The most-visited ಕನ್ನಡ Wikipedia articles, updated daily. Learn more...
ವಿನಾಯಕ ದಾಮೋದರ ಸಾವರ್ಕರ್ ತಮ್ಮ ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ, ವಿವಿಧ ವಿಷಯಗಳ ಬಗ್ಯೆ ನಿರರ್ಗಳವಾಗಿ ಬರೆಯಬಲ್ಲ ಲೇಖಕ, ಇತಿಹಾಸಕಾರ, ಕವಿ, ತತ್ವಶಾಸ್ತ್ರಜ್ಞ, ಮತ್ತು ಸಮಾಜಸೇವಕ. ಅವರನ್ನು ಕೆಲವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅತಿ ದೊಡ್ಡ ಕ್ರಾಂತಿಕಾರಿ ಎಂದು ಪರಿಗಣಿಸಿದರೆ, ಇನ್ನು ಕೆಲವರು, ಅವರನ್ನು ಕೋಮುವಾದಿಯಾಗಿಯೂ, ಚಾಣಕ್ಯನೀತಿಯವರಾಗಿಯೂ ಭಾವಿಸುತ್ತಾರೆ. ಸ್ವಾತಂತ್ರ್ಯ ಅಂದೋಲನದ ಇತಿಹಾಸದ ಅತ್ಯಂತ ವಿವಾದಾತ್ಮಕ ವ್ಯಕ್ತಿಗಳಲ್ಲಿ ಸಾವರ್ಕರ್ ಪ್ರಮುಖರು.
ಅಂಬರೀಶ್ (ಮಳವಳ್ಳಿ ಹುಚ್ಚೇಗೌಡ ಅಮರನಾಥ್) (29 ಮೇ 1952 - 24 ನವೆಂಬರ್ 2018) ಭಾರತೀಯ ಚಲನಚಿತ್ರ ನಟ ಮತ್ತು ಕರ್ನಾಟಕ ರಾಜ್ಯದ ಒಬ್ಬ ರಾಜಕಾರಣಿಯಾಗಿದ್ದರು. ಪುಟ್ಟಣ್ಣ ಕಣಗಾಲ್ ಅವರ ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಿತ್ರ ನಾಗರಹಾವು (1972) ನಲ್ಲಿ ಚೊಚ್ಚಲ ನಟನೆಯ ನಂತರ, ಅವರ ನಟನಾ ವೃತ್ತಿಯು ಕನ್ನಡ ಚಿತ್ರಗಳಲ್ಲಿ ಖಳ ನಟ ಮತ್ತು ಪೋಷಕ ಪಾತ್ರಗಳನ್ನು ಚಿತ್ರಿಸುವ ಒಂದು ಸಂಕ್ಷಿಪ್ತ ಹಂತದೊಂದಿಗೆ ಪ್ರಾರಂಭವಾಯಿತು. ವಾಣಿಜ್ಯಿಕವಾಗಿ ಯಶಸ್ಸು ಗಳಿಸಿದ ಅನೇಕ ಚಿತ್ರಗಳಲ್ಲಿ ಸ್ವತಃ ಪ್ರಮುಖ ಖಳನಟನಾಗಿ ಸ್ಥಾಪನೆಗೊಂಡ ನಂತರ, ಅನೇಕ ಸಿನೆಮಾಗಳಲ್ಲಿ ನಾಯಕನಟನಾಗಿ ನಟಿಸಿದರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ವೀರಾಸ್ವಾಮಿ ರವಿಚಂದ್ರನ್ ಕನ್ನಡ ಚಿತ್ರರಂಗದಲ್ಲಿ ವಿ.ರವಿಚಂದ್ರನ್ ಎನ್ನುವ ಹೆಸರಿನಲ್ಲಿ ಪ್ರಸಿದ್ಧರು. ಕನ್ನಡ ಚಿತ್ರರಂಗಕ್ಕೆ ಶ್ರೀಮಂತಿಕೆ ಮತ್ತು ಬೆಳ್ಳಿಪರದೆಗೆ ಹೊಸರಂಗು ತಂದ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಅನೇಕ ರೀಮೇಕ್ ಸಿನಿಮಾಗಳನ್ನು ಕನ್ನಡಕ್ಕೆ ತಂದರೂ ಮೂಲಸಿನಿಮಾದ ಛಾಯೆ ಇರದ ತಮ್ಮದೇ ಆದ ಶೈಲಿಯಲ್ಲಿ ಕನ್ನಡ ಸೊಗಡಿನ ಸೂಪರ್ ಹಿಟ್ ಗಳನ್ನು ನೀಡಿದ್ದಾರೆ.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
=ಪಿಠಿಕೆ಼ ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ವೇಷ ಲೇಖನಕ್ಕಾಗಿ ಇಲ್ಲಿ ನೋಡಿ. ಹಿಂದೂ ಧರ್ಮದಲ್ಲಿ, ಅವತಾರ (ಸಂಸ್ಕೃತದಲ್ಲಿ "ಅವರೋಹಣ" [ಎಂದರೆ., ಸ್ವರ್ಗದಿಂದ ಭೂಮಿಗೆ]) ದೇವರ ಉದ್ದೇಶಪೂರ್ವಕವಾದ ಅವರೋಹಣವನ್ನು ಉಲ್ಲೇಖಿಸುತ್ತದೆ (ದೇವರು ಸ್ವರ್ಗದಿಂದ ಭೂಮಿಗೆ ಒಂದು ಪುನರ್ಜನ್ಮ , ಅಥವಾ ಅವರೋಹಣ (ವೈಷ್ಣವರಿಗೆ ವಿಷ್ಣು) ಈ ಪದವನ್ನು ಹೆಚ್ಚಾಗಿ ವಿಷ್ಣುವಿನೊಂದಿಗೆ ಬಳಸಲಾಗುತ್ತದೆ. ಆದರೂ ಬೇರೆ ದೇವತೆಗಳಿಗೂ ಕೆಲವೊಮ್ಮೆ ಬಳಸಲಾಗುತ್ತದೆ.
ನವರತ್ನಗಳು ಹಿಂದೂ ಜ್ಯೋತಿಷ್ಯ ಶಾಸ್ತ್ರದಲ್ಲಿ ನವ ಗ್ರಹಗಳನ್ನು ಪ್ರತಿನಿಧಿಸುವ ೯ ರತ್ನಗಳು. ಇವು, ಹವಳ ಮುತ್ತು ವಜ್ರ ವೈಢೂರ್ಯ ಗೋಮೇಧಿಕ ಮರಕತ ಮಾಣಿಕ್ಯ ಪಚ್ಚೆ ನೀಲ ಗುಪ್ತರ ಸಾಮ್ರಾಟ ಎರಡನೇಯ ಚಂದ್ರಗುಪ್ತನ ಆಸ್ಥಾನದಲ್ಲಿದ್ದ ಸುಪ್ರಸಿದ್ಧ ೯ವಿದ್ವಾಂಸರಿಗೂ ನವರತ್ನಗಳೆಂದು ಕರೆಯುತ್ತಿದ್ದರು.ಅವರೆಂದರೆ ೧ - ಕಾಳಿದಾಸ, ೨ - ವರರುಚಿ, ೩ - ವೇತಾಲ ಭಟ್ಟ , ೪ - ವರಾಹಮಿಹಿರ, ೫ - ಶಂಕು, ೬- ಧನ್ವಂತ್ರಿ, ೭ - ಬ್ರಹ್ಮ ಗುಪ್ತ, ೮ - ಕ್ಷಪಣಕ, ೯- ಅಮರಸಿಂಹ ನವರತ್ನ (ಸಂಸ್ಕೃತ: नवरत्न) ಸಂಸ್ಕೃತದ ಸಂಯೋಜನಾ ಪದದ ಅರ್ಥ "ಒಂಬತ್ತು ರತ್ನಗಳು" ಎಂದು ಆಗಿದೆ. ಈ ಶೈಲಿಯಲ್ಲಿ ನವರತ್ನಗಳನ್ನು ಉಪಯೋಗಿಸಿಕೊಂಡು ರಚಿತವಾದ ಆಭರಣ ಹಿಂದೂ ಧರ್ಮ, ಜೈನ್ ಧರ್ಮ, ಬೌದ್ಧ ಧರ್ಮ ಮತ್ತು ಸಿಖ್ ಧರ್ಮ ಪ್ರಮುಖ ಸಾಂಸ್ಕೃತಿಕ ಪ್ರಾಮುಖ್ಯತೆಯನ್ನು ಇತರ ಧರ್ಮಗಳ ನಡುವೆ ಹೊಂದಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತದ ರಾಜ್ಯಗಳು ಮತ್ತು ಪ್ರಾಂತ್ಯಗಳು=States and union territories of Indiaಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ India ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಒಂಬತ್ತು ಒಕ್ಕೂಟ ಪ್ರಾಂತ್ಯಗಳು ಇವೆ.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಪಾಂಡವರು ಮಹಾಭಾರತದಲ್ಲಿ ಕಂಡುಬರುವ ಪಾತ್ರಗಳು - ಪಾಂಡು ಹಾಗೂ ಕುಂತಿ-ಮಾದ್ರಿಯರ ಮಕ್ಕಳು.ಪಾಂಡುವಿನ ಮಕ್ಕಳಾದ್ದರಿಂದ ಪಾಂಡವರೆಂದು ಕರೆಯಲ್ಪಟ್ಟರು.ಪಾಂಡವರು ಐದು ಜನ.ಐದು ಜನಕ್ಕೂ ಒಬ್ಬಳೇ ಪತ್ನಿ ದ್ರೌಪದಿ. ಕುಂತಿಯ ಮಕ್ಕಳು:-ಯುಧಿಷ್ಠಿರ (ಯಮನಿಂದ) ಭೀಮ (ವಾಯುವಿನಿಂದ) ಅರ್ಜುನ (ಇಂದ್ರನಿಂದ)ಮಾದ್ರಿಯ ಮಕ್ಕಳು:- (ಅವಳಿಗಳು)ನಕುಲ (ಅಶ್ವಿನಿ ದೇವತೆಗಳಿಂದ) ಸಹದೇವ (ಅಶ್ವಿನಿ ದೇವತೆಗಳಿಂದ) ಪಾಂಡವರ ಪತ್ನಿ ದ್ರೌಪದಿ.ಮಹಾಭಾರತದ ಕಥೆಯಂತೆ, ಪಾಂಡವರು ಮತ್ತು ಅವರ ದಾಯಾದಿಗಳಾದ ಕೌರವರ ನಡುವೆ ಹಸ್ತಿನಾಪುರದ ಸಿಂಹಾಸನದ ಬಗೆಗಿನ ವಿವಾದ ಏಳುತ್ತದೆ. ಪಗಡೆಯಾಟವೊಂದರಲ್ಲಿ ಸೋತ ನಂತರ ಪಾಂಡವರು ಹನ್ನೆರಡು ವರ್ಷ ವನವಾಸ ಮತ್ತು ಒಂದು ವರ್ಷ ಅಜ್ಞಾತವಾಸ ಅನುಭವಿಸುತ್ತಾರೆ.ಇದರ ನಂತರ ರಾಜ್ಯದ ತಮ್ಮ ಹಕ್ಕನ್ನು ಪಡೆಯಲು ಕುರುಕ್ಷೇತ್ರ ಯುದ್ಧ ಆರಂಭವಾಗಿ ಕೊನೆಗೆ ಕೃಷ್ಣನ ಸಹಾಯದಿಂದ ಪಾಂಡವರು ಗೆಲ್ಲುತ್ತಾರೆ.
ತಂಬಾಕು ಉರಿಸಿ ಅದರ ಹೊಗೆಯ ರುಚಿ ತೆಗೆದುಕೊಳ್ಳುವ ಅಥವಾ ಉಸಿರಿನ ಮೂಲಕ ಒಳತೆಗೆದುಕೊಳ್ಳುವುದನ್ನು ತಂಬಾಕು ಸೇವನೆ ಯೆಂದು ಕರೆಯಲಾಗುತ್ತದೆ. ಈ ಅಭ್ಯಾಸವು ಕ್ರಿ.ಪೂ 5000–3000ದಷ್ಟು ಹಿಂದೆಯೇ ರೂಢಿಯಲ್ಲಿತ್ತು BC. ಹಲವಾರು ನಾಗರೀಕತೆಗಳ ಧಾರ್ಮಿಕ ಆಚರಣೆಗಳ ಸಂದರ್ಭದಲ್ಲಿ ಧೂಪವುರಿಸುತ್ತಿದ್ದು, ಇದು ಮುಂದೆ ಉಪಭೋಗದ ಅಥವಾ ಸಾಮಾಜಿಕ ಸಾಧನವಾಗಿ ಬಳಕೆಯಾಗತೊಡಗಿತು. ಪ್ರಾಚೀನ ವಿಶ್ವದಲ್ಲಿ ತಂಬಾಕನ್ನು 1500ರ ಅಂತ್ಯಭಾಗದ ವೇಳೆಗೆ ಪರಿಚಯಿಸಲಾಯಿತು ಮತ್ತು ಇದು ವ್ಯಾಪಾರ ಮಾರ್ಗಗಳ ಮುಖಾಂತರ ಬೇರೆ ಸ್ಥಳಗಳನ್ನು ತಲುಪತೊಡಗಿತು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ರಾಧಿಕಾ, ರಾಧಾರಾಣಿ ಮತ್ತು ರಾಧಿಕಾ ರಾಣಿ ಎಂದೂ ಕರೆಯಲ್ಪಡುವ ರಾಧೆಯನ್ನು ಬಹುತೇಕ ಯಾವಾಗಲೂ ಕೃಷ್ಣನ ಪಕ್ಕದಲ್ಲಿ ಚಿತ್ರಿಸಲಾಗುತ್ತದೆ ಮತ್ತು ಪ್ರಮುಖವಾಗಿ ರಾಧೆಯನ್ನು ಮೂಲ ದೇವತೆ ಅಥವಾ ಶಕ್ತಿಯೆಂದು ಪರಿಗಣಿಸುವ ಇಂದಿನ ವಲ್ಲಭ ಹಾಗೂ ಗೌಡೀಯ ವೈಷ್ಣವ ಪಂಥಗಳ ದೇವತಾಶಾಸ್ತ್ರದಲ್ಲಿ ಚಿತ್ರಿಸಲಾಗಿದೆ. ನಿಂಬಾರ್ಕ ಸಂಪ್ರದಾಯದಲ್ಲಿ ರಾಧೆಯು ಪ್ರಧಾನ ಪೂಜಾ ದೇವತೆ ಕೂಡ ಆಗಿದ್ದಾಳೆ, ಏಕೆಂದರೆ ಈ ಸಂಪ್ರದಾಯದ ಸ್ಥಾಪಕ ನಿಂಬಾರ್ಕನು ರಾಧೆ ಹಾಗೂ ಕೃಷ್ಣ ಒಟ್ಟಾಗಿ ಪರಮ ಸತ್ಯವನ್ನು ನಿರ್ಮಿಸುತ್ತಾರೆ ಎಂದು ಘೋಷಿಸಿದನು. ರಾಧೆಯನ್ನು ಭಾಗವತ ಪುರಾಣ, ವಿಷ್ಣು ಪುರಾಣ, ಹರಿವಂಶ ಅಥವಾ ಮಹಾಭಾರತದಂತಹ ಪುಸ್ತಕಗಳಲ್ಲಿ ಎಲ್ಲೂ ಉಲ್ಲೇಖಿಸಿಲ್ಲ.
ದರ್ಶನ್ (ಜನನ 16 ಫೆಬ್ರವರಿ 1977), ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮದಲ್ಲಿ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟ ತೂಗುದೀಪ ಶ್ರೀನಿವಾಸ್ ಅವರ ಮಗ, ದರ್ಶನ್ ಅವರ ನಟನಾ ವೃತ್ತಿಯನ್ನು 1990 ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು . ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಈ ಕಾರವು ಬಂದಾಗ 'ಏ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂದಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.
ಪರಿಸರವನ್ನು ಕಲುಷಿತಗೊಳಿಸುವ,(environmental pollution) ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.