The most-visited ಕನ್ನಡ Wikipedia articles, updated daily. Learn more...
ಶೈಕ್ಷಣಿಕ ತಂತ್ರಜ್ಞಾನವು "ಸೂಕ್ತ ತಾಂತ್ರಿಕ ಪ್ರಕ್ರಿಯೆಗಳನ್ನು ಮತ್ತು ಸಂಪನ್ಮೂಲಗಳನ್ನು ರಚಿಸುವುದು, ಬಳಸುವುದು ಮತ್ತು ನಿರ್ವಹಿಸುವ ಮೂಲಕ ಕಲಿಕೆ ಮತ್ತು ಕಾರ್ಯಕ್ಷಮತೆಯನ್ನು ಸುಧಾರಿಸುವ ಅಧ್ಯಯನ ಮತ್ತು ನೈತಿಕ ಅಭ್ಯಾಸ". ಶೈಕ್ಷಣಿಕ ತಂತ್ರಜ್ಞಾನವು ದೈಹಿಕ ಯಂತ್ರಾಂಶ ಮತ್ತು ಶೈಕ್ಷಣಿಕ ಸಿದ್ಧಾಂತದ ಬಳಕೆಯಾಗಿದೆ. ಇದು ಕಲಿಕೆಯ ಸಿದ್ಧಾಂತ , ಕಂಪ್ಯೂಟರ್-ಆಧಾರಿತ ತರಬೇತಿ, ಆನ್ಲೈನ್ ಕಲಿಕೆ, ಮತ್ತು ಮೊಬೈಲ್ ತಂತ್ರಜ್ಞಾನಗಳನ್ನು ಎಲ್ಲಿ ಬಳಸಿಕೊಳ್ಳುತ್ತದೆ, ಎಮ್-ಕಲಿಕೆ ಸೇರಿದಂತೆ ಹಲವಾರು ವಲಯಗಳನ್ನು ಒಳಗೊಳ್ಳುತ್ತದೆ.
ಕಯ್ಯಾರ ಕಿಞ್ಞಣ್ಣ ರೈ (ಜೂನ್ ೮, ೧೯೧೫ - ಆಗಸ್ಟ್ ೯, ೨೦೧೫) ಅಖಿಲ ಕರ್ನಾಟಕದ ಮಹಾಕವಿಯಾಗಿ, ಹಿರಿಯ ಸಾಹಿತಿಯಾಗಿ, ಬಹುಭಾಷಾ ವಿದ್ವಾಂಸರಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ, ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಮುಂಚೂಣಿಯ ನಾಯಕರಾಗಿ, ಕಾಸರಗೋಡು ವಿಲೀನೀಕರಣ ಕ್ರಿಯಾಸಮಿತಿಯ ಪ್ರಧಾನ ಸಂಚಾಕರಾಗಿ, ನಿರಂತರವಾಗಿ ದುಡಿದವರು. ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈರವರು, ಅಖಿಲಭಾರತ ಮಟ್ಟದಲ್ಲಿ ಜರುಗಿದ ೬೬ ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಬರ್ಮಾ, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್ಪಿಸಿಎಲ್ ) (ಬಿಎಸ್ಇ: 500104, NSE: HINDPETRO), ಭಾರತದ ಮುಂಬಯಿ ನಗರದಲ್ಲಿರುವ ಭಾರತದ ಸರ್ಕಾರದ ಒಡೆತನದ ತೈಲ ಕಂಪನಿಯಾಗಿದೆ ಹಾಗೂ ವಿಶ್ವ ದರ್ಜೆಯ 500 ಕಂಪನಿಗಳ ಭಾರತದ ಫಾರ್ಚೂನ್ 500 ಕಂಪನಿಗಳಲ್ಲಿ 311 ನೆಯ ಸ್ಥಾನ ಗಳಿಸಿದೆ, ಹಣಕಾಸು ವರ್ಷ 2008-09ರಂತೆ ವಾರ್ಷಿಕ ವಹಿವಾಟು ₹ 1,16,428 ಕೋಟಿಗಳಷ್ಟಿದೆ ಹಾಗೂ ಮಾರಾಟ/ಆದಾಯ 1,31,802 ಕೋಟಿ ರೂಗಳು (ಯುಎಸ್$ 25,618 ಮಿಲಿಯನ್ಗಳು), ಭಾರತದಲ್ಲಿ 20% ಮಾರುಕಟ್ಟೆಯ ಶೇರುಗಳು ಇವೆ ಹಾಗೂ ಮಾರುಕಟ್ಟೆಯಲ್ಲಿ ಪ್ರಭಾವಿ ಅಡಿಗಟ್ಟನ್ನು ಹೊಂದಿದೆ. ಕ್ರಮವಾಗಿ ಹಣಕಾಸು ವರ್ಷ 2007-08ರಲ್ಲಿ: ವಹಿವಾಟು- ರೂ 1,03,837 ಕೋಟಿಗಳು, ಹಾಗೂ ಮಾರಾಟ/ಆದಾಯ- ₹ 1,12,098 ಕೋಟಿಗಳು (ಯುಎಸ್$ 25,142 ಮಿಲಿಯನ್). ಎಚ್ಪಿಸಿಎಲ್ ಕಂಪನಿಯು ಪೆಟ್ರೋಲಿಯಂ ಇಂಧನ & ವಿಶೇಷ ಉತ್ಪನ್ನಗಳನ್ನು ತಯಾರಿಸುವಂತಹ 2 ಪ್ರಮುಖ ಸಂಸ್ಕರಣಾಗಾರಗಳನ್ನು ಹೊಂದಿದೆ, ವಾರ್ಷಿಕ 6.5 ಮಿಲಿಯನ್ ಮೆಟ್ರಿಕ್ ಟನ್ ಸಾಮರ್ಥ್ಯವಿರುವ (ಎಮ್ಎಮ್ಪಿಟಿಎ) ಒಂದು ಮುಂಬಯಿ (ಪಶ್ಚಿಮ ಕರಾವಳಿ)ಯಲ್ಲಿ ಹಾಗೂ 8.3 ಎಮ್ಎಮ್ಪಿಟಿಎ ಸಾಮರ್ಥ್ಯವಿರುವ ಇನ್ನೊಂದು ವಿಶಾಖಪಟ್ಟಣಂ (ಪೂರ್ವ ಕರಾವಳಿ)ನಲ್ಲಿ ಇವೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು. ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ. ಭಾರತವು ಪ್ರಾಥಮಿಕ ಶಿಕ್ಷಣದ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಭಾರತದಲ್ಲಿನ ಜನಸಂಖ್ಯೆಯಲ್ಲಿ ಶೇ.೭೫ರಷ್ಟು ಜನರಿಗೆ ಶಿಕ್ಷಣವನ್ನು ವಿಸ್ತರಿಸುವುದರ ಮೂಲಕ ಪ್ರಗತಿ ಸಾಧಿಸುತ್ತಿದೆ.ಭಾರತದ ಸುಧಾರಿತ ಶಿಕ್ಷಣ ವ್ಯವಸ್ಥೆಯು ಭಾರತದ ಆರ್ಥಿಕ ಬೆಳವಣಿಗೆಗೆ ಒಂದು ಪ್ರಮುಖ ಕೊಡುಗೆ.ಉನ್ನತ ಶಿಕ್ಷಣ ಮತ್ತು ವೈಜ್ಞಾನಿಕ ಸಂಶೋಧನೆಯಲ್ಲಿನ ಪ್ರಗತಿಗೆ ಕಾರಣ ವಿವಿಧ ಸಾರ್ವಜನಿಕ ಸಂಸ್ಥೆಗಳು.೬-೧೪ ವರ್ಷದೊಳಗಿನ ಶೇ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಒಂಬತ್ತು ಒಕ್ಕೂಟ ಪ್ರಾಂತ್ಯಗಳು ಇವೆ.
ದರ್ಶನ್ (ಜನನ 16 ಫೆಬ್ರವರಿ 1977), ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮದಲ್ಲಿ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟ ತೂಗುದೀಪ ಶ್ರೀನಿವಾಸ್ ಅವರ ಮಗ, ದರ್ಶನ್ ಅವರ ನಟನಾ ವೃತ್ತಿಯನ್ನು 1990 ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು . ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಅಂತರವಲೋಕನ ಒಬ್ಬ ವ್ಯಕ್ತಿಯ ಪ್ರಜ್ಞಾನುಭವದ (ಕಾನ್ಷಸ್ ಎಕ್ಸ್ ಪೀರಿಯನ್ಸ್) ಸ್ವಯಂ ವೀಕ್ಷಣೆ (ಇಂಟ್ರಸ್ಪೆಕ್ಷನ್). ಅದು ಒಂದು ಒಳನೋಟ; ತನ್ನ ಪ್ರಬುದ್ಧ ಚೇತನದಲ್ಲಿ ನಡೆಯುತ್ತಿರುವ ಆಲೋಚನೆಗಳು, ಭಾವನೆಗಳು ಮತ್ತು ಇಚ್ಛೆಗಳಲ್ಲದೆ ತಾನು ಯಾವುದನ್ನು ನೋಡು ತ್ತಾನೆ, ಕೇಳುತ್ತಾನೆ ಅಥವಾ ಕಲ್ಪಿಸಿಕೊಳ್ಳುತ್ತಾನೆ ಎಂಬುವುಗಳ ಬಗ್ಗೆ, ಒಬ್ಬ ವ್ಯಕ್ತಿ ವಿವರಗಳನ್ನು ನೀಡುವ ವಿಧಾನ. ಅಂದರೆ, ಒಬ್ಬ ವ್ಯಕ್ತಿ ತನ್ನ ಪ್ರಬುದ್ಧ ಪ್ರಜ್ಞಾ ಪ್ರವಾಹದ (ಸ್ಟ್ರೀಮ್ ಆಫ್ ಕಾನ್ಷಸ್ನೆಸ್) ಮೂಲಾಂಶಗಳ ವೈಲಕ್ಷಣ್ಯಗಳಲ್ಲಿರುವ ಪರಸ್ಪರ ಹೋಲಿಕೆ ವ್ಯತ್ಯಾಸಗಳನ್ನು ಗುರುತಿಸಿ, ಅವುಗಳನ್ನು ವಿಂಗಡಿಸಿ ವಿವರಿಸುವ ಕ್ರಮ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ತಂತ್ರಜ್ಞಾನವು ಒಂದು ಜೀವಜಾತಿಯಿಂದ ಉಪಕರಣಗಳು ಹಾಗೂ ಕುಶಲಕರ್ಮಗಳ ಬಳಕೆ ಮತ್ತು ಜ್ಞಾನಕ್ಕೆ ಸಂಬಂಧಿಸಿರುವ, ಮತ್ತು ಒಂದು ಜೀವಜಾತಿಯ ಪರಿಸರವನ್ನು ನಿಯಂತ್ರಿಸಲು ಹಾಗೂ ಅದಕ್ಕೆ ಹೊಂದಿಕೊಳ್ಳಲು ಜೀವಜಾತಿಯ ಸಾಮರ್ಥ್ಯದ ಮೇಲೆ ಅದು ಹೇಗೆ ಪರಿಣಾಮ ಬೀರುತ್ತದೆಂಬುದನ್ನು ತಿಳಿಸುವ ಒಂದು ವಿಶಾಲವಾದ ಪರಿಕಲ್ಪನೆಯಾಗಿದೆ. ಆದರೆ, ಒಂದು ನಿಖರವಾದ ವ್ಯಾಖ್ಯಾನ ಸಾಧ್ಯವಿಲ್ಲ; "ತಂತ್ರಜ್ಞಾನವು" ಮಾನವಕುಲಕ್ಕೆ ಉಪಯುಕ್ತವಾಗಿರುವ ಯಂತ್ರಗಳು, ಯಂತ್ರಾಂಶ ಅಥವಾ ಗೃಹೋಪಕರಣಗಳಂತಹ ಭೌತಿಕ ವಸ್ತುಗಳನ್ನು ನಿರ್ದೇಶಿಸಬಹುದು, ಆದರೆ, ವ್ಯವಸ್ಥೆಗಳು, ಸಂಘಟನೆಯ ವಿಧಾನಗಳು, ಮತ್ತು ತಂತ್ರಗಳ ಸಹಿತ ಹೆಚ್ಚು ವಿಶಾಲವಾದ ವಿಷಯಗಳನ್ನೂ ಒಳಗೊಳ್ಳಬಹುದು. ಒಂದು ಸಮಸ್ಯೆಯನ್ನು ಪರಿಹರಿಸುವ ಸಲುವಾಗಿ , ಒಂದು ಸಮಸ್ಯೆಗೆ ಮೊದಲೇ ಅಸ್ತಿತ್ವದಲ್ಲಿರುವ ಪರಿಹಾರ ಸುಧಾರಿಸಲು ಒಂದು ಗುರಿಯನ್ನು ಸಾಧಿಸಲು , ಒಂದು ಅನ್ವಯಿಕ ಇನ್ಪುಟ್ ಔಟ್ಪುಟ್ ಸಂಬಂಧಿಸಿದಂತೆ ನಿರ್ವಹಿಸಲು ಅಥವಾ ಒಂದು ನಿರ್ದಿಷ್ಟ ಕಾರ್ಯ ನಿರ್ವಹಿಸಲು, ಇದು ಯಂತ್ರಗಳು , ಮಾರ್ಪಾಡುಗಳನ್ನು , ವ್ಯವಸ್ಥೆಗಳು ಮತ್ತು ಕಾರ್ಯವಿಧಾನಗಳು ಸೇರಿದಂತೆ ಉಪಕರಣಗಳ ,ಜ್ಞಾನದ ಸಂಗ್ರಹ ಎಂದು ಉಲ್ಲೇಖಿಸಬಹುದು .
ವಿಶ್ವದ ರಾಷ್ಟ್ರಗಳನ್ನು ಅವುಗಳ ವಿಸ್ತೀರ್ಣಕ್ಕೆ ಅನುಗುಣವಾಗಿ ಸ್ಥಾನಬದ್ಧಗೊಳಿಸಿ ಕೆಳಕಂಡ ಪಟ್ಟಿಕೆಯಲ್ಲಿ ತೋರಿಸಲಾಗಿದೆ. ಈ ಪಟ್ಟಿಯಲ್ಲಿ ಸಾರ್ವಭೌಮ ರಾಷ್ಟ್ರಗಳು ಮತ್ತು ಸ್ವಯಮಾಡಳಿತ ಹೊಂದಿರುವ ಅವಲಂಬಿತ ಪ್ರಾಂತ್ಯಗಳು ಇವೆ. ಇಲ್ಲಿ ತೋರಿಸಿರುವ ವಿಸ್ತೀರ್ಣವು ದೇಶದ ಒಟ್ಟು ನೆಲ ಮತ್ತು ನಾಡಿನೊಳಗೆ ಇರುವ ಜಲಪ್ರದೇಶಗಳ (ಸರೋವರ, ನದಿ ಮತ್ತು ಜಲಾಶಯ) ವಿಸ್ತೀರ್ಣಗಳು ಸೇರಿವೆ.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಕೋವಿಡ್-೧೯ ಲಸಿಕೆ ಕರೋನವೈರಸ್ ಕಾಯಿಲೆ ೨೦೧೯ (COVID-19) ವಿರುದ್ಧದ ಒಂದು ಕಾಲ್ಪನಿಕ ಲಸಿಕೆ. ಯಾವುದೇ ಲಸಿಕೆ ಕ್ಲಿನಿಕಲ್ ಪ್ರಯೋಗಗಳನ್ನು ಪೂರ್ಣಗೊಳಿಸದಿದ್ದರೂ, ಅಂತಹ ಲಸಿಕೆಯನ್ನು ಅಭಿವೃದ್ಧಿಪಡಿಸಲು ಅನೇಕ ಪ್ರಯತ್ನಗಳು ಪ್ರಗತಿಯಲ್ಲಿವೆ. ಫೆಬ್ರವರಿ ೨೦೨೦ರ ಕೊನೆಯಲ್ಲಿ, ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ೧೮ ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ ಎಸ್ಎಆರ್ಎಸ್-ಕೋವಿ-೨ ಎಂಬ ರೋಗಕಾರಕ ವೈರಸ್ ವಿರುದ್ಧ ಲಸಿಕೆ ಲಭ್ಯವಾಗಲಿದೆ ಎಂದು ನಿರೀಕ್ಷಿಸಿರಲಿಲ್ಲ ಎಂದು ಹೇಳಿದರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದೆ ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಚದುರಂಗದ ನಿಯಮಗಳು (ಚದುರಂಗದ ಕಾನೂನುಗಳು ಎಂದೂ ಸಹ ಇವು ಪರಿಚಿತವಾಗಿವೆ) ಚದುರಂಗದ ಆಟದ ಆಡುವಿಕೆಯನ್ನು ನಿರ್ದೇಶಿಸುವ ನಿಯಮಗಳಾಗಿವೆ. ಚದುರಂಗದ ಮೂಲಗಳು ಕರಾರುವಾಕ್ಕಾಗಿ ಯಾವುವು ಎಂಬುದು ಅಸ್ಪಷ್ಟವಾಗಿದ್ದರೂ ಸಹ, ಆಟದ ಆಧುನಿಕ ನಿಯಮಗಳು ೧೬ನೇ ಶತಮಾನದ ಅವಧಿಯಲ್ಲಿ ಇಟಲಿಯಲ್ಲಿ ಮೊದಲು ರೂಪುಗೊಂಡವು ಎನ್ನಬಹುದು. ೧೯ನೇ ಶತಮಾನದ ಆರಂಭದವರೆಗೂ ಈ ನಿಯಮಗಳಲ್ಲಿ ಕೊಂಚಮಟ್ಟಿನ ಮಾರ್ಪಾಡು ಆಗುತ್ತಲೇ ಇತ್ತು.
ಸಂಶೋಧನೆ ಎಂಬುದನ್ನು ಜ್ಞಾನದ ಸಲುವಾಗಿ ನಡೆಸುವ ಹುಡುಕಾಟ ಎಂದು ವ್ಯಾಖ್ಯಾನಿಸಬಹುದು,ಅಥವಾ ಮುಕ್ತ ಮನಸ್ಸಿನಿಂದ ಯಾವುದೇ ಶಿಸ್ತುಬದ್ದ ಶೋಧನೆ,ತನಿಖೆ ಮೂಲಕ ನವೀನ ಸಂಗತಿಗಳ ಹುಟ್ಟುಹಾಕಿ ಹೊಸ ಅಥವಾ ಅಸ್ತಿತ್ವದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು.ಒಂದು ವೈಜ್ಞಾನಿಕ ಪದ್ದತಿಯಂತೆ ಹೊಸ ಸಿದ್ದಾಂತಗಳ ಅಭಿವೃದ್ಧಿಪಡಿಸುವಿಕೆಯೇ ಸಂಶೋಧನೆಯಾಗಿದೆ. ಮೂಲಭೂತ ಸಂಶೋಧನೆಯ ಪ್ರಾಥಮಿಕ ಉದ್ದೇಶವೆಂದರೆ, (ಅದನ್ನು ಅನ್ವಯಿಕ ಸಂಶೋಧನೆಗೆ ವಿರೋಧವೆನ್ನಲಾಗುತ್ತದೆ.)ಆವಿಷ್ಕಾರಗೊಳಿಸುವಿಕೆ,ವಿವರವಾಗಿ ಅರ್ಥೈಸುವಿಕೆ ಮತ್ತು ಅಭಿವೃದ್ಧಿ ಮೂಲಕ ಮನುಷ್ಯನ ಜ್ಞಾನವನ್ನು ನಿರ್ಧಿಷ್ಟ ಪದ್ದತಿ ಮತ್ತು ಶಿಸ್ತುಗಳಿಗೆ ಅಳವಡಿಸುವುದೇ ಆಗಿದೆ.ನಮ್ಮ ಜಗತ್ತು ಮತ್ತು ಬ್ರಹ್ಮಾಂಡದಲ್ಲಿನ ವೈಜ್ಞಾನಿಕ ಭೌತಿಕ ವಸ್ತುಗಳ ಮೇಲೆ ವಿಸ್ತಾರವಾದ ತಿಳಿವಳಿಕೆ ಪಡೆಯುವುದು. ವೈಜ್ಞಾನಿಕ ಸಂಶೋಧನೆ ಯು ವೈಜ್ಞಾನಿಕ ಪದ್ದತಿಯ ಅಳವಡಿಕೆಯನ್ನು ಅವಲಂಬಿಸಿದೆ.ಈ ಮೂಲಕ ಅದು ಕುತೂಹಲವನ್ನು ಬಡಿದೆಬ್ಬಿಸಿ ಫಲಿತಾಂಶಕ್ಕಾಗಿ ಸಜ್ಜುಗೊಳಿಸುತ್ತದೆ.