ್ಯಮ ಸೇವೆಗಳುನಿಲುಗಡೆ ಪ್ರದೇಶ ಕಾರ್ಯಾಚರಣೆಗಳುಇತರ ಸಂಬಂಧಿತ ಸೇವೆಗಳು |revenue = ₹1.709 trillion (US$೩೭.೯೪ billion) | revenue_year = 2015–16 | profit = ₹ ೧೦೫.೦೨ billion (US$೨.೩೩ billion) | profit_year = 2015–16 |owner = ಭಾರತ ಸರ್ಕಾರ |num_employees = 1.335 ದಶಲಕ್ಷ | num_employees_year = 2014 |parent = ರೈಲು ಸಚಿವಾಲಯ ರೈಲು ಮಂಡಳಿ ಮೂಲಕ |divisions = ೧೮ ರೇಲ್ವೆ ವಲಯಗಳು |subsid = |homepage = www.indianrail.gov.inindianrailways.gov.in |footnotes = |intl = No | module = }} ಭಾರತೀಯ ರೈಲ್ವೆ ಭಾರತ ಸರ್ಕಾರದ, ರೈಲ್ವೇ ಖಾತೆಯ ಅಧೀನದ, ಒಂದು ಇಲಾಖೆ. ಭಾರತ ಉದ್ದಗಲಕ್ಕೂ ಹರಡಿದ ರೈಲು ಮಾರ್ಗಗಳ ನಿರ್ವಹಣೆಯ ಜವಾಬ್ದಾರಿ ಈ ಇಲಾಖೆಯದಾಗಿದೆ. ರೈಲ್ವೇ ಖಾತೆಯ ಮುಖ್ಯಸ್ಥರು ಕ್ಯಾಬಿನೆಟ್ ದರ್ಜೆಯ ಮಂತ್ರಿಯಾಗಿದ್ರೆ, ರೈಲ್ವೇ ಇಲಾಖೆಯ ಆಡಳಿತ ವ್ಯವಸ್ಥೆ ರೈಲ್ವೇ ಮಂಡಳಿಯ ಅಧೀನದಲ್ಲಿದೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಹರಿದಾಸ ಭಕ್ತಿ ಚಳುವಳಿಯು ಭಾರತದ ಸಾಂಸ್ಕೃತಿಕ ಇತಿಹಾಸಕ್ಕೆ ಒಂದು ಮಹತ್ವದ ತಿರುವು ನೀಡಿತ್ತು. ಆರು ಶತಮಾನಗಳ ಅವಧಿಯಲ್ಲಿ ಹಲವು ಸಂತರು ಹಾಗು ಯೊಗಿಗಳು ದಕ್ಷಿಣ ಭಾರತ ಅದರಲ್ಲೂ ವಿಶೇಷವಾಗಿ ಕರ್ನಾಟಕದ ಸಂಸ್ಕಾರ, ತತ್ವ ಹಾಗು ಕಲೆಯನ್ನು ರೂಪಗೊಳಿಸುವಲ್ಲಿ ಸಹಾಯ ಮಾಡಿದ್ದಾರೆ, ಅವರು ಸಾಕಷ್ಟು ಧಾರ್ಮಿಕ ಪ್ರಭಾವವನ್ನು ಜನ ಸಮೂಹ ಹಾಗು ದಕ್ಷಿಣ ಭಾರತವನ್ನು ಆಳಿದ ರಾಜ್ಯಗಳ ಮೇಲೆ ಬೀರಿದರು.ಈ ಚಳುವಳಿಯನ್ನು ಪ್ರಾರಂಭಿಸಿದ್ದು ಹರಿದಾಸರು (ಕನ್ನಡ:ಹರಿದಾಸರು,ಇದರ ಅಕ್ಷರಶಃ ಅರ್ಥವೆಂದರೆ 'ಹರಿಯ ಸೇವಕರು') ಹಾಗು ಆಕಾರ ಪಡೆದದ್ದು ೧೩ನೆಯ- ೧೪ನೆಯ ಶತಮಾನದ, ಕಾಲಮಾನದಲ್ಲಿ, ವಿಜಯನಗರ ಸಾಮ್ರಾಜ್ಯ ಆಳ್ವಿಕೆಯಾ ಕಾಲದಲ್ಲಿ ಹಾಗು ಅದರ ಮುನ್ನ. ಈ ಚಳುವಳಿಯ ಮುಕ್ಯ ಗುರಿ ಮಧ್ವಾಚಾರ್ಯರ ದ್ವೈತ ತತ್ತ್ವಶಾಸ್ತ್ರ (ಮಧ್ವ ಸಿದ್ಧಾಂತ )ವನ್ನು ಜನಸಾಮಾನ್ಯರಲ್ಲಿ ದಾಸ ಸಾಹಿತ್ಯ (ಭಗವಂತನ ಸೇವಕರ ಸಾಹಿತ್ಯ)ದ ಮಾಧ್ಯಮದಲ್ಲಿ ಪ್ರಸಾರಿಸುವುದು.ಶ್ರೀಪಾದರಾಯ, ವ್ಯಾಸತೀರ್ಥ, ವಾದಿರಾಜತೀರ್ಥ, ಪುರಂದರ ದಾಸ ಹಾಗು ಕನಕ ದಾಸರಂತಹ ಪ್ರಖ್ಯಾತ ಹಿಂದೂ ತತ್ವಜ್ಞಾನಿಗಳು, ಕವಿಗಳು ಹಾಗು ವಿದ್ವಾಂಸ ಈ ಸಮಯದಲ್ಲಿ ಮುಖ್ಯ ಪಾತ್ರ ವಹಿಸಿದರು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಭಾರತದ ಅಂತರಿಕ್ಷ ಸಂಶೋಧನಾ ಸಂಸ್ಥೆ (ಆಂಗ್ಲ: ISRO - Indian Space Research Organisation). ಇದು ಬೆಂಗಳೂರಿನಲ್ಲಿ ಮುಖ್ಯ ಕಛೇರಿಯನ್ನು ಹೊಂದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊಂದಿದೆ. ಇಸ್ರೋದ ಮುಖ್ಯ ಕೇಂದ್ರಗಳು ಬೆಂಗಳೂರು, ತಿರುವನಂತಪುರ (ಕೇರಳ), ಅಹಮದಾಬಾದ್ (ಗುಜರಾತ್), ಮಹೇಂದ್ರಗಿರಿ(ತ.ನಾ), ಹಾಸನ(ಕರ್ನಾಟಕ) ಮತ್ತು ಶ್ರಿಹರಿಕೋಟ (ಆಂಧ್ರ ಪ್ರದೇಶ) ಗಳಲ್ಲಿ ಇವೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ.ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮುದ್ರಣಾಲಯ ಯು.ಎಸ್, ೧೯೯೬,.ಸ್ಟುವರ್ಟ್ ರೇ ಸರ್ಬ್ಯಾಕರ್, ಸಮಾಧಿ: ದ ನ್ಯೂಮಿನಸ್ ಅಂಡ್ ಸೆಸ್ಸೇಟಿವ್ ಇನ್ ಇಂಡೋ-ಟಿಬೆಟನ್ ಯೋಗ.
ಕರ್ನಾಟಕದಲ್ಲಿ ೨೦೨೦ ಕೊರೋನಾವೈರಸ್ ಸಾಂಕ್ರಾಮಿಕ
ಕರ್ನಾಟಕ ರಾಜ್ಯದಲ್ಲಿ ೨೦೧೯ - ೨೦೨೦ರ ಕೊರೋನಾವೈರಸ್ ಸಾಂಕ್ರಾಮಿಕವನ್ನು ಮೊದಲ ಬಾರಿಗೆ ಮಾರ್ಚ್ ೯, ೨೦೨೦ ರಂದು ದೃಢಪಡಿಸಲಾಯಿತು. ಸಾಂಕ್ರಾಮಿಕ ರೋಗಗಳ ಕಾಯ್ದೆ, ೧೮೯೭ರ ಅಡಿಯಲ್ಲಿ ಸಾಂಕ್ರಾಮಿಕ ನಿರ್ಬಂಧನೆಗಳನ್ನು ಕರ್ನಾಟಕದಲ್ಲಿ ಘೋಷಿಸಲಾಯಿತು. .