The most-visited ಕನ್ನಡ Wikipedia articles, updated daily. Learn more...
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು: ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.ಆಗ್ನೇಯದಲ್ಲಿ ಬಂಗಾಳ ಕೊಲ್ಲಿ,ದಕ್ಷಿಣದಲ್ಲಿ ಹಿಂದೂ ಮಹಾ ಸಾಗರ, ನೈಋತ್ಯದಲ್ಲಿ ಅರಬ್ಬಿ ಸಮುದ್ರಗಳಿಂದ ಸುತ್ತುವರಿದಿದ್ದು , ಪಶ್ಚಿಮದಲ್ಲಿ ಪಾಕಿಸ್ತಾನ, ಈಶಾನ್ಯದಲ್ಲಿ ಚೀನಾ,ನೇಪಾಳ,ಭೂತಾನ , ಪೂರ್ವದಲ್ಲಿ ಮ್ಯಾನ್ಮಾರ್, ಬಾಂಗ್ಲಾದೇಶ ಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಪಾಂಡವರು ಮಹಾಭಾರತದಲ್ಲಿ ಕಂಡುಬರುವ ಪಾತ್ರಗಳು - ಪಾಂಡು ಹಾಗೂ ಕುಂತಿ-ಮಾದ್ರಿಯರ ಮಕ್ಕಳು.ಪಾಂಡುವಿನ ಮಕ್ಕಳಾದ್ದರಿಂದ ಪಾಂಡವರೆಂದು ಕರೆಯಲ್ಪಟ್ಟರು.ಪಾಂಡವರು ಐದು ಜನ.ಐದು ಜನಕ್ಕೂ ಒಬ್ಬಳೇ ಪತ್ನಿ ದ್ರೌಪದಿ. ಕುಂತಿಯ ಮಕ್ಕಳು:-ಯುಧಿಷ್ಠಿರ (ಯಮನಿಂದ) ಭೀಮ (ವಾಯುವಿನಿಂದ) ಅರ್ಜುನ (ಇಂದ್ರನಿಂದ)ಮಾದ್ರಿಯ ಮಕ್ಕಳು:- (ಅವಳಿಗಳು)ನಕುಲ (ಅಶ್ವಿನಿ ದೇವತೆಗಳಿಂದ) ಸಹದೇವ (ಅಶ್ವಿನಿ ದೇವತೆಗಳಿಂದ) ಪಾಂಡವರ ಪತ್ನಿ ದ್ರೌಪದಿ.ಮಹಾಭಾರತದ ಕಥೆಯಂತೆ, ಪಾಂಡವರು ಮತ್ತು ಅವರ ದಾಯಾದಿಗಳಾದ ಕೌರವರ ನಡುವೆ ಹಸ್ತಿನಾಪುರದ ಸಿಂಹಾಸನದ ಬಗೆಗಿನ ವಿವಾದ ಏಳುತ್ತದೆ. ಪಗಡೆಯಾಟವೊಂದರಲ್ಲಿ ಸೋತ ನಂತರ ಪಾಂಡವರು ಹನ್ನೆರಡು ವರ್ಷ ವನವಾಸ ಮತ್ತು ಒಂದು ವರ್ಷ ಅಜ್ಞಾತವಾಸ ಅನುಭವಿಸುತ್ತಾರೆ.ಇದರ ನಂತರ ರಾಜ್ಯದ ತಮ್ಮ ಹಕ್ಕನ್ನು ಪಡೆಯಲು ಕುರುಕ್ಷೇತ್ರ ಯುದ್ಧ ಆರಂಭವಾಗಿ ಕೊನೆಗೆ ಕೃಷ್ಣನ ಸಹಾಯದಿಂದ ಪಾಂಡವರು ಗೆಲ್ಲುತ್ತಾರೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಪಲ್ಲಕ್ಕಿ ಚಕ್ರರಹಿತ ವಾಹನಗಳ ಒಂದು ವರ್ಗ, ಜನರ ಸಾಗಾಟಕ್ಕಾಗಿ ಒಂದು ಬಗೆಯ ಮಾನವ ಚಾಲಿತ ಸಾರಿಗೆ. ಪಲ್ಲಕ್ಕಿ ಹೊರುವವರನ್ನು ಭೋವಿಯಂದು ಕರೆಯುತ್ತಾರೆ. ಸ್ವಲ್ಪ ಚಿಕ್ಕ ಪಲ್ಲಕ್ಕಿಗಳು ಇಬ್ಬರು ಅಥವಾ ಹೆಚ್ಚು ಸಾಗಾಳುಗಳಿಂದ ಹೊರಲಾದ ತೆರೆದ ಕುರ್ಚಿಗಳು ಅಥವಾ ಹಾಸಿಗೆಗಳ ರೂಪವನ್ನು ಹೊಂದಿರುತ್ತವೆ, ಮತ್ತು ಕೆಲವು ಪ್ರಾಕೃತಿಕ ಶಕ್ತಿಗಳಿಂದ ರಕ್ಷಣೆಗಾಗಿ ಆವೃತಗೊಂಡಿರುತ್ತವೆ.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಒಂಬತ್ತು ಒಕ್ಕೂಟ ಪ್ರಾಂತ್ಯಗಳು ಇವೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದೆ ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ರಾಧಿಕಾ, ರಾಧಾರಾಣಿ ಮತ್ತು ರಾಧಿಕಾ ರಾಣಿ ಎಂದೂ ಕರೆಯಲ್ಪಡುವ ರಾಧೆಯನ್ನು ಬಹುತೇಕ ಯಾವಾಗಲೂ ಕೃಷ್ಣನ ಪಕ್ಕದಲ್ಲಿ ಚಿತ್ರಿಸಲಾಗುತ್ತದೆ ಮತ್ತು ಪ್ರಮುಖವಾಗಿ ರಾಧೆಯನ್ನು ಮೂಲ ದೇವತೆ ಅಥವಾ ಶಕ್ತಿಯೆಂದು ಪರಿಗಣಿಸುವ ಇಂದಿನ ವಲ್ಲಭ ಹಾಗೂ ಗೌಡೀಯ ವೈಷ್ಣವ ಪಂಥಗಳ ದೇವತಾಶಾಸ್ತ್ರದಲ್ಲಿ ಚಿತ್ರಿಸಲಾಗಿದೆ. ನಿಂಬಾರ್ಕ ಸಂಪ್ರದಾಯದಲ್ಲಿ ರಾಧೆಯು ಪ್ರಧಾನ ಪೂಜಾ ದೇವತೆ ಕೂಡ ಆಗಿದ್ದಾಳೆ, ಏಕೆಂದರೆ ಈ ಸಂಪ್ರದಾಯದ ಸ್ಥಾಪಕ ನಿಂಬಾರ್ಕನು ರಾಧೆ ಹಾಗೂ ಕೃಷ್ಣ ಒಟ್ಟಾಗಿ ಪರಮ ಸತ್ಯವನ್ನು ನಿರ್ಮಿಸುತ್ತಾರೆ ಎಂದು ಘೋಷಿಸಿದನು. ರಾಧೆಯನ್ನು ಭಾಗವತ ಪುರಾಣ, ವಿಷ್ಣು ಪುರಾಣ, ಹರಿವಂಶ ಅಥವಾ ಮಹಾಭಾರತದಂತಹ ಪುಸ್ತಕಗಳಲ್ಲಿ ಎಲ್ಲೂ ಉಲ್ಲೇಖಿಸಿಲ್ಲ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್ ) (ಬಿಎಸ್ಇ: 500547|NSE: BPCL) ಕಂಪನಿಯು ಭಾರತದ ಅತಿ ದೊಡ್ಡ ರಾಜ್ಯ-ಸ್ವಾಮ್ಯದ ತೈಲ ಹಾಗೂ ಅನಿಲ ಕಂಪನಿ, ಫಾರ್ಚೂನ್ ಗ್ಲೋಬಲ್ 500ರಲ್ಲಿ 287 (2008)ನೇ ಶ್ರೇಯಾಂಕವನ್ನು ಪಡೆದಿದೆ. ಇದರ ಕಾರ್ಪೊರೇಟ್ ಆಫೀಸ್ ಮುಂಬಯಿನ ಬೆಲ್ಲಾರ್ಡ್ ಎಸ್ಟೇಟ್ನಲ್ಲಿದೆ. ಹೆಸರೇ ಹೇಳುವಂತೆ ಈ ಕಂಪನಿಯ ಪ್ರಮುಖ ಆಸಕ್ತಿ ಡೌನ್ಸ್ಟ್ರೀಮ್ ಪೆಟ್ರೋಲಿಯಂ ಕ್ಷೇತ್ರ.
ದರ್ಶನ್ (ಜನನ 16 ಫೆಬ್ರವರಿ 1977), ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮದಲ್ಲಿ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟ ತೂಗುದೀಪ ಶ್ರೀನಿವಾಸ್ ಅವರ ಮಗ, ದರ್ಶನ್ ಅವರ ನಟನಾ ವೃತ್ತಿಯನ್ನು 1990 ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು . ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.
ಬಿಳಿ ಅತ್ಯಂತ ತಿಳಿ ಬಣ್ಣವಾಗಿದೆ ಮತ್ತು ವರ್ಣರಹಿತವಾಗಿದೆ, ಏಕೆಂದರೆ ಅದು ಬೆಳಕಿನ ಎಲ್ಲ ಗೋಚರವಿರುವ ತರಂಗಾಂತರಗಳನ್ನು ಸಂಪೂರ್ಣವಾಗಿ ಪ್ರತಿಫಲಿಸುತ್ತದೆ ಮತ್ತು ಚೆದುರಿಸುತ್ತದೆ; ಅದು ತಾಜಾ ಹಿಮ, ಸೀಮೆಸುಣ್ಣ ಅಥವಾ ಹಾಲಿನ ಬಣ್ಣವಾಗಿದ್ದು, ಕಪ್ಪು ಪದದ ವಿರುದ್ಧಪದವಾಗಿದೆ. ಯೂರೋಪ್ ಮತ್ತು ಅಮೇರಿಕದಲ್ಲಿನ ಸಮೀಕ್ಷೆಗಳ ಪ್ರಕಾರ, ಬಿಳಿಯು ಬಹುತೇಕ ವೇಳೆ ಪರಿಪೂರ್ಣತೆ, ಶುಭ, ಪ್ರಾಮಾಣಿಕತೆ, ಸ್ವಚ್ಛತೆ, ಆರಂಭ, ನವೀನ, ತಟಸ್ಥತೆ ಮತ್ತು ನಿಖರತೆಯೊಂದಿಗೆ ಸಂಬಂಧಿಸಲಾದ ಬಣ್ಣವಾಗಿದೆ. ಬಿಳಿಯು ಬಹುತೇಕ ಎಲ್ಲ ವಿಶ್ವ ಧರ್ಮಗಳಿಗೆ ಒಂದು ಪ್ರಮುಖ ಬಣ್ಣವಾಗಿದೆ.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.